ತೆಲಂಗಾಣ ಟೆಕ್ಕಿ ದಂಪತಿಯ ಜೀವವನ್ನೇ ತೆಗೆಯಿತು ಎಐ! ಆಗಿದ್ದೇನು ಗೊತ್ತಾ?
ಬೆಂಗಳೂರು, ಏಪ್ರಿಲ್ 01: ಮಂಗಳವಾರ ಬೆಳಗ್ಗೆ ತೆಲಂಗಾಣ ಮೂಲದ ಟೆಕ್ಕಿ ದಂಪತಿ ಆತ್ಮಹತ್ಯೆ (Suicide) ಮಾಡಿಕೊಂಡಿರುವುದು ಬೆಳಕಿಗೆ ಬಂದಿತ್ತು. ಪ್ರಾಥಮಿಕವಾಗಿ ಕೌಟುಂಬಿಕ ಕಲಹದ ಹಿನ್ನೆಲೆ ಗಂಡ-ಹೆಂಡತಿ ಇಬ್ಬರೂ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಆದರೆ ಟೆಕ್ಕಿ ಸಾವಿಗೆ ನಿಜವಾದ ಕಾರಣ ಈಗ ಬಯಲಾಗಿದೆ. ಕೃತಕ ಬುದ್ಧಿಮತ್ತೆ (AI) ಹೊಡೆತಕ್ಕೆ ಕೆಲಸ ಕಳೆದುಕೊಂಡಿದ್ದ ಭಾನು ಚಂದರ್ ರೆಡ್ಡಿ, ಖಿನ್ನತೆಯಿಂದ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ತೆಲಂಗಾಣ ಮೂಲದ 32 ವರ್ಷದ ಭಾನು ಚಂದರ್ ರೆಡ್ಡಿ…