All posts by nagaraj11081993

ಟೋಲ್‌ನಲ್ಲಿ ಹೊಸ ನಿಯಮ: ಕ್ಯಾಶ್‌ಲೆಸ್‌ನಿಂದ ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ

ಟೋಲ್‌ನಲ್ಲಿ ಹೊಸ ನಿಯಮ: ಕ್ಯಾಶ್‌ಲೆಸ್‌ನಿಂದ ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ

ನೆಲಮಂಗಲ, ಏಪ್ರಿಲ್ 1: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇಂದಿನಿಂದ (ಏಪ್ರಿಲ್ 1) ನಗದುರಹಿತ ಟೋಲ್ ಪಾವತಿ ಕಡ್ಡಾಯಗೊಳಿಸಲಾಗಿದೆ. ಹೊಸ ನಿಯಮದ ಪ್ರಕಾರ, ವಾಹನ ಸವಾರರು ಟೋಲ್ ಶುಲ್ಕವನ್ನು ನಗದು ರೂಪದಲ್ಲಿ ಪಾವತಿಸುವಂತಿಲ್ಲ. ಬದಲಿಗೆ, ಫಾಸ್ಟ್‌ಟ್ಯಾಗ್ ಅಥವಾ ಡಿಜಿಟಲ್ ಪಾವತಿ ವಿಧಾನಗಳಾದ ಫೋನ್‌ಪೇ ಮತ್ತು ಗೂಗಲ್‌ಪೇ ಮೂಲಕ ಸ್ಕ್ಯಾನ್ ಮಾಡಿ ಶುಲ್ಕ ಪಾವತಿಸಬೇಕಾಗುತ್ತದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಹಿಂದೆ ಹೊರಡಿಸಿದ್ದ ಸುತ್ತೋಲೆಯಂತೆ ಈ ಕ್ರಮ ಜಾರಿಯಾಗಿದೆ.

ಬೆಂಗಳೂರು ಸಮೀಪದ ನೆಲಮಂಗಲದ ಟೋಲ್ ಬಳಿ ಈ ಹೊಸ ನಿಯಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿದೆ. ಬೆಳಗ್ಗಿನಿಂದಲೂ ಫಾಸ್ಟ್‌ಟ್ಯಾಗ್ ಮೂಲಕ ಅಥವಾ ಸ್ಕ್ಯಾನರ್ ಬಳಸಿ ಫೋನ್‌ಪೇ ಮೂಲಕ ಪಾವತಿಸುವವರಿಗೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ನಗದು ಪಾವತಿಗೆ ಯಾವುದೇ ಅವಕಾಶವಿರುವುದಿಲ್ಲ. ಹಿಂದೆ ನಗದು ಪಾವತಿಯಲ್ಲಿ ಹೆಚ್ಚಿನ ಶುಲ್ಕ ವಿಧಿಸಲಾಗುತ್ತಿತ್ತು (ಉದಾಹರಣೆಗೆ, ₹37 ರ ಬದಲು ₹80). ಈಗ ಫಾಸ್ಟ್‌ಟ್ಯಾಗ್‌ನಲ್ಲಿ ₹37 ಹಾಗೂ ಫೋನ್‌ಪೇ ಮೂಲಕ ₹45 ಪಾವತಿಸಬೇಕಾಗುತ್ತದೆ. ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಡಿಜಿಟಲ್ ಪಾವತಿಯನ್ನು ಉತ್ತೇಜಿಸಲು ಈ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ಹೆದ್ದಾರಿ ಪ್ರಾಧಿಕಾರ ಹೇಳಿಕೊಂಡಿದೆ. ಏತನ್ಮಧ್ಯೆ, ಟೋಲ್​​ಗಳಲ್ಲಿ ಫಾಸ್ಟ್‌ಟ್ಯಾಗ್​ಗೆ ಬೇಡಿಕೆ ಹೆಚ್ಚಾಗಿದ್ದು, ಅದನ್ನು ಆ್ಯಕ್ಟಿವೇಶನ್ ಮಾಡುವವರು ಮತ್ತೆ ಸಕ್ರಿಯರಾಗಿದ್ದಾರೆ.

ವಿಡಿಯೋ ಹಾಗೂ ವರದಿ: ಮಂಜುನಾಥ್, ನೆಲಮಂಗಲ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತನ್ನದೇ ಟೆಂಪೋದಲ್ಲಿ ಶವವಾಗಿ ಪತ್ತೆಯಾದ ಮಾಲೀಕ: ಸಾವಿನ ಸುತ್ತ ಅನುಮಾನದ ಹುತ್ತ

ಚಿಕ್ಕಬಳ್ಳಾಪುರ, ಏಪ್ರಿಲ್​ 01: ಅಶೋಕ್ ಲೇಲ್ಯಾಂಡ್ ಮಿನಿ ಟೆಂಪೋ ಮಾಲೀಕ ಕಂ ಚಾಲಕನೋರ್ವ ತನ್ನ ಟೆಂಪೋವನ್ನು ನಂಬಿಕೊಂಡು ಬಾಡಿಗೆಗೆ ಹೋಗುವುದರ ಮೂಲಕ ಜೀವನ ಸಾಗಿಸುತ್ತಿದ್ದ. ಬಾಡಿಗೆಗೆ ಹೋಗಿ ಬರುವುದಾಗಿ ಹೇಳಿ ಹೋದವನು ಟೆಂಪೋದಲ್ಲೇ ಶವವಾಗಿ ಪತ್ತೆಯಾಗಿದ್ದು (death), ಕೊಲೆ ಶಂಕೆ ವ್ಯಕ್ತವಾಗಿದೆ. ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ಕ್ಕೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರ ತಾಲೂಕಿನ ಆರೂರು ಗ್ರಾಮದಲ್ಲಿ ಘಟನೆ ನಡೆದಿದೆ.

ನಡೆದಿದ್ದೇನು?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುರುಬರಕುಂಟೆಯ ಕಾಲೋನಿ ನಿವಾಸಿ 48 ವರ್ಷದ ಸುಬ್ರಮಣಿ, ಶನಿವಾರ ಮನೆಯಿಂದ ಬಾಡಿಗೆಗೆ ಹೋಗಿ ಬರ್ತಿನಿ ಎಂದವನು ವಾಪಸ್ ಬಂದಿಲ್ಲ. ಇದರಿಂದ ಅನುಮಾನಗೊಂಡು ಹೆದ್ದಾರಿ ಬಳಿ ವಾಹನ ಹುಡುಕಿಕೊಂಡು ಬಂದಾಗ ಸುಬ್ರಮಣಿಯ ವಾಹನ ಹಾಗೂ ಶವ ಪತ್ತೆಯಾಗಿದೆ.

ಇದನ್ನೂ ಓದಿ: ಕೆಲಸದಿಂದ ತೆಗೆದ ಸಿಟ್ಟಿಗೆ ಮ್ಯಾನೇಜರ್​​​ಗೆ ಚಾಕುವಿನಿಂದ 10 ಬಾರಿ ಇರಿದ, ಬೆಂಗಳೂರನ್ನೇ ಬೆಚ್ಚಿಬೀಳಿಸಿದ ಕೃತ್ಯ

ಇನ್ನು ಸುಬ್ರಮಣಿಗೆ ಚಿಕ್ಕಬಳ್ಳಾಪುರ ತಾಲೂಕಿನ ಪರೇಸಂದ್ರ ಗ್ರಾಮದ ಪರಿಚಯಸ್ಥ ಮಹಿಳೆಯ ಜೊತೆ ಅನೈತಿಕ ಸಂಬಂಧ ಇತ್ತಂತೆ. ಆಕೆಯನ್ನು ನೋಡಿಕೊಂಡು ವಾಪಸ್ ಬರುವಾಗ ಏನೋ ನಡೆದಿದೆ ಅಂತ ಸುಬ್ರಮಣಿ ಸಾವಿನ ಬಗ್ಗೆ ಆತನ ತಮ್ಮ ಮುನಿರಾಜು ಅನುಮಾನ ವ್ಯಕ್ತಪಡಿಸಿದ್ದಾರೆ.

ಪೆರೇಸಂದ್ರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸುಬ್ರಮಣಿ ಟೆಂಪೋದಲ್ಲೇ ಶವವಾಗಿದ್ದು, ಸಹಜ ಸಾವಾ, ಇಲ್ಲಾ ಯಾರಾದರೂ ಕೊಂದು ಶವ ಹಾಗೂ ವಾಹನ ಬಿಟ್ಟು ಪರಾರಿಯಾಗಿದ್ದಾರಾ ಎಂದು ಪೊಲೀಸರ ತನಿಖೆಯಿಂದ ತಿಳಿಯಬೇಕಿದೆ.

ಹಿಂಬದಿಯಿಂದ ಲಾರಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿಯೊಂದು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಣಾಪುರ ಬಳಿ ನಡೆದಿದೆ.  ಗುಂಡಾ ತಾಂಡಾದ ನಿವಾಸಿ ಕಿರಣ್ (27) ಮೃತ ಬೈಕ್ ಸವಾರ. ಹಗರಿಬೊಮ್ಮನ ಹಳ್ಳಿ ಸಿಪಿಐ, ವಿಕಾಸ್ ಲಮಾಣಿ, ಮರಿಯಮ್ಮನ ಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ತಾರಾಬಾಯಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ಗೃಹ ಸಚಿವ ಪರಮೇಶ್ವರ ಆಪ್ತನ ಹತ್ಯೆ ಯತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಗುಂಡಾ ತಾಂಡದಿಂದ, ಹೊಸಪೇಟೆಗೆ ಮಾತ್ರೆ ತರಲು ಬೈಕ್ ಸವಾರ ಕಿರಣ್ ಹೊರಟ್ಟಿದ್ದರು. ಬೆಂಗಳೂರಿನಿಂದ ಅಹಮದಾಬಾದ್ ಕಡೆ ಹೋಗುತ್ತಿದ್ದ ಲಾರಿ, ಬೈಕ್ ಸವಾರನಿಗೆ ಗುದ್ದಿದೆ. ತಲೆ ಮತ್ತು ಬೆನ್ನು, ಮುಖಕ್ಕೆ ಬಲವಾದ ಗಾಯವಾದ ಹಿನ್ನೆಲೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿ ಚಾಲಕನನ್ನು ಮರಿಯಮ್ಮನ ಹಳ್ಳಿ ಪೊಲೀಸರು ವಿಚಾರಣೆ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಅಸ್ಸಾಂನ ಚಹಾ ತೋಟಕ್ಕೆ ಪ್ರಧಾನಿ ಭೇಟಿ, ಕಾರ್ಮಿಕರೊಂದಿಗೆ ಚಹಾ ಎಲೆಗಳ ಕಿತ್ತ ಮೋದಿ, ಸೆಲ್ಫಿ, ಒಂದಿಷ್ಟು ಹರಟೆ

Source link

ಹಾವು ರಕ್ಷಣೆ ಕುರಿತ ಕರೆಗಳ ಏರಿಕೆಗೆ GBA ಹೈರಾಣ: ಇತ್ತ ಅಗತ್ಯ ಸೌಲಭ್ಯ, ವೇತನ ಇಲ್ಲದೆ ಸಂಕಷ್ಟದಲ್ಲಿ ಉರಗ ರಕ್ಷಕರು

ಬೆಂಗಳೂರು, ಏಪ್ರಿಲ್​​ 01: ನಗರದಲ್ಲಿ ಹಾವುಗಳ ಕಾಟ ಹೆಚ್ಚಿದ್ದು ಇವುಗಳನ್ನು ಹಿಡಿಯಲು ಸಹಾಯ ಕೋರಿ ಜಿಬಿಎಗೆ ಪ್ರತಿದಿನ 150ಕ್ಕೂ ಹೆಚ್ಚು ಕರೆಗಳು ಬರುತ್ತಿವೆ. ಆದರೆ ಈ ಸೇವೆಗೆ ಇರುವ 7 ಸದಸ್ಯರ ತಂಡಕ್ಕೆ ಎಲ್ಲ ಕರೆಗಳಿಗೂ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ. ಮೇ ಮತ್ತು ಜೂನ್ ತಿಂಗಳಲ್ಲಿ ಹಾವುಗಳು ಮೊಟ್ಟೆ ಇಡುವ ಹಾಗೂ ಮರಿ ಹೊರಬರುವ ಅವಧಿಯಾಗಿರುವುದರಿಂದ ಕರೆಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ರಕ್ಷಕರ ಸಂಖ್ಯೆಯನ್ನು ದ್ವಿಗುಣಗೊಳಿಸಲು GBA ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ.

ಪಶ್ಚಿಮ ನಗರ ಪಾಲಿಕೆಯ (112 ವಾರ್ಡ್‌ಗಳು) ಹಾಗೂ ದಕ್ಷಿಣ ನಗರ ಪಾಲಿಕೆಯ (72 ವಾರ್ಡ್‌ಗಳು) ವ್ಯಾಪ್ತಿಗೆ ತಲಾ ಇಬ್ಬರು ರಕ್ಷಕರನ್ನು ನಿಯೋಜಿಸಲಾಗಿದ್ದು, ಉಳಿದ ಪಾಲಿಕೆಗಳಿಗೆ ತಲಾ ಒಬ್ಬರಂತೆ ನೇಮಕ ಮಾಡಲಾಗಿದೆ. ಇವರಿಗೆ ಮೂರು ಅಥವಾ ಐದು ತಿಂಗಳಿಗೊಮ್ಮೆ ಮಾತ್ರ 18,000 ರೂ. ಗೌರವಧನ ಸಿಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸ್ಥಳಕ್ಕೆ ತಲುಪಿ ಹಾವುಗಳನ್ನೂ, ಜನರ ಜೀವವನ್ನೂ ರಕ್ಷಿಸುವುದು ಕಷ್ಟವಾಗುತ್ತಿದೆ. ಈ ಕೆಲಸ ಮಾನಸಿಕವಾಗಿ ಕೂಡ ಒತ್ತಡ ಉಂಟುಮಾಡುತ್ತಿದೆ ಎಂದು ಉರಗ ಸಂರಕ್ಷರೊಬ್ಬರು ತಿಳಿಸಿದ್ದಾರೆ. ಅಲ್ಲದೆ ಪಾಲಿಕೆಯಿಂದ ವಾಹನ ಹಾಗೂ ಅಗತ್ಯ ಸಾಧನಗಳಿಲ್ಲದ ಕಾರಣ, ರಕ್ಷಕರು ಬೈಕ್‌ನಲ್ಲಿ ಪ್ರಯಾಣಿಸಿ,  ಹಾವು ಹಿಡಿಯುವ ಸಾಧನ (ಟಾಂಗ್), ಲೋಹದ ಹುಕ್, ಚೀಲ, ಪಿನ್ನಿಂಗ್ ಟೂಲ್, ಗೇಟರ್ಸ್ (ಕಾಲು ರಕ್ಷಣಾ ಉಪಕರಣ), ಕೈಗವಸುಗಳು ಹಾಗೂ PVC ಪೈಪ್‌ಗಳನ್ನು ಸ್ವಂತ ಖರ್ಚಿನಲ್ಲಿ ಖರೀದಿಸಿ ಬಳಸುತ್ತಿದ್ದಾರೆ.

ಇದನ್ನೂ ಓದಿ: ಆಸ್ತಿ ತೆರಿಗೆ ಪಾವತಿಗೂ EMI?; ಜಿಬಿಎಯಿಂದ ಬೆಂಗಳೂರಿಗರಿಗೆ ಸಿಗುತ್ತಾ ಗುಡ್​​ ನ್ಯೂಸ್​?

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಹಾವುಗಳಲ್ಲಿ ನಾಗರಹಾವು, ರಸೆಲ್ ವೈಪರ್, ಸ್ಪೆಕ್ಟಾಕಲ್ಡ್ ಕೋಬ್ರಾ ಮತ್ತು ಚೆಕ್ವರ್ಡ್ ಕೀಲ್‌ಬ್ಯಾಕ್ ಸೇರಿವೆ. ಬೇಸಿಗೆ ಸಮಯದಲ್ಲಿ ತಂಪು ಹುಡುಕಿಕೊಂಡು ಹಾವುಗಳು ತಮ್ಮ ವಾಸಸ್ಥಳಗಳಿಂದ ಹೊರಬಂದು ತೋಟಗಳು ಹಾಗೂ ಉದ್ಯಾನವನಗಳಿಗೆ ಬರುತ್ತವೆ. ಹಾವುಗಳು ಅನಿಶ್ಚಿತ ಸ್ವಭಾವ ಹೊಂದಿರುವುದರಿಂದ, ಜನರು ಸ್ವತಃ ಹಿಡಿಯಲು ಯತ್ನಿಸಿದರೆ ಕಚ್ಚಿಸಿಕೊಳ್ಳುವ ಅಥವಾ ಭಯದಿಂದ ಹಾವನ್ನು ಕೊಲ್ಲುವ ಸಾಧ್ಯತೆ ಇದೆ. ಆದ್ದರಿಂದ ತಕ್ಷಣ ಸ್ಥಳಕ್ಕೆ ತೆರಳಿ ರಕ್ಷಣೆ ಕಾರ್ಯ ಮಾಡುವುದು ಅಗತ್ಯ ಎಂದು ರಕ್ಷಕರು ತಿಳಿಸಿದ್ದಾರೆ. ಮೇ, ಜೂನ್ ಮತ್ತು ಜುಲೈ ತಿಂಗಳಲ್ಲಿ ಮರಿ ಹೊರಬರುವ ಅವಧಿ ಹಾಗೂ ಭಾರೀ ಮಳೆಯಿಂದಾಗಿ, ದಿನಕ್ಕೆ 200ಕ್ಕೂ ಹೆಚ್ಚು ಕರೆಗಳು ಬರಬಹುದು ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ ಎಂದು ದಿ ನ್ಯೂ ಇಂಡಿಯನ್​​ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ: ನಮ್ಮ ಯೋಜನೆಯಿಂದ ಅವನಿಗೆ ಕೆಲಸವಿಲ್ಲದಂತಾಗಲಿದೆ

ಬಾಲುಸ್ಸೇರಿ, ಏ.1 : ಕೇರಳ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಯುಡಿಎಫ್ (UDF) ನಾಯಕರು ಮತದಾರರನ್ನು ಸೆಳೆಯಲು ವಿನೂತನ ಹಾದಿ ಹಿಡಿದಿದ್ದಾರೆ. ಬಾಲುಸ್ಸೇರಿಯಲ್ಲಿ ಬಸ್ ಪ್ರಯಾಣದ ವೇಳೆ ‘ಯಮರಾಜನ’ ವೇಷಧಾರಿ ವ್ಯಕ್ತಿಯನ್ನು ಭೇಟಿಯಾದ ನಾಯಕರು, ತಮ್ಮ ಹೊಸ ಆರೋಗ್ಯ ಯೋಜನೆಯಿಂದ ಯಮರಾಜನಿಗೆ ಕೆಲಸವಿಲ್ಲದಂತಾಗಲಿದೆ ಎಂದು ವ್ಯಂಗ್ಯವಾಡಿದ್ದಾರೆ. ಯುಡಿಎಫ್ ಅಧಿಕಾರಕ್ಕೆ ಬಂದರೆ ಜಾರಿಗೆ ತರಲಿರುವ ‘ಉಮ್ಮನ್ ಚಾಂಡಿ ಆರೋಗ್ಯ ವಿಮಾ ಯೋಜನೆ’ಯಡಿ ಪ್ರತಿ ಕುಟುಂಬಕ್ಕೆ ವಾರ್ಷಿಕ 25 ಲಕ್ಷ ರೂಪಾಯಿ ಮೊತ್ತದ ಆರೋಗ್ಯ ವಿಮೆಯನ್ನು ಒದಗಿಸುವುದಾಗಿ ಭರವಸೆ ನೀಡಲಾಗಿದೆ. ಯಾವುದೇ ಕುಟುಂಬ ವೈದ್ಯಕೀಯ ತುರ್ತು ಸಂದರ್ಭದಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಬಾರದು ಎಂಬುದು ಈ ಯೋಜನೆಯ ಮೂಲ ಉದ್ದೇಶವಾಗಿದೆ. “ಆರೋಗ್ಯ ರಕ್ಷಣೆ ಎಂಬುದು ಪ್ರತಿಯೊಬ್ಬ ಕೇರಳೀಯನ ಹಕ್ಕು. 25 ಲಕ್ಷ ರೂ.ಗಳ ಈ ಬೃಹತ್ ಕವರೇಜ್‌ನಿಂದಾಗಿ ಅನಾರೋಗ್ಯವು ಯಾವುದೇ ಕುಟುಂಬದ ಗೌರವ, ಉಳಿತಾಯ ಅಥವಾ ಭವಿಷ್ಯವನ್ನು ಕದಿಯಲು ಸಾಧ್ಯವಿಲ್ಲ. ನಾವು ಯಮರಾಜನನ್ನು ಕೆಲಸದಿಂದ ತೆಗೆಯುತ್ತಿದ್ದೇವೆ, ಆದರೆ ಅವನಿಗೆ ಬೇರೆ ಕೆಲಸ ಹುಡುಕಿಕೊಡುತ್ತೇವೆ” ಎಂದು ನಾಯಕರು ಹಾಸ್ಯಮಯವಾಗಿ ಪ್ರಚಾರ ನಡೆಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Mars-Saturn Conjunction: ಮೀನ ರಾಶಿಯಲ್ಲಿ ಮಂಗಳ-ಶನಿ ಸಂಯೋಗ; ಈ ಯೋಗದಿಂದ ಹಲವೆಡೆ ಆತಂಕದ ಭೀತಿ

ಮೀನ ರಾಶಿಯಲ್ಲಿ ಮಂಗಳ ಮತ್ತು ಶನಿಯರ ಸಂಯೋಗವು ಜ್ಯೋತಿಷ್ಯ ಶಾಸ್ತ್ರದಲ್ಲಿ ದ್ವಂದ್ವ ಯುದ್ಧದಂತೆ ಭಾಸವಾಗುತ್ತದೆ. ಈ ಯೋಗವು ಏಪ್ರಿಲ್ 30ರಿಂದ ಮೇ 10 ರವೆಗೆ ಇರಲಿದ್ದು ಅನೇಕ ವಿಚಾರಗಳು ಜಾಗತಿಕ ಮಟ್ಟದಲ್ಲಿ ನಡೆಯಲಿವೆ. ಜನರಲ್ಲಿ ಆತಂಕ, ದೇಶ ವಿದೇಶಗಳಲ್ಲಿ ಉನ್ಮಾದದ ಸ್ಥಿತಿಯೂ ಎದುರಾಗಬಹುದು. ಮೀನದಲ್ಲಿರುವಶನಿಯು ಶಿಸ್ತು, ನಿಧಾನಗತಿ ಮತ್ತು ಕರ್ಮದ ಸಂಕೇತವಾದರೆ, ಮಂಗಳನು ವೇಗ, ಆವೇಶ ಮತ್ತು ಶಕ್ತಿಯ ಪ್ರತೀಕ. ಈ ಎರಡು ಶಕ್ತಿಗಳು ಮೀನ ಎಂಬ ಜಲತತ್ವದ ರಾಶಿಯಲ್ಲಿ ಸಂಧಿಸಿದಾಗ ಉಂಟಾಗಲಿದೆ.

​ಜಾಗತಿಕ ಮತ್ತು ಸಾಮಾಜಿಕ ಪ್ರಭಾವಗಳು:

​ಮೀನ ರಾಶಿಯು ಸಮುದ್ರ ಮತ್ತು ಜಲಮೂಲಗಳನ್ನು ಪ್ರತಿನಿಧಿಸುವುದರಿಂದ, ಈ ಯುತಿಯು ಜಗತ್ತಿನಾದ್ಯಂತ ಸಂಚಲನ ಮೂಡಿಸುತ್ತದೆ.

  • ​ನೈಸರ್ಗಿಕ ಬದಲಾವಣೆ: ಸಮುದ್ರದಲ್ಲಿ ಚಂಡಮಾರುತ, ಸುನಾಮಿ ಅಥವಾ ಅನಿರೀಕ್ಷಿತ ಮಳೆ ಹೆಚ್ಚಾಗಬಹುದು. ನೌಕಾಪಡೆ ಅಥವಾ ಜಲಸಾರಿಗೆ ಕ್ಷೇತ್ರದಲ್ಲಿ ತಾಂತ್ರಿಕ ಅಡಚಣೆಗಳು ಎದುರಾಗಬಹುದು.
  • ರಾಜಕೀಯ ಅಸ್ಥಿರತೆ: ಗಡಿ ವಿವಾದಗಳು ತಾರಕಕ್ಕೇರಬಹುದು. ವಿಶೇಷವಾಗಿ ದಕ್ಷಿಣ ಅಥವಾ ನೈಋತ್ಯ ದಿಕ್ಕಿನ ದೇಶಗಳಲ್ಲಿ ಆಂತರಿಕ ಕಲಹಗಳು ಉಂಟಾಗುವ ಸಾಧ್ಯತೆ ಇರುತ್ತದೆ.
  • ​ಔಷಧೀಯ ಕ್ಷೇತ್ರ: ಹೊಸ ರೋಗಗಳ ಉಗಮ ಅಥವಾ ಇರುವ ರೋಗಗಳಿಗೆ ಹೊಸ ಔಷಧಗಳ ಸಂಶೋಧನೆಯಲ್ಲಿ ಈ ಗ್ರಹಗತಿಗಳು ವೇಗ ನೀಡುತ್ತವೆ.

​​ಲಾಭದಾಯಕ ಸ್ಥಿತಿ:

  • ​ಆರ್ಥಿಕ ಸ್ಥಿರತೆ: ಇವರಿಗೆ ಅನಿರೀಕ್ಷಿತವಾಗಿ ಸಿಗಬೇಕಾದ ಹಣಕಾಸು ಸೌಲಭ್ಯಗಳು ದೊರೆಯಲಿವೆ. ಹಳೆಯ ಆಸ್ತಿ ವಿವಾದಗಳು ಇವರ ಪರವಾಗಿ ತೀರ್ಪು ಬರಬಹುದು.
  • ​ಧೈರ್ಯ ಮತ್ತು ಸಾಹಸ: ಮಂಗಳನ ಪ್ರಭಾವದಿಂದ ಹೊಸ ಉದ್ಯಮ ಆರಂಭಿಸಲು ಬೇಕಾದ ಧೈರ್ಯ ಸಿಗುತ್ತದೆ, ಶನಿಯು ಅದಕ್ಕೆ ದೀರ್ಘಕಾಲದ ಭದ್ರತೆಯನ್ನು ನೀಡುತ್ತಾನೆ.

​ಸವಾಲಿನ ಸ್ಥಿತಿ

  • ಮಾನಸಿಕ ದ್ವಂದ್ವ: ಮಾಡಬೇಕೋ ಬೇಡವೋ ಎಂಬ ಗೊಂದಲ ಇವರನ್ನು ಕಾಡಬಹುದು. ಶನಿಯು ತಡೆಹಿಡಿದರೆ ಮಂಗಳನು ತಳ್ಳುತ್ತಾನೆ, ಇದು ಮಾನಸಿಕ ಒತ್ತಡಕ್ಕೆ ಕಾರಣವಾಗುತ್ತದೆ.
  • ಅಪಘಾತದ ಭಯ: ವಾಹನ ಚಾಲನೆ ಮಾಡುವಾಗ ಅತೀವ ಜಾಗರೂಕತೆ ಇರಲಿ. ರಕ್ತದೊತ್ತಡ ಅಥವಾ ಉಷ್ಣ ಸಂಬಂಧಿ ಕಾಯಿಲೆಗಳು ಬಾಧಿಸಬಹುದು.
  • ​ಸಂಬಂಧಗಳಲ್ಲಿ ಬಿರುಕು: ಕುಟುಂಬದಲ್ಲಿ ಹಿರಿಯರೊಂದಿಗೆ ವಾಗ್ವಾದ ಉಂಟಾಗಬಹುದು. ಮಾತಿನ ಮೇಲೆ ನಿಗಾ ಇಡುವುದು ಅನಿವಾರ್ಯ.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ವೃತ್ತಿ ಮತ್ತು ಆರ್ಥಿಕತೆಯ ಮೇಲೆ ಪ್ರಭಾವ

  • ​ಕಬ್ಬಿಣ ಮತ್ತು ಯಂತ್ರೋಪಕರಣ: ಈ ಕ್ಷೇತ್ರದಲ್ಲಿ ಇರುವವರಿಗೆ ಲಾಭದ ಜೊತೆಗೆ ಹೆಚ್ಚಿನ ಕೆಲಸದ ಒತ್ತಡವಿರುತ್ತದೆ.
  • ​ರಿಯಲ್ ಎಸ್ಟೇಟ್: ಭೂಮಿ ಖರೀದಿ ಅಥವಾ ಮಾರಾಟ ಪ್ರಕ್ರಿಯೆಯಲ್ಲಿ ಕಾನೂನು ತೊಡಕುಗಳು ಎದುರಾಗಬಹುದು. ದಾಖಲೆಗಳನ್ನು ಸರಿಯಾಗಿ ಪರಿಶೀಲಿಸುವುದು ಉತ್ತಮ.
  • ​ಷೇರು ಮಾರುಕಟ್ಟೆ: ಪೆಟ್ರೋಲಿಯಂ, ರಾಸಾಯನಿಕ ಮತ್ತು ರಕ್ಷಣಾ ವಲಯದ ಷೇರುಗಳಲ್ಲಿ ಏರಿಳಿತ ಕಂಡುಬರಬಹುದು.

​ಆಧ್ಯಾತ್ಮಿಕ ಮತ್ತು ಮಾನಸಿಕ ಪರಿಣಾಮ

ಮೀನ ರಾಶಿಯು ಆಧ್ಯಾತ್ಮದ ನೆಲೆ. ಇಲ್ಲಿ ಈ ಎರಡು ಪಾಪ ಗ್ರಹಗಳ ಭೇಟಿಯು ವ್ಯಕ್ತಿಯಲ್ಲಿ ವೈರಾಗ್ಯ ಅಥವಾ ತೀವ್ರ ಜಿಜ್ಞಾಸೆಯನ್ನು ಹುಟ್ಟಿಸುತ್ತದೆ. ಕೆಟ್ಟ ಹವ್ಯಾಸಗಳಿಂದ ದೂರವಿರಲು ಇದು ಸುಸಮಯ. ಧ್ಯಾನ ಮತ್ತು ಪ್ರಾಣಾಯಾಮದ ಮೂಲಕ ಮಂಗಳನ ಆವೇಶವನ್ನು ಶಾಂತಗೊಳಿಸಿ ಶನಿಯ ಸ್ಥಿರತೆಯನ್ನು ಪಡೆಯಬಹುದು.

​ಪರಿಣಾಮಕಾರಿ ಪರಿಹಾರಗಳು ​ಸುಬ್ರಹ್ಮಣ್ಯ ಆರಾಧನೆ: ಮಂಗಳನ ದೋಷ ನಿವಾರಣೆಗೆ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಅಥವಾ ಷಷ್ಠಿ ಪಾರಾಯಣ ಮಾಡುವುದು ಶ್ರೇಯಸ್ಕರ. ಶನಿವಾರದಂದು ಅಶ್ವತ್ಥ ಮರದ ಕೆಳಗೆ ಎಳ್ಳೆಣ್ಣೆ ದೀಪ ಹಚ್ಚುವುದು ಮತ್ತು ಬಡವರಿಗೆ ಅನ್ನದಾನ ಮಾಡುವುದು ಶುಭ ತರುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೇಹದಲ್ಲಿ ವಿಟಮಿನ್ ಎ ಕೊರತೆಯಾಗಿದೆ ಎಂಬುದನ್ನು ತಿಳಿದುಕೊಳ್ಳುವುದು ಹೇಗೆ? ನಿರ್ಲಕ್ಷಿಸಿದರೆ ಏನಾಗುತ್ತೆ?

ವಿಟಮಿನ್ ಎ (Vitamin A) ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರಬಹುದು. ದೇಹವನ್ನು ಆರೋಗ್ಯಕರವಾಗಿಡಲು ಇದು ಪ್ರಮುಖ ಪಾತ್ರ ವಹಿಸುತ್ತದೆ. ಅದಕ್ಕೂ ಮಿಗಿಲಾಗಿ ಕಣ್ಣಿನ ದೃಷ್ಟಿಯನ್ನು ಉತ್ತಮವಾಗಿರಿಸಲು, ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಮತ್ತು ಚರ್ಮವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ವಿಟಮಿನ್ ಎ ಕೊರತೆಯಿಂದ ಕಣ್ಣುಗಳಿಗೆ ಸಂಬಂಧಿಸಿದ ಸಮಸ್ಯೆಗಳು, ಪದೇಪದೇ ಸೋಂಕುಗಳು ಮತ್ತು ಚರ್ಮ ಒಣಗುವಂತಹ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಅದರಲ್ಲಿಯೂ ಚಿಕ್ಕ ಮಕ್ಕಳು, ಗರ್ಭಿಣಿಯರು ಮತ್ತು ದುರ್ಬಲ ರೋಗನಿರೋಧಕ ಶಕ್ತಿಯುಳ್ಳವರಲ್ಲಿ ವಿಟಮಿನ್ ಎ ಕೊರತೆಯ ಅಪಾಯ ಹೆಚ್ಚಾಗಿರುತ್ತದೆ. ಸಮತೋಲನಯುತ ಆಹಾರದ ಕೊರತೆ, ಪೋಷಕಾಂಶಗಳ ಅಭಾವ ಮತ್ತು ಅಸ್ವಸ್ಥ ಜೀವನಶೈಲಿ ಇದರ ಪ್ರಮುಖ ಕಾರಣಗಳಾಗಿವೆ. ಹಾಗಾಗಿ ಪ್ರತಿಯೊಬ್ಬರೂ ಕೂಡ ವಿಟಮಿನ್ ಎ ಕೊರತೆಯ ಲಕ್ಷಣಗಳ ಬಗ್ಗೆ ತಿಳಿದುಕೊಂಡು ಅದನ್ನು ನಿವಾರಿಸಿಕೊಳ್ಳಬೇಕು. ಇಲ್ಲವಾದಲ್ಲಿ ಇದು ನಾನಾ ರೀತಿಯ ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ.

ವಿಟಮಿನ್ ಎ ಕೊರತೆಯ ಲಕ್ಷಣಗಳು:

  • ರಾತ್ರಿ ವೇಳೆ ಸ್ಪಷ್ಟವಾಗಿ ಕಾಣಿಸದಿರುವುದು ಅಥವಾ ದೃಷ್ಟಿ ದುರ್ಬಲವಾಗುವುದು
  • ಕಣ್ಣುಗಳು ಒಣಗುವುದು ಅಥವಾ ಉರಿಯೂತ
  • ಚರ್ಮ ಒಣಗುವುದು
  • ತುಟಿಗಳು ಬಿರುಕು ಬೀಡುವುದು
  • ಕೂದಲು ದುರ್ಬಲವಾಗುವುದು
  • ಪದೇಪದೇ ಜ್ವರ, ಶೀತ ಅಥವಾ ಸೋಂಕುಗಳು ಕಂಡುಬರುವುದು
  • ಗಾಯಗಳು ಗುಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುವುದು

ಇದನ್ನೂ ಓದಿ: ಮಾವಿನಕಾಯಿ ಸೇವನೆಯಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ?

ವಿಟಮಿನ್ ಎ ಕೊರತೆಯನ್ನು ತಡೆಗಟ್ಟಲು ಸಲಹೆಗಳು?

ಸಾಮಾನ್ಯವಾಗಿ ವಿಟಮಿನ್ ಎ ಕೊರತೆಯನ್ನು ನಿವಾರಿಸಲು ಆಹಾರದಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಳ್ಳುವುದು ಅಗತ್ಯ. ಕ್ಯಾರೆಟ್, ಪಾಲಕ್ ಮತ್ತು ಹಸಿರು ತರಕಾರಿಗಳು ವಿಟಮಿನ್ ಎ ಯ ಉತ್ತಮ ಮೂಲಗಳಾಗಿವೆ. ಇದರ ಜೊತೆಗೆ ಹಾಲು, ಮೊಟ್ಟೆ ಮತ್ತು ಮೀನು ಕೂಡ ಉಪಯುಕ್ತವಾಗಿವೆ. ಪ್ರತಿದಿನ ಸಮತೋಲನಯುತ ಆಹಾರವನ್ನು ಸೇವಿಸುವುದು ಮತ್ತು ಪೋಷಕಾಂಶಗಳಿಂದ ಸಮೃದ್ಧವಾದ ಆಹಾರಗಳನ್ನು ಸೇರಿಸಿಕೊಳ್ಳುವುದರಿಂದ ಈ ಕೊರತೆಯನ್ನು ತಡೆಯಬಹುದು. ಅಗತ್ಯವಿದ್ದರೆ ವೈದ್ಯರ ಸಲಹೆಯೊಂದಿಗೆ ಪೂರಕಗಳನ್ನು (ಸಪ್ಲಿಮೆಂಟ್ಸ್) ಕೂಡ ಬಳಸಬಹುದು.

ಸರಿಯಾದ ಆಹಾರ ಮಾತ್ರವಲ್ಲ, ಆರೋಗ್ಯಕರ ಜೀವನಶೈಲಿಯೂ ಅತ್ಯಂತ ಮುಖ್ಯವಾಗುತ್ತದೆ. ಸಮಯಕ್ಕೆ ಸರಿಯಾಗಿ ಊಟ ಮಾಡುವುದು, ಜಂಕ್ ಫುಡ್‌ಗಳಿಂದ ದೂರವಿರುವುದು ಮತ್ತು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯ. ವಿಶೇಷವಾಗಿ ಮಕ್ಕಳು ಮತ್ತು ಗರ್ಭಿಣಿಯರು ತಮ್ಮ ಆಹಾರ ಪದ್ಧತಿಯ ಬಗ್ಗೆ ಹೆಚ್ಚಿನ ಗಮನಕೊಡಬೇಕು. ಸರಿಯಾದ ಅಭ್ಯಾಸಗಳನ್ನು ಅಳವಡಿಸಿಕೊಂಡರೆ ದೀರ್ಘಕಾಲ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಕಲೇಶಪುರ: ಅರಣ್ಯ ಇಲಾಖೆ ಸಿಬ್ಬಂದಿ ಕಂಡು ರೌದ್ರಾವತಾರ ತಾಳಿ ಬೈಕ್​ಗಳ ಮೆಟ್ಟಿ ಪುಡಿ ಮಾಡಿದ ಕಾಡಾನೆ! ವಿಡಿಯೋ ನೋಡಿ

ಹಾಸನ, ಏಪ್ರಿಲ್ 1: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮತ್ತೂರು ಗ್ರಾಮದಲ್ಲಿ ಕಾಡಾನೆಗಳ ಚಲನವಲನ ಗಮನಿಸುತ್ತಿದ್ದ ಅರಣ್ಯ ಇಲಾಖೆಯ ಎಲಿಫೆಂಟ್ ಟಾಸ್ಕ್ ಫೋರ್ಸ್ (ETF) ಸಿಬ್ಬಂದಿ ಮೇಲೆ ಕಾಡಾನೆಯೊಂದು ಭೀಕರವಾಗಿ ದಾಳಿ ಮಾಡಿದೆ. ಈ ವೇಳೆ ಸಿಬ್ಬಂದಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಟಿಎಫ್ ಸಿಬ್ಬಂದಿಯಾದ ಪ್ರಸನ್ನ, ಯುವರಾಜ್ ಮತ್ತು ಧನಂಜಯ ಮತ್ತೂರು ಗ್ರಾಮದ ಬಳಿ ಕಾಡಾನೆಗಳ ಮೇಲೆ ನಿಗಾ ಇರಿಸಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಆನೆಯೊಂದು ಇವರತ್ತ ನುಗ್ಗಿ ಬಂದಿದೆ. ಆನೆ ದಾಳಿ ಮಾಡುತ್ತಿದ್ದಂತೆ ಗಾಬರಿಗೊಂಡ ಸಿಬ್ಬಂದಿ ತಮ್ಮ ಬೈಕ್‌ಗಳನ್ನು ಸ್ಥಳದಲ್ಲೇ ಬಿಟ್ಟು ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಸಿಬ್ಬಂದಿ ಹೋದ ನಂತರ ಆನೆಯು ಅಲ್ಲಿದ್ದ ಬೈಕ್‌ಗಳನ್ನು ಸಂಪೂರ್ಣವಾಗಿ ಜಖಂಗೊಳಿಸಿದೆ.

ಈ ಘಟನೆಯಿಂದ ರೊಚ್ಚಿಗೆದ್ದಿರುವ ಸ್ಥಳೀಯರು, ಕಾಡಾನೆಗಳನ್ನು ಓಡಿಸುವ ಅರಣ್ಯ ಇಲಾಖೆಯ ಸಿಬ್ಬಂದಿಗೇ ಸರಿಯಾದ ರಕ್ಷಣೆ ಇಲ್ಲದಂತಾಗಿದೆ. ಇನ್ನು ಸಾಮಾನ್ಯ ಜನರ ಕಥೆ ಏನು? ಎಂದು ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಡೌಟ್ ಕೇಳೋ ನೆಪದಲ್ಲಿ ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವಿಡಿಯೋ ಫುಲ್ ವೈರಲ್

ತಮಿಳುನಾಡು: ಕಛೇರಿಯಲ್ಲೇ ಡೌಟ್​ ಕೇಳೋ ನೆಪದಲ್ಲಿ ಬಂದು ಮಹಿಳಾ ಉದ್ಯೋಗಿಗೆ ತುಟಿಗೆ ಚುಂಬಿಸಲು ಮುಂದಾದ ಘಟನೆ ತಮಿಳುನಾಡಿದ ಕೊಯಮತ್ತೂರಿನಲ್ಲಿ ನಡೆದಿದೆ. ಕಾಮುಕನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. @rameshofficial0 ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಮಹಿಳೆ ಕೆಲಸ ಮಾಡುತ್ತಿರುವಾಗ ಅಲ್ಲಿಗೆ ಬಂದ ಪುರುಷ ಸಹೋದ್ಯೋಗಿ ಕಂಪ್ಯೂಟರ್‌ನಲ್ಲಿ ಏನೋ ತೋರಿಸುತ್ತಾ ಏಕಾಏಕಿ ಆಕೆಯ ತುಟಿಗೆ ಚುಂಬಿಸಲು ಮುಂದಾಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

 

ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇಂದಿನಿಂದ ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?

ಬೆಂಗಳೂರು, (ಏಪ್ರಿಲ್ 01): ರಾಜ್ಯದಲ್ಲಿ (Karnataka) ಇಂದಿನಿಂದ ಜನಗಣತಿ (Census) ಆರಂಭಗೊಂಡಿದ್ದು, ಎರಡು ಹಂತಗಳಲ್ಲಿ ಜನಗಣತಿ ನಡೆಯಲಿದೆ. ಮೊದಲ ಹಂತದಲ್ಲಿ ಮನೆಗಳ ಗಣತಿ ಮತ್ತು ಎರಡನೇ ಹಂತದಲ್ಲಿ ಜನ ಗಣತಿ ನಡೆಯಲಿದ್ದು, ಇಂದಿನಿಂದ ಸ್ವಯಂ ಗಣತಿ ಕೂಡ ಆರಂಭವಾಗಿದೆ. ಏ.1ರಿಂದ ಏ.15ರವರೆಗೂ ಸ್ವಯಂ ಗಣತಿಯಲ್ಲಿ ಭಾಗವಹಿಸಬಹುದು. ನಂತರ ಗಣತಿದಾರರು ಮನೆ ಮನೆಗೆ ತೆರಳಿ ಗಣತಿ ಮಾಡಲಿದ್ದಾರೆ. ಎರಡನೇ ಹಂತವಾಗಿ ಏ.16ರಿಂದ ಮೇ 15ರ ಅವಧಿಯಲ್ಲಿ ಗಣತಿದಾರರು ಮನೆ – ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಪರಿಶೀಲಿಸಿ ಸಂಗ್ರಹಿಸಲಿದ್ದಾರೆ. ಸ್ವಯಂ ಗಣತಿಯಲ್ಲಿ ಸ್ವತಃವಾಗಿ ಜನರೇ ಭಾಗವಹಿಸಿ ನೋಂದಣಿ ಮಾಡಿಕೊಳ್ಳಬಹುದು. ಗಣತಿಯ ವೆಬ್ ಪೋರ್ಟಲ್‌ನಲ್ಲಿ ಸ್ವಯಂ ಗಣತಿಯಲ್ಲಿ ಭಾಗವಹಿಸಬಹುದು. ಮನೆಯ ಯಾವುದೇ ಒಬ್ಬ ಸದಸ್ಯರು ವೆಬ್ ಪೋರ್ಟಲ್ ಮೂಲಕ ಮನೆಯ ವಿವರಗಳನ್ನ ದಾಖಲಿಸಬಹುದು. ನೋಂದಾಣಿ ನಂತರ ಸ್ವಯಂಗಣತಿಯ ಐಡಿಯನ್ನ ಮೊಬೈಲ್ ಅಥವಾ ಇಮೇಲ್ ಮೂಲಕ ಪಡೆಯಬಹುದು. ಇನ್ನು ಈ ಬಗ್ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದು, ಏನೆಲ್ಲಾ ಮಾಡಬೇಕು ಎನ್ನುವುದನ್ನು ವಿವರಿಸಿದ್ದಾರೆ ಕೇಳಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link