ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಉತ್ಸವದ ವೈಭವಕ್ಕೆ ಸಾಕ್ಷಿಯಾದ ಲಕ್ಷಾಂತರ ಭಕ್ತರು
ಬೆಂಗಳೂರು, ಏಪ್ರಿಲ್ 2: ಬೆಂಗಳೂರು ನಗರದ ಐತಿಹಾಸಿಕ ಮತ್ತು ಸಾಂಪ್ರದಾಯಿಕ ಉತ್ಸವವಾದ ಬೆಂಗಳೂರು ಕರಗ ಭಕ್ತಿಭಾವ ಹಾಗೂ ವೈಭವದಿಂದ ಬುಧವಾರ ರಾತ್ರಿ ನೆರವೇರಿತು. ಕಣ್ಣು ಹಾಯಿಸಿದಷ್ಟು ಭಕ್ತಸಾಗರ ಕಂಡುಬಂದಿದ್ದು, ಎಲ್ಲೆಡೆ “ಗೋವಿಂದ ಗೋವಿಂದ” ಎಂಬ ನಾಮಸ್ಮರಣೆಯೊಂದಿಗೆ ಭಕ್ತರು ಹರ್ಷೋದ್ಘಾರ ಮಾಡಿದರು. ಮಲ್ಲಿಗೆ ಹೂಗಳಿಂದ ಅಲಂಕೃತಗೊಂಡ ದ್ರೌಪದಮ್ಮನ ಕರಗ ಭಕ್ತಿಯ ಕೇಂದ್ರಬಿಂದುವಾಗಿದ್ದು, ಖಡ್ಗ ಹಿಡಿದ ವೀರಕುಮಾರರ ಅಬ್ಬರ ಮಧ್ಯೆ ಕರಗ ಮೆರವಣಿಗೆ ರಾತ್ರಿಯಿಡೀ ಸಂಭ್ರಮ ಸಡಗರದಿಂದ ಸಾಗಿತು. ನಗರದ ವಿವಿಧ ಭಾಗಗಳಲ್ಲಿ ನಡೆದ ರಥಗಳ ಮೆರವಣಿಗೆಯ ವೈಭವವನ್ನು ಸಾವಿರಾರು…