ಬ್ಯಾಟ್ ಲಾಕ್ ಮಾಡಿದ ಕೀಪರ್: ಟೀಮ್ ಇಂಡಿಯಾ ಆಟಗಾರ ರನೌಟ್! – Kannada News
ಕ್ರಿಕೆಟ್ ಮೈದಾನದಲ್ಲಿ ರನೌಟ್ಗಳು ಸಾಮಾನ್ಯ. ಆದರೆ ಶ್ರೀಲಂಕಾ ‘ಎ’ ವಿರುದ್ಧದ ಪಂದ್ಯದಲ್ಲಿ ಭಾರತ ‘ಎ’ ತಂಡದ ಯುವ ಬ್ಯಾಟರ್ ಪ್ರಿಯಾಂಶ್ ಆರ್ಯ ಔಟ್ ಆದ ರೀತಿ ಇದೀಗ ಚರ್ಚೆಗೆ ಗ್ರಾಸವಾಗಿದೆ. ವಿಕೆಟ್ ಕೀಪರ್ ಕಾಲಿನ ಕೆಳಗೆ ಬ್ಯಾಟ್ ಸಿಲುಕಿಕೊಂಡ ಕಾರಣ, ಕ್ರೀಸ್ ತಲುಪಲು ಸಾಧ್ಯವಾಗದೆ ಅವರು ವಿಚಿತ್ರವಾಗಿ ವಿಕೆಟ್ ಕೈಚೆಲ್ಲಿದ್ದಾರೆ. ದಂಬುಲ್ಲಾದಲ್ಲಿ ನಡೆದ ತ್ರಿಕೋನ ಸರಣಿಯ ಆರಂಭಿಕ ಪಂದ್ಯದಲ್ಲಿ ಈ ಅನಿರೀಕ್ಷಿತ ಹಾಗೂ ವಿವಾದಾತ್ಮಕ ಘಟನೆ ನಡೆದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ…