Headlines

nagaraj11081993

3 ಸಾವಿರ ಕೋಟಿ ಒಡೆಯ ಸಲ್ಮಾನ್ ಖಾನ್; ಹೂಡಿಕೆಗಳನ್ನು ನೋಡಿದ್ರೆ ತಲೆತಿರುಗುತ್ತೆ – Kannada News | Salman Khan Birthday Actor Net worth And Total Investments

ಸಲ್ಮಾನ್ ಖಾನ್ ಮೂರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿದ್ದಾರೆ. ಅವರಿಗೆ ಇಂದು (ಡಿಸೆಂಬರ್ 27) ಜನ್ಮದಿನ.  ಕಳೆದ ಕೆಲವು ವರ್ಷಗಳಲ್ಲಿ, ಸಲ್ಮಾನ್ ಖಾನ್ ಅನೇಕ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಇದರಿಂದಾಗಿ ಅವರು ಇಂದು ಒಂದು ಬ್ರ್ಯಾಂಡ್ ಆಗಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಸಲ್ಮಾನ್ ಖಾನ್ 3000 ಕೋಟಿ ರೂಪಾಯಿಗಳ ಸಂಪತ್ತಿನ ಮಾಲೀಕರಾಗಿದ್ದಾರೆ. ಸಲ್ಮಾನ್ ಖಾನ್ ಚಲನಚಿತ್ರಗಳಲ್ಲಿ ನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳುವುದಲ್ಲದೆ, ಟಿವಿಯಲ್ಲಿ ಪ್ರಸಿದ್ಧ ರಿಯಾಲಿಟಿ ಶೋ ಬಿಗ್ ಬಾಸ್‌ನ ಹಲವು ಸೀಸನ್‌ಗಳನ್ನು ಸಹ ನಡೆಸಿಕೊಟ್ಟಿದ್ದಾರೆ. ಇದಲ್ಲದೆ, ಸಲ್ಮಾನ್…

Read More

Daily Devotional: ಕೆಟ್ಟದ್ದು ಸಂಭವಿಸುವ ಮುನ್ನ ಯಾವೆಲ್ಲಾ ಸೂಚನೆಗಳು ಕಾಣಿಸುತ್ತೆ? – Kannada News | Daily Devotional: Traditional Omens, Understanding Warnings Before Bad Events

ಬೆಂಗಳೂರು, ಡಿಸೆಂಬರ್ 27: ನಮ್ಮ ಜೀವನವು ಲಾಭ-ನಷ್ಟ, ಸುಖ-ದುಃಖಗಳ ಮಿಶ್ರಣವಾಗಿದೆ. ಕೆಟ್ಟ ಘಟನೆಗಳು ಅಥವಾ ಅಶುಭಗಳು ಸಂಭವಿಸುವ ಮುನ್ನ, ನಮ್ಮ ಶಾಸ್ತ್ರಗಳು ಮತ್ತು ಪರಂಪರೆಗಳ ಪ್ರಕಾರ ಕೆಲವು ಶಕುನಗಳು ಅಥವಾ ಸೂಚನೆಗಳು ಗೋಚರಿಸುತ್ತವೆ. ವಿದ್ಯಾರ್ಥಿಗೆ ಪರೀಕ್ಷೆಯ ಮೊದಲು ಅನಿಸುವ ಆತಂಕ ಅಥವಾ ಸಾವಿನ ಮುನ್ನ ದೇಹ ನೀಡುವ ಸಂಕೇತಗಳಂತೆ, ಪ್ರಕೃತಿಯೂ ದುರಂತಗಳ ಬಗ್ಗೆ ಸುಳಿವು ನೀಡುತ್ತದೆ. ಮನೆಯಿಂದ ಹೊರಡುವಾಗ ನಾಯಿಗಳು ಅರಚುವುದು, ಹಾವುಗಳು ಅಡ್ಡ ಬರುವುದು, ಅಥವಾ ಹಸುಗಳು ವಿಚಿತ್ರವಾಗಿ ಕೂಗಿಕೊಳ್ಳುವುದು ಇಂತಹ ಸೂಚನೆಗಳಾಗಿವೆ. ಮನೆಯಲ್ಲಿ ಗಾಜು…

Read More

ಬರೋಬ್ಬರಿ 94 ವರ್ಷಗಳ ಬಳಿಕ ಬಾಕ್ಸಿಂಗ್ ಡೇನಲ್ಲಿ 20 ವಿಕೆಟ್..!

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ ನಾಲ್ಕನೇ ಪಂದ್ಯದ ಮೊದಲ ದಿನವೇ 20 ವಿಕೆಟ್​ಗಳು ಉರುಳಿವೆ. ಅಂದರೆ ಒಂದೇ ದಿನವೇ ಎರಡೂ ತಂಡಗಳು ಆಲೌಟ್ ಆಗಿವೆ. ಆಸ್ಟ್ರೇಲಿಯಾದಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್​ನ ಮೊದಲ ದಿನ 20 ವಿಕೆಟ್​ಗಳು ಉರುಳಿರುವುದು 94 ವರ್ಷಗಳ ಬಳಿಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಕೇವಲ 152 ರನ್​ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 110 ರನ್​ಗಳಿಗೆ ಸರ್ವಪತನ ಕಂಡಿದೆ. ಅಂದರೆ ಉಭಯ…

Read More

Horoscope Today 27 December: ಇಂದು ಈ ರಾಶಿಯವರ ಅನಿಸಿಕೆಗಳಿಗೆ ಫಲ ಸಿಗಲಿದೆ – Kannada News | Daily Horoscope for 27 December 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷ, ಸಪ್ತಮಿ, ಉತ್ತರಾಭಾದ್ರ ನಕ್ಷತ್ರ, ವ್ಯತಿಪಾತ ಯೋಗ, ವಣಿಗ ಕರಣ ಇಂದಿನ ದಿನದ ಪ್ರಮುಖ ಪಂಚಾಂಗ ವಿವರಗಳಾಗಿವೆ. ರವಿ ಧನು ರಾಶಿಯಲ್ಲಿ ಮತ್ತು ಚಂದ್ರ ಮೀನ ರಾಶಿಯಲ್ಲಿ ಸಂಚರಿಸಲಿದ್ದಾನೆ. ರಾಹುಕಾಲ ಬೆಳಿಗ್ಗೆ 9:29 ರಿಂದ 10:54 ರವರೆಗೆ ಇದ್ದು, ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲ ಮಧ್ಯಾಹ್ನ 1:45 ರಿಂದ 3:11 ರವರೆಗೆ…

Read More

ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ – Kannada News | Bangaluru Namma Metro Molestation: Woman Reports Harassment, Accused Warned by Police

ಬೆಂಗಳೂರು, ಡಿಸೆಂಬರ್​ 26: ಯುವತಿಯ ಮೈ-ಕೈ ಮುಟ್ಟಿ ಅಪರಿಚಿತ ವ್ಯಕ್ತಿ ಅಸಭ್ಯವಾಗಿ ವರ್ತಿಸಿರುವಂತಹ ಘಟನೆ ನಮ್ಮ ಮೆಟ್ರೋದಲ್ಲಿ ನಡೆದಿದೆ. ವಿಧಾನಸೌಧ ಮೆಟ್ರೋದಿಂದ ತೆರಳುತ್ತಿದ್ದ ವೇಳೆ  ಘಟನೆ ನಡೆದಿದೆ. ಈ ವೇಳೆ ಯುವತಿ ಅಲ್ಲಿದ್ದ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಕೂಡಲೇ ಆ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎನ್​​​ಸಿಆರ್ ದಾಖಲಿಸಿ ವ್ಯಕ್ತಿಗೆ ವಾರ್ನ್ ಮಾಡಿ ಪೊಲೀಸರು ಕಳುಹಿಸಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source…

Read More

Koppal: ಸರ್ಕಾರಿ ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ; ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು! – Kannada News | Koppala Headmaster Funds Flight Trip for Government School Students

ಕೊಪ್ಪಳ, ಡಿಸೆಂಬರ್​​ 27: ಬಹದ್ದೂರಬಂಡಿ ಗ್ರಾಮದ ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ ಸ್ವಂತ ಖರ್ಚಿನಲ್ಲಿ 24 ವಿದ್ಯಾರ್ಥಿಗಳನ್ನು ಜಿಂದಾಲ್​​ ಏರ್​​ಪೋರ್ಟ್​​ನಿಂದ ವಿಮಾನದಲ್ಲಿ ಬೆಂಗಳೂರಿಗೆ ಪ್ರವಾಸಕ್ಕೆ ಕರೆದೊಯ್ದಿದ್ದಾರೆ. ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರು, ಎಸ್​​ಡಿಎಂಸಿ ಸದಸ್ಯರು, ಬಿಸಿಯೂಟ ಅಡುಗೆ ತಯಾರಕರು ಸೇರಿ ಒಟ್ಟು 40 ಜನರು ವಿಮಾನ ಪ್ರಯಾಣ ಮಾಡಿದ್ದಾರೆ. ವಿಶೇಷ ವಿಮಾನಕ್ಕೆ 3.50 ಲಕ್ಷ ರೂಪಾಯಿ ವೆಚ್ಚವನ್ನು ಬೀರಪ್ಪ ಭರಿಸಿದ್ದಾರೆ. ಊಟ ವಸತಿ ಸೇರಿ ಎರಡು ದಿನಗಳ ಪ್ರವಾಸದ ವೆಚ್ಚ ಸುಮಾರು 5 ಲಕ್ಷ ರೂ. ಆಗಲಿದೆ….

Read More

ಈ ವರ್ಷ 1 ಟ್ರಿಲಿಯನ್ ಡಾಲರ್ ರಫ್ತು ಗುರಿ ಅಸಾಧ್ಯ; ಭಾರತಕ್ಕಿರುವ ಪ್ರಮುಖ ತೊಡಕುಗಳಿವು… – Kannada News | India may miss export target of 1 trillion USD this year, know the reasons for the setback

ನವದೆಹಲಿ, ಡಿಸೆಂಬರ್ 26: ಭಾರತ ಈ ಹಣಕಾಸು ವರ್ಷದಲ್ಲಿ ಒಂದು ಟ್ರಿಲಿಯನ್ ಡಾಲರ್ ಮೊತ್ತದ ಸರಕು ಮತ್ತು ಸೇವೆಗಳನ್ನು ರಫ್ತು (export) ಮಾಡುವ ಗುರಿ ಇಟ್ಟಿತ್ತು. ಆದರೆ, ಈವರೆಗಿನ ರಫ್ತು ಅಂಕಿ ಅಂಶ ಗಮನಿಸಿದಾಗ ಮೇಲಿನ ಒಂದು ಟ್ರಿಲಿಯನ್ ಡಾಲರ್ ಗುರಿ ಮುಟ್ಟುವುದು ಬಹುತೇಕ ಅಸಾಧ್ಯದಂತೆ ಕಾಣುತ್ತಿದೆ. ಗ್ಲೋಬಲ್ ಟ್ರೇಡ್ ರಿಸರ್ಚ್ ಇನಿಷಿಯೇಟಿವ್ (ಜಿಟಿಆರ್​ಐ) ತನ್ನ ವರದಿಯೊಂದರಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ, ಭಾರತದ ರಫ್ತು ಗುರಿ ವಿಫಲವಾಗಲು ಏನು ಕಾರಣ ಎಂದು ವಿವರಿಸುವ ಪ್ರಯತ್ನ ಮಾಡಿದೆ. ಭಾರತದಲ್ಲಿ…

Read More

ಕೇರಳದಲ್ಲಿ ಇತಿಹಾಸ ನಿರ್ಮಿಸಿದ ಬಿಜೆಪಿ; ತಿರುವನಂತಪುರದ ಕೇಸರಿ ಪಕ್ಷದ ಮೊದಲ ಮೇಯರ್ ಆಗಿ ವಿ.ವಿ. ರಾಜೇಶ್ ಆಯ್ಕೆ – Kannada News | BJP creates History In Kerala VV Rajesh becomes first Ever BJP Mayor of Thiruvananthapuram

ತಿರುವನಂತಪುರಂ, ಡಿಸೆಂಬರ್ 26: ಕೇರಳದ ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿತ್ತು. ಇದೀಗ ತಿರುವನಂತಪುರದ (Thiruvananthapuram) ಬಿಜೆಪಿಯ ಮೊದಲ ಮೇಯರ್ ಆಗಿ ವಿ.ವಿ. ರಾಜೇಶ್ ಆಯ್ಕೆಯಾಗಿದ್ದಾರೆ. ಇವರು ತಿರುವನಂತಪುರದ ಸ್ಥಳೀಯ ನಾಯಕರಾಗಿದ್ದು, ಬಿಜೆಪಿಯ ಕಾರ್ಯಕರ್ತರು ಮತ್ತು ಸಾರ್ವಜನಿಕರಲ್ಲಿ ಚಿರಪರಿಚಿತರಾಗಿದ್ದಾರೆ. ಮೇಯರ್ ಆಗಿ ಆಯ್ಕೆಯಾದ ನಂತರ ಮಾತನಾಡಿದ ಅವರು, “ನಾವು ಒಟ್ಟಿಗೆ ಮುಂದುವರಿಯುತ್ತೇವೆ. ಎಲ್ಲರನ್ನೂ ಜೊತೆಗೆ ಕರೆದುಕೊಂಡು ಹೋಗುತ್ತೇವೆ. ಎಲ್ಲಾ 101 ವಾರ್ಡ್‌ಗಳಲ್ಲಿ ಅಭಿವೃದ್ಧಿಯನ್ನು ಜಾರಿಗೆ ತರಲಾಗುವುದು. ತಿರುವನಂತಪುರಂ ಅಭಿವೃದ್ಧಿ ಹೊಂದಿದ ನಗರವಾಗಿ ರೂಪಾಂತರಗೊಳ್ಳುತ್ತದೆ” ಎಂದು ಹೇಳಿದ್ದಾರೆ….

Read More

ಒಂದೇ ಬೈಕ್‌ನಲ್ಲಿ 5 ಜನ ಸವಾರಿ! 31 ಸಾವಿರ ರೂ. ದಂಡ ಹಾಕಿದ ಪೊಲೀಸರು – Kannada News | UP Bike Stunt: 5 Youths on Single Bike Goes Viral, Police Impose 31,000 Fine

ಉತ್ತರ ಪ್ರದೇಶ, ಡಿ.26: ಉತ್ತರ ಪ್ರದೇಶದ (UP bike stunt) ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದೇ ಬೈಕ್​​ನಲ್ಲಿ 5 ಜನ ಹೋಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ರಸ್ತೆ ಸಂಚಾರ ನಿಯಮವನ್ನು ಉಲ್ಲಂಘಿಸಿ, ಐದು ಹುಡುಗರು ಒಂದೇ ಬೈಕ್​​ನಲ್ಲಿ ಹೋಗಿದ್ದಾರೆ. ಇದೀಗ ಈ ರೀತಿಯ ಸಂಚಾರ ಸಾರ್ವಜನಿಕರಲ್ಲಿ ಹಾಗೂ ವಾಹನ ಸವಾರರಲ್ಲಿ ಭೀತಿ ಹುಟ್ಟಿಸಿದೆ. ಹಾಪುರದ ರಾಷ್ಟ್ರೀಯ ಹೆದ್ದಾರಿ 9 ರಲ್ಲಿ ಈ ಘಟನೆ ನಡೆದಿದೆ. ಈ ವಿಡಿಯೋದಲ್ಲಿ 5 ಜನ ಯುವಕರು ಅಪಾಯಕಾರಿ ಸವಾರಿ…

Read More

Horoscope Today 27 December: ಇಂದು ಈ ರಾಶಿಗೆ ಅಪರೂಪದ ಬಂಧುಗಳ ಭೇಟಿಯಿಂದ ಸಂತೋಷವಾಗಲಿದೆ – Kannada News | Horoscope Today in Kannada on 27 December Satursday; Dina Bhavishya Tithi Panchanga Details here

ಮೇಷ ರಾಶಿ: ಕಲೆ ನಿಮ್ಮ ಮನಸ್ಸನ್ನು ಆಳವಾಗಿ ಸ್ಪರ್ಶಿಸುತ್ತದೆ. ಪ್ರತಿಭೆ ಭಾವನಾತ್ಮಕವಾಗಿ ವ್ಯಕ್ತವಾಗುತ್ತದೆ. ಕಾಮಗಾರಿ ಏರಳಿತಗಳಿಲ್ಲದೇ ಶಾಂತವಾಗಿ ಸಾಗುತ್ತದೆ. ನೀವು ಎಲ್ಲ ಕಾರ್ಯವನ್ನೂ ಅಚ್ಚುಕಟ್ಟಾಗಿ ಮಾಡಲು ಬಯಸುವಿರಿ. ಶತ್ರುಗಳ ಕಾಟವು ಆಕಸ್ಮಿಕವಾಗಿ ಕಡಿಮೆ ಆಗಲಿದೆ. ನಿಮ್ಮ ಊಹೆಗಳು ಎಲ್ಲವೂ ವಾಸ್ತವಕ್ಕೆ ದೂರವಾದುದಾಗಿದೆ. ಸಂಗಾತಿಯ ಮಾತುಗಳು ನಿಮಗೆ ಖುಷಿ ಕೊಟ್ಟೀತು. ಬಂಧುಗಳ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರಲಿದೆ. ನಿಮಗೆ ಅರ್ಥವಾಗದ ವಿಚಾರವನ್ನು ಬೇರೆಯವರ‌ ಕಡೆಯಿಂದ ಪಡೆಕೊಳ್ಳುವಿರಿ. ನಿಮ್ಮ‌ ಪ್ರಯಾಣದಲ್ಲಿ ಅಡೆತಡೆಗಳು ಉಂಟಾಗಬಹುದು. ಯೋಜನೆಗೆ ಪ್ರಾಯೋಗಿಕ ದೃಷ್ಟಿ ಬೇಕು….

Read More