ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರ ಜೂನ್ 8 ರಿಂದ ಜೂನ್ 14ರವರೆಗಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದ್ದಾರೆ. ಈ ವಾರದಲ್ಲಿ ಅಷ್ಟಮಿ, ನವಮಿ, ದಶಮಿ, ಏಕಾದಶಿ, ದ್ವಾದಶಿ, ತ್ರಯೋದಶಿ ಮತ್ತು ಚತುರ್ದಶಿ ಸೇರಿದಂತೆ ಪ್ರಮುಖ ತಿಥಿಗಳು ಬರಲಿವೆ. ಜ್ಯೋತಿಷ್ಯದ ಪ್ರಕಾರ, ಈ ಅವಧಿಯು ಪರಾಭವ ನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು ಮತ್ತು ಕೃಷ್ಣ ಪಕ್ಷದಲ್ಲಿ ನಡೆಯುತ್ತದೆ. ಈ ಗ್ರಹಗತಿಗಳು ರಾಶಿಗಳ ಮೇಲೆ ಹೇಗೆ ಪರಿಣಾಮ ಬೀರಬಹುದು ಎಂಬುದನ್ನು ಡಾ. ಗುರೂಜಿ ವಿವರಿಸಿದ್ದಾರೆ.
ವಿಶೇಷವಾಗಿ, ಈ ವಾರದಲ್ಲಿ ವಿಶ್ವ ಸಾಗರದ ದಿನ, ಸರ್ವತ್ರ ಏಕಾದಶಿ, ಪ್ರದೋಷ ಮತ್ತು ಮಾಸಿಕ ಶಿವರಾತ್ರಿಯಂತಹ ಆಚರಣೆಗಳು ಇವೆ. ಈ ಶುಭದಿನಗಳು ಮತ್ತು ತಿಥಿಗಳ ಮಹತ್ವ, ಅವುಗಳ ಆಚರಣೆಯ ವಿಧಾನ ಹಾಗೂ ದ್ವಾದಶ ರಾಶಿಗಳ ವ್ಯಕ್ತಿಗಳ ಮೇಲೆ ಅವುಗಳ ಪ್ರಭಾವದ ಕುರಿತು ಗುರೂಜಿ ಸಮಗ್ರ ಮಾಹಿತಿ ಒದಗಿಸಿದ್ದಾರೆ.
ಬೆಂಗಳೂರು, ಜೂನ್ 07: ಸಿಎಂ ಆದ ಬಳಿಕ ಸ್ವಕ್ಷೇತ್ರ ಕನಕಪುರಕ್ಕೆ ಮೊದಲ ಭಾರಿಗೆ ಭೇಟಿ ನೀಡುತ್ತಿರುವ ಡಿಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇಂದು ವಿಧಾನಸೌಧದಿಂದ ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣ ಬೆಳೆಸಿದರು. ಈ ವೇಳೆ ಬಿಎಂಆರ್ಸಿಎಲ್ ಉನ್ನತಾಧಿಕಾರಿಗಳಿಂದ ಬೆಂಗಳೂರಿನ ಮೆಟ್ರೋ ಜಾಲ ಮತ್ತು ಮುಂಬರುವ ಸಂಪರ್ಕ ಯೋಜನೆಗಳ ಕುರಿತು ಪ್ರಮುಖ ಮಾಹಿತಿಗಳನ್ನು ಪಡೆದುಕೊಂಡರು.
ಮುಖ್ಯಮಂತ್ರಿಗಳನ್ನು ಮೆಟ್ರೋದಲ್ಲಿ ಕಂಡ ಸಾರ್ವಜನಿಕರು ಹಾಗೂ ಸಹಪ್ರಯಾಣಿಕರು ಅಚ್ಚರಿ ಮತ್ತು ಸಂತಸ ವ್ಯಕ್ತಪಡಿಸಿದರು. ಅನೇಕ ಮೆಟ್ರೋ ಪ್ರಯಾಣಿಕರು ಸಿಎಂ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ರೈಲಿನಲ್ಲಿದ್ದ ಮಕ್ಕಳು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಹಸ್ತಲಾಘವ ಮಾಡಿದ ಡಿ.ಕೆ. ಶಿವಕುಮಾರ್ ಅವರು ಕುಶಲೋಪರಿ ವಿಚಾರಿಸಿದರು. ಸಿಲ್ಕ್ ಇನ್ಸ್ಟಿಟ್ಯೂಟ್ ನಿಲ್ದಾಣದವರೆಗೆ ಮೆಟ್ರೋದಲ್ಲಿಯೇ ತೆರಳಿದ ಮುಖ್ಯಮಂತ್ರಿಗಳು, ಅಲ್ಲಿಂದ ಮುಂದೆ ರಸ್ತೆ ಮಾರ್ಗವಾಗಿ ಕನಕಪುರಕ್ಕೆ ಪ್ರಯಾಣ ಬೆಳೆಸಿದರು.
ಟಾಲಿವುಡ್ ನಟ ರಾಮ್ ಚರಣ್ ಹಾಗೂ ಜಾನ್ವಿ ಕಪೂರ್ (Janhvi Kapoor) ನಟನೆಯ ಬಹುನಿರೀಕ್ಷಿತ ‘ಪೆದ್ದಿ’ (Peddi) ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಸೌಂಡ್ ಮಾಡುತ್ತಿದ್ದರೂ, ಚಿತ್ರದಲ್ಲಿ ಮಹಿಳೆಯರನ್ನು ಬಿಂಬಿಸಿರುವ ರೀತಿಯ ಬಗ್ಗೆ ತೀವ್ರ ವಿವಾದ ವ್ಯಕ್ತವಾಗಿದೆ. ಈ ವಿವಾದದ ಬೆನ್ನಲ್ಲೇ ನಿರ್ದೇಶಕ ಬುಚ್ಚಿ ಬಾಬು ಸನಾ (Buchi Babu Sana) ಇತ್ತೀಚೆಗಷ್ಟೇ ಬಹಿರಂಗವಾಗಿ ಕ್ಷಮೆಯಾಚಿಸಿದ್ದರು. ಆದರೆ, ಇದೀಗ ಜಾನ್ವಿ ಕಪೂರ್ ಅವರು ತಮ್ಮ ಫ್ಯಾನ್ ಕ್ಲಬ್ಗಳೊಂದಿಗೆ ನಡೆಸಿರುವ ಆಘಾತಕಾರಿ ಚಾಟ್ಗಳ ಸ್ಕ್ರೀನ್ಶಾಟ್ಗಳು ಇಂಟರ್ನೆಟ್ನಲ್ಲಿ ಲೀಕ್ ಆಗಿದ್ದು, ಸಂಚಲನ ಮೂಡಿಸಿವೆ.
ಚಿತ್ರದಲ್ಲಿ ತಮ್ಮ ಪಾತ್ರವನ್ನು ಆಕ್ಷೇಪಾರ್ಹವಾಗಿ ತೋರಿಸಲಾಗುತ್ತಿದೆ ಎಂದು ಶೂಟಿಂಗ್ ಹಂತದಲ್ಲೇ ಜಾನ್ವಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು ಎಂಬುದನ್ನು ಈ ಲೀಕ್ ಆದ ಮೆಸೇಜ್ಗಳು ಸಾಬೀತುಪಡಿಸುತ್ತಿವೆ. ಅಕ್ಟೋಬರ್ 30ರಂದು ನಡೆದಿರುವ ಚಾಟ್ನಲ್ಲಿ ಜಾನ್ವಿ ಕಪೂರ್, ಚಿತ್ರೀಕರಣದ ವೇಳೆ ತಮಗೆ ಮುಜುಗರ ತರುವಂತಹ ಆ್ಯಂಗಲ್ಗಳನ್ನು ಬಳಸದಂತೆ ನಿರ್ದೇಶಕರಿಗೆ ಖಡಕ್ ಆಗಿ ಹೇಳಿದ್ದಾಗಿ ಬರೆದುಕೊಂಡಿದ್ದಾರೆ.
‘ನಾನು ನಿರ್ದೇಶಕರಿಗೆ ನನ್ನ ಎದೆ ಮತ್ತು ಸೊಂಟದ ಭಾಗದ ಕ್ಲೋಸಪ್ ಶಾಟ್ಗಳನ್ನು ತೆಗೆದುಕೊಳ್ಳಬೇಡಿ ಎಂದು ಸ್ಪಷ್ಟವಾಗಿ ಹೇಳಿದ್ದೆ’ ಎಂದು ಜಾನ್ವಿ ಕಪೂರ್ ಉಲ್ಲೇಖಿಸಿದ್ದಾರೆ. ಇದೇ ಚಾಟ್ನಲ್ಲಿ ಜಾನ್ವಿ ಕಪೂರ್ ಅವರು ನಟ ರಾಮ್ ಚರಣ್ ಅವರ ನಡೆಗೆ ಧನ್ಯವಾದ ತಿಳಿಸಿದ್ದಾರೆ. ‘ರಾಮ್ ಸರ್ ತುಂಬಾ ಒಳ್ಳೆಯವರು. ಅವರು ನನ್ನ ಪರವಾಗಿ ನಿಂತು ನಿರ್ದೇಶಕ ಬುಚ್ಚಿ ಬಾಬು ಸನಾ ಅವರಿಗೆ ಬೈದಿದ್ದರು. ಇನ್ನೊಮ್ಮೆ ಆಕೆಯ ಇಂತಹ ಆ್ಯಂಗಲ್ಗಳನ್ನು ಶೂಟ್ ಮಾಡಬೇಡಿ ಅಂತ ಗದರಿಸಿದ್ದರು. ಇದರಿಂದಾಗಿ ನಿರ್ದೇಶಕರು ಬೇಸರ ಮಾಡಿಕೊಂಡಿದ್ದರು’ ಎಂದು ಜಾನ್ವಿ ಮೆಸೇಜ್ನಲ್ಲಿ ತಿಳಿಸಿದ್ದಾರೆ.
ಜಾನ್ವಿ ಕಪೂರ್ ವೈರಲ್ ಚಾಟ್:
‘ಗೇಮ್ ಚೇಂಜರ್’ ಚಿತ್ರದಲ್ಲಿ ನಟಿ ಕಿಯಾರಾ ಅಡ್ವಾಣಿ ಎದುರಿಸಿದ ಇಂತಹದೇ ಪರಿಸ್ಥಿತಿಯನ್ನು ಅಭಿಮಾನಿಯೊಬ್ಬರು ನೆನಪಿಸಿದಾಗ, ಜಾನ್ವಿ ಬೇಸರದಿಂದಲೇ ಪ್ರತಿಕ್ರಿಯಿಸಿದ್ದಾರೆ. ‘ಇಲ್ಲ, ಪೆದ್ದಿ ಸಿನಿಮಾದಲ್ಲಿ ಅವರು ಶೂಟ್ ಮಾಡುತ್ತಿದ್ದ ಆ್ಯಂಗಲ್ಗಳು ಅದಕ್ಕಿಂತಲೂ ಕೆಟ್ಟದಾಗಿದ್ದವು. ಆದರೆ ರಾಮ್ ಸರ್ ತಡೆದರು. ಸೌತ್ ಇಂಡಸ್ಟ್ರಿಯಲ್ಲಿ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಲೇ ಇರುತ್ತವೆ’ ಎಂದು ಜಾನ್ವಿ ಅವರು ದಕ್ಷಿಣದ ಚಿತ್ರರಂಗದ ಬಗ್ಗೆ ಬೇಸರ ಹೊರಹಾಕಿದ್ದಾರೆ.
ಕೆಲವು ನಟಿಯರ ಪೋಷಕರು ಶೂಟಿಂಗ್ ಸೆಟ್ಗೆ ಬರುವ ಬಗ್ಗೆ ಫ್ಯಾನ್ಸ್ ಪ್ರಸ್ತಾಪಿಸಿದ್ದಾರೆ. ಆದಕ್ಕೆ ಜಾನ್ವಿ ಈ ರೀತಿ ಉತ್ತರಿಸಿದ್ದಾರೆ. ‘ಒಂದು ವೇಳೆ ನನ್ನ ತಂದೆ ಬೋನಿ ಕಪೂರ್ ಸೆಟ್ಗೆ ಬಂದರೆ ಪರಿಸ್ಥಿತಿ ಉಗ್ರ ರೂಪ ಪಡೆದುಕೊಳ್ಳುತ್ತದೆ’ ಎಂದಿದ್ದಾರೆ. ಈ ರೀತಿಯ ಘಟನೆಯಿಂದ ಜಾನ್ವಿ ಕಪೂರ್ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ ಎಂಬುದು ಚಾಟ್ಸ್ನಿಂದ ತಿಳಿಯುತ್ತದೆ. ‘ನಾನು ಇವರೊಂದಿಗೆ ವಾದ ಮಾಡಿ ಸಾಕಾಗಿಹೋಗಿದೆ. ಇನ್ನು ಸಾಕು, ಇನ್ಮುಂದೆ ಸಿನಿಮಾವೇ ಬೇಡ’ ಎಂದು ಜಾನ್ವಿ ಭಾವುಕರಾಗಿ ಮೆಸೇಜ್ ಮಾಡಿದ್ದಾರೆ.
ಬೆಂಗಳೂರು, ಜೂನ್ 07: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಾಂಬ್ ಸ್ಫೋಟ ಪ್ರಕರಣದ ಕೈದಿಗಳು (Inmates)ಜೈಲು ಸಿಬ್ಬಂದಿ ಜೊತೆ ವಾಗ್ವಾದ ನಡೆಸಿ, ಧರ್ಮದ ಪರ ಘೋಷಣೆಗಳನ್ನು ಕೂಗಿ ಪುಂಡಾಟ ನಡೆಸಿರುವ ಗಂಭೀರ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಮೂರು ದಿನಗಳ ಹಿಂದೆ ನಡೆದ ಈ ಘಟನೆಯಿಂದಾಗಿ ಜೈಲು ಆವರಣದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಮುಖ್ಯಾಂಶಗಳು
ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಾಂಬ್ ಸ್ಫೋಟದ ಕೈದಿಗಳು ಪುಂಡಾಟ ನಡೆಸಿದ್ದಾರೆ.
ನಿಯಮ ಉಲ್ಲಂಘನೆ ಪ್ರಶ್ನಿಸಿದ ಜೈಲು ವಾರ್ಡರ್ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ.
ಐವತ್ತಕ್ಕೂ ಹೆಚ್ಚು ಕೈದಿಗಳು ಒಟ್ಟಾಗಿ ಧರ್ಮದ ಪರ ಘೋಷಣೆ ಕೂಗಿದ್ದಾರೆ.
ಘಟನೆಯ ಹಿನ್ನೆಲೆ ಮತ್ತು ವಾಗ್ವಾದ
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಬಾಂಬ್ ಸ್ಫೋಟ ಪ್ರಕರಣದ ಇಬ್ಬರು ಕೈದಿಗಳು (ಉಗ್ರರು) ಜೈಲು ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು. ಆದರೆ, ಅವರು ನಿಯಮ ಉಲ್ಲಂಘಿಸಿ ಬೇರೆ ಕೈದಿಯ ಹೆಸರಿನಲ್ಲಿ ಆಸ್ಪತ್ರೆಗೆ ದಾಖಲಾಗಲು ಯತ್ನಿಸಿದ್ದರು. ಈ ವೇಳೆ ಅಲ್ಲಿಯೇ ಇದ್ದ ಜೈಲು ವಾರ್ಡರ್ ದಾಖಲೆಗಳನ್ನು ಪರಿಶೀಲಿಸಿದಾಗ ಇಬ್ಬರು ಕೈದಿಗಳ ಗುರುತು ಪತ್ತೆಯಾಗಿದೆ. ಬೇರೆ ಕೈದಿ ಹೆಸರಿನಲ್ಲಿ ಯಾಕೆ ಬಂದಿದ್ದೀರಿ ಎಂದು ವಾರ್ಡರ್ ಪ್ರಶ್ನಿಸಿದಾಗ, ಉಗ್ರರು ಮತ್ತು ವಾರ್ಡರ್ ಮಧ್ಯೆ ತೀವ್ರ ವಾಗ್ವಾದ ಹಾಗೂ ಮಾತಿನ ಚಕಮಕಿ ಆರಂಭವಾಗಿದೆ.
ಖೈದಿಗಳ ಜಮಾವಣೆ
ವಾರ್ಡರ್ ಪ್ರಶ್ನಿಸುತ್ತಿದ್ದಂತೆ ಜೈಲಿನಲ್ಲಿದ್ದ ಇತರ ಬಾಂಬ್ ಸ್ಫೋಟ ಪ್ರಕರಣದ 50ಕ್ಕೂ ಹೆಚ್ಚು ಉಗ್ರ ಕೈದಿಗಳು ತಕ್ಷಣ ಒಂದೆಡೆ ಜಮಾವಣೆಗೊಂಡಿದ್ದಾರೆ. ವಾರ್ಡರ್ ಕ್ರಮವನ್ನು ವಿರೋಧಿಸಿದ ಕೈದಿಗಳ ಗುಂಪು, ಜೈಲಿನೊಳಗೇ ಒಂದು ಧರ್ಮದ ಪರವಾಗಿ ಜೋರಾಗಿ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದೆ. ಅಷ್ಟೇ ಅಲ್ಲದೆ, ಕರ್ತವ್ಯದಲ್ಲಿದ್ದ ಜೈಲು ವಾರ್ಡರ್ ಮೇಲೆ ಹಲ್ಲೆ ಮಾಡಲು ಸಹ ಕೈದಿಗಳು ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ
ಘಟನೆಯಿಂದ ಜೈಲಿನಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗುತ್ತಿದ್ದಂತೆ ಎಚ್ಚೆತ್ತ ಜೈಲಿನ ಹಿರಿಯ ಅಧಿಕಾರಿಗಳು ಮತ್ತು ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪ್ರತಿಭಟನೆ ನಡೆಸುತ್ತಿದ್ದ ಕೈದಿಗಳನ್ನು ಮನವೊಲಿಸಿ, ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಸದ್ಯ ಜೈಲಿನಲ್ಲಿ ಪರಿಸ್ಥಿತಿ ಶಾಂತವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಭದ್ರತೆ ವಹಿಸಲಾಗಿದೆ. ಆದರೆ, ಇಷ್ಟೆಲ್ಲಾ ಹಂಗಾಮಾ ನಡೆದಿದ್ದರೂ ಈ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಪತಿ-ಪತ್ನಿಯರ ಸಂಬಂಧವನ್ನು ಅತ್ಯಂತ ಪವಿತ್ರ ಮತ್ತು ಪ್ರಮುಖವಾದುದು ಎಂದು ಪರಿಗಣಿಸಲಾಗುತ್ತದೆ. ಈ ದಾಂಪತ್ಯ ಜೀವನದಲ್ಲಿ ಸದಾ ಪ್ರೀತಿ ಮತ್ತು ಸಾಮರಸ್ಯ ನೆಲೆಸಬೇಕಾದರೆ, ಮನೆಯಲ್ಲಿ ಸಕಾರಾತ್ಮಕ ಶಕ್ತಿ (Positive energy) ಇರುವುದು ಅತ್ಯಂತ ಅವಶ್ಯಕ. ಆದರೆ, ಹಲವು ಬಾರಿ ಎಷ್ಟೇ ಪ್ರಯತ್ನಿಸಿದರೂ ಯಾವುದೇ ಕಾರಣವಿಲ್ಲದೆ ಪತಿ-ಪತ್ನಿಯರ ನಡುವೆ ಅನಗತ್ಯ ಜಗಳ ಮತ್ತು ಮುನಿಸು ಉಂಟಾಗುತ್ತದೆ. ಇಂತಹ ಸನ್ನಿವೇಶಗಳ ಹಿಂದೆ ಬೆಡ್ರೂಮ್ನ (ಮಲಗುವ ಕೋಣೆ) ವಾಸ್ತು ದೋಷ ಪ್ರಮುಖ ಕಾರಣವಾಗಿರಬಹುದು.
ವಾಸ್ತು ಶಾಸ್ತ್ರದ ಪ್ರಕಾರ, ಮಲಗುವ ಕೋಣೆಯಲ್ಲಿ ದೋಷಗಳಿದ್ದರೆ ಪತಿ-ಪತ್ನಿಯರ ನಡುವೆ ಅಂತರ ಹೆಚ್ಚಾಗತೊಡಗುತ್ತದೆ. ಒಂದು ವೇಳೆ ನೀವು ಕೂಡ ಇಂತಹ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ನಿಮ್ಮ ಬೆಡ್ರೂಮ್ನಲ್ಲಿ ಈ ಕೆಳಗಿನ ವಾಸ್ತು ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ದಾಂಪತ್ಯವನ್ನು ಮಧುರವಾಗಿಸಿಕೊಳ್ಳಬಹುದು.
ಬೆಡ್ರೂಮ್ ಮತ್ತು ಮಲಗುವ ದಿಕ್ಕು ಸರಿಯಾಗಿರಲಿ:
ವಾಸ್ತು ಶಾಸ್ತ್ರದ ನಿಯಮಗಳ ಪ್ರಕಾರ, ಮಲಗುವ ಕೋಣೆಗೆ ದಕ್ಷಿಣ-ಪಶ್ಚಿಮ (ನೈಋತ್ಯ) ದಿಕ್ಕನ್ನು ಅತ್ಯಂತ ಶುಭ ಎಂದು ಪರಿಗಣಿಸಲಾಗುತ್ತದೆ. ಈ ದಿಕ್ಕಿನಲ್ಲಿ ಬೆಡ್ರೂಮ್ ಇರುವುದರಿಂದ ದಂಪತಿಗಳ ನಡುವಿನ ಸಂಬಂಧ ಮತ್ತಷ್ಟು ಗಟ್ಟಿಯಾಗುತ್ತದೆ. ಇದರೊಂದಿಗೆ, ಮಲಗುವಾಗ ನಿಮ್ಮ ತಲೆ ಯಾವಾಗಲೂ ದಕ್ಷಿಣ ಅಥವಾ ಪೂರ್ವ ದಿಕ್ಕಿನಲ್ಲಿರುವಂತೆ ನೋಡಿಕೊಳ್ಳಿ. ಈ ದಿಕ್ಕಿನಲ್ಲಿ ತಲೆ ಇಟ್ಟು ಮಲಗುವುದರಿಂದ ಮಾನಸಿಕ ಒತ್ತಡ ನಿವಾರಣೆಯಾಗಿ ನೆಮ್ಮದಿ ಸಿಗುತ್ತದೆ. ಇನ್ನು ನೀವು ಬಳಸುವ ಮಂಚವು (ಬೆಡ್) ಯಾವಾಗಲೂ ಆಯತಾಕಾರದಲ್ಲಿರಬೇಕೇ ವಿನಃ ಅಡ್ಡಾದಿಡ್ಡಿ ಆಕಾರದಲ್ಲಿರಬಾರದು.
ಗೋಡೆಗಳ ಬಣ್ಣಗಳ ಆಯ್ಕೆ ಆಹ್ಲಾದಕರವಾಗಿರಲಿ:
ಬೆಡ್ರೂಮ್ನ ಗೋಡೆಗಳಿಗೆ ಹಚ್ಚುವ ಬಣ್ಣಗಳು ನಮ್ಮ ಮನಸ್ಥಿತಿಯ ಮೇಲೆ ನೇರ ಪರಿಣಾಮ ಬೀರುತ್ತವೆ. ವಾಸ್ತು ಶಾಸ್ತ್ರದ ಪ್ರಕಾರ, ಮಲಗುವ ಕೋಣೆಯ ಗೋಡೆಗಳಿಗೆ ಯಾವಾಗಲೂ ತಿಳಿ ಗುಲಾಬಿ (Light Pink) ಅಥವಾ ಪೀಚ್ (Peach) ಬಣ್ಣಗಳನ್ನು ಬಳಸುವುದು ಉತ್ತಮ. ಇಂತಹ ತಿಳಿ ಬಣ್ಣಗಳು ದಂಪತಿಗಳ ನಡುವೆ ಪ್ರೀತಿ ಮತ್ತು ಮನಸ್ಸಿಗೆ ಶಾಂತಿಯನ್ನು ವೃದ್ಧಿಸಲು ಸಹಾಯ ಮಾಡುತ್ತವೆ. ಗಾಢವಾದ ಅಥವಾ ಕತ್ತಲೆಯ ಅನುಭವ ನೀಡುವ ಬಣ್ಣಗಳನ್ನು ಬೆಡ್ರೂಮ್ನಲ್ಲಿ ಬಳಸಬೇಡಿ.
ಕನ್ನಡಿಯ ಸ್ಥಾನದ ಬಗ್ಗೆ ಇರಲಿ ಎಚ್ಚರ:
ಅನೇಕರು ತಮಗರಿವಿಲ್ಲದೇ ಮಾಡುವ ದೊಡ್ಡ ವಾಸ್ತು ತಪ್ಪು ಎಂದರೆ ಬೆಡ್ರೂಮ್ನಲ್ಲಿ ಕನ್ನಡಿ (Glass) ಇಡುವ ಜಾಗ. ಮಲಗುವ ಕೋಣೆಯಲ್ಲಿ ಮಂಚದ ನೇರ ಎದುರುಗಡೆ ಅಂದರೆ ನೀವು ಮಲಗಿದ್ದಾಗ ನಿಮ್ಮ ಪ್ರತಿಬಿಂಬ ಕಾಣಿಸುವಂತೆ ಎಂದಿಗೂ ಕನ್ನಡಿಯನ್ನು ಅಳವಡಿಸಬಾರದು. ಈ ರೀತಿಯ ತಪ್ಪು ವಾಸ್ತು ಸ್ಥಿತಿಯಿಂದಾಗಿ ದಂಪತಿಗಳಲ್ಲಿ ಆರೋಗ್ಯ ಸಂಬಂಧಿ ಸಮಸ್ಯೆಗಳು ಮತ್ತು ಪರಸ್ಪರ ಅಪನಂಬಿಕೆಗಳು ಹೆಚ್ಚಾಗುವ ಸಾಧ್ಯತೆ ಇರುತ್ತದೆ.
ದಾಂಪತ್ಯ ಜೀವನದಲ್ಲಿ ಸಂತೋಷ ಮೂಡಲು ಬೆಡ್ರೂಮ್ನಲ್ಲಿ ಲವ್ಬರ್ಡ್ಸ್ (Lovebirds) ಅಥವಾ ಹಂಸಗಳ ಜೋಡಿಯ ಸುಂದರವಾದ ಚಿತ್ರಗಳನ್ನು ಹಾಕಬೇಕು. ಇದು ವೈವಾಹಿಕ ಜೀವನದಲ್ಲಿ ಸಂತಸವನ್ನು ತರುತ್ತದೆ. ಇದರೊಂದಿಗೆ, ದಂಪತಿಗಳು ತಮ್ಮದೇ ಆದ ನಗುತ್ತಿರುವ ಸುಂದರ ಭಾವಚಿತ್ರವನ್ನು (Couple photo) ಕೋಣೆಯ ದಕ್ಷಿಣ-ಪಶ್ಚಿಮ ದಿಕ್ಕಿನ ಗೋಡೆಯ ಮೇಲೆ ಹಾಕಬಹುದು. ಆದರೆ ನೆನಪಿರಲಿ, ಬೆಡ್ರೂಮ್ನಲ್ಲಿ ಯುದ್ಧದ ದೃಶ್ಯಗಳು, ಉಗ್ರ ಪ್ರಾಣಿಗಳು ಅಥವಾ ಒಂಟಿತನ ಹಾಗೂ ಉದಾಸೀನತೆ ಬಿಂಬಿಸುವ ಚಿತ್ರಗಳನ್ನು ಯಾವುದೇ ಕಾರಣಕ್ಕೂ ಹಾಕಬಾರದು.
ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿ:
ನಿಮ್ಮ ಮಲಗುವ ಕೋಣೆಯಲ್ಲಿ ಕಸ-ಕಡ್ಡಿ, ಅನಗತ್ಯ ವಸ್ತುಗಳು ಅಥವಾ ಕೆಟ್ಟುಹೋದ ಎಲೆಕ್ಟ್ರಾನಿಕ್ ಉಪಕರಣಗಳನ್ನು ಎಂದಿಗೂ ಇಡಬೇಡಿ. ಬೆಡ್ರೂಮ್ನಲ್ಲಿ ಇಂತಹ ನಿರುಪಯುಕ್ತ ವಸ್ತುಗಳನ್ನು ಸಂಗ್ರಹಿಸಿಡುವುದರಿಂದ ಅಲ್ಲಿ ನಕಾರಾತ್ಮಕ ಶಕ್ತಿ ಉತ್ಪತ್ತಿಯಾಗುತ್ತದೆ. ಇದು ಪತಿ-ಪತ್ನಿಯರ ನಡುವೆ ಸಣ್ಣ ವಿಷಯಗಳಿಗೂ ದೊಡ್ಡ ಮಟ್ಟದ ಜಗಳಗಳು ಮತ್ತು ಅಸಮಾಧಾನಗಳು ಸೃಷ್ಟಿಯಾಗಲು ಪ್ರಮುಖ ಕಾರಣವಾಗುತ್ತದೆ. ಆದ್ದರಿಂದ ಕೋಣೆಯನ್ನು ಸದಾ ಸ್ವಚ್ಛವಾಗಿಡಿ.
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ನವದೆಹಲಿ, ಜೂನ್ 7: ಈ ವಾರಾಂತ್ಯದಲ್ಲಿ ಭಾರತವೂ ಒಳಗೊಂಡಂತೆ ಬಹುತೇಕ ಕಡೆ ಚಿನ್ನದ ಬೆಲೆಯಲ್ಲಿ (Gold Price) ಭರ್ಜರಿ ಇಳಿಕೆ ಆಗಿದೆ. ಭಾರತದಲ್ಲಿ ಹತ್ತು ಗ್ರಾಮ್ ಆಭರಣ ಚಿನ್ನದ ಬೆಲೆ 2,750 ರೂನಷ್ಟು ಕಡಿಮೆಗೊಂಡಿದೆ. ಇದರ ಬೆಲೆ ಗ್ರಾಮ್ಗೆ 14,000 ರೂ ಮಟ್ಟಕ್ಕೆ ತಗ್ಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಕಡಿಮೆಗೊಂಡಿದೆ. ಬೆಳ್ಳಿ ಬೆಲೆಯೂ ಗ್ರಾಮ್ಗೆ 10 ರೂನಷ್ಟು ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,40,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,52,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,40,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 26,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜೂನ್ 7ಕ್ಕೆ)
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,273 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,000 ರೂ
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,455 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 265 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,273 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,000 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 265 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ರಾಜೌರಿ, ಜೂನ್ 07: ಜಮ್ಮು ಮತ್ತು ಕಾಶ್ಮೀರ(Jammu and Kashmir)ದ ರಾಜೌರಿಯಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆ ವೇಳೆ ಕಂದಕಕ್ಕೆ ಬಿದ್ದು ಸೈನಿಕರೊಬ್ಬರು ಹುತಾತ್ಮರಾಗಿರುವ ಘಟನೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಕಠಿಣ ಪರ್ವತ ಪ್ರದೇಶಗಳಲ್ಲಿ ದೇಶದ ಭದ್ರತೆಗಾಗಿ ಹಾಗೂ ಗಡಿಗಳನ್ನು ಭಯೋತ್ಪಾದಕರಿಂದ ಮುಕ್ತಗೊಳಿಸಲು ಅಪ್ರತಿಮ ಧೈರ್ಯದಿಂದ ಹೋರಾಡುತ್ತಿದ್ದ ಭಾರತೀಯ ಸೇನೆಯ ವೀರ ಅಧಿಕಾರಿ, ಲೆಫ್ಟಿನೆಂಟ್ ಬೀರೇಶ್ವರ್ ಗೋಸ್ವಾಮಿ ಅವರು ಶನಿವಾರ ಸಂಜೆ ಕರ್ತವ್ಯದ ಅವಧಿಯಲ್ಲಿ ಹುತಾತ್ಮರಾಗಿದ್ದಾರೆ.
ರಾಜೌರಿಯ ದುರ್ಗಮ ಕಾಡುಗಳಲ್ಲಿ ಅಡಗಿರುವ ಪಾಕಿಸ್ತಾನಿ ಭಯೋತ್ಪಾದಕರನ್ನು ಪತ್ತೆಹಚ್ಚಲು ಕಳೆದ 15 ದಿನಗಳಿಂದ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಜಂಟಿ ಕಾರ್ಯಾಚರಣೆಯಾದ ‘ಆಪರೇಷನ್ ಶೇರುವಾಲಿ’ ನೇತೃತ್ವವನ್ನು ಇವರು ವಹಿಸಿದ್ದರು.
ಗುಪ್ತಚರ ಮಾಹಿತಿಯ ಆಧಾರದ ಮೇಲೆ ಸೇನೆ, ಜಮ್ಮು ಕಾಶ್ಮೀರ ಪೊಲೀಸ್ ಮತ್ತು ಅರೆಸೈನಿಕ ಪಡೆಗಳು ಜಂಟಿಯಾಗಿ ನಡೆಸುತ್ತಿದ್ದ ಈ ಮಹತ್ವದ ಶೋಧ ಕಾರ್ಯಾಚರಣೆಯು ಯಶಸ್ಸಿನ ಹಂತ ತಲುಪಿತ್ತು. ಶನಿವಾರ ಸಂಜೆ ಡೋರಿಮಲ್ ಪ್ರದೇಶದ ಕಡಿದಾದ ಬಂಡೆಗಳು ಹಾಗೂ ದುರ್ಗಮ ಪರ್ವತಗಳ ನಡುವೆ ಕಾರ್ಯಾಚರಣೆಯಲ್ಲಿದ್ದಾಗ, ಹವಾಮಾನ ವೈಪರೀತ್ಯ ಹಾಗೂ ಅಪಾಯಕಾರಿ ಭೌಗೋಳಿಕ ಪರಿಸ್ಥಿತಿಯಿಂದಾಗಿ ಲೆಫ್ಟಿನೆಂಟ್ ಬೀರೇಶ್ವರ್ ಗೋಸ್ವಾಮಿ ಅವರು ಆಕಸ್ಮಿಕವಾಗಿ 30 ಮೀಟರ್ ಆಳದ ಕಂದಕಕ್ಕೆ ಜಾರಿ ಬಿದ್ದರು.
ತಕ್ಷಣವೇ ಸಹ ಸೈನಿಕರು ಅತ್ಯಂತ ವೇಗವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿ ಅವರನ್ನು ಹೊರತೆಗೆದರಾದರೂ, ಗಂಭೀರ ಗಾಯಗಳಾಗಿದ್ದರಿಂದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವೀರ ಅಧಿಕಾರಿಯ ಈ ಅತ್ಯುನ್ನತ ದೇಶಭಕ್ತಿಯನ್ನು ಶ್ಲಾಘಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶ ಹಂಚಿಕೊಂಡಿರುವ ಭಾರತೀಯ ಸೇನೆಯ ವೈಟ್ ನೈಟ್ ಕಾರ್ಪ್ಸ್ ತೀವ್ರ ಸಂತಾಪ ಸೂಚಿಸಿದೆ.
VIDEO | General Officer Commanding (GOC) of the White Knight Corps, Lieutenant General PK Mishra, and all ranks pay homage to Lieutenant Beereshwar Goswami in Jammu.
The White Knight Corps has expressed grief over the death of Lieutenant Beereshwar Goswami, who lost his life… pic.twitter.com/EaIyLYcxdg
ಅಪಾಯಕಾರಿ ಮತ್ತು ಕಠಿಣ ಪರಿಸ್ಥಿತಿಗಳಲ್ಲೂ ಧೃತಿಗೆಡದೆ ರಾಷ್ಟ್ರ ರಕ್ಷಣೆಗಾಗಿ ಸರ್ವೋಚ್ಚ ತ್ಯಾಗ ಮಾಡಿದ ಲೆಫ್ಟಿನೆಂಟ್ ಬೀರೇಶ್ವರ್ ಗೋಸ್ವಾಮಿ ಅವರ ಶೌರ್ಯಕ್ಕೆ ಇಡೀ ದೇಶ ತಲೆಬಾಗುತ್ತದೆ. ಕರ್ತವ್ಯ ಪ್ರಜ್ಞೆ, ಧೈರ್ಯ ಮತ್ತು ರಾಷ್ಟ್ರಕ್ಕೆ ಅವರು ನೀಡಿದ ನಿಸ್ವಾರ್ಥ ಸೇವೆ ಸಮಾಜದ ಎಲ್ಲಾ ವರ್ಗಗಳಿಗೆ ಮತ್ತು ಮುಂಬರುವ ಯುವ ಪೀಳಿಗೆಗೆ ಎಂದಿಗೂ ಸ್ಫೂರ್ತಿಯ ಮೂಲವಾಗಿ ಮುಂದುವರೆಯುತ್ತದೆ.
ಅಧಿಕಾರಿಯ ತ್ಯಾಗವನ್ನು ವ್ಯರ್ಥವಾಗಲು ಬಿಡದ ಭಾರತೀಯ ಸಶಸ್ತ್ರ ಪಡೆಗಳು, ರಾಜೌರಿ ಪ್ರದೇಶವನ್ನು ಭಯೋತ್ಪಾದಕರಿಂದ ಸಂಪೂರ್ಣವಾಗಿ ಮುಕ್ತಗೊಳಿಸಲು ತನ್ನ ಶೋಧ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿವೆ. ಹೆಚ್ಚುವರಿ ಪಡೆಗಳನ್ನು ಗಡಿಗೆ ನಿಯೋಜಿಸಲಾಗಿದ್ದು, ಆಧುನಿಕ ಡ್ರೋನ್ಗಳು ಮತ್ತು ಅತ್ಯಾಧುನಿಕ ತಾಂತ್ರಿಕ ಕಣ್ಗಾವಲು ವಿಧಾನಗಳನ್ನು ಬಳಸಿ ಇಡೀ ಕಾಡನ್ನು ಸುತ್ತುವರಿಯಲಾಗಿದೆ. ದೇಶದ ಗಡಿ ಕಾಯುವಲ್ಲಿ ಮತ್ತು ನಾಗರಿಕರ ರಕ್ಷಣೆಯಲ್ಲಿ ಭಾರತೀಯ ಸೇನೆ ತೋರುತ್ತಿರುವ ಈ ಅದಮ್ಯ ಬದ್ಧತೆ ಮತ್ತು ದೇಶಭಕ್ತಿ ಇಡೀ ಭಾರತೀಯರ ಹೆಮ್ಮೆಯಾಗಿದೆ.
ಬೆಂಗಳೂರು, ಜೂನ್ 07: ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನ. ಇತ್ತ ಬಿಜೆಪಿ(BJP) ಮತ್ತು ಜೆಡಿಎಸ್ ಮೈತ್ರಿಕೂಟದಲ್ಲಿ ಇನ್ನೂ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿಲ್ಲ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು (HD Deve Gowda) ಎನ್ಡಿಎ ಅಭ್ಯರ್ಥಿಯಾಗಿ ಮತ್ತೊಮ್ಮೆ ರಾಜ್ಯಸಭೆಗೆ ಕಳುಹಿಸುವ ಬಗ್ಗೆ ಬಿಜೆಪಿ ಹೈಕಮಾಂಡ್ ಇನ್ನೂ ಅಂತಿಮ ನಿರ್ಧಾರ ಪ್ರಕಟಿಸಿಲ್ಲ. ಇಂದು ಮಧ್ಯಾಹ್ನದ ಬಳಿಕ ಬಿಜೆಪಿ ಅಭ್ಯರ್ಥಿ ಘೋಷಣೆ ಸಾಧ್ಯತೆ ಇದೆ. ಒಂದು ವೇಳೆ ದೇವೇಗೌಡರು ಸ್ಪರ್ಧಿಸಲು ಒಪ್ಪದಿದ್ದರೆ, ಉಭಯ ಪಕ್ಷಗಳಿಗೂ ಸಮ್ಮತಿಯಾಗುವ ಹೋಟೆಲ್ ಉದ್ಯಮಿಯೊಬ್ಬರಿಗೆ ಟಿಕೆಟ್ ನೀಡುವ ಬಗ್ಗೆಯೂ ತೆರೆಮರೆಯ ಗಂಭೀರ ಚರ್ಚೆಗಳು ನಡೆಯುತ್ತಿವೆ.
ಮುಖ್ಯಾಂಶಗಳು
ರಾಜ್ಯಸಭೆ ಮತ್ತು ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಆಯ್ಕೆ ಕಗ್ಗಂಟು
ರಾಜ್ಯಸಭೆಯ 1 ಸ್ಥಾನಕ್ಕೆ ರೇಸ್ನಲ್ಲಿ ಮೂವರು
ಇಂದು ಮಧ್ಯಾಹ್ನದ ಬಳಿಕ ಬಿಜೆಪಿಯಿಂದ ಅಭ್ಯರ್ಥಿ ಘೋಷಣೆ ಸಾಧ್ಯತೆ
ಯಾರೆಲ್ಲಾ ರೇಸ್ನಲ್ಲಿ?
ಇನ್ನು ರಾಜ್ಯಸಭೆಯ ಆ ಒಂದು ಸ್ಥಾನಕ್ಕೆ ದೇವೇಗೌಡರು ಕಣಕ್ಕಿಳಿಯದಿದ್ದರೆ ಮಾತ್ರ ಬಿಜೆಪಿ ತನ್ನದೇ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ. ಸದ್ಯ ಈ 1 ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ರೇಸ್ನಲ್ಲಿ ಮೂವರು ಇದ್ದಾರೆ. ಮಾಜಿ ಸಿಎಂ ಡಿವಿ ಸದಾನಂದಗೌಡ, ಮಾಜಿ ಸಂಸದೆ ಸುಮಲತಾ ಅಂಬರೀಶ್ ಹಾಗೂ ಹಿರಿಯ ನಾಯಕ ನಿರ್ಮಲ್ ಕುಮಾರ್ ಸುರಾನಾ ಅವರ ಹೆಸರುಗಳು ಮುಂಚೂಣಿಯಲ್ಲಿ ಕೇಳಿಬರುತ್ತಿವೆ. ಆದರೆ ದೇವೇಗೌಡರು ಸ್ಪರ್ಧಿಸುವುದು ಖಚಿತವಾದರೆ, ಬಿಜೆಪಿ ಕೇವಲ ವಿಧಾನಪರಿಷತ್ನ ಎರಡು ಸ್ಥಾನಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನ ಘೋಷಣೆ ಮಾಡಲಿದೆ. ಹೀಗಾಗಿ ಹೈಕಮಾಂಡ್ನ ಮುಂದಿನ ನಿರ್ಧಾರದ ಮೇಲೆ ಇದೀಗ ಮೈತ್ರಿಕೂಟದ ಎಲ್ಲಾ ನಾಯಕರ ಕಣ್ಣು ನೆಟ್ಟಿದೆ.
ಮಹಿಳಾ ಮಣಿಗಳ ಮಧ್ಯೆ ತೀವ್ರ ಪೈಪೋಟಿ
ವಿಧಾನಪರಿಷತ್ನ ಎರಡು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ವಿಚಾರದಲ್ಲೂ ಬಿಜೆಪಿಯಲ್ಲಿ ಭಾರಿ ಪೈಪೋಟಿ ಶುರುವಾಗಿದೆ. ಆಕಾಂಕ್ಷಿಗಳ ರೇಸ್ನಲ್ಲಿ ನಟಿ ಶ್ರುತಿ, ಸಿ. ಮಂಜುಳಾ, ರಘು ಕೌಟಿಲ್ಯ, ಲಿಂಗರಾಜ್ ಪಾಟೀಲ್, ಎನ್. ಮಹೇಶ್, ನಳೀನ್ ಕುಮಾರ್ ಕಟೀಲ್ ಹಾಗೂ ವೇಣುಗೋಪಾಲ್ ಇದ್ದಾರೆ. ಇವರಲ್ಲಿ ಮಹಿಳಾ ಕೋಟಾದಡಿ ಟಿಕೆಟ್ ಗಿಟ್ಟಿಸಿಕೊಳ್ಳಲು ನಟಿ ಶ್ರುತಿ ಮತ್ತು ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ. ಮಂಜುಳಾ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಪರಿಷತ್ ಟಿಕೆಟ್ ಹಂಚಿಕೆಯಲ್ಲಿ ‘ಒಬ್ಬ ಮಹಿಳೆ ಮತ್ತು ಒಬ್ಬ ಲಿಂಗಾಯತ’ ಅಥವಾ ‘ಒಬ್ಬ ಮಹಿಳೆ ಮತ್ತು ಒಬ್ಬ ಒಬಿಸಿ’ ಸೂತ್ರಕ್ಕೆ ಚಿಂತನೆ ನಡೆಸಲಾಗುತ್ತಿದೆ. ಆದರೆ ಕೊನೆಯ ಕ್ಷಣದಲ್ಲಿ ರಾಜ್ಯ ಕೋರ್ ಕಮಿಟಿ ಶಿಫಾರಸು ಮಾಡಿರುವ ಪಟ್ಟಿಯನ್ನು ಸಂಪೂರ್ಣವಾಗಿ ಪಕ್ಕಕ್ಕಿಟ್ಟು ಹೊಸ ಮುಖಗಳಿಗೆ ಹೈಕಮಾಂಡ್ ಮಣೆ ಹಾಕುವ ಸಾಧ್ಯತೆ ಕೂಡ ಇದೆ.
ಮುಂಬೈ, ಜೂನ್ 07: ಜನರಲ್ಲಿ ಆತಂಕ ಸೃಷ್ಟಸಿದ್ದ ಹಾವನ್ನು ಬ್ಲಿಂಕಿಟ್ ಡೆಲಿವರಿ ಬಾಯ್ ಹಿಡಿದು ಬ್ಯಾಗ್ಗೆ ತುಂಬಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಮುಂಬೈನಲ್ಲಿ ನಡೆದಿದೆ. ರಸ್ತೆಯೊಂದರಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವಲ್ಲಿ ಬ್ಲಿಂಕಿಟ್ (Blinkit) ಸಂಸ್ಥೆಯ ಡೆಲಿವರಿ ಏಜೆಂಟ್ ತೋರಿರುವ ಅದ್ಭುತ ಧೈರ್ಯ ಮತ್ತು ಸಮಯಪ್ರಜ್ಞೆಯ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದೆ. ರಸ್ತೆಯ ಮಧ್ಯದಲ್ಲಿ ಸಾರ್ವಜನಿಕರಿಗೆ ಆತಂಕ ಮೂಡಿಸಿದ್ದ ಹಾವೊಂದನ್ನು ಯಾವುದೇ ಅಂಜಿಕೆಯಿಲ್ಲದೆ, ಹಿಡಿದು ಸುರಕ್ಷಿತವಾಗಿ ಬ್ಯಾಗ್ಗೆ ಹಾಕಿರುವ ಈ ಯುವಕನ ಸಾಹಸಕ್ಕೆ ನೆಟ್ಟಿಗರು ಭಾರಿ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.
ಪ್ಯಾರಿಸ್ನ ಕ್ಲೇ ಕೋರ್ಟ್ನಲ್ಲಿ ನಡೆದ ರೋಲ್ಯಾಂಡ್ ಗ್ಯಾರೋಸ್ (ಫ್ರೆಂಚ್ ಓಪನ್) 2026ರ ಮಹಿಳಾ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ 19 ವರ್ಷದ ರಷ್ಯಾದ ಆಟಗಾರ್ತಿ ಮಿರಾ ಆಂಡ್ರೀವಾ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ಜೂನ್ 6ರಂದು ನಡೆದ ಅಂತಿಮ ಹಣಾಹಣಿಯಲ್ಲಿ ಪೋಲೆಂಡ್ನ ಮಾಯಾ ಚ್ವಾಲಿನ್ಸ್ಕಾ ವಿರುದ್ಧ 6-3, 6-2 ನೇರ ಸೆಟ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ಆಂಡ್ರೀವಾ ತಮ್ಮ ಚೊಚ್ಚಲ ಗ್ರಾಂಡ್ ಸ್ಲಾಮ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ಕೋರ್ಟ್ ಫಿಲಿಪ್-ಚಾಟ್ರಿಯರ್ನಲ್ಲಿ ನಡೆದ ಈ ಪಂದ್ಯದ ಆರಂಭದಲ್ಲಿ ಉಭಯ ಆಟಗಾರ್ತಿಯರ ನಡುವೆ ತೀವ್ರ ಪೈಪೋಟಿ ಕಂಡುಬಂತು. ಮೊದಲ ಐದು ಗೇಮ್ಗಳಲ್ಲಿ ಚ್ವಾಲಿನ್ಸ್ಕಾ 3-2 ಮುನ್ನಡೆ ಕಾಯ್ದುಕೊಂಡಿದ್ದರು.
ಆ ನಂತರ ಆಕ್ರಮಣಕಾರಿ ಆಟಕ್ಕೆ ಮುಂದಾದ 8ನೇ ಶ್ರೇಯಾಂಕಿತೆ ಆಂಡ್ರೀವಾ, ಸತತ 9 ಗೇಮ್ಗಳನ್ನು ಗೆಲ್ಲುವ ಮೂಲಕ ಎದುರಾಳಿಗೆ ದಿಕ್ಕುತೋಚದಂತೆ ಮಾಡಿದರು. ಈ ಮೂಲಕ ಮೊದಲ ಸೆಟ್ ಅನ್ನು 6-3 ಅಂತರದಿಂದ ಗೆದ್ದುಕೊಂಡರು.
ಎರಡನೇ ಸೆಟ್ನಲ್ಲಿ 5-0 ಭಾರಿ ಮುನ್ನಡೆ ಪಡೆದ ಆಂಡ್ರೀವಾ, ಅಂತಿಮವಾಗಿ ಎದುರಾಳಿಯ ಸರ್ವ್ ಅನ್ನು ಬ್ರೇಕ್ ಮಾಡಿ 6-2 ಅಂತರದಿಂದ ದ್ವಿತೀಯ ಸೆಟ್ ಗೆದ್ದುಕೊಂಡರು.
ಈ ಮೂಲಕ ಪೋಲೆಂಡ್ನ ಮಾಯಾ ಚ್ವಾಲಿನ್ಸ್ಕಾ ಅವರನ್ನು 6-3, 6-2 ಅಂತರದಿಂದ ಸೋಲಿಸಿ ಮಿರಾ ಆಂಡ್ರೀವಾ ತಮ್ಮ ಚೊಚ್ಚಲ ಗ್ರಾಂಡ್ ಸ್ಲಾಮ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ಮಿರಾ ಸಾಧನೆ:
ಕಿರಿಯ ವಯಸ್ಸಿನ ಚಾಂಪಿಯನ್: 19 ವರ್ಷದ ಮಿರಾ ಆಂಡ್ರೀವಾ, 1992ರಲ್ಲಿ ಮೋನಿಕಾ ಸೆಲೆಸ್ (18 ವರ್ಷ) ಪ್ರಶಸ್ತಿ ಗೆದ್ದ ನಂತರ ಫ್ರೆಂಚ್ ಓಪನ್ ಕಿರೀಟ ಮುಡಿಗೇರಿಸಿಕೊಂಡ ಅತ್ಯಂತ ಕಿರಿಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಕೋಚ್ ಪ್ರೇರಣೆ: ಮಾಜಿ ಚಾಂಪಿಯನ್ ಕಾನ್ಚಿತಾ ಮಾರ್ಟಿನೆಜ್ ಅವರ ಮಾರ್ಗದರ್ಶನದಲ್ಲಿ ಆಡುತ್ತಿರುವ ಆಂಡ್ರೀವಾ, ಈ ಗೆಲುವಿನೊಂದಿಗೆ ಡಬ್ಲ್ಯೂಟಿಎ (WTA) ರೇಂಕಿಂಗ್ನಲ್ಲಿ ಅಗ್ರಸ್ಥಾನದತ್ತ ಮುನ್ನಡೆದಿದ್ದಾರೆ.
ಮಾಯಾ ಸಾಧನೆ:
ಚ್ವಾಲಿನ್ಸ್ಕಾ ಮಿಂಚಿಂಗ್: ಫೈನಲ್ ಪಂದ್ಯದಲ್ಲಿ ಸೋತರೂ ಸಹ, ವಿಶ್ವ ರ್ಯಾಂಕಿಂಗ್ನಲ್ಲಿ 114ನೇ ಸ್ಥಾನದಲ್ಲಿದ್ದ ಪೋಲೆಂಡ್ನ 24 ವರ್ಷದ ಮಾಯಾ ಚ್ವಾಲಿನ್ಸ್ಕಾ ಕ್ವಾಲಿಫೈಯರ್ ಹಂತದಿಂದ ಫೈನಲ್ ತಲುಪಿದ ಮೊದಲ ಆಟಗಾರ್ತಿ ಎಂಬ ದಾಖಲೆ ನಿರ್ಮಿಸಿದ್ದಾರೆ.
ರ್ಯಾಂಕಿಂಗ್ನಲ್ಲಿ ಜಿಗಿತ: ಈ ರನ್ನರ್-ಅಪ್ ಪ್ರಶಸ್ತಿಯೊಂದಿಗೆ ಅವರು ವಿಶ್ವ ರ್ಯಾಂಕಿಂಗ್ನಲ್ಲಿ ಮಾಯಾ ಚ್ವಾಲಿನ್ಸ್ಕಾ 21ನೇ ಸ್ಥಾನಕ್ಕೆ ಜಿಗಿದಿದ್ದಾರೆ.
ಫ್ರೆಂಚ್ ಓಪನ್ 2026ರ ಪುರುಷರ ಸಿಂಗಲ್ಸ್ ಫೈನಲ್ ಪಂದ್ಯವು ಇಂದು ಭಾನುವಾರ, 7 ಜೂನ್ 2026 ರಂದು ನಡೆಯಲಿದೆ. ಫೈನಲ್ ಪಂದ್ಯದಲ್ಲಿ ಜರ್ಮನಿಯ ಅಲೆಕ್ಸಾಂಡರ್ ಝ್ವೇರೆಫ್ ಮತ್ತು ಇಟಲಿಯ ಯುವ ಆಟಗಾರ ಫ್ಲೇವಿಯೊ ಕೊಬೊಲ್ಲಿ ಪ್ರಶಸ್ತಿಗಾಗಿ ಸೆಣಸಾಡಲಿದ್ದಾರೆ.