All posts by nagaraj11081993

IPL 2026: ಐಪಿಎಲ್​ನಲ್ಲಿ ಯಾರಿಂದಲೂ ಸಾಧ್ಯವಾಗದ ದಾಖಲೆ ಬರೆದ ಶಮಿ

Source link

ಸೋಲಿನ ಬೆನ್ನಲ್ಲೇ ರಿಷಭ್​​ ಪಂತ್​​​ಗೆ ಕ್ಲಾಸ್ ತೆಗೆದುಕೊಂಡ ಸಂಜೀವ್ ಗೋಯೆಂಕಾ

Source link

‘ನಮಗೆ ಹಾಗೆ ಕೆಲಸ ಮಾಡೋಕಾಗಲ್ಲ’; ‘ಡ್ರ್ಯಾಗನ್’ ಚಿತ್ರದ ಟುವಿನೋ ಹೊರಕ್ಕೆ

ಟುವಿನೋ ಥಾಮಸ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ (Toxic) ನಟಿಸಿದ್ದಾರೆ ಎನ್ನಲಾಗುತ್ತಿದೆ. ಅವರು ಮಲಯಾಳಂ ನಟ. ವರ್ಷಕ್ಕೆ 2-3 ಸಿನಿಮಾಗಳನ್ನು ಮಾಡಿ ಅವರಿಗೆ ಅಭ್ಯಾಸ. ಹೀಗಾಗಿ, ದೀರ್ಘ ಕಾಲ ಶೂಟ್ ಆಗುವ ಸಿನಿಮಾಗಳಲ್ಲಿ ನಟಿಸದೇ ಇರಲು ಅವರು ಇಷ್ಟಪಡುತ್ತಾರೆ. ಹೀಗಿರುವಾಗಲೇ, ಟುವಿನೋ ಅವರು ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​​ಟಿಆರ್ ಅವರ ‘ಡ್ರ್ಯಾಗನ್’ ಸಿನಿಮಾದಿಂದ ಹೊರ ನಡೆದಿದ್ದಾರೆ. ಈ ಬಗ್ಗೆ ಅವರೇ ಮಾಹಿತಿ ನೀಡಿದ್ದಾರೆ.

‘ಡ್ರ್ಯಾಗನ್’ ಸಿನಿಮಾ ಶೂಟಿಂಗ್ ಶುರುವಾಗಿ ಬಹು ಸಮಯ ಕಳೆದಿದೆ. ಈ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಅವರು ಸಾಕಷ್ಟು ಸಮಯ ತೆಗೆದುಕೊಂಡು ಚಿತ್ರದ ಶೂಟ್ ಮಾಡುತ್ತಿದ್ದಾರೆ. ಹೀಗಾಗಿ, ಟುವಿನೋ ಅವರು ಈ ಸಿನಿಮಾದಲ್ಲಿ ನಟಿಸಲು ಹಿಂದೇಟು ಹಾಕಿದ್ದಾರೆ. ‘ನಾವು ಮಲಯಾಳಂನಲ್ಲಿ ಭಿನ್ನವಾಗಿ ಕೆಲಸ ಮಾಡುತ್ತೇವೆ. ತೆಲುಗಿಗಿಂತ ನಾವು ಸಿನಿಮಾ ಶೂಟಿಂಗ್​​​ನ ಬೇಗನೆ ಮುಗಿಸುತ್ತೇವೆ. ನಾವು ವರ್ಷಕ್ಕೆ 4-5 ಚಲನಚಿತ್ರಗಳನ್ನು ಮಾಡುತ್ತೇವೆ. ಡ್ರ್ಯಾಗನ್‌ಗೆ ಡೇಟ್ಸ್ ನೀಡುವುದು 4-5 ಚಲನಚಿತ್ರಗಳಿಗೆ ತೊಂದರೆ ಮಾಡಿದಂತೆ’ ಎಂದಿದ್ದಾರೆ ಅವರು.

ತೆಲುಗು ಚಿತ್ರರಂಗದವರು ಹೆಚ್ಚು ದಿನ ತೆಗೆದುಕೊಳ್ಳುತ್ತಾರೆ ಎಂಬ ಬಗ್ಗೆ ಟುವಿನೋ ಥಾಮಸ್​​ಗೆ ಯಾವುದೇ ಅಸಮಾಧಾನ ಇಲ್ಲ. ಮಲಯಾಳಂ ಸಣ್ಣ ಉದ್ಯಮ. ಕಡಿಮೆ ಬಜೆಟ್‌ನಲ್ಲಿ ಸಿನಿಮಾ ಮಾಡಲಾಗುತ್ತದೆ. ಹೀಗಾಗಿ ಚಿತ್ರವನ್ನು ಬೇಗ ರಿಲೀಸ್ ಮಾಡುವುದು ಅವರಿಗೆ ಮುಖ್ಯವಾಗಿದೆ. ಆದರೆ, ತೆಲುಗು ಚಿತ್ರರಂಗದಲ್ಲಿ ಈ ಮಾಡೆಲ್ ತರೋದು ಕಷ್ಟ. ಸಿನಿಮಾಗಳು ಬಿಗ್ ಬಜೆಟ್​​ನವಾಗಿರುತ್ತವೆ. ದೊಡ್ಡ ದೊಡ್ಡ ಸೆಟ್​​​ಗಳ ನಿರ್ಮಾಣ ಮಾಡಬೇಕಾಗಿರುತ್ತದೆ. ಇದಕ್ಕೆಲ್ಲ ಸಾಕಷ್ಟು ಸಮಯ ಹಿಡಿಯುತ್ತದೆ.

ಇದನ್ನೂ ಓದಿ: ‘ಟಾಕ್ಸಿಕ್’ ಚಿತ್ರವನ್ನು ಕಿಯಾರಾ ಒಪ್ಪಿಕೊಂಡಿದ್ದೇಕೆ? ಅಸಲಿ ಕಾರಣ ಬಯಲು

‘ಟಾಕ್ಸಿಕ್’ ಸಿನಿಮಾಗೂ ಸಾಕಷ್ಟು ದಿನಗಳ ಕಾಲ ಶೂಟ್ ನಡೆದಿದೆ. ಟುವಿನೋ ಥಾಮಸ್ ಪಾತ್ರ ಹೆಚ್ಚು ಹೊತ್ತು ತೆರೆಮೇಲೆ ಕಾಣಿಸಿಕೊಳ್ಳದಿರಬಹುದು. ಈ ಕಾರಣದಿಂದ ಅವರು ಸಿನಿಮಾದಲ್ಲಿ ನಟಿಸಿರಬಹುದು ಎಂದು ಅನೇಕರು ಊಹಿಸಿದ್ದಾರೆ. ಸಿನಿಮಾ ನೋಡಿದ ಬಳಿಕವೇ ಈ ಬಗ್ಗೆ ತಿಳಿಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮಂಗಳೂರು-ಉಡುಪಿಯಲ್ಲಿ ಹದಗೆಡುತ್ತಿದೆ ವಾಯು ಗುಣಮಟ್ಟ; ಉಸಿರಾಡುವ ಮುನ್ನ ಇರಲಿ ಎಚ್ಚರ.

ಬೆಂಗಳೂರು: ಇಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಸೂಚ್ಯಂಕವು (AQI) 58 ರಿಂದ 95 ರ ಆಸುಪಾಸಿನಲ್ಲಿ ದಾಖಲಾಗಿದೆ. ಇದನ್ನು ಹವಾಮಾನ ಇಲಾಖೆಯು ‘ಸಾಧಾರಣ’ (Moderate) ಅಥವಾ ‘ತೃಪ್ತಿಕರ’ (Satisfactory) ವರ್ಗಕ್ಕೆ ಸೇರಿಸಿದೆ. ನಗರದ ಕೆಲವು ಭಾಗಗಳಾದ ಬಿಟಿಎಂ ಲೇಔಟ್ ಮತ್ತು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಾಲಿನ್ಯದ ಮಟ್ಟ ತುಸು ಹೆಚ್ಚಿದ್ದು, ಅಲ್ಲಿನ AQI 100ರ ಗಡಿ ದಾಟಿದೆ. ಇದು ಶ್ವಾಸಕೋಶದ ಸಮಸ್ಯೆ ಇರುವವರಿಗೆ ಹಾಗೂ ಮಕ್ಕಳಿಗೆ ಸ್ವಲ್ಪ ಕಿರಿಕಿರಿ ಉಂಟುಮಾಡಬಹುದು.

ಕರಾವಳಿ ಭಾಗದಲ್ಲಿ ಇತ್ತೀಚೆಗೆ ವಾಯು ಗುಣಮಟ್ಟದಲ್ಲಿ ಏರುಪೇರಾಗುತ್ತಿದೆ. ಇಂದು ಇಲ್ಲಿನ AQI 150ರ ಆಸುಪಾಸಿನಲ್ಲಿದ್ದು, ಇದು ‘ಕಳಪೆ’ (Poor) ಮಟ್ಟಕ್ಕೆ ಹತ್ತಿರದಲ್ಲಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹವಾಮಾನ ತಕ್ಕಮಟ್ಟಿಗೆ ಉತ್ತಮವಾಗಿದ್ದು, AQI 80-90 ರಷ್ಟಿದೆ. ಕಲಬುರಗಿ ಮತ್ತು ಬೆಳಗಾವಿ ಭಾಗದಲ್ಲಿ ಬಿಸಿಲಿನ ತಾಪ ಹೆಚ್ಚಿದ್ದರೂ, ವಾಯು ಮಾಲಿನ್ಯದ ಮಟ್ಟ ನಿಯಂತ್ರಣದಲ್ಲಿದೆ (AQI ಸುಮಾರು 110-120)

ನಗರವಾರು ವಾಯು ಗುಣಮಟ್ಟ ಸೂಚ್ಯಂಕ:

ನಗರ / ಪ್ರದೇಶ ಗಾಳಿಯ ಮಟ್ಟ (AQI) ಸ್ಥಿತಿ (Status)
ಬೆಂಗಳೂರು 85 – 105 ಸಾಧಾರಣ (Moderate)
ಮಂಗಳೂರು 140 – 155 ಕಳಪೆ (Poor)
ಉಡುಪಿ 135 – 150 ಕಳಪೆ ಹಂತಕ್ಕೆ ಸಮೀಪ
ಹಾಸನ 65 – 75 ತೃಪ್ತಿಕರ (Satisfactory)
ಚಿಕ್ಕಮಗಳೂರು 55 – 65 ಉತ್ತಮ (Good)
ಹುಬ್ಬಳ್ಳಿ 110 – 125 ಸಾಧಾರಣ (Moderate)
ರಾಯಚೂರು 120 – 135 ಧೂಳು ಮಿಶ್ರಿತ ಗಾಳಿ
ಬೀದರ್ 105 – 115 ಸಾಧಾರಣ
ವಿಜಯಪುರ 115 – 130 ಸಾಧಾರಣ
ಮಲೆನಾಡು ಭಾಗ 40 – 60 ಅತ್ಯುತ್ತಮ (Excellent)

ಗಾಳಿಯಲ್ಲಿ PM2.5 ಮತ್ತು PM10 ಕಣಗಳ ಪ್ರಮಾಣ ಹೆಚ್ಚಾಗಿರುವುದು ಕಂಡುಬಂದಿದೆ. ಹಿರಿಯ ನಾಗರಿಕರು ಮತ್ತು ಉಸಿರಾಟದ ತೊಂದರೆ ಇರುವವರು ಮಧ್ಯಾಹ್ನದ ವೇಳೆ ಮತ್ತು ವಾಹನ ಸಂಚಾರ ಹೆಚ್ಚಿರುವ ಸಮಯದಲ್ಲಿ ಹೊರಹೋಗುವಾಗ ಜಾಗರೂಕರಾಗಿರಬೇಕು. ಧೂಳು ಹೆಚ್ಚಿರುವ ಪ್ರದೇಶಗಳಲ್ಲಿ ಸಂಚರಿಸುವಾಗ ಮಾಸ್ಕ್ ಧರಿಸುವುದು ಉತ್ತಮ. ಬೆಳಿಗ್ಗೆ ಮತ್ತು ಸಂಜೆಯ ಗರಿಷ್ಠ ಸಂಚಾರದ ಸಮಯದಲ್ಲಿ ಮನೆಯ ಕಿಟಕಿಗಳನ್ನು ಮುಚ್ಚಿಡುವುದು ಸೂಕ್ತ. ಮನೆಯ ಸುತ್ತಮುತ್ತ ಹೆಚ್ಚು ಗಿಡಗಳನ್ನು ಬೆಳೆಸುವುದರಿಂದ ಶುದ್ಧ ಗಾಳಿ ಪಡೆಯಲು ಸಾಧ್ಯ.

ಇದನ್ನೂ ಓದಿ: ಬೆಂಗಳೂರಿಗರಿಗೆ ಬಿಡದ ಬಿಸಿಲ ಬೇಗೆ: ಉತ್ತರ ಕರ್ನಾಟಕದಲ್ಲಿ ಕೆಂಡದಂತಹ ಬಿಸಿಲು! ಮಲೆನಾಡಿನಲ್ಲಿ ಹೇಗಿದೆ ತಾಪಮಾನ?

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

ಉತ್ತಮ- 0-50

ಮಧ್ಯಮ – 50-100

ಕಳಪೆ – 100-150

ಅನಾರೋಗ್ಯಕರ – 150-200

ಗಂಭೀರ – 200 – 300

ಅಪಾಯಕಾರಿ – 300 -500+

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Donald Trump Speech: ಟ್ರಂಪ್ ಮಹತ್ವದ ಸುದ್ದಿಗೋಷ್ಠಿ, ಇರಾನ್ ಮೇಲಿನ ದಾಳಿ ಮುಂದುವರೆಸುತ್ತಾ ಅಮೆರಿಕ, ಇಲ್ಲಿದೆ ಬಿಗ್ ಅಪ್​ಡೇಟ್ಸ್​

ವಾಷಿಂಗ್ಟನ್, ಏಪ್ರಿಲ್ 2: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಇರಾನ್ ಜತೆಗಿನ ಯುದ್ಧದ ಬಗ್ಗೆ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. ಅದರಲ್ಲಿ ನಾವು ಇರಾನ್ ಜತೆ ಯಾವುದೇ ಒಪ್ಪಂದ ಮಾಡಿಕೊಳ್ಳುವುದಿಲ್ಲ, ಅದು ಪರಿಮಾಣು ಶಕ್ತಿಯಾಗಲು ನಾವು ಬಿಡುವುದಿಲ್ಲ ಎಂದು ಹೇಳಿದ್ದಾರೆ.ಇರಾನ್, ಯುಎಸ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿದೆ. ಯುದ್ಧ ಪ್ರಾರಂಭವಾಗಿ 34 ದಿನಗಳು ಕಳೆದಿವೆ ಮತ್ತು ಹೊಸ ಮುಖಾಮುಖಿಯ ಭಯ ಹೊರಹೊಮ್ಮುತ್ತಿದೆ.

ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರಗಳು, ಬ್ಯಾಲಿಸ್ಟಿಕ್ ಕ್ಷಿಪಣಿ ತಾಣಗಳು ಮತ್ತು ಶೇಖರಣಾ ಬಂಕರ್‌ಗಳು ಸೇರಿದಂತೆ 12,300 ಕ್ಕೂ ಹೆಚ್ಚು ಇರಾನಿನ ಗುರಿಗಳ ಮೇಲೆ ಇದುವರೆಗೆ ದಾಳಿ ಮಾಡಿದೆ ಎಂದು ಯುಎಸ್ ಮಿಲಿಟರಿ ಹೇಳಿದೆ. 155 ಕ್ಕೂ ಹೆಚ್ಚು ಹಡಗುಗಳು ಹಾನಿಗೊಳಗಾಗಿವೆ ಅಥವಾ ನಾಶವಾಗಿವೆ. ಯುದ್ಧ ಪ್ರಾರಂಭವಾದಾಗಿನಿಂದ, ಆಧುನಿಕ ಫೈಟರ್ ಜೆಟ್‌ಗಳು ಮತ್ತು ಬಾಂಬರ್‌ಗಳನ್ನು ಬಳಸಿಕೊಂಡು 13,000 ಕ್ಕೂ ಹೆಚ್ಚು ಯುದ್ಧ ವಿಮಾನಗಳನ್ನು ಹಾರಿಸಲಾಗಿದೆ ಎಂದು ಮಿಲಿಟರಿ ಹೇಳುತ್ತದೆ.

ಮಧ್ಯಪ್ರಾಚ್ಯದಲ್ಲಿ ನಿರಂತರ ದಾಳಿಗಳ ಮಧ್ಯೆ, ಟ್ರಂಪ್ ಇಂದು ಯುದ್ಧದ ಕುರಿತು ತಮ್ಮ ಮೊದಲ ಪ್ರೈಮ್‌ಟೈಮ್ ಭಾಷಣ ಮಾಡಿದರು. ವಿಯೆಟ್ನಾಂ ಯುದ್ಧವು 18 ವರ್ಷಗಳ ಕಾಲ ನಡೆಯಿತು ಮತ್ತು ದೀರ್ಘ ಯುದ್ಧಗಳು ನಡೆದಿವೆ ಎಂದು ಅವರು ತಮ್ಮ ಭಾಷಣದಲ್ಲಿ ಹೇಳಿದರು. ಆಪರೇಷನ್ ಎಪಿನ್ ಫ್ಯೂರಿ ಮುಂದುವರೆಯುತ್ತದೆ ಎಂದರು.

ಇರಾನ್‌ನಲ್ಲಿ ಅಮೆರಿಕ ತನ್ನ ಎಲ್ಲಾ ಮಿಲಿಟರಿ ಉದ್ದೇಶಗಳನ್ನು ಸಾಧಿಸುವ ಹಂತಕ್ಕೆ ಹತ್ತಿರದಲ್ಲಿದೆ, ಸಾಧ್ಯವಾದಷ್ಟು ಬೇಗ ಕಾರ್ಯಾಚರಣೆ ಕೊನೆಗೊಳಿಸುವುದಾಗಿ ಭರವಸೆ ನೀಡಿದರು. ಇರಾನ್ ಎಂದಿಗೂ ಪರಮಾಣು ಶಸ್ತ್ರಾಸ್ತ್ರಗಳನ್ನು ಪಡೆಯಲು ಬಿಡಬಾರದು. ವಾಷಿಂಗ್ಟನ್ ತನ್ನ ಗಲ್ಫ್ ಮಿತ್ರರಾಷ್ಟ್ರಗಳನ್ನು ರಕ್ಷಿಸುತ್ತದೆ ಎಂದು ಅವರು ಭರವಸೆ ನೀಡಿದರು.

 

ಮಾಹಿತಿ ಶೀಘ್ರ ಅಪ್​ಡೇಟ್ ಆಗಲಿದೆ

Source link

ದಾನ-ಧರ್ಮಕ್ಕೆ ಇಂದು ಸುವರ್ಣಾವಕಾಶ! ಚೈತ್ರ ಪೌರ್ಣಮಿಯ ಪುಣ್ಯ ಸ್ನಾನ ಮತ್ತು ಮಂತ್ರ ಜಪದ ವಿಶೇಷ ಫಲ

ಬೆಂಗಳೂರು, ಏ.1: ಚೈತ್ರ ಪೌರ್ಣಮಿ ಹಿಂದೂ ಧರ್ಮದಲ್ಲಿ ಅತ್ಯಂತ ಮಹತ್ವದ ಪರ್ವ ದಿನಗಳಲ್ಲಿ ಒಂದಾಗಿದೆ. ಇದನ್ನು ದವನದ ಹುಣ್ಣಿಮೆ ಎಂದೂ ಕರೆಯಲಾಗುತ್ತದೆ. ವರ್ಷದ ಪ್ರಥಮ ಮಾಸವಾದ ಚೈತ್ರ ಮಾಸದಲ್ಲಿ ಬರುವ ಈ ಮೊದಲ ಪೂರ್ಣಿಮೆಗೆ ವಿಶೇಷ ಪ್ರಾಮುಖ್ಯತೆ ಇದೆ. ಈ ದಿನ ಭಗವಾನ್ ವಿಷ್ಣು ಮತ್ತು ಕರ್ಮಗಳ ಲೆಕ್ಕ ಇಡುವ ಚಿತ್ರಗುಪ್ತನನ್ನು ಪೂಜಿಸಲಾಗುತ್ತದೆ. ಪವಿತ್ರ ಸ್ನಾನ ಮಾಡಿ, ವಿಷ್ಣು ಸಹಸ್ರನಾಮ ಜಪಿಸುವುದು ಅಥವಾ “ಓಂ ನಮೋ ಭಗವತೇ ವಾಸುದೇವಾಯ” ಮಂತ್ರ ಪಠಿಸುವುದು ಶ್ರೇಷ್ಠ. ಅನ್ನದಾನ, ವಸ್ತ್ರದಾನ ಮಾಡುವುದರಿಂದ ಕರ್ಮಗಳ ಪ್ರಭಾವ ಕಡಿಮೆಯಾಗುತ್ತದೆ ಎಂದು ನಂಬಲಾಗಿದೆ. ಸಾಕ್ಷಾತ್ ಇಂದ್ರ ಮತ್ತು ಶಿವನು ಕೂಡ ಈ ಪೌರ್ಣಮಿಯ ಮಹತ್ವವನ್ನು ಸಾರಿದ್ದಾರೆ. ದೇವಾಲಯಗಳಿಗೆ ಭೇಟಿ ನೀಡುವುದು, ಹಿರಿಯರ ಆಶೀರ್ವಾದ ಪಡೆಯುವುದು, ದಾನ ಧರ್ಮಗಳನ್ನು ಮಾಡುವುದು ಈ ದಿನದ ಆಚರಣೆಯ ಪ್ರಮುಖ ಭಾಗವಾಗಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಉತ್ಸವದ ವೈಭವಕ್ಕೆ ಸಾಕ್ಷಿಯಾದ ಲಕ್ಷಾಂತರ ಭಕ್ತರು

ಬೆಂಗಳೂರು, ಏಪ್ರಿಲ್ 2: ಬೆಂಗಳೂರು ನಗರದ ಐತಿಹಾಸಿಕ ಮತ್ತು ಸಾಂಪ್ರದಾಯಿಕ ಉತ್ಸವವಾದ ಬೆಂಗಳೂರು ಕರಗ ಭಕ್ತಿಭಾವ ಹಾಗೂ ವೈಭವದಿಂದ ಬುಧವಾರ ರಾತ್ರಿ ನೆರವೇರಿತು. ಕಣ್ಣು ಹಾಯಿಸಿದಷ್ಟು ಭಕ್ತಸಾಗರ ಕಂಡುಬಂದಿದ್ದು, ಎಲ್ಲೆಡೆ “ಗೋವಿಂದ ಗೋವಿಂದ” ಎಂಬ ನಾಮಸ್ಮರಣೆಯೊಂದಿಗೆ ಭಕ್ತರು ಹರ್ಷೋದ್ಘಾರ ಮಾಡಿದರು. ಮಲ್ಲಿಗೆ ಹೂಗಳಿಂದ ಅಲಂಕೃತಗೊಂಡ ದ್ರೌಪದಮ್ಮನ ಕರಗ ಭಕ್ತಿಯ ಕೇಂದ್ರಬಿಂದುವಾಗಿದ್ದು, ಖಡ್ಗ ಹಿಡಿದ ವೀರಕುಮಾರರ ಅಬ್ಬರ ಮಧ್ಯೆ ಕರಗ ಮೆರವಣಿಗೆ ರಾತ್ರಿಯಿಡೀ ಸಂಭ್ರಮ ಸಡಗರದಿಂದ ಸಾಗಿತು. ನಗರದ ವಿವಿಧ ಭಾಗಗಳಲ್ಲಿ ನಡೆದ ರಥಗಳ ಮೆರವಣಿಗೆಯ ವೈಭವವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು.

ಈ ಸಂದರ್ಭದಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಗರುಡಾಚಾರ್, ಎನ್.ಎ. ಹ್ಯಾರಿಸ್ ಸೇರಿದಂತೆ ಹಲವರು ಕರಗದ ದರ್ಶನ ಪಡೆದು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗ್ರಹಗತಿಗಳ ಬದಲಾವಣೆ: ಇಂದು ಮಧ್ಯಾಹ್ನ ಮೀನ ರಾಶಿಗೆ ಕುಜ ಸಂಚಾರ; 12 ರಾಶಿಗಳ ಮೇಲೆ ಇದರ ಪ್ರಭಾವವೇನು?

ಬೆಂಗಳೂರು, ಏ.2: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಮಾರ್ಚ್ 2ರಂದು ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಪರಾಭವನಾ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಪೂರ್ಣಿಮಾ ತಿಥಿ, ಹಸ್ತ ನಕ್ಷತ್ರವನ್ನು ಒಳಗೊಂಡಿರುವ ವಿಶೇಷ ದಿನವಾಗಿದೆ. ಇದು ಚಿತ್ರ ಪೌರ್ಣಮಿ, ದವನದ ಹುಣ್ಣಿಮೆ ಹಾಗೂ ಯುಗಾದಿಯ ನಂತರದ ಮೊದಲ ಹುಣ್ಣಿಮೆಯಾಗಿರುವುದರಿಂದ ಪವಿತ್ರ ದಿನವಾಗಿದೆ. ಅಕ್ಕಮಹಾದೇವಿ ಜಯಂತಿ ಮತ್ತು ಕೆಲವು ಕಡೆ ಹನುಮ ಜಯಂತಿಯನ್ನೂ ಆಚರಿಸಲಾಗುತ್ತದೆ. ಕುಜ ಗ್ರಹವು ಕುಂಭ ರಾಶಿಯಿಂದ ಮೀನ ರಾಶಿಗೆ ಮಧ್ಯಾಹ್ನ 3:37ಕ್ಕೆ ಸಂಚಾರ ಮಾಡಲಿದೆ. ರವಿ ಮೀನ ರಾಶಿಯಲ್ಲಿದ್ದರೆ, ಚಂದ್ರ ಕನ್ಯಾ ರಾಶಿಯಲ್ಲಿ ಸಾಗುತ್ತಿದ್ದಾನೆ. ಈ ದಿನವು ದೇವತಾರಾಧನೆ, ಜಪ, ದಾನ-ಧರ್ಮಾದಿಗಳಿಗೆ ಅತ್ಯಂತ ಶುಭಕರವಾಗಿದೆ ಎಂದು ಗುರೂಜಿ ತಿಳಿಸಿದ್ದಾರೆ. ಪ್ರತಿಯೊಂದು ರಾಶಿಯವರಿಗೆ ಅವರ ಅದೃಷ್ಟ ಸಂಖ್ಯೆ, ಶುಭ ಬಣ್ಣ ಮತ್ತು ಜಪಿಸಬೇಕಾದ ಮಂತ್ರದೊಂದಿಗೆ ವೈಯಕ್ತಿಕ ಮಾರ್ಗದರ್ಶನ ನೀಡಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

SSLC ತೃತೀಯ ಭಾಷೆ ವಿವಾದ: ಹೈಕೋರ್ಟ್ ಮೆಟ್ಟಿಲೇರಿದ ಸರ್ಕಾರದ ‘ಗ್ರೇಡಿಂಗ್’ ನಿರ್ಧಾರ

ಬೆಂಗಳೂರು, ಏಪ್ರಿಲ್ 2: ಕರ್ನಾಟಕ ಶೈಕ್ಷಣಿಕ ವಲಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಎಸ್‌ಎಸ್‌ಎಲ್‌ಸಿ (SSLC) ತೃತೀಯ ಭಾಷಾ ಪರೀಕ್ಷೆಯಲ್ಲಿ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ತೀರ್ಮಾನ ಈಗ ಕಾನೂನು ಹೋರಾಟಕ್ಕೆ ನಾಂದಿ ಹಾಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಈ ದಿಢೀರ್ ಘೋಷಣೆಯು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕರಿ ನೆರಳು ಬೀರಲಿದೆ ಎಂದು ಆರೋಪಿಸಿ ಹೈಕೋರ್ಟ್‌ನಲ್ಲಿ (Karnataka High Court) ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ದಾಖಲಾಗಿದೆ. ಬೆಂಗಳೂರಿನ ನಿವಾಸಿಗಳಾದ ಎಚ್.ಎನ್. ಚಂದನಾ ಮತ್ತು ಎಸ್. ವೆಂಕಟೇಶ್ ಸಲ್ಲಿಸಿರುವ ಈ ಅರ್ಜಿಯಲ್ಲಿ, ಸರ್ಕಾರದ ನಡೆಯನ್ನು ‘ಅಸಂವಿಧಾನಿಕ’ ಎಂದು ಉಲ್ಲೇಖಿಸಲಾಗಿದೆ.

ಮುಖ್ಯವಾಗಿ, ಯಾವುದೇ ಒಂದು ದೊಡ್ಡ ಶೈಕ್ಷಣಿಕ ಬದಲಾವಣೆ ಮಾಡುವ ಮುನ್ನ ಸಾರ್ವಜನಿಕರ ಅಥವಾ ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯುವುದು ಅತ್ಯಗತ್ಯ. ಆದರೆ, ಈ ವಿಷಯದಲ್ಲಿ ಸರ್ಕಾರ ಅಂತಹ ಯಾವುದೇ ಪ್ರಕ್ರಿಯೆ ನಡೆಸದೆ, ಸಚಿವ ಸಂಪುಟದ ಒಪ್ಪಿಗೆಯನ್ನೂ ಪಡೆಯದೆ ಏಕಪಕ್ಷೀಯವಾಗಿ ತೀರ್ಮಾನಿಸಿದೆ ಎಂಬುದು ಅರ್ಜಿದಾರರ ಪ್ರಬಲ ವಾದ.

ಅರ್ಜಿಯಲ್ಲಿನ ಪ್ರಮುಖ ಅಂಶಗಳು

  • ವಿದ್ಯಾರ್ಥಿಗಳ ಗೊಂದಲ: ಪರೀಕ್ಷೆಗಳು ನಡೆಯುತ್ತಿರುವಾಗಲೇ ಇಂತಹ ಹೇಳಿಕೆ ನೀಡಿರುವುದು ಲಕ್ಷಾಂತರ ವಿದ್ಯಾರ್ಥಿಗಳಲ್ಲಿ ಅತಂತ್ರ ಸ್ಥಿತಿ ನಿರ್ಮಿಸಿದೆ.
  • ಸಮಾನತೆಯ ಹಕ್ಕಿನ ಉಲ್ಲಂಘನೆ: ಸಂವಿಧಾನದ 14 ಮತ್ತು 21ನೇ ವಿಧಿಯಡಿ ನೀಡಲಾದ ಸಮಾನತೆ ಮತ್ತು ಶಿಕ್ಷಣದ ಹಕ್ಕಿಗೆ ಇದು ಚ್ಯುತಿ ತರುತ್ತದೆ.
  • ಅಧಿಕೃತ ಆದೇಶದ ಕೊರತೆ: ಸಚಿವರು ಕೇವಲ ಮೌಖಿಕವಾಗಿ ಹೇಳಿಕೆ ನೀಡಿದ್ದಾರೆಯೇ ಹೊರತು, ಈವರೆಗೆ ಯಾವುದೇ ಅಧಿಕೃತ ಗೆಜೆಟ್ ಅಧಿಸೂಚನೆ ಹೊರಬಂದಿಲ್ಲ. ಆದರೂ ಇದನ್ನು ಜಾರಿಗೆ ತರಲು ಹೊರಟಿರುವುದು ಕಾನೂನುಬಾಹಿರ.

ಸರ್ಕಾರದ ಹೊಸ ನಿಯಮ ಏನು?

ತೃತೀಯ ಭಾಷೆಯ (ಹಿಂದಿ/ಇತರ) ಅಂಕಗಳನ್ನು ಒಟ್ಟು ಫಲಿತಾಂಶಕ್ಕೆ ಪರಿಗಣಿಸುವುದಿಲ್ಲ.
ಒಟ್ಟು 625 ಅಂಕಗಳ ಬದಲಿಗೆ ಕೇವಲ 525 ಅಂಕಗಳ ಆಧಾರದ ಮೇಲೆ ಶೇಕಡಾವಾರು ಲೆಕ್ಕ ಹಾಕಲಾಗುತ್ತದೆ.
ತೃತೀಯ ಭಾಷೆಯಲ್ಲಿ ಕೇವಲ ಎ, ಬಿ, ಸಿ, ಡಿ ಗ್ರೇಡ್‌ಗಳನ್ನು ಮಾತ್ರ ನೀಡಲಾಗುತ್ತದೆ.

ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾದ ‘ಹಿಂದಿ’ ಭಾಷೆ

ಈಗಾಗಲೇ ಈ ವಿಷಯವು ರಾಜಕೀಯ ಬಣ್ಣ ಪಡೆದುಕೊಂಡಿದೆ. ರಾಜ್ಯ ಸರ್ಕಾರವು ‘ಹಿಂದಿ ಹೇರಿಕೆ’ ತಡೆಯುವ ನೆಪದಲ್ಲಿ ತ್ರಿಭಾಷಾ ಸೂತ್ರಕ್ಕೆ ಎಳ್ಳುನೀರು ಬಿಟ್ಟು, ಪರೋಕ್ಷವಾಗಿ ದ್ವಿಭಾಷಾ ನೀತಿಯನ್ನು ಜಾರಿಗೊಳಿಸುತ್ತಿದೆ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಹಿಂದಿ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರ ದೇಶದ್ರೋಹದ ಕೆಲಸ ಮಾಡುತ್ತಿದೆ ಎಂದು ಮಾಜಿ ಸಚಿವ ಅಶ್ವತ್ಥ್ ನಾರಾಯಣ ಆಕ್ರೋಶ ವ್ಯಕ್ತಪಡಿಸಿದ್ದರು.

ಮತ್ತೊಂದೆಡೆ, SSLC 3ನೇ ಭಾಷೆಯ ಅಂಕಗಳನ್ನು ರದ್ದುಗೊಳಿಸಿರುವ ನಿರ್ಧಾರದಿಂದ, ಉರ್ದು ಹಾಗೂ ಸಂಸ್ಕೃತವನ್ನು ಪ್ರಥಮ ಭಾಷೆಯಾಗಿ ಓದುವವರಿಗೆ 3ನೇ ಭಾಷೆಯಾದ ‘ಕನ್ನಡ’ಕ್ಕೆ ಮಹತ್ವ ಇಲ್ಲದಂತಾಗುವುದಿಲ್ಲವೇ ಎಂಬ ಪ್ರಶ್ನೆಯೂ ಉದ್ಭವಿಸಿತ್ತು. ಕನ್ನಡ ಉಳಿಸಲು, ಹಿಂದಿ ಹೇರಿಕೆ ತಡೆಯಲು ಹೊಸ ನಿಯಮ ಜಾರಿಗೆ ತರಲಾಗಿದೆ ಎಂದು ಸರ್ಕಾರ ಹೇಳುತ್ತಿದ್ದ. ಆದರೆ, ಇಲ್ಲಿ ಕನ್ನಡ 3ನೇ ಭಾಷೆ ಇದ್ದವರ ವಿಚಾರದಲ್ಲಿ ಕನ್ನಡಕ್ಕೆ ಅನ್ಯಾಯವಾದಂತಲ್ಲವೇ ಎಂಬ ಪ್ರಶ್ನೆಯೂ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ಇದನ್ನೂ ಓದಿ: SSLC ಒಟ್ಟು ಮಾರ್ಕ್ಸ್​​ 625ದಿಂದ 525ಕ್ಕೆ ಇಳಿಕೆ: ಹಿಂದಿ ಅಂಕಕ್ಕೆ ಕೋಕ್

ಈ ವಿವಾದಾತ್ಮಕ ನಿರ್ಧಾರಕ್ಕೆ ಹೈಕೋರ್ಟ್ ತಡೆ ನೀಡಲಿದೆಯೇ ಅಥವಾ ಸರ್ಕಾರದ ಈ ಹೊಸ ಶೈಕ್ಷಣಿಕ ಪ್ರಯೋಗ ಮುಂದುವರಿಯಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಶೀಘ್ರದಲ್ಲೇ ಈ ಅರ್ಜಿಯ ವಿಚಾರಣೆ ನಡೆಯುವ ಸಾಧ್ಯತೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿಗರಿಗೆ ಬಿಡದ ಬಿಸಿಲ ಬೇಗೆ: ಉತ್ತರ ಕರ್ನಾಟಕದಲ್ಲಿ ಕೆಂಡದಂತಹ ಬಿಸಿಲು! ಮಲೆನಾಡಿನಲ್ಲಿ ಹೇಗಿದೆ ತಾಪಮಾನ?

ಬೆಂಗಳೂರು, ಏ.2: ರಾಜಧಾನಿ ಬೆಂಗಳೂರಿನಲ್ಲಿ ಇಂದೂ ಕೂಡ ಒಣ ಹವಾಮಾನ ಮುಂದುವರಿಯಲಿದೆ. ಗರಿಷ್ಠ ಉಷ್ಣಾಂಶವು 35°C ನಿಂದ 37°C ವರೆಗೆ ದಾಖಲಾಗುವ ಸಾಧ್ಯತೆಯಿದೆ. ಸಂಜೆಯ ವೇಳೆಗೆ ಆಕಾಶ ಭಾಗಶಃ ಮೋಡದಿಂದ ಕೂಡಿದ್ದರೂ ಮಳೆಯ ಮುನ್ಸೂಚನೆ ತೀರಾ ಕಡಿಮೆ ಇದೆ. ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಬಿಸಿಲ ಧಗೆ ವಿಪರೀತವಾಗಿರಲಿದೆ. ಇಲ್ಲಿನ ಕೆಲವು ಭಾಗಗಳಲ್ಲಿ ಉಷ್ಣಾಂಶವು 41°C ದಾಟುವ ಸಾಧ್ಯತೆಯಿದ್ದು, ಮಧ್ಯಾಹ್ನದ ವೇಳೆ ಬಿಸಿಗಾಳಿ (Heat Wave) ಬೀಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಸೆಖೆ ಮತ್ತು ಹಬೆ (Humidity) ಹೆಚ್ಚಿರಲಿದೆ. ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಹಗುರವಾದ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಕಲಬುರಗಿಯಲ್ಲಿ ಅತಿ ಹೆಚ್ಚು (42°C ಸಂಭವನೀಯ) ಗರಿಷ್ಠ ಉಷ್ಣಾಂಶ ಇರಲಿದೆ ಎಂದು ಹೇಳಲಾಗಿದೆ. ಮಲೆನಾಡು ಭಾಗದಲ್ಲಿ (20°C – 22°C) ಕನಿಷ್ಠ ಉಷ್ಣಾಂಶ ಇರಲಿದೆ. ಇನ್ನು ಇಲಾಖೆ ಹೇಳಿರುವಂತೆ ಉತ್ತರ ಕರ್ನಾಟಕದ ಜನರಿಗೆ ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಮನೆಯಿಂದ ಹೊರಬರದಂತೆ ಸೂಚನೆ ನೀಡಲಾಗಿದೆ.

ಇಲ್ಲಿದೆ ನೋಡಿ: 1,2,3,4,5,6,7 ಈ ದಿನದಂದು ಮಧ್ಯಾಹ್ನದ ನಂತರ ಬರಲಿದೆ ಗುಡುಗು ಸಹಿತ ಮಳೆ; ಎಲ್ಲೆಲ್ಲಿ ಮಳೆಯಾಗಬಹುದು?

ಕರಾವಳಿಯಲ್ಲಿ ಬಿಸಿಲಿಗಿಂತಲೂ ಸೆಖೆ ಮತ್ತು ಹಬೆ ಜನರನ್ನ ಹೆಚ್ಚು ಕಾಡಲಿದೆ. ಗರಿಷ್ಠ 33°C – 35°C, ಆದರೆ ಅನುಭವಕ್ಕೆ ಬರುವ ತಾಪಮಾನ (Feels like) 38°C ದಾಟಬಹುದು. ಕಡಲತೀರದ ಭಾಗಗಳಲ್ಲಿ ಸಂಜೆ ವೇಳೆ ತಂಗಾಳಿ ಬೀಸುವ ಸಾಧ್ಯತೆ ಇದೆ. ಮೈಸೂರು ಭಾಗದಲ್ಲಿ ಒಣ ಹವಾಮಾನವಿದ್ದರೂ, ಸಂಜೆಯ ವೇಳೆಗೆ ತುಸು ತಂಪು ವಾತಾವರಣವಿರಲಿದೆ. ದಿನವಿಡೀ ಬಿಸಿಲು, ಸಂಜೆ ಭಾಗಶಃ ಮೋಡ ಕವಿದ ವಾತಾವರಣ. ಮಳೆಯ ಸಾಧ್ಯತೆ ತೀರಾ ಕಡಿಮೆ ಇದೆ. ಉತ್ತರ ಕರ್ನಾಟಕ (ಬೆಳಗಾವಿ, ಕಲಬುರಗಿ, ವಿಜಯಪುರ, ಬಾಗಲಕೋಟೆ) ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನ ಇಲ್ಲಿ ದಾಖಲಾಗುತ್ತಿದೆ. ಇಲ್ಲಿ ತಪಮಾನ ಗರಿಷ್ಠ 39°C ನಿಂದ 42°C ವರೆಗೆ ಏರಿಕೆಯಾಗುವ ಸಂಭವವಿದೆ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ನೇರ ಬಿಸಿಲಿಗೆ ಮೈಯೊಡ್ಡದಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link