Headlines

nagaraj11081993

ನಾಯಿ ಮರಿಯನ್ನು ಎತ್ತಿಕೊಂಡು ಮರದ ಮೇಲೆ ಹೋಗಿ ಕುಳಿತ ಕೋತಿ – Kannada News

ಮಂಡಿ, ಜೂನ್ 10: ಪ್ರಕೃತಿಯ ಮಡಿಲಲ್ಲಿ ಪ್ರಾಣಿ(Animal)ಗಳ ಜಗತ್ತು ಕೆಲವು ಬಾರಿ ಮನುಷ್ಯರೇ ಬೆರಗಾಗುವಂತಹ ಅದ್ಭುತ ಪ್ರೀತಿ ಮತ್ತು ಕಾರುಣ್ಯದ ಕಥೆಗಳನ್ನು ನಮಗೆ ಉಣಬಡಿಸುತ್ತದೆ. ಅಂತಹದೇ ಒಂದು ಹೃದಯಸ್ಪರ್ಶಿ ಘಟನೆ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ರೆವಾಲ್ಸರ್ ಪ್ರದೇಶದಲ್ಲಿ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಸಂಚಲನ ಮೂಡಿಸಿದೆ. ಕೋತಿಯೊಂದು ತನ್ನ ಮರಿಯೇ ಎಂಬಂತೆ ನಾಯಿ ಮರಿಯನ್ನು ಎತ್ತಿಕೊಂಡು ಹೋಗಿ ಮರದ ಮೇಲೆ ಕುಳಿತಿರುವ ಘಟನೆ ಹಿಮಾಚಲ ಪ್ರದೇಶದ ಮಂಡಿಯಲ್ಲಿ ನಡೆದಿದೆ. ಮಂಡಿಯ ರೆವಾಲ್ಸರ್…

Read More

ಹೊನ್ನಾವರ: ಅಝಾನ್ ಮೊಳಗಿಸುತ್ತಿದ್ದ ಪವಿತ್ರ ಕ್ಷಣದಲ್ಲೇ ಇಹಲೋಕ ತ್ಯಜಿಸಿದ ಮೌಲ್ವಿ – Kannada News

ಕಾಸರಕೋಡ ಟೊಂಕಾದ ಎಮ್.ಜೆ.ಎಮ್ ಮಸೀದಿ ಹಾಗೂ ಮೌಲ್ವಿ ಅಬ್ದುಲ್ ಲತೀಫ್ ಮದನಿImage Credit source: tv9 ಹೊನ್ನಾವರ, ಜೂನ್ 10: ಮಸೀದಿಯಲ್ಲಿ ಅತ್ಯಂತ ಭಕ್ತಿಭಾವದಿಂದ ಅಸರ್ ನಮಾಜ್‌ಗಾಗಿ ಅಝಾನ್ (ಪ್ರಾರ್ಥನೆಯ ಕರೆ) ಮೊಳಗಿಸುತ್ತಿದ್ದ (Azan) ಪವಿತ್ರ ಕ್ಷಣದಲ್ಲೇ ಮೌಲ್ವಿಯೊಬ್ಬರು ಹೃದಯಾಘಾತದಿಂದ ಕೊನೆಯುಸಿರೆಳೆದಿರುವ ಕರುಣಾಜನಕ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ. ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕಾದ ಎಮ್.ಜೆ.ಎಮ್ (MJM) ಮಸೀದಿಯಲ್ಲಿ ಮಂಗಳವಾರ ಸಂಜೆ ಈ ಘಟನೆ ಸಂಭವಿಸಿದೆ. ಮುಖ್ಯಾಂಶಗಳು ಅಝಾನ್ ಕೂಗುತ್ತಿದ್ದಾಗಲೇ ಮೌಲ್ವಿ…

Read More

ಶಾಲಾ ಕಟ್ಟಡದಿಂದ ಬಿದ್ದು ಬೀದರ್​​ನಲ್ಲಿ 15 ವರ್ಷದ ಬಾಲಕ ಸಾವು: ಕಾರಣ ನಿಗೂಢ – Kannada News

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9…

Read More

ರಜತ್​​ಗೆ ‘ಮಚ್’ ಬ್ರದರ್ ಎಂದ ವಿನಯ್ ಗೌಡ – Kannada News

ವಿನಯ್ ಹಾಗೂ ರಜತ್ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಉತ್ತಮ ಗೆಳೆತನ ಮೂಡಿದೆ. ಇಬ್ಬರೂ ಮಚ್ಚು ಹಿಡಿದು ರೀಲ್ಸ್ ಮಾಡಿ ಸುದ್ದಿ ಆಗಿದ್ದರು. ಇತ್ತೀಚೆಗೆ ನಡೆದ ‘ಬಲರಾಮನ ದಿನಗಳು’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ರಜತ್ ಅವರನ್ನು ವಿನಯ್ ‘ಮಚ್ ಬ್ರದರ್’ ಎಂದು ಕರೆದಿದ್ದಾರೆ. ‘ನಮ್ಮ ಮಚ್ ಬ್ರದರ್ ರಜತ್ ಅವರು ಸುದ್ದಿಗೋಷ್ಠಿಗೆ ಬರಬೇಕಿತ್ತು. ಆದರೆ, ಅವನು ಶೂಟ್​​ನಲ್ಲಿ ಇರೋದ್ರಿ ಬರೋಕೆ ಆಗಿಲ್ಲ’ ಎಂದಿದ್ದಾರೆ. ಬಲರಾಮನ ದಿನಗಳು ಚಿತ್ರಕ್ಕೆ ವಿನೋದ್ ರಾಜ್ ಹೀರೋ. 80ರ ದಶಕದ ಕಥೆ ಸಿನಿಮಾದಲ್ಲಿದ್ದು, ಚಿತ್ರ…

Read More

Video: ಹೆತ್ತವರಿಗೆ ತಾನು ಕೆಲಸ ಮಾಡುವ ಬೆಂಗಳೂರಿನ ಮೈಕ್ರೋಸಾಫ್ಟ್ ಆಫೀಸ್ ತೋರಿಸಿದ ಉದ್ಯೋಗಿ – Kannada News

ಹೆತ್ತವರೊಂದಿಗೆ ತರುಣ್ ಖಂಡಾಗರೆImage Credit source: Instagram ಬೆಂಗಳೂರು, ಜೂನ್ 10: ಮಕ್ಕಳಿಗೆ ತಮ್ಮ ತಂದೆ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳಬೇಕು, ಊರು ಸುತ್ತಿಸಬೇಕು. ಕಷ್ಟ ಪಟ್ಟು ಓದಿಸಿ ಒಂದೊಳ್ಳೆ ಉದ್ಯೋಗ ಸಿಗಲು ಕಾರಣರಾದ ತಂದೆ ತಾಯಿಗೆ ತಾನು ಕೆಲಸ ಮಾಡುವ ಆಫೀಸ್ ತೋರಿಸಬೇಕು ಇಂತಹ ಸಾಕಷ್ಟು ಆಸೆಗಳಿರುವುದು ಸಹಜ. ಇದೀಗ ಇಂತಹ ಭಾವನಾತ್ಮಕ ಕ್ಷಣವನ್ನು ಬೆಂಗಳೂರಿನ (Bengaluru) ಮೈಕ್ರೋಸಾಫ್ಟ್ ಉದ್ಯೋಗಿಯೊಬ್ಬರು ಸೆರೆ ಹಿಡಿದಿದ್ದಾರೆ. ತಮ್ಮ ಹೆತ್ತವರನ್ನು ಮೈಕ್ರೋಸಾಫ್ಟ್ (Microsoft) ಆಫೀಸಿಗೆ ಕರೆದುಕೊಂಡು ಹೋಗಿ ತಾನು ಕೆಲಸ ಮಾಡುವ…

Read More

ಸಾರ್ವಜನಿಕ ಸೇವೆಯೇ ಉತ್ತಮ ಆಡಳಿತದ ಶ್ರೇಷ್ಠ ಮಾನದಂಡ: ಪ್ರಧಾನಿ ನರೇಂದ್ರ ಮೋದಿ – Kannada News

ನವದೆಹಲಿ, ಜೂನ್​​ 10: ಸಾರ್ವಜನಿಕ ಸೇವೆಯೇ ಉತ್ತಮ ಆಡಳಿತದ ಶ್ರೇಷ್ಠ ಮಾನದಂಡ ಎಂದು ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಪಾದಿಸಿದ್ದಾರೆ. ಪ್ರಧಾನಿಯಾಗಿ 12 ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಜನಸೇವೆಯ ಮಹತ್ವದ ಬಗ್ಗೆ ಸಂದೇಶ ನೀಡಿದ್ದಾರೆ. ಜನಸೇವೆಯು ಉತ್ತಮ ಆಡಳಿತದ ನಿಜವಾದ ಪರೀಕ್ಷೆಯಾಗಿದೆ ಎಂದು ಪ್ರಧಾನಮಂತ್ರಿಯವರು ತಿಳಿಸಿದ್ದಾರೆ. ಮೋದಿಯವರ ಪ್ರಕಾರ, ವಿನಮ್ರತೆ, ಸಮರ್ಪಣಾ ಭಾವನೆ ಮತ್ತು ಕರ್ತವ್ಯ ಪ್ರಜ್ಞೆಯಿಂದ ನಿರಂತರವಾಗಿ ಕೆಲಸ ಮಾಡುವ ವ್ಯಕ್ತಿ ಮಾತ್ರ ಜನರ ವಿಶ್ವಾಸವನ್ನು ಗಳಿಸಲು ಸಾಧ್ಯ. ಸಾರ್ವಜನಿಕರು ನಿಮ್ಮನ್ನು…

Read More

ಸಂಗಾತಿ ಜತೆ ಜಗಳವಾಡಿ, ಬೇಸರದಲ್ಲಿ ಮನುಷ್ಯರಂತೆ ಗಲ್ಲದ ಮೇಲೆ ಕೈ ಇಟ್ಟು ಗಾಢವಾಗಿ ಯೋಚಿಸುತ್ತಾ ಕುಳಿತ ಗೋರಿಲ್ಲಾ – Kannada News

ಟೋಕಿಯೋ, ಜೂನ್ 10: ಇಂಟರ್ನೆಟ್ ಜಗತ್ತಿನಲ್ಲಿ ಪ್ರಾಣಿ(Animal)ಗಳ ತಮಾಷೆಯ ಹಾಗೂ ಆಸಕ್ತಿದಾಯಕ ವಿಡಿಯೋಗಳು ಆಗಾಗ ವೈರಲ್ ಆಗುತ್ತಿರುತ್ತವೆ. ಆದರೆ, ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಸಂಚಲನ ಮೂಡಿಸುತ್ತಿರುವ ಜಪಾನ್‌ನ ಮೃಗಾಲಯವೊಂದರ ಈ ಗೊರಿಲ್ಲಾ. ಜಪಾನ್‌ನ ನಗೋಯಾದಲ್ಲಿರುವ ಪ್ರಸಿದ್ಧ ಹಿಗಾಶಿಯಾಮಾ ಮೃಗಾಲಯದಲ್ಲಿ ವಾಸಿಸುವ 13 ವರ್ಷದ ಕಿಯೋಮಾಸ (Kiyomasa) ಎಂಬ ಗಂಡು ಗೊರಿಲ್ಲಾದ 62 ಸೆಕೆಂಡುಗಳ ವಿಡಿಯೋ ಕ್ಲಿಪ್ ಈಗ ಭಾರಿ ವೈರಲ್ ಆಗುತ್ತಿದೆ. ಏನಿದು ವಿಡಿಯೋದ ವೈಶಿಷ್ಟ್ಯವೇನು? ಮಾಧ್ಯಮಗಳ ವರದಿ ಪ್ರಕಾರ, ಕಿಯೋಮಾಸ ತನ್ನ ಸಂಗಾತಿಯೊಂದಿಗೆ ಜಗಳವಾಡಿದೆ….

Read More

ಬ್ಯಾಟ್ ಲಾಕ್ ಮಾಡಿದ ಕೀಪರ್: ಟೀಮ್ ಇಂಡಿಯಾ ಆಟಗಾರ ರನೌಟ್! – Kannada News

ಕ್ರಿಕೆಟ್ ಮೈದಾನದಲ್ಲಿ ರನೌಟ್​ಗಳು ಸಾಮಾನ್ಯ. ಆದರೆ ಶ್ರೀಲಂಕಾ ‘ಎ’ ವಿರುದ್ಧದ ಪಂದ್ಯದಲ್ಲಿ ಭಾರತ ‘ಎ’ ತಂಡದ ಯುವ ಬ್ಯಾಟರ್ ಪ್ರಿಯಾಂಶ್ ಆರ್ಯ ಔಟ್ ಆದ ರೀತಿ ಇದೀಗ ಚರ್ಚೆಗೆ ಗ್ರಾಸವಾಗಿದೆ. ವಿಕೆಟ್ ಕೀಪರ್ ಕಾಲಿನ ಕೆಳಗೆ ಬ್ಯಾಟ್ ಸಿಲುಕಿಕೊಂಡ ಕಾರಣ, ಕ್ರೀಸ್ ತಲುಪಲು ಸಾಧ್ಯವಾಗದೆ ಅವರು ವಿಚಿತ್ರವಾಗಿ ವಿಕೆಟ್ ಕೈಚೆಲ್ಲಿದ್ದಾರೆ. ದಂಬುಲ್ಲಾದಲ್ಲಿ ನಡೆದ ತ್ರಿಕೋನ ಸರಣಿಯ ಆರಂಭಿಕ ಪಂದ್ಯದಲ್ಲಿ ಈ ಅನಿರೀಕ್ಷಿತ ಹಾಗೂ ವಿವಾದಾತ್ಮಕ ಘಟನೆ ನಡೆದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ…

Read More

Kottiyoor Temple Incident: ಕನ್ನಡಿಗರಿಗಾಗಿ ಕನ್ನಡದಲ್ಲೇ ಮಾತನಾಡಿದ ಕೇರಳಂ ಡಿಐಜಿ ಯತೀಶ್ ಚಂದ್ರ! – Kannada News

ಕಣ್ಣೂರು ರೇಂಜ್ ಡಿಐಜಿ ಯತೀಶ್ ಚಂದ್ರImage Credit source: Yathish Chandra instagram account ಬೆಂಗಳೂರು, ಜೂನ್ 10: ಕೇರಳಂನ ಕೊಟ್ಟಿಯೂರು ದೇವಾಲಯಕ್ಕೆ (Kottiyoor Temple) ಹೋಗಿದ್ದ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯವಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿವೆ. ಯಾರೂ ಈ ದೇವಾಲಯಕ್ಕೆ ಭೇಟಿ ನೀಡಬೇಡಿ ಎಂದು ನೊಂದ ಕನ್ನಡಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. ಅಲ್ಲಿನ ವ್ಯವಸ್ಥೆ, ನಿರ್ವಹಣೆಯ ಕುರಿತು ಆಕ್ಷೇಪಿಸಿದ್ದರು. ಇದರ ಬೆನ್ನಲ್ಲೇ ದೇವಾಲಯದ ಸೆಕ್ಯೂರಿಟಿಯ ಕುರಿತಾದಂತೆ ಮಾಹಿತಿ ನೀಡಿರುವ ಕಣ್ಣೂರು ವಲಯದ ಡಿಐಜಿ ಯತೀಶ್ ಚಂದ್ರ,…

Read More

Rudraksha: ಮಹಿಳೆಯರು ರುದ್ರಾಕ್ಷಿ ಧರಿಸಬಾರದೇ? ಶಾಸ್ತ್ರಗಳು ಹೇಳುವುದೇನು ಗೊತ್ತಾ? – Kannada News

ಮಹಿಳೆಯರು ರುದ್ರಾಕ್ಷಿ ಧರಿಸಬಹುದೇ? Image Credit source: Pinterest ರುದ್ರಾಕ್ಷಿಯನ್ನು ಸಾಕ್ಷಾತ್ ಶಿವನ ಆಶೀರ್ವಾದ ಎಂದು ಪರಿಗಣಿಸಲಾಗುತ್ತದೆ. ಶತಮಾನಗಳಿಂದಲೂ ಸಾಧು-ಸಂತರು, ಯೋಗಿಗಳು ಮತ್ತು ಸಾಮಾನ್ಯ ಜನರು ಧ್ಯಾನ, ಮಾನಸಿಕ ಶಾಂತಿ ಹಾಗೂ ಆಧ್ಯಾತ್ಮಿಕ ಉನ್ನತಿಗಾಗಿ ಇದನ್ನು ಬಳಸುತ್ತಾ ಬಂದಿದ್ದಾರೆ. ಆದರೆ ಇಂದಿಗೂ ಸಮಾಜದಲ್ಲಿ ಒಂದು ದೊಡ್ಡ ಪ್ರಶ್ನೆ ಉಳಿದುಕೊಂಡಿದೆ, ಅದೇನೆಂದರೆ, ಮಹಿಳೆಯರು ರುದ್ರಾಕ್ಷಿಯನ್ನು ಧರಿಸಬಹುದೇ ಅಥವಾ ಇಲ್ಲವೇ? ಧರಿಸಬಾರದು ಎಂಬ ಕಟ್ಟುಕತೆಗಳನ್ನು ಕೇಳಿ ಬೆಳೆದಿರುವ ಅನೇಕ ಮಹಿಳೆಯರು ಇದನ್ನು ಧರಿಸಲು ಇಂದಿಗೂ ಹಿಂಜರಿಯುತ್ತಾರೆ. ರುದ್ರಾಕ್ಷಿಯ ರಹಸ್ಯ ಮತ್ತು…

Read More