Headlines

nagaraj11081993

ಐವರು ಮಹಿಳೆಯರಿಂದ ಥಿಯೇಟರ್‌ ಮಾಲೀಕನ ಸುಲಿಗೆ: ಬ್ಲ್ಯಾಕ್​​ಮೇಲ್​​ ಮಾಡಿ ಪೀಕಿದ್ದು 25 ಲಕ್ಷ ರೂ.!

ರಾಮನಗರ, ಮಾರ್ಚ್​​ 31:  ಐದು ಮಹಿಳೆಯರ ಗುಂಪೊಂದು ಬೆದರಿಸಿ ಚಿತ್ರಮಂದಿರದ ಮಾಲೀಕರೊಬ್ಬರಿಂದ 25 ಲಕ್ಷ ರೂಪಾಯಿ ಹಣವನ್ನು ವಸೂಲಿ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಈ ಬಗ್ಗೆ ಪಟ್ಟಣದ ಅಗ್ರಹಾರ ಬಡಾವಣೆ ನಿವಾಸಿಯಾಗಿರುವ 52 ವರ್ಷದ ವ್ಯಕ್ತಿ ಪೊಲೀಸರಿಗೆ ದೂರು ನೀಡಿದ್ದಾರೆ. ಏಳು ವರ್ಷಗಳ ಹಿಂದೆ ಪತ್ನಿ ದೂರವಾದ ಬಳಿಕ ಅವರು ಒಬ್ಬರೇ ವಾಸವಾಗಿದ್ದರು. ತಾಯಿ-ತಂದೆ ಅಥವಾ ಮಕ್ಕಳು ಯಾರೂ ಅವರಿಗೆ ಇಲ್ಲ. ಈ ನಡುವೆ ಆರೋಪಿಗಳ ಪೈಕಿ ಓರ್ವಳು ಮೊದಲು ಮದುವೆಯಾಗುವ ಆಸೆ ವ್ಯಕ್ತಪಡಿಸಿ ಸಂತ್ರಸ್ತರನ್ನು…

Read More

ಒಬ್ಬರಿಂದ ಪಕ್ಷ ನಡೆಯಲ್ಲ: ಸಂಚಲನ ಮೂಡಿಸಿದ ಡಿಕೆ ಶಿವಕುಮಾರ್ ಹೇಳಿಕೆ

ದಾವಣಗೆರೆ, (ಮಾರ್ಚ್ 31): ಸಚಿವ ಎಸ್​ಎಸ್​ ಮಲ್ಲಿಕಾರ್ಜು ಆಡಿದ ಮಾತು ಹಾಗೂ ಮುಸ್ಲಿಮರಿಗೆ ಟಿಕೆಟ್ ಕೈತಪ್ಪಿದ್ದರಿಂದ ಜಮಿರ್ ಅಹಮ್ಮದ್ ಖಾನ್ ಮುನಿಸಿಕೊಂಡಿದ್ದು, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆ ಪ್ರಚಾರದಿಂದ ದೂರ ಉಳಿದುಕೊಂಡಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸುಮಾರು 80 ಸಾವಿರ ಮುಸ್ಲಿಂ ಮತಗಳಿವೆ. ಹೀಗಾಗಿ ಜಮೀರ್ ಅಹಮ್ಮದ್ ಖಾನ್ ಅವರನ್ನು ಪ್ರಚಾರಕ್ಕೆ ಕರೆಯುಸುವಂತೆ ಆಗ್ರಹಗಳು ವ್ಯಕ್ತವಾಗುತ್ತಿವೆ. ಆದ್ರೆ, ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ ಒಬ್ಬರಿಂದ ಪಕ್ಷ ನಡೆಯಲ್ಲ ಎಂದು ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದು, ಇದು…

Read More

ಒಂದೇ ಒಂದು ಪಂದ್ಯ ಗೆದ್ದಿರುವ RCB ಮತ್ತು RR ನಡುವೆ ಭಾರೀ ಅಂತರ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ ಮೂರು ದಿನಗಳು ಕಳೆದಿವೆ. ಈ ಮೂರು ದಿನಗಳಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿದಿವೆ. ಈ ಆರು ತಂಡಗಳಲ್ಲಿ ಅತ್ಯಧಿಕ ನೆಟ್​ ರನ್ ರೇಟ್ ಪಡೆದಿರುವುದು ರಾಜಸ್ಥಾನ್ ರಾಯಲ್ಸ್. ಅದು ಸಹ ಸಿಎಸ್​ಕೆ ತಂಡವನ್ನು ಹೀನಾಯವಾಗಿ ಸೋಲಿಸುವ ಮೂಲಕ ಎಂಬುದು ವಿಶೇಷ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು ಮುಂಬೈ ಇಂಡಿಯನ್ಸ್ ತಂಡವು ಕೆಕೆಆರ್ ತಂಡವನ್ನು…

Read More

ಗುಜರಾತ್​ನಲ್ಲಿ 3,300 ಕೋಟಿ ರೂ ವೆಚ್ಚದ ಕೇನ್ಸ್ ಸಮಿಕಾನ್ ಘಟಕ ಉದ್ಘಾಟನೆ ಮಾಡಿದ ನರೇಂದ್ರ ಮೋದಿ

ಅಹ್ಮದಾಬಾದ್, ಮಾರ್ಚ್ 31: ಇಲ್ಲಿಗೆ ಸಮೀಪದ ಸಾನಂದ್​ನಲ್ಲಿ ಕೇನ್ಸ್ ಸಮಿಕಾನ್​ನ ಒಸಾಟ್ (OSAT- Outsourced Semiconductor Assembly and Test) ಘಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಇದು 3,300 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಸೆಮಿಕಂಡಕ್ಟರ್ ಅಸೆಂಬ್ಲಿ ಮತ್ತು ಟೆಸ್ಟಿಂಗ್ ಫೆಸಿಲಿಟಿ ಆಗಿದೆ. ಇಂಡಿಯಾ ಸೆಮಿಕಂಡಕ್ಟರ್ ಮಿಷನ್ ಅಡಿಯಲ್ಲಿ ಶುರುವಾಗಿರುವ ಎರಡನೇ ಚಿಪ್ ಮ್ಯಾನುಫ್ಯಾಕ್ಚರಿಂಗ್ ಘಟಕ ಇದಾಗಿದೆ. ಇದೇ ತಿಂಗಳು ಗುಜರಾತ್​ನಲ್ಲೇ ಅಮೆರಿಕ ಮೂಲದ ಮೈಕ್ರಾನ್ ಟೆಕ್ನಾಲಜಿಯಿಂದ ಭಾರತದ ಮೊದಲ ಸೆಮಿಕಂಡಕ್ಟರ್ ತಯಾರಕ ಘಟಕ…

Read More

ದಾವಣಗರೆ ದಕ್ಷಿಣ ಬೈ ಎಲೆಕ್ಷನ್​​ನಿಂದ ಜಮೀರ್ ದೂರವಾಗಿದ್ಯಾಕೆ? ಅಸಲಿಗೆ ಆಗಿದ್ದೇನು?

ದಾವಣಗೆರೆ/ಬಾಗಲಕೋಟೆ, (ಮಾರ್ಚ್ 31): ದಾವಣಗೆರೆ ದಕ್ಷಿಣ ಕ್ಷೇತ್ರದಿಂದ (Davanagere South By Election)  ಮುಸ್ಲಿಂ ಮುಖಂಡ ಸಾದಿಕ್​ ಪೈಲ್ವಾನ್​​ ಅವರಿಗೆ ಟಿಕೆಟ್ ನೀಡಬೇಕೆಂದು ಸಚಿವ ಜಮೀರ್ ಅಹಮ್ಮದ್ ಖಾನ್ (zameer ahmed khan )ಬಿಗಿಪಟ್ಟು ಹಿಡಿದಿದ್ದರು. ಈ ಸಂಬಂಧ ಸಚಿವ ಎಸ್​​ಎಸ್​ ಮಲ್ಲಿಕಾರ್ಜುನ ಆಕ್ಷೇಪ ವ್ಯಕ್ತಪಡಿಸಿದ್ದು, ಬಹಿರಂಗವಾಗಿ ಜಮೀರ್ ಅಹಮ್ಮದ್ ಖಾನ್​​ಗೆ ಏಕವಚಲನದಲ್ಲಿ ನಿಂದಿಸಿದ್ದರು. ಇದು ಮುಸ್ಲಿಂ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೊಂದೆಡೆ ತಮ್ಮ ಸಮುದಾಯಕ್ಕೆ ಟಿಕೆಟ್ ಕೈತಪ್ಪಿದ್ದರಿಂದ ಜಮೀರ್ ಅಸಮಾಧಾನಗೊಂಡಿದ್ದು, ಚುನಾವಣಾ ಪ್ರಚಾರದಿಂದ ದೂರ ಇದ್ದಾರೆ….

Read More

ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಬಿಡುಗಡೆ ಮತ್ತೆ ಮುಂದಕ್ಕೆ?

‘ಆರ್​​ಆರ್​​ಆರ್’ ಸಿನಿಮಾದ ಬಳಿಕ ರಾಮ್ ಚರಣ್ (Ram Charan) ನಟನೆಯ ಸತತ ಎರಡು ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಫ್ಲಾಪ್ ಆಗಿವೆ. ‘ಗೇಮ್ ಚೇಂಜರ್’ ಮತ್ತು ‘ಆಚಾರ್ಯ’ ಎರಡೂ ಸಿನಿಮಾಗಳು ಹೀನಾಯ ಸೋಲು ಕಂಡಿವೆ. ಇದೀಗ ರಾಮ್ ಚರಣ್ ಅವರು ಗೆಲುವಿನ ಹುಡುಕಾಟದಲ್ಲಿದ್ದಾರೆ. ರಾಮ್ ಚರಣ್ ಪ್ರಸ್ತುತ ‘ಪೆದ್ದಿ’ ಸಿನಿಮಾ ಬಹುತೇಕ ಮುಗಿಸಿದ್ದು ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಏಪ್ರಿಲ್ 30 ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ ಎನ್ನಲಾಗಿತ್ತು. ಆದರೆ ನಿರ್ಮಾಪಕರೊಬ್ಬರು ಸಿನಿಮಾದ ಬಿಡುಗಡೆ ಮತ್ತೆ ಮುಂದೂಡಲ್ಪಟ್ಟಿರುವ ಬಗ್ಗೆ ಸುಳಿವು…

Read More

ರಾಯನ್ ಹಾಗೂ ಕುಟುಂಬದ ಜೊತೆ ಸಮ್ಮರ್ ವೆಕೇಶನ್ ತೆರಳಿದ ಮೇಘನಾ ರಾಜ್

ಮೇಘನಾ ರಾಜ್ ಮಗ ರಾಯನ್ ಹಾಗೂ ತಮ್ಮ ಕುಟುಂಬದ ಜೊತೆ ವೆಕೇಶನ್ ತೆರಳಿದ್ದಾರೆ. ಈ ಸಂದರ್ಭದ ಫೋಟೋ ಹಂಚಿಕೊಂಡಿದ್ದು, ಅವು ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಮೇಘನಾ ರಾಜ್ ಅವರ ಮಗ ರಾಯನ್ ಓದುವುದರಲ್ಲಿ ತೊಡಗಿಕೊಂಡಿದ್ದಾನೆ. ಈಗ ಸಮ್ಮರ್ ವೆಕೇಶನ್ ಶುರುವಾಗಿದೆ. ಹೀಗಾಗಿ, ಮಗನ ಜೊತೆ ಮೇಘನಾ ಪ್ರವಾಸ ತೆರಳಿದ್ದಾರೆ. ಈ ಸುಂದರ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಮೇಘನಾ ರಾಜ್ ಅವರಿಗೆ ಈಗ ಮಗನೇ ಪ್ರಪಂಚ. ಚಿರಂಜೀವಿ ಸರ್ಜಾ ನಿಧನ ಹೊಂದುವಾಗ ಮೇಘನಾ…

Read More

ಪಾಕಿಸ್ತಾನ್ ವೇಗಿ ನಸೀಮ್ ಶಾಗೆ 2 ಕೋಟಿ ರೂ. ದಂಡ..!

ಪಾಕಿಸ್ತಾನದ ವೇಗಿ ನಸೀಮ್ ಶಾ (Naseem Shah) ಅವರಿಗೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ (PCB) ಸುಮಾರು 2 ಕೋಟಿ ರೂಪಾಯಿ (PKR) ಭಾರಿ ದಂಡ ವಿಧಿಸಿದೆ. ಪಾಕಿಸ್ತಾನ ಕ್ರಿಕೆಟ್ ಇತಿಹಾಸದಲ್ಲೇ ಇದು ಒಬ್ಬ ಆಟಗಾರನಿಗೆ ವಿಧಿಸಲಾದ ಅತಿ ದೊಡ್ಡ ಮೊತ್ತದ ದಂಡ ಎಂಬುದು ವಿಶೇಷ. ದಂಡ ವಿಧಿಸಲು ಕಾರಣವೇನು? ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಮರಿಯಮ್ ನವಾಝ್ ಅವರನ್ನು ಟೀಕಿಸಿ ನಸೀಮ್ ಶಾ ಅವರ ಎಕ್ಸ್ (ಟ್ವಿಟರ್) ಖಾತೆಯಿಂದ ಪೋಸ್ಟ್ ಮಾಡಲಾಗಿತ್ತು. ಪಾಕಿಸ್ತಾನ್ ಸೂಪರ್ ಲೀಗ್​ನ (PSL 2026)…

Read More

ದೇವನಹಳ್ಳಿ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು: ಚಲಿಸುತ್ತಿದ್ದ ವಾಹನದಲ್ಲಿ ದಿಢೀರ್ ಬೆಂಕಿ, ಪ್ರಯಾಣಿಕರು ಪಾರು!

ದೇವನಹಳ್ಳಿ,ಮಾ.31: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೊರವಲಯದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಮಂಗಳವಾರ (ಮಾ.31) ನಡೆದಿದೆ. ಕಾರು ಹೆದ್ದಾರಿಯಲ್ಲಿ ವೇ ಗವಾಗಿ ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಕಾರಿನ ಚಾಲಕ ಮತ್ತು ಪ್ರಯಾಣಿಕರು ಹೆದ್ದಾರಿ ಮಧ್ಯೆಯೇ ಕಾರನ್ನು ನಿಲ್ಲಿಸಿ ಕೆಳಗಿಳಿದಿದ್ದಾರೆ. ಅವರು ಇಳಿಯುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಕಾರಿನಾದ್ಯಂತ ಆವರಿಸಿದ್ದು, ನೋಡ ನೋಡುತ್ತಿದ್ದಂತೆ ಇಡೀ ಕಾರು ಬೆಂಕಿಗಾಹುತಿಯಾಗಿದೆ. ಇನ್ನು ಇದನ್ನು…

Read More

ಬೆಂಗಳೂರಿನಲ್ಲಿ ತೆಲಂಗಾಣದ ಯುವ ದಂಪತಿ ಸಾವು; ಪತಿಯ ಶವ ಕಂಡು 17ನೇ ಮಹಡಿಯಿಂದ ಜಿಗಿದ ಪತ್ನಿ!

ಬೆಂಗಳೂರು, ಮಾರ್ಚ್​ 31: ಕೌಟುಂಬಿಕ ಕಲಹದ ಹಿನ್ನೆಲೆ ತೆಲಂಗಾಣ ಮೂಲದ ಯುವ ಐಟಿ ದಂಪತಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ದುರ್ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪತಿಯ ಆತ್ಮಹತ್ಯೆ ನಂತರ ಪತ್ನಿ ಸಹ 17ನೇ ಮಹಡಿಯಿಂದ ಜಿಗಿದು ಮೃತಪಟ್ಟಿದ್ದಾರೆ. ಮಾನಸಿಕ ಒತ್ತಡದಿಂದ ಬಳಲುತ್ತಿದ್ದ ದಂಪತಿ ತೆಲಂಗಾಣದ ಸಿದ್ದಿಪೇಟ ಮೂಲದ 32 ವರ್ಷದ ಭಾನು ಚಂದರ್ ರೆಡ್ಡಿ ಕುಂಟಾ ತಮ್ಮ ನಿವಾಸದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿ ಬಿಬಿ…

Read More