Headlines

nagaraj11081993

ಗ್ಯಾಸ್ ಇಲ್ಲಾ ಅಂತ ಇಂಡಕ್ಷನ್​ನಲ್ಲಿ ಅಡುಗೆ ಮಾಡುತ್ತಿದ್ದೀರಾ? ಈ ಅಂಶಗಳು ನಿಮಗೆ ಗೊತ್ತಿರಲೇ ಬೇಕು!

ಬೆಂಗಳೂರು, ಏಪ್ರಿಲ್ 03: ಇರಾನ್, ಇಸ್ರೇಲ್ ಮತ್ತು ಅಮೇರಿಕಾ ಯುದ್ಧದ ಪರಿಣಾಮವಾಗಿ ಎಲ್​ಪಿಜಿ ಸಿಲಿಂಡರ್ ಕೊರತೆ ಹೆಚ್ಚಾಗಿದೆ. ವಾಣಿಜ್ಯ ಸಿಲಿಂಡರ್​ಗಳ ಕೊರತೆ ಜೊತೆಗೆ ಗ್ರಹಬಳಕೆ ಸಿಲಿಂಡರ್​ಗಳನ್ನು ಖರೀದಿಸುವಲ್ಲಿಯೂ ಹಲವರು ಅಡಚಣೆಯನ್ನು ಎದುರಿಸುತ್ತಿದ್ದಾರೆ. ಇದೇ ಕಾರಣಕ್ಕೆ ಇಂಡಕ್ಷನ್ ಸ್ಟೌವ್‌ಗಳ (Induction Stove) ಬೇಡಿಕೆ ಏರಿಕೆಯಾಗಿದ್ದು, ಆನ್​ಲೈನ್ ಖರೀದಿ ಪ್ಲಾಟ್​ಫಾರ್ಮ್​ಗಳಲ್ಲಿ ಸ್ಟೌವ್‌ಗಳ ಮಾರಾಟ 5 ರಿಂದ 10 ಪಟ್ಟು ಹೆಚ್ಚಾಗಿದೆ. ಹೀಗಿರುವಾಗ ಹೊಸ ಇಂಡಕ್ಷನ್ ಸ್ಟವ್ ಖರೀದಿಗೂ ಮುನ್ನ ಗಮನಿಸಬೇಕಾದ ಅಂಶಗಳನ್ನು ಬೆಸ್ಕಾಂ (BESCOM) ತನ್ನ ಎಕ್ಸ್(X) ಖಾತೆಯಲ್ಲಿ ಹಂಚಿಕೊಂಡಿದೆ….

Read More

ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ

ಜೀ ಕನ್ನಡದಲ್ಲಿ ‘ಸರಿಗಮಪ ಲಿಟ್ಲ್​ ಚಾಂಪ್ಸ್’ ಪ್ರಸಾರ ಕಾಣುವುದರಲ್ಲಿ ಇದೆ. ಈ ಶೋನಲ್ಲಿ ಟ್ಯಾಲೆಂಟ್​​ಗಿಂತ ಹೆಚ್ಚಾಗಿ ಕಷ್ಟದಲ್ಲಿರುವವರಿಗೆ ಅವಕಾಶ ಕೊಟ್ಟು ಟಿಆರ್​ಪಿ ಪಡೆದುಕೊಳ್ಳಲಾಗುತ್ತದೆ ಎಂಬ ಆರೋಪ ಇದೆ.  ಇದಕ್ಕೆ ತಿರುಗೇಟು ಕೊಡಲು ಪ್ರೋಮೋ ಒಂದನ್ನು ಮಾಡಲಾಗಿದೆ. ಈ ಪ್ರೋಮೋದಲ್ಲಿ ಎಲ್ಲರಿಗೂ ಖಡಕ್ ಆಗಿ ಉತ್ತರಿಸಲಾಗಿದೆ. ಜನರ ಕಲ್ಪನೆ ಮತ್ತು ರಿಯಾಲಿಟಿ ವಿವರಿಸಲಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

KKR vs SRH, IPL 2026: ಪೋಸ್ಟ್ ಮ್ಯಾಚ್​ನಲ್ಲಿ ತಂಡದ ಗೆಲುವಿಗೆ ಕಾರಣರಾದ ಯಾರನ್ನೂ ಮರೆಯದ ಇಶಾನ್ ಕಿಶನ್, ಏನು ಹೇಳಿದ್ರು ನೋಡಿ

ಬೆಂಗಳೂರು (ಏ. 03): ಗುರುವಾರ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2026 ರ ಆರನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 65 ರನ್‌ಗಳಿಂದ ಸೋಲಿಸಿತು. ಋತುವಿನ ಮೊದಲ ಗೆಲುವು ದಾಖಲಿಸಿದ ನಂತರ, ನಾಯಕ ಇಶಾನ್ ಕಿಶನ್ ತಮ್ಮ ಆಟಗಾರರನ್ನು ಹಾಡಿಹೊಗಳಿದ್ದಾರೆ. ಮುಖ್ಯವಾಗಿ ಆರಂಭಿಕ ಜೋಡಿಗಳಾದ ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ನಮ್ಮ ತಂಡಕ್ಕೆ ಪಂದ್ಯವನ್ನು ತುಂಬಾ ಸುಲಭಗೊಳಿಸಿದರು ಎಂದು ಹೇಳಿದ್ದಾರೆ. ಕೆಕೆಆರ್ ವಿರುದ್ಧದ ಗೆಲುವಿನ…

Read More

ಗದಗ: ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಅನೈತಿಕ ಸಂಬಂಧವೇ ಮುಳುವಾಯ್ತು, ಮೂವರು ಅರೆಸ್ಟ್!

ಗದಗ, ಏಪ್ರಿಲ್ 3: ಗದಗ (Gadag) ಜಿಲ್ಲೆಯ ಹುಯಿಲಗೋಳ ಗ್ರಾಮದ ಯುವಕ ಚಂದ್ರು ಕುರಿ ನಾಪತ್ತೆಯಾಗಿ, ನಂತರ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಈಗ ದೊಡ್ಡ ತಿರುವು ಸಿಕ್ಕಿದೆ. ಇದೊಂದು ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ನಡೆದ ಪಕ್ಕಾ ಪ್ಲಾನ್ಡ್ ಮರ್ಡರ್ ಎಂಬುದು ಪೊಲೀಸ್ ತನಿಖೆಯಿಂದ ಬಹಿರಂಗವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಪ್ರೇಯಸಿ ರತ್ನಾ, ಆಕೆಯ ಪತಿ ಈರಪ್ಪ ಮತ್ತು ಸಹೋದರ ಮಹಾಂತೇಶ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ಹಿನ್ನೆಲೆ ಹುಯಿಲಗೋಳ ಗ್ರಾಮದ ಚಂದ್ರು ಕುರಿ ಮತ್ತು…

Read More

Bengaluru Air Quality: ಬೆಂಗಳೂರು ಜೊತೆಗೆ ಮಂಗಳೂರಿನ ಏರ್ ಕ್ವಾಲಿಟಿಯಲ್ಲೂ ಸುಧಾರಣೆ

ಬೆಂಗಳೂರು, ಏಪ್ರಿಲ್ 03: ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ಬಳ್ಳಾರಿ, ಮಂಗಳೂರಿನ ವಾಯುಗುಣಮಟ್ಟವೂ  (Bengaluru Air Quality) ಹದಗೆಟ್ಟಿತ್ತು. ಆದರೆ ಇಂದು ಸ್ವಲ್ಪ ಮಟ್ಟಿಗೆ ಏರ್ ಕ್ವಾಲಿಟಿ ಸುಧಾರಿಸಿದ್ದು, ನಿಟ್ಟುಸಿರು ಬಿಡುವಂತಾಗಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 134ಕ್ಕೆ ತಲುಪಿದೆ. ಬೆಂಗಳೂರಿನ AQI…

Read More

Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ

ರಾಜ್​ಕೋಟ್, ಏಪ್ರಿಲ್ 03: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ ನಡೆಸಿರುವ ಘಟನೆ ರಾಜ್​ಕೋಟ್ ಜಿಲ್ಲೆಯ ಕೊಟ್ಡಾ ಸಂಗನಿ ಬಳಿಯ ವೆರಾವಲ್ ಗ್ರಾಮದಲ್ಲಿ ನಡೆದಿದೆ. ವ್ಯಕ್ತಿ ಸ್ಕೂಟಿಯಲ್ಲಿ ಬಂದು ನಿಲ್ಲುತ್ತಿದ್ದಂತೆ ಎದುರಿನಿಂದ ಬಂದ ಗೂಳಿ ಏಕಾಏಕಿ ದಾಳಿ ನಡೆದಿದೆ. ಗಾಡಿಯಿಂದ ನೆಲದ ಮೇಲೆ ಆತನನ್ನು ಬೀಳಿಸಿ ತುಳಿದಿದೆ. ಆಗ ಅಲ್ಲೇ ಹತ್ತಿರದಲ್ಲಿದ್ದ ಮತ್ತೊಂದು ಗೂಳಿ ಆತನನ್ನು ಉಳಿಸಲು ಸಹಾಯ ಮಾಡಿದೆ. ಹತ್ತಿರ ಇದ್ದವರು ಹೇಗೋ ಮಾಡಿ ಆತನನ್ನು ಗೂಳಿಯಿಂದ ಕಾಪಾಡಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಅವರ ಸ್ಥಿತಿ…

Read More

ತಗ್ಗದ ‘ಧುರಂಧರ್ 2’ ಚಿತ್ರದ ಅಬ್ಬರ; ಮುಂದಕ್ಕೆ ಹೋದ ದೊಡ್ಡ ಸಿನಿಮಾಗಳು

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್ 2’ ಚಿತ್ರವು ಮಾರ್ಚ್ 19ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಈ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಬಿರುಗಾಳಿಯನ್ನು ಸೃಷ್ಟಿಸಿದೆ.ಪ್ರೇಕ್ಷಕರು ಮೂರು ತಿಂಗಳಿನಿಂದ ಈ ರಣವೀರ್ ಸಿಂಗ್ ಚಿತ್ರಕ್ಕಾಗಿ ಕಾತರದಿಂದ ಕಾಯುತ್ತಿದ್ದರು. ‘ಧುರಂಧರ್’ ಚಿತ್ರದ ಮೊದಲ ಭಾಗವು ಡಿಸೆಂಬರ್ 5ರಂದು ಬಿಡುಗಡೆಯಾಯಿತು. ‘ಧುರಂಧರ್ 2’ ಘೋಷಣೆಯಾದಾಗ, ಇತರ ಎಲ್ಲಾ ನಿರ್ಮಾಪಕರು ಹಿಂದೆ ಸರಿಯಲು ನಿರ್ಧರಿಸಿದರು. ಏಪ್ರಿಲ್‌ನಲ್ಲಿ ಬಿಡುಗಡೆಯಾಗಬೇಕಿದ್ದ ಅನೇಕ ದೊಡ್ಡ ಚಿತ್ರಗಳು ಮೇ ಅಥವಾ ಜೂನ್‌ಗೆ ಮುಂದೂಡಲ್ಪಟ್ಟಿವೆ. ಅಕ್ಷಯ್ ಕುಮಾರ್ ಅವರ ‘ಭೂತ್ ಬಾಂಗ್ಲಾ’…

Read More

‘ಅಮೃತಧಾರೆ’: ದೊಡ್ಡ ಸಾಧನೆ ಮಾಡಿದ ಮಲ್ಲಿ; ಜಯದೇವ್ ಬಾಳಲ್ಲಿ ಕತ್ತಲು

ಅಮೃತಧಾರೆ (Amruthadhaare) ಧಾರವಾಹಿಯು ಒಂದು ಮಹತ್ವದ ಘಟ್ಟ ತಲುಪಿದೆ ಎಂದರೂ ತಪ್ಪಾಗಲಾರದು. ಏಕೆಂದರೆ ಮಲ್ಲಿಗೆ ಮೋಸ ಮಾಡಬೇಕು ಎಂಬುದು ಜಯದೇವ್ ಅಲೋಚನೆ ಆಗಿತ್ತು ಮತ್ತು ಆ ಆಲೋಚನೆ ತಪ್ಪಾಯಿತು. ಇದು ಅವನಿಗೆ ತಿರುಮಂತ್ರವಾಗಿದೆ ಎಂದರೂ ತಪ್ಪಾಗಲಾರದು. ಈಗ ‘ಅಮೃತಧಾರೆ’ ಧಾರಾವಾಹಿ ಹೊಸ ತಿರುವನ್ನು ಪಡೆದುಕೊಂಡು ಸಾಗಲು ರೆಡಿ ಆಗಿದೆ. ಆ ಬಗ್ಗೆ ಇಲ್ಲಿ ನೋಡೋಣ. ಮಲ್ಲಿಗೆ ಮೋಸ ಮಾಡಬೇಕು ಎಂಬುದು ಜಯದೇವ್ ಆಲೋಚನೆ ಆಗಿತ್ತು. ಇದಕ್ಕಾಗಿ ಸುನೀಲ್ ಎಂಬ ವ್ಯಕ್ತಿಯನ್ನು ಮುಂದಕ್ಕೆ ಬಿಡಲಾಯಿತು. ಆತ ಮೋಸ ಮಾಡುವ…

Read More

ಗದಗದಲ್ಲಿ ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಬಿಂದಾಸ್ ಎಂಟ್ರಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ!

ಗದಗ, ಏಪ್ರಿಲ್ 3: ಜಿಲ್ಲೆಯಲ್ಲಿ ಮುಸುಕುಧಾರಿ ಕಳ್ಳರ ಗ್ಯಾಂಗ್ ಮತ್ತೆ ಪ್ರತ್ಯಕ್ಷವಾಗಿದ್ದು, ಸರಣಿ ಕಳ್ಳತನದ ಮೂಲಕ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದೆ. ನಗರದ ಪುಟ್ಟರಾಜ್ ನಗರ ಮತ್ತು ಕೇಶವ್ ಪಾರ್ಕ್ ಪ್ರದೇಶದಲ್ಲಿ ನಡುರಾತ್ರಿ ಮಾರಕಾಸ್ತ್ರ ಹಿಡಿದು ಸಂಚರಿಸುತ್ತಿರುವ ಐವರು ಮುಸುಕುಧಾರಿಗಳ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಡಾವಣೆಯ ನಿವಾಸಿ ವಿಜಯಲಕ್ಷ್ಮೀ ಎಂಬುವವರು ಜನ್ಮದಿನದ ಕಾರ್ಯಕ್ರಮಕ್ಕೆ ತಂದೆಯ ಮನೆಗೆ ಹೋಗಿದ್ದ ವೇಳೆ, ಕಳ್ಳರು ಮನೆಯ ಬೀಗ ಮುರಿದು ಸುಮಾರು 70 ಗ್ರಾಂ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ರಾತ್ರಿ…

Read More

ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ, ಜನ ವಿಡಿಯೋ ಮಾಡಿದ್ರು ಸಹಾಯಕ್ಕೆ ಬರ್ಲಿಲ್ಲ

ಒಂದು ಹೊತ್ತಿನ ಊಟಕ್ಕೂ ಬಡತನ, ವಿಪರೀತ ಬಿಸಿಲು ಹೊಟ್ಟೆಗೇನೂ ಇಲ್ಲದೆ ಬಿಸಿಲಲ್ಲಿ ಕುಸಿದು ಬಿದ್ದ ತಾಯಿಯನ್ನು ಉಳಿಸಿಕೊಳ್ಳಲು, ಬಾಲಕನೊಬ್ಬ ಅಲ್ಲಿಲ್ಲಿ ಬೇಡಿ ನೀರನ್ನು ತಂದು ತಾಯಿಗೆ ಕುಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಚಪ್ಪಲಿ ಇಲ್ಲದೆ ಬರಿಗಾಲಲ್ಲಿ ಬಿಸಿಲಲ್ಲಿ ಓಡಿ ಚಿಪ್ಸ್​ ಹಾಗೂ ನೀರನ್ನು ತೆಗೆದುಕೊಂಡು ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಹೆಚ್ಚು ವಾಹನಗಳು ಓಡಾಡುವ ರಸ್ತೆಯಲ್ಲಿ ಮಹಿಳೆಯೊಬ್ಬರು ಬಿದ್ದಿರುವುದನ್ನು ಕಾಣಬಹುದು, ಮತ್ತೊಂದು ಕಡೆಯಿಂದ ಬಾಲಕ ಕೈಯಲ್ಲಿ ಬಾಟಲಿ ಹಿಡಿದು ಓಡಿ ಬರುತ್ತಿರುವುದನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ಆದರೆ ಅದನ್ನು ನೋಡಿ…

Read More