ಹುಬ್ಬಳ್ಳಿ ಮರ್ಯಾದೆ ಹತ್ಯೆ: ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ – Kannada News | Hubballi Honor Killing Case: Husband Vivekananda Reacts after funeral of His Wife Manya
ಹುಬ್ಬಳ್ಳಿ, (ಡಿಸೆಂಬರ್ 22): ಹುಬ್ಬಳ್ಳಿ ನಡೆದ ಮರ್ಯಾದೆ ಹತ್ಯೆ (Hubballi Honor Killing) ಇಡೀ ರಾಜ್ಯವನ್ನೇ ಬಿಚ್ಚಿಬೀಳಿಸಿದೆ. 22 ವರ್ಷ ವಯಸ್ಸಿನ ಮಾನ್ಯ ಹಾಗೂ ವಿವೇಕಾನಂದ ಇಬ್ಬರೂ ಧಾರವಾಡ (Dharwad) ಜಿಲ್ಲೆಯ ಹುಬ್ಬಳ್ಳಿ (Hubballi) ತಾಲೂಕಿನ ಇನಾಂ ವೀರಾಪುರ ಗ್ರಾಮದವರು. ಯುವತಿ ಲಿಂಗಾಯತ ಸಮಾಜಕ್ಕೆ ಸೇರಿದ್ರೆ.. ಯುವಕ ದಲಿತನಾಗಿದ್ದ. ಡಿಗ್ರಿ ಓದುವಾಗಲೇ ಇಬ್ಬರ ನಡುವೆ ಪ್ರೀತಿ ಅಂಕುರಿಸಿತ್ತು. ಮನೆಯವರ ಬೆದರಿಕೆಗೂ ಬಗ್ಗದಷ್ಟು ಆಳವಾಗಿ ಇಬ್ಬರ ನಡುವೆ ಪ್ರೀತಿ ಬೇರೂರಿತ್ತು. ಮಾನ್ಯ, ವಿವೇಕಾನಂದನ ಬಿಟ್ಟು ಬದುಕಲ್ಲ ಅಂತಾ ಹಠ…