Headlines

nagaraj11081993

ಹೃತಿಕ್ ವಿಚ್ಛೇದನದ ಬಗ್ಗೆ ಮಾತನಾಡಿದ ಸುಸ್ಸಾನೆ ಖಾನ್ ಸಹೋದರ

ಬಾಲಿವುಡ್ ಉದ್ಯಮದಲ್ಲಿ ಹೆಚ್ಚು ಚರ್ಚೆಯಾಗುತ್ತಿರುವ ವಿಚ್ಛೇದನವೆಂದರೆ ನಟರಾದ ಹೃತಿಕ್ ರೋಷನ್ ಮತ್ತು ಸುಸ್ಸಾನೆ ಖಾನ್ ಅವರ ವಿಚ್ಛೇದನ. 14 ವರ್ಷಗಳ ದಾಂಪತ್ಯದ ನಂತರ, ಇಬ್ಬರೂ ಬೇರೆಯಾಗಲು ನಿರ್ಧರಿಸಿದರು. ಅವರು ಅತ್ಯಂತ ಜನಪ್ರಿಯ ಸೆಲೆಬ್ರಿಟಿ ದಂಪತಿಗಳಲ್ಲಿ ಒಬ್ಬರಾಗಿದ್ದರು. ಆದ್ದರಿಂದ, ಅವರ ವಿಚ್ಛೇದನದ ಸುದ್ದಿ ಎಲ್ಲರಿಗೂ ದೊಡ್ಡ ಆಶ್ಚರ್ಯವನ್ನುಂಟುಮಾಡಿತು. ಆದರೆ ವಿಚ್ಛೇದನದ ನಂತರವೂ ಅವರ ಸಂಬಂಧದಲ್ಲಿ ಯಾವುದೇ ಕಹಿ ಇರಲಿಲ್ಲ. ವಾಸ್ತವವಾಗಿ, ಇಬ್ಬರೂ ತಮ್ಮ ತಮ್ಮ ಜೀವನದಲ್ಲಿ ಮುಂದುವರೆದಿದ್ದಾರೆ ಮತ್ತು ತಮ್ಮ ಸ್ನೇಹವನ್ನು ಉಳಿಸಿಕೊಂಡಿದ್ದಾರೆ. ಈಗ, ಸುಸ್ಸಾನೆ ಅವರ ಸಹೋದರ…

Read More

ಆನೆಗೆ ಗುಲಾಬಿ ಬಣ್ಣ ಹಚ್ಚಿ ಫೋಟೊಶೂಟ್, ಒಂದು ತಿಂಗಳಲ್ಲೇ ಆನೆ ಸಾವು

ಜೈಪುರ, ಏಪ್ರಿಲ್ 02: ವಿದೇಶಿ ಛಾಯಾಗ್ರಾಹಕ ಫೋಟೊಶೂಟ್​ಗೆ ಬಳಸಿಕೊಂಡಿದ್ದ ಆನೆ ‘ಚಂಚಲ್’ ಸಾವನ್ನಪ್ಪಿದೆ. ಅಂದು ಆನೆ(Elephant) ಹಾಗೂ ಮಾಡೆಲ್​ ಇಬ್ಬರಿಗೂ ಗುಲಾಬಿ ಬಣ್ಣವನ್ನು ಬಳಿಯಲಾಗಿತ್ತು ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಇದಾಗಿ ಒಂದು ತಿಂಗಳಿಗೆ ಆನೆ ಸಾವನ್ನಪ್ಪಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಚಂಚಲ್ ಎಂಬ ಹೆಸರಿನ ಈ ಆನೆಗೆ 65 ವರ್ಷ ವಯಸ್ಸಾಗಿದ್ದು, ಕಳೆದ ತಿಂಗಳು ಸಾವನ್ನಪ್ಪಿದೆ. ಜೈಪುರ ಆನೆಗಳ ಸಂಘವು ಇದು ಸಹಜ ಸಾವು ಎಂದು ದೃಢಪಡಿಸಿದೆ. ಆನೆ ಗ್ರಾಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಬಲ್ಲು…

Read More

ರಾಜ್​​ಕುಮಾರ್ ಹಾಗೂ ಪಾರ್ವತಮ್ಮಗೆ ಇಷ್ಟ ಆಗಿತ್ತು ಆ ಒಂದು ಸಿನಿಮಾ

ರಾಜ್​​ಕುಮಾರ್ ಅವರು ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ಇದ್ದರು. ಅವರ ಸಿನಿ ಜರ್ನಿಗೆ ಬೆಂಬಲವಾಗಿ ನಿಂತಿದ್ದು ಎಂದರೆ ಅದು ಪಾರ್ವತಮ್ಮ ಅವರು. ಪಾರ್ವತಮ್ಮ ಅವರು ನಿರ್ಮಾಪಕಿ ಆಗಿ ಚಿತ್ರರಂಗದಲ್ಲಿ ಗಮನ ಸೆಳೆದರು. ಈಗ ಪಾರ್ವತಮ್ಮ ಅವರ ಬಗೆಗಿನ ಒಂದು ಅಚ್ಚರಿಯ ವಿಷಯ ಹೇಳಲೇಬೇಕು. ರಾಜ್​​​ಕುಮಾರ್ ಅವರಿಗೆ ಹೆಚ್ಚು ಇಷ್ಟ ಆದ ಸಿನಿಮಾವೇ ಪಾರ್ವತಮ್ಮ ಅವರಿಗೂ ಹೆಚ್ಚು ಇಷ್ಟ ಆಗಿತ್ತು. ರಾಜ್​​ಕುಮಾರ್ ಅವರ ಸಿನಿಮಾಗಳ ಪೈಕಿ ಯಾವ ಸಿನಿಮಾ ಹೆಚ್ಚು ಇಷ್ಟ ಎಂದು ಅವರಿಗೆ ಕೇಳಲಾಗಿತ್ತು. ಇದಕ್ಕೆ…

Read More

ಬೆಂಗಳೂರಿನಲ್ಲಿ ಕರಗ ವೈಭವ! ಮಲ್ಲಿಗೆ ಹೂವಿನ ಅಲಂಕಾರದಲ್ಲಿ ಕಂಗೊಳಿಸಿದ ದ್ರೌಪದಮ್ಮ; ಭಕ್ತಸಾಗರದಲ್ಲಿ ಮೊಳಗಿದ ಗೋವಿಂದ ನಾಮ

ಬೆಂಗಳೂರಿನ ಧಾರ್ಮಿಕ ವೈಭವದ ಪ್ರತೀಕವಾದ 'ಬೆಂಗಳೂರು ಕರಗ' ಉತ್ಸವವು ತಡರಾತ್ರಿ ಅತ್ಯಂತ ಅದ್ಧೂರಿಯಾಗಿ ಮತ್ತು ಸಾಂಪ್ರದಾಯಿಕವಾಗಿ ಸಂಪನ್ನಗೊಂಡಿದೆ. ತಿಗಳರಪೇಟೆಯ ಧರ್ಮರಾಯ ಸ್ವಾಮಿ ದೇವಸ್ಥಾನದಿಂದ ಆರಂಭವಾದ ಈ ಶಕ್ತ್ಯೋತ್ಸವವನ್ನು ಕಣ್ಣುಂಬಿಕೊಳ್ಳಲು ಭಕ್ತಸಾಗರವೇ ಹರಿದುಬಂದಿತ್ತು. ಅರ್ಚಕ ಎ. ಜ್ಞಾನೇಂದ್ರ ಅವರು ಸತತ 16ನೇ ಬಾರಿಗೆ ಮಲ್ಲಿಗೆ ಹೂವಿನಿಂದ ಅಲಂಕೃತಗೊಂಡ ದ್ರೌಪದಮ್ಮನ ಕರಗವನ್ನು ಹೊತ್ತು ಸಾಗಿದರು. ಧಾರ್ಮಿಕ ವಿಧಿವಿಧಾನಗಳ ನಂತರ ಹಸಿ ಕರಗ ದೇವಸ್ಥಾನದಿಂದ ಹೊರಬರುತ್ತಿದ್ದಂತೆ ಭಕ್ತರ ಹರ್ಷೋದ್ಗಾರ ಮುಗಿಲುಮುಟ್ಟಿತ್ತು. ಕೈಯಲ್ಲಿ ಖಡ್ಗ ಹಿಡಿದು 'ಗೋವಿಂದ.. ಗೋವಿಂದ..' ಎಂದು ನಾಮಸ್ಮರಣೆ ಮಾಡುತ್ತಿದ್ದ…

Read More

Dreaming About Death: ಸತ್ತಂತೆ ಕನಸು ಬಿದ್ದರೆ ಏನರ್ಥ? ಶಾಸ್ತ್ರಗಳು ಹೇಳುವುದೇನು?

ಮರಣಿಸಿದವರ ಅಥವಾ ನಾವೇ ಮರಣಿಸಿದ ಹಾಗೆ ಕನಸು ಬಿದ್ದರೆ ಅದು ಶುಭವೇ ಅಥವಾ ಅಶುಭವೇ ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಸ್ವಪ್ನಶಾಸ್ತ್ರವು ಈ ಬಗ್ಗೆ ಬಹಳ ವಿಶೇಷವಾದ ವಿಶ್ಲೇಷಣೆಗಳನ್ನು ನೀಡುತ್ತದೆ. ಕನಸು ಬಿದ್ದ ಸ್ಥಳ (ಮನೆ, ಹೋಟೆಲ್, ದೇವಸ್ಥಾನ, ಕಚೇರಿ) ಕೂಡ ವಿಶ್ಲೇಷಣೆಗೆ ಮುಖ್ಯವಾಗುತ್ತದೆ. ಆದರೆ, ಇಂದಿನ ಮುಖ್ಯ ವಿಚಾರವು ಮರಣದ ಬಗ್ಗೆ. ನಾವು ಸತ್ತ ಹಾಗೆ ಅಥವಾ ನಮ್ಮ…

Read More

Indonesia Earthquake: ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

ಇಂಡೋನೇಷ್ಯಾ, ಏಪ್ರಿಲ್ 2: ಪೂರ್ವ ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಯುಎಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ಪ್ರಕಾರ, ಭೂಕಂಪದ ಕೇಂದ್ರಬಿಂದು ಮೊಲುಕ್ಕಾ ಸಮುದ್ರದಲ್ಲಿ ಸುಮಾರು 35 ಕಿಲೋಮೀಟರ್ ಆಳದಲ್ಲಿದೆ. ಬಲವಾದ ಕಂಪನಗಳ ನಂತರ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಭೂಕಂಪದಿಂದ ಆಸ್ತಿ ಮತ್ತು ಜೀವಕ್ಕೆ ಎಷ್ಟು ಹಾನಿಯಾಗಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಗುರುವಾರ ಬೆಳಿಗ್ಗೆ ಲಡಾಖ್ ಕೇಂದ್ರಾಡಳಿತ ಪ್ರದೇಶದ ಲೇಹ್ ಪ್ರದೇಶದಲ್ಲಿಯೂ ಭೂಕಂಪನದ ಅನುಭವವಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ (ಎನ್‌ಸಿಎಸ್) ಮಾಹಿತಿಯ ಪ್ರಕಾರ, ಇಂದು ಮುಂಜಾನೆ…

Read More

IPL 2026: ಐಪಿಎಲ್​ನಲ್ಲಿ ಯಾರಿಂದಲೂ ಸಾಧ್ಯವಾಗದ ದಾಖಲೆ ಬರೆದ ಶಮಿ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 5ನೇ ಪಂದ್ಯದ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ವೇಗಿ ಮೊಹಮ್ಮದ್ ಶಮಿ (Mohammed Shami) ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಇನಿಂಗ್ಸ್​ನ ಮೊದಲ ಓವರ್​ನ ಮೊದಲ ಎಸೆತದಲ್ಲೇ ವಿಕೆಟ್ ಕಬಳಿಸುವ ಮೂಲಕ ಎಂಬುದು ವಿಶೇಷ. ಲಕ್ನೋನ ಏಕನಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 18.4 ಓವರ್​ಗಳಲ್ಲಿ 141 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಲು ಡೆಲ್ಲಿ ಕ್ಯಾಪಿಟಲ್ಸ್…

Read More

ಸೋಲಿನ ಬೆನ್ನಲ್ಲೇ ರಿಷಭ್​​ ಪಂತ್​​​ಗೆ ಕ್ಲಾಸ್ ತೆಗೆದುಕೊಂಡ ಸಂಜೀವ್ ಗೋಯೆಂಕಾ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 5ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್  ತಂಡ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಎಲ್​ಎಸ್​ಜಿ ತಂಡದ ಮಾಲೀಕರಾದ ಸಂಜೀವ್ ಗೋಯೆಂಕಾ ಅವರು ನಾಯಕ ರಿಷಭ್ ಪಂತ್ ಅವರೊಂದಿಗೆ ಚರ್ಚಿಸುತ್ತಿರುವುದು ಕಂಡು ಬಂದಿದೆ. ಲಕ್ನೋನ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಲಕ್ನೋ ಸೂಪರ್ ಜೈಂಟ್ಸ್ 18.4 ಓವರ್​ಗಳಲ್ಲಿ 141 ರನ್​​ಗಳಿಸಿ ಆಲೌಟ್ ಆಗಿದ್ದರು. ಈ ಗುರಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ…

Read More

‘ನಮಗೆ ಹಾಗೆ ಕೆಲಸ ಮಾಡೋಕಾಗಲ್ಲ’; ‘ಡ್ರ್ಯಾಗನ್’ ಚಿತ್ರದ ಟುವಿನೋ ಹೊರಕ್ಕೆ

ಟುವಿನೋ ಥಾಮಸ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ (Toxic) ನಟಿಸಿದ್ದಾರೆ ಎನ್ನಲಾಗುತ್ತಿದೆ. ಅವರು ಮಲಯಾಳಂ ನಟ. ವರ್ಷಕ್ಕೆ 2-3 ಸಿನಿಮಾಗಳನ್ನು ಮಾಡಿ ಅವರಿಗೆ ಅಭ್ಯಾಸ. ಹೀಗಾಗಿ, ದೀರ್ಘ ಕಾಲ ಶೂಟ್ ಆಗುವ ಸಿನಿಮಾಗಳಲ್ಲಿ ನಟಿಸದೇ ಇರಲು ಅವರು ಇಷ್ಟಪಡುತ್ತಾರೆ. ಹೀಗಿರುವಾಗಲೇ, ಟುವಿನೋ ಅವರು ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​​ಟಿಆರ್ ಅವರ ‘ಡ್ರ್ಯಾಗನ್’ ಸಿನಿಮಾದಿಂದ ಹೊರ ನಡೆದಿದ್ದಾರೆ. ಈ ಬಗ್ಗೆ ಅವರೇ ಮಾಹಿತಿ ನೀಡಿದ್ದಾರೆ. ‘ಡ್ರ್ಯಾಗನ್’ ಸಿನಿಮಾ ಶೂಟಿಂಗ್ ಶುರುವಾಗಿ ಬಹು ಸಮಯ ಕಳೆದಿದೆ. ಈ ಚಿತ್ರದ ನಿರ್ದೇಶಕ…

Read More

ಮಂಗಳೂರು-ಉಡುಪಿಯಲ್ಲಿ ಹದಗೆಡುತ್ತಿದೆ ವಾಯು ಗುಣಮಟ್ಟ; ಉಸಿರಾಡುವ ಮುನ್ನ ಇರಲಿ ಎಚ್ಚರ.

ಬೆಂಗಳೂರು: ಇಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಸೂಚ್ಯಂಕವು (AQI) 58 ರಿಂದ 95 ರ ಆಸುಪಾಸಿನಲ್ಲಿ ದಾಖಲಾಗಿದೆ. ಇದನ್ನು ಹವಾಮಾನ ಇಲಾಖೆಯು ‘ಸಾಧಾರಣ’ (Moderate) ಅಥವಾ ‘ತೃಪ್ತಿಕರ’ (Satisfactory) ವರ್ಗಕ್ಕೆ ಸೇರಿಸಿದೆ. ನಗರದ ಕೆಲವು ಭಾಗಗಳಾದ ಬಿಟಿಎಂ ಲೇಔಟ್ ಮತ್ತು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಾಲಿನ್ಯದ ಮಟ್ಟ ತುಸು ಹೆಚ್ಚಿದ್ದು, ಅಲ್ಲಿನ AQI 100ರ ಗಡಿ ದಾಟಿದೆ. ಇದು ಶ್ವಾಸಕೋಶದ ಸಮಸ್ಯೆ ಇರುವವರಿಗೆ ಹಾಗೂ ಮಕ್ಕಳಿಗೆ ಸ್ವಲ್ಪ ಕಿರಿಕಿರಿ ಉಂಟುಮಾಡಬಹುದು. ಕರಾವಳಿ ಭಾಗದಲ್ಲಿ ಇತ್ತೀಚೆಗೆ ವಾಯು…

Read More