All posts by nagaraj11081993

ದಿಢೀರ್ ನಿವೃತ್ತಿ ಘೋಷಿಸಿದ ಸೌತ್ ಆಫ್ರಿಕಾದ ಸ್ಫೋಟಕ ದಾಂಡಿಗ

Source link

ಕರ್ನಾಟಕದಾದ್ಯಂತ ಆಟೋ ಗ್ಯಾಸ್ ಹಾಹಾಕಾರ: ಬಂಕ್‌ಗಳ ಮುಂದೆ ಕಿಲೋಮೀಟರ್‌ಗಟ್ಟಲೆ ಕ್ಯೂ, ಚಾಲಕರ ಬದುಕು ದುಸ್ತರ

ಬೆಂಗಳೂರು, ಏಪ್ರಿಲ್ 2: ಕರ್ನಾಟಕದಾದ್ಯಂತ ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ಅಭಾವ, ಗೃಹ ಬಳಕೆಯ ಎಲ್​ಪಿಜಿ (LPG) ಕೊರತೆ ಒಂದೆಡೆಯಾದರೆ ಇದೀಗ ಆಟೋ ಗ್ಯಾಸ್ (Auto Gas) ಸಮಸ್ಯೆ ವಿಕೋಪಕ್ಕೆ ಹೋಗಿದೆ. ಗ್ಯಾಸ್ ಸಿಗದೆ ಆಟೋ ಚಾಲಕರು ಬೀದಿಗೆ ಬೀಳುವ ಸ್ಥಿತಿ ನಿರ್ಮಾಣವಾಗಿದ್ದು, ಹಗಲಿಡೀ ಬಂಕ್‌ಗಳ ಮುಂದೆ ಕಾದು ಕುಳಿತು ಕಣ್ಣೀರಿಡುತ್ತಿದ್ದಾರೆ. ಬೆಂಗಳೂರು (Bangalore) ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗ್ಯಾಸ್ ಅಭಾವದಿಂದಾಗಿ ಸಾರಿಗೆ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಬೆಂಗಳೂರಿನಲ್ಲಿ ಚಾಲಕರ ಗೋಳು ಕೇಳೋರಿಲ್ಲ

ಸಿಲಿಕಾನ್ ಸಿಟಿ ಬೆಂಗಳೂರಿನ ಹೊಸಹಳ್ಳಿ, ಮೂಡಲಪಾಳ್ಯ ಮತ್ತು ರಾಜಾಜಿನಗರದ ರಸ್ತೆಗಳಲ್ಲಿ ಆಟೋಗಳು ಎರಡು ಕಿಲೋಮೀಟರ್‌ವರೆಗೂ ಸಾಲುಗಟ್ಟಿ ನಿಂತಿವೆ. ‘ಕೊರೊನಾ ಸಮಯದಲ್ಲಿಯೂ ನಾವು ಇಷ್ಟು ಪರದಾಡಿಲ್ಲ’ ಎಂದು ಚಾಲಕರು ತಮ್ಮ ಅಳಲು ತೋಡಿಕೊಂಡಿದ್ದಾರೆ. ವಿಜಯನಗರ ಮತ್ತು ಚಾಮರಾಜಪೇಟೆಯ ಭಾರತ್ ಪೆಟ್ರೋಲ್ ಬಂಕ್‌ಗಳಲ್ಲಿ ಕೇವಲ 500 ರೂಪಾಯಿಗೆ ಸೀಮಿತಗೊಳಿಸಿ ಗ್ಯಾಸ್ ನೀಡಲಾಗುತ್ತಿದೆ. ಇದರಿಂದ ಆಕ್ರೋಶಗೊಂಡ ಚಾಲಕರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇತ್ತ ಹೊಸಹಳ್ಳಿಯಲ್ಲಿ ವಿಶೇಷ ಚೇತನ ಚಾಲಕನೊಬ್ಬ ಗ್ಯಾಸ್‌ಗಾಗಿ ದಿನವಿಡೀ ಕಾಯುತ್ತಿದ್ದ ದೃಶ್ಯ ಮನಕಲಕುವಂತಿತ್ತು.

ಬಳ್ಳಾರಿಯಲ್ಲಿ ಬಾಣಂತಿ ಮತ್ತು ರೋಗಿಗಳ ಪರದಾಟ

ಗ್ಯಾಸ್ ಅಭಾವ ಕೇವಲ ಚಾಲಕರಿಗಷ್ಟೇ ಅಲ್ಲ, ಪ್ರಯಾಣಿಕರಿಗೂ ಶಾಪವಾಗಿ ಪರಿಣಮಿಸಿದೆ. ಬಳ್ಳಾರಿಯಲ್ಲಿ 9 ದಿನದ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಬೇಕಿದ್ದ ಆಟೋದಲ್ಲಿ ಗ್ಯಾಸ್ ಖಾಲಿಯಾಗಿದ್ದು, ಬಂಕ್‌ಗಳ ಮುಂದೆ ನೂರಾರು ಆಟೋಗಳು ನಿಂತಿದ್ದರಿಂದ ತಾಯಿ ಮತ್ತು ಮಗು ಪರದಾಡುವಂತಾಯಿತು.

ಇತರ ಜಿಲ್ಲೆಗಳಲ್ಲೂ ಮುಂದುವರಿದ ಸಂಕಷ್ಟ

  • ಹುಬ್ಬಳ್ಳಿ: ಇಲ್ಲಿನ ಬಂಕ್‌ಗಳಲ್ಲಿ ಪ್ರತಿ ಆಟೋಗೆ ಕೇವಲ 2 ಲೀಟರ್ ಗ್ಯಾಸ್ ಮಾತ್ರ ನೀಡುವಂತೆ ಲಿಮಿಟ್ ವಿಧಿಸಲಾಗಿದೆ.
  • ಯಾದಗಿರಿ: ಜಿಲ್ಲೆಯಲ್ಲಿದ್ದ ಏಕೈಕ ಎಲ್‌ಪಿಜಿ ಬಂಕ್‌ಗೆ ಬೀಗ ಬಿದ್ದಿದ್ದು, ಚಾಲಕರು ದಿಕ್ಕು ತೋಚದಂತಾಗಿದ್ದಾರೆ.
  • ರಾಯಚೂರು: ಇಲ್ಲಿನ ಚಾಲಕರ ಕಣ್ಣೀರಿಗೆ ಸ್ಪಂದಿಸಿರುವ ಜಿಲ್ಲಾಡಳಿತ, ಆಹಾರ ಇಲಾಖೆ ಅಧಿಕಾರಿಗಳ ಮೂಲಕ ಬಂಕ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.
  • ಮಂಗಳೂರು & ಚಾಮರಾಜನಗರ: ಈ ಜಿಲ್ಲೆಗಳಲ್ಲೂ ಪರಿಸ್ಥಿತಿ ಭಿನ್ನವಾಗಿಲ್ಲ, ಚಾಲಕರು ದುಡಿಮೆ ಇಲ್ಲದೆ ಕಂಗಾಲಾಗಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಗ್ಯಾಸ್ ಸಮಸ್ಯೆ ಮಧ್ಯೆ ಆಘಾತ! ಸಿಲಿಂಡರ್​ ಸಾಗಿಸ್ತಿದ್ದ ಲಾರಿ ಪಲ್ಟಿ

‘ಮೋದಿ ಸಾಹೇಬರೇ ನಮಗೆ ಸಹಾಯ ಮಾಡಿ’ ಎಂದು ರಾಜಾಜಿನಗರದ ಚಾಲಕರು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೊರೆ ಇಟ್ಟಿದ್ದಾರೆ. ಒಟ್ಟಾರೆ, ದಿನದ ದುಡಿಮೆಯನ್ನೇ ನಂಬಿರುವ ಸಾವಿರಾರು ಕುಟುಂಬಗಳು ಇಂದು ಗ್ಯಾಸ್, ಆಟೋ ಗ್ಯಾಸ್ ಇಲ್ಲದೆ ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೊಲೊರೊ ವಾಹನದಲ್ಲಿ ಗ್ಯಾಂಗ್​​ ಅನುಮಾನಾಸ್ಪದ ಓಡಾಟ: ಹೆಣ್ಣುಮಕ್ಕಳೇ ಇವರ ಟಾರ್ಗೆಟ್​?

ಬೆಂಗಳೂರು, ಏಪ್ರಿಲ್​​ 02: ನಗರದ ಬನಶಂಕರಿಯಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಬೊಲೆರೊ ವಾಹನದಲ್ಲಿ ಓಡಾಟ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಆಶೀರ್ವಾದ ಮಾಡುವ ನೆಪದಲ್ಲಿ ಹೆಣ್ಣುಮಕ್ಕಳನ್ನು ಗ್ಯಾಂಗ್​​ ಕರೆಯುತ್ತಿದೆ ಎಂದು ದೂರಲಾಗಿದೆ. ರಸ್ತೆಯಲ್ಲಿ ತೆರಳುತ್ತಿರುವ ಬೊಲೆರೋ ವಾಹನ ಮನೆಯೊಂದರ ಗೇಟ್​​ ಬಳಿ ಶಾಲಾ ಬಾಲಕಿ ಕಾಣುತ್ತಿದ್ದಂತೆ ನಿಂತಿದೆ. ಬಳಿಕ ಹಿಮ್ಮುಖವಾಗಿ ಹೋಗಿ ಬಾಲಕಿ ಬಳಿ ವಾಹನದಲ್ಲಿದ್ದವರು ಮಾತನಾಡಿದ್ದಾರೆ. ಈ ವೇಳೆ ಆಕೆ ಮನೆಯವರನ್ನು ಕರೆದಿದ್ದು, ಅವರು ವಿಚಾರಿಸುತ್ತಿದ್ದಂತೆ ವಾಹನ ಸಮೇತ ಗ್ಯಾಂಗ್​​ ಸ್ಥಳದಿಂದ ಕಾಲ್ಕಿತ್ತಿದೆ. ವೈರಲ್​​ ವಿಡಿಯೋ ಬಗ್ಗೆ ಪೊಲೀಸರು ಪರಿಶೀಲನೆಗೆ ಮುಂದಾಗಿದ್ದು, ಈ ಸಂಬಂಧ ಇಲ್ಲಿಯವರೆಗೂ ಯಾವುದೇ ಕೇಸ್​​ ದಾಖಲಾಗಿಲ್ಲ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

IPL 2026: LSG vs DC ಪಂದ್ಯದ ವೇಳೆ ಅಭಿಮಾನಿಗಳ ಮಾರಾಮಾರಿ!

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಸೀಸನ್‌ನಲ್ಲಿ ಕ್ರೀಡಾ ಸ್ಫೂರ್ತಿಗೆ ಮಸಿ ಬಳಿಯುವಂತಹ ಘಟನೆಯೊಂದು ನಡೆದಿದೆ. ಏಪ್ರಿಲ್ 1 ರಂದು ಲಕ್ನೋದ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ನಡುವಿನ ಪಂದ್ಯದ ವೇಳೆ ಅಭಿಮಾನಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಪಂದ್ಯ ನಡೆಯುತ್ತಿದ್ದಾಗ ಸ್ಟೇಡಿಯಂನ ಗ್ಯಾಲರಿಯಲ್ಲಿದ್ದ ಇಬ್ಬರು ವ್ಯಕ್ತಿಗಳ ನಡುವೆ ಮೊದಲು ಮಾತಿನ ಚಕಮಕಿ ಆರಂಭವಾಗಿದೆ. ಇದು ಕ್ಷಣಾರ್ಧದಲ್ಲಿ ವಿಕೋಪಕ್ಕೆ ತಿರುಗಿ, ಒಬ್ಬರಿಗೊಬ್ಬರು ಗುದ್ದಾಟ ಮತ್ತು ಒದೆಯಾಟ ಶುರು ಮಾಡಿದ್ದಾರೆ. ಈ ಮಾರಾಮಾರಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ನೆಟ್ಟಿಗರು ಇದನ್ನು “WWE ಕುಸ್ತಿ” ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ಗಲಾಟೆ ಜೋರಾಗುತ್ತಿದ್ದಂತೆ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಗಲಾಟೆ ಮಾಡಿದವರನ್ನು ಸ್ಟೇಡಿಯಂನಿಂದ ಹೊರಹಾಕಲಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಲಕ್ನೋ ಸೂಪರ್ ಜೈಂಟ್ಸ್ 18.4 ಓವರ್​ಗಳಲ್ಲಿ 141 ರನ್​​ಗಳಿಸಿ ಆಲೌಟ್ ಆಗಿದ್ದರು. ಈ ಗುರಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ 17.1 ಓವರ್​​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​​ಗಳ ಜಯ ಸಾಧಿಸಿದೆ.

 

Source link

ಪತಿಗೆ ಡಿವೋರ್ಸ್ ಕೊಟ್ಟಿದ್ದೇಕೆ ಪದ್ಮಜಾ ರಾವ್? ವಿವರಿಸಿದ ಹಿರಿಯ ನಟಿ

ಪದ್ಮಜಾ ರಾವ್ (Padmaja Rao) ಅವರು ಕನ್ನಡದಲ್ಲಿ ಹಲವು ಸಿನಿಮಾಗಳನ್ನು ಮಾಡಿದ್ದಾರೆ. ಇದರ ಜೊತೆಗೆ ಧಾರಾವಾಹಿಗಳಲ್ಲೂ ಪದ್ಮಜಾ ನಟಿಸಿದ್ದಾರೆ. ‘ಭಾಗ್ಯಲಕ್ಷ್ಮೀ’ ಧಾರಾವಾಹಿಯಲ್ಲಿ ಭಾಗ್ಯಾಳ ಅತ್ತೆ ಪಾತ್ರ ಮಾಡುತ್ತಿದ್ದಾರೆ. ಖಡಕ್ ಅತ್ತೆಯಾಗಿ, ಮಗ ತಪ್ಪು ಮಾಡಿದಾಗ ಶಿಕ್ಷೆ ಕೊಡುವಾಗ ಅಮ್ಮನಾಗಿ ಕಾಣಿಸಿಕೊಂಡಿದ್ದಾರೆ. ಪದ್ಮಜಾ ಅವರು ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ಮೊದಲ ಮದುವೆ ಹಾಗೂ ಅದರ ವಿಚ್ಛೇದನದ ಬಗ್ಗೆ ಹೇಳಿದ್ದಾರೆ ಪದ್ಮಾಜಾ.

ರ‍್ಯಾಪಿಡ್ ರಶ್ಮಿ ಯೂಟ್ಯೂಬ್​ ಚಾನೆಲ್​​ಗೆ ನೀಡಿದ ಸಂದರ್ಶನದಲ್ಲಿ ಪದ್ಮಜಾ ಹೇಳಿದ್ದಾರೆ. ‘ನಾನು ಸಣ್ಣ ವಯಸ್ಸಿಗೆ ಮದುವೆ ಆದೆ. ಖುಷಿಯಿಂದಲೇ ಮದುವೆ ಆದೆ. ಧಾರಾವಾಹಿ ಮಾಡಲು ಅಮ್ಮ ಅವಕಾಶ ಕೊಡ್ತಾ ಇರಲಿಲ್ಲ. ಮದುವೆ ಆದ ಬಳಿಕ ನಟಿಸಬಹುದು ಎಂದುಕೊಂಡಿದ್ದೆ. ಆದರೆ, ಹಾಗಾಗಿಲ್ಲ’ ಎಂದರು ಪದ್ಮಜಾ.

‘ಮೊದಲ ಮದುವೆ ಯಶಸ್ಸು ಕಾಣಲಿಲ್ಲ. ಮೊದಲ ಮದುವೆಯಿಂದ ಸಂಜೀವ್ ಜನಿಸಿದ. ಆ ಬಳಿಕ ನಟಿಯಾಗಲು ಪ್ರಯತ್ನಿಸಿದೆ. ನಾನು ಆ ನೋaವಿನಿಂದ ಹೊರ ಬಂದಿದ್ದೇನೆ. ನನ್ನ ಮಗ ಸಂಜೀವ್ ಅನ್ನು ನೋಡಿದರೆ ಎಲ್ಲಾ ನೋವು ಮಾಯ ಆಗುತ್ತದೆ. ಅವನಲ್ಲಿ ಆ ಶಕ್ತಿ ಇದೆ’ ಎಂದಿದ್ದಾರೆ ಪದ್ಮಜಾ.

ನಂತರ ಪದ್ಮಜಾ ರಾವ್ ಅವರು ನಿಧಾನವಾಗಿ ಕಿರುತೆರೆಯಲ್ಲಿ ಅವಕಾಶ ಪಡೆಯುತ್ತಾ ಬಂದರು. ದೂರದರ್ಶನದಲ್ಲಿ ಪ್ರೋಗ್ರಾಂಗಳನ್ನು ಕೂಡ ನಿರ್ಮಾಣ ಮಾಡಿದರು ಪದ್ಮಜಾ ರಾವ್. ನಂತರ ಅವರಿಗೆ ನಟನೆಯಲ್ಲಿ ಹಲವು ಅವಕಾಶಗಳನ್ನು ಪಡೆದರು. ‘ಮೂಡಲ ಮನೆ’ ಅವರ ಬದುಕು ಬದಲಿಸಿತು.

ಇದನ್ನೂ ಓದಿ: ಕನ್ನಡದ ಹಿರಿಯ ನಟಿ ಪದ್ಮಜಾ ರಾವ್​ಗೆ ಮೂರು ತಿಂಗಳು ಜೈಲು ಶಿಕ್ಷೆ, 40 ಲಕ್ಷ ರೂ. ದಂಡ  

ರಿಲೇಶನ್​​ಶಿಪ್ ಬಗ್ಗೆ ಪದ್ಮಜಾ ರಾವ್ ಸಲಹೆ ನೀಡಿದ್ದಾರೆ. ‘ಸಂಬಂಧಗಳಲ್ಲಿ ನಾನು ಸಾಕಷ್ಟು ವಿಷಯಗಳನ್ನು ಕಲಿತಿದ್ದೇನೆ. ಮಲಗುವುದಕ್ಕೂ ಮೊದಲು ಯೋಚಿಸಿ. ಲಿವಿನ್ ಅಲ್ಲಾದರೂ ಇರಿ ಅಥವಾ ಮದುವೆ ಆಗಿ ಅದು ನಿಮಗೆ ಬಿಟ್ಟಿದ್ದು. ಆದರೆ, ಅದಕ್ಕೆ ಹೋಗೋದಕ್ಕೂ ಮೊದಲು ಅವರ ಜೊತೆ ಸುತ್ತಾಡಿ, ಅವರು ಹೇಗೆ ಎಂಬುದನ್ನು ತಿಳಿದುಕೊಳ್ಳಿ’ ಎಂದು ಪದ್ಮಜಾ ರಾವ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಶೆಟ್ಟಿ ಗ್ಯಾಂಗ್​​ನಲ್ಲಿ ಬಿರುಕು? ಪ್ರಮೋದ್ ಶೆಟ್ಟಿ ಹೇಳಿದ್ದೇನು?

ಕನ್ನಡ ಚಿತ್ರರಂಗದ ಪ್ರತಿಭಾವಂತ ಮತ್ತು ಯಶಸ್ವಿ ಗ್ಯಾಂಗ್ ಆಗಿರುವ ‘ಶೆಟ್ಟಿ ಗ್ಯಾಂಗ್’ನಲ್ಲಿ ಬಿರುಕು ಮೂಡಿದೆ. ರಿಷಬ್ ಶೆಟ್ಟಿ, ರಾಜ್ ಶೆಟ್ಟಿ ಮತ್ತು ರಕ್ಷಿತ್ ಶೆಟ್ಟಿ ಅವರು ಪರಸ್ಪರ ದೂರಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರಿಷಬ್ ಶೆಟ್ಟಿ ಇತ್ತೀಚೆಗೆ ಹೊಂಬಾಳೆಯನ್ನು ಅನ್​ಫಾಲೋ ಮಾಡಿದರು. ರಾಜ್ ಬಿ ಶೆಟ್ಟಿಯನ್ನು ಅನ್​​ಫಾಲೋ ಮಾಡಿದರು ಎಂದೆಲ್ಲ ಸುದ್ದಿ ಹರಿದಾಡುತ್ತಿದೆ. ಇದೀಗ ಇದೇ ಗ್ಯಾಂಗಿನ ಸದಸ್ಯರಾಗಿರುವ ಪ್ರಮೋದ್ ಶೆಟ್ಟಿ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ‘ಶೆಟ್ಟಿ ಗ್ಯಾಂಗಿ’ನಲ್ಲಿ ಏನೇನಾಗುತ್ತಿದೆ ಎಂಬ ಬಗ್ಗೆ ವಿವರವಾಗಿ ಹೇಳಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

RailTel Recruitment 2026: ಕೇಂದ್ರ ಸರ್ಕಾರಿ ಸ್ವಾಮ್ಯದ ರೈಲ್‌ಟೆಲ್‌ನಲ್ಲಿ ನೇಮಕಾತಿ; ಹಿಂದಿ ಅನುವಾದಕ ಹುದ್ದೆಗೆ ಅರ್ಜಿ ಆಹ್ವಾನ

ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (RailTel) 2026ನೇ ಸಾಲಿನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಜೂನಿಯರ್ ಹಿಂದಿ ಅನುವಾದಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಹುದ್ದೆಗಳು ಖಾಲಿ ಇದ್ದು, ಆಯ್ಕೆಯಾದ ಅಭ್ಯರ್ಥಿಗಳು ಹೈದರಾಬಾದ್ (ತೆಲಂಗಾಣ) ಅಥವಾ ಮುಂಬೈ (ಮಹಾರಾಷ್ಟ್ರ) ನಗರಗಳಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಸಂಸ್ಥೆಯಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ.

ಅರ್ಹತೆ ಮತ್ತು ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯು ರೈಲ್‌ಟೆಲ್ ಸಂಸ್ಥೆಯ ಅಧಿಕೃತ ಮಾನದಂಡಗಳ ಪ್ರಕಾರ ಇರಬೇಕಾಗುತ್ತದೆ. ವಯೋಮಿತಿಯ ವಿಷಯಕ್ಕೆ ಬಂದರೆ, ಏಪ್ರಿಲ್ 11, 2026ರ ಅನ್ವಯ ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷ ಮೀರಿರಬಾರದು. ಸರ್ಕಾರದ ನಿಯಮಾನುಸಾರ ಮೀಸಲಾತಿ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ. ವೇತನ ಶ್ರೇಣಿಯು ಸಂಸ್ಥೆಯ ಅಧಿಕೃತ ನಿಯಮಗಳ ಅನ್ವಯ ನಿಗದಿಯಾಗಲಿದೆ.

ಅರ್ಜಿ ಸಲ್ಲಿಸುವ ವಿಧಾನ:

ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್‌ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಮೊದಲು ರೈಲ್‌ಟೆಲ್ ಅಧಿಕೃತ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಹತೆಯನ್ನು ಖಚಿತಪಡಿಸಿಕೊಳ್ಳಬೇಕು. ನಂತರ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ, ಅಗತ್ಯವಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯೊಂದಿಗೆ ಶೈಕ್ಷಣಿಕ ದಾಖಲೆಗಳು, ವಯಸ್ಸಿನ ಪುರಾವೆ, ಗುರುತಿನ ಚೀಟಿ ಮತ್ತು ಇತ್ತೀಚಿನ ಭಾವಚಿತ್ರದಂತಹ ಸ್ವಯಂ-ದೃಢೀಕರಿಸಿದ ದಾಖಲೆಗಳನ್ನು ಲಗತ್ತಿಸಬೇಕು.

ಇದನ್ನೂ ಓದಿ: ಭಾರತೀಯ ಸೇನೆ ಸೇರಲು ಸುವರ್ಣಾವಕಾಶ: 3,806 ಟೆರಿಟೋರಿಯಲ್ ಆರ್ಮಿ ಹುದ್ದೆಗೆ ನೇಮಕಾತಿ

ವಿಳಾಸ ಮತ್ತು ಪ್ರಮುಖ ದಿನಾಂಕ:

ಪೂರ್ಣಗೊಂಡ ಅರ್ಜಿ ನಮೂನೆಯನ್ನು ‘ಕಾರ್ಪೊರೇಟ್ ಕಚೇರಿ/ಆರ್‌ಸಿಐಎಲ್, ಪೂರ್ವ ಕಿದ್ವಾಯಿ ನಗರ, ನವದೆಹಲಿ’ ಎಂಬ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಬೇಕು. ಅರ್ಜಿಗಳು ತಲುಪಲು ಏಪ್ರಿಲ್ 11 ಕೊನೆಯ ದಿನಾಂಕವಾಗಿದೆ. ಕೊನೆಯ ಕ್ಷಣದ ಗಡಿಬಿಡಿಯನ್ನು ತಪ್ಪಿಸಲು ಅಭ್ಯರ್ಥಿಗಳು ಆದಷ್ಟು ಬೇಗ ತಮ್ಮ ಅರ್ಜಿಗಳನ್ನು ಸಲ್ಲಿಸುವುದು ಸೂಕ್ತ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪೆಟ್ರೋಕೆಮಿಕಲ್ ಉತ್ಪನ್ನಗಳಿಗೆ ಆಮದು ಸುಂಕದಿಂದ ವಿನಾಯಿತಿ; ಹಲವು ಉದ್ಯಮಗಳಿಗೆ ಅನುಕೂಲ

ನವದೆಹಲಿ, ಏಪ್ರಿಲ್ 2: ಪಶ್ಚಿಮ ಏಷ್ಯಾದಲ್ಲಿ ಯುದ್ಧ ಭೀತಿ ತಪ್ಪದ ಹಿನ್ನೆಲೆಯಲ್ಲಿ ತೈಲ, ಅನಿಲ ಹಾಗೂ ಪೆಟ್ರೋಕೆಮಿಕಲ್ ಪೂರೈಕೆ ವ್ಯವಸ್ಥೆಕ್ಕೆ ಧಕ್ಕೆಯಾಗಿದೆ. ಪೆಟ್ರೋಕೆಮಿಕಲ್ (petrochemicals) ಆಮದು ವೆಚ್ಚ ಬಹಳ ಹೆಚ್ಚಾಗುತ್ತಿದ್ದು, ಇದರ ಮೇಲೆ ಅವಲಂಬಿತವಾಗಿರುವ ಉದ್ಯಮಗಳಿಗೆ ರಿಲೀಫ್ ನೀಡುವ ಸಲುವಾಗಿ ಸರ್ಕಾರ ಆಮದು ಸುಂಕ ವಿನಾಯಿತಿ ಕ್ರಮ ತೆಗೆದುಕೊಳ್ಳುತ್ತಿದೆ. ಇಂದು ಗುರುವಾರ (ಏ. 2) ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಕಾರ, ಕೆಲ ಪ್ರಮುಖ ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲೆ ಪೂರ್ಣ ಆಮದು ಸುಂಕ (Customs Duty) ವಿನಾಯಿತಿ ಕೊಡಲಿದೆ.

2026ರ ಜೂನ್ 30ರವರೆಗೂ ಆಯ್ದೆ ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲೆ ಆಮದು ಸುಂಕ ಇರುವುದಿಲ್ಲ. ಈ ಕ್ರಮದಿಂದ ದೇಶೀಯ ಉತ್ಪಾದಕರಿಗೆ ಉತ್ಪಾದನಾ ವೆಚ್ಚ ಏರಿಕೆಯಾಗುವುದು ತಪ್ಪುವ ನಿರೀಕ್ಷೆ ಇದೆ.

ಇದನ್ನೂ ಓದಿ: ಟ್ರಂಪ್ ಹಾಕಿದ ಟ್ಯಾರಿಫ್​ಗಳಿಗೆ ಬದಲಾಗಿ ಸಿಗಲಿದೆ ರೀಫಂಡ್; ಯಾರಿಗೆ ಸಿಗುತ್ತೆ ಆದ್ಯತೆ?

ಪೆಟ್ರೋಕೆಮಿಕಲ್ ಉತ್ಪನ್ನಗಳು ಅನೇಕ ಮ್ಯಾನುಫ್ಯಾಕ್ಚರಿಂಗ್ ಉದ್ಯಮಗಳಿಗೆ ಕಚ್ಛಾ ಸಾಮಗ್ರಿಗಳಾಗಿ ಬಳಕೆಯಾಗುತ್ತವೆ. ಭಾರತದಲ್ಲಿ ಸಾಕಷ್ಟು ರಿಫೈನರಿಗಳು ಇವೆಯಾದರೂ, ಅದಕ್ಕೆ ಬೇಕಾದ ಹೆಚ್ಚಿನ ಪೆಟ್ರೋಕೆಮಿಕಲ್ ಸ್ಟಾಕ್​ಗಳು ಗಲ್ಫ್ ರಾಷ್ಟ್ರಗಳಿಂದ ಪೂರೈಕೆಯಾಗುತ್ತದೆ. ಅದರಲ್ಲೂ ಬಹಳ ಮುಖ್ಯವಾದ ಶೇ. 45ರಷ್ಟು ಸರಕುಗಳು ಆಮದಾಗುತ್ತವೆ. ಇವುಗಳ ಪೂರೈಕೆಯಲ್ಲಿ ವ್ಯತ್ಯಯವಾಗಿರುವುದರಿಂದ ಬೆಲೆಗಳೂ ಏರಿವೆ. ಈ ಬೆಲೆ ಏರಿಕೆ ಬಿಸಿ ಕಡಿಮೆ ಮಾಡಲು ಸರ್ಕಾರವು ಕಸ್ಟಮ್ಸ್ ಡ್ಯೂಟಿಯನ್ನು ಹಿಂಪಡೆದುಕೊಂಡಿದೆ.

ಪೆಟ್ರೋಕೆಮಿಕಲ್ ಉತ್ಪನ್ನಗಳಾದ ಮೆಥನಾಲ್, ಅಸಿಟಿಕ್ ಆ್ಯಸಿಟ್, ಮಾನೊಎಥಿಲಿನ್ ಕ್ಲೈಕೋಲ್ (ಎಂಇಜಿ), ಪ್ಯೂರಿಫೈಡ್ ಟೆರೆಫ್ತಾಲಿಕ್ ಆ್ಯಸಿಡ್ (ಪಿಟಿಎ), ಪಾಲಿಥೀನ್, ಪಾಲಿಪ್ರೊಪಿಲೀನ್ ಮತ್ತು ಪಿವಿಸಿಗಳಿಗೆ ಆಮದು ಸುಂಕದಿಂದ ವಿನಾಯಿತಿ ಕೊಡಲಾಗಿದೆ.

ಇದನ್ನೂ ಓದಿ: ಜೆಟ್ ಇಂಧನ: ವಿದೇಶೀ ಏರ್ಲೈನ್ಸ್​ಗೆ ಡಬಲ್ ಬೆಲೆ ಏರಿಕೆ; ದೇಶೀಯ ಫ್ಲೈಟ್​ಗಳಿಗೆ ಶೇ. 8.5 ಏರಿಕೆ

ಸರ್ಕಾರದ ಈ ಕ್ರಮದಿಂದ ಹಲವು ಉದ್ಯಮಗಳಿಗೆ ಅನುಕೂಲವಾಗಲಿದೆ. ಪ್ಲಾಸ್ಟಿಕ್ಸ್, ಪ್ಯಾಕೇಜಿಂಗ್, ಟೆಕ್ಸ್​ಟೈಲ್ಸ್, ಫಾರ್ಮಾ, ಕೆಮಿಕಲ್ಸ್, ಆಟೊಮೋಟಿವ್ ಕಾಂಪೊನೆಂಟ್ ಹಾಗೂ ಇನ್ನೂ ಹಲವು ಮ್ಯಾನುಫ್ಯಾಕ್ಚರಿಂಗ್ ಉದ್ದಿಮೆಗಳಿಗೆ ಲಾಭವಾಗಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಅಂಗಡಿಯಲ್ಲಿ ಸಿಗುವ 5 ರೂ. ಬೋಟಿಗೆ ಬೆಂಗಳೂರು ಪಬ್​​ನಲ್ಲಿ 150 ರೂ. ಪಾವತಿಸಿದ ಯುವಕ: ಇದು ದೋಚುವ ಒಂದು ಕಲೆ

ಬೆಂಗಳೂರು, ಏ.2: ಬೆಂಗಳೂರಿನಲ್ಲಿ ಅಣಬೆಯಂತೆ ಅಲ್ಲಲ್ಲಿ ಪಬ್​​​ಗಳು ಇದೆ. ಅದರಲ್ಲೂ ಕೆಲವೊಂದು ಪಬ್​​​​ ತುಂಬಾ ದುಬಾರಿಯಾಗಿರುತ್ತದೆ. ಇದೀಗ ಈ ದುಬಾರಿ ಪಬ್​​ಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಈ ಬಗ್ಗೆ ಎಕ್ಸ್​​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಳ್ಳಲಾಗಿದೆ. ಜನಪ್ರಿಯ ಪಬ್‌ಗೆ ಭೇಟಿ ನೀಡಿದಾಗ, ಮೆನುವಿನಲ್ಲಿ ಹೆಚ್ಚು ವಿವರವಾದ ಖಾದ್ಯದ ಬದಲಿಗೆ ಫ್ರೈಯಮ್‌ಗಳನ್ನು ನೀಡಲಾಗಿದೆ ಎಂದು ಗ್ರಾಹಕರೊಬ್ಬರು ಹೇಳಿಕೊಂಡಿದ್ದಾರೆ. ಇದೀಗ ಇಂದಿರಾನಗರದ ಪಬ್​​ ಆಗಿರುವ ಅನುಭವದ ಬಗ್ಗೆ ಅರುಣ್‌ರಾಜ್ ಪತ್ತಾರ್ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ.

ಮೆನು ಮತ್ತು ಸ್ವೀಕರಿಸಿದ ಖಾದ್ಯದ ಚಿತ್ರವನ್ನು ಹಂಚಿಕೊಂಡ ಪತ್ತಾರ್, “ಇದನ್ನು ಚಿಲ್ಲಿ ಡಸ್ಟೆಡ್ ಗೋಲ್ಡ್ ಫಿಂಗರ್ಸ್ ಎಂದು ಕರೆಯಲಾಗುತ್ತಿತ್ತು. ನಾನು ಇದನ್ನು ಆರ್ಡರ್ ಮಾಡಿದಾಗ ಅವರು ನನಗೆ ತಂದಿದ್ದು ಇದನ್ನೇ. ಪ್ರಪಂಚದಲ್ಲಿ ಹಾಗೂ ನಮ್ಮ ರಕ್ತ ಸಂಬಂಧದಲ್ಲಿ ಇದಕ್ಕೆ 150 ಪಾವತಿಸಿ ಮೊದಲಿಗ ಎಂದು ಇದರಲ್ಲಿ ಬರೆದುಕೊಂಡಿದ್ದಾರೆ. ಎಕ್ಸ್​​ನಲ್ಲಿ ಎರಡು ಪೋಸ್ಟ್​​ಗಳನ್ನು ಹಂಚಿಕೊಂಡಿದ್ದಾರೆ. ಒಂದು ಪಬ್​​ ಮೆನು ಬಗ್ಗೆ ಇನ್ನೊಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಇಲ್ಲಿದೆ ನೋಡಿ ಪೋಸ್ಟ್​​:

ಇವರ ಈ ಪೋಸ್ಟ್​​ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದೆ, ಈ ಬಗ್ಗೆ ನೆಟ್ಟಿಗರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ದುಬಾರಿ ತಿನಿಸುಗಳಲ್ಲಿ ಬೆಲೆ ನಿಗದಿ ಬಗ್ಗೆ ಟೀಕೆಯನ್ನು ಮಾಡಿದ್ದಾರೆ. ಅಬ್ಬಾ ನಾನು ಒಬ್ಬನೇ ಇಂತಹ ವಂಚನೆಗೆ ಒಳಾಗಾಗಿಲ್ಲ ಎಂದು ಒಬ್ಬರು ಸಂತೋಷದಿಂದ ಹೇಳಿದ್ದಾರೆ. ಇದನ್ನು ಉತ್ತಮ ಮಾರ್ಕೆಟಿಂಗ್‌ನೊಂದಿಗೆ ಸರಳವಾದ ವಸ್ತುಗಳನ್ನು ಅತ್ಯಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಎಂದು ಹೇಳುತ್ತಾರೆ ಎಂದು ಮತ್ತೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ: ಬಕೆಟ್ ನೀರಿನಲ್ಲಿ ಮುಳುಗಿ ಮಗು ಸಾವು, ಬೇಸರದಿಂದ ತಾಯಿ ಆತ್ಮಹತ್ಯೆ

ಕೊನೆಗೂ ನನ್ನಂತೆಯೇ ವಂಚನೆಗೊಳಗಾದ ವ್ಯಕ್ತಿಯನ್ನು ನೋಡಿದೆ ಎಂದು ಮತ್ತೊಬ್ಬರು ಕಮೆಂಟ್​ ಮಾಡಿದ್ದಾರೆ. ಕೆಲವು ನೆಟ್ಟಿಗರು ಬೆಂಗಳೂರಿನ ಊಟ ಸಂಸ್ಕೃತಿಯನ್ನು ಟೀಕಿಸಿದ್ದಾರೆ. ಬೆಂಗಳೂರು ಯಾವುದೇ ಬೆಲೆಗೆ ಏನು ಬೇಕಾದರೂ ಮಾರಾಟ ಮಾಡಬಹುದು ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ. ಇನ್ನು ಸಾಮಾನ್ಯ ಭಾಷೆಯಲ್ಲು ಬೋಟಿ ಎಂದು ಕರೆಯುತ್ತಾರೆ. ಇದು ನಮ್ಮ ಮನೆದಲ್ಲಿರುವ ಅಂಗಡಿಯಲ್ಲಿ 5 ರೂ.ಗೆ ಸಿಗುತ್ತದೆ ಎಂದು ಮತ್ತೊಬ್ಬರು ಹೇಳಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಕರ್ನಾಟಕ ಗಡಿಯ ಪಾಲಾರ್ ಚೆಕ್ ಪೋಸ್ಟ್ ಬಳಿ ರಾತ್ರಿ ವೇಳೆ ಪ್ರತ್ಯಕ್ಷವಾದ ಕಾಡಾನೆ!

ಚಾಮರಾಜನಗರ, ಏಪ್ರಿಲ್​​ 02: ಜಿಲ್ಲೆಯ ಪಾಲಾರ್ ಚೆಕ್ ಪೋಸ್ಟ್ ಬಳಿ ಇತ್ತೀಚೆಗೆ ರಾತ್ರಿ ವೇಳೆ ಕಾಡಾನೆ ಓಡಾಟ ಕಂಡುಬಂದಿದೆ. ಕರ್ನಾಟಕ ಮತ್ತು ತಮಿಳುನಾಡಿನ ಗಡಿಯಲ್ಲಿರುವ ಪಾಲಾರ್ ಚೆಕ್ ಪೋಸ್ಟ್ ಪ್ರದೇಶದಲ್ಲಿ ಆನೆಯೊಂದು ಸಂಚರಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಗಡಿ ಪ್ರದೇಶಗಳಲ್ಲಿ ಇಂತಹ ವನ್ಯಜೀವಿಗಳ ಸಂಚಾರವು ಸಾಮಾನ್ಯವಾಗಿದ್ದರೂ, ಚೆಕ್ ಪೋಸ್ಟ್ ಬಳಿ ಆನೆಯ ಓಡಾಟವು ಜನರಲ್ಲಿ ಅಚ್ಚರಿ ಮೂಡಿಸಿದೆ. ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link