All posts by nagaraj11081993

‘ಧುರಂಧರ್ 2’ ಬಳಿಕ ಮತ್ತೊಂದು ಬ್ಲಾಕ್ ಬಸ್ಟರ್ ನಿರೀಕ್ಷೆಯಲ್ಲಿ ಸಂಜಯ್ ದತ್

‘ಧುರಂಧರ್ 2’ ಬಳಿಕ ಮತ್ತೊಂದು ಬ್ಲಾಕ್ ಬಸ್ಟರ್ ನಿರೀಕ್ಷೆಯಲ್ಲಿ ಸಂಜಯ್ ದತ್

ಬಾಲಿವುಡ್‌ನ ಅನುಭವಿ ನಟ ಸಂಜಯ್ ದತ್ (Sanjay Dutt) ಅವರಿಗೆ ಈಗ ಯಶಸ್ಸಿನ ಸುಗ್ಗಿಯ ಕಾಲ. ಇತ್ತೀಚೆಗಷ್ಟೇ ತೆರೆಕಂಡ ‘ಧುರಂಧರ್’ ಮತ್ತು ‘ಧುರಂಧರ್ 2’ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಸಾವಿರಾರು ಕೋಟಿ ರೂಪಾಯಿ ಗಳಿಸಿ ಅಭೂತಪೂರ್ವ ಯಶಸ್ಸು ಸಾಧಿಸಿವೆ. ಈ ಗೆಲುವಿನ ಬೆನ್ನಲ್ಲೇ ಸಂಜಯ್ ದತ್ ಈಗ ‘ರಾಜ ಶಿವಾಜಿ’ (Raja Shivaji) ಐತಿಹಾಸಿಕ ಚಿತ್ರದ ಮೂಲಕ ಮತ್ತೊಂದು ಬ್ಲಾಕ್‌ಬಸ್ಟರ್ ನೀಡಲು ಸಜ್ಜಾಗಿದ್ದಾರೆ. ಅಲ್ಲದೇ, ‘ಆಖ್ರಿ ಸವಾಲ್’ ಸಿನಿಮಾ ಕೂಡ ಬಿಡುಗಡೆಗೆ ಸಜ್ಜಾಗಿದೆ.

ಮರಾಠ ಸಾಮ್ರಾಜ್ಯದ ಕಥೆಯಿರುವ ‘ರಾಜ ಶಿವಾಜಿ’ ಸಿನಿಮಾದಲ್ಲಿ ಸಂಜಯ್ ದತ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಚಿತ್ರದ ಟೀಸರ್ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಈ ಸಿನಿಮಾಗೆ ರಿತೇಶ್ ದೇಶ್​ಮುಖ್ ಅವರು ಹೀರೋ. ಸಂಜಯ್ ದತ್ ಅವರು ಅಫ್ಜಲ್ ಖಾನ್​ನ ಪಾತ್ರವನ್ನು ಮಾಡಿದ್ದಾರೆ. ಹಾಗಾಗಿ ನಿರೀಕ್ಷೆ ಜಾಸ್ತಿ ಇದೆ.

‘ರಾಜ ಶಿವಾಜಿ’ ಟೀಸರ್ ಬಿಡುಗಡೆ ಆದ ಬಳಿಕ ಚಿತ್ರದ ಮೇಲಿನ ನಿರೀಕ್ಷೆ ಡಬಲ್ ಆಗಿದೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗಿದೆ. ಹಿಂದಿ ಮತ್ತು ಮರಾಠಿ ಭಾಷೆಯಲ್ಲಿ ಈ ಚಿತ್ರ ರಿಲೀಸ್ ಆಗಲಿದೆ. ಸಂಜಯ್ ದತ್ ಸಲುವಾಗಿಯೇ ಈ ಸಿನಿಮಾ ನೋಡಬೇಕು ಎಂಬ ಅಪ್ಪಟ ಫ್ಯಾನ್ಸ್ ಕೂಡ ಇದ್ದಾರೆ. ಮೇ 1ರಂದು ಭರ್ಜರಿಯಾಗಿ ಸಿನಿಮಾ ತೆರೆಕಾಣಲಿದೆ.

‘ರಾಜ ಶಿವಾಜಿ’ ಟೀಸರ್:

ಇದರ ಜೊತೆಗೆ ಅವರು ‘ಆಖ್ರಿ ಸವಾಲ್’ ಚಿತ್ರದಲ್ಲೂ ಸಂಜತ್ ದತ್ ನಟಿಸಿದ್ದಾರೆ. ಇದರ ಫಸ್ಟ್ ಲುಕ್ ಪೋಸ್ಟರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಈಗ ಟೀಸರ್ ಕೂಡ ಗಮನ ಸೆಳೆಯುತ್ತಿದೆ. ಆರ್‌ಎಸ್‌ಎಸ್‌ನ 100 ವರ್ಷಗಳ ಪಯಣದ ಕಥೆ ಹೊಂದಿರುವ ಈ ಚಿತ್ರವು ಮೇ 8ರಂದು ಬಿಡುಗಡೆಯಾಗಲಿದೆ. ಸತತ ಹಿಟ್‌ಗಳ ಮೂಲಕ ಸಂಜಯ್ ದತ್ ಅವರು 2026ರ ಸಾಲಿನಲ್ಲಿ ಭಾರತೀಯ ಚಿತ್ರರಂಗದ ಅತ್ಯಂತ ಬೇಡಿಕೆಯ ನಟನಾಗಿ ಹೊರಹೊಮ್ಮುತ್ತಿದ್ದಾರೆ.

ಇದನ್ನೂ ಓದಿ: ‘ರಾಜಾ ಶಿವಾಜಿ’ ಪಾತ್ರದಲ್ಲಿ ಅಬ್ಬರಿಸಿದ ರಿತೇಶ್ ದೇಶ್‌ಮುಖ್; ಟೀಸರ್ ಹೇಗಿದೆ ನೋಡಿ

ಬಾಲಿವುಡ್ ಮಾತ್ರವಲ್ಲದೇ ದಕ್ಷಿಣ ಭಾರತದಲ್ಲೂ ಸಂಜಯ್ ದತ್ ಅವರಿಗೆ ಸಖತ್ ಬೇಡಿಕೆ ಇದೆ. ಕನ್ನಡದ ‘ಕೆಡಿ ದಿ ಡೆವಿಲ್’ ಸಿನಿಮಾದಲ್ಲಿ ಕೂಡ ಸಂಜಯ್ ದತ್ ಅವರು ನಟಿಸಿದ್ದಾರೆ. ಹಾಡುಗಳು ಮೂಲಕ ಸದ್ದು ಮಾಡಿರುವ ಈ ಸಿನಿಮಾ ಕೂಡ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಈ ಚಿತ್ರವೂ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

New AI Syllabus for CBSE Schools: ಸಿಬಿಎಸ್ಇ ಶಾಲೆಗಳಲ್ಲಿ AI; ಹೊಸ ಪಠ್ಯಕ್ರಮದ ಅನಾವರಣ

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 3 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ (AI) ಮತ್ತು ಕಂಪ್ಯೂಟೇಷನಲ್ ಥಿಂಕಿಂಗ್ ಅನ್ನು ಒಳಗೊಂಡ ಹೊಸ ಪಠ್ಯಕ್ರಮವನ್ನು ಪರಿಚಯಿಸಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಈ ಉಪಕ್ರಮವನ್ನು ಅನಾವರಣಗೊಳಿಸಿದ್ದಾರೆ. ಶಾಲಾ ಪರಿಸರ ವ್ಯವಸ್ಥೆಯಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಶಿಕ್ಷಣವನ್ನು ಔಪಚಾರಿಕವಾಗಿ ಪರಿಚಯಿಸುವುದು ಈ ಕ್ರಮದ ಮುಖ್ಯ ಉದ್ದೇಶವಾಗಿದೆ.

ಈ ಹೊಸ ಪಠ್ಯಕ್ರಮವು ವಿದ್ಯಾರ್ಥಿಗಳಿಗೆ ಎಐ ಮತ್ತು ಭವಿಷ್ಯದ ತಂತ್ರಜ್ಞಾನಗಳ ಬಗ್ಗೆ ಜ್ಞಾನವನ್ನು ನೀಡುವ ಗುರಿ ಹೊಂದಿದೆ. ಇದು ಸುಸಜ್ಜಿತ ಎಐ ಮಾಡ್ಯೂಲ್‌ಗಳು, ಶಿಕ್ಷಕರಿಗೆ ಸಮಗ್ರ ಕೈಪಿಡಿಗಳು ಮತ್ತು ವಿದ್ಯಾರ್ಥಿ ಮೌಲ್ಯಮಾಪನ ಚೌಕಟ್ಟುಗಳನ್ನು ಒಳಗೊಂಡಿದೆ. ನ್ಯಾಷನಲ್ ಎಜುಕೇಷನ್ ಪಾಲಿಸಿ 2020ರ (NEP 2020) ಮಾರ್ಗಸೂಚಿ ಪ್ರಕಾರ, 6ನೇ ತರಗತಿಯಿಂದಲೇ ವಿದ್ಯಾರ್ಥಿಗಳಿಗೆ ತಾರ್ಕಿಕ ಚಿಂತನೆ ಮತ್ತು ಕೋಡಿಂಗ್ ಕೌಶಲ್ಯಗಳನ್ನು ಕಲಿಸಲು ಒತ್ತು ನೀಡಲಾಗುತ್ತಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

ಚರ್ಚ್​​ಗೆ ಹೋಗಿದ್ದಕ್ಕೆ ಟೀಕೆ: ಉತ್ತರಿಸಿದ ನಟ ಪ್ರಕಾಶ್ ರಾಜ್

ನಟ ಪ್ರಕಾಶ್ ರಾಜ್ (Prakash Raj) ಅವರ ತಾಯಿ ಸ್ವರ್ಣಲತಾ ಅವರು ತಮ್ಮ 89ನೇ ವಯಸ್ಸಿನಲ್ಲಿ ಇತ್ತೀಚೆಗಷ್ಟೆ ನಿಧನ ಹೊಂದಿದರು. ಸ್ವರ್ಣಲತಾ ಅವರ ಅಂತ್ಯಕ್ರಿಯೆ ಕ್ರಿಶ್ಚಿಯನ್ ಧರ್ಮದ ಅನ್ವಯ ನೆರವೇರಿತು. ಬೆಂಗಳೂರಿನ ಶಾಂತಿನಗರ ಚರ್ಚ್​​ನಲ್ಲಿ ಪ್ರಾರ್ಥನೆ, ಅಂತಿಮಕ್ರಿಯೆ ನಡೆಸಲಾಯ್ತು. ನಟ ಪ್ರಕಾಶ್ ರೈ ಸಹ ಶಾಂತಿನಗರ ಚರ್ಚ್​​ನಲ್ಲಿ ಹಾಜರಿದ್ದು, ಪ್ರಾರ್ಥನೆ, ಅಂತಿಮಕ್ರಿಯೆಯಲ್ಲಿ ಭಾಗಿ ಆಗಿದ್ದರು. ಆದರೆ ಇದೀಗ ಹಲವರು ಪ್ರಕಾಶ್ ರೈ ಚರ್ಚ್​​ಗೆ ಹೋಗಿದ್ದಕ್ಕೆ ಅವರನ್ನು ಟೀಕೆ ಮಾಡುತ್ತಿದ್ದಾರೆ. ಈ ಟೀಕೆಗಳಿಗೆ ನಟ ಪ್ರಕಾಶ್ ರೈ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ನಟ ಪ್ರಕಾಶ್ ರೈ ಹಲವು ಬಾರಿ ದೇವರ ಇರುವಿಕೆಯನ್ನು ಪ್ರಶ್ನಿಸಿದ್ದರು, ತಮ್ಮನ್ನು ತಾವು ನಾಸ್ತಿಕ (ದೇವರಲ್ಲಿ ನಂಬಿಕೆ ಇಡದವ) ಎಂದು ಹೇಳಿಕೊಂಡಿದ್ದರು. ಪ್ರಕಾಶ್ ರೈ, ಯೂಟ್ಯೂಬ್ ಸಂದರ್ಶನವೊಂದರಲ್ಲಿ ತಾವು ನಾಸ್ತಿಕ ಎಂದು ಹೇಳಿಕೊಂಡಿರುವ ದೃಶ್ಯವೊಂದನ್ನು ಹಂಚಿಕೊಂಡು, ‘ನಾಸ್ತಿಕ ಎಂದ ಮೇಲೆ ಚರ್ಚ್​​ಗೆ ಹೋಗಿದ್ದೇಕೆ?’ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಕಾಶ್ ರೈ, ‘ಹೌದು, ನಾನು ದೇವರನ್ನು ನಂಬುವುದಿಲ್ಲ. ಆದರೆ ನನ್ನ ತಾಯಿ ತನ್ನ ದೇವರನ್ನು ನಂಬಿದ್ದರು. ಅವಳ ನಂಬಿಕೆಯ ಪ್ರಕಾರ ಸಮಾಧಿ ಆಗುವ ಅವರ ಹಕ್ಕನ್ನು ನಿರಾಕರಿಸಲು ನಾನು ಯಾರು? ಇದು ನಾವು ಒಬ್ಬರಿಗೊಬ್ಬರು ನೀಡುವ ಮೂಲಭೂತ ಗೌರವ. ದ್ವೇಷಿಸುವ ರಾಕ್ಷಸರು ನೀವು ಇದನ್ನು ಅರ್ಥಮಾಡಿಕೊಳ್ಳಬಲ್ಲಿರಾ?’ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಪ್ರಕಾಶ್ ರೈ, ಅವರು ದೇವರನ್ನು ನಂಬುವುದಿಲ್ಲವಾದರು ಅವರ ತಾಯಿ ನಂಬಿದ್ದು ಹಾಗೂ ಅಂತ್ಯಕ್ರಿಯೆ ಹೀಗೆಯೇ ಆಗಬೇಕೆಂಬುದು ಅವರ ಇಚ್ಛೆಯಾಗಿತ್ತಾದ್ದರಿಂದ ಮಗನಾಗಿ ಅವರ ಇಚ್ಛೆಯನ್ನು ನೆರವೇರಿಸಿರುವುದಾಗಿ ಪ್ರಕಾಶ್ ರೈ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:‘ಸ್ಪಿರಿಟ್’ ಸಿನಿಮಾದಿಂದ ಪ್ರಕಾಶ್ ರಾಜ್ ಹೊರಬಂದಿಲ್ಲ; ಸ್ಪಷ್ಟನೆ ನೀಡಿದ ನಟ

ಪ್ರಕಾಶ್ ರೈ ಅವರ ತಾಯಿ ಸ್ವರ್ಣಲತಾ ಮಾರ್ಚ್ 30ರಂದು ನಿಧನ ಹೊಂದಿದ್ದರು. 85 ವರ್ಷ ವಯಸ್ಸಿನವರಾಗಿದ್ದ ಸ್ವರ್ಣಲತಾ ಅವರು ಹೈದರಾಬಾದ್​​ನಲ್ಲಿ ವಾಸವಿದ್ದು, ಅಲ್ಲಿಯೇ ನಿಧನ ಹೊಂದಿದ್ದರು. ಗದಗದವರಾಗಿದ್ದ ಸ್ವರ್ಣಲತಾ ಅವರು ಅನಾಥೆ ಆಗಿದ್ದರು. ನರ್ಸಿಂಗ್ ಕಲಿತು ಬೆಂಗಳೂರಿಗೆ ಬಂದು ಇಲ್ಲಿಯೇ ಹಲವು ವರ್ಷ ನೆಲೆಸಿದ್ದರು. ಪ್ರಕಾಶ್ ರೈ ಸಹ ಕೊನೆಯ ವರೆಗೂ ತಾಯಿಯರನ್ನು ಬಹಳ ಪ್ರೀತಿ, ಗೌರವದಿಂದ ನೋಡಿಕೊಂಡರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಯಶ್ ‘ರಾಮಾಯಣ’ ಟೀಸರ್ ನೋಡಿ ಮಹೇಶ್ ಬಾಬು ಅಭಿಮಾನಿಗಳಿಗೆ ಹೊಟ್ಟೆಕಿಚ್ಚು?

ರಣಬೀರ್ ಕಪೂರ್, ಸಾಯಿ ಪಲ್ಲವಿ, ಯಶ್ (Yash) ಮೊದಾದವರು ನಟಿಸಿರೋ ‘ರಾಮಾಯಣ’ ಸಿನಿಮಾದ ಟೀಸರ್ ಇಂದು (ಏಪ್ರಿಲ್ 2) ರಿಲೀಸ್ ಆಗಿದೆ. ಈ ಸಿನಿಮಾದ ಟೀಸರ್ ಗಮನ ಸೆಳೆದಿದೆ. ಹನುಮಂತ ಜಯಂತಿ ಪ್ರಯುಕ್ತ ಟೀಸರ್ ತೆರೆಗೆ ಬಂದಿದೆ. ಈ ಸಿನಿಮಾದ ಟೀಸರ್ ನೋಡಿದ ಎಲ್ಲರೂ ಪಾಸಿಟಿವ್ ಆಗಿ ಕಮೆಂಟ್ ಹಾಕುತ್ತಿದ್ದಾರೆ. ಆದರೆ, ಮಹೇಶ್ ಬಾಬು ಹಾಗೂ ರಾಜಮೌಳಿ ಅಭಿಮಾನಿಗಳು ಮಾತ್ರ ನೆಗೆಟಿವ್ ಆಗಿ ಕಮೆಂಟ್ ಹಾಕುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

‘ರಾಮಾಯಣ’ ಸಿನಿಮಾದ ಮೊದಲ ಭಾಗ ಈ ಬಾರಿ ದೀಪಾವಳಿಗೆ ರಿಲೀಸ್ ಆಗಲಿದೆ. ಅದಕ್ಕೂ ಮೊದಲು ಸಿನಿಮಾ ಎಷ್ಟು ರಿಚ್ ಆಗಿರಲಿದೆ ಎಂಬುದನ್ನು ತೋರಿಸುವ ನಿಟ್ಟಿನಲ್ಲಿ ಟೀಸರ್ ಬಿಡುಗಡೆ ಮಾಡಲಾಗಿದೆ. ಈ ಟೀಸರ್​ ಅಲ್ಲಿ ಗ್ರಾಫಿಕ್ಸ್ ಗಮನ ಸೆಳೆದಿದೆ. ರಾಮನಾಗಿ ರಣಬೀರ್ ಕಪೂರ್ ಗಮನ ಸೆಳೆದಿದ್ದಾರೆ. ಅವರ ಪಾತ್ರ ಮಾತ್ರ ಹೈಲೈಟ್ ಆಗಿದೆ. ಸೀತೆಯನ್ನು ದೂರದಿಂದ ಹಾಗೂ ರಾವಣನ ಪಾತ್ರವನ್ನು ಹಿಂಭಾಗದಿಂದ ತೋರಿಸಲಾಗಿದೆ.

ಇದನ್ನೂ ಓದಿ: ‘ರಾಮಾಯಣ’ ಟೀಸರ್ ಅಲ್ಲಿ ಯಶ್ ಲುಕ್ ಹೇಗಿದೆ? ಇಲ್ಲಿದೆ ಫೋಟೋಸ್

ಟೀಸರ್ ಇಷ್ಟು ಮೆಚ್ಚುಗೆ ಪಡೆದರೂ ಮಹೇಶ್ ಬಾಬು ಅಭಿಮಾನಿಗಳು ಅಸಮಾಧಾನಗೊಂಡಿದ್ದೇಕೆ? ಆ ಪ್ರಶ್ನೆಗೂ ಉತ್ತರ ಇದೆ. ಮಹೇಶ್ ಬಾಬು ಅವರು ರಾಜಮೌಳಿ ಜೊತೆ ‘ವಾರಣಾಸಿ’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಇದು ಸಂಪೂರ್ಣವಾಗಿ ‘ರಾಮಾಯಣ’ ಕಥೆಯನ್ನು ಆಧರಿಸಿ ಇರಲಿದೆಯಂತೆ. ಅದಕ್ಕೂ ಮೊದಲೇ ‘ರಾಮಾಯಣ’ ಚಿತ್ರ ಒಂದು ತೆರೆಗೆ ಬರುತ್ತಿರುವುದು ‘ವಾರಣಾಸಿ’ಗೆ ಹಿನ್ನಡೆ ಆಗಬಹುದು ಎಂಬದು ಮಹೇಶ್ ಬಾಬು ಹಾಗೂ ರಾಜಮೌಳಿ ಫ್ಯಾನ್ಸ್ ಲೆಕ್ಕಾಚಾರ.

‘ಮಹೇಶ್ ಬಾಬು ಮತ್ತು ರಾಜಮೌಳಿ ಅಭಿಮಾನಿಗಳಿಗೆ ನಿದ್ದೆಯಿಲ್ಲದ ರಾತ್ರಿಗಳು ಬರಲಿವೆ. ಅವರು ನಿಜಕ್ಕೂ ಅಳುತ್ತಿದ್ದಾರೆ. ‘ವಾರಣಾಸಿ’ ಸಿನಿಮಾನ ಈ ಚಿತ್ರ ಮೀರಿಸುತ್ತದೆ’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ‘ಮಹೇಶ್ ಬಾಬು ಅಭಿಮಾನಿಗಳು ಉದ್ದೇಶಪೂರ್ವಕವಾಗಿ ಟೀಸರ್ ಬಗ್ಗೆ ನೆಗೆಟಿವ್ ಆಗಿ ಮಾತನಾಡುತ್ತಿದ್ದಾರೆ’ ಎಂದು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

15 ದಿನ ಪಶ್ಚಿಮ ಬಂಗಾಳದಲ್ಲೇ ಇರ್ತೀನಿ, ಮಮತಾಗೆ ಬೈ-ಬೈ ಹೇಳಿಯೇ ಬರ್ತೀನಿ: ಅಮಿತ್ ಶಾ

ಕೋಲ್ಕತ್ತಾ, ಏಪ್ರಿಲ್ 02:ಪಶ್ಚಿಮ ಬಂಗಾಳದಲ್ಲಿ 2026ರ ಚುನಾವಣೆಗೂ ಮುನ್ನ ರಾಜಕೀಯ ವಾತಾವರಣ ಬಿಸಿಯಾಗುತ್ತಿದೆ. ಈ ಚುನಾವಣೆಯಲ್ಲಿ ಆಡಳಿತಾರೂಢ ಟಿಎಂಸಿ ಹಾಗೂ ಪ್ರಮುಖ ವಿರೋಧಪಕ್ಷ ಬಿಜೆಪಿ ನಡುವೆ ನೇರ ಹೋರಾಟ ಕಂಡುಬರುತ್ತಿದೆ. ಶುಭೇಂದು ಅಧಿಕಾರಿಯ ನಾಮಪತ್ರ ಸಲ್ಲಿಕೆ ಇದ್ದ ಕಾರಣ ನಂದಿಗ್ರಾಮಕ್ಕೆ ಹೋಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಇನ್ನು 15 ದಿನ ಇಲ್ಲೇ ಇರುತ್ತೇನೆ, ಪಶ್ಚಿಮ ಬಂಗಾಳದಲ್ಲಿಯೇ ಉಳಿದು ಚುನಾವಣಾ ಉಸ್ತುವಾರಿವಹಿಸಿಕೊಳ್ಳುವುದಾಗಿ ಘೋಷಿಸಿದರು.
ತಾನು ಇಡೀ ಬಂಗಾಳವನ್ನು ಪ್ರವಾಸ ಮಾಡಿರುವುದಾಗಿ ಹೇಳಿದ್ದು, ಎಲ್ಲ ಕಡೆಯೂ ಮಮತಾ ಬ್ಯಾನರ್ಜಿ ಸರ್ಕಾರವನ್ನು ಕೊನೆಗೊಳಿಸುವ ಬಗ್ಗೆಯೇ ಬೇಡಿಕೆಗಳು ಕೇಳಿಬಂದಿವೆ.

ಬಂಗಾಳದ ಜನರು ಟಿಎಂಸಿಯ ಗೂಂಡಾಗಿರಿಯಿಂದ ಸಂಪೂರ್ಣವಾಗಿ ಬೇಸತ್ತಿದ್ದಾರೆ, ಆಗಾಗ ಸ್ಫೋಟಗಳು, ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಬಿಜೆಪಿ ಸರ್ಕಾರವು ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುತ್ತದೆ, ಅಭಿವೃದ್ಧಿಯ ಹೊಸ ಅಲೆಯನ್ನು ತರುತ್ತದೆ. ಇದರಿಂದ ಬಂಗಾಳವುತನ್ನ ಹಿಂದಿನ ಗುರುತನ್ನು ಮರಳಿ ಪಡೆಯಬಹುದು ಎಂದು ಭರವಸೆ ನೀಡಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

IPL 2026: ಆರ್​​ಸಿಬಿ ಪರ ಆಡಲು ಬಿಡದ ಕ್ರಿಕೆಟ್ ಮಂಡಳಿ ವಿರುದ್ಧ ಕೋರ್ಟ್​ ಮೆಟ್ಟಿಲೇರಿದ ಕ್ರಿಕೆಟಿಗ

2026 ರ ಐಪಿಎಲ್‌ನಲ್ಲಿ ಮೊದಲ ಹಂತ ಮುಕ್ತಾಯಗೊಂಡಿದೆ. ಅಂದರೆ ಎಲ್ಲಾ 10 ತಂಡಗಳು ತಲಾ ಒಂದೊಂದು ಪಂದ್ಯಗಳನ್ನಾಡಿವೆ. ಮೊದಲ ಈ ಐದು ಪಂದ್ಯಗಳು ಕೆಲವು ಪ್ರಮುಖ ಆಟಗಾರರ ಇಂಜುರಿ ಹಾಗೂ ಅಲಭ್ಯತೆಯ ನಡುವೆ ಅದ್ಧೂರಿಯಾಗಿ ನಡೆದಿವೆ. ಇಂದಿನಿಂದ ಎರಡನೇ ಹಂತ ಆರಂಭವಾಗುತ್ತಿದ್ದು, ಈ ಸುತ್ತಿನಿಂದ ಕೆಲವು ಅಟಗಾರರು ಕಣಕ್ಕಿಳಿಯಲಿದ್ದಾರೆ. ಆದಾಗ್ಯೂ ಶ್ರೀಲಂಕಾ ತಂಡದ ಸ್ಟಾರ್ ವೇಗದ ಬೌಲರ್ ನುವಾನ್ ತುಷಾರಗೆ ಮಾತ್ರ ಐಪಿಎಲ್‌ನಲ್ಲಿ ಆಡುವ ಅವಕಾಶ ಸಿಕ್ಕಿಲ್ಲ. ಐಪಿಎಲ್‌ನಲ್ಲಿ ಆರ್​ಸಿಬಿ ತಂಡದ ಭಾಗವಾಗಿರುವ ತುಷಾರ, ಫಿಟ್​ನೆಸ್ ಪರೀಕ್ಷೆಯಲ್ಲಿ ಪಾಸಾಗದ ಕಾರಣ ಶ್ರೀಲಂಕಾ ಕ್ರಿಕೆಟ್ ಮಂಡಳಿ, ತುಷಾರಗೆ ಎನ್​ಒಸಿ ನೀಡಲು ನಿರಾಕರಿಸಿದೆ. ಹೀಗಾಗಿ ಅವರು ಐಪಿಎಲ್‌ನಲ್ಲಿ ಆಡಲು ಸಾಧ್ಯವಾಗುತ್ತಿಲ್ಲ. ಇದರಿಂದ ಕೆರಳಿರುವ ತುಷಾರ, ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾರೆ.

ಮಂಡಳಿ ವಿರುದ್ಧ ದೂರು

ಶ್ರೀಲಂಕಾ ಮಾಧ್ಯಮ ವರದಿಗಳ ಪ್ರಕಾರ, ಐಪಿಎಲ್​ನಲ್ಲಿ ಆಡಲು ಎನ್‌ಒಸಿ ನೀಡದ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧ ನುವಾನ್ ತುಷಾರ ಮೊಕದ್ದಮೆ ಹೂಡಿದ್ದಾರೆ. ಮೇಲೆ ಹೇಳಿದಂತೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ನಡೆಸಿದ ಫಿಟ್‌ನೆಸ್ ಪರೀಕ್ಷೆಯಲ್ಲಿ ನುವಾನ್ ತುಷಾರ ಪಾಸಾಗಿಲ್ಲ. ಹೀಗಾಗಿ ಅವರನ್ನು ಐಪಿಎಲ್‌ನಲ್ಲಿ ಆಡದಂತೆ ನಿಷೇಧಿಸಲಾಗಿದೆ. ಫಿಟ್‌ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಟಗಾರರಿಗೆ ಮಾತ್ರ ವಿದೇಶಿ ಲೀಗ್‌ಗಳಲ್ಲಿ ಆಡಬಹುದು ಎಂಬ ಶ್ರೀಲಂಕಾ ಮಂಡಳಿಯ ನಿಯಮ ನುವಾನ್ ತುಷಾರಗೆ ಮುಳುವಾಗಿದೆ.

ಆರ್‌ಸಿಬಿ ತಂಡದಲಿರುವ ತುಷಾರ

ನುವಾನ್ ತುಷಾರ ಅವರನ್ನು ಕಳೆದ ವರ್ಷ ಆರ್‌ಸಿಬಿ 1.6 ಕೋಟಿಗೆ ಖರೀದಿಸಿದೆ. ಆದಾಗ್ಯೂ ತುಷಾರ ಇದುವರೆಗೂ ಆರ್​​ಸಿಬಿ ತಂಡವನ್ನು ಸೇರದೆ ಇನ್ನೂ ಶ್ರೀಲಂಕಾದಲ್ಲಿದ್ದಾರೆ. ಐಪಿಎಲ್​ನಲ್ಲಿ ಆಡಲು ನಾನಾ ಕಸರತ್ತುಗಳನ್ನು ಮಾಡುತ್ತಿರುವ ನುವಾನ್ ತುಷಾರ ಈಗ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದು, ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮಂಡಳಿಯೊಂದಿಗಿನ ನನ್ನ ಕೇಂದ್ರ ಒಪ್ಪಂದ ಮಾರ್ಚ್ 31 ರಂದೇ ಮುಕ್ತಾಯಗೊಂಡಿದೆ. ಅಲ್ಲದೆ ನೂತನ ಕೇಂದ್ರ ಒಪ್ಪಂದದಲ್ಲಿ ನನ್ನ ಹೆಸರನ್ನು ಪರಿಗಣಿಸದಂತೆ ನಾನು ಮಂಡಳಿಗೆ ಮನವಿ ಮಾಡಿದ್ದೇನೆ. ಹೀಗಿದ್ದರೂ ಫಿಟ್ನೆಸ್ ಸಮಸ್ಯೆಗಳನ್ನು ಉಲ್ಲೇಖಿಸಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯು ನನಗೆ NOC ನೀಡುತ್ತಿಲ್ಲ. ಈ ನಿರ್ಧಾರದಿಂದ ನನಗೆ 1.6 ಕೋಟಿ ನಷ್ಟವಾಗುತ್ತಿದೆ ಎಂದು ತುಷಾರ ಮಂಡಳಿ ವಿರುದ್ಧ ಆರೋಪ ಹೊರಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸುದೀಪ್ ಆತ್ಮಹತ್ಯೆ ಪ್ರಕರಣ: ಪತಿ ಸಾವಿಗೆ ಕಾರಣ ಬಿಚ್ಚಿಟ್ಟ ಉದ್ಯಮಿ ಪತ್ನಿ ಸೌಮ್ಯಾ

ಉಡುಪಿ, ಏಪ್ರಿಲ್​​ 02: ಮದುವೆಯಾದ ಒಂದೇ ತಿಂಗಳಿಗೆ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ, ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಕಾರ್ಕಳದಲ್ಲಿ ನಡೆದಿತ್ತು. ಮಗನ ಸಾವಿಗೆ ಆತನ ಪತ್ನಿ ಸೌಮ್ಯಾ ಶೆಟ್ಟಿಯೇ ಕಾರಣ ಎಂಬ ಗಂಭೀರ ಆರೋಪವನ್ನು ಸುದೀಪ್​​ ಪೋಷಕರು ಮಾಡಿದ್ದರು. ಆದರೀಗ ತನ್ನ ಮೇಲಿನ ಆರೋಪಗಳಿಗೆ ಸ್ವತಃ ಸೌಮ್ಯಾ ಶೆಟ್ಟಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಸುದೀಪ್​​ ಹೆತ್ತವರ ಆರೋಪ ಅಲ್ಲಗಳೆದಿರುವ ಈಕೆ, ಪತಿಯ ಸಾವಿಗೆ ತಾನು ಕಾರಣಳಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುದೀಪ್​​ ಪೋಷಕರು ಹೇಳುವಂತೆ ನೆಲ್ಯಾಡಿಯಲ್ಲಿ ನಾನು ರಂಪಾಟ ಮಾಡಿಲ್ಲ. ವಿಷಯ ಹಾಕಿ ಸುದೀಪ್​​ರನ್ನು ಕೊಂದಿಲ್ಲ. ಬದಲಾಗಿ ಮನೆಯವರ ಕಿರುಕುಳದಿಂದಲೇ ಸುದೀಪ್ ಆತ್ಮಹತ್ಯೆ ಮಾಡಿಕೊಂಡಿರಬಹುದು. ಸುದೀಪ್​​ ಮೊಬೈಲ್​​ ಸಂಪರ್ಕಕ್ಕೆ ಸಿಗದ ಕಾರಣ ಆತಂಕಗೊಂಡು ತಾನು ನೆಲ್ಯಾಡಿಗೆ ತೆರಳಿದ್ದೆ. ಅವರು ಹೇಳುವಂತೆ ತಾನು ಯಾವುದೇ ರಂಪಾಟ ನಡೆಸಿಲ್ಲ. ಬೇಕಿದ್ದರೆ ಸಿಸಿ ಕ್ಯಾಮರಾ ದೃಶ್ಯಾವಳಿಗಳ ಪರಿಶೀಲನೆ ಮಾಡಿ. ಸುದೀಪ್​​ ತಾಯಿ ನನಗೆ ಕೆಟ್ಟ ಭಾಷೆಯಲ್ಲಿ ಬೈದ ಕಾರಣ ಆ ವೇಳೆ ತಾನು ಕಿರುಚಾಡಿದ್ದು ನಿಜ. ನಮ್ಮ ಮನೆಯಲ್ಲಿಯೇ ಇದ್ದ ಸುದೀಪ್​​ ಮಾರ್ಚ್​​ 16ರಂದು ನೆಲ್ಯಾಡಿಗೆ ತೆರಳಿದ್ದರು. ತಂದೆಯ ಮನೆಗೆ ಹೋದ ನಂತರ ನನಗೆ ಸಮಸ್ಯೆ ಆಗಿದೆ. ನನ್ನ ಮನೆಯಲ್ಲಿ ಮದುವೆಗೆ ಒಪ್ಪುತ್ತಿಲ್ಲ ಎಂದಿದ್ದರು. ಒಂದು ವೇಳೆ ಅವರು ಒಪ್ಪದಿದ್ದರೆ ನಿಮ್ಮ ಮನೆಯಲ್ಲಿ ಒಪ್ಪುತ್ತಾರಲ್ಲ ಎಂದು ಕೇಳಿದ್ದರು. ತಂದೆಯ ಮನೆಗೆ ಹೋಗಿ ಬಂದ ನಂತರ ಆತ್ಮಹತ್ಯೆ ನಿರ್ಧಾರ ಮಾಡಿದ್ದಾರೆ. ಹೀಗಾಗಿ ಅವರ ಮನೆಯವರೇ ಆತ್ಮಹತ್ಯೆಗೆ ಪ್ರಚೋದನೆ ನೀಡಿರಬೇಕು ಎಂದು ಸೌಮ್ಯಾ ಆರೋಪಿಸಿದ್ದಾರೆ.

ಇದನ್ನೂ ಓದಿ: 3 ಮದುವೆ, ಸಾಕಷ್ಟು ಅಫೇರ್; ಮೇಕಪ್ ಆರ್ಟಿಸ್ಟ್​​ ನವರಂಗಿ ಆಟಕ್ಕೆ ಉದ್ಯಮಿಯ ಬಲಿ?

ವೇಣು ಶೆಟ್ಟಿ ಆರೋಪಗಳಿಗೂ ಉತ್ತರಿಸಿರುವ ಸೌಮ್ಯಾ, ನಾವಿಬ್ಬರೂ ರಂಗಭೂಮಿ ಕಲಾವಿದರು. ನನಗೆ ಆತನ ಪರಿಚಯ ಇರಲಲಿಲ್ಲ. ಆದರೆ ಅವನಿಗೆ ನನ್ನ ಪರಿಚಯ ಇತ್ತಂತೆ. ಈ ಹಿಂದೆ ನನಗೆ ಪ್ರಪೋಸಲ್ ಬಂದಿತ್ತು. ಆ ವೇಳೆ ನನಗೆ ಅನೇಕ ಮಂದಿ ಆತನ ಬಗ್ಗೆ ಮಾಹಿತಿ ನೀಡಿದ್ದು, ಹಲವು ಮಹಿಳೆಯರ ಜೊತೆ ಅವನಿಗೆ ಸಂಬಂಧ ಇತ್ತು ಎಂಬುದು ಗೊತ್ತಾಗಿತ್ತು. ಹೀಗಾಗಿ ಆ ಸಂಬಂಧ ಬಿಟ್ಟಿದ್ದೆ. ನಮ್ಮ ಮನೆಗೂ ಆತ ಬಂದು ಹೋಗುತ್ತಿದ್ದ. ನಂತರ ಮನೆಗೆ ಬರಬೇಡ ಎಂದಿದ್ದೆವು. ಆತನೇ ಸುದೀಪ್​​ ಮ ನೆಯವರ ತಲೆ ಕೆಡಿಸಿದ್ದು, ಈ ಬಗ್ಗೆ ಪತಿಯೇ ತನಗೆ ತಿಳಿಸಿದ್ದರು. ಸುದೀಪ್ ತಂದೆಗೆ ವೇಣುಗೋಪಾಲ್ ಕಡೆಯಿಂದ ಅನೇಕ ಬಾರಿ ಕರೆ ಹೋಗಿವೆ. ಹೀಗಾಗಿ ಆತ ಕೂಡ ತನ್ನ ಪತಿಯ ಆತ್ಮಹತ್ಯೆಗೆ ಕಾರಣ. ಹೀಗಾಗಿ ತನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿದವರ ವಿರುದ್ಧ ದೂರು ನೀಡಿದ್ದೇನೆ. ಕಾರ್ಕಳ ಠಾಣೆಯಲ್ಲಿ ಸುದೀಪ್ ಮನೆಯವರು ಹಾಗೂ ವೇಣುಶೆಟ್ಟಿ ವಿರುದ್ಧ ದೂರು ದಾಖಲಿಸಿದ್ದೇನೆ ಎಂದು ಸೌಮ್ಯಾ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಹೈದರಾಬಾದ್‌ನಲ್ಲಿ ಸೊಳ್ಳೆ ಪರದೆ ಧರಿಸಿ ಪ್ರತಿಭಟನೆ ನಡೆಸಿದ ಬಿಆರ್‌ಎಸ್ ಶಾಸಕ

ಹೈದರಾಬಾದ್, ಏಪ್ರಿಲ್ 2: ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕ ಸುಧೀರ್ ರೆಡ್ಡಿ ಇಂದು ಹೈದರಾಬಾದ್​ನ (Hyderabad) ವಿಧಾನಸಭೆ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಗೆ ಸೊಳ್ಳೆ ಪರದೆ ಧರಿಸಿಕೊಂಡು, ಫಾಗಿಂಗ್ ಯಂತ್ರವನ್ನು ಹಿಡಿದುಕೊಂಡು ಆಗಮಿಸಿದ್ದಾರೆ. ಹೈದರಾಬಾದ್ ನಗರದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಸೊಳ್ಳೆ ಸಮಸ್ಯೆಯ ವಿರುದ್ಧ ಅವರು ಈ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಮೊದಲು ಮಾಧ್ಯಮ ಕೇಂದ್ರಕ್ಕೆ ಸೊಳ್ಳೆ ಪರದೆ ಮತ್ತು ಫಾಗಿಂಗ್ ಯಂತ್ರವನ್ನು ಕೊಂಡೊಯ್ಯಲು ಪ್ರಯತ್ನಿಸಿದಾಗ ಸುಧೀರ್ ರೆಡ್ಡಿ ಅವರಿಗೆ ವಿಧಾನಸಭೆ ಸಿಬ್ಬಂದಿ ಅನುಮತಿ ನಿರಾಕರಿಸಿದರು. ಭದ್ರತಾ ಸಿಬ್ಬಂದಿಯ ಈ ವರ್ತನೆಯ ಬಗ್ಗೆ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಸುಧೀರ್ ರೆಡ್ಡಿ, ಸೊಳ್ಳೆ ಸಮಸ್ಯೆಯ ತೀವ್ರತೆಯಿಂದಾಗಿ ಜನರು ಹೈದರಾಬಾದ್‌ನಿಂದ ಪಲಾಯನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ಪರಿಸ್ಥಿತಿಯು ನಗರದ ಬ್ರಾಂಡ್ ಇಮೇಜ್‌ಗೆ ಹಾನಿ ಮಾಡುತ್ತಿದೆ ಎಂದ ಅವರು ಸೊಳ್ಳೆಗಳ ಕಾಟದಿಂದ ಸಾರ್ವಜನಿಕರನ್ನು ರಕ್ಷಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಮರ್ಷಿಯಲ್ ಬ್ಯಾಂಕ್​ಗಳ ಎಫ್​ಡಿಗಿಂತಲೂ ಹೆಚ್ಚು ರಿಟರ್ನ್ಸ್ ಕೊಡುತ್ತೆ ಈ ಪೋಸ್ಟ್ ಆಫೀಸ್ ಡೆಪಾಸಿಟ್

ಇವತ್ತಿನ ಷೇರು ಮಾರುಕಟ್ಟೆ ಅಲುಗಾಟದಲ್ಲಿ ನಿಶ್ಚಿತ ಠೇವಣಿಗಳು ಹೆಚ್ಚು ಸುರಕ್ಷಿತ, ಹೆಚ್ಚು ಉಪಯುಕ್ತ ಎನಿಸಿವೆ. ಎಫ್​ಡಿಗಳನ್ನು ಇಡಲು ಬ್ಯಾಂಕ್​ಗಳಲ್ಲಿ ವಿವಿಧ ಪ್ಲಾನ್​ಗಳಿವೆ. ಸಹಕಾರಿ ಬ್ಯಾಂಕುಗಳು, ಎನ್​ಬಿಎಫ್​ಸಿಗಳು ಕೂಡ ಫಿಕ್ಸೆಡ್ ಡೆಪಾಸಿಟ್ (Fixed Deposit) ಸ್ಕೀಮ್ಸ್ ಹೊಂದಿವೆ. ಪೋಸ್ಟ್ ಆಫೀಸ್​ಗಳಲ್ಲೂ (Post Office) ಫಿಕ್ಸೆಡ್ ಡೆಪಾಸಿಟ್ ರೀತಿಯ ಟೈಮ್ ಡೆಪಾಸಿಟ್ ಪ್ಲಾನ್​ಗಳಿವೆ. ನಿಶ್ಚಿತ ಠೇವಣಿಯಲ್ಲಿ ಹೂಡಿಕೆ ಮಾಡಲು ಬಯಸುವ ಮಂದಿಗೆ ಈ ನಾನಾ ಆಯ್ಕೆಗಳಿವೆ. ಆದರೆ, ಯಾವುದು ಉತ್ತಮ?

ಬ್ಯಾಂಕ್ ಎಫ್​ಡಿಗಿಂತ ಪೋಸ್ಟ್ ಆಫೀಸ್​ನಲ್ಲಿ ಹೆಚ್ಚು ಬಡ್ಡಿ

ಪ್ರಮುಖ ಕಮರ್ಷಿಯಲ್ ಬ್ಯಾಂಕುಗಳಾದ ಎಸ್​ಬಿಐ, ಎಚ್​ಡಿಎಫ್​ಸಿ, ಐಸಿಐಸಿಐ, ಬ್ಯಾಂಕ್ ಆಫ್ ಬರೋಡಾ ಇತ್ಯಾದಿ ಕಡೆ 7 ದಿನದಿಂದ ಹಿಡಿದು 10 ವರ್ಷದವರೆಗೆ ವಿವಿಧ ಅವಧಿಗೆ ಫಿಕ್ಸೆಡ್ ಡೆಪಾಸಿಟ್​ಗಳನ್ನು ಆಫರ್ ಮಾಡಲಾಗುತ್ತದೆ.

ಇದನ್ನೂ ಓದಿ: April 2026 Rules Changes: ಡಿಜಿಟಲ್ ಪಾವತಿ, ಪ್ಯಾನ್ ಇತ್ಯಾದಿ ನಿಯಮಗಳಲ್ಲಿ ಬದಲಾವಣೆ; ಆರ್‌ಬಿಐಯಿಂದ ಹೊಸ ಗೈಡ್‌ಲೈನ್ಸ್ ತಿಳಿದಿರಿ

ಪೋಸ್ಟ್ ಆಫೀಸ್​ನಲ್ಲಿ ಫಿಕ್ಸೆಡ್ ಡೆಪಾಸಿಟ್​ಗೆ 4 ಆಯ್ಕೆಗಳಿವೆ. 1 ವರ್ಷ, 2, 3 ಮತ್ತು 5 ವರ್ಷದ ಟೈಮ್ ಡೆಪಾಸಿಟ್ ಪ್ಲಾನ್​ಗಳಿವೆ. 1 ವರ್ಷದ ಟಿಡಿಗೆ ಶೇ. 6.9 ಬಡ್ಡಿ ಇದೆ. 2 ವರ್ಷ, 3 ವರ್ಷ ಮತ್ತು 5 ವರ್ಷದ ಟೈಮ್ ಡೆಪಾಸಿಟ್​ಗಳಿಗೆ ಕ್ರಮವಾಗಿ ಶೇ. 7, ಶೇ. 7.1 ಮತ್ತು ಶೇ. 7.5 ಬಡ್ಡಿ ಸಿಗುತ್ತದೆ.

ಬ್ಯಾಂಕ್ ಎಫ್​ಡಿ ದರಗಳನ್ನು ಹೋಲಿಕೆ ಮಾಡಲು 1 ವರ್ಷದ ಮತ್ತು 5 ವರ್ಷದ ಪ್ಲಾನ್​ಗಳನ್ನು ಪರಿಗಣಿಸಬಹುದು. ಪೋಸ್ಟ್ ಆಫೀಸ್​ನಲ್ಲಿ 1 ವರ್ಷದ ಟೈಮ್ ಡೆಪಾಸಿಟ್​ಗೆ ಶೇ. 6.9 ಬಡ್ಡಿ ಸಿಗುತ್ತದೆ. ಉಳಿದ ಕಮರ್ಷಿಯಲ್ ಬ್ಯಾಂಕುಗಳಲ್ಲಿ ಶೇ. 6.25 ಬಡ್ಡಿ ಇದೆ. 5 ವರ್ಷದ ಎಫ್​ಡಿಗೆ ಶೇ. 6.05ರಿಂದ ಶೇ. 6.50ರವರೆಗೆ ಬಡ್ಡಿ ಆಫರ್ ಮಾಡಲಾಗುತ್ತಿದೆ. ಆದರೆ, ಪೋಸ್ಟ್ ಆಫೀಸ್​ನಲ್ಲಿ 5 ವರ್ಷದ ಟಿಡಿಗೆ ಶೇ. 7.5 ಬಡ್ಡಿ ಕೊಡಲಾಗುತ್ತದೆ.

ಸಹಕಾರಿ ಬ್ಯಾಂಕು ಮತ್ತು ಎನ್​ಬಿಎಫ್​ಸಿಗಳಲ್ಲಿ ಫಿಕ್ಸೆಡ್ ಡೆಪಾಸಿಟ್​ಗಳಿಗೆ ಕಮರ್ಷಿಯಲ್ ಬ್ಯಾಂಕುಗಳಿಗಿಂತ ಹೆಚ್ಚಿನ ಬಡ್ಡಿ ನೀಡಲಾಗುತ್ತದೆಯಾದರೂ ರಿಸ್ಕ್ ಹೆಚ್ಚು. ಒಟ್ಟಾರೆ ಬ್ಯಾಂಕುಗಳಲ್ಲಿ ದೊಡ್ಡ ಮೊತ್ತಕ್ಕೆ (5 ಲಕ್ಷ ರೂ ಮೇಲ್ಪಟ್ಟ) ಇನ್ಷೂರೆನ್ಸ್ ಕವರೇಜ್ ಇರುವುದಿಲ್ಲ ಎನ್ನುವುದು ಗಮನಿಸಬೇಕಾದ ಸಂಗತಿ.

ಇದನ್ನೂ ಓದಿ: ವಿವಿಧ ಪೋಸ್ಟ್ ಆಫೀಸ್ ಸ್ಕೀಮ್ಸ್; ಏಪ್ರಿಲ್-ಜೂನ್ ಕ್ವಾರ್ಟರ್​ಗೆ ಬಡ್ಡಿದರ ಘೋಷಣೆ; ಇಲ್ಲಿದೆ ಪಟ್ಟಿ

ಪೋಸ್ಟ್ ಆಫೀಸ್​ನಲ್ಲಿ ಸಂಪೂರ್ಣ ಮೊತ್ತಕ್ಕೆ ಸರ್ಕಾರದ ಖಾತ್ರಿ ಇರುತ್ತದೆ. ಹೀಗಾಗಿ, ಇಲ್ಲಿಯ ಯಾವುದೇ ಹೂಡಿಕೆ ಪೂರ್ಣ ಸುರಕ್ಷಿತ ಮತ್ತು ಹೆಚ್ಚು ಲಾಭದಾಯಕ. ನೀವು 5 ವರ್ಷದ ಟೈಮ್ ಡೆಪಾಸಿಟ್​ನಲ್ಲಿ 10 ಲಕ್ಷ ರೂ ಹೂಡಿಕೆ ಮಾಡಿದರೆ, ನಾಲ್ಕೂವರೆ ಲಕ್ಷ ರೂನಷ್ಟು ಬಡ್ಡಿಯೇ ಪ್ರಾಪ್ತವಾಗಿರುತ್ತದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಹೋಟೆಲ್​ ಮಾಲೀಕನಿಂದಲೇ ಕಾರ್ಮಿಕನ ಹತ್ಯೆ: ಕೊಲೆ ಮಾಡುವಷ್ಟು ಆಗಿದ್ದೇನು?

ಶಿವಮೊಗ್ಗ, ಏಪ್ರಿಲ್​​ 02: ಹಣಕಾಸಿನ ವಿಚಾರಕ್ಕೆ ಹೋಟೆಲ್​ ಮಾಲೀಕನಿಂದಲೇ ಕಾರ್ಮಿಕನ ಹತ್ಯೆ (kill) ಮಾಡಿರುವಂತಹ ಘಟನೆ ಜಿಲ್ಲೆಯ ಸಾಗರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ರೂಫ್ ಟಾಪ್ ಕೆಫೆಯಲ್ಲಿ ನಡೆದಿದೆ. ಮಾಲೀಕ ಇಮ್ರಾನ್​​ನಿಂದ ಟಿಂಕು ಶರ್ಮಾ(30)ನ ಕೊಲೆ ಮಾಡಲಾಗಿದೆ. ಸದ್ಯ ಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಇಮ್ರಾನ್​ನನ್ನು ವಶಕ್ಕೆ ಪಡೆದಿದ್ದಾರೆ.

ನಡೆದಿದ್ದೇನು?

ಸಾಗರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ರೂಫ್ ಟಾಪ್ ಕೆಫೆಯಲ್ಲಿ ಬಿಹಾರ ಮೂಲದ ಟಿಂಕು ಶರ್ಮಾ ಕೆಲಸ ಮಾಡುತ್ತಿದ್ದ. ಹಣಕಾಸಿನ ವಿಚಾರಕ್ಕೆ ಮಾಲೀಕ ಇಮ್ರಾನ್ ಮತ್ತು ಟಿಂಕು ನಡುವೆ ಗಲಾಟೆ ಉಂಟಾಗಿದೆ.

ಇದನ್ನೂ ಓದಿ: ಪ್ರಾಧ್ಯಾಪಕನ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ: ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿನಿ ಬರೆದ ಡೆತ್​​ನೋಟ್​​ನಲ್ಲಿ ಸ್ಫೋಟಕ ಮಾಹಿತಿ

ಗುರುವಾರ ಬೆಳಗ್ಗೆ ಕೂಡ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಹಲ್ಲೆ ನಡೆಸಿ ಟಿಂಕು ಶರ್ಮಾನನ್ನು ಇಮ್ರಾನ್ ಕೊಲೆಗೈದಿದ್ದಾರೆ. ಹೋಂಡಾ ಸಿಟಿ ಕಾರಿನಲ್ಲಿ ಶವ ಪತ್ತೆಯಾಗಿದೆ. ಇಮ್ರಾನ್ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಶಿವಮೊಗ್ಗ ಎಸ್​​ಪಿ ನಿಖಿಲ್ ಪ್ರಾಥಮಿಕ ಮಾಹಿತಿ ನೀಡಿದ್ದಾರೆ.

ತಡರಾತ್ರಿ ಮಲಗಿದ್ದ ವೇಳೆ ಕಾಲಿಗೆ ಹಾವು ಕಡಿದು ಮಹಿಳೆ ಸಾವು

ತಡರಾತ್ರಿ ಮಲಗಿದ್ದ ವೇಳೆ ಕಾಲಿಗೆ ಹಾವು ಕಡಿದು ಮಹಿಳೆ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ 9ನೇ ಮೈಲಿಕಲ್ ಗ್ರಾಮದಲ್ಲಿ ನಡೆದಿದೆ. ಛತ್ತೀಷ್​ಘಡ ಮೂಲದ ಜಾಲ್​ ಬಾಯಿ ಸಿಧಾರ್(42) ಮೃತ ಕಾರ್ಮಿಕ ಮಹಿಳೆ.

ಇದನ್ನೂ ಓದಿ: ಬೆಂಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ: ಬಕೆಟ್ ನೀರಿನಲ್ಲಿ ಮುಳುಗಿ ಮಗು ಸಾವು, ಬೇಸರದಿಂದ ತಾಯಿ ಆತ್ಮಹತ್ಯೆ

ಕಳೆದ ಕೆಲ ದಿನಗಳಿಂದ ಎಕೆಸಿ ಸಿಮೆಂಟ್​ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜಾಲ್​ ಬಾಯಿ ಕುಟುಂಬ ಕೆಲಸಕ್ಕಿತ್ತು. ಮಲಗಿದ್ದ ವೇಳೆ ತಡರಾತ್ರಿ ಜಾಲ್​ ಬಾಯಿಗೆ ಹಾವು ಕಡಿದಿದೆ. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸಿಂಗಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link