ಬಿರುಗಾಳಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ತಾಯಿ-ಮಗನಿಗೆ ಗಾಯ
ಬೆಳಗಾವಿ, ಏ. 2: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅನಿಗೋಳ ಗ್ರಾಮದಲ್ಲಿ ನಿನ್ನೆ ರಾತ್ರಿ ಸುರಿದ ಭೀಕರ ಬಿರುಗಾಳಿ ಮಳೆಗೆ ಭಾರೀ ಅನಾಹುತ ಸಂಭವಿಸಿದೆ. ಮಳೆಯ ಅಬ್ಬರಕ್ಕೆ ಸಿಲುಕಿ ಮನೆಯೊಂದರ ಮೇಲೆ ತೆಂಗಿನ ಮರ ಮುರಿದು ಬಿದ್ದ ಪರಿಣಾಮ, ಮನೆಯಲ್ಲಿದ್ದ ತಾಯಿ ಮತ್ತು ಮಗ ತೀವ್ರವಾಗಿ ಗಾಯಗೊಂಡಿದ್ದಾರೆ. ಅನಿಗೋಳ ಗ್ರಾಮದ ನಿವಾಸಿ ನೀಲವ್ವ ಯಲ್ಲಯ್ಯನವರ (70) ಮತ್ತು ಅವರ ಮಗ ಉಳವಪ್ಪ (37) ಮನೆಯಲ್ಲಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಏಕಾಏಕಿ ಸುರಿದ ಅಕಾಲಿಕ ಮಳೆ ಮತ್ತು ಬಿರುಗಾಳಿಗೆ…