Headlines

nagaraj11081993

ವರ್ಷದ ಹಿಂದೆಯೇ ತನ್ನ ಗುರಿ ಬಗ್ಗೆ ಹೇಳಿದ್ದ ಶ್ರೇಯಾಂಕ ಟಿ20 ವಿಶ್ವಕಪ್​ನಿಂದ ಹೊರಬಿದ್ದಿದ್ದು ದುರಾದೃಷ್ಟಕರ – Kannada News | Shreyanka Patil’s World Cup Dream Shattered by Injury: A Recurring Cricket Nightmare

2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ (Women’s T20 World Cup 2026) ಸತತ ಎರಡು ಪಂದ್ಯಗಳನ್ನು ಗೆದ್ದು ಶುಭಾರಂಭ ಮಾಡಿದ್ದ ಭಾರತ ವನಿತಾ ಪಡೆಗೆ ತಂಡದ ಸ್ಟಾರ್ ಆಟಗಾರ್ತಿ ಶ್ರೇಯಾಂಕ ಪಾಟೀಲ್ (Shreyanka Patil) ಅವರ ಇಂಜುರಿ ಸಮಸ್ಯೆ ಬರ ಸಿಡಿಲಿನಂತೆ ಬಂದೆರಗಿದೆ. ಹೆಡಿಂಗ್ಲಿಯಲ್ಲಿ ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದ ವೇಳೆ ಶ್ರೇಯಾಂಕ ಪಾಟೀಲ್ ಪಾದದ ಗಾಯಕ್ಕೆ ಒಳಗಾಗಿದ್ದರು. ಹೀಗಾಗಿ ಅವರು ಟಿ20 ವಿಶ್ವಕಪ್‌ನಿಂದಲೇ ಹೊರಗುಳಿದಿದ್ದಾರೆ. ಅವರ ಬದಲಿಯಾಗಿ ಪ್ರೇಮಾ ರಾವತ್​ ತಂಡಕ್ಕೆ ಆಯ್ಕೆಯಾಗಿದ್ದರೂ, ಶ್ರೇಯಾಂಕ…

Read More

Vastu Clock Placement: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ಗಡಿಯಾರ ಇಡಬೇಡಿ; ಹೆಚ್ಚಾಗುತ್ತೆ ಸಂಕಷ್ಟ! – Kannada News | Vastu Clock Placement: Attract Prosperity and Positive Energy – Avoid Negative Vibes!

ಗಡಿಯಾರಗಳನ್ನು ಕೇವಲ ಸಮಯ ನೋಡಲು ಮಾತ್ರವಲ್ಲ, ವಾಸ್ತು ಶಾಸ್ತ್ರದಲ್ಲಿ ಅವುಗಳನ್ನು ಧನಾತ್ಮಕ ಮತ್ತು ನಕಾರಾತ್ಮಕ ಶಕ್ತಿಯನ್ನು ನಿಯಂತ್ರಿಸುವ ಪ್ರಮುಖ ಅಂಶವೆಂದು ಪರಿಗಣಿಸಲಾಗುತ್ತದೆ. ವಾಸ್ತು ತಜ್ಞರ ಪ್ರಕಾರ, ಗಡಿಯಾರವು ಮನೆಯ ಒಟ್ಟಾರೆ ಶಕ್ತಿಯೊಂದಿಗೆ ನೇರ ಸಂಪರ್ಕ ಹೊಂದಿದೆ. ಸರಿಯಾದ ದಿಕ್ಕಿನಲ್ಲಿ ಗಡಿಯಾರವನ್ನು ನೇತುಹಾಕುವುದರಿಂದ ಮನೆಯಲ್ಲಿ ಸುಖ, ಶಾಂತಿ, ಮತ್ತು ಸಮೃದ್ಧಿ ನೆಲೆಸುತ್ತದೆ. ಆದರೆ ತಪ್ಪು ದಿಕ್ಕಿನಲ್ಲಿಟ್ಟರೆ ಮಾನಸಿಕ ಒತ್ತಡ ಹಾಗೂ ಆರ್ಥಿಕ ನಷ್ಟ ಎದುರಾಗಬಹುದು. ದಕ್ಷಿಣ ದಿಕ್ಕಿನಲ್ಲಿ ಗಡಿಯಾರ ಇಡುವುದು ಅಶುಭ ಏಕೆ? ವಾಸ್ತು ಶಾಸ್ತ್ರದ ಪ್ರಕಾರ, ಮನೆಯ…

Read More

Video: ಗಲಾಟೆ ಮಾಡ್ತಿದ್ದ ಪುಟಾಣಿ ಕೈಗೆ ಐಫೋನ್ ಕೊಟ್ಟ ತಾಯಿ, ಮುಂದೇನಾಯ್ತು ಗೊತ್ತಾ? – Kannada News | Mother gives iPhone to fussing toddler, little boy throws phone into river

ಹುಟ್ಟಿದ ಮಕ್ಕಳು (little kids) ಕೂಡ ಮೊದಲು ಈ ಮೊಬೈಲ್ ನ್ನೇ ಹುಡುಕುತ್ತಾರೆ. ಇನ್ನು ಮಕ್ಕಳು ಅತ್ತರೆ, ಊಟ ಮಾಡಲ್ಲ ಅಂತ ಹಠ ಮಾಡಿದ್ರೆ ಪೋಷಕರು ಮೊಬೈಲ್ ಕೊಟ್ಟು ಸಮಾಧಾನ ಪಡಿಸ್ತಾರೆ. ನೀವು ನಿಮ್ಮ ಮಕ್ಕಳಿಗೆ ಫೋನ್ ಕೊಟ್ಟು ಸಮಾಧಾನ ಪಡಿಸುವ ಮುನ್ನ ಈ ಸ್ಟೋರಿ ಓದೋದು ಒಳ್ಳೆಯದು. ಹೌದು, ಬೋಟಿಂಗ್ ಗೆ ಹೋಗಿದ್ದ ವೇಳೆ ಮಹಿಳೆ ಪುಟಾಣಿಯನ್ನು ಸಮಾಧಾನ ಪಡಿಸಲು ತನ್ನ ಕೈಯಲ್ಲಿದ್ದ ಐಫೋನ್ ಕೊಟ್ಟಿದ್ದಾಳೆ. ಆದರೆ ಪುಟ್ಟ ಹುಡುಗನು ತನ್ನ ಕೈಯಲ್ಲಿದ್ದ ಫೋನ್ ನೀರಿಗೆ…

Read More

ಭಾರಿ ಮಳೆಗೆ ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ! – Kannada News | Darjeeling Siliguri route closed after Dudhia bridge washed away due to Heavy Rainfall

ಡಾರ್ಜಿಲಿಂಗ್, ಜೂನ್ 19: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಸುತ್ತಮುತ್ತಲಿನ ಬೆಟ್ಟ ಪ್ರದೇಶಗಳಲ್ಲಿ ದಿಢೀರ್ ಪ್ರಕೃತಿ ವಿಕೋಪ ಸಂಭವಿಸಿದೆ. ಒಂದೇ ಸಮನೆ ಸುರಿದ 200 ಮಿಮೀ ಭಾರಿ ಮಳೆಯಿಂದಾಗಿ (Rain Updates) ಗುಡ್ಡಗಾಡು ಪ್ರದೇಶದ ನದಿಗಳು ಮತ್ತು ಹಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ನೀರಿನ ತೀವ್ರ ರಭಸಕ್ಕೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸಿಲಿಗುರಿ ಮತ್ತು ಮಿರಿಕ್-ಡಾರ್ಜಿಲಿಂಗ್ ಅನ್ನು ಸಂಪರ್ಕಿಸುವ ಹೆದ್ದಾರಿಯಲ್ಲಿರುವ ಪ್ರಮುಖ ‘ದುಧಿಯಾ ಸೇತುವೆ’ ಪ್ರವಾಹಕ್ಕೆ ಸಿಲುಕಿ ಸಂಪೂರ್ಣವಾಗಿ ಕೊಚ್ಚಿಹೋಗಿದೆ. ಸೇತುವೆ ಕೊಚ್ಚಿಹೋಗಿರುವುದು…

Read More

ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ; ಇಲ್ಲಿದೆ ಮಾಹಿತಿ – Kannada News | MLC Elections: Several Factors Behind JDS MLAs’ Cross Voting

ಬೆಂಗಳೂರು, ಜೂನ್​​ 19: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಅಡ್ಡಮತದಾನದಿಂದ ತೀವ್ರ ಆಘಾತ ಎದುರಾಗಿದೆ.  ನಾಲ್ಕರಿಂದ ಐದು ಜೆಡಿಎಸ್ ಶಾಸಕರು ಅಡ್ಡಮತದಾನ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿದ್ದು, ಇದು ಪಕ್ಷದ ಪಾಳಯದಲ್ಲಿ ಆತಂಕಕ್ಕೆ ಕಾರಣವಾಗಿದೆ.ಈ ಅಡ್ಡಮತದಾನಕ್ಕೆ ಹಲವು ಆಂತರಿಕ ಕಾರಣಗಳನ್ನು ವಿಶ್ಲೇಷಿಸಲಾಗುತ್ತಿದೆ. ಪಕ್ಷದೊಳಗಿನ ಗುಂಪುಗಾರಿಕೆ, ನಾಯಕತ್ವದ ಕೊರತೆ, ಹಿರಿಯ ನಾಯಕರ ಮನವೊಲಿಕೆಯಲ್ಲಿನ ವಿಫಲತೆ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಯ ಬಗ್ಗೆ ಶಾಸಕರ ಅಸಮಾಧಾನ ಪ್ರಮುಖವಾಗಿವೆ. ಹೆಚ್.ಡಿ. ಕುಮಾರಸ್ವಾಮಿ ಕೇಂದ್ರ ಸಚಿವರಾದ ನಂತರ ರಾಜ್ಯದಲ್ಲಿ ನಾಯಕತ್ವದ ಕೊರತೆಯೂ ಎದ್ದುಕಾಣುತ್ತಿರುವ…

Read More

ರೈತರಿಗೆ ಖುಷಿ ಸುದ್ದಿ: ಜೂ 25ಕ್ಕೆ ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ – Kannada News | Tungabhadra Dam’s 33 New Gates to Be Inaugurated on June 25 by Karnataka, Telangana and Andhra Pradesh CMs

ಕೊಪ್ಪಳ, ಜೂನ್​​ 19: ತುಂಗಭದ್ರಾ ಜಲಾಶಯದ (Tungabhadra Dam) ಕ್ರಸ್ಟ್ ಗೇಟ್ ಮುರಿದುಬಿದ್ದು ಮೂರು ರಾಜ್ಯಗಳ ಒಂಬತ್ತು ಜಿಲ್ಲೆಗಳಲ್ಲಿ ಆತಂಕ ಮೂಡಿಸಿದ್ದ ಸಮಸ್ಯೆಗೆ ಇದೀಗ ಶಾಶ್ವತ ಪರಿಹಾರ ಸಿಕ್ಕಿದೆ. ಜಲಾಶಯದ ಒಟ್ಟು 33 ಗೇಟ್‌ಗಳನ್ನು ಯಶಸ್ವಿಯಾಗಿ ಬದಲಾಯಿಸಲಾಗಿದ್ದು, ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದೆ. ಇದೇ ಜೂನ್ 25 ರಂದು ಕರ್ನಾಟಕ (Karnataka), ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು ಜಂಟಿಯಾಗಿ ಈ ನೂತನ ಗೇಟ್‌ಗಳನ್ನು ಉದ್ಘಾಟಿಸಲಿದ್ದಾರೆ. ಮುಖ್ಯಾಂಶಗಳು ತುಂಗಭದ್ರಾ ಜಲಾಶಯದ ಕ್ರಷ್ಟ್ ಗೇಟ್​ಗಳ ಉದ್ಘಾಟನೆಗ ಕ್ಷಣಗಣನೆ ಜೂನ್ 25…

Read More

ಕಂಗನಾಗೆ ತೀವ್ರ ನಿರಾಶೆ; ಮೊದಲ ವಾರದಲ್ಲಿ ‘ಭಾರತ್ ಭಾಗ್ಯ ವಿಧಾತ’ ಗಳಿಕೆ ಕೇವಲ 6 ಕೋಟಿ ರೂ. – Kannada News | Kangana Ranaut Bharat Bhhagya Viddhaata Box Office Collection Week 1 and budget

ಬಾಲಿವುಡ್‌ನ ವಿವಾದಿತ ಹಾಗೂ ಖ್ಯಾತ ನಟಿ ಕಂಗನಾ ರಣಾವತ್ (Kangana Ranaut) ಪ್ರಮುಖ ಪಾತ್ರದಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಭಾರತ್ ಭಾಗ್ಯ ವಿಧಾತ’ (Bharat Bhhagya Viddhaata) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ತೀವ್ರ ಹಿನ್ನಡೆ ಅನುಭವಿಸಿದೆ. ಜೂನ್ 12ರಂದು ಬಿಡುಗಡೆಯಾಗಿದ್ದ ಈ ಸಿನಿಮಾ ಮೊದಲ ವಾರದಲ್ಲಿ ಕೇವಲ 6.55 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಅತ್ಯಂತ ನೀರಸ ಪ್ರತಿಕ್ರಿಯೆ ಪಡೆದಿದೆ. ಮೂಲಗಳ ಪ್ರಕಾರ, ಈ ಸಿನಿಮಾ ಸುಮಾರು 35 ಕೋಟಿಯಿಂದ 40 ಕೋಟಿ ರೂಪಾಯಿ ಬಜೆಟ್‌ನಲ್ಲಿ ನಿರ್ಮಾಣಗೊಂಡಿದೆ….

Read More

ಅಡ್ಡಮತದಾನ: ಜೆಡಿಎಸ್​​​, ಬಿಜೆಪಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ, ಹೈಕಮಾಂಡ್ ಬುಲಾವ್, ತಲೆದಂಡವಾಗುತ್ತಾ? – Kannada News | NDA MLAs Cross Voting Shock in Karnataka: bjp high command calls To State Leaders

ಬೆಂಗಳೂರು, (ಜೂನ್ 19): ಕರ್ನಾಟಕ ವಿಧಾನಪರಿಷತ್​ನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ (Karnataka Assembly Council Elections) ಕಾಂಗ್ರೆಸ್​ನ (Congress) ಐವರು, ಬಿಜೆಪಿಯ  (BJP)ಇಬ್ಬರು ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ.ಈ ಫಲಿತಾಂಶ ರಾಜ್ಯ ರಾಜಕಾರಣದ ನಿರೀಕ್ಷೆಯಂತೆಯೇ ಆಗಿದೆ. ಆದ್ರೆ ಅಚ್ಚರಿ ಎಂಬಂತೆ, ರಾಜ್ಯ ಸರ್ಕಾರದ ವಿರುದ್ಧ ಒಗ್ಗಟ್ಟು ಪ್ರದರ್ಶಿಸಬೇಕಿದ್ದ ಬಿಜೆಪಿ, ಜೆಡಿಎಸ್ ಶಾಸಕರು ಪಕ್ಷಕ್ಕೆ ಕೈಕೊಟ್ಟಿದ್ದು, 11 ಶಾಸಕರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಹಾಕಿದ್ದಾರೆ. ಇದು, ರಾಜ್ಯ ಕಾಂಗ್ರೆಸ್​ನಲ್ಲಿ ಆಂತರಿಕ ಕಲಹ ಇದೆ ಅಂತಾ ಸದಾ…

Read More

ಜಿಯೋ ಐಪಿಒಗೆ ಸಜ್ಜು; 27 ಕೋಟಿ ಹೊಸ ಈಕ್ವಿಟಿ ಷೇರುಗಳ ಹಂಚಿಕೆ; ಆರ್​​ಐಎಲ್ ಎಜಿಎಂ ಸಭೆಯಲ್ಲಿ ಅಂಬಾನಿ ಮಾಹಿತಿ – Kannada News | Jio Platforms IPO, board approval, DRHP to be filed today, 27 crore equity shares fresh issue, says RIL

ರಿಲಯನ್ಸ್ ಜಿಯೋImage Credit source: Avishek Das/SOPA images/LightRocket via Getty Images ನವದೆಹಲಿ, ಜೂನ್ 19: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ತನ್ನ ಅಂಗಸಂಸ್ಥೆಯಾದ ಜಿಯೋ ಪ್ಲಾಟ್‌ಫಾರ್ಮ್ಸ್​ನ (Jio Platforms) ಐಪಿಒ (IPO) ಆಗಲಿರುವುದನ್ನು ಖಚಿತಪಡಿಸಿದೆ. ಆರ್​ಐಎಲ್​ನ ವಾರ್ಷಿಕ ಮಹಾಸಭೆಯಲ್ಲಿ ಷೇರುದಾರರನ್ನು ಉದ್ದೇಶಿಸಿ ಮಾತನಾಡಿದ ಛೇರ್ಮನ್ ಮುಕೇಶ್ ಅಂಬಾನಿ ಅವರು ಜಿಯೋ ಪ್ಲಾಟ್​ಫಾರ್ಮ್ಸ್​ನ ಐಪಿಒಗೆ ಇವತ್ತು ಸೆಬಿ ಬಳಿ ಡಿಎಚ್​ಆರ್​ಪಿಯನ್ನು ಸಲ್ಲಿಸುತ್ತಿರುವುದಾಗಿ ತಿಳಿಸಿದ್ದಾರೆ. ಐಪಿಒಗೆ ರಿಲಯನ್ಸ್ ಮಂಡಳಿಯ ಅನುಮೋದನೆ ಸಿಕ್ಕಿರುವುದಾಗಿಯೂ ಹೇಳಿದ್ದಾರೆ. ಜಿಯೋ ಪ್ಲಾಟ್​ಫಾರ್ಮ್ಸ್ ಐಪಿಒ…

Read More

ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ – Kannada News | Karnataka CM D.K. Shivakumar and Wife Offer Prayers at Tirupati Timmappa Temple

ತಿರುಪತಿ, ಜೂ.19: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಪತ್ನಿಯೊಂದಿಗೆ ತಿರುಪತಿಗೆ ಭೇಟಿ ನೀಡಿ, ಬೆಳ್ಳಂಬೆಳಿಗ್ಗೆ ತಿಮ್ಮಪ್ಪನ ದರ್ಶನ ಪಡೆದರು. ನೂತನ ಸಚಿವ ಸಂಪುಟದ ವಿಸ್ತರಣೆಯ ನಂತರ ಡಿ.ಕೆ. ಶಿವಕುಮಾರ್ ಅವರ ಈ ಭೇಟಿಯು ಮಹತ್ವ ಪಡೆದುಕೊಂಡಿದೆ. ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕುಟುಂಬ ಸಮೇತ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರು, ಮುಂಜಾನೆಯ ದರ್ಶನದಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಡಿ.ಕೆ. ಶಿವಕುಮಾರ್ ಅವರ ಮೊದಲ ತಿರುಪತಿ…

Read More