Headlines

nagaraj11081993

9 ವಿಕೆಟ್ ಪತನದೊಂದಿಗೆ ಭಾರತ vs ಅಫ್ಘಾನ್ ಟೆಸ್ಟ್ ಕೊನೆಗೊಂಡಿದ್ದೇಕೆ? – Kannada News

ಭಾರತ ಮತ್ತು ಅಫ್ಘಾನಿಸ್ತಾನ್ ನಡುವೆ ನಡೆದ ಏಕೈಕ ಟೆಸ್ಟ್ ಪಂದ್ಯವು ಭರ್ಜರಿ ದಾಖಲೆಯೊಂದಿಗೆ ಮುಕ್ತಾಯ ಕಂಡಿದೆ. ಅದು ಸಹ ಕೊನೆಯ ಇನಿಂಗ್ಸ್​ನಲ್ಲಿ 9 ವಿಕೆಟ್​ಗಳ ಪತನದೊಂದಿಗೆ. ಸಾಮಾನ್ಯವಾಗಿ ಟೆಸ್ಟ್ ಪಂದ್ಯ ಮುಗಿಯಲು ಎದುರಾಳಿ ತಂಡದ 10 ವಿಕೆಟ್‌ಗಳನ್ನು ಉರುಳಿಸಬೇಕು. ಆದರೆ, ಈ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡದ 9ನೇ ವಿಕೆಟ್ ಪತನವಾಗುತ್ತಿದ್ದಂತೆ ಅಂಪೈರ್‌ಗಳು ಪಂದ್ಯ ಮುಕ್ತಾಯ ಎಂದು ಘೋಷಿಸಿದರು. ಇದಕ್ಕೆ ಮುಖ್ಯ ಕಾರಣ ಅಫ್ಘಾನ್​ ಆಟಗಾರನ ಗಾಯ. 9 ವಿಕೆಟ್‌ಗೆ ಪಂದ್ಯ ಮುಗಿಯಲು ಕಾರಣವೇನು? ಈ ಪಂದ್ಯದ ಮೊದಲ…

Read More

‘ಕ್ರಿಶ್ 4’ ನಿರ್ದೇಶಕ ಹೃತಿಕ್-ನಿರ್ಮಾಣ ಸಂಸ್ಥೆ ಮಧ್ಯೆ ಭಿನ್ನಾಭಿಪ್ರಾಯ? ಸಿಕ್ತು ಸ್ಪಷ್ಟನೆ – Kannada News

ಬಾಲಿವುಡ್‌ನ ಅತ್ಯಂತ ಯಶಸ್ವಿ ಸೂಪರ್ ಹೀರೋ ಫ್ರಾಂಚೈಸಿ ‘ಕ್ರಿಶ್’ (Krrish) ಸರಣಿಯ ಮುಂದಿನ ಭಾಗ ‘ಕ್ರಿಶ್ 4’ ಬಗ್ಗೆ ಸದ್ಯ ಬಿ-ಟೌನ್‌ನಲ್ಲಿ ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಈ ಚಿತ್ರದ ಮೂಲಕ ನಟ ಹೃತಿಕ್ ರೋಷನ್ ನಿರ್ದೇಶಕರಾಗಿ ಹೊಸ ಇನಿಂಗ್ಸ್ ಆರಂಭಿಸುತ್ತಿದ್ದು, ಸಿನಿಮಾ ಬಜೆಟ್ ವಿಷಯವಾಗಿ ದೊಡ್ಡ ವದಂತಿಗಳು ಹರಿದಾಡುತ್ತಿದ್ದವು. ಚಿತ್ರದ ಅದ್ದೂರಿ ಮೇಕಿಂಗ್ ಹಾಗೂ ಗ್ರಾಫಿಕ್ಸ್ ಸಲುವಾಗಿ ಹೃತಿಕ್ ಬರೋಬ್ಬರಿ 500 ಕೋಟಿ ರೂಪಾಯಿ ಬಜೆಟ್ ಬೇಡಿಕೆ ಇಟ್ಟಿದ್ದಾರೆ ಎಂಬ ಸುದ್ದಿಗೆ ಈಗ ಅವರ ತಂದೆ,…

Read More

H1B Visa: ಅಮೆರಿಕದಲ್ಲಿ ಉದ್ಯೋಗ ಬಯಸುವ ಭಾರತೀಯ ಐಟಿ ವೃತ್ತಿಪರರಿಗೆ ಗುಡ್​ ನ್ಯೂಸ್, ಡೊನಾಲ್ಡ್​ ಟ್ರಂಪ್ ವಿಧಿಸಿದ್ದ ಎಚ್​1ಬಿ ವೀಸಾ ಹೆಚ್ಚುವರಿ ಶುಲ್ಕ ರದ್ದು – Kannada News

ಬೋಸ್ಟನ್, ಜೂನ್ 09: ಅಮೆರಿಕ(America)ದಲ್ಲಿ  ಕೆಲಸ ಮಾಡುವ ಕನಸು ಕಾಣುತ್ತಿರುವ ಭಾರತೀಯ ಐಟಿ ವೃತ್ತಿಪರರು ಹಾಗೂ ಅಲ್ಲಿನ ಜಾಗತಿಕ ತಂತ್ರಜ್ಞಾನ ಸಂಸ್ಥೆಗಳಿಗೆ ಯುಎಸ್ ಫೆಡರಲ್ ನ್ಯಾಯಾಲಯ ದೊಡ್ಡ ಪರಿಹಾರ ನೀಡಿದೆ. ಹೊಸ ಎಚ್​-1ಬಿ ವೀಸಾ ಅರ್ಜಿಗಳ ಮೇಲೆ ವಾರ್ಷಿಕ ಬರೋಬ್ಬರಿ $1,00,000 ಅಂದರೆ ಸುಮಾರು 96 ಲಕ್ಷ ರೂ. ಹೆಚ್ಚುವರಿ ಶುಲ್ಕ ವಿಧಿಸುವ ಡೊನಾಲ್ಡ್​ ಟ್ರಂಪ್ ಆಡಳಿತ ವಿವಾದಾತ್ಮಕ ನಿರ್ಧಾರವನ್ನು ಬೋಸ್ಟನ್ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ. ಈ ಭಾರಿ ಶುಲ್ಕದ ನೀತಿ ಸಂಪೂರ್ಣವಾಗಿ ಕಾನೂನು ಬಾಹಿರ ಎಂದು…

Read More

Horoscope Today: ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ – Kannada News

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 09, ಮಂಗಳವಾರದ ದೈನಂದಿನ ರಾಶಿ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ಅಧಿಕ ಜ್ಯೇಷ್ಠ ಮಾಸದಲ್ಲಿ ರವಿ ವೃಷಭ ರಾಶಿಯಲ್ಲಿ ಮತ್ತು ಚಂದ್ರ ಮೀನ ರಾಶಿಯಲ್ಲಿ ಸಂಚರಿಸಲಿದ್ದಾನೆ. ಇಂದು ಸುಬ್ರಹ್ಮಣ್ಯ ಮತ್ತು ನಾಗಗಳ ಆರಾಧನೆಗೆ ಪ್ರಾಶಸ್ತ್ಯವಿದೆ. ಜೂನ್ 9 ರಂದು ಜನ್ಮದಿನ ಅಥವಾ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವವರಿಗೆ ಶುಭವಾಗಲಿ ಎಂದು ಗುರೂಜಿ ಹಾರೈಸಿದ್ದಾರೆ.       Source link

Read More

ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು – Kannada News

ಕಾರವಾರ, ಜೂನ್ 9: ಭಾರೀ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದಲ್ಲಿರುವ ಐತಿಹಾಸಿಕ ಮಹಾಬಲೇಶ್ವರ ದೇಗುಲದಲ್ಲಿ ಕೊಳಚೆ ನೀರು ತುಂಬಿಕೊಂಡಿದೆ. ದೇಗುಲದ ಗರ್ಭಗುಡಿಯಲ್ಲಿರುವ ಮಹಾಬಲೇಶ್ವರನ ಆತ್ಮಲಿಂಗ ಕೂಡ ಸಂಪೂರ್ಣವಾಗಿ ಕೊಳಚೆ ನೀರಿನಲ್ಲಿ ಮುಳುಗಿದೆ. ಇದು ಭಕ್ತರಲ್ಲಿ ತೀವ್ರ ಆತಂಕ ಹಾಗೂ ಅಸಮಾಧಾನಕ್ಕೆ ಕಾರಣವಾಗಿದೆ. ದೇಗುಲದ ಅಕ್ಕಪಕ್ಕದ ಶೌಚಾಲಯಗಳು ಮತ್ತು ಇತರೆ ಭಾಗಗಳಿಂದ ಕೊಳಚೆ ನೀರು ಗರ್ಭಗುಡಿಗೆ ನುಗ್ಗಿದೆ. ಮಹಾಬಲೇಶ್ವರ ದೇಗುಲದ ಗರ್ಭಗುಡಿಗೆ ಕೊಳಚೆ ನೀರು ನುಗ್ಗುತ್ತಿರುವುದು ಇದೇನು ಮೊದಲ ಸಲವಲ್ಲ. ಈ ಹಿಂದೆ ಕೂಡ…

Read More

Daily Devotional: ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು? – Kannada News

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು? ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಸಂಖ್ಯಾಶಾಸ್ತ್ರದ ಪ್ರಕಾರ, ನಿಮ್ಮ ಮೊಬೈಲ್ ಸಂಖ್ಯೆಯ ಕೊನೆಯ ಎರಡು ಅಂಕೆಗಳು ನಿಮ್ಮ ಅದೃಷ್ಟ ಮತ್ತು ವ್ಯಕ್ತಿತ್ವದ ಮೇಲೆ ಗಮನಾರ್ಹ ಪರಿಣಾಮ ಬೀರುತ್ತವೆ. ಜಗತ್ತು ಗ್ರಹಗಳ ಅಧೀನದಲ್ಲಿದ್ದು, ಗ್ರಹಗಳು ಸಂಖ್ಯೆಗಳ ಅಧೀನದಲ್ಲಿವೆ. ಈ ಅಂಕೆಗಳು ನಮ್ಮ ಬದುಕಿನ ಅನೇಕ ನಿರ್ಣಾಯಕ ಅಂಶಗಳನ್ನು ಪ್ರಭಾವಿಸುತ್ತವೆ. ನಿರ್ದಿಷ್ಟ ಸಂಖ್ಯೆಗಳ ಸಂಯೋಜನೆಗಳು ವಿಭಿನ್ನ ಫಲಿತಾಂಶಗಳನ್ನು ನೀಡುತ್ತವೆ. ಉದಾಹರಣೆಗೆ, ಮೊಬೈಲ್ ಸಂಖ್ಯೆಯ ಕೊನೆಯ…

Read More

ನೆಗೆಟಿವ್ ವಿಮರ್ಶೆಗಳೇ ‘ಪೆದ್ದಿ’ ಚಿತ್ರದ ಗೆಲುವಿಗೆ ಕಾರಣ; ಚಿತ್ರತಂಡದ ಅಚ್ಚರಿಯ ಹೇಳಿಕೆ – Kannada News

ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವ ‘ಪೆದ್ದಿ’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಾ ಇದೆ. ನೆಗೆಟಿವ್ ವಿಮರ್ಶೆಗಳು ಸಿಕ್ಕ ಹೊರತಾಗಿಯೂ ರಾಮ್ ಚರಣ್ ಅವರ ಸ್ಟಾರ್​ ಡಂ ಕಾರಣಕ್ಕೆ ಸಿನಿಮಾ ಗೆಲ್ಲುತ್ತಿದೆ. ಚಿತ್ರದ ಮೇಲಿನ ನೆಗೆಟಿವ್ ವಿಮರ್ಶೆಗಳೇ ಸಿನಿಮಾ ಮತ್ತಷ್ಟು ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಲು ಪರೋಕ್ಷವಾಗಿ ನೆರವಾದವು ಎಂದು ಹಿರಿಯ ನಟ ಜಗಪತಿ ಬಾಬು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಡೆದ ಚಿತ್ರದ ಸಕ್ಸಸ್ ಮೀಟ್‌ನಲ್ಲಿ ಸಿನಿಮಾಗೆ ಸಿಕ್ಕ ನೆಗೆಟಿವ್ ವಿಮರ್ಶೆ ಬ್ಗಗೆ ಕೇಳಲಾಯಿತು. ಇದಕ್ಕೆ ಉತ್ತರಿಸಿದ…

Read More

ಮೆಟ್ರೋ ಪ್ರಯಾಣಿಕರಿಗೆ ಸಹಿ ಸುದ್ದಿ: ಪಿಂಕ್ ಲೈನ್ ಮೆಟ್ರೋ ಲೋಕಾರ್ಪಣೆಗೆ ಮುಹೂರ್ತ ಬಹುತೇಕ ಫಿಕ್ಸ್ – Kannada News

ನಮ್ಮ ಮೆಟ್ರೋ ಪಿಂಕ್ ಲೈನ್ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜೂನ್ 9: ನಮ್ಮ ಮೆಟ್ರೋ ಪಿಂಕ್ ಲೈನ್ (Pink Line) ಮಾರ್ಗದ ಉದ್ಘಾಟನೆಗೆ ಕೊನೆಗೂ ಮುಹೂರ್ತ ಬಹುತೇಕ ನಿಗದಿಯಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂಬರುವ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ಪಿಂಕ್ ಲೈನ್‌ನ ಮೊದಲ ಹಂತದ ಮಾರ್ಗವು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ. ಈ ಮಹತ್ವದ ಯೋಜನೆಯ ಎಲಿವೇಟೆಡ್ ಮಾರ್ಗದಲ್ಲಿ ಮೆಟ್ರೋ ರೈಲುಗಳ ಸಂಚಾರ ಪ್ರಾರಂಭಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ…

Read More

ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ? – Kannada News

ಬೆಂಗಳೂರು, (ಜೂನ್ 08): ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಡಿಕೆ ಶಿವಕುಮಾರ್ (DK Shivakumar) ಅವರು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಹೌದು…ಡಿಕೆ ಶಿವಕುಮಾರ್ ಅವರು ಯಾವುದೇ ಪಕ್ಷ ಎನ್ನುವುದನ್ನು ನೋಡದೇ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳನ್ನು (Karnataka former chief minister) ಭೇಟಿ ಮಾಡುತ್ತಿದ್ದಾರೆ. ಸಿಎಂ ಆಗಿ ಪ್ರಮಾಣವಚನಕ್ಕೂ ಮುನ್ನವೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಎಚ್​​ಡಿ ದೇವೇಗೌಡ ಅವರನ್ನು ಭೇಟಿ ಮಾಡಿ ಸಲಹೆಗಳನ್ನು ಪಡೆದುಕೊಂಡಿದ್ದರು. ಇದನ್ನು ಡಿಕೆ ಶಿವಕುಮಾರ್ ಮುಂದುವರೆಸಿದ್ದು, ಇಂದು (ಜೂನ್ 08) ಮಾಜಿ ಸಿಎಂಗಳಾದ ವೀರಪ್ಪ…

Read More

ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿಯ ಹೆಗಲಿಗೊರಗಿ ಕಣ್ಣೀರಿಟ್ಟ ತಾಯಿ; ಮನಕಲಕುವ ವಿಡಿಯೋ ಇಲ್ಲಿದೆ – Kannada News

ನವದೆಹಲಿ, ಜೂನ್ 8: ಇಂದು ಭಾರತದ ವೀರ ಯೋಧರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಕೀರ್ತಿ ಚಕ್ರ, ವೀರ ಚಕ್ರ, ಶೌರ್ಯ ಚಕ್ರ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಈ ವೇಳೆ ಮರಣೋತ್ತರ ಪ್ರಶಸ್ತಿಯನ್ನು ಸ್ವೀಕರಿಸುವಾಗ ಆ ಸೈನಿಕರ ಕುಟುಂಬಸ್ಥರು ಕಣ್ಣೀರಿಟ್ಟ ದೃಶ್ಯಗಳು ನೋಡುಗರನ್ನು ಕೂಡ ಭಾವುಕರನ್ನಾಗಿಸಿದವು. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಸಿಪಾಯಿ ಜಂಜಾಲ್ ಪ್ರವೀಣ್ ಪ್ರಭಾಕರ್ ಅವರ ತಾಯಿಯು ತಮ್ಮ ಮಗನ ಪರವಾಗಿ ‘ಕೀರ್ತಿ ಚಕ್ರ’ ಪ್ರಶಸ್ತಿಯನ್ನು ಸ್ವೀಕರಿಸಿದ ಕ್ಷಣ ಇಡೀ ದೇಶವನ್ನೇ ಭಾವುಕಗೊಳಿಸಿದೆ. ಜುಲೈ…

Read More