All posts by nagaraj11081993

ಕೊಡಗಿನಲ್ಲಿ ಅಮಾನುಷ ಕೃತ್ಯ: ಬಲವಂತದ ಮತಾಂತರಕ್ಕೆ ತಾಯಿಯೇ ಸಾಥ್​​; ಮಗನ ಮರ್ಮಾಂಗಕ್ಕೆ‌ ಕತ್ತರಿ – Kannada News | Mother Accused of Forcing 9 Year Old Son to Convert and Undergo Circumcision

ಕೊಡಗು, ಜೂನ್​​ 19: ಆತ 9 ವರ್ಷದ ಬಾಲಕ. ತಾಯಿಯೇ (Mother) ಸರ್ವಸ್ವ ಅಂದುಕೊಂಡಿದ್ದ. ತಾಯಿ ಜೊತೆಯೇ ವಾಸವಾಗಿದ್ದ. ಆದರೆ ಆ ಮಹಾತಾಯಿ ಮಾಡಿರುವ ಅನಾಚಾರ ಮಾತ್ರ ನಿಜಕ್ಕೂ ಭಯಾನಕ. ಅನ್ಯಧರ್ಮದ ಯುವಕರೊಂದಿಗೆ ಸೇರಿ ಮಗನ (Son) ಮರ್ಮಾಂಗವನ್ನು ಕತ್ತರಿಸಿ ಬಲವಂತದ ಮತಾಂತರ ಮಾಡಿಸಿದ್ದಾಳೆ. ಇಂತಹದೊಂದು ಅಮಾನುಷ ಕೃತ್ಯಕ್ಕೆ ಇಡಿ ಕೊಡಗು ಜಿಲ್ಲೆ ಬೆಚ್ಚಿಬಿದ್ದಿದೆ.

ಮುಖ್ಯಾಂಶಗಳು

  • ಸುನ್ನತ್ ಹೆಸರಲ್ಲಿ ಬಾಲಕನ ಮರ್ಮಾಂಗಕ್ಕೆ‌ ಕತ್ತರಿ
  • ಮಗನನ್ನ ಬಲವಂತದ ಮತಾಂತರಕ್ಕೆ ಸಾಥ್ ನೀಡಿದ ತಾಯಿ
  • ಅನ್ಯಧರ್ಮದ ಯುವಕರ ಬಂಧನ​​

ನಡೆದಿದ್ದೇನು?

ಏನೂ ಅರಿಯದ 9 ವರ್ಷದ ಮುಗ್ಧ ಮಗನನ್ನು ತಾಯಿಯೇ ದುಷ್ಕರ್ಮಿಗಳ ಜೊತೆ ಸೇರಿ ಮರ್ಮಾಂಗ ಕತ್ತರಿಸಿ ಸುನ್ನತ್ ಹೆಸರಿನಲ್ಲಿ ಮತಾಂತರ ಮಾಡಿದ ಆರೋಪ ಕೇಳಿಬಂದಿದೆ. ಕುಶಾಲನಗರ ಪಟ್ಟಣದಲ್ಲಿ ವಾಸವಿರುವ ರಾಜೀವ್ ಮತ್ತು ಸಾಜಿದಾ ದಂಪತಿಗೆ 9 ವರ್ಷದ ಮಗನಿದ್ದಾನೆ. ಸಾಜಿದ ಕಳೆದ ಕೆಲ ವರ್ಷಗಳಿಂದ ಇಲ್ಲಿನ ನಿಸರ್ಗಧಾಮ ಟೂರಿಸ್ಟ್​ ಸೆಂಟರ್​​ ಮಳಿಗೆಯೊಂದಕ್ಕೆ ಸೇಲ್ಸ್​ ಗರ್ಲ್​ ಆಗಿ ಕೆಲಸ ಮಾಡುತ್ತಿದ್ದರು.

ಇದನ್ನೂ ಓದಿ: ಪ್ರೀತಿ ಪ್ರೇಮದ ಹೆಸರಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರ: ಲವ್ ಜಿಹಾದ್​​ಗೆ ಬಲಿಯಾದ ಹಿಂದೂ ಯುವತಿ ರೀಟಾ

ಮಳಿಗೆ ಮಾಲೀಕರಾದ ಸಲೀಂ ಮತ್ತು ಜಲೀಲ್ ಪರಿಚಯವಾಗಿದೆ. ಅವರು ಸಾಜಿದಾ ಮೇಲೆ ಅದೇನು ಪ್ರಭಾವ ಬಿರಿದ್ದಾರೆ ಗೊತ್ತಿಲ್ಲ. ಕಳೆದ ಒಂದು ತಿಂಗಳ ಹಿಂದೆ ಸಾಜಿದಾ ಮತ್ತು ಆಕೆಯ 9 ವರ್ಷದ ಮಗನನ್ನು ರಹಸ್ಯವಾಗಿ ಕೇರಳದ ಮಲಪ್ಪುರಂ ಜಿಲ್ಲೆಯ ಮಂಜೆರಿ ಗ್ರಾಮದ ಮಸೀದಿಗೆ ಕರೆದುಕೊಂಡು ಹೋಗಿ ಒಂದು ತಿಂಗಳು ಅಲ್ಲೇ ಉಳಿದುಕೊಂಡಿದ್ದಾರೆ. ಈ ವೇಳೆ ಬಾಲಕನಿಗೆ ಬಲವಂತದಿಂದ ಮರ್ಮಾಂಗ ಕತ್ತರಿಸಿ ಸುನ್ನತ್ ಮಾಡಿಸಿ ಮತಾಂತರ ಮಾಡಿದ್ದಾರೆ. ಅಲ್ಲದೆ ಸಾಜಿದಾಳನ್ನ ಕೂಡ ಮತಾಂತರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಕುಶಾಲನಗರದಲ್ಲಿ ಗುಸುಗುಸು ಶುರುವಾದಾಗ ಪತಿ ರಾಜೀವ್ ಕೆಲವು ಹಿಂದೂ ಪರ ಸಂಘಟನೆಗಳ ನೆರವು ಪಡೆದು ಕುಶಾಲನಗರಪಟ್ಟಣದ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇಷ್ಟಪಟ್ಟು ಮತಾಂತರವಾಗಿರುವುದಾಗಿ ಸಾಜಿದಾ ಹೇಳಿಕೆ

ಮುಗ್ಧ ಬಾಲಕನನ್ನ ಕಾನೂನಿಗೆ ವಿರುದ್ಧವಾಗಿ ಮತಾಂತರ ಮಾಡಿದ ವಿಷಯ ತಿಳಿಯುತ್ತಿದ್ದಂತೆ ಕುಶಾಲನಗರದ ಕೆಲವರು ತಂದೆ ರಾಜೀವ್ ಬೆಂಬಲಕ್ಕೆ ನಿಂತು ಕಾನೂನು ನೆರವು ನೀಡಿದ್ದಾರೆ. ಬಾಲಕನನ್ನ ಕೇರಳದ ಮಸೀದಿಯಿಂದ ರಕ್ಷಿಸಿ ಕರೆತಂದು ಸದ್ಯ ಸಾಂತ್ವನ ಕೇಂದ್ರಕ್ಕೆ ರವಾನಿಸಿದ್ದಾರೆ. ಕುರಾನ್​ನಿಂದ ಪ್ರೇರೇಪಿತಳಾಗಿ, ಇಷ್ಟಪಟ್ಟು ಮತಾಂತರವಾಗಿರುವುದಾಗಿ ಸಾಜಿದಾ ಹೇಳಿದ್ದಾರೆ ಎನ್ನಲಾಗುತ್ತಿದೆ.

ಸಲೀಂ ಮತ್ತು ಜಲೀಲ್ ಬಂಧನ

ಕುಶಾಲನಗರದ ನಿಸರ್ಗಧಾಮ ಟೂರಿಸ್ಟ್​ ಸೆಂಟರ್​ನಲ್ಲಿ ಇಂತಹ ಬಹಳಷ್ಟು ಪ್ರಕರಣಗಳು ರಹಸ್ಯವಾಗಿ ನಡೆಯುತ್ತಿರುವ ಬಗ್ಗೆ ಆರೋಪಗಳು ಕೇಳಿಬರುತ್ತಿವೆ. ಸದ್ಯ ಆರೋಪಿಗಳಾದ ಸಲೀಂ ಮತ್ತು ಜಲೀಲ್​​ನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕನಿಗೆ ಆಗಿರುವ ದೈಹಿಕ ಮತ್ತು ಮಾನಸಿಕ ಆಘಾತ ಊಹಿಸಲಾಗದು, ಹಾಗಾಗಿ ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ಆರೋಪಿಗಳ ವಿರುದ್ಧ ಕಠಿಣ ಸೆಕ್ಷನ್​ಗಳನ್ನ ಹಾಕಿ ಕ್ರಮ ಕೈಗೊಳ್ಳುವಂತೆ ಸಂತ್ರಸ್ತ ಬಾಲಕನ ನೆರವಿಗೆ ನಿಂತ ಅಮೃತ್ ರಾಜ್​​ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಹಿಂದೂ ಯುವತಿ ಅಪಹರಣ ಕೇಸ್​​ಗೆ ಟ್ವಿಸ್ಟ್: ಮುಸ್ಲಿಂ ಯುವಕನ ವಿರುದ್ಧ ಕೇಸ್ ಬುಕ್, ಆಗಿದ್ದೇನು?

ಸದ್ಯ ಕುಶಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಈ ಕೃತ್ಯಗಳು ಕೇವಲ ಮತಾಂತರಕ್ಕೆ ಮಾತ್ರ ಸೀಮಿತವೋ ಅಥವಾ ಮತಾಂತರದ ಬಳಿಕ ಕೇರಳದಲ್ಲಿ ಅಮಾಯಕ ಬಾಲಕರನ್ನ ಬೇರೆ ಕೃತ್ಯಗಳಿಗೆ ಬಳಸಿಕೊಳ್ಳುವ ಉದ್ದೇಶವಿತ್ತಾ, ಇಂತಹ ಇನ್ನೆಷ್ಟು ಪ್ರಕರಣಗಳು ನಡೆದಿವೆ ಎಂಬುದರ ಬಗ್ಗೆ ತನಿಖೆಯಲ್ಲಿ ಬಯಲಾಗಬೇಕಿದೆ. ಅಲ್ಲದೆ, ರಾಜ್ಯದ ಬೇರೆ ಬೇರೆ ಕಡೆ ಏಕಾಏಕಿ ನಾಪತ್ತೆಯಾಗುವ ಹಿಂದೂ ಹೆಣ್ಣು ಮಕ್ಕಳು ಮತ್ತು ವ್ಯಕ್ತಿಗಳು ಕೇರಳದ ಮಂಜೆರಿ ಗ್ರಾಮದ ಮಸೀದಿಯಲ್ಲಿ ಪತ್ತೆಯಾಗುತ್ತಿದ್ದಾರೆ ಎಂಬ ಆರೋಪವು ಇದೆ. ಈ ನಿಟ್ಟಿನಲ್ಲೂ ಆಳ ತನಿಖೆಯ ಅಗ್ಯವಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ: ಅಧಿಕಾರಿಗಳಿಗೆ ಸಿಎಂ ಕೊಟ್ಟ ಸೂಚನೆಗಳೇನು? – Kannada News | CM DK Shivakumar gives Some suggestions about guarantee schemes, here Is Meeting Details

ಬೆಂಗಳೂರು, (ಜೂನ್ 19): ವಿಧಾನಸೌಧದಲ್ಲಿಂದು (ಜೂನ್ 19) ನಡೆದ ಗ್ಯಾರಂಟಿ ಯೋಜನೆಗಳ (guarantee schemes) ಅನುಷ್ಠಾನದ ಹಿರಿಯ ಅಧಿಕಾರಿಗಳು ಹಾಗೂ ಸಚಿವರ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿರುವ ಒಬ್ಬನೇ ಒಬ್ಬ ಅರ್ಹ ಫಲಾನುಭವಿಗೂ ತೊಂದರೆಯಾಗಬಾರದು. ಆದರೆ, ಯೋಜನೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಅನರ್ಹರಿಗೆ ಮಾತ್ರ ತಕ್ಷಣವೇ ಬ್ರೇಕ್ ಹಾಕಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮರಣ ಹೊಂದಿದ ಫಲಾನುಭವಿಗಳ ವಿವರಗಳು ಸಕಾಲದಲ್ಲಿ ಸಿಗದೇ ಇರುವುದರಿಂದ, ಮೃತಪಟ್ಟವರ ಖಾತೆಗಳಿಗೂ ಗೃಹಲಕ್ಷ್ಮಿ ಹಣ ಜಮೆಯಾಗುತ್ತಿರುವುದು ಪತ್ತೆಯಾಗಿದೆ. ಇನ್ನು ಮುಂದೆ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಕಡ್ಡಾಯಗೊಳಿಸಿ ಇದಕ್ಕೆ ತಡೆ ಒಡ್ಡಲು ನಿರ್ಧರಿಸಲಾಗಿದೆ. ಗ್ಯಾರಂಟಿ ಯೋಜನೆಯ ಹಣ ಪಡೆಯುವ ಫಲಾನುಭವಿಗಳ ಬ್ಯಾಂಕ್ ಖಾತೆಗಳು ಕರ್ನಾಟಕ ರಾಜ್ಯದಲ್ಲೇ ಇರಬೇಕು. ಆದರೆ, ಬೇರೆ ರಾಜ್ಯಗಳ ಬ್ಯಾಂಕ್ ಖಾತೆಗಳಿಗೆ ಹಣ ಹೋಗುತ್ತಿರುವುದು ಪತ್ತೆಯಾಗಿದ್ದು, ಇತರೆ ರಾಜ್ಯಗಳ ಮತದಾರರು ಇದರ ಲಾಭ ಪಡೆಯುತ್ತಿರುವುದನ್ನು ತಡೆಯಲು ಸೂಚಿಸಿದ್ದಾರೆ. ಏರ್‌ಟೆಲ್ ಪೇಮೆಂಟ್ಸ್ ಬ್ಯಾಂಕ್‌ನಲ್ಲಿ ಯುಪಿಐ (UPI) ಖಾತೆಗಳನ್ನು ಸೃಷ್ಟಿಸಿ ಯೋಜನೆಯ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳನ್ನು ಸಹ ಅಧಿಕಾರಿಗಳು ಸಭೆಯ ಗಮನಕ್ಕೆ ತಂದಿದ್ದಾರೆ.

ಅನರ್ಹರನ್ನು ತಡೆಯುವಾಗ ನಿಜವಾದ ಬಡವರಿಗೆ ಸಮಸ್ಯೆಯಾಗಬಾರದು ಎಂದು ಸಿಎಂ ಡಿಕೆ ಶಿವಕುಮಾರ್‌ ಕೆಲವು ಪ್ರಮುಖ ನಿರ್ದೇಶನಗಳನ್ನು ನೀಡಿದ್ದಾರೆ. ಹಲವು ಫಲಾನುಭವಿಗಳು ಬ್ಯಾಂಕ್ ಸಾಲ ಪಡೆದಿದ್ದು, ಗೃಹಲಕ್ಷ್ಮಿ ಹಣ ಜಮೆಯಾದ ತಕ್ಷಣ ಬ್ಯಾಂಕಿನವರು ಅದನ್ನು ಸಾಲದ ಮೊತ್ತಕ್ಕೆ ಕಡಿತ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಫಲಾನುಭವಿಗಳು ತಮ್ಮ ಖಾತೆಗಳನ್ನು ಬದಲಾಯಿಸುತ್ತಿದ್ದು, ಅಂತಹ ಖಾತೆ ಬದಲಾವಣೆ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಜಮೆಯಾದ ತಕ್ಷಣ ಫಲಾನುಭವಿಗಳಿಗೆ ವಾಯ್ಸ್ ಮೆಸೇಜ್ ಮೂಲಕ ಮಾಹಿತಿ ನೀಡುವ ತಂತ್ರಜ್ಞಾನ ತರಲು ಸೂಚಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ರಿಲಯನ್ಸ್​ನ ಸೆಲ್ ಮತ್ತು ಬೆಸ್ ತಯಾರಿಕೆಯ ಸಾಮರ್ಥ್ಯ 120 GWhಕ್ಕೆ; ಬೆಸ್ ಯಾಕೆ ಮುಖ್ಯ? – Kannada News | Reliance to increase battery Gigafactory capacity to 120GWh, plan announced in RIL 49th AGM

ಮುಂಬೈ, ಜೂನ್ 19: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ತನ್ನ ಹಸಿರು ಇಂಧನ (Green Energy) ಮಹತ್ವಾಕಾಂಕ್ಷೆಯತ್ತ ಮತ್ತೊಂದು ಪ್ರಮುಖ ಹೆಜ್ಜೆ ಇಟ್ಟಿದೆ. ಕಂಪನಿಯು ತನ್ನ ಬ್ಯಾಟರಿ ಗಿಗಾಫ್ಯಾಕ್ಟರಿ ಸಾಮರ್ಥ್ಯವನ್ನು ವಿಸ್ತರಿಸುವುದರ ಜೊತೆಗೆ ಸೌರಶಕ್ತಿ ಉತ್ಪಾದನಾ ಘಟಕಗಳನ್ನೂ ಕಾರ್ಯಾರಂಭ ಮಾಡಿದೆ. ರಿಲಯನ್ಸ್ ತನ್ನ ಬ್ಯಾಟರಿ ಉತ್ಪಾದನಾ ಸಾಮರ್ಥ್ಯವನ್ನು 120 GWh (ಗಿಗಾವ್ಯಾಟ್ ಅವರ್) ಗೆ ಹೆಚ್ಚಿಸಲು ನಿರ್ಧರಿಸಿದೆ. ಇದು ಭಾರತದ ಇಂಧನ ಶೇಖರಣಾ ಸಾಮರ್ಥ್ಯವನ್ನು ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕವಾಗಿಸಲು ಸಹಕಾರಿಯಾಗಲಿದೆ.

ಕಂಪನಿಯು ತನ್ನ ಅತ್ಯಾಧುನಿಕ ಸೌರಶಕ್ತಿ ಉತ್ಪಾದನಾ ಮಾರ್ಗಗಳನ್ನು (Solar Manufacturing Lines) ಕಾರ್ಯಾರಂಭ ಮಾಡಿದೆ. ಇದು ಭಾರತದ ಸೋಲಾರ್ ಪ್ಯಾನಲ್ ಉತ್ಪಾದನಾ ಸಾಮರ್ಥ್ಯಕ್ಕೆ ದೊಡ್ಡ ಬಲ ತುಂಬಲಿದೆ. ರಿಲಯನ್ಸ್‌ನ ಈ ಕ್ರಮವು ಪ್ರಧಾನವಾಗಿ ಪಳೆಯುಳಿಕೆ ಇಂಧನಗಳ (Fossil Fuel) ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವುದು ಮತ್ತು ಪರಿಸರಸ್ನೇಹಿ ಇಂಧನ ಮೂಲಗಳಿಗೆ ಪರಿವರ್ತನೆ ಹೊಂದುವ ದೇಶದ ಗುರಿಯನ್ನು ಬೆಂಬಲಿಸುತ್ತದೆ. ರಿಲಾಯನ್ಸ್ ಇಂಡಸ್ಟ್ರೀಸ್​ನ 49ನೇ ವಾರ್ಷಿಕ ಮಹಾಸಭೆಯಲ್ಲಿ ಛೇರ್ಮನ್ ಮುಕೇಶ್ ಅಂಬಾನಿ ಹಾಗೂ ಅವರ ಪುತ್ರ ಮತ್ತು ಆರ್​ಐಎಲ್​ನ ಡೈರೆಕ್ಟರ್ ಅನಂತ್ ಅಂಬಾನಿ ಅವರು ಈ ಮಾಹಿತಿ ನೀಡಿದರು.

ಇದನ್ನೂ ಓದಿ: ಜಿಯೋ ಐಪಿಒಗೆ ಸಜ್ಜು; 27 ಕೋಟಿ ಹೊಸ ಈಕ್ವಿಟಿ ಷೇರುಗಳ ಹಂಚಿಕೆ; ಆರ್​​ಐಎಲ್ ಎಜಿಎಂ ಸಭೆಯಲ್ಲಿ ಅಂಬಾನಿ ಮಾಹಿತಿ

ಇಂಧನ ಸ್ವಾವಲಂಬನೆಗೆ ಬೆಸ್ ಬಹಳ ಮುಖ್ಯ

ರಿಲಯನ್ಸ್ ಸಂಸ್ಥೆಯು ಈ ವರ್ಷದ ಕೊನೆಯಲ್ಲಿ 40GWh ಸಾಮರ್ಥ್ಯದ ಬೆಸ್ ಮತ್ತು ಸೆಲ್ ಗಿಗಾಫ್ಯಾಕ್ಟರಿ ನಿರ್ಮಿಸಲಿದೆ. ಒಟ್ಟೂ ಸಾಮರ್ಥ್ಯವನ್ನು 120GWh ಗೆ ಏರಿಸುವುದು ರಿಲಾಯನ್ಸ್​ನ ಗುರಿ. ಇಲ್ಲಿ ಬೆಸ್ (BESS) ಎಂದರೆ ಬ್ಯಾಟರಿ ಎನರ್ಜಿ ಸ್ಟೋರೇಜ್ ಸಿಸ್ಟಂ. ಇದು ತಡೆರಹಿತ ವಿದ್ಯುತ್ ಸರಬರಾಜು ಮಾಡಲು ಇರುವ ಬಹಳ ಮುಖ್ಯ ವ್ಯವಸ್ಥೆ.

ಬೆಸ್ ಸಿಸ್ಟಂಗಳು ಹೆಚ್ಚುವರಿ ವಿದ್ಯುತ್ ಅನ್ನು ಬ್ಯಾಟರಿ ರೂಪದಲ್ಲಿ ಹಿಡಿದಿಡುತ್ತವೆ. ವಿದ್ಯುತ್ ಪೂರೈಕೆ ಕಡಿಮೆ ಆದಾಗ ಇದನ್ನು ಬಳಸಬಹುದು. ಈ ಬೆಸ್ ಸಿಸ್ಟಂಗಳು ವಿದ್ಯುತ್ ಗ್ರಿಡ್ ಮೇಲಿನ ಒತ್ತಡ ಕಡಿಮೆ ಮಾಡುತ್ತವೆ, ಮತ್ತು ಇಂಧನ ಪೋಲಾಗುವುದನ್ನು ತಪ್ಪಿಸುತ್ತದೆ.

ರಿಲಾಯನ್ಸ್ ಯೋಜನೆಯ ಪರಿಣಾಮಗಳೇನು?

ವಿದೇಶಿ ಸೋಲಾರ್ ಸೆಲ್ ಮತ್ತು ಬ್ಯಾಟರಿಗಳ ಆಮದನ್ನು ಕಡಿಮೆ ಮಾಡಿ, ದೇಶೀಯವಾಗಿ ಇಂಧನ ಸಾಧನಗಳನ್ನು ಉತ್ಪಾದಿಸಲು ಈ ಘಟಕಗಳು ನೆರವಾಗಲಿವೆ. ಸ್ವದೇಶಿ ಉತ್ಪಾದನೆಯು ದೀರ್ಘಾವಧಿಯಲ್ಲಿ ಸೌರಶಕ್ತಿ ಮತ್ತು ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿ ವೆಚ್ಚವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Reliance AGM 2026: ರಿಲಯನ್ಸ್ ಇಂಡಸ್ಟ್ರೀಸ್​ನಿಂದ ಭರ್ಜರಿ ಬಂಡವಾಳ ವೆಚ್ಚ; ಒಂದು ವರ್ಷದಲ್ಲಿ 1.44 ಲಕ್ಷ ಕೋಟಿ ರೂ ವೆಚ್ಚ

ಅಹಮದಾಬಾದ್‌ನ ಧೀರೂಭಾಯಿ ಅಂಬಾನಿ ಗ್ರೀನ್ ಎನರ್ಜಿ ಗಿಗಾ ಕಾಂಪ್ಲೆಕ್ಸ್‌ನಲ್ಲಿ ನಡೆಯುತ್ತಿರುವ ಈ ಯೋಜನೆಗಳು ಸಾವಿರಾರು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ. ರಿಲಯನ್ಸ್‌ನ ಈ ಹೂಡಿಕೆಯು ಭಾರತವನ್ನು ಜಾಗತಿಕ ಹಸಿರು ಇಂಧನ ಕೇಂದ್ರವನ್ನಾಗಿ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On – 6:48 pm, Fri, 19 June 26

Source link

IND vs AFG: ಕೊನೆಯ ಏಕದಿನ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಕ್ಕೆ ಯುವ ವೇಗಿಯ ಆಗಮನ – Kannada News | India vs Afghanistan ODI: Harshit Rana Joins Squad for Chennai Match After Injury

ಮೂರನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್, ಹರ್ಷ್ ದುಬೆ, ಯಶಸ್ವಿ ಜೈಸ್ವಾಲ್, ಹರ್ಷಿತ್ ರಾಣಾ.

Source link

Karnataka Weather Forecast: ಮುಂದಿನ ಒಂದು ವಾರ ರಾಜ್ಯದ ಈ ಭಾಗಗಳಲ್ಲಿ ಮಳೆ, ಉತ್ತರ ಒಳನಾಡಿಗೆ ಬಿಸಿ ಗಾಳಿಯ ಎಚ್ಚರಿಕೆ – Kannada News | Karnataka Weather Update: Rain Likely Across State This Week; Yellow Alert Issued for Coastal Districts

ಬೆಂಗಳೂರು, ಜೂನ್​​ 19: ಮುಂಗಾರು ಮಳೆಯ ಅಭಾವದ ನಡುವೆಯೂ ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಒಂದು ವಾರದವರೆಗೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್​​ 21ರಿಂದ 25ರವರೆಗೆ ಮತ್ತು ಒಳನಾಡು ಜಿಲ್ಲೆಗಳಲ್ಲಿ ಜೂನ್​​ 22 ಮತ್ತು 23ರಂದು ಮಳೆಯನ್ನು ಅಂದಾಜಿಲಾಗಿದೆ. ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಈ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಮುಖ್ಯಾಂಶಗಳು

  • ರಾಜ್ಯದ ಹಲವೆಡೆ ಮುಂದಿನ ಒಂದು ವಾರದವರೆಗೆ ಮಳೆ ಮುನ್ಸೂಚನೆ
  • ಕರಾವಳಿ ಜಿಲ್ಲೆಗಳಲ್ಲಿ ಜೂನ್​​ 21ರಿಂದ 25ರವರೆಗೆ ವರುಣಾರ್ಭಟ ಸಾಧ್ಯತೆ
  • ಒಳನಾಡು ಜಿಲ್ಲೆಗಳಲ್ಲಿ ಜೂನ್​​ 22 ಮತ್ತು 23ರಂದು ಮಳೆಯ ನಿರೀಕ್ಷೆ

ಎಲ್ಲೆಲ್ಲಿ ಮಳೆ ಸಾಧ್ಯತೆ?

ಮುಂದಿನ 24 ಗಂಟೆಯ ಅವಧಿಯಲ್ಲಿ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ. ಹಾಗೆಯೇ ಉತ್ತರ ಒಳನಾಡಿನಲ್ಲಿಯೂ ಗುಡುಗು ಮತ್ತು ಗಾಳಿ ಸಹಿತ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡು ಭಾಗದ ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿಯೂ ಗುಡುಗು ಸಹಿತ ಸಾಧಾರಣ ಮಳೆ ಅಂದಾಜಿಸಲಾಗಿದೆ.

ಇದನ್ನೂ ಓದಿ:

ಬಿಸಿ ಮತ್ತು ತೇವಾಂಶ ಗಾಳಿಯ ಎಚ್ಚರಿಕೆ

ಉತ್ತರ ಒಳನಾಡಿನ ಕೆಲ ಪ್ರದೇಶಗಳಲ್ಲಿ ಮಳೆ ಸಾಧ್ಯತೆಯ ನಡುವೆಯೂ ಈ ಭಾಗಕ್ಕೆ ಬಿಸಿ ಮತ್ತು ತೇವಾಂಶ ಗಾಳಿಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 3 ದಿನಗಳವರೆಗೆ ಇದೇ ರೀತಿಯ ವಾತಾವರಣ ಕಂಡುಬರುವ ನಿರೀಕ್ಷೆ ಇದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.​​

Source link

ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ – Kannada News | Prajwal Devaraj starrer Karavali movie to be released on July 24

ಪ್ರಜ್ವಲ್ ದೇವರಾಜ್ (Prajwal Devaraj), ರಾಜ್ ಬಿ ಶೆಟ್ಟಿ ಸೇರಿದಂತೆ ಇನ್ನೂ ಅನೇಕ ಪ್ರತಿಭಾವಂತ ನಟರು ನಟಿಸಿ, ಗುರುದತ್ ಗಾಣಿಗ ನಿರ್ದೇಶನ ಮಾಡಿರುವ ‘ಕರಾವಳಿ’ ಸಿನಿಮಾ ಪ್ರಾರಂಭವಾದಾಗಿನಿಂತಲೂ ಒಂದಲ್ಲ ಒಂದು ಕಾರಣಕ್ಕೆ ಸದ್ದು, ಸುದ್ದಿ ಮಾಡುತ್ತಲೇ ಇದೆ. ಸಿನಿಮಾದ ಚಿತ್ರೀಕರಣ ಶುರುವಾಗಿ ಎರಡು ವರ್ಷಕ್ಕೂ ಹೆಚ್ಚು ಸಮಯವಾಗಿದೆ. ಆದರೆ ಸಿನಿಮಾದ ಬಿಡುಗಡೆ ತಡವಾಗುತ್ತಲೇ ಬರುತ್ತಿತ್ತು. ಇದೀಗ ಕೊನೆಗೂ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಕಳೆದ ವರ್ಷ ‘ಸು ಫ್ರಂ ಸೋ’ ಸಿನಿಮಾ ಬಿಡುಗಡೆ ಆಗಿದ್ದ ದಿನದಂದೇ ಇದೀಗ ‘ಕರಾವಳಿ’ ಸಿನಿಮಾ ಸಹ ರಿಲೀಸ್ ಆಗಲಿದೆ.

‘ಕರಾವಳಿ’ ಸಿನಿಮಾವು ಇದೇ ಜುಲೈ 24ಕ್ಕೆ ವಿಶ್ವದಾದ್ಯಂತ ರಿಲೀಸ್ ಆಗಲಿದೆ. ಹೆಸರೇ ಸೂಚಿಸುತ್ತಿರುವಂತೆ ಇದು ಕರಾವಳಿ ಭಾಗದ ಕತೆಯನ್ನು ಒಳಗೊಂಡಿದೆ. ಕರಾವಳಿಯ ಕಂಬಳ, ದೈವ ಇನ್ನೂ ಹಲವು ವಿಷಯಗಳನ್ನು ಸಿನಿಮಾ ಒಳಗೊಂಡಿರಲಿದೆ. ಸಿನಿಮಾದ ಪೋಸ್ಟರ್​​ಗಳು, ಟೀಸರ್​​ಗಳು ಈಗಾಗಲೇ ಬಹಳ ಗಮನ ಸೆಳೆದಿವೆ. ಇದೀಗ ಸಿನಿಮಾದ ಬಿಡುಗಡೆಯನ್ನು ಘೋಷಣೆ ಮಾಡುವ ಪ್ರೇಕ್ಷಕರನ್ನು ಒಂದೊಳ್ಳೆ ಸಿನಿಮಾ ಅನುಭೂತಿಗೆ ಚಿತ್ರತಂಡ ಅಣಿಗೊಳಿಸಿದೆ.

ಇದನ್ನೂ ಓದಿ:ಪ್ರಜ್ವಲ್ ದೇವರಾಜ್, ರಾಜ್ ಬಿ. ಶೆಟ್ಟಿ ನಟನೆಯ ‘ಕರಾವಳಿ’ ಸಿನಿಮಾಗೆ ಶೂಟಿಂಗ್ ಪೂರ್ಣ

‘ಕರಾವಳಿ’ ಸಿನಿಮಾನಲ್ಲಿ ಪ್ರಜ್ವಲ್ ದೇವರಾಜ್, ರಾಜ್ ಬಿ ಶೆಟ್ಟಿ ಜೊತೆಗೆ ರಮೇಶ್ ಇಂದಿರಾ, ಮಿತ್ರ ಅವರುಗಳು ಸಹ ಪ್ರಮುಖವಾದ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ರಾಜ್ ಬಿ ಶೆಟ್ಟಿ ಅವರು ಈ ಸಿನಿಮಾನಲ್ಲಿ ಮಾವೀರ ಹೆಸರಿನ ಪಾತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಸಣ್ಣ ಟೀಸರ್​​ನಲ್ಲಿ ಸಿನಿಮಾದ ಮೂಡ್​ ಬಗ್ಗೆ ಸಣ್ಣ ಸುಳಿವನ್ನು ಚಿತ್ರತಂಡ ಬಿಟ್ಟುಕೊಟ್ಟಿದ್ದು, ಈ ಸಿನಿಮಾ ಆಕ್ಷನ್, ಸಸ್ಪೆನ್ಸ್ ಜೊತೆಗೆ ದ್ವೇಷ, ಅಸೂಯೆ, ಸೇಡಿನ ಕತೆಯನ್ನೂ ಒಳಗೊಂಡಿರಲಿದೆ.

‘ಕರಾವಳಿ’ ಸಿನಿಮಾವನ್ನು ಗುರುದತ್ ಗಾಣಿಗಾ ನಿರ್ದೇಶನ ಮಾಡಿದ್ದಾರೆ. ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿದೆ. 2024 ಕ್ಕೆ ಸಿನಿಮಾದ ಮುಹೂರ್ತ ನೆರವೇರಿತ್ತು. ಸಿನಿಮಾ ಪ್ರಾರಂಭವಾದಾಗ ಇದು ಮನುಷ್ಯ ಮತ್ತು ಪ್ರಾಣಿಯ ನಡುವಿನ ಸಂಘರ್ಷದ ಕತೆ ಎನ್ನಲಾಗಿತ್ತು. ಇದೀಗ ಕೊನೆಗೂ ಎರಡು ವರ್ಷಗಳ ಬಳಿಕ ಸಿನಿಮಾ ಚಿತ್ರೀಕರಣ ಮುಗಿಸಿದ್ದು, ಚಿತ್ರತಂಡವು ಬಿಡುಗಡೆ ದಿನಾಂಕ ಘೋಷಿಸಿದೆ. ಸಿನಿಮಾ ಜುಲೈ 24ಕ್ಕೆ ತೆರೆಗೆ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಹಿಂದೂ ಯುವತಿ ಅಪಹರಣ ಕೇಸ್​​ಗೆ ಟ್ವಿಸ್ಟ್: ಮುಸ್ಲಿಂ ಯುವಕನ ವಿರುದ್ಧ ಕೇಸ್ ಬುಕ್, ಆಗಿದ್ದೇನು? – Kannada News | Twist in Hindu girl Alleged Kidnapping Case: Police Register Case Against Muslim Youth, What Happened

ಪೊಲೀಸ್​ ಠಾಣೆ ಮುಂದೆ ಹಿಂದೂ ಕಾರ್ಯಕರ್ತರ ಪ್ರತಿಭಟನೆImage Credit source: tv9 kannada

ಕಾರವಾರ, ಜೂನ್​​ 19: ಮುರಿನ ಕಟ್ಟೆ ವಿವಾದ ತನ್ನಗಾಯಿತು ಎನ್ನುವಷ್ಟರಲ್ಲಿ, ಮುಸ್ಲಿಂ ಯುವಕನಿಂದ (Muslim Boy) ಹಿಂದೂ ಯುವತಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದೆ. ಪ್ರಾರಂಭದಲ್ಲಿ ಪೊಲೀಸರ ಗಮನಕ್ಕೆ ತಂದಿದ್ದ ಹಿಂದೂ ಮುಖಂಡರ ಮೇಲೇ ಕೇಸ್ ದಾಖಲಿಸಲಾಗಿತ್ತು. ಆದರೆ ಹಿಂದೂ ಮುಖಂಡರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುತ್ತಿದ್ದಂತೆ ಪ್ರತಿ ದೂರು ದಾಖಲಿಸಿಕೊಂಡು ಇದೀಗ ಮುಸ್ಲಿಂ ಯುವಕನನ್ನ ಬಂಧಿಸಲಾಗಿದೆ (Arrested).

ಮುಖ್ಯಾಂಶಗಳು

  • ಠಾಣೆಗೆ ಮುತ್ತಿಗೆ ಹಾಕುತ್ತಿದ್ದಂತೆ ಕೌಂಟರ್ ಕೇಸ್ ದಾಖಲು
  • ಯುವಕನ ವಿರುದ್ಧ ಯುವತಿ ದೂರು
  • ಲೈಂಗಿಕ ದೌರ್ಜನ್ಯ ಕೇಸ್​ ದಾಖಲು

ನಡೆದಿದ್ದೇನು?

ಭಟ್ಕಳದ ಅನಪಾಲ್ ಸೂಪರ್ ಮಾರ್ಕೆಟ್​ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಹಿಂದೂ ಯುವತಿಯನ್ನು ಅದೇ ಸೂಪರ್ ಮಾರ್ಕೆಟ್​ನಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಶಾಹೀದ್ ಪ್ರೀತಿಸುತ್ತಿದ್ದ. ನಿನ್ನೆ ಮಾತನಾಡಬೇಕು ಎಂದು ಯುವತಿಯನ್ನು ಸೂಪರ್ ಮಾರ್ಕೆಟ್​​ನಿಂದ ಕಾರಿನಲ್ಲಿ ಕೂರಿಸಿಕೊಂಡು ಸಾಗರ ರಸ್ತೆಯತ್ತ ತೆರಳಿದ್ದ. ಈ ವೇಳೆ ಕಾರು ಕೈಕೊಟ್ಟಿದ್ದು, ಅಲ್ಲಿ ಬರುತ್ತಿದ್ದ ಹಿಂದೂ ಕಾರ್ಯಕರ್ತರು ಕಾರಿನಲ್ಲಿ ಕುಳಿತಿರುವ ಯುವತಿಯನ್ನ ಗಮನಿಸಿದ್ದಾರೆ. ವಿಚಾರಿಸಿದಾಗ ಆತ ಬಲವಂತವಾಗಿ ಕರೆತಂದಿರುವುದು ಗಮನಕ್ಕೆ ಬಂದಿದ್ದು, ತಕ್ಷಣ ಪೊಲೀಸರನ್ನ ಕರೆಸಿ ಇಬ್ಬರನ್ನ ಠಾಣೆಗೆ ಕಳುಹಿಸಿಕೊಟ್ಟಿದ್ದಾರೆ.

ಇದನ್ನೂ ಓದಿ: ತಣ್ಣಗಾಗಿದ್ದ ಭಟ್ಕಳದಲ್ಲಿ ಮತ್ತೆ ಕೊಮು ಸಂಘರ್ಷ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ

ಇತ್ತ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಶಾಹೀದ್ ತಮ್ಮ ಮೇಲೆ ಹಿಂದೂ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂದು ದೂರು ಕೊಟ್ಟಿದ್ದಾನೆ. ಈ ಸಂಬಂಧ ಹಿಂದೂ ಕಾರ್ಯಕರ್ತರಾದ ಶ್ರೀಕಾಂತ್ ನಾಯ್ಕ ಸೇರಿ ನಾಲ್ಕು ಜನರ ಮೇಲೆ ಪ್ರಕರಣ ದಾಖಲಾಗಿದೆ. ಇನ್ನು ಈ ವೇಳೆ ಯುವತಿ ದೂರನ್ನ ಸ್ವೀಕರಿಸದೇ ಠಾಣೆಯ ಸಿಪಿಐ ಕೇವಲ ಯುವಕನ ದೂರು ಮಾತ್ರ ಸ್ವೀಕರಿಸಿದ್ದು, ಹಿಂದೂ ಕಾರ್ಯಕರ್ತರಲ್ಲಿ ಅಕ್ರೋಶಕ್ಕೆ ಕಾರಣವಾಗಿದ್ದು, ಪೊಲೀಸರ ಈ ನಿರ್ಧಾರವನ್ನ ಖಂಡಿಸಿ ಹಿಂದೂಪರ ಕಾರ್ಯಕರ್ತರು ಠಾಣೆಯಲ್ಲಿ ರಾತ್ರೋರಾತ್ರಿ ಪ್ರತಿಭಟಿಸಿ ಪ್ರಕರಣವನ್ನ ಹಿಂಪಡೆಯುವಂತೆ ಆಗ್ರಹಿಸಿದರು.

ಯುವಕನ ವಿರುದ್ಧವೇ ಯುವತಿ ದೂರು

ಇನ್ನು ಕೇವಲ ಮುಸ್ಲಿಂ ಯುವಕನ ದೂರನ್ನ ಮಾತ್ರ ತೆಗೆದುಕೊಂಡದ್ದಕ್ಕೆ ಹಿಂದೂಪರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ನಂತರ ಪ್ರಕರಣಕ್ಕೆ ಬಿಗ್ ಟ್ಟಿಸ್ಟ್ ಸಿಕ್ಕಿದೆ. ಶಾಹೀದ್ ತನ್ನನ್ನು ಬಲವಂತವಾಗಿ ಅಪಹರಣ ಮಾಡಿ ಲೈಂಗಿಕ ದೌರ್ಜನ್ಯ ಮಾಡಿದ್ದಾನೆ ಎಂದು ಯುವತಿ ದೂರು ನೀಡಿದ್ದಾಳೆ. ಇದೀಗ ಈ ದೂರು ಆಧರಿಸಿ ಆರೋಪಿ ಶಾಹೀದ್​ನನ್ನು ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಸದ್ಯ ಎರಡು ಕಡೆ ದೂರು, ಪ್ರತಿ ದೂರುಗಳು ದಾಖಲಾಗಿವೆ.

ಇದನ್ನೂ ಓದಿ: ಪೊಲೀಸರ ಕೊರಳ ಪಟ್ಟಿ ಹಿಡಿದು ರಂಪಾಟ: ಜೀಪ್​​​​​​​ನಿಂದ ಇಳಿಯದ PSI ಸಸ್ಪೆಂಡ್, 8 ಜನ ಸಿಬ್ಬಂದಿ ಎತ್ತಂಗಡಿ

ಸದ್ಯ ಶಾಹೀದ್ ಹಿಂದೂ ಸಂಘಟನೆ ವಿರುದ್ಧ ದೂರು ನೀಡಿದರೆ, ಯುವತಿ ಶಾಹೀದ್ ವಿರುದ್ಧ ದೂರು ನೀಡಿದ್ದು, ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾಳೆ. ಸದ್ಯ ಪ್ರಕರಣ ಎರಡು ಕೋಮು ಗುದ್ದಾಟಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Optical Illusion: ನಿಮ್ಮ ಬುದ್ಧಿವಂತಿಕೆಗೊಂದು ಸವಾಲ್; ಈ ಮೂವರಲ್ಲಿ ಬಾಸ್ ಯಾರೆಂದು ಹೇಳಬಲ್ಲಿರಾ – Kannada News | Optical Illusion: Can you identify who is the boss among the three people

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: kizlarsoruyor.com

ಈಗಂತೂ ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್‌ ಟೀಸರ್‌ನಂತಹ ಒಗಟಿನ ಆಟಗಳು ಟ್ರೆಂಡಿಂಗ್‌ನಲ್ಲಿದೆ. ಬುದ್ಧಿವಂತಿಕೆಗೆ ಸವಾಲೊಡ್ಡುವಂತಹ ಇಂತಹ ಆಟಗಳನ್ನು ಆಡುವುದೆಂದರೆ ಹಲವರಿಗೆ ಇಷ್ಟ, ಇನ್ನು ಕೆಲವರಿಗೆ ಕಷ್ಟ. ಇದೀಗ ವೈರಲ್ ಆಗಿರುವ ಆಪ್ಟಿಕಲ್‌ ಇಲ್ಯೂಷನ್‌ ಮೂವರು ವ್ಯಕ್ತಿಗಳಿದ್ದಾರೆ. ಈ ಮೂವರಲ್ಲಿ ಬಾಸ್ ಯಾರೆಂದು ಗುರುತಿಸುವುದೇ ಇಲ್ಲಿರುವ ಸವಾಲು. ಈ ಒಗಟನ್ನು ಹತ್ತು ಸೆಕೆಂಡುಗಳೊಳಗೆ ಬಿಡಿಸಿ ನೋಡೋಣ.

ಈ ಚಿತ್ರದಲ್ಲಿ ಏನು ಕಾಣಿಸಿತು?

ಈ ಇಲ್ಯೂಷನ್ ಚಿತ್ರ ಕೇವಲ ಬುದ್ಧಿವಂತಿಕೆಗೆ ಸವಾಲು ನೀಡುವುದು ಮಾತ್ರವಲ್ಲದೆ ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ಈ ಇಲ್ಯೂಷನ್ ಚಿತ್ರದಲ್ಲಿ ಆಫೀಸಿನ ರೂಮ್ ಇರುವುದನ್ನು ಗಮನಿಸಬಹುದು. ಇಲ್ಲಿ ಮೂವರು ವ್ಯಕ್ತಿಗಳಿದ್ದಾರೆ. ಒಬ್ಬ ವ್ಯಕ್ತಿ ಬಾಸ್ ಕುಳಿತುಕೊಳ್ಳುವ ಮೇಜಿನ ಬಳಿ ನಿಂತಿದ್ದಾನೆ. ಇನ್ನೊಬ್ಬ ಟೇಬಲ್ ಬಳಿ ಕುಳಿತುಕೊಂಡಿದ್ದಾನೆ. ಮೂರನೇಯವನು ನಿಂತುಕೊಂಡಿದ್ದಾನೆ. ಮೇಜಿನ ಬಳಿ ಇರುವ ವ್ಯಕ್ತಿ ಏನನ್ನೋ ಹೇಳುತ್ತಿದ್ದು, ಉಳಿದ ಇಬ್ಬರು ಕೇಳಿಸಿಕೊಳ್ಳುತ್ತಿದ್ದಾರೆ. ಇದರಲ್ಲಿ ಬಾಸ್ ಯಾರೆಂದು ಗುರುತಿಸಬೇಕು. ಈ ಒಗಟು ಬಿಡಿಸಲು ರೆಡಿ ಇದ್ದರೆ ಇದೀಗ ನಿಮ್ಮ ಸಮಯ ಆರಂಭವಾಗುತ್ತದೆ. ನೀವು ಈ ಟ್ರಿಕ್ಕಿ ಒಗಟಿನ ಸವಾಲನ್ನು ಸ್ವೀಕರಿಸಿದ್ದೀರಾ ಎಂದರ್ಥ.

ಇದನ್ನೂ ಓದಿ: ನಿಮಗೊಂದು ಸವಾಲ್; ಈ ಚಿತ್ರದಲ್ಲಿರುವ ಕಳ್ಳ ಬೆಕ್ಕನ್ನು ಜಸ್ಟ್ 10 ಸೆಕೆಂಡುಗಳಲ್ಲಿ ಗುರುತಿಸಿ

ಬಾಸ್‌ನ್ನು ಗುರುತಿಸಲು ಸಾಧ್ಯವಾಯಿತೇ?

ಎಷ್ಟೇ ತಲೆ ಉಪಯೋಗಿಸಿದ್ರು ಬಾಸ್ ಯಾರೆಂದು ಗುರುತಿಸಲು ಸಾಧ್ಯವಾಗುತ್ತಿಲ್ಲವೇ. ನಿಮಗೆ ಮಾತ್ರವಲ್ಲ, ನೂರರಲ್ಲಿ ತೊಂಭತ್ತು ಜನರು ಈ ಒಗಟು ಬಿಡಿಸುವಲ್ಲಿ ವಿಫಲರಾಗುತ್ತಾರೆ. ಈ ಒಗಟಿನ ಉತ್ತರವನ್ನು ನಾವೇ ಉತ್ತರ ಹೇಳುತ್ತೇವೆ. ಬಿಳಿ ಶರ್ಟ್ ಧರಿಸಿದ ವ್ಯಕ್ತಿಯ ಬ್ಲೇಜರ್ ಬಾಸ್ ಮೇಜಿನ ಬಳಿಯಿರುವ ಕುರ್ಚಿಯ ಮೇಲೆ ಇದೆ. ಹೀಗಾಗಿ ಬಿಳಿ ಶರ್ಟ್ ಧರಿಸಿ ನಿಂತಿರುವ ವ್ಯಕ್ತಿಯೇ ಬಾಸ್.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಲಡಾಖ್​​ಗೆ ಪ್ರವಾಸ ಹೋಗುತ್ತೀರಾ? ಪ್ಲಾಸ್ಟಿಕ್ ಬಳಸಿದರೆ, ಕಸ ಎಸೆದರೆ ದಂಡ ಕಟ್ಟಬೇಕು! – Kannada News | Ladakh imposes Complete ban on single use plastic sets Rs 10,000 fine for Violation

ಲಡಾಖ್, ಜೂನ್ 19: ಲಡಾಖ್‌ನಲ್ಲಿ ಪರಿಸರ ಸಂರಕ್ಷಣೆಗಾಗಿ ಏಕಬಳಕೆ ಪ್ಲಾಸ್ಟಿಕ್ ನಿಷೇಧವನ್ನು ಮತ್ತಷ್ಟು ಕಟ್ಟುನಿಟ್ಟುಗೊಳಿಸಲಾಗಿದ್ದು, ನಿಯಮ ಉಲ್ಲಂಘಿಸುವವರಿಗೆ ಭಾರಿ ಮೊತ್ತದ ದಂಡ ವಿಧಿಸಲು ನಿರ್ಧರಿಸಲಾಗಿದೆ. ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನ (Ladakh) ಸೂಕ್ಷ್ಮ ಹಿಮಾಲಯನ್ ಪರಿಸರ ವ್ಯವಸ್ಥೆಯನ್ನು ರಕ್ಷಿಸಲು ಅಲ್ಲಿನ ಆಡಳಿತ ಮಂಡಳಿ ಮಹತ್ವದ ಆದೇಶ ಹೊರಡಿಸಿದೆ. ಗುರುತಿಸಲಾದ ಎಲ್ಲಾ ರೀತಿಯ ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸುವವರಿಗೆ ಬರೋಬ್ಬರಿ 10,000 ರೂ.ವರೆಗೆ ಭಾರಿ ದಂಡ ವಿಧಿಸಲು ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟಿಸಿದೆ.

ಲಡಾಖ್ ಅತ್ಯಂತ ಸೂಕ್ಷ್ಮ ಪರಿಸರ ವಲಯವನ್ನು ಹೊಂದಿದೆ. ಇತ್ತೀಚಿನ ವರ್ಷಗಳಲ್ಲಿ ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ಪ್ಲಾಸ್ಟಿಕ್ ಬಾಟಲಿಗಳು, ಕ್ಯಾರಿ ಬ್ಯಾಗ್‌ಗಳು ಮತ್ತು ತಿಂಡಿಗಳ ಪ್ಯಾಕೆಟ್‌ಗಳು ಎಲ್ಲೆಂದರಲ್ಲಿ ಬಿದ್ದಿರುವುದು ಅಲ್ಲಿನ ನೈಸರ್ಗಿಕ ಸೌಂದರ್ಯ ಮತ್ತು ಜೀವವೈವಿಧ್ಯತೆಗೆ ಮಾರಕವಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಈ ನಿರ್ಣಾಯಕ ಆದೇಶ ಹೊರಡಿಸಲಾಗಿದೆ. ಹೊಸ ಆದೇಶದ ಪ್ರಕಾರ ಕೆಳಗಿನ ವಸ್ತುಗಳ ಉತ್ಪಾದನೆ, ಮಾರಾಟ, ಸಂಗ್ರಹಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳು, ಪ್ಲಾಸ್ಟಿಕ್ ಚಮಚ, ಕಪ್ ಮತ್ತು ಪ್ಲೇಟ್‌ಗಳು, ಪ್ಲಾಸ್ಟಿಕ್ ಕಡ್ಡಿಗಳನ್ನು ಹೊಂದಿರುವ ಇಯರ್-ಬಡ್ಸ್ ಮತ್ತು ಬಲೂನ್‌ಗಳು, ಸಿಗರೇಟ್ ಪ್ಯಾಕೆಟ್‌ಗಳು ಮತ್ತು ಸಿಹಿ ತಿಂಡಿಗಳ ಪೆಟ್ಟಿಗೆಗಳ ಸುತ್ತ ಸೀಲ್ ಮಾಡುವ ಪ್ಲಾಸ್ಟಿಕ್ ಫಿಲ್ಮ್‌ಗಳು, 100 ಮೈಕ್ರಾನ್‌ಗಿಂತ ಕಡಿಮೆ ದಪ್ಪವಿರುವ ಪ್ಲಾಸ್ಟಿಕ್ ಅಥವಾ ಪಿವಿಸಿ ಬ್ಯಾನರ್‌ಗಳನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: ಸರ್ಕಾರಿ ಕಚೇರಿಗಳಲ್ಲಿ ಕುಡಿಯುವ ನೀರಿಗಾಗಿ ಪ್ಲಾಸ್ಟಿಕ್ ಬಾಟಲ್ ಬಳಕೆ ಬ್ಯಾನ್: ಸಿಎಂ ಮಹತ್ವದ ಆದೇಶ

ಹೊಸ ನಿಯಮಾವಳಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಸಾರ್ವಜನಿಕ ಸ್ಥಳಗಳು, ನದಿ ತೀರಗಳು ಮತ್ತು ಪ್ರವಾಸಿ ತಾಣಗಳಲ್ಲಿ ಕಸ ಎಸೆಯುವ ಪ್ರವಾಸಿಗರು ಮತ್ತು ಸ್ಥಳೀಯರಿಗೆ ಸ್ಥಳದಲ್ಲೇ ಭಾರಿ ಮೊತ್ತದ ದಂಡ ವಿಧಿಸಲಾಗುತ್ತದೆ. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುವ ಅಥವಾ ಬಳಸುವ ಹೋಟೆಲ್, ರೆಸ್ಟೋರೆಂಟ್ ಮತ್ತು ಅಂಗಡಿಕಾರರಿಗೆ ಭಾರಿ ದಂಡದ ಜೊತೆಗೆ ಅವರ ಪರವಾನಗಿಯನ್ನು ರದ್ದುಗೊಳಿಸುವ ಎಚ್ಚರಿಕೆ ನೀಡಲಾಗಿದೆ. ಪದೇ ಪದೇ ನಿಯಮ ಉಲ್ಲಂಘಿಸುವವರಿಗೆ ದಂಡದ ಪ್ರಮಾಣವನ್ನು ದುಪ್ಪಟ್ಟುಗೊಳಿಸಲಾಗುತ್ತದೆ.

ಲಡಾಖ್‌ಗೆ ಬರುವ ಪ್ರವಾಸಿಗರು ತಮ್ಮೊಂದಿಗೆ ಯಾವುದೇ ರೀತಿಯ ಏಕಬಳಕೆ ಪ್ಲಾಸ್ಟಿಕ್ ವಸ್ತುಗಳನ್ನು ತರದಂತೆ ಸೂಚಿಸಲಾಗಿದೆ. ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದ್ದು, ಪರ್ಯಾಯವಾಗಿ ಬಿದಿರು ಅಥವಾ ಬಟ್ಟೆಯ ಬ್ಯಾಗ್‌ಗಳು ಮತ್ತು ಮರುಬಳಕೆ ಮಾಡಬಹುದಾದ ನೀರಿನ ಬಾಟಲಿಗಳನ್ನು ಬಳಸಲು ಉತ್ತೇಜಿಸಲಾಗುತ್ತಿದೆ. ಲಡಾಖ್‌ನ ಹಿಮಭರಿತ ಬೆಟ್ಟಗಳು ಮತ್ತು ಶುದ್ಧವಾದ ಪರಿಸರವನ್ನು ಮುಂದಿನ ಪೀಳಿಗೆಗಾಗಿ ಉಳಿಸಲು ಈ ಕಠಿಣ ನಿರ್ಧಾರ ಅಗತ್ಯವಾಗಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು ಇದಕ್ಕೆ ಪೂರ್ಣ ಸಹಕಾರ ನೀಡಬೇಕು ಎಂದು ಸ್ಥಳೀಯ ಆಡಳಿತ ಮನವಿ ಮಾಡಿದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ, ಲಡಾಖ್ ಭಾರತದ ಅವಿಭಾಜ್ಯ ಅಂಗ; ಪಾಕಿಸ್ತಾನ-ಚೀನಾಗೆ ವಿದೇಶಾಂಗ ಸಚಿವಾಲಯ ಚಾಟಿ

ಲಡಾಖ್ ಜಾಗತಿಕ ಮಟ್ಟದ ಪ್ರಸಿದ್ಧ ಪ್ರವಾಸಿ ತಾಣವಾಗಿದ್ದು, ಪ್ರತಿವರ್ಷ ಲಕ್ಷಾಂತರ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಆದರೆ ಪ್ಲಾಸ್ಟಿಕ್ ಕಸದಿಂದಾಗಿ ಇಲ್ಲಿನ ನದಿಗಳು, ಕಣಿವೆಗಳು ಮತ್ತು ಅಪರೂಪದ ವನ್ಯಜೀವಿಗಳ ಆವಾಸಸ್ಥಾನಗಳು ಕಲುಷಿತಗೊಳ್ಳುತ್ತಿವೆ. ನೈಸರ್ಗಿಕ ಸೌಂದರ್ಯ ಹಾಗೂ ಶುದ್ಧ ಗಾಳಿಯನ್ನು ಉಳಿಸಲು ಈ ಕಠಿಣ ಕ್ರಮ ಅನಿವಾರ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲಡಾಖ್‌ಗೆ ಪ್ರಯಾಣಿಸುವ ಪ್ರವಾಸಿಗರು ತಮ್ಮೊಂದಿಗೆ ಯಾವುದೇ ರೀತಿಯ ಏಕಬಳಕೆ ಪ್ಲಾಸ್ಟಿಕ್ ಅಥವಾ ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು ತರದಂತೆ ವಿನಂತಿಸಲಾಗಿದೆ. ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದ್ದು, ಪರ್ಯಾಯವಾಗಿ ಬಟ್ಟೆಯ ಬ್ಯಾಗ್‌ಗಳು ಮತ್ತು ಮರುಬಳಕೆ ಮಾಡಬಹುದಾದ ಸ್ಟೀಲ್ ಅಥವಾ ತಾಮ್ರದ ಬಾಟಲಿಗಳನ್ನು ಬಳಸಲು ಕೋರಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಿಮ್ಮ ಮೊಬೈಲ್ ಹುಷಾರು… ಮಾಜಿ ಪ್ರಧಾನಿ ಪುತ್ರನಿಗೆ ಕೋಟಿಗಟ್ಟಲೆ ಹಣ ಪಂಗನಾಮ; ಕಾಂಟ್ಯಾಕ್ಟ್ ಲಿಸ್ಟ್​ನಲ್ಲೇ ನಂಬರ್ ಬದಲಿಸಿದ್ದ ಖದೀಮರು – Kannada News | Ex PM’s son loses over Rs 7 crore to cybercriminals who hacked employee’s phone

ಸೈಬರ್ ಕ್ರೈಮ್Image Credit source: Philip Dulian via Getty Images

ನವದೆಹಲಿ, ಜೂನ್ 19: ಮಾಜಿ ಪ್ರಧಾನಿ ಐ.ಕೆ. ಗುಜ್ರಾಲ್ ಅವರ ಪುತ್ರ ಹಾಗೂ ಮಾಜಿ ರಾಜ್ಯಸಭಾ ಸಂಸದರಾದ ನರೇಶ್ ಗುಜ್ರಾಲ್ (Naresh Gujral) ಅವರು ಸೈಬರ್ ವಂಚನೆಗೆ ತುತ್ತಾಗಿದ್ದಾರೆ. ಗಾರ್ಮೆಂಟ್ಸ್ ಫ್ಯಾಕ್ಟರಿ ನಡೆಸುತ್ತಿರುವ ನರೇಶ್ ಗುಜ್ರಾಲ್ ಅವರ ಅಕೌಂಟ್​ನಿಂದ 7.8 ಕೋಟಿ ರೂ ಹಣ ಲಪಟಾಯಿಸಿದ್ದಾರೆ. ಈ ವಂಚನೆ ಆಗಿರುವುದು ದೆಹಲಿಯಲ್ಲಿ ಜೂನ್ 12ರಿಂದ 16ರ ಅವಧಿಯಲ್ಲಿ. ಪೊಲೀಸರು ಸದ್ಯಕ್ಕೆ 4 ಕೋಟಿ ರೂ ಹಣವನ್ನು ರಿಕವರ್ ಮಾಡಲು ಯಶಸ್ವಿಯಾಗಿದ್ದಾರೆ. ಆದರೆ, ವಂಚಕರು ನರೇಶ್ ಗುಜ್ರಾಲ್ ಅವರ ಹಣ ಲಪಟಾಯಿಸಲು ಬಳಸಿದ ತಂತ್ರ ಮತ್ತು ಮಾರ್ಗ ನಿಜಕ್ಕೂ ಬೆಚ್ಚಿಬೀಳಿಸುವಂಥದ್ದು. ಇದು ಯಾರಿಗೆ ಬೇಕಾದರೂ ಆಗಬಹುದಾದ ವಂಚನೆ.

ಉದ್ಯೋಗಿಯ ಮೊಬೈಲ್ ನಂಬರ್ ಹ್ಯಾಕ್ ಮಾಡಿದ್ರು

ಮಾಜಿ ಪ್ರಧಾನಿ ಐ.ಕೆ. ಗುಜ್ರಾಲ್ ಅವರ ಮಗ ನರೇಶ್ ಗುಜ್ರಾಲ್ ಅವರು ಗಾರ್ಮೆಂಟ್ಸ್ ಫ್ಯಾಕ್ಟರಿಯೊಂದನ್ನು ಇಟ್ಟಿದ್ದಾರೆ. ವಂಚಕರು ಈ ಫ್ಯಾಕ್ಟರಿಯ ಉದ್ಯೋಗಿಯೊಬ್ಬರಿಗೆ ವಾಟ್ಸಾಪ್ ಮೆಸೇಜ್ ಕಳುಹಿಸಿದ್ದಾರೆ. ಅದನ್ನು ಒತ್ತಿದ್ದೇ ಆಯ್ತು, ಆ ಉದ್ಯೋಗಿಯ ಫೋನ್ ಅನ್ನು ವಂಚಕರು ಹ್ಯಾಕ್ ಮಾಡಿದ್ದಾರೆ.

ಕಾಂಟ್ಯಾಕ್ಟ್ ಲಿಸ್ಟ್​ನಲ್ಲಿ ನಂಬರನ್ನೇ ಬದಲಿಸಿದ್ರು…

ಹ್ಯಾಕ್ ಮಾಡಿದ ನಂತರ, ಆ ಉದ್ಯೋಗಿಯ ಮೊಬೈಲ್​ನಲ್ಲಿರುವ ಕಾಂಟ್ಯಾಕ್ಟ್ ಲಿಸ್ಟ್​ಗೆ ಹೋಗಿ ನರೇಶ್ ಗುಜ್ರಾಲ್ ಅವರ ಫೋನ್ ನಂಬರ್​ಗೆ ಹೋಗಿ ಎಡಿಟ್ ಮಾಡಿದ್ದಾರೆ. ಅಲ್ಲಿ ವಂಚಕರು ಗುಜ್ರಾಲ್ ನಂಬರ್ ಜಾಗಕ್ಕೆ ತಮ್ಮ ಮೊಬೈಲ್ ನಂಬರ್ ಸೇರಿಸಿದ್ದಾರೆ. ಆ ನಂಬರ್​ನ ಪ್ರೊಫೈಲ್ ಚಿತ್ರ, ಹೆಸರು ಎಲ್ಲವೂ ನರೇಶ್ ಗುಜ್ರಾಲ್ ಅವರದ್ದೇ ಹಾಕಲಾಗಿತ್ತು. ಹೀಗಾಗಿ, ಯಾರಿಗೂ ಅನುಮಾನ ಬಾರದಂತಾಗಿತ್ತು.

ಇದನ್ನೂ ಓದಿ: ಅಕ್ಸೆಂಚರ್ ಕೊಟ್ಟ ಒಂದು ರಿಪೋರ್ಟ್​ಗೆ ಭಾರತದ ಷೇರುಬಜಾರು ಅಲ್ಲೋಲಕಲ್ಲೋಲ; ಶುಕ್ರವಾರ 2 ಲಕ್ಷ ಕೋಟಿ ರೂ ನಷ್ಟ

ಹಣ ವರ್ಗಾಯಿಸುವ ಮೆಸೇಜ್​ಗಳು

ಈಗ ವಂಚಕರು ಉದ್ಯೋಗಿಗೆ ಮೆಸೇಜ್ ಕಳುಹಿಸತೊಡಗುತ್ತಾರೆ. ಅಕೌಂಟ್ ನಂಬರ್ ಕೊಟ್ಟು ಅದಕ್ಕೆ ತುರ್ತಾಗಿ ಆರ್​ಟಿಜಿಎಸ್ ಮಾಡುವಂತೆ ಸೂಚಿಸುತ್ತಾರೆ. ಯಾವುದೋ ಬ್ಯುಸಿನೆಸ್​ಗೆ ಸಂಬಂಧಿಸಿದ್ದಿರಬಹುದು ಎಂದು ಉದ್ಯೋಗಿಯು ಹಣವನ್ನು ಆರ್​ಟಿಜಿಎಸ್ ಮಾಡುತ್ತಾರೆ. ಹೀಗೆ ನಾಲ್ಕು ಬಾರಿ ಆರ್​ಟಿಜಿಎಸ್ ಮೂಲಕ ಹಣ ಟ್ರಾನ್ಸ್​ಫರ್ ಮಾಡಲಾಗುತ್ತದೆ. ಟ್ರಾನ್ಸ್​ಫರ್ ಆದ ಒಟ್ಟು ಹಣ 7.8 ಕೋಟಿ ರೂ ಆಗಿದೆ.

ಕುತೂಹಲ ಎಂದರೆ, ಇಷ್ಟು ದೊಡ್ಡ ಮಟ್ಟದ ಟ್ರಾನ್ಸಾಕ್ಷನ್ ನಡೆಯುತ್ತಿರುವಾಗ ಬ್ಯಾಂಕಿನವರಿಗೆ ಅನುಮಾನ ಬರುತ್ತದೆ. ಫ್ಯಾಕ್ಟರಿಯ ಸಿಎಫ್​ಒ ಅವರಿಗೆ ತಿಳಿಸುತ್ತಾರೆ. ಹಣ ವರ್ಗಾವಣೆಗೆ ಖುದ್ದು ಗುಜ್ರಾಲ್ ಅವರೇ ಮೆಸೇಜ್ ಕಳುಹಿಸಿದ್ದೆಂದು ಗ್ರಹಿಸಿ ಸಿಎಫ್​ಒ ಕೂಡ ಬ್ಯಾಂಕಿನವರಿಗೆ ದೃಢೀಕರಿಸುತ್ತಾರೆ.

ವಂಚನೆ ಬಯಲಾಗಿದ್ದು ಹೇಗೆ?

ಆದರೆ, ಕಂಪನಿಯ ಅಧಿಕಾರಿಯೊಬ್ಬರಿಗೆ ಏನೋ ಸಂದೇಹ ಬಂದು, ನರೇಶ್ ಗುಜ್ರಾಲ್ ಅವರ ಮಗಳನ್ನು ಸಂಪರ್ಕಿಸಿ, ಈ ಪೇಮೆಂಟ್​ಗಳನ್ನು ಪರಿಶೀಲಿಸಬೇಕೆಂದು ಕೇಳುತ್ತಾರೆ. ಆಗ ಈ ವಂಚನೆ ಪ್ರಕರಣ ಬಯಲಿಗೆ ಬರುತ್ತದೆ. ಆಕೆ ತನ್ನ ತಂದೆಯನ್ನು ಸಂಪರ್ಕಿಸಿ ಈ ಪೇಮೆಂಟ್​ಗಳ ಬಗ್ಗೆ ಕೇಳಿದಾಗ, ತಾನು ಅಂಥ ಯಾವುದನ್ನೂ ಕೇಳಿಲ್ಲವೆಂದು ತಿಳಿಸುತ್ತಾರೆ. ಆಗ ಗುಜ್ರಾಲ್ ಕುಟುಂಬದವರು ಪೊಲೀಸ್ ಠಾಣೆಗೆ ಹೋಗಿ ದೂರು ಕೊಡುತ್ತಾರೆ.

ಇದನ್ನೂ ಓದಿ: ಇನ್ಸ್​ಟಾ ಸ್ಕ್ರೋಲ್ ಮಾಡುವಾಗ ಬೇಡದ್ದು ಬರುತ್ತಿವೆಯಾ? ನೀವಿಚ್ಛಿಸುವವೇ ಫೀಡ್​ನಲ್ಲಿ ಬರುವಂತೆ ಮಾಡುತ್ತದೆ ಈ ಹೊಸ ಮೆಟಾ ಫೀಚರ್

ವಂಚಕರು ಕೊಟ್ಟಿದ್ದ ನಾಲ್ಕು ಅಕೌಂಟ್​ಗಳು ಬೇರೆ ಬೇರೆ ರಾಜ್ಯಗಳಲ್ಲಿ ಇರುವಂಥವು. ದೂರು ದಾಖಲಾದ ತಕ್ಷಣ ಕಾರ್ಯಪ್ರವೃತ್ತರಾದ ದೆಹಲಿ ಪೊಲೀಸರು (IFSO ಘಟಕ), ವಂಚಕರು ವರ್ಗಾಯಿಸಿಕೊಂಡಿದ್ದ ಹಣದಲ್ಲಿ ಸುಮಾರು ₹4 ಕೋಟಿಗೂ ಅಧಿಕ ಮೊತ್ತವನ್ನು ಆಯಾ ಬ್ಯಾಂಕ್‌ಗಳಲ್ಲಿ ಫ್ರೀಜ್ (Freeze) ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಸ್ತುತ ಪೊಲೀಸರು ಈ ಹಣವನ್ನು ವರ್ಗಾಯಿಸಿದ ಖಾತೆಗಳನ್ನು ಪತ್ತೆ ಹಚ್ಚುತ್ತಿದ್ದು, ತನಿಖೆ ಮುಂದುವರಿದಿದೆ. ಸಾರ್ವಜನಿಕರು ಇಂತಹ ಸಂದೇಶಗಳು ಬಂದಾಗ ನೇರವಾಗಿ ಸಂಬಂಧಪಟ್ಟ ವ್ಯಕ್ತಿಗೆ ಕರೆ ಮಾಡಿ ಖಚಿತಪಡಿಸಿಕೊಳ್ಳುವುದು ಸೂಕ್ತ ಎಂದು ಪೊಲೀಸರು ಎಚ್ಚರಿಸಿದ್ದಾರೆ.

ಪ್ರಿಯಾಂಕಾ ಉಪೇಂದ್ರಗೂ ಆಗಿತ್ತು ಸೈಬರ್ ಫ್ರಾಡ್

ಪ್ರಿಯಾಂಕಾ ಉಪೇಂದ್ರ ಅವರಿಗೂ ಕಳೆದ ವರ್ಷ ಸೈಬರ್ ವಂಚನೆಯಾಗಿ ಲಕ್ಷಕ್ಕೂ ಹೆಚ್ಚು ಹಣ ಕಳೆದುಕೊಂಡಿದ್ದರು. ಪ್ರಿಯಾಂಕಾ ಅವರ ಮೊಬೈಲ್ ಅನ್ನೇ ಹ್ಯಾಕ್ ಮಾಡಿದ್ದ ದುರುಳರು, ವಿವಿಧ ಜನರಿಗೆ ಹಣ ಕಳುಹಿಸುವಂತೆ ಮೆಸೇಜ್ ಹಾಕಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On – 5:40 pm, Fri, 19 June 26

Source link