All posts by nagaraj11081993

ನಿಮ್ಮ ಮಗುವಿನಲ್ಲಿ ಹಸಿವು ಕಡಿಮೆಯಾಗುವುದಕ್ಕೆ ನೀವು ಹೇಳಿಕೊಟ್ಟ ಈ ಅಭ್ಯಾಸವೇ ಕಾರಣ! – Kannada News | How Much Coffee Is Too Much for Children?

ಮಕ್ಕಳು ಕಾಫಿ ಕುಡಿಯುವ ಅಭ್ಯಾಸದಿಂದ ಉಂಟಾಗುವ ಅಡ್ಡಪರಿಣಾಮಗಳು

ಬೆಳಿಗ್ಗೆ ಎದ್ದ ಕೂಡಲೇ ಅಥವಾ ಸಂಜೆ ಸಮಯದಲ್ಲಿ ಚಹಾ ಅಥವಾ ಕಾಫಿ (Coffee) ಕುಡಿಯುವ ಅಭ್ಯಾಸ ಹಲವರಿಗಿರುತ್ತದೆ. ಈ ಅಭ್ಯಾಸ ಅಷ್ಟಾಗಿ ಆರೋಗ್ಯಕರವಲ್ಲ ಎಂದು ತಿಳಿದಿದ್ದರೂ ಸಹ ಅದನ್ನು ಬಿಡಲು ಮನಸ್ಸು ಒಪ್ಪುವುದಿಲ್ಲ. ಅದರಲ್ಲಿಯೂ ಕೆಲವು ಮನೆಗಳಲ್ಲಿ ದೊಡ್ಡವರು ಚಹಾ ಅಥವಾ ಕಾಫಿ ಕುಡಿಯುವುದಲ್ಲದೆ ಮಕ್ಕಳಿಗೂ ಕುಡಿಯಲು ಕೊಡುತ್ತಾರೆ. ಆದರೆ ಇದು ಮಕ್ಕಳ ಆರೋಗ್ಯಕ್ಕೆ ಒಳ್ಳೆಯದಲ್ಲ, ಇಂತಹ ಅಭ್ಯಾಸ ತುಂಬಾ ಹಾನಿಕಾರಕ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದರಲ್ಲಿಯೂ ಕಾಫಿ ಸೇವನೆ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾದರೆ ಮಕ್ಕಳು ಯಾಕೆ ಕಾಫಿ ಸೇವನೆ ಮಾಡಬಾರದು, ಒಂದು ಕಪ್ ಕಾಫಿ ಮಕ್ಕಳಲ್ಲಿ ಏನೆಲ್ಲಾ ಬದಲಾವಣೆ ಮಾಡುತ್ತೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಕಬ್ಬಿಣದ ಕೊರತೆಯಾಗುತ್ತೆ:

ಮಕ್ಕಳು ಬೆಳವಣಿಗೆಯ ಹಂತದಲ್ಲಿರುವಾಗ ಅವರಿಗೆ ಪ್ರತಿನಿತ್ಯ ತರಕಾರಿ, ಸೊಪ್ಪು ಮತ್ತು ಮೊಟ್ಟೆಗಳಂತಹ ಪೋಷಕಾಂಶಗಳಿಂದ ಭರಿತವಾಗಿರುವ ಆಹಾರವನ್ನು ನೀಡಬೇಕು. ಅದರ ಬದಲಾಗಿ ಒಂದು ಕಪ್ ಚಹಾ ಅಥವಾ ಕಾಫಿ ಕೊಟ್ಟರೆ ಪೋಷಕಾಂಶಗಳು ಸರಿಯಾಗಿ ದೇಹವನ್ನು ತಲುಪುವುದಿಲ್ಲ. ಈ ಪಾನೀಯಗಳಲ್ಲಿರುವ ಕೆಲವು ರಾಸಾಯನಿಕಗಳು ಆಹಾರದಲ್ಲಿರುವ ಕಬ್ಬಿಣದ ಅಂಶ ರಕ್ತ ಹೀರಿಕೊಳ್ಳುವುದನ್ನು ತಡೆಯುತ್ತವೆ. ಪರಿಣಾಮವಾಗಿ, ಮಕ್ಕಳು ಎಷ್ಟೇ ತಿಂದರೂ ಅವರು ತೆಳ್ಳಗಿರುತ್ತಾರೆ ಅಥವಾ ರಕ್ತಹೀನತೆಯ ಸಮಸ್ಯೆ ಕಾಡುತ್ತದೆ.

ಇದನ್ನೂ ಓದಿ: ಟೀಯನ್ನು ಪದೇ ಪದೇ ಬಿಸಿ ಮಾಡಿ ಕುಡಿಯುವ ಒಂದು ಸಣ್ಣ ಅಭ್ಯಾಸ ಆರೋಗ್ಯದ ಮೇಲೆ ಬಹುದೊಡ್ಡ ಪರಿಣಾಮ ಬೀರಬಹುದು ಎಚ್ಚರ!

ಕೆಫೀನ್ ಮೆದುಳಿಗೆ ಅಪಾಯಕಾರಿ:

ಕೆಲಸಗಳಲ್ಲಿ ನಿರತರಾಗಿರುವ ವಯಸ್ಕರು ಮೈಂಡ್ ಫ್ರೆಶ್ ಆಗಲು ಅಥವಾ ನಿದ್ದೆಯಿಂದ ಮುಕ್ತಿ ಪಡೆಯಲು ಕಾಫಿ ಅಥವಾ ಚಹಾ ಕುಡಿಯುತ್ತಾರೆ. ಆದರೆ ಮಕ್ಕಳಿಗೆ, ಕಾಫಿ ಮತ್ತು ಚಹಾದಲ್ಲಿರುವ ಕೆಫೀನ್ ನರಮಂಡಲವನ್ನು ಅತಿಯಾಗಿ ಪ್ರಚೋದಿಸುತ್ತದೆ. ಇದು ಅವರಲ್ಲಿ ಆತಂಕ ಉಂಟುಮಾಡುತ್ತದೆ. ಅಷ್ಟೇ ಅಲ್ಲ ಅಧ್ಯಯನದ ಮೇಲೆ ಕೇಂದ್ರೀಕರಿಸಲು ಅಥವಾ ಒಂದೇ ಸ್ಥಳದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗುವುದಿಲ್ಲ. ಇದಲ್ಲದೆ, ಕೆಫೀನ್ ಅವರ ನಿದ್ರೆಗೂ ಅಡ್ಡಿಪಡಿಸುತ್ತದೆ. ನಡವಳಿಕೆಯಲ್ಲಿ ಬದಲಾವಣೆಗಳಿಗೆ ಕಾರಣವಾಗಿ ಪದೇ ಪದೇ ಕೋಪಗೊಳ್ಳುವಂತೆ ಮಾಡುತ್ತದೆ.

ಹಸಿವು ಕಡಿಮೆಯಾಗುತ್ತೆ

ಮಕ್ಕಳು ಸರಿಯಾಗಿ ತಿನ್ನುವುದಿಲ್ಲ ಎಂಬುದು ಹಲವು ಪೋಷಕರ ಚಿಂತೆಯಾಗಿರುತ್ತೆ. ಇದಕ್ಕೆ ಮುಖ್ಯ ಕಾರಣವೆಂದರೆ ಅವರು ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಚಹಾ ಅಥವಾ ಕಾಫಿ ಕುಡಿಯುವುದು. ಇದು ಹಸಿವನ್ನು ಉತ್ತೇಜಿಸುವ ಹಾರ್ಮೋನುಗಳನ್ನು ನಿಗ್ರಹಿಸುತ್ತದೆ. ಹೆಚ್ಚುವರಿಯಾಗಿ, ಇದು ಕರುಳಿನಲ್ಲಿ ಆಮ್ಲೀಯತೆಯನ್ನು ಹೆಚ್ಚಿಸುತ್ತದೆ ಮತ್ತು ಎದೆಯುರಿ, ಮಲಬದ್ಧತೆ ಮತ್ತು ಹೊಟ್ಟೆಯ ಸಮಸ್ಯೆಗಳನ್ನು ಉಂಟುಮಾಡಬಹುದು. ಮಕ್ಕಳಿಗೆ ಹಸಿವಿಲ್ಲದಿದ್ದರೆ, ಅವರು ತಿನ್ನುವುದಿಲ್ಲ, ತಿನ್ನದಿದ್ದರೆ, ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ.

ಸಕ್ಕರೆ ಮಕ್ಕಳಿಗೆ ಹಾನಿಕಾರಕ

ಮಕ್ಕಳು ಇಷ್ಟ ಪಟ್ಟು ಕುಡಿಯುವ ಚಹಾ, ಕಾಫಿಯಲ್ಲಿ ಸಕ್ಕರೆ ಇರುತ್ತದೆ. ಇದನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ಮಕ್ಕಳಿಗೆ ಹಾನಿಯಾಗಬಹುದು. ಅಷ್ಟೇ ಅಲ್ಲ ಹಲ್ಲು ಹುಳುಕಿಗೆ ಬೊಜ್ಜಿಗೆ ಕಾರಣವಾಗಬಹುದು. ಹಾಗಾಗಿ ಹತ್ತು ವರ್ಷದೊಳಗಿನ ಮಕ್ಕಳಿಗೆ, ಹಾಲು, ಗಂಜಿ ಅಥವಾ ಹಣ್ಣಿನ ರಸವನ್ನು ನೀಡುವುದು ಹೆಚ್ಚು ಉತ್ತಮ. ಅಲ್ಲದೆ ಅತಿಯಾದ ಸಕ್ಕರೆ ಸೇವನೆಯು ಮಕ್ಕಳನ್ನು ಹೈಪರ್ಆಕ್ಟಿವ್ ಆಗಿ ಮಾಡಬಹುದು ಎಂದು ಅಧ್ಯಯನಗಳಿಂದ ಸಾಬೀತಾಗಿದೆ. ಹಾಗಾಗಿ ಮಕ್ಕಳಿಗೆ ಚಹಾ, ಕಾಫಿ ಕೊಡುವ ಮುನ್ನ ಎಚ್ಚರವಹಿಸಿ. ಆರೋಗ್ಯಕ್ಕಿಂತ ಯಾವುದು ದೊಡ್ಡದಲ್ಲ ಎಂಬುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಮ್ಮ ಸರ್ಕಾರದ ಆಡಳಿತದಲ್ಲಿ ಕೈ ಹಾಕುವುದು ಬೇಡ: ಕೇರಳ ಸರ್ಕಾರಕ್ಕೆ ಡಿಕೆ ಶಿವಕುಮಾರ್ ಎಚ್ಚರಿಕೆ​ – Kannada News | Dont Interfere in Karnataka Government Administration: DK Shivakumar sparks Kerala Government

ಬೆಂಗಳೂರು, ಡಿಸೆಂಬರ್​ 30: ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳು ನೆಲಸಮ ವಿಚಾರವಾಗಿ ಕೇರಳ ಸರ್ಕಾರ ಕಿಡಿಕಾರಿತ್ತು. ಈ ವಿಚಾರವಾಗಿ ಇದೀಗ ಡಿಸಿಎಂ ಡಿಕೆ ಶಿವಕುಮಾರ್​ ಕೇರಳ ಸರ್ಕಾರಕ್ಕೆ ಮತ್ತೊಮ್ಮೆ ಟಾಂಗ್​ ನೀಡಿದ್ದಾರೆ. ಕೇರಳ ಸರ್ಕಾರ ನಮ್ಮ ಸರ್ಕಾರದ ಆಡಳಿತದಲ್ಲಿ ಕೈ ಹಾಕುವುದು ಬೇಡ ಎಂದು ಹೇಳಿದ್ದಾರೆ. ತಮ್ಮ ಈ ಹಿಂದಿನ ಹೇಳಿಕೆಯನ್ನು ರಾಜೀವ್ ಚಂದ್ರಶೇಖರ್ ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಫ್ಲೈ ಓವರ್‌ ಮೇಲೆ ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ – Kannada News | Rash Driving by Tourist Bus Drivers on Electronic City Flyover: Video Goes Viral

ಆನೇಕಲ್​​, ಡಿಸೆಂಬರ್​ 30: ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್‌ನಲ್ಲಿ ಟೂರಿಸ್ಟ್ ಬಸ್ ಚಾಲಕರು ಅಜಾಗರೂಕ ಚಾಲನೆ ಮಾಡಿರುವುದು ಬೆಳಕಿಗೆ ಬಂದಿದೆ. ನಾ ಮುಂದು ತಾ ಮುಂದು ಎಂಬಂತೆ ಬಸ್ಸುಗಳನ್ನು ಚಾಲನೆ ಮಾಡುತ್ತಾ, ಪ್ರಯಾಣಿಕರ ಜೀವದ ಜೊತೆ ಹುಚ್ಚಾಟ ನಡೆಸಿರುವ ವಿಡಿಯೋ ವೈರಲ್​​ ಆಗಿದೆ. ಘಟನೆಯಲ್ಲಿ ಬಸ್​​ಗಳು ಪರಸ್ಪರ ಟಚ್​​ ಆಗಿದ್ದು, ಸ್ವಲ್ಪ ಯಾಮಾರಿದರೂ ಬಸ್ಸುಗಳು ಫ್ಲೈ ಓವರ್‌ನಿಂದ ಕೆಳಗೆ ಬೀಳುವ ಸಾಧ್ಯತೆ ಹೆಚ್ಚಿತ್ತು ಎನ್ನಲಾಗಿದೆ. ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಇತ್ತೀಚೆಗೆ ಸರಣಿ ಬಸ್ ದುರಂತಗಳು ಸಂಭವಿಸಿ ಸಾವು-ನೋವುಗಳು ಸಂಭವಿಸುತ್ತಿದ್ದರೂ ಚಾಲಕರ ನಿರ್ಲಕ್ಷ್ಯ ಕಡಿಮೆ ಆಗಿಲ್ಲ ಎಂಬುದಕ್ಕೆ ಈ ಘಟನೆ ಮತ್ತೊಂದು ಸ್ಪಷ್ಟ ನಿದರ್ಶನ ಎಂಬಂತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ದೇವಿ ದೇವಾಲಯದ ಮುಂದೆ ಅಮಾನವೀಯ ಘಟನೆ: ಮುಳ್ಳಿನ ಪೊದೆಯಲ್ಲಿ ಒದ್ದಾಡಿದ ಒಂದು ದಿನದ ಹೆಣ್ಣು ಮಗು – Kannada News | Huligemma Temple Shock: Newborn Girl Child Abandoned in Koppal

ಕೊಪ್ಪಳ, ಡಿ.30: ಹೆಣ್ಣು ಮಕ್ಕಳು ಬೇಡ (Koppal Baby Abandoned) ಎನ್ನುವ ಕ್ರೂರ ಮನಸ್ಥಿತಿ ಇನ್ನೂ ಹೋಗಿಲ್ಲ. ಹೆಣ್ಣು ಮಗು ಎಂಬ ಕಾರಣಕ್ಕೆ ಬೀದಿಯಲ್ಲಿ ಬಿಟ್ಟು ಹೋಗುವ ಘಟನೆಗಳು ಇಂದಿಗೂ ಕಂಡು ಬರುತ್ತಿದೆ ಎಂಬುದು ಅಚ್ಚರಿಯ ವಿಚಾರ, ಸಮಾಜ ಬದಲಾದರೂ, ಮನುಷ್ಯನ ಮನಸ್ಥಿತಿ ಬದಲಾಗುತ್ತಿಲ್ಲ. ಇದೀಗ ಕೊಪ್ಪಳದ ತಾಲೂಕಿನ ಐತಿಹಾಸಿಕ ಹುಲಗೆಮ್ಮ ದೇವಸ್ಥಾನದಲ್ಲೂ ಇಂತಹ ಅಮಾನವೀಯ ಘಟನೆಯೊಂದು ನಡೆದಿದೆ. ಈ ದೇವಸ್ಥಾನಕ್ಕೆ ಲಕ್ಷ ಲಕ್ಷ ಭಕ್ತರು ರಾಜ್ಯದಿಂದ ಹಾಗೂ ಹೊರರಾಜ್ಯದಿಂದಲೂ ಬಂದು ದೇವಿಯ ದರ್ಶನ ಪಡೆಯುತ್ತಾರೆ. ಇಂತಹ ಶ್ರದ್ಧಾ ಕೇಂದ್ರದಲ್ಲಿ ಈ ಘಟನೆ ನಡೆದಿರುವುದು, ಮನುಷ್ಯ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ದೇವಾಲಯದ ಪಕ್ಕದಲ್ಲಿರುವ ಮುಳ್ಳಿನ ಪೊದೆಯಲ್ಲಿ ನವಜಾತ ಶಿಶುವನ್ನು ಎಸೆದು ಹೋಗಿದ್ದಾರೆ.

ಹೆಣ್ಣು ಮಗು ಎಂಬ ಕಾರಣಕ್ಕೆ ದೇವಾಲಯದ ಪಕ್ಕದಲ್ಲಿ ಮಗುವನ್ನು ಎಸೆದು ಹೋಗಿದ್ದಾರೆ ಎಂದು ಅಲ್ಲಿನ ಜನ ಹೇಳಿದ್ದಾರೆ. ಈ ಮಗು ಜನಿಸಿ ಒಂದು ದಿನ ಆಗಿರಬಹುದು ಎಂದು ಹೇಳಲಾಗಿದೆ. ಮಗು ಅಳುತ್ತಿರುವುದು ಕೇಳಿ ದೇವಸ್ಥಾನದ ಹೋಮ್ ಗಾರ್ಡ್​​ಗಳು ಸ್ಥಳಕ್ಕೆ ಬಂದು ನೋಡಿದ್ದಾರೆ. ತಕ್ಷಣ ಮಗುವನ್ನು ಎತ್ತಿಕೊಂಡು ಸಮಾಧಾನ ಮಾಡಲು ಪ್ರಯತ್ನಿಸಿದ್ದಾರೆ. ಅಮ್ಮನ ಎದೆಹಾಲು ಇಲ್ಲದೆ ಹಸಿವಿನಿಂದ ಮಗು ಒದ್ದಾಡಿದೆ. ತಕ್ಷಣ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದ್ದಾರೆ. ಇನ್ನು ಈ ಮಗುವಿನ ಪೋಷಕರು ಯಾರು ಎಂಬ ಕಾರ್ಯಚರಣೆ ನಡೆಯುತ್ತಿದೆ. ಮದುವೆಗೂ ಮುನ್ನವೇ ಗರ್ಭಿಣಿಯಾಗಿ, ಮಗುವನ್ನು ಪಡೆದಿರುವ ಕಾರಣಕ್ಕೆ ಮಗುವನ್ನು ಎಸೆದು ಹೋಗಿದ್ದಾರೆ ಎಂದು ಶಂಕಿಸಲಾಗಿದೆ.

ದೇವಸ್ಥಾನದ ಪಕ್ಕದಲ್ಲಿರುವ ಮುಳ್ಳಿನ ಪೊದೆಯಲ್ಲಿ ಎಸೆದು ಹೋಗಿರುವ ಕಾರಣ, ಮಗುವಿನ ಮೇಲೆ ಹುಳುಗಳು ಮೆತ್ತಿಕೊಂಡು ನೋವಿನಿಂದ ಮಗು ಕೂಗುತ್ತಿತ್ತು. ಇದನ್ನು ಗಮನಿಸಿದ ಹುಲಗೆಮ್ಮ ದೇವಸ್ಥಾನದಲ್ಲಿ ಕೆಲಸ ಮಾಡತಿದ್ದ,ಹೋಮ್ ಗಾರ್ಡ್ ಗಳು ಮಗುವಿನ ರಕ್ಷಣೆ ಮಾಡಿ, ಹುಲಗಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿದ್ದಾರೆ. ಇದೀಗ ಮಗು ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿದೆ. ಮಗುವ ಆರೋಗ್ಯವಾಗಿದೆ ಎಂದು ಆಸ್ಪತ್ರೆ ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ

ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗು ಸುಮಾರು 2 ಕೆಜಿ 400 ಗ್ರಾಂ ಇದೆ. ಹುಲಗಿಯಲ್ಲಿ ಕೆಲಸ ಮಾಡತಿದ್ದ ಹೋಮ್ ಗಾರ್ಡ್ ಗಳಾದ ಶಿವಕುಮಾರ್ ಹಾಗೂ ಮಾರುತಿ ಅವರ ಸಮಯ ಪ್ರಜ್ಜೆಯಿಂದ ನವಜಾತ ಶಿಶು ಬದುಕಿದೆ. ಮಗುವಿಗೆ ಮುಳ್ಳು ಚುಚ್ಚಿಕೊಂಡಿದ್ದು, ಹಾಗೂ ಹುಳುಗಳು ಕಚ್ಚಿರುವುದರಿಂದ ನಂಜಾಗಿರುವ ಸಾಧ್ಯತೆಗಳು ಇದೆ ಎಂದು ವೈದ್ಯ ಗೀರಿಶ್ ಹೇಳಿದ್ದಾರೆ. ಮಕ್ಕಳಾ ರಕ್ಷಣಾ ಘಟಕದ ಅಧಿಕಾರಿಗಳು ಆಸ್ಪತ್ರೆಗೆ ಧಾವಿಸಿದ್ದು, ಮಗುವಿನ ಬಗ್ಗೆ ವಿಚಾರಣೆ ನಡೆಸಿದ್ದಾರೆ. ಮಗುವಿನ ಪೋಷಕರ ಬಗ್ಗೆಯೂ ಕಾರ್ಯಚರಣೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಒಂದು ವೇಳೆ ಮಗುವಿನ ಪೋಷಕರ ಸಿಕ್ಕಿಲ್ಲ ಎಂದರೆ ಮಗುವನ್ನು ದತ್ತು ನೀಡುವ ಪ್ರತಿಕ್ರಿಯೆ ನಡೆಸುತ್ತೇವೆ ಎಂದು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಆಲ್ಫಾ’ ಸಿನಿಮಾದ ‘ರಾವ ರಾವ’ ಕಲರ್​ಫುಲ್ ಹಾಡಿಗೆ ಅನೂಪ್ ಸೀಳಿನ್ ಸಂಗೀತ – Kannada News | Hemanth Kumar starrer Alpha Men Love Vengeance movie Rawa Rawa Song released

ನಿರ್ದೇಶಕ ವಿಜಯ್ ಅವರು ಈ ಮೊದಲು ‘ಗೀತಾ’ ಮತ್ತು ‘ಹೊಯ್ಸಳ’ ಸಿನಿಮಾಗಳನ್ನು ಮಾಡಿದ್ದರು. ಈಗ ಅವರು ‘ಆಲ್ಫಾ’ (Alpha) ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ‘ಆಲ್ಫಾ – ಮೆನ್ ಲವ್ ವೆಂಜೆನ್ಸ್’ (Alpha Men Love Vengeance) ಎಂಬುದು ಈ ಸಿನಿಮಾದ ಪೂರ್ತಿ ಟೈಟಲ್. ಈ ಸಿನಿಮಾದಿಂದ ಈಗೊಂದು ಹೊಸ ಹಾಡು ಬಿಡುಗಡೆ ಆಗಿದೆ. ‘ರಾವ ರಾವ’ ಎಂಬ ಈ ಹಾಡನ್ನು ಅದ್ದೂರಿಯಾಗಿ ಚಿತ್ರಿಸಲಾಗಿದೆ. ತುಂಬ ಕಲರ್​​ಫುಲ್ ಆಗಿ ಈ ಹಾಡು ಮೂಡಿಬಂದಿದೆ. ಹಾಡಿನ ಬಿಡುಗಡೆ ಬಳಿಕ ‘ಆಲ್ಫಾ’ ಸಿನಿಮಾ ಮೇಲಿನ ಕೌತುಕ ಹೆಚ್ಚಿದೆ.

‘ಆಲ್ಫಾ’ ಸಿನಿಮಾದಲ್ಲಿ ನಾಯಕನಾಗಿ ಹೇಮಂತ್‌ ಕುಮಾರ್ ಅವರು ರಗಡ್ ಲುಕ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಈ ಸಿನಿಮಾದ ಮೊದಲ ಹಾಡು ‘ರಾವ ರಾವ..’ ಬಿಡುಗಡೆ ಆಗಿ ಜನಮೆಚ್ಚುಗೆ ಪಡೆಯುತ್ತಿದೆ. ಈ ಹಾಡಿಗೆ ಅನೂಪ್ ಸೀಳಿನ್ ಅವರು ಸಂಗೀತ ನೀಡಿದ್ದಾರೆ. ನಾಗಾರ್ಜುನ ಶರ್ಮಾ ಅವರು ಸಾಹಿತ್ಯ ಬರೆದಿದ್ದಾರೆ. ಅನೂರಾಗ ಕುಲಕರ್ಣಿ ಅವರ ಕಂಠದಲ್ಲಿ ಈ ಹಾಡು ಮೂಡಿಬಂದಿದೆ.

 ‘ರಾವ ರಾವ’ ಹಾಡು:

ಈ ಮೊದಲು ‘ಆಲ್ಫಾ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿ ಗಮನ ಸೆಳೆದಿತ್ತು. ಇದು ಆ್ಯಕ್ಷನ್ ಜೊತೆಗೆ ಅಪ್ಪ-ಮಗನ ಭಾವನಾತ್ಮಕ ಕಥೆ ಹೊಂದಿರುವ ಸಿನಿಮಾ ಎಂದು ಚಿತ್ರತಂಡ ಹೇಳಿದೆ. ಈ ಸಿನಿಮಾ ಮೂಲಕ ಹೇಮಂತ್ ಕುಮಾರ್ ಅವರು ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಹಾಡಿನಲ್ಲಿ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ.

ಸಿನಿಮಾ ಬಗ್ಗೆ ನಿರ್ದೇಶಕ ವಿಜಯ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಆ್ಯಕ್ಷನ್ ಮತ್ತು ಕ್ರೈಂನ ಭಯಾನಕತೆ ಎಷ್ಟಿರುತ್ತದೆ ಎಂಬುದು ಸಿನಿಮಾದ ಪೋಸ್ಟರ್​ನಲ್ಲಿ ಕಾಣಿಸಿಕೊಂಡಿದೆ. ಸಿನಿಮಾದಲ್ಲಿ 3 ಪಾತ್ರಗಳು ಪ್ರಮುಖವಾಗಿ ಬರಲಿವೆ’ ಎಂದು ಅವರು ಹೇಳಿದ್ದಾರೆ. ಆನಂದ್ ಕುಮಾರ್ ಅವರು ನಿರ್ಮಾಪಕರಾಗಿ ಈ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ.

ಇದನ್ನೂ ಓದಿ: ‘ಆಲ್ಫಾ’ ಸಿನಿಮಾ ಫಸ್ಟ್ ಲುಕ್; ಹೀರೋ ಆದ ಹೇಮಂತ್ ಕುಮಾರ್

ನಟ ಹೇಮಂತ್ ಕುಮಾರ್ ಅವರು ‘ಆಲ್ಫಾ’ ಸಿನಿಮಾಗಾಗಿ ಸಾಕಷ್ಟು ತಯಾರಿ ಮಾಡಿಕೊಂಡು ಬಂದಿದ್ದಾರೆ. ರಾಘು ಶಿವಮೊಗ್ಗ ಬಳಿ ಅವರು ನಟನೆಯ ತಯಾರಿ ನಡೆಸಿದ್ದಾರೆ. ಅರ್ಜುನ್ ಜೊತೆ ಸಾಹಸ ಅಭ್ಯಾಸ ಮಾಡಿದ್ದಾರೆ. ಅಲ್ಲದೇ, ಡ್ಯಾನ್ಸ್ ಮತ್ತು ಮಾರ್ಷಲ್ ಆರ್ಟ್ ಕಲಿತು ಹೀರೋ ಆಗಲು ಬೇಕಾದ ಪೂರ್ತಿ ತಯಾರಿ ಮಾಡಿಕೊಂಡು ಎಂಟ್ರಿ ನೀಡಿದ್ದಾರೆ. ಕಾರ್ತಿಕ್ ಛಾಯಾಗ್ರಹಣ ಮಾಡಿರುವ ಈ ಸಿನಿಮಾಗೆ ಮಾಸ್ತಿ ಅವರು ಸಂಭಾಷಣೆ ಬರೆದಿದ್ದಾರೆ. ನಾಯಕಿ ಯಾರು ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪುಟಿನ್ ನಿವಾಸದ ಮೇಲಿನ ಉಕ್ರೇನ್ ದಾಳಿಗೆ ಪ್ರಧಾನಿ ಮೋದಿ ಖಂಡನೆ – Kannada News | PM Narendra Modi condemns Ukraine attack on Russia President Putin residence

ನವದೆಹಲಿ, ಡಿಸೆಂಬರ್ 30: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ನಿವಾಸದ ಮೇಲೆ ಉಕ್ರೇನ್ ದಾಳಿ ಮಾಡಿದೆ ಎಂಬ ವರದಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸಲು ಎರಡೂ ದೇಶಗಳು ರಾಜತಾಂತ್ರಿಕ ಪ್ರಯತ್ನಗಳತ್ತ ಗಮನಹರಿಸುವಂತೆ ಅವರು ಒತ್ತಾಯಿಸಿದ್ದಾರೆ.

“ರಷ್ಯಾದ ಅಧ್ಯಕ್ಷರ ನಿವಾಸದ ಮೇಲೆ ದಾಳಿ ನಡೆದಿದೆ ಎಂಬ ವರದಿಗಳಿಂದ ತೀವ್ರ ಕಳವಳಗೊಂಡಿದ್ದೇನೆ. ಎರಡೂ ದೇಶಗಳ ನಡುವೆ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸಲು ಮತ್ತು ಶಾಂತಿಯನ್ನು ಸಾಧಿಸಲು ಮಾಡಲಾಗಿರುವ ರಾಜತಾಂತ್ರಿಕ ಪ್ರಯತ್ನಗಳು ಇಂತಹ ದಾಳಿಗಳಿಂದ ವ್ಯರ್ಥವಾಗುತ್ತವೆ. ಆದಷ್ಟೂ ಶಾಂತಿಯುತವಾಗಿ ಸಮಸ್ಯೆ ಬಗೆಹರಿಸುವ ಪ್ರಯತ್ನಗಳ ಮೇಲೆ ಗಮನಹರಿಸಲು ನಾವು ಎರಡೂ ದೇಶಗಳಿಗೆ ಮನವಿ ಮಾಡುತ್ತೇವೆ” ಎಂದು ಪ್ರಧಾನಿ ಮೋದಿ ಎಕ್ಸ್​​ನ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಫೆಬ್ರವರಿ 2022ರಲ್ಲಿ ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾದಾಗಿನಿಂದ ಪ್ರಧಾನಿ ಮೋದಿ ಎರಡೂ ದೇಶಗಳ ನಡುವೆ ಸಂವಾದ ಮತ್ತು ರಾಜತಾಂತ್ರಿಕತೆಗೆ ಒತ್ತು ನೀಡುತ್ತಿದ್ದಾರೆ.

ಇದನ್ನೂ ಓದಿ: ಝೆಲೆನ್ಸ್ಕಿ- ಟ್ರಂಪ್ ಶಾಂತಿ ಮಾತುಕತೆಗೂ ಮುನ್ನ ಉಕ್ರೇನ್ ಮೇಲೆ ರಷ್ಯಾ ದಾಳಿ

ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ನಿನ್ನೆ ಮಾಸ್ಕೋ ಮತ್ತು ಸೇಂಟ್ ಪೀಟರ್ಸ್ಬರ್ಗ್ ನಡುವಿನ ಪುಟಿನ್ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ ನಡೆಸಿದೆ ಎಂದು ಆರೋಪಿಸಿದ್ದರು. ಅವರ ಪ್ರಕಾರ, ನವ್ಗೊರೊಡ್ ಪ್ರದೇಶದಲ್ಲಿ ಪುಟಿನ್ ಅವರ ಅಧಿಕೃತ ನಿವಾಸದಲ್ಲಿ 91 ಡ್ರೋನ್‌ಗಳನ್ನು ತಡೆಹಿಡಿದು ಹೊಡೆದುರುಳಿಸಲಾಯಿತು. ಈ ಘಟನೆಯಿಂದ ಯಾವುದೇ ಹಾನಿ ಅಥವಾ ಸಾವುನೋವುಗಳು ಸಂಭವಿಸಿಲ್ಲ. ಆದರೆ, ಉಕ್ರೇನ್​ನ ಈ ದಾಳಿಯಿಂದಾಗಿ ರಷ್ಯಾ ಶಾಂತಿ ಮಾತುಕತೆಗೆ ಒಪ್ಪಬೇಕೇ ಬೇಡವೇ ಎಂಬುದನ್ನು ಮರುಪರಿಶೀಲಿಸಲಾಗುವುದು” ಎಂದು ಲಾವ್ರೊವ್ ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಏರ್ ಇಂಡಿಯಾ ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜಿಸಿದ ವ್ಯಕ್ತಿ – Kannada News | Air India Passenger Urinates on Co passenger Flight Safety Concerns Rise

ನವದೆಹಲಿ, ಡಿಸೆಂಬರ್ 30: ದೆಹಲಿಯಿಂದ ಬ್ಯಾಂಕಾಕ್​ಹೆ ಹೊರಟಿದ್ದ ಏರ್ ಇಂಡಿಯಾ(Air India) ವಿಮಾನದಲ್ಲಿ ಮಾನಮತ್ತ ಪ್ರಯಾಣಿಕನೊಬ್ಬ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜಿಸಿರುವ ಘಟನೆ ನಡೆದಿದೆ. ಇದು ವಿಮಾನಯಾನ ಸುರಕ್ಷತೆ ಮತ್ತು ಪ್ರಯಾಣಿಕರ ನಡವಳಿಕೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ .

ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ, ಕುಡುಕ ಪ್ರಯಾಣಿಕನೊಬ್ಬ ವಿಮಾನ ಕ್ಯಾಬಿನ್ ಒಳಗೆ ಮೂತ್ರ ವಿಸರ್ಜಿಸುತ್ತಿರುವುದನ್ನು ತೋರಿಸುತ್ತದೆ, ಅವರು ಬಿಸಿನೆಸ್ ಕ್ಲಾಸ್ ಕ್ಯಾಬಿನ್‌ನಲ್ಲಿ ಪ್ರಯಾಣಿಸುತ್ತಿದ್ದರು. ಸಹ ಪ್ರಯಾಣಿಕರಲ್ಲಿ ಒಬ್ಬರಾದ ಶಿವಮ್ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಇಡೀ ಘಟನೆಯನ್ನು ವಿವರಿಸಿದ್ದಾರೆ, ಕುಡಿದ ಅಮಲಿನಲ್ಲಿದ್ದ ಪ್ರಯಾಣಿಕ ಇತರ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜಿಸಲು ಪ್ರಾರಂಭಿಸಿದ್ದ.

ಆದರೆ ಆತನ ಮೇಲೆ ಯಾವುದೇ ಕ್ರಮ ಯಾಕೆ ಕೈಗೊಂಡಿಲ್ಲ ಎಂದು ಪ್ರಯಾಣಿಕರು ಪ್ರಶ್ನೆ ಮಾಡುತ್ತಿದ್ದಾರೆ. ವಿಮಾನದಲ್ಲಿರುವ ಪ್ರಯಾಣಿಕರನ್ನು ರಕ್ಷಿಸಲು ಯಾವುದೇ ಕಾನೂನು ಅಥವಾ ಸುರಕ್ಷತಾ ಪ್ರೋಟೋಕಾಲ್ ಇಲ್ಲವೇ, ಬಿಸಿನೆಸ್ ಕ್ಲಾಸ್​ನಲ್ಲಿ ಹೋಗುವ ನಮಗೆ ಯಾರಾದರೂ ಉಚಿತ ಪಾಸ್ ಕೊಡುತ್ತಿದ್ದಾರಾ, ಒಂದು-ಮಾರ್ಗ ಟಿಕೆಟ್‌ಗಾಗಿ ಸುಮಾರು $1,000 ( 80,000 ರೂ.) ಖರ್ಚು ಮಾಡಿ, ಇಂಥಾ ಘಟನೆಗಳನ್ನು ನೋಡುವುದು ನಿಜಕ್ಕೂ ವಿಪರ್ಯಾಸ ಎಂದು ಬರೆದಿದ್ದಾರೆ.

ಮತ್ತಷ್ಟು ಓದಿ: ಏರ್ ಇಂಡಿಯಾ ಅಪಘಾತ, ತಪ್ಪು ವರದಿ ಕೊಟ್ಟು ಮೃತ ಪೈಲಟ್ ಮೇಲೆ ಆರೋಪ ಹೊರಿಸ್ಬೇಡಿ, ಮೃತರ ಸಂಬಂಧಿಕರ ಮಾತು

ಅದೃಷ್ಟವಶಾತ್ ಬ್ಯುಸಿನೆಸ್ ಕ್ಲಾಸ್‌ನಲ್ಲಿ ಯಾವುದೇ ಮಹಿಳಾ ಪ್ರಯಾಣಿಕರು ಇರಲಿಲ್ಲ, ಒಬ್ಬ ಮಹಿಳೆ ಒಂಟಿಯಾಗಿ ಪ್ರಯಾಣಿಸುತ್ತಿದ್ದರೆ ಮತ್ತು ಈ ರೀತಿಯ ಅನುಭವವಾದರೆ ಮತ್ತೆಂದು ಒಬ್ಬಂಟಿಯಾಗಿ ಬರಲು ಹಿಂಜರಿಯುತ್ತಾಳೆ.

ಏರ್ ಇಂಡಿಯಾ ವಿಮಾನದಲ್ಲಿ ಈ ರೀತಿ ನಡೆದಿರುವುದು ಇದೇ ಮೊದಲಲ್ಲ, ನವೆಂಬರ್ 2022 ರಲ್ಲಿ ನ್ಯೂಯಾರ್ಕ್ ನಿಂದ ದೆಹಲಿಗೆ ಹೋಗುವ ಏರ್ ಇಂಡಿಯಾ ವಿಮಾನದಲ್ಲಿ, ಕುಡಿದ ಮತ್ತಿನಲ್ಲಿದ್ದ ಪ್ರಯಾಣಿಕರೊಬ್ಬರು ಬಿಸಿನೆಸ್ ಕ್ಲಾಸ್ ನಲ್ಲಿ ಹಿರಿಯ ಮಹಿಳಾ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದರು.

ವಿಮಾನದ ವಿಡಿಯೋ

ಆ ಸಂದರ್ಭದಲ್ಲಿ, ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಆ ಪ್ರಯಾಣಿಕನಿಗೆ 30 ದಿನಗಳವರೆಗೆ ಹಾರಾಟ ನಿಷೇಧಿಸಿತು, ಶಿಕ್ಷೆಯು ಅಸಮರ್ಪಕ ಎಂದು ಜನರು ಕರೆಯಲಾಗಿತ್ತು. ವಿಮಾನಗಳಲ್ಲಿ ಮದ್ಯಪಾನವನ್ನು ನಿಷೇಧಿಸಬೇಕು ಎನ್ನುವ ಒತ್ತಾಯ ಕೇಳಿಬಂದಿತ್ತು.ಘಟನೆಯ ಬಗ್ಗೆ ಏರ್ ಇಂಡಿಯಾ ಇಲ್ಲಿಯವರೆಗೆ ಯಾವುದೇ ಹೇಳಿಕೆಯನ್ನು ನೀಡಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕೆಸಿ ವೇಣುಗೋಪಾಲ್ ಮಾತು ಕೇಳಿ ಆಡಳಿತ ಮಾಡುವುದು 6 ಕೋಟಿ ಜನತೆಗೆ ಮಾಡಿದ ಅವಮಾನ; ಲಹರ್ ಸಿಂಗ್ – Kannada News | Governing by Listening to KC Venugopal Is an Insult to 6 Crore People: Says lahar singh siroya

ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ

ಬೆಂಗಳೂರು, ಡಿಸೆಂಬರ್​ 30: ಕೋಗಿಲು (Kogilu Layout) ನಿರಾಶ್ರಿತರ ಬೆನ್ನಿಗೆ ಸರ್ಕಾರ ನಿಂತಿದೆ. ರಾಜೀವ್ ಗಾಂಧಿ ವಸತಿ ಯೋಜನೆ ಅಡಿ ಮನೆ ಕೊಡಲು ಮುಂದಾಗಿದೆ. ಅಕ್ರಮ ಒತ್ತುವರಿ ತೆರವು ಮಾಡಿ, ಮನೆ ಕೊಡುತ್ತಿರುವ  ಸರ್ಕಾರದ ನಡೆ ವಿಪಕ್ಷಗಳ ಪಾಲಿಗೆ ಬ್ರಹ್ಮಾಸ್ತ್ರವಾಗಿವಾಗಿದೆ. ರಾಜ್ಯದ 6 ಕೋಟಿ ಜನ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​​ರನ್ನು ಆಯ್ಕೆ ಮಾಡಿದ್ದಾರೆ. ಕೆ.ಸಿ.ವೇಣುಗೋಪಾಲ್​ರನ್ನು ಆಯ್ಕೆ ಮಾಡಿಲ್ಲ. ಜುಜುಬಿ ವೇಣುಗೋಪಾಲ್ ಮಾತು ಕೇಳಿಕೊಂಡು ಆಡಳಿತ ಮಾಡುವುದು 6 ಕೋಟಿ ಜನರಿಗೆ ಮಾಡಿರುವ ಅವಮಾನ ಎಂದು ರಾಜ್ಯಸಭಾ ಬಿಜೆಪಿ ಸದಸ್ಯ ಲಹರ್ ಸಿಂಗ್ ಸಿರೋಯಾ (Lehar Singh Siroya) ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ಲಹರ್ ಸಿಂಗ್ ಸಿರೋಯಾ ಕಿಡಿ

ಕೋಗಿಲು ಲೇಔಟ್​ ನಿವಾಸಿಗಳಿಗೆ ಮನೆ ಹಂಚಿಕೆಗೆ ನಿರ್ಧಾರ ವಿಚಾರವಾಗಿ ಟಿವಿ9 ಜೊತೆಗೆ ಮಾತನಾಡಿದ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ, ಈ ಸರ್ಕಾರದಿಂದ ಏನೂ ಅಪೇಕ್ಷೆ ಪಡಲು ಸಾಧ್ಯವೇ ಇಲ್ಲ. ಸೋ ಕಾಲ್ಡ್ ಪವರ್ ಫುಲ್ ಲೀಡರ್​​​ಗಳಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಕೆ.ಸಿ.ವೇಣುಗೋಪಾಲ್ ಮಾತು ಕೇಳಿ ನಾಚಿಕೆಗೇಡಿನ ಕೆಲಸ ಮಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.

ಇದನ್ನೂ ಓದಿ: ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಕೇರಳಕ್ಕಾಗಿ ಈವರೆಗೆ ಏನೇನು ಮಾಡಿದ್ರು? ಪಟ್ಟಿ ಸಮೇತ ಟಾಂಗ್ ಕೊಟ್ಟ ಜೆಡಿಎಸ್

ಕೆಸಿ ವೇಣುಗೋಪಾಲ ಅಂತಹವರು ನಮ್ಮ ಸರ್ಕಾರ ನಡೆಸಬೇಕಾ? ಅವರ ಆದೇಶ ನಾವು ಪಾಲಿಸಬೇಕಾ? ಈ ಸರ್ಕಾರ ಕೇವಲ ಕುರ್ಚಿ ಜಗಳಕ್ಕೆ ಮಾತ್ರ ಸೀಮಿತ ಅಷ್ಟೇ. ಪ್ರವಾಹ ಸಂತ್ರಸ್ತರಿಗೆ ಮನೆ ಕೊಟ್ಟಿಲ್ಲ, ಡ್ರಗ್ಸ್ ಸಮಸ್ಯೆ ಸರಿಪಡಿಸಿಲ್ಲ, ಇಂತಹ ಸರ್ಕಾರ ನಮಗೆ ಸಿಕ್ಕಿರುವುದು ದುರದೃಷ್ಟಕರ. ಪಾಕಿಸ್ತಾನ ಪ್ರತಿಕ್ರಿಯೆ ಕೊಡುತ್ತದೆ ಎಂದರೆ, ಇದು ಬಹಳ ಭಯನಕ ಟ್ರೆಂಡ್. ಪಶ್ಚಿಮ ಬಂಗಾಳ ರೀತಿ ಇಲ್ಲಿ ಆದರೆ ನಮ್ಮ ಗತಿ ಏನು ಎಂದು ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಬರ–ಪ್ರವಾಹಕ್ಕೆ ವರ್ಷಗಳ ನಿರೀಕ್ಷೆ, ಕೋಗಿಲು ಲೇಔಟ್‌ಗೆ ಎರಡು ದಿನಗಳಲ್ಲಿ ಪರಿಹಾರ: ಸರ್ಕಾರದ ವಿರುದ್ಧ ಗುಡುಗಿದ ಜೋಶಿ

ಇನ್ನು ಎಐಸಿಸಿಯ ಕೆ.ಸಿ. ವೇಣು ಗೋಪಾಲ್ ಹೇಳಿದ್ರು ಅನ್ನೋ ಒಂದೇ ಕಾರಣಕ್ಕೆ ಇಷ್ಟು ದೊಡ್ಡ ನಿರ್ಧಾರ ಮಾಡಿರೋದನ್ನ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ. ಕಾಂಪಿಟೇಷನ್ ಮೇಲೆ ಸಿಎಂ, ಡಿಸಿಎಂ ಹೈಕಮಾಂಡ್ ಓಲೈಕೆ ಮಾಡ್ತಿದ್ದಾರೆಂದು ಆರೋಪಿಸಿದ್ದಾರೆ. ಆದರೆ ಡಿಸಿಎಂ ಡಿಕೆ ಶಿವಕುಮಾರ್​ ಮಾತ್ರ ಇದನ್ನ ತಳ್ಳಿಹಾಕಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

BSF Recruitment 2025: 10th ಪಾಸಾದವರಿಗೆ ಗಡಿ ಭದ್ರತಾ ಪಡೆಗೆ ಸೇರಲು ಸುವರ್ಣವಕಾಶ; ಯಾವುದೇ ಲಿಖಿತ ಪರೀಕ್ಷೆಯಿಲ್ಲ! – Kannada News | BSF Constable Recruitment 2025: 549 Sports Quota Posts Apply Online Now!

ಗಡಿ ಭದ್ರತಾ ಪಡೆ (BSF) ಕ್ರೀಡಾ ಕೋಟಾದಡಿಯಲ್ಲಿ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 549 ಕಾನ್ಸ್‌ಟೇಬಲ್ ಹುದ್ದೆಗಳನ್ನು ಅಂದರೆ 277 ಹುದ್ದೆಗಳು ಪುರುಷರಿಗೆ ಮತ್ತು 272 ಹುದ್ದೆಗಳು ಮಹಿಳೆಯರಿಗೆ ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ 10 ನೇ ತರಗತಿ ಪಾಸಾದವರು ಮತ್ತು ಕ್ರೀಡೆಯಲ್ಲಿ ಪರಿಣತಿ ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು. ಅಲ್ಲದೆ, ಕಳೆದ ಎರಡು ವರ್ಷಗಳಲ್ಲಿ, ಅಥ್ಲೆಟಿಕ್ಸ್, ಬಾಕ್ಸಿಂಗ್, ಬ್ಯಾಸ್ಕೆಟ್‌ಬಾಲ್, ವಾಲಿಬಾಲ್, ಹ್ಯಾಂಡ್‌ಬಾಲ್, ಫುಟ್‌ಬಾಲ್, ಹಾಕಿ, ಈಜು, ಶೂಟಿಂಗ್, ಜೂಡೋ, ಕರಾಟೆ, ಕುಸ್ತಿ, ವೇಟ್‌ಲಿಫ್ಟಿಂಗ್, ಟೇಬಲ್ ಟೆನ್ನಿಸ್, ಬಿಲ್ಲುಗಾರಿಕೆ, ಬ್ಯಾಡ್ಮಿಂಟನ್, ಸೈಕ್ಲಿಂಗ್, ಜಲ ಕ್ರೀಡೆ, ವುಶು ಮುಂತಾದ ಯಾವುದೇ ಕ್ರೀಡೆಗಳಲ್ಲಿ ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ಚಿನ್ನ, ಬೆಳ್ಳಿ ಅಥವಾ ಕಂಚಿನ ಪದಕಗಳನ್ನು ಗೆದ್ದಿರಬೇಕು.

ಅಧಿಸೂಚನೆಯಲ್ಲಿ ಸೂಚಿಸಿದಂತೆ, ಪುರುಷರ ದೈಹಿಕ ಮಾನದಂಡಗಳು 170 ಸೆಂಟಿಮೀಟರ್ ಮತ್ತು ಮಹಿಳೆಯರಿಗೆ 157 ಸೆಂಟಿಮೀಟರ್ ಆಗಿರಬೇಕು. ಪುರುಷರ ಎದೆಯ ಸುತ್ತಳತೆ 80 ಸೆಂಟಿಮೀಟರ್ ಆಗಿರಬೇಕು. ಉಸಿರಾಡುವಾಗ 5 ಸೆಂಟಿಮೀಟರ್ ಹೆಚ್ಚಾಗಬೇಕು. ಎಸ್‌ಟಿಯ ಎತ್ತರ 76 ಸೆಂಟಿಮೀಟರ್ ಆಗಿರಬೇಕು ಮತ್ತು ಉಸಿರಾಡುವಾಗ 5 ಸೆಂಟಿಮೀಟರ್ ಹೆಚ್ಚಾಗಬೇಕು. ಎತ್ತರ ಮತ್ತು ತೂಕವು ವಯಸ್ಸಿಗೆ ಅನುಗುಣವಾಗಿರಬೇಕು. ವಯಸ್ಸು 23 ವರ್ಷ ಮೀರಬಾರದು. ಒಬಿಸಿಗಳಿಗೆ ಮೂರು ವರ್ಷ ಮತ್ತು ಎಸ್‌ಸಿ ಮತ್ತು ಎಸ್‌ಟಿಗೆ ಐದು ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗವಕಾಶ; ಸಂಶೋಧನಾ ಸಹಾಯಕ ಹುದ್ದೆಗೆ ನೇಮಕಾತಿ

ಈ ಅರ್ಹತೆಗಳನ್ನು ಹೊಂದಿರುವವರಿಗೆ ಜನವರಿ 1 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು. ಸಾಮಾನ್ಯ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ. 159 ಪಾವತಿಸಬೇಕು. ಎಸ್‌ಸಿ, ಎಸ್‌ಟಿ ಮತ್ತು ಮಹಿಳೆಯರಿಗೆ ಯಾವುದೇ ಶುಲ್ಕವಿಲ್ಲ. ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ದೈಹಿಕ ಗುಣಮಟ್ಟ ಪರೀಕ್ಷೆ (ಪಿಎಸ್‌ಟಿ) ಮತ್ತು ಅರ್ಹತೆಯ ಆಧಾರದ ಮೇಲೆ ಅಂತಿಮ ನೇಮಕಾತಿಗಳನ್ನು ಮಾಡಲಾಗುತ್ತದೆ. ಆಯ್ಕೆಯಾದವರಿಗೆ ತಿಂಗಳಿಗೆ 21,700 ರಿಂದ 69,100 ರೂ. ರವರೆಗೆ ವೇತನವನ್ನು ನೀಡಲಾಗುತ್ತದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:06 pm, Tue, 30 December 25

Source link

ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಕೇರಳಕ್ಕಾಗಿ ಈವರೆಗೆ ಏನೇನು ಮಾಡಿದ್ರು? ಪಟ್ಟಿ ಸಮೇತ ಟಾಂಗ್ ಕೊಟ್ಟ ಜೆಡಿಎಸ್ – Kannada News | ‘Kerala’s Chetta Siddaramaiah’? JDS Slams CM Over Kogilu Issue, Releases List of Alleged Favors to Kerala

ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಕೇರಳಕ್ಕಾಗಿ ಈವರೆಗೆ ಏನೇನು ಮಾಡಿದ್ರು? ಪಟ್ಟಿ ಸಮೇತ ಟಾಂಗ್ ಕೊಟ್ಟ ಜೆಡಿಎಸ್

ಬೆಂಗಳೂರು, ಡಿಸೆಂಬರ್ 30: ಬೆಂಗಳೂರಿನ (Bengaluru) ಕೋಗಿಲು ಕ್ರಾಸ್ ಬಡಾವಣೆಯಲ್ಲಿ ಅಕ್ರಮ ಶೆಡ್​​ಗಳ ತೆರವು ಹಾಗೂ ನಂತರದ ಬೆಳವಣಿಗೆಗಳು ಕರ್ನಾಟಕದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಬೆನ್ನಲ್ಲೇ ತಕ್ಷಣವೇ ಅಕ್ರಮ ಶೆಡ್​ಗಳಲ್ಲಿ ವಾಸಿಸುತ್ತಿದ್ದ ಕೇರಳಿಗರಿಗೆ ಮನೆ ನೀಡಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರ, ಪ್ರವಾಹ ಸೇರಿದಂತೆ ಪ್ರಾಕೃತಿಕ ವಿಕೋಪಗಳಿಂದ ನಿರಾಶ್ರಿತರಾದ ಕನ್ನಡಿಗರಿಗೇ ವರ್ಷಗಳಿಂದ ಪರಿಹಾರ ನೀಡದೇ ಇರುವ ವಿಚಾರ ಮುನ್ನೆಲೆಗೆ ಬಂದಿದೆ. ಇದೀಗ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಎಕ್ಸ್ ಮೂಲಕ ವಾಗ್ದಾಳಿ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಎಂದು ಜರೆದಿದೆ. ಅಲ್ಲದೆ, ಕೇರಳಕ್ಕಾಗಿ ಸಿದ್ದರಾಮಯ್ಯ ಈವರೆಗೆ ಏನೇನು ಮಾಡಿದ್ದಾರೆ ಎಂಬ ಪಟ್ಟಿ ನೀಡಿದೆ.

‘ಇದೊಂದು ಪ್ರಕರಣಕ್ಕೆ ಮಾತ್ರ ಸೀಮಿತ’ ಎಂದು ತಿಪ್ಪೇಸಾರುವ ಕೇರಳಿಗರ ಚೇಟಾ ಸಿದ್ದರಾಮಯ್ಯ ಅವರ ವಸತಿ ರಹಿತ ಕನ್ನಡಿಗರಿಗೆ ಮಿಡಿಯದ ಮಾನವೀಯತೆ, ಕೇರಳದ ಅಕ್ರಮ ವಲಸಿಗರಿಗೆ ಮಿಡಿಯುತ್ತಿರುವ ಇಬ್ಭಗೆ ನೀತಿಗೆ ಧಿಕ್ಕಾರವಿರಲಿ. ಹೈಕಮಾಂಡ್ ಆರ್ಡರ್‌ ಅನ್ನು ತಲೆಬಾಗಿ, ಕುರ್ಚಿ ಕಳೆದುಕೊಳ್ಳುವ ಭೀತಿಯಲ್ಲಿ ಅಕ್ರಮ ವಲಸಿಗರ ಪರವಾಗಿ, ತರಾತುರಿಯಲ್ಲಿ ಸಭೆಗಳನ್ನು ನಡೆಸಿ ಆದೇಶ ಹೊರಡಿಸಿ, ವಸತಿ ರಹಿತ ಕನ್ನಡಿಗರಿಗೆ ಬಗೆದ ವಿಶ್ವಾಸದ್ರೋಹವಲ್ಲವೇ? ಕರ್ನಾಟಕದಲ್ಲಿ ಸುಮಾರು 30 ಲಕ್ಷಕ್ಕೂ ಹೆಚ್ಚು ವಸತಿರಹಿತ ಬಡ ಕನ್ನಡಿಗರಿಗೆ ಸೂರಿಲ್ಲ. ವಸತಿ ಇಲಾಖೆಯ ಮನೆ ಹಂಚಿಕೆಗಾಗಿ ಅರ್ಜಿ ಸಲ್ಲಿಸಿ ಲಕ್ಷಾಂತರ ಜನರು ಹಗಲು ರಾತ್ರಿ ದುಡಿದ ಹಣವನ್ನು ಮುಂಗಡ ಕಟ್ಟಿ, ವರ್ಷಾನುಗಟ್ಟಲೇ ಇನ್ನೂ ಕಾಯುತ್ತಿದ್ದಾರೆ. ಇಂತಹ ನಿರ್ಗತಿಕರಿಗೆ ಮನೆಗಳನ್ನು ನೀಡುವ ಮನಸ್ಸು ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲವಾಗಿದೆ’ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ವೋಟ್‌ ಬ್ಯಾಂಕ್‌ಗಾಗಿ ಒಂದು ಸಮುದಾಯದ ಓಲೈಕೆ ಮಾಡುತ್ತಿರುವ ಕಾಂಗ್ರೆಸ್‌ ಪಕ್ಷ, ವಸತಿ ಸಚಿವ ಜಮೀರ್ ಅಹ್ಮದ್ ಕನ್ನಡಿಗರ ತೆರಿಗೆ ಹಣದಲ್ಲಿ ವಲಸಿಗರಿಗೆ 11.20 ಲಕ್ಷ ರೂ ವೆಚ್ಚದ ಮನೆಗಳನ್ನು ನೀಡಿ, ರಾಜ ಮಾರ್ಯಾದೆ ಕೊಡುತ್ತಿರುವುದು ರಾಜ್ಯದ ಜನರಿಗೆ ಮಾಡುತ್ತಿರುವ ವಂಚನೆ ಎಂದು ಜೆಡಿಎಸ್ ಟೀಕಿಸಿದೆ.

ಜೆಡಿಎಸ್ ಎಕ್ಸ್ ಸಂದೇಶ

ಹೈಕಮಾಂಡ್‌ನ ತೊಗಲುಗೊಂಬೆಯಾದ ಕಾಂಗ್ರೆಸ್‌ ಸರ್ಕಾರ ಎಂದು ಮತ್ತೊಂದು ಎಕ್ಸ್ ಸಂದೇಶದ ಮೂಲಕ ಕಿಡಿಕಾರಿದೆ.

ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಇಬ್ಬರನ್ನು ಹೈಕಮಾಂಡ್‌ ತನ್ನ ಕೈಗೊಂಬೆಯಾಗಿಸಿಕೊಂಡು ಆಟವಾಡಿಸುತ್ತಿದೆ. ಕೇರಳದ ಅಕ್ರಮ ವಲಸಿಗರಿಗೆ ಬೆಂಗಳೂರಿನಲ್ಲಿ 11.20 ಲಕ್ಷ ರೂ. ಮೌಲ್ಯದ ಮನೆ ಗ್ಯಾರಂಟಿ, ಕೇರಳದ ವಯನಾಡಿನ ಸಂತ್ರಸ್ತರಿಗೆ 10 ಕೋಟಿ ರೂ. ವೆಚ್ಚದಲ್ಲಿ 100 ಮನೆ, ಆನೆದಾಳಿಗೆ ಬಲಿಯಾದ ಕೇರಳದ ವ್ಯಕ್ತಿಗೆ 15 ಲಕ್ಷ ರೂ. ಪರಿಹಾರ, ಇದು ಕನ್ನಡಿಗರ ವಿರೋಧಿ ಕಾಂಗ್ರೆಸ್​​​​ನಿಂದ ರಾಜ್ಯದ ಜನತೆಗೆ ನಿರಂತರವಾಗಿ ಆಗುತ್ತಿರುವ ಅನ್ಯಾಯ ಎಂದು ಜೆಡಿಎಸ್ ಹೇಳಿದೆ.

ಇದನ್ನೂ ಓದಿ: ಬರ–ಪ್ರವಾಹಕ್ಕೆ ವರ್ಷಗಳ ನಿರೀಕ್ಷೆ, ಕೋಗಿಲು ಲೇಔಟ್‌ಗೆ ಎರಡು ದಿನಗಳಲ್ಲಿ ಪರಿಹಾರ: ಸರ್ಕಾರದ ವಿರುದ್ಧ ಗುಡುಗಿದ ಜೋಶಿ

ಭೂಸ್ವಾಧೀನ ವಿರೋಧಿಸಿದ ರೈತರ ಮೇಲೆ ಕೋಪ, ಆಕ್ರೋಶ. ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನೆಲೆಸಿರುವ ವಲಸಿಗ ಕೇರಳಿಗರ ಮೇಲೆ ಮೃದುಧೋರಣೆ. ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕೀಯಕ್ಕೆ ಧಿಕ್ಕಾರ ಎಂದು ಜೆಡಿಎಸ್ ಉಲ್ಲೇಖಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link