Headlines

nagaraj11081993

ಟಿಎಂಸಿ ನಾಯಕ ಜಹಾಂಗೀರ್ ಖಾನ್ ಬಂಧನ, ಟಿಎಂಸಿ ಕಚೇರಿಗಳ ಮೇಲೆ ದಾಳಿ ಸೇರಿ ಪಶ್ಚಿಮ ಬಂಗಾಳದಲ್ಲಿ ಪ್ರಮುಖ ರಾಜಕೀಯ ಬೆಳವಣಿಗೆಗಳು – Kannada News

ಕೋಲ್ಕತ್ತಾ, ಜೂನ್ 08: ಪಶ್ಚಿಮ ಬಂಗಾಳ(West Bengal)ದಲ್ಲಿ ಕಳೆದ ಒಂದು ತಿಂಗಳಿಂದೀಚೆಗೆ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆದಿವೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿ ಟಿಎಂಸಿಯನ್ನು ಅಧಿಕಾರದಿಂದ ಕಿತ್ತೊಗೆದಿತ್ತು.  ಟಿಎಂಸಿ ವಿರೋಧಿಗಳ ಜತೆ ಕಾದಾಡುವುದು ಹಾಗಿರಲಿ, ಪಕ್ಷದೊಳಗೆ ಭಿನ್ನಾಭಿಪ್ರಾಯಗಳಿವೆ. ಇದೀಗ ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ ಆ ಕುರಿತು ಮಾಹಿತಿ ಇಲ್ಲಿದೆ. ಟಿಎಂಸಿ ಪ್ರಭಾವಿ ನಾಯಕ ಜಹಾಂಗೀರ್ ಖಾನ್ ಬಂಧನ ಕಳೆದ ತಿಂಗಳು ನಡೆದ ಫಾಲ್ಟಾ ವಿಧಾನಸಭಾ ಉಪಚುನಾವಣೆಯ ವೇಳೆ ತೀವ್ರ ವಿವಾದಕ್ಕೆ…

Read More

‘ಕೆಡಿ’ ರಿಲೀಸ್ ಆದರೂ ಕಡಿಮೆ ಆಗಿಲ್ಲ ಶಿಲ್ಪಾ ಶೆಟ್ಟಿ ಕೊರಗು – Kannada News

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಇತ್ತೀಚೆಗೆ ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಈಗ ಅವರು ಬಾಲಿವುಡ್ ಬಿಗ್ ಸ್ಕ್ರೀನ್ ಮೇಲೆ ಅಬ್ಬರಿಸಲು ಸಜ್ಜಾಗಿದ್ದಾರೆ. ಈ ಬಾರಿ ಅವರು ಥಿಯೇಟರ್ ರಿಲೀಸ್ ಸಿನಿಮಾಗಳನ್ನೇ ಮಾಡಲು ಬಯಸುತ್ತಿರುವುದರ ಹಿಂದೆ ಒಂದು ವಿಶೇಷವಾದ ಮತ್ತು ವೈಯಕ್ತಿಕವಾದ ಕಾರಣವಿದೆ. ತಮ್ಮ ಇಬ್ಬರು ಮಕ್ಕಳಾದ ಸಮಿಶಾ ಮತ್ತು ವಿಯಾನ್ ಇದುವರೆಗೂ ತಮ್ಮನ್ನು ಚಿತ್ರಮಂದಿರದ ದೊಡ್ಡ ಪರದೆಯ ಮೇಲೆ ನೋಡಿಲ್ಲ ಎಂದು ಶಿಲ್ಪಾ ಶೆಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದರ ಜೊತೆ ಮಾತನಾಡಿರುವ ಅವರು,…

Read More

ದೇವನಹಳ್ಳಿಯಲ್ಲಿ ಸದ್ಯದಲ್ಲೇ ಗಿಗಾ ಫ್ಯಾಕ್ಟರಿ; ಸೋಲಾರ್ ಇಂಗಾಟ್ಸ್, ಸಿಲಿಕಾನ್ ವೇಫರ್ಸ್ ತಯಾರಿಸಲಿರುವ ಎಮ್ಮೀ ಗ್ರೂಪ್ – Kannada News

ಸೌರ ಘಟಕದ ಸಾಂದರ್ಭಿಕ ಚಿತ್ರImage Credit source: iStock ಬೆಂಗಳೂರು, ಜೂನ್ 8: ಬೆಂಗಳೂರು ಮೂಲದ ಪ್ರಮುಖ ಹಸಿರು ಇಂಧನ ಸಂಸ್ಥೆಯಾದ ಎಮ್ಮೀ ಗ್ರೂಪ್ (Emmvee Group), ಬೆಂಗಳೂರಿನ ದೇವನಹಳ್ಳಿಯಲ್ಲಿ ಬರೋಬ್ಬರಿ 5,500 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಬೃಹತ್ ‘ಗಿಗಾ ಫ್ಯಾಕ್ಟರಿ’ (Gigafactory) ಸ್ಥಾಪಿಸಲು ಮುಂದಾಗಿದೆ. ಈ ಹೊಸ ಪ್ಲಾಂಟ್ ಸದ್ಯದ ಫ್ಯಾಕ್ಟರಿಗಿಂತ 5 ಪಟ್ಟು ದೊಡ್ಡದಾಗಿದ್ದು, ಸುಮಾರು 100 ಎಕರೆ ಪ್ರದೇಶದಲ್ಲಿ ವಿಸ್ತರಿಸಲಿದೆ. ಸಂಸ್ಥೆಯ ಛೇರ್ಮನ್ ಡಿ.ವಿ. ಮಂಜುನಾಥ ದೊಂತಿ ಅವರು ಸ್ವತಃ ಈ ಮಾಹಿತಿಯನ್ನು…

Read More

ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ; ಮಹಿಳಾ ಭಕ್ತರ ಮೇಲೆ ಕಾಲಿನಿಂದ ನೀರೆರಚಿ ಸಿಬ್ಬಂದಿ ವಿಕೃತಿ! – Kannada News

ಕೇರಳದ ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ಕನ್ನಡಿಗ ಭಕ್ತರ ಮೇಲೆ ದೌರ್ಜ ಬೆಂಗಳೂರು, ಜೂನ್ 08: ಕೇರಳದ ಪ್ರಸಿದ್ಧ ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ವೈಶಾಖ ಮಹೋತ್ಸವದ ವೇಳೆ ಕರ್ನಾಟಕದ ಭಕ್ತರ ಮೇಲೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಭದ್ರತಾ ಸಿಬ್ಬಂದಿ ತೀವ್ರ ದೌರ್ಜನ್ಯ ನಡೆಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ವಿಶೇಷವಾಗಿ ಮಹಿಳಾ ಭಕ್ತರನ್ನು ತಳ್ಳಾಡಿ, ಅವರ ಮೇಲೆ ಕಾಲಿನಿಂದ ನೀರು ಎರಚಿ ವಿಕೃತಿ ಮೆರೆದಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಕನ್ನಡಿಗರ ತೀವ್ರ ಆಕ್ರೋಶಕ್ಕೆ…

Read More

ಚೊಚ್ಚಲ ಪಂದ್ಯದಲ್ಲೇ ದಾಖಲೆಗಳ ಮೇಲೆ ದಾಖಲೆ ಬರೆದ ಮಾನವ್ ಸುತಾರ್..! – Kannada News

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸ್ಪಿನ್ ಬೌಲರ್‌ಗಳಿಗೆ ಯಾವಾಗಲೂ ವಿಶೇಷ ಗೌರವವಿದೆ. ಅನಿಲ್ ಕುಂಬ್ಳೆ, ಹರ್ಭಜನ್ ಸಿಂಗ್, ಆರ್. ಅಶ್ವಿನ್ ಅವರಂತಹ ದಿಗ್ಗಜರು ಆಳಿದ ಈ ಸಾಮ್ರಾಜ್ಯಕ್ಕೆ ಈಗ ಮತ್ತೊಬ್ಬ ಯುವ ಮಾಂತ್ರಿಕ ಸ್ಪಿನ್ನರ್​ನ ಎಂಟ್ರಿಯಾಗಿದೆ. ಅವರೇ 23 ವರ್ಷದ ಎಡಗೈ ಸ್ಪಿನ್ನರ್ ಮಾನವ್ ಸುತಾರ್. ಅಫ್ಘಾನಿಸ್ತಾನ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಈ ಯುವ ಆಟಗಾರ, ಕೇವಲ ವಿಕೆಟ್ ಬೇಟೆಯಾಡಲಿಲ್ಲ, ಬದಲಿಗೆ ಮೂರೂವರೆ ದಶಕಗಳಿಗೂ ಹೆಚ್ಚು ಹಳೆಯದಾದ ಐತಿಹಾಸಿಕ ದಾಖಲೆಗಳನ್ನು…

Read More

ವಿಧಾನ ಪರಿಷತ್ ಚುನಾವಣೆ: 5ನೇ ಅಭ್ಯರ್ಥಿಯ ಅವಿರೋಧ ಆಯ್ಕೆ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್​ಗೆ ಬಿಜೆಪಿ-ಜೆಡಿಎಸ್ ಶಾಕ್ – Kannada News

5ನೇ ಅಭ್ಯರ್ಥಿಯ ಅವಿರೋಧ ಆಯ್ಕೆ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್​ಗೆ ಬಿಜೆಪಿ-ಜೆಡಿಎಸ್ ಶಾಕ್Image Credit source: tv9 ಬೆಂಗಳೂರು, ಜೂನ್ 8: ಕರ್ನಾಟಕ ವಿಧಾನಪರಿಷತ್‌ನ 7 ಸ್ಥಾನಗಳಿಗೆ ನಡೆಯುವ ಚುನಾವಣೆ (Karnataka MLC Election) ತೀವ್ರ ಕುತೂಹಲ ಕೆರಳಿಸಿದೆ. ಜೆಡಿಎಸ್ (JDS) ಮತ್ತು ಬಿಜೆಪಿ (BJP) ಮೈತ್ರಿಕೂಟವು ಅಚ್ಚರಿಯ ನಡೆ ಪ್ರದರ್ಶಿಸಿದ್ದು, ಮೂರನೇ ಅಭ್ಯರ್ಥಿ ಗೋವಿಂದರಾಜು ಅವರನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್‌ನ 5ನೇ ಅಭ್ಯರ್ಥಿಯ ಅವಿರೋಧ ಆಯ್ಕೆಯ ಲೆಕ್ಕಾಚಾರಕ್ಕೆ ಭಾರಿ ತಿರುಗೇಟು ನೀಡಿದೆ. ಈ ಬೆಳವಣಿಗೆಯಿಂದಾಗಿ, 7 ಸ್ಥಾನಗಳಿಗೆ ಈಗ…

Read More

ಯಾರೋ ಫಾಲೋ ಮಾಡ್ತಿದ್ದಾರೆ, ಪ್ಲೀಸ್ ಸಹಾಯ ಮಾಡಿ, ಕೆನಡಾದಲ್ಲಿ ಭಾರತೀಯ ಯುವಕರು ಕ್ರಿಕೆಟ್ ಆಡುತ್ತಿದ್ದ ಗ್ರೌಂಡ್​ಗೆ ಬಂದು ಸಹಾಯ ಬೇಡಿದ ಯುವತಿ – Kannada News

ಟೊರೊಂಟೊ, ಜೂನ್ 08: ಅಪರಿಚಿತ ದೇಶದಲ್ಲೂ ಮಾನವೀಯತೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಭಾರತೀಯರು ನೀಡುವ ಗೌರವವನ್ನು ಸಾಬೀತುಪಡಿಸುವ ರೋಮಾಂಚನಕಾರಿ ಘಟನೆಯೊಂದರ ವಿಡಿಯೋ ಪ್ರಸ್ತುತ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದೆ. ಕೆನಡಾದ ತೆರೆದ ಮೈದಾನವೊಂದರಲ್ಲಿ ಕ್ರಿಕೆಟ್ ಆಡುತ್ತಿದ್ದ ಭಾರತೀಯ ಯುವಕರ ಗುಂಪು, ಸಂಕಷ್ಟದಲ್ಲಿದ್ದ ಸ್ಥಳೀಯ ಯುವತಿಯೊಬ್ಬಳನ್ನು ವ್ಯಕ್ತಿಯಿಂದ ಅತ್ಯಂತ ಧೈರ್ಯ ಹಾಗೂ ಚಾಣಾಕ್ಷತನದಿಂದ ರಕ್ಷಿಸಿ ಜಾಗತಿಕ ಮಟ್ಟದಲ್ಲಿ ಭಾರಿ ಶ್ಲಾಘನೆಗೆ ಪಾತ್ರವಾಗಿದೆ. ಯುವತಿಯೊಬ್ಬರು ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಪುರುಷರ ಗುಂಪಿನ ಬಳಿಗೆ ಓಡಿಬಂದು ತನ್ನನ್ನು ಯಾರೋ ಹಿಂಬಾಲಿಸುತ್ತಿದ್ದಾರೆ…

Read More

7 ಕೋಟಿ ರೂ. ಸಿನಿಮಾ, ಗಳಿಸಿದ್ದು 1,700 ಕೋಟಿ; ಅಬ್ಬಬ್ಬಾ ಹೊಸ ದಾಖಲೆ – Kannada News

ಸದ್ಯ ಹಾರರ್ ಸಿನಿಮಾವೊಂದು ಜಾಗತಿಕ ಮಟ್ಟದಲ್ಲಿ ಭಾರಿ ಸಂಚಲನ ಸೃಷ್ಟಿಸುತ್ತಿದೆ. ನಿರ್ದೇಶಕ ಕರ್ರಿ ಬಾರ್ಕರ್ ಆ್ಯಕ್ಷನ್ ಕಟ್ ಹೇಳಿರುವ ಹಾಲಿವುಡ್​ನ ಸೂಪರ್‌ನ್ಯಾಚುರಲ್ ಸೈಕಲಾಜಿಕಲ್ ಹಾರರ್ ಸಿನಿಮಾ ‘ಒಬ್ಸೆಷನ್’ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. ಕೇವಲ ಕೋಟಿಗಳಲ್ಲಿ ತಯಾರಾದ ಈ ಸಿನಿಮಾ ಈಗ ಸಾವಿರಾರು ಕೋಟಿ ಕೊಳ್ಳೆ ಹೊಡೆಯುವತ್ತ ಮುನ್ನುಗ್ಗುತ್ತಿದೆ. ಬಜೆಟ್‌ಗಿಂತ 230 ಪಟ್ಟು ಹೆಚ್ಚು ಗಳಿಕೆ! ಹಾಲಿವುಡ್ ರಿಪೋರ್ಟರ್ ವರದಿಗಳ ಪ್ರಕಾರ, ‘ಒಬ್ಸೆಷನ್’ ಸಿನಿಮಾವನ್ನು ಕೇವಲ 7,50,000 ಡಾಲರ್ ಅಂದರೆ ಭಾರತೀಯ ಮೌಲ್ಯದಲ್ಲಿ ಸುಮಾರು 7.12 ಕೋಟಿ…

Read More

ಹೊಸ ಇನಿಂಗ್ಸ್ ಆರಂಭಿಸಿದ ಆಂಡ್ರ್ಯೂ ಫ್ಲಿಂಟಾಫ್! – Kannada News

ಇಂಗ್ಲೆಂಡ್ ತಂಡದ ಮಾಜಿ ಆಲ್​ರೌಂಡರ್ ಆಂಡ್ರ್ಯೂ ಫ್ಲಿಂಟಾಫ್ ಬಿಗ್ ಬ್ಯಾಷ್ ಲೀಗ್‌ನ (BBL) ಸಿಡ್ನಿ ಥಂಡರ್ ತಂಡದ ನೂತನ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ. ಸಿಡ್ನಿ ಥಂಡರ್ ಫ್ರಾಂಚೈಸಿ ಫ್ಲಿಂಟಾಫ್​ರೊಂದಿಗೆ ಎರಡು ವರ್ಷಗಳ ಒಪ್ಪಂದ ಮಾಡಿಕೊಂಡಿದೆ. ಈ ಹಿಂದೆ ಸಿಡ್ನಿ ಥಂಡರ್ ತಂಡದ ಕೋಚ್ ಆಗಿ ಟ್ರೆವರ್ ಬೇಲಿಸ್ ಕಾಣಿಸಿಕೊಂಡಿದ್ದರು. ಇದೀಗ ಆ ಸ್ಥಾನಕ್ಕೆ ಫ್ಲಿಂಟಾಫ್ ಆಯ್ಕೆಯಾಗಿದ್ದಾರೆ. ಈ ಹೈ-ಪ್ರೊಫೈಲ್ ಹುದ್ದೆಗಾಗಿ ಆಸ್ಟ್ರೇಲಿಯಾದ ಮಾಜಿ ಆಟಗಾರರಾದ ಶೇನ್ ವಾಟ್ಸನ್ ಮತ್ತು ಡಾನ್ ಕ್ರಿಶ್ಚಿಯನ್ ಅವರಂತಹ ಪ್ರಮುಖ ಹೆಸರುಗಳು…

Read More

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಭರ್ಜರಿ ಬೇಟೆ: ಬ್ಯಾಂಕಾಕ್‌ನಿಂದ ತಂದಿದ್ದ 2.33 ಕೋಟಿ ಮೌಲ್ಯದ ಗಾಂಜಾ ಜಪ್ತಿ! – Kannada News

ವಶಕ್ಕೆ ಪಡೆದುಕೊಂಡ ಹೈಡ್ರೋ ಗಾಂಜಾ ದೇವನಹಳ್ಳಿ, ಜೂನ್ 08: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (International Airport) ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕನೊಬ್ಬನಿಂದ ಬರೋಬ್ಬರಿ 2.33 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಮುಖ್ಯಾಂಶಗಳು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋಟ್ಯಂತರ ಮೌಲ್ಯದ ಗಾಂಜಾ ಜಪ್ತಿ ಮಾಡಲಾಗಿದೆ. ಬ್ಯಾಂಕಾಕ್‌ನಿಂದ ಬಂದಿದ್ದ ಪ್ರಯಾಣಿಕನ ಲಗೇಜ್ ಬ್ಯಾಗ್‌ನಲ್ಲಿ…

Read More