Headlines

nagaraj11081993

ದಿಢೀರ್ ನಿವೃತ್ತಿ ಘೋಷಿಸಿದ ಸೌತ್ ಆಫ್ರಿಕಾದ ಸ್ಫೋಟಕ ದಾಂಡಿಗ

ಸೌತ್ ಆಫ್ರಿಕಾದ ಸ್ಫೋಟಕ ಬ್ಯಾಟರ್ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ (Rassie van der Dussen) ಅವರು ಇಂದು (ಏಪ್ರಿಲ್ 2, 2026) ಎಲ್ಲಾ ಮಾದರಿಯ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಕಳೆದ ಏಳು ವರ್ಷಗಳಿಂದ ಸೌತ್ ಆಫ್ರಿಕಾ ತಂಡದ ಭಾಗವಾಗಿದ್ದ ಡಸ್ಸೆನ್ ಯುವ ಆಟಗಾರರಿಗೆ ಅವಕಾಶ ಕಲ್ಪಿಸುವ ಸಲುವಾಗಿ ನಿವೃತ್ತಿ ಘೋಷಿಸುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ ಕ್ರಿಕೆಟ್ ಸೌತ್ ಆಫ್ರಿಕಾ (CSA) ಇತ್ತೀಚೆಗೆ ಪ್ರಕಟಿಸಿದ 2026-27ರ ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಅವರ ಹೆಸರನ್ನು…

Read More

ಕರ್ನಾಟಕದಾದ್ಯಂತ ಆಟೋ ಗ್ಯಾಸ್ ಹಾಹಾಕಾರ: ಬಂಕ್‌ಗಳ ಮುಂದೆ ಕಿಲೋಮೀಟರ್‌ಗಟ್ಟಲೆ ಕ್ಯೂ, ಚಾಲಕರ ಬದುಕು ದುಸ್ತರ

ಬೆಂಗಳೂರು, ಏಪ್ರಿಲ್ 2: ಕರ್ನಾಟಕದಾದ್ಯಂತ ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ಅಭಾವ, ಗೃಹ ಬಳಕೆಯ ಎಲ್​ಪಿಜಿ (LPG) ಕೊರತೆ ಒಂದೆಡೆಯಾದರೆ ಇದೀಗ ಆಟೋ ಗ್ಯಾಸ್ (Auto Gas) ಸಮಸ್ಯೆ ವಿಕೋಪಕ್ಕೆ ಹೋಗಿದೆ. ಗ್ಯಾಸ್ ಸಿಗದೆ ಆಟೋ ಚಾಲಕರು ಬೀದಿಗೆ ಬೀಳುವ ಸ್ಥಿತಿ ನಿರ್ಮಾಣವಾಗಿದ್ದು, ಹಗಲಿಡೀ ಬಂಕ್‌ಗಳ ಮುಂದೆ ಕಾದು ಕುಳಿತು ಕಣ್ಣೀರಿಡುತ್ತಿದ್ದಾರೆ. ಬೆಂಗಳೂರು (Bangalore) ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗ್ಯಾಸ್ ಅಭಾವದಿಂದಾಗಿ ಸಾರಿಗೆ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬೆಂಗಳೂರಿನಲ್ಲಿ ಚಾಲಕರ ಗೋಳು ಕೇಳೋರಿಲ್ಲ ಸಿಲಿಕಾನ್ ಸಿಟಿ ಬೆಂಗಳೂರಿನ…

Read More

ಬೊಲೊರೊ ವಾಹನದಲ್ಲಿ ಗ್ಯಾಂಗ್​​ ಅನುಮಾನಾಸ್ಪದ ಓಡಾಟ: ಹೆಣ್ಣುಮಕ್ಕಳೇ ಇವರ ಟಾರ್ಗೆಟ್​?

ಬೆಂಗಳೂರು, ಏಪ್ರಿಲ್​​ 02: ನಗರದ ಬನಶಂಕರಿಯಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಬೊಲೆರೊ ವಾಹನದಲ್ಲಿ ಓಡಾಟ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಆಶೀರ್ವಾದ ಮಾಡುವ ನೆಪದಲ್ಲಿ ಹೆಣ್ಣುಮಕ್ಕಳನ್ನು ಗ್ಯಾಂಗ್​​ ಕರೆಯುತ್ತಿದೆ ಎಂದು ದೂರಲಾಗಿದೆ. ರಸ್ತೆಯಲ್ಲಿ ತೆರಳುತ್ತಿರುವ ಬೊಲೆರೋ ವಾಹನ ಮನೆಯೊಂದರ ಗೇಟ್​​ ಬಳಿ ಶಾಲಾ ಬಾಲಕಿ ಕಾಣುತ್ತಿದ್ದಂತೆ ನಿಂತಿದೆ. ಬಳಿಕ ಹಿಮ್ಮುಖವಾಗಿ ಹೋಗಿ ಬಾಲಕಿ ಬಳಿ ವಾಹನದಲ್ಲಿದ್ದವರು ಮಾತನಾಡಿದ್ದಾರೆ. ಈ ವೇಳೆ ಆಕೆ ಮನೆಯವರನ್ನು ಕರೆದಿದ್ದು, ಅವರು ವಿಚಾರಿಸುತ್ತಿದ್ದಂತೆ ವಾಹನ ಸಮೇತ ಗ್ಯಾಂಗ್​​ ಸ್ಥಳದಿಂದ ಕಾಲ್ಕಿತ್ತಿದೆ. ವೈರಲ್​​ ವಿಡಿಯೋ…

Read More

IPL 2026: LSG vs DC ಪಂದ್ಯದ ವೇಳೆ ಅಭಿಮಾನಿಗಳ ಮಾರಾಮಾರಿ!

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಸೀಸನ್‌ನಲ್ಲಿ ಕ್ರೀಡಾ ಸ್ಫೂರ್ತಿಗೆ ಮಸಿ ಬಳಿಯುವಂತಹ ಘಟನೆಯೊಂದು ನಡೆದಿದೆ. ಏಪ್ರಿಲ್ 1 ರಂದು ಲಕ್ನೋದ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ನಡುವಿನ ಪಂದ್ಯದ ವೇಳೆ ಅಭಿಮಾನಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಪಂದ್ಯ ನಡೆಯುತ್ತಿದ್ದಾಗ ಸ್ಟೇಡಿಯಂನ ಗ್ಯಾಲರಿಯಲ್ಲಿದ್ದ ಇಬ್ಬರು ವ್ಯಕ್ತಿಗಳ ನಡುವೆ ಮೊದಲು ಮಾತಿನ ಚಕಮಕಿ ಆರಂಭವಾಗಿದೆ. ಇದು ಕ್ಷಣಾರ್ಧದಲ್ಲಿ ವಿಕೋಪಕ್ಕೆ ತಿರುಗಿ, ಒಬ್ಬರಿಗೊಬ್ಬರು ಗುದ್ದಾಟ ಮತ್ತು ಒದೆಯಾಟ ಶುರು ಮಾಡಿದ್ದಾರೆ….

Read More

ಪತಿಗೆ ಡಿವೋರ್ಸ್ ಕೊಟ್ಟಿದ್ದೇಕೆ ಪದ್ಮಜಾ ರಾವ್? ವಿವರಿಸಿದ ಹಿರಿಯ ನಟಿ

ಪದ್ಮಜಾ ರಾವ್ (Padmaja Rao) ಅವರು ಕನ್ನಡದಲ್ಲಿ ಹಲವು ಸಿನಿಮಾಗಳನ್ನು ಮಾಡಿದ್ದಾರೆ. ಇದರ ಜೊತೆಗೆ ಧಾರಾವಾಹಿಗಳಲ್ಲೂ ಪದ್ಮಜಾ ನಟಿಸಿದ್ದಾರೆ. ‘ಭಾಗ್ಯಲಕ್ಷ್ಮೀ’ ಧಾರಾವಾಹಿಯಲ್ಲಿ ಭಾಗ್ಯಾಳ ಅತ್ತೆ ಪಾತ್ರ ಮಾಡುತ್ತಿದ್ದಾರೆ. ಖಡಕ್ ಅತ್ತೆಯಾಗಿ, ಮಗ ತಪ್ಪು ಮಾಡಿದಾಗ ಶಿಕ್ಷೆ ಕೊಡುವಾಗ ಅಮ್ಮನಾಗಿ ಕಾಣಿಸಿಕೊಂಡಿದ್ದಾರೆ. ಪದ್ಮಜಾ ಅವರು ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ಮೊದಲ ಮದುವೆ ಹಾಗೂ ಅದರ ವಿಚ್ಛೇದನದ ಬಗ್ಗೆ ಹೇಳಿದ್ದಾರೆ ಪದ್ಮಾಜಾ. ರ‍್ಯಾಪಿಡ್ ರಶ್ಮಿ ಯೂಟ್ಯೂಬ್​ ಚಾನೆಲ್​​ಗೆ ನೀಡಿದ ಸಂದರ್ಶನದಲ್ಲಿ ಪದ್ಮಜಾ ಹೇಳಿದ್ದಾರೆ. ‘ನಾನು ಸಣ್ಣ ವಯಸ್ಸಿಗೆ…

Read More

ಶೆಟ್ಟಿ ಗ್ಯಾಂಗ್​​ನಲ್ಲಿ ಬಿರುಕು? ಪ್ರಮೋದ್ ಶೆಟ್ಟಿ ಹೇಳಿದ್ದೇನು?

ಕನ್ನಡ ಚಿತ್ರರಂಗದ ಪ್ರತಿಭಾವಂತ ಮತ್ತು ಯಶಸ್ವಿ ಗ್ಯಾಂಗ್ ಆಗಿರುವ ‘ಶೆಟ್ಟಿ ಗ್ಯಾಂಗ್’ನಲ್ಲಿ ಬಿರುಕು ಮೂಡಿದೆ. ರಿಷಬ್ ಶೆಟ್ಟಿ, ರಾಜ್ ಶೆಟ್ಟಿ ಮತ್ತು ರಕ್ಷಿತ್ ಶೆಟ್ಟಿ ಅವರು ಪರಸ್ಪರ ದೂರಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರಿಷಬ್ ಶೆಟ್ಟಿ ಇತ್ತೀಚೆಗೆ ಹೊಂಬಾಳೆಯನ್ನು ಅನ್​ಫಾಲೋ ಮಾಡಿದರು. ರಾಜ್ ಬಿ ಶೆಟ್ಟಿಯನ್ನು ಅನ್​​ಫಾಲೋ ಮಾಡಿದರು ಎಂದೆಲ್ಲ ಸುದ್ದಿ ಹರಿದಾಡುತ್ತಿದೆ. ಇದೀಗ ಇದೇ ಗ್ಯಾಂಗಿನ ಸದಸ್ಯರಾಗಿರುವ ಪ್ರಮೋದ್ ಶೆಟ್ಟಿ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ‘ಶೆಟ್ಟಿ ಗ್ಯಾಂಗಿ’ನಲ್ಲಿ ಏನೇನಾಗುತ್ತಿದೆ ಎಂಬ ಬಗ್ಗೆ ವಿವರವಾಗಿ…

Read More

RailTel Recruitment 2026: ಕೇಂದ್ರ ಸರ್ಕಾರಿ ಸ್ವಾಮ್ಯದ ರೈಲ್‌ಟೆಲ್‌ನಲ್ಲಿ ನೇಮಕಾತಿ; ಹಿಂದಿ ಅನುವಾದಕ ಹುದ್ದೆಗೆ ಅರ್ಜಿ ಆಹ್ವಾನ

ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (RailTel) 2026ನೇ ಸಾಲಿನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಜೂನಿಯರ್ ಹಿಂದಿ ಅನುವಾದಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಹುದ್ದೆಗಳು ಖಾಲಿ ಇದ್ದು, ಆಯ್ಕೆಯಾದ ಅಭ್ಯರ್ಥಿಗಳು ಹೈದರಾಬಾದ್ (ತೆಲಂಗಾಣ) ಅಥವಾ ಮುಂಬೈ (ಮಹಾರಾಷ್ಟ್ರ) ನಗರಗಳಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಸಂಸ್ಥೆಯಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅರ್ಹತೆ ಮತ್ತು ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ…

Read More

ಪೆಟ್ರೋಕೆಮಿಕಲ್ ಉತ್ಪನ್ನಗಳಿಗೆ ಆಮದು ಸುಂಕದಿಂದ ವಿನಾಯಿತಿ; ಹಲವು ಉದ್ಯಮಗಳಿಗೆ ಅನುಕೂಲ

ನವದೆಹಲಿ, ಏಪ್ರಿಲ್ 2: ಪಶ್ಚಿಮ ಏಷ್ಯಾದಲ್ಲಿ ಯುದ್ಧ ಭೀತಿ ತಪ್ಪದ ಹಿನ್ನೆಲೆಯಲ್ಲಿ ತೈಲ, ಅನಿಲ ಹಾಗೂ ಪೆಟ್ರೋಕೆಮಿಕಲ್ ಪೂರೈಕೆ ವ್ಯವಸ್ಥೆಕ್ಕೆ ಧಕ್ಕೆಯಾಗಿದೆ. ಪೆಟ್ರೋಕೆಮಿಕಲ್ (petrochemicals) ಆಮದು ವೆಚ್ಚ ಬಹಳ ಹೆಚ್ಚಾಗುತ್ತಿದ್ದು, ಇದರ ಮೇಲೆ ಅವಲಂಬಿತವಾಗಿರುವ ಉದ್ಯಮಗಳಿಗೆ ರಿಲೀಫ್ ನೀಡುವ ಸಲುವಾಗಿ ಸರ್ಕಾರ ಆಮದು ಸುಂಕ ವಿನಾಯಿತಿ ಕ್ರಮ ತೆಗೆದುಕೊಳ್ಳುತ್ತಿದೆ. ಇಂದು ಗುರುವಾರ (ಏ. 2) ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಕಾರ, ಕೆಲ ಪ್ರಮುಖ ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲೆ ಪೂರ್ಣ ಆಮದು ಸುಂಕ (Customs Duty) ವಿನಾಯಿತಿ ಕೊಡಲಿದೆ….

Read More

ಅಂಗಡಿಯಲ್ಲಿ ಸಿಗುವ 5 ರೂ. ಬೋಟಿಗೆ ಬೆಂಗಳೂರು ಪಬ್​​ನಲ್ಲಿ 150 ರೂ. ಪಾವತಿಸಿದ ಯುವಕ: ಇದು ದೋಚುವ ಒಂದು ಕಲೆ

ಬೆಂಗಳೂರು, ಏ.2: ಬೆಂಗಳೂರಿನಲ್ಲಿ ಅಣಬೆಯಂತೆ ಅಲ್ಲಲ್ಲಿ ಪಬ್​​​ಗಳು ಇದೆ. ಅದರಲ್ಲೂ ಕೆಲವೊಂದು ಪಬ್​​​​ ತುಂಬಾ ದುಬಾರಿಯಾಗಿರುತ್ತದೆ. ಇದೀಗ ಈ ದುಬಾರಿ ಪಬ್​​ಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಈ ಬಗ್ಗೆ ಎಕ್ಸ್​​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಳ್ಳಲಾಗಿದೆ. ಜನಪ್ರಿಯ ಪಬ್‌ಗೆ ಭೇಟಿ ನೀಡಿದಾಗ, ಮೆನುವಿನಲ್ಲಿ ಹೆಚ್ಚು ವಿವರವಾದ ಖಾದ್ಯದ ಬದಲಿಗೆ ಫ್ರೈಯಮ್‌ಗಳನ್ನು ನೀಡಲಾಗಿದೆ ಎಂದು ಗ್ರಾಹಕರೊಬ್ಬರು ಹೇಳಿಕೊಂಡಿದ್ದಾರೆ. ಇದೀಗ ಇಂದಿರಾನಗರದ ಪಬ್​​ ಆಗಿರುವ ಅನುಭವದ ಬಗ್ಗೆ ಅರುಣ್‌ರಾಜ್ ಪತ್ತಾರ್ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ಮೆನು ಮತ್ತು ಸ್ವೀಕರಿಸಿದ ಖಾದ್ಯದ ಚಿತ್ರವನ್ನು ಹಂಚಿಕೊಂಡ…

Read More

ಕರ್ನಾಟಕ ಗಡಿಯ ಪಾಲಾರ್ ಚೆಕ್ ಪೋಸ್ಟ್ ಬಳಿ ರಾತ್ರಿ ವೇಳೆ ಪ್ರತ್ಯಕ್ಷವಾದ ಕಾಡಾನೆ!

ಚಾಮರಾಜನಗರ, ಏಪ್ರಿಲ್​​ 02: ಜಿಲ್ಲೆಯ ಪಾಲಾರ್ ಚೆಕ್ ಪೋಸ್ಟ್ ಬಳಿ ಇತ್ತೀಚೆಗೆ ರಾತ್ರಿ ವೇಳೆ ಕಾಡಾನೆ ಓಡಾಟ ಕಂಡುಬಂದಿದೆ. ಕರ್ನಾಟಕ ಮತ್ತು ತಮಿಳುನಾಡಿನ ಗಡಿಯಲ್ಲಿರುವ ಪಾಲಾರ್ ಚೆಕ್ ಪೋಸ್ಟ್ ಪ್ರದೇಶದಲ್ಲಿ ಆನೆಯೊಂದು ಸಂಚರಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಗಡಿ ಪ್ರದೇಶಗಳಲ್ಲಿ ಇಂತಹ ವನ್ಯಜೀವಿಗಳ ಸಂಚಾರವು ಸಾಮಾನ್ಯವಾಗಿದ್ದರೂ, ಚೆಕ್ ಪೋಸ್ಟ್ ಬಳಿ ಆನೆಯ ಓಡಾಟವು ಜನರಲ್ಲಿ ಅಚ್ಚರಿ ಮೂಡಿಸಿದೆ. ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source…

Read More