All posts by nagaraj11081993

ಪ್ರಭಾಸ್ ಅಭಿಮಾನಿಗಳಿಗೆ ಸಿಹಿ ಸುದ್ದಿ, ನಿರೀಕ್ಷೆಗಿಂತಲೂ ಬೇಗ ಬರಲಿದೆ ‘ಕಲ್ಕಿ 2’

ಪ್ರಭಾಸ್ (Prabhas) ಸಿನಿಮಾಗಳು ಒಂದು ವರ್ಷಕ್ಕೆ ಮುಗಿದಿದ್ದೇ ಇಲ್ಲ. ಶುರುವಾದ ಬಳಿಕ ಬಿಡುಗಡೆಗೆ ಕನಿಷ್ಟ ಎರಡು ವರ್ಷಗಳಾದರೂ ಬೇಕು. ‘ಬಾಹುಬಲಿ’ ಸಿನಿಮಾ ಇಂದಲೂ ಇದೇ ಕತೆ ನಡೆಯುತ್ತಾ ಬಂದಿದೆ. ಆದರೆ ಈ ಬಾರಿ ನಿರ್ದೇಶಕ ನಾಗ ವಂಶಿ ಪ್ರಭಾಸ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ನಿರೀಕ್ಷೆಗಿಂತಲೂ ಬೇಗನೇ ಸಿನಿಮಾ ಅನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಹಾಗೆಂದು ಇದೇ ವರ್ಷ ಸಿನಿಮಾ ಬರುತ್ತದೆ ಎಂದೇನೂ ಇಲ್ಲ.

ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ 2024 ರಲ್ಲಿ ಬಿಡುಗಡೆ ಆಗಿತ್ತು. ಅಮಿತಾಭ್ ಬಚ್ಚನ್ ಮತ್ತು ಕಮಲ್ ಹಾಸನ್, ದೀಪಿಕಾ ಪಡುಕೋಣೆ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದ ಸಿನಿಮಾವು 2024ರ ಅತಿ ದೊಡ್ಡ ಚಿತ್ರಮಂದಿರ ಯಶಸ್ಸುಗಳಲ್ಲಿ ಒಂದಾಗಿ ಹೊರಹೊಮ್ಮಿತ್ತು. ಸಿನಿಮಾ ಬಿಡುಗಡೆ ಆಗಿ ಎರಡು ವರ್ಷಗಳ ಬಳಿಕ ಅಂದರೆ ಇದೇ ವರ್ಷ ಸಿನಿಮಾದ ಸೀಕ್ವೆಲ್​​ನ ಚಿತ್ರೀಕರಣ ಶುರುವಾಗಿದೆ. ಸಿನಿಮಾದ ಚಿತ್ರೀಕರಣದಲ್ಲಿ ಪ್ರಭಾಸ್ ಇನ್ನೂ ಭಾಗಿ ಸಹ ಆಗಿಲ್ಲ. ಆದರೆ ಸಿನಿಮಾ ಬಿಡುಗಡೆ ಬಗ್ಗೆ ನಿರ್ದೇಶಕ ನಾಗವಂಶಿ ಆಸಕ್ತಿಕರ ಮಾಹಿತಿ ಹಂಚಿಕೊಂಡಿದ್ದಾರೆ.

ಮಾಧ್ಯಮಗಳೊಟ್ಟಿಗೆ ಮಾತನಾಡಿರುವ ನಾಗ್ ಅಶ್ವಿನ್, ‘ಕಲ್ಕಿ 2’ ಸಿನಿಮಾದ ಕೆಲಸಗಳು ಈಗಾಗಲೇ ಆರಂಭವಾಗಿವೆ. ಮುಂದಿನ ತಿಂಗಳಿನಿಂದ ಶೂಟಿಂಗ್ ಮುಂದುವರಿಸಲು ನಾವು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಇದನ್ನು ಅತ್ಯಂತ ವೇಗದ ಗತಿಯಲ್ಲಿ ಪೂರ್ಣಗೊಳಿಸಲಿದ್ದೇವೆ’ ಎಂದು ಹೇಳಿದ್ದಾರೆ. ಕಮಲ್ ಹಾಸನ್ ಮತ್ತು ಅಮಿತಾಬ್ ಬಚ್ಚನ್ ಅವರು ಈಗಾಗಲೇ ‘ಕಲ್ಕಿ 2’ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಬಚ್ಚನ್ ಅವರು ಸೆಟ್​​ನ ಕೆಲ ಚಿತ್ರಗಳನ್ನು ತಮ್ಮ ಬ್ಲಾಗ್​​ನಲ್ಲಿ ಸಹ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:ಮುಂಬೈನಲ್ಲಿ ಪ್ರಭಾಸ್ ಕ್ರೇಜ್ ಹೇಗಿದೆ? ಸ್ವಂತ ಅನುಭವ ವಿವರಿಸಿದ ಕರಣ್ ಜೋಹರ್

‘ಕಲ್ಕಿ 2’ ಚಿತ್ರದ ತಯಾರಕರು ಚಿತ್ರೀಕರಣ ಬೇಗನೆ ಮುಗಿಸಲಿದ್ದಾರಾದರೂ ಸಿನಿಮಾದ ಪೋಸ್ಟ್ ಪ್ರೊಡಕ್ಷನ್​​ಗೆ ಹೆಚ್ಚು ಸಮಯ ತೆಗೆದುಕೊಳ್ಳಲಿದ್ದಾರೆ. ಏಕೆಂದರೆ ಈ ಸಿನಿಮಾನಲ್ಲಿ ಸಾಕಷ್ಟು ವಿಎಫ್​​ಎಕ್ಸ್, ಗ್ರೀನ್ ಸ್ಕ್ರೀನ್ ಮತ್ತು ಸ್ಪೆಷಲ್ ಎಫೆಕ್ಟ್ ದೃಶ್ಯಗಳಿವೆ. ಭವಿಷ್ಯತ್ ಕಾಲದ ದೃಶ್ಯಗಳ ಜೊತೆಗೆ ಕುರುಕ್ಷೇತ್ರದ ದೃಶ್ಯಗಳು ಸಹ ಇವೆ. ಇದಕ್ಕೆಲ್ಲ ಹೆಚ್ಚಿನ ಸಮಯದ ಅಗತ್ಯವಿದೆ. ಆದರೂ ಸಹ ಸಿನಿಮಾವನ್ನು ಮುಂದಿನ ವರ್ಷ ಡಿಸೆಂಬರ್ ವೇಳೆಗೆ ಚಿತ್ರಮಂದಿರಕ್ಕೆ ತರುವ ಯೋಚನೆಯಲ್ಲಿ ಚಿತ್ರತಂಡ ಇದೆಯಂತೆ.

ಇದೆಲ್ಲದರ ನಡುವೆ, ನಟಿ ದೀಪಿಕಾ ಪಡುಕೋಣೆ ಸಹ ಚಿತ್ರತಂಡಕ್ಕೆ ಕೈ ಕೊಟ್ಟಿದ್ದಾರೆ. ಮೊದಲ ಭಾಗದಲ್ಲಿ ನಟಿಸಿದ್ದ ದೀಪಿಕಾ ಪಡುಕೋಣೆ, ಎರಡನೇ ಭಾಗದ ಸಿನಿಮಾಕ್ಕೆ ಕೈ ಕೊಟ್ಟಿದ್ದಾರೆ. ಇದೀಗ ಚಿತ್ರತಂಡವು ಬೇರೆ ನಾಯಕಿಯ ಹುಡುಕಾಟದಲ್ಲಿದ್ದು, ದೀಪಿಕಾ ಪಡುಕೋಣೆ ಪಾತ್ರವನ್ನು ಎರಡನೇ ಭಾಗದಲ್ಲಿ ಸಾಯಿ ಪಲ್ಲವಿ ನಿರ್ವಹಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಇಸ್ರೇಲ್ ಸೇನೆಯ ಗುಂಡಿನ ದಾಳಿಗೆ 7 ತಿಂಗಳ ಪ್ಯಾಲೆಸ್ತೀನ್ ಮಗು ಬಲಿ; ಶರಣಾದರೂ ಕಾರಿನ ಮೇಲೆ ಶೂಟಿಂಗ್ – Kannada News

ಜೆರುಸಲೇಂ, ಜೂನ್ 6: ವೆಸ್ಟ್ ಬ್ಯಾಂಕ್‌ನ ಹೆಬ್ರಾನ್ ನಗರದಲ್ಲಿ ಇಸ್ರೇಲ್ (Israel) ಸೇನೆ ನಡೆಸಿದ ಗುಂಡಿನ ದಾಳಿಗೆ 7 ತಿಂಗಳ ಪ್ಯಾಲೆಸ್ತೀನ್ ಮಗು ಬಲಿಯಾಗಿರುವ ಅತ್ಯಂತ ದುರದೃಷ್ಟಕರ ಘಟನೆ ನಡೆದಿದೆ. ಆಕ್ರಮಿತ ವೆಸ್ಟ್ ಬ್ಯಾಂಕ್‌ನ ಹೆಬ್ರಾನ್ ನಗರದಲ್ಲಿ ಇಸ್ರೇಲ್ ಸೇನೆಯು ಕುಟುಂಬವೊಂದು ಚಲಾಯಿಸುತ್ತಿದ್ದ ವಾಹನದ ಮೇಲೆ ನಡೆಸಿದ ಗುಂಡಿನ ದಾಳಿಗೆ 7 ತಿಂಗಳ ಪ್ಯಾಲೆಸ್ತೀನ್ ಮಗು ಬಲಿಯಾಗಿದೆ ಎಂದು ಮಗುವಿನ ಕುಟುಂಬಸ್ಥರು ಮತ್ತು ಇಸ್ರೇಲ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಶಿಶುವನ್ನು ಸ್ಯಾಮ್ ಫಹದ್ ಅಬು ಹೈಕಲ್ ಎಂದು ಗುರುತಿಸಲಾಗಿದ್ದು, ಗುಂಡಿನ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಗು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದೆ. ಈ ಘಟನೆಯಲ್ಲಿ ಮಗುವಿನ ಪೋಷಕರಿಗೂ ಗಾಯಗಳಾಗಿವೆ.

ಆ ಪ್ರದೇಶದಲ್ಲಿದ್ದ ಶಸ್ತ್ರಸಜ್ಜಿತ ಉಗ್ರಗಾಮಿಗಳನ್ನು ಗುರಿಯಾಗಿಸಿ ಸೇನೆ ಗುಂಡು ಹಾರಿಸಿತ್ತು. ಆದರೆ, ಮಗುವಿನ ಮೇಲಿನ ದಾಳಿಯು ಉದ್ದೇಶಪೂರ್ವಕವಾಗಿರಲಿಲ್ಲ, ಅದು ಆಕಸ್ಮಿಕವಾಗಿ ನಡೆದಿದೆ ಎಂದು ಸೇನೆ ಸಮರ್ಥಿಸಿಕೊಂಡಿದೆ. ಮಗುವಿನ ಸಾವಿಗೆ ಕಾರಣವಾದ ನಿಖರವಾದ ಸನ್ನಿವೇಶಗಳನ್ನು ಮತ್ತು ಸೇನಾ ನಿಯಮಗಳ ಉಲ್ಲಂಘನೆಯಾಗಿದೆಯೇ ಎಂಬುದನ್ನು ಪತ್ತೆಹಚ್ಚಲು ಮಿಲಿಟರಿ ಪೊಲೀಸರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ ಎಂದು ಐಡಿಎಫ್ ತಿಳಿಸಿದೆ.

ಇದನ್ನೂ ಓದಿ: ವಿಶ್ವ ಶಾಂತಿಗೆ ಬಿಗ್ ಬೂಸ್ಟ್: ಇಸ್ರೇಲ್-ಲೆಬನಾನ್ ಕದನ ವಿರಾಮಕ್ಕೆ ಒಪ್ಪಿಗೆ, ಇರಾನ್ ಮಾತುಕತೆಗೂ ಮುಕ್ತವಾದ ಹಾದಿ

ಮಗುವಿನ ಕುಟುಂಬದ ಸದಸ್ಯರ ಪ್ರಕಾರ, ಹೆಬ್ರಾನ್‌ನ ‘ಟೆಲ್ ರುಮೇಡಾ’ ಎಂಬ ಪ್ರದೇಶದಲ್ಲಿ ಇಸ್ರೇಲ್ ಸೈನಿಕರು ಇವರ ವಾಹನವನ್ನು ನಿಲ್ಲಿಸುವಂತೆ ಸೂಚಿಸಿದಾಗ ಈ ಘಟನೆ ನಡೆದಿದೆ. ಬೆತ್ಲೆಹೆಮ್ ವಿಶ್ವವಿದ್ಯಾಲಯದ ಉಪನ್ಯಾಸಕರಾಗಿರುವ ಮಗುವಿನ ತಂದೆ ಫಹದ್ ಅಬು ಹೈಕಲ್ ಅವರು ಇಸ್ರೇಲಿ ಪತ್ರಿಕೆ ‘ಹಾ ರೆಟ್ಜ್’ ಜೊತೆ ಮಾತನಾಡಿ, ತಾವು ಸೈನಿಕರ ಎಲ್ಲಾ ಸೂಚನೆಗಳನ್ನು ಪಾಲಿಸಿದ್ದರೂ ತಮ್ಮ ಮೇಲೆ ಗುಂಡು ಹಾರಿಸಲಾಯಿತು ಎಂದು ಆರೋಪಿಸಿದ್ದಾರೆ.

“ಸೈನಿಕರು ಕಾರನ್ನು ನಿಲ್ಲಿಸುವಂತೆ ನನಗೆ ಸನ್ನೆ ಮಾಡಿದರು. ನಾನು ಕಾರನ್ನು ಸಂಪೂರ್ಣವಾಗಿ ನಿಲ್ಲಿಸಿ, ನನ್ನ ಎರಡೂ ಕೈಗಳನ್ನು ಸ್ಟೀರಿಂಗ್ ವೀಲ್ ಮೇಲೆ ಎತ್ತಿಟ್ಟೆ. ಆದರೆ ಅದರ ಬೆನ್ನಲ್ಲೇ ಅವರು ತಕ್ಷಣವೇ ವಾಹನದ ಮೇಲೆ ಗುಂಡಿನ ಮಳೆಗರೆದರು. ಗುಂಡು ಮೊದಲು ತಮ್ಮ ಕೈಗೆ ತಗುಲಿ, ನಂತರ ಕಾರಿನ ಹಿಂಬದಿಯ ಸೀಟಿನಲ್ಲಿ ತಾಯಿಯೊಂದಿಗೆ ಕುಳಿತಿದ್ದ ತಮ್ಮ 7 ತಿಂಗಳ ಮಗುವಿಗೆ ತಗುಲಿತು ಎಂದು ಅಬು ಹೈಕಲ್ ಹೇಳಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಇಸ್ರೇಲ್, ಲೆಬನಾನ್ 10 ದಿನಗಳ ಕದನವಿರಾಮಕ್ಕೆ ಒಪ್ಪಿಕೊಂಡಿವೆ; ಟ್ರಂಪ್ ಘೋಷಣೆ

ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯ ಮತ್ತು ಸ್ಥಳೀಯ ನಾಯಕರು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ನಿರಪರಾಧಿ ಮಕ್ಕಳು ಮತ್ತು ನಾಗರಿಕರನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಸೇನೆ ನಡೆಸುತ್ತಿರುವ ಅಮಾನವೀಯ ದಾಳಿಗಳಿಗೆ ಇದು ಮತ್ತೊಂದು ಸಾಕ್ಷಿ ಎಂದು ಅವರು ಆಪಾದಿಸಿದ್ದಾರೆ. ಅಲ್ಲದೆ, ಅಂತಾರಾಷ್ಟ್ರೀಯ ಸಮುದಾಯವು ತಕ್ಷಣವೇ ಮಧ್ಯಪ್ರವೇಶಿಸಿ ವೆಸ್ಟ್ ಬ್ಯಾಂಕ್‌ನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಯಬೇಕೆಂದು ಅವರು ಆಗ್ರಹಿಸಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ವೆಸ್ಟ್ ಬ್ಯಾಂಕ್ ಮತ್ತು ಗಾಜಾ ಪಟ್ಟಿಯಲ್ಲಿ ಇಸ್ರೇಲ್ ಹಾಗೂ ಫೆಲೆಸ್ತೀನ್ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ನೂರಾರು ನಾಗರಿಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಸಚಿನ್​ರಂತೆಯೇ ವೈಭವ್ ಸೂರ್ಯವಂಶಿಗೂ ವಿಶೇಷ ವಿನಾಯಿತಿ ನೀಡಿದ ಬಿಸಿಸಿಐ – Kannada News

ಮುಂಬರುವ ಐರ್ಲೆಂಡ್ ಹಾಗೂ ಇಂಗ್ಲೆಂಡ್‌ ಪ್ರವಾಸ ಮತ್ತು ಏಷ್ಯನ್ ಗೇಮ್ಸ್​ಗೆ ಬಿಸಿಸಿಐ (BCCI) ಇಂದು ಭಾರತ ಟಿ20 ತಂಡವನ್ನು ಪ್ರಕಟಿಸಿತು. ಬಿಸಿಸಿಐ ಪ್ರಕಟಿಸಿರುವ ಈ 16 ಸದಸ್ಯರ ತಂಡದಲ್ಲಿ ಅನುಭವಿಗಳು ಹಾಗೂ ಅನಾನುಭವಿಗಳ ಸಮ್ಮಿಶ್ರಣವಿದೆ. ಐಪಿಎಲ್‌ನಲ್ಲಿ ಮಿಂಚು ಹರಿಸಿದ ಪ್ರತಿಭಾನ್ವೀತರಿಗೆ ಈ ಪ್ರವಾಸದಲ್ಲಿ ಅವಕಾಶ ನೀಡಲಾಗಿದೆ. ಈ ರೀತಿಯಾಗಿ ತನ್ನ ಅಮೋಘ ಪ್ರದರ್ಶನದ ಮೂಲಕ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆದಿರುವ ವೈಭವ್ ಸೂರ್ಯವಂಶಿ (Vaibhav Sooryavanshi ) ಕೂಡ ತಂಡದೊಂದಿಗೆ ವಿದೇಶಕ್ಕೆ ಹಾರಲಿದ್ದಾರೆ. ಇದೇ ಮೊದಲ ಬಾರಿಗೆ ಭಾರತದ ಹಿರಿಯರ ತಂಡದಲ್ಲಿ ಸ್ಥಾನ ಪಡೆದುಕೊಂಡಿರುವ ವೈಭವ್ ಸೂರ್ಯವಂಶಿಗೆ ಇದೀಗ ಬಿಸಿಸಿಐ ಕೂಡ ವಿಶೇಷ ವಿನಾಯಿತಿಯೊಂದನ್ನು ನೀಡಿದ್ದು, ವಿದೇಶಕ್ಕೆ ಹಾರಲು ಸಜ್ಜಾಗಿರುವ ವೈಭವ್ ತನ್ನೊಂದಿಗೆ ತನ್ನ ಪೋಷಕರನ್ನು ಕರೆದೊಯ್ಯಲು ಬಿಸಿಸಿಐ ಅನುಮತಿ ನೀಡಿದೆ.

ಸಚಿನ್ ದಾಖಲೆ ಮುರಿದ ವೈಭವ್

ವೈಭವ್ ಸೂರ್ಯವಂಶಿ ಕೇವಲ 15ನೇ ವರ್ಷಕ್ಕೆ ಭಾರತದ ಹಿರಿಯರ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಭಾರತ ತಂಡಕ್ಕೆ ಆಯ್ಕೆಯಾದ ಅತಿ ಕಿರಿಯ ಆಟಗಾರನೆಂಬ ದಾಖಲೆ ನಿರ್ಮಿಸಿದ್ದಾರೆ. ಇದರೊಂದಿಗೆ ಅವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ. ಸಚಿನ್ ತೆಂಡೂಲ್ಕರ್ 16 ವರ್ಷಕ್ಕೆ ಭಾರತ ಹಿರಿಯರ ತಂಡಕ್ಕೆ ಆಯ್ಕೆಯಾಗಿದ್ದರು. ಇದೀಗ ಸಚಿನ್ ದಾಖಲೆಯನ್ನು ಮುರಿದಿರುವ ವೈಭವ್​ಗೆ ಬಿಸಿಸಿಐ, ಸಚಿನ್​ಗೆ ನೀಡಿದ್ದ ವಿಶೇಷ ವಿನಾಯಿತಿಯನ್ನು ವೈಭವ್​ಗೂ ನೀಡಿದೆ.

ವೈಭವ್​ಗೆ ವಿಶೇಷ ವಿನಾಯಿತಿ

ಅತಿ ಕಿರಿಯ ವಯಸ್ಸಿಗೆ ಹಿರಿಯರ ತಂಡದಲ್ಲಿ ಸ್ಥಾನ ಪಡೆದಿರುವ ವೈಭವ್​ಗೆ ಹಠಾತ್ ಜನಪ್ರಿಯತೆ, ಮಾಧ್ಯಮ ಗಮನ ಮತ್ತು ಅಪಾರ ಒತ್ತಡವನ್ನು ನಿಭಾಯಿಸುವುದು ಮಾನಸಿಕವಾಗಿ ಸವಾಲಿನ ಸಂಗತಿಯಾಗಿದೆ. ಹೀಗಾಗಿ ಇದನ್ನು ಮುಂಗಡವಾಗಿಯೇ ಯೋಚಿಸಿರುವ ಬಿಸಿಸಿಐ, ವೈಭವ್ ತಮ್ಮ ಪೋಷಕರನ್ನು ತಮ್ಮ ಜೊತೆಗೆ ಇಂಗ್ಲೆಂಡ್ ಮತ್ತು ಐರ್ಲೆಂಡ್​ಗೆ ಕರೆದುಕೊಂಡು ಹೋಗಲು ಅನುಮತಿ ನೀಡಿದೆ. ಈ ವಿದೇಶ ಪ್ರವಾಸದಲ್ಲಿ ಅವರ ಪೋಷಕರ ಉಪಸ್ಥಿತಿಯು ವೈಭವ್‌ಗೆ ಮನೆಯ ವಾತಾವರಣವನ್ನು ಸೃಷ್ಟಿಸುವುದಲ್ಲದೆ, ಒಂಟಿತನ ಕಾಡುವುದಕ್ಕೆ ಅವಕಾಶ ಮಾಡಿಕೊಡುವುದಿಲ್ಲ. ಅಲ್ಲದೆ ವಿದೇಶದಲ್ಲಿ ಹೊಸ ವಾತಾವರಣಕ್ಕೆ ಹೊಂದಿಕೊಳ್ಳಲು ಸಹಾಯ ಕೂಡ ಮಾಡುತ್ತದೆ.

ವೆಚ್ಚ ಬರಿಸಲಿದೆ ಬಿಸಿಸಿಐ

ವಾಸ್ತವವಾಗಿ ಮೇಲೆ ಹೇಳಿದಂತೆ ಸಚಿನ್ ತೆಂಡೂಲ್ಕರ್ ಅವರಿಗೂ ಬಿಸಿಸಿಐ ಈ ರೀತಿಯ ವ್ಯವಸ್ಥೆ ಮಾಡಿತ್ತು. 1989 ರಲ್ಲಿ ಸಚಿನ್ ತೆಂಡೂಲ್ಕರ್ ತಮ್ಮ ಚೊಚ್ಚಲ ವಿದೇಶಿ ಸರಣಿಗಾಗಿ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಿದಾಗ, ಸಚಿನ್ ಅವರೊಂದಿಗೆ ಹಿರಿಯ ಸಹೋದರ ಅಜಿತ್ ಕೂಡ ಅವರೊಂದಿಗೆ ಇದ್ದರು. ಆ ಸಮಯದಲ್ಲಿ ಸಚಿನ್ ತೆಂಡೂಲ್ಕರ್ ಕೇವಲ 16 ವರ್ಷ ವಯಸ್ಸಿನವರಾಗಿದ್ದರು. ಈ ಬಗ್ಗೆ ಸ್ಪೋರ್ಟ್ಸ್‌ಸ್ಟಾರ್‌ ಜೊತೆ ಮಾತನಾಡಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ‘ಅವನು ಇನ್ನೂ ಮಗು, ಆದ್ದರಿಂದ ಅವನ ಹೆತ್ತವರು ಅವನೊಂದಿಗೆ ಐರ್ಲೆಂಡ್ ಮತ್ತು ಇಂಗ್ಲೆಂಡ್‌ಗೆ ಪ್ರಯಾಣಿಸಲು ಅವಕಾಶ ನೀಡಲು ನಾವು ನಿರ್ಧರಿಸಿದ್ದೇವೆ. ಇದರಿಂದ ಅವರು ಅವನೊಂದಿಗೆ ಇರಲು ಮತ್ತು ಹೊಸ ವಾತಾವರಣಕ್ಕೆ ಹೊಂದಿಕೊಳ್ಳಲು ಸಹಾಯ ಮಾಡಬಹುದು. ಮಂಡಳಿಯು ಅವರ ಎಲ್ಲಾ ವೆಚ್ಚಗಳನ್ನು ಭರಿಸುತ್ತದೆ’ ಎಂದಿದ್ದಾರೆ.

ತ್ರಿಕೋನ ಸರಣಿಗಾಗಿ ಶ್ರೀಲಂಕಾಕ್ಕೆ ತೆರಳಿದ ಭಾರತ ಎ ತಂಡ; ವೈಭವ್ ಹಿಂದೆ ಬಿದ್ದ ಫ್ಯಾನ್ಸ್

ಬಿಸಿಸಿಐ ನಿಯಮ ಏನು ಹೇಳುತ್ತದೆ?

ವೈಭವ್ ಚಿಕ್ಕವನಾಗಿರುವ ಕಾರಣ ಬಿಸಿಸಿಐ ಈ ವಿಶೇಷ ವಿನಾಯಿತಿ ನೀಡಿದೆ. ವೈಭವ್ ಹೊರತುಪಡಿಸಿ ಬೇರೆ ಯಾವ ಆಟಗಾರನಿಗೂ ಈ ಸೌಕರ್ಯ ಇರುವುದಿಲ್ಲ. ಇದಕ್ಕಾಗಿಯೇ ಬಿಸಿಸಿಐ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದ್ದು, ಭಾರತ ತಂಡ ವಿದೇಶಿ ಪ್ರವಾಸಗಳಿಗೆ ತೆರಳಿದಾಗ ಆಟಗಾರರು ತಮ್ಮ ಕುಟುಂಬಸ್ಥರು ಅಥವಾ ಸಂಗಾತಿಗಳನ್ನು ಇಡೀ ಪ್ರವಾಸದ ಉದ್ದಕ್ಕೂ ತಮ್ಮೊಂದಿಗೆ ಇರಿಸಿಕೊಳ್ಳಲು ಸಾಧ್ಯವಿಲ್ಲ. ಸರಣಿ ಅಥವಾ ಪಂದ್ಯಾವಳಿ 45 ದಿನಗಳಿಗಿಂತ ಹೆಚ್ಚು ಕಾಲ ನಡೆದರೆ, ಕುಟುಂಬ ಸದಸ್ಯರು ಆಟಗಾರನೊಂದಿಗೆ 14 ದಿನಗಳವರೆಗೆ ಮಾತ್ರ ಇರಬಹುದಾಗಿದೆ. ಆದಾಗ್ಯೂ, ವೈಭವ್ ಸೂರ್ಯವಂಶಿಗೆ, ಬಿಸಿಸಿಐ ನಿಯಮಗಳನ್ನು ಸಡಿಲಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:40 pm, Sat, 6 June 26

Source link

ಬೆಳಗ್ಗೆ ನಿಮ್ಮ ದಿನವನ್ನು ಸುಂದರವಾಗಿ ಆರಂಭಿಸಲು ಹೀಗೆ ಮಾಡಿ! – Kannada News

ನವದೆಜಲಿ, ಜೂನ್ 6: ಇಂದಿನ ವೇಗದ ಜೀವನಶೈಲಿಯಲ್ಲಿ, ಒತ್ತಡವು ಅನೇಕ ಜನರ ದೈನಂದಿನ ಜೀವನದ ಒಂದು ಭಾಗವಾಗಿದೆ. ಕೆಲಸದ ಒತ್ತಡ (Stress), ಕುಟುಂಬದ ಜವಾಬ್ದಾರಿಗಳು, ಆರ್ಥಿಕ ಸಮಸ್ಯೆಗಳು ಮತ್ತು ಅತಿಯಾದ ಡಿಜಿಟಲ್ ಬಳಕೆಯಂತಹ ಅಂಶಗಳಿಂದಾಗಿ ನಮ್ಮ ಮನಸ್ಥಿತಿ ಬಳಲುವುದು ಸಾಮಾನ್ಯವಾಗಿದೆ. ಆದರೆ, ತಜ್ಞರು ಹೇಳುವಂತೆ, ನಾವು ನಮ್ಮ ಬೆಳಿಗ್ಗೆಯನ್ನು ಹೇಗೆ ಪ್ರಾರಂಭಿಸುತ್ತೇವೆ ಎಂಬುದು ದಿನವಿಡೀ ನಮ್ಮ ಮನಸ್ಥಿತಿಯನ್ನು ನಿರ್ಧರಿಸುವ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ನಿರ್ದಿಷ್ಟವಾಗಿ ಹೇಳುವುದಾದರೆ, ನಮ್ಮ ಮುಂಜಾನೆಯ ಕೆಲವು ಅಭ್ಯಾಸಗಳು ಒತ್ತಡವನ್ನು ಕಡಿಮೆ ಮಾಡಲು ಮತ್ತು ಮನಸ್ಸನ್ನು ಶಾಂತವಾಗಿಡಲು ಸಹಾಯ ಮಾಡುತ್ತದೆ.

ಬೆಳಿಗ್ಗೆ ಶಾಂತ ಸಮಯ ಕಳೆಯುವುದು:

ಅನೇಕ ಜನರು ಎದ್ದ ಕೂಡಲೇ ತಮ್ಮ ಫೋನ್‌ಗಳನ್ನು ಪರಿಶೀಲಿಸುತ್ತಾರೆ. ಇದು ದಿನ ಪ್ರಾರಂಭವಾಗುವ ಮೊದಲೇ ಒತ್ತಡವನ್ನು ಉಂಟುಮಾಡಬಹುದು. ಬದಲಾಗಿ, ಕೆಲವು ನಿಮಿಷಗಳ ಕಾಲ ಸದ್ದಿಲ್ಲದೆ ಕುಳಿತು ದಿನದ ನಿಮ್ಮ ಯೋಜನೆಗಳ ಬಗ್ಗೆ ಯೋಚಿಸುವುದು ನಿಮ್ಮ ಮನಸ್ಸನ್ನು ಶಾಂತವಾಗಿರಿಸಲು ಸಹಾಯ ಮಾಡುತ್ತದೆ. ಮುಂಜಾನೆಯ ಶಾಂತತೆ ಮತ್ತು ನಿಶ್ಯಬ್ದತೆಯು ಮನಸ್ಸಿಗೆ ಹೊಸ ತಾಜಾತನವನ್ನು ತರುತ್ತದೆ.

ಲಘು ವ್ಯಾಯಾಮ ಮತ್ತು ವಾಕಿಂಗ್:

ಬೆಳಿಗ್ಗೆ ಸ್ವಲ್ಪ ಪ್ರಮಾಣದ ವ್ಯಾಯಾಮ ಅಥವಾ ವಾಕಿಂಗ್ ದೇಹ ಮತ್ತು ಮನಸ್ಸನ್ನು ಸಕ್ರಿಯವಾಗಿಡಲು ಸಹಾಯ ಮಾಡುತ್ತದೆ. ವ್ಯಾಯಾಮದ ಸಮಯದಲ್ಲಿ ದೇಹದಲ್ಲಿ ಕೆಲವು ಹಾರ್ಮೋನುಗಳು ಸಕ್ರಿಯಗೊಳ್ಳುತ್ತವೆ. ಅದು ಚೈತನ್ಯ ಮತ್ತು ಸಂತೋಷದ ಭಾವನೆಯನ್ನು ಉತ್ತೇಜಿಸುತ್ತದೆ ಎಂದು ಹೇಳಲಾಗುತ್ತದೆ. ಇದು ಒತ್ತಡವನ್ನು ಕಡಿಮೆ ಮಾಡಲು ಮತ್ತು ದಿನವಿಡೀ ಸಕಾರಾತ್ಮಕ ಆಲೋಚನೆಗಳೊಂದಿಗೆ ಕಾರ್ಯನಿರ್ವಹಿಸಲು ನಮಗೆ ಸಹಾಯ ಮಾಡುತ್ತದೆ.

ಇದನ್ನೂ ಓದಿ: ಭಯಗೊಂಡಾಗ ಕೈ ಕಾಲುಗಳು ನಡುಗುವುದೇಕೆ? ಇದರ ಹಿಂದಿನ ಕಾರಣವೇನು ಗೊತ್ತಾ?

ಬೆಳಗಿನ ಸೂರ್ಯನ ಬೆಳಕು ಮತ್ತು ತಾಜಾ ಗಾಳಿ:

ಬೆಳಗಿನ ಸೂರ್ಯನ ಬೆಳಕು ಮತ್ತು ತಾಜಾ ಗಾಳಿಯು ದೇಹ ಮತ್ತು ಮನಸ್ಸಿನ ಮೇಲೆ ಪಾಸಿಟಿವ್ ಪರಿಣಾಮ ಬೀರುತ್ತದೆ. ಕೆಲವು ನಿಮಿಷಗಳ ವಾಕಿಂಗ್ ಆಯಾಸದ ಭಾವನೆಗಳನ್ನು ಕಡಿಮೆ ಮಾಡುತ್ತದೆ ಮತ್ತು ಮನಸ್ಸನ್ನು ಉಲ್ಲಾಸಗೊಳಿಸುತ್ತದೆ. ವಿಶೇಷವಾಗಿ ಪ್ರಕೃತಿಯಲ್ಲಿ ಕೆಲವು ನಿಮಿಷಗಳನ್ನು ಕಳೆಯುವುದರಿಂದ ಮಾನಸಿಕ ಶಾಂತಿ ಸುಧಾರಿಸುತ್ತದೆ.

ಧ್ಯಾನ ಮತ್ತು ಆಳವಾದ ಉಸಿರಾಟದ ವ್ಯಾಯಾಮ:

ಒತ್ತಡವನ್ನು ಕಡಿಮೆ ಮಾಡಲು ಸರಳವಾದ ಮಾರ್ಗವೆಂದರೆ, ಧ್ಯಾನ ಅಥವಾ ಆಳವಾದ ಉಸಿರಾಟದ ವ್ಯಾಯಾಮಗಳು. ಬೆಳಿಗ್ಗೆ 5ರಿಂದ 10 ನಿಮಿಷಗಳ ಕಾಲ ಶಾಂತವಾಗಿ ಕುಳಿತು ನಿಮ್ಮ ಉಸಿರನ್ನು ಗಮನಿಸುವುದರಿಂದ ಆತಂಕ ಕಡಿಮೆಯಾಗುತ್ತದೆ. ಇದನ್ನು ಉತ್ತಮ ಅಭ್ಯಾಸವೆಂದು ಪರಿಗಣಿಸಲಾಗಿದೆ. ಇದು ಗೊಂದಲವನ್ನು ಕಡಿಮೆ ಮಾಡಲು ಮತ್ತು ಮನಸ್ಸನ್ನು ಶಾಂತವಾಗಿಡಲು ಸಹಾಯ ಮಾಡುತ್ತದೆ.

ಪೌಷ್ಟಿಕ ಉಪಹಾರ:

ಉಪಾಹಾರ ಬಿಟ್ಟುಬಿಡುವುದರಿಂದ ಕೆಲವು ಜನರಲ್ಲಿ ಆಯಾಸ ಮತ್ತು ಕಿರಿಕಿರಿ ಹೆಚ್ಚಾಗುತ್ತದೆ. ಆದ್ದರಿಂದ, ಪೌಷ್ಟಿಕ ಮತ್ತು ಸಮತೋಲಿತ ಉಪಹಾರವನ್ನು ಸೇವಿಸುವುದರಿಂದ ದೇಹಕ್ಕೆ ಅಗತ್ಯವಾದ ಶಕ್ತಿ ದೊರೆಯುತ್ತದೆ. ದೇಹವು ಆರೋಗ್ಯಕರವಾಗಿದ್ದರೆ, ಮನಸ್ಥಿತಿಯೂ ಸ್ಥಿರವಾಗಿರುವ ಸಾಧ್ಯತೆ ಹೆಚ್ಚು ಎಂದು ತಜ್ಞರು ತಿಳಿಸಿದ್ದಾರೆ. ಬೆಳಗಿನ ಉಪಹಾರವನ್ನು ಯಾವುದೇ ಕಾರಣಕ್ಕೂ ಸ್ಕಿಪ್ ಮಾಡಬೇಡಿ. ಪ್ರೊಟೀನ್ ಮತ್ತು ನಾರಿನಂಶವಿರುವ ಆರೋಗ್ಯಕರ ಉಪಹಾರವು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಇದು ಮೂಡ್ ಸ್ವಿಂಗ್ಸ್ ಮತ್ತು ಆತಂಕವನ್ನು ತಡೆಯುತ್ತದೆ.

ಇದನ್ನೂ ಓದಿ: ಮಳೆಗಾಲದಲ್ಲಿ ಸೊಳ್ಳೆಗಳನ್ನು ನಿಯಂತ್ರಿಸೋದು ಹೇಗೆ? ಇಲ್ಲಿವೆ ಸುಲಭ ಮಾರ್ಗಗಳು

ತಂತ್ರಜ್ಞಾನದಿಂದ ದೂರವಿರಿ:

ಬೆಳಗ್ಗೆ ಎದ್ದ ತಕ್ಷಣ ಮೊದಲ 30ರಿಂದ 60 ನಿಮಿಷಗಳ ಕಾಲ ಮೊಬೈಲ್ ನೋಡುವುದು, ಇಮೇಲ್ ಅಥವಾ ಸೋಶಿಯಲ್ ಮೀಡಿಯಾ ಪರಿಶೀಲಿಸುವುದನ್ನು ನಿಲ್ಲಿಸಿ. ಇದು ಎದ್ದ ತಕ್ಷಣವೇ ಮೆದುಳಿಗೆ ಒತ್ತಡದ ಸಂದೇಶಗಳನ್ನು ರವಾನಿಸುವುದನ್ನು ತಡೆಯುತ್ತದೆ.

ದೇಹವನ್ನು ಹೈಡ್ರೇಟ್ ಮಾಡಿ:

ಬೆಳಗ್ಗೆ ಎದ್ದ ತಕ್ಷಣ ಒಂದು ಅಥವಾ ಎರಡು ಲೋಟ ಉಗುರುಬೆಚ್ಚಗಿನ ನೀರನ್ನು ಕುಡಿಯಿರಿ. ಇಡೀ ರಾತ್ರಿ ದೇಹದಲ್ಲಿ ಕಡಿಮೆಯಾಗಿರುವ ನೀರಿನಂಶವನ್ನು ಇದು ಸರಿದೂಗಿಸುತ್ತದೆ. ಇದರಿಂದ ದೈಹಿಕ ಆಯಾಸ ಮತ್ತು ತಲೆನೋವಿನಂತಹ ಒತ್ತಡದ ಲಕ್ಷಣಗಳು ದೂರವಾಗುತ್ತವೆ. ಕೇವಲ 10ರಿಂದ 15 ನಿಮಿಷಗಳ ಕಾಲ ಲಘು ಯೋಗ, ಸ್ಟ್ರೆಚಿಂಗ್ ಅಥವಾ ವಾಕಿಂಗ್ ಅನ್ನು ರೂಢಿಸಿಕೊಳ್ಳಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಧಿಕಾರ ವಹಿಸಿಕೊಂಡ ಕ್ಷಣದಿಂದಲೇ ಯುಟಿ ಖಾದರ್ ಫುಲ್ ಆಕ್ಟಿವ್​​​: ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಪ್ಲ್ಯಾನ್​ – Kannada News

ಬೆಂಗಳೂರು, ಜೂನ್​​ 06: ರಾಜ್ಯದಲ್ಲಿ ಇತ್ತೀಚೆಗಷ್ಟೇ ಸಿಎಂ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ನೂತನ ಸಂಪುಟದಲ್ಲಿ ಖಾತೆಗಳ ಹಂಚಿಕೆಯಾಗಿದ್ದು, ನೂತನ ಆರೋಗ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಯು.ಟಿ. ಖಾದರ್​​ (UT Khader) ಫುಲ್ ಆಕ್ಟಿವ್ ಆಗಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮುಂದಾಗಿರುವ ಅವರು, ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ವಿಶೇಷ ತಂತ್ರಕ್ಕೆ ಕೈಹಾಕಿದ್ದಾರೆ.

ಮುಖ್ಯಾಂಶಗಳು

  • ಆರೋಗ್ಯ ಇಲಾಖೆಯಲ್ಲಿ ಮಹತ್ವದ ಸುಧಾರಣೆಗೆ ಮುಂದಾದ ಸಚಿವ ಯುಟಿ ಖಾದರ್​
  • ಡಿಹೆಚ್‌ಓಗಳಿಗೆ ಖಡಕ್​ ಎಚ್ಚರಿಕೆ
  • ವೈದ್ಯರ ಕೊರತೆ ನೀಗಿಸಲು ನೇರ ನೇಮಕಾತಿ ಪ್ರಕ್ರಿಯೆ

ಈ ಹಿಂದೆ ಸಚಿವರಾಗಿದ್ದಾಗಲೂ ಇದೇ ಇಲಾಖೆಯನ್ನು ಯಶಸ್ವಿಯಾಗಿ ನಿಭಾಯಿಸಿದ್ದ ಯು.ಟಿ. ಖಾದರ್​​ಗೆ ಬರೋಬ್ಬರಿ 13 ವರ್ಷಗಳ ಬಳಿಕ ಮತ್ತೆ ಆರೋಗ್ಯ ಖಾತೆಯೇ ಸಿಕ್ಕಿದೆ. ಹೀಗಾಗಿ ಬದಲಾಗಿರುವ ಇಂದಿನ ಆರೋಗ್ಯ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಸೃಷ್ಟಿಸಲು ಮೊದಲ ದಿನವೇ ಅಧಿಕಾರಿಗಳ ಮಹತ್ವದ ಸಭೆ ನಡೆಸಿ, ಇಲಾಖೆಯ ಸಮಸ್ಯೆಗಳನ್ನು ಆಲಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ವಾತಾವರಣದಲ್ಲಿ ಬದಲಾವಣೆ: ಮಕ್ಕಳಲ್ಲಿ ಹೆಚ್ಚಿದ ಸಾಂಕ್ರಾಮಿಕ ರೋಗಗಳ ಭೀತಿ

ಮುಖ್ಯವಾಗಿ ಜಿಲ್ಲಾ ಆರೋಗ್ಯಾಧಿಕಾರಿಗಳು (DHO) ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಸಚಿವರು ಅವರಿಗೆ ಕಠಿಣ ಟಾಸ್ಕ್ ನೀಡುವ ಮೂಲಕ ಮಾಸ್ಟರ್ ಸ್ಟ್ರೋಕ್ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಕಾಡುತ್ತಿರುವ ವೈದ್ಯರ ಕೊರತೆಯನ್ನು ನೀಗಿಸಲು ಎಂಬಿಬಿಎಸ್ ಪದವೀಧರರಿಗೆ ಮುಕ್ತ ಆಫರ್ ನೀಡಿರುವ ಸಚಿವರು, ನೇರ ನೇಮಕಾತಿಗೆ ಪ್ಲ್ಯಾನ್​ ಮಾಡಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಇರುವ ವೈದ್ಯರು ನೇರವಾಗಿ ತಮ್ಮ ಅರ್ಜಿಯನ್ನು ಆಯಾ ಜಿಲ್ಲೆಯ ಡಿಹೆಚ್‌ಓಗಳಿಗೆ ಸಲ್ಲಿಸಬಹುದಾಗಿದೆ.

ಕಠಿಣ ಶಿಸ್ತು ಕ್ರಮ: ಖಡಕ್ ಎಚ್ಚರಿಕೆ ನೀಡಿದ ಸಚಿವ

ಅರ್ಜಿ ಬಂದ ಕೇವಲ ಒಂದು ವಾರದ ಒಳಗಾಗಿ ಡಿಹೆಚ್‌ಓಗಳು ಆ ವೈದ್ಯರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಒಂದು ವೇಳೆ ಅರ್ಜಿಯನ್ನು ಪುರಸ್ಕರಿಸಿ ನೇಮಕಾತಿ ಮಾಡಿಕೊಳ್ಳದಿದ್ದರೆ ಸಂಬಂಧಪಟ್ಟ ಡಿಹೆಚ್‌ಓಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಚಿವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಖಾಸಗಿ ಆಸ್ಪತ್ರೆಗಳ ‘ಟ್ರಾನ್ಸ್‌ಪ್ಲಾಂಟ್’ ದಂಧೆಗೆ ಬೀಳುತ್ತಾ ಬ್ರೇಕ್? ಸರ್ಕಾರಿ ಆಸ್ಪತ್ರೆಗಳಲ್ಲಿ ಕಡಿಮೆ ಖರ್ಚಿನಲ್ಲಿ ಸಿಗಲಿದೆ ಹೈಟೆಕ್ ಚಿಕಿತ್ಸೆ!

ಒಟ್ಟಿನಲ್ಲಿ ಡಿಹೆಚ್‌ಓಗಳಿಗೆ ನೂತನ ಸಚಿವ ಯು.ಟಿ.ಖಾದರ್ ಮಾಸ್ಟರ್ ಸ್ಟ್ರೋಕ್ ನೀಡಲು ಮುಂದಾಗಿದ್ದು, ವೈದ್ಯರ‌ ಕೊರತೆ ನೀಗುತ್ತಾ ಹಾಗೂ ಡಿಹೆಚ್‌ಓಗಳು ತ್ವರಿತಗತಿಯಲ್ಲಿ ಕಾರ್ಯಪ್ರವೃತ್ತರಾಗಲಿದ್ದಾರೆಯೇ ಅಂತ ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ಪೆದ್ದಿ’ ವಿವಾದ, ನಟಿ ಜಾನ್ಹವಿಯ ಬೆಂಬಲಕ್ಕೆ ನಿಂತ ಆಶಿಕಾ ರಂಗನಾಥ್ – Kannada News

ಪೆದ್ದಿ’ (Peddi) ಸಿನಿಮಾನಲ್ಲಿ ನಟಿ ಜಾನ್ಹವಿ ಕಪೂರ್ ಪಾತ್ರವನ್ನು ತೆರೆಯ ಮೇಲೆ ತೋರಿಸಿರುವ ರೀತಿಯ ಬಗ್ಗೆ ತೀವ್ರ ಟೀಕೆಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗುತ್ತಿವೆ. ಖುದ್ದು ಜಾನ್ಹವಿ ಅವರೇ ತಮ್ಮ ಪಾತ್ರವನ್ನು ಅತಿಯಾಗಿ ಗ್ಲಾಮರೈಸ್ ಮಾಡಿ ಅಶ್ಲೀಲವಾಗಿ ತೋರಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಆದರೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಈ ವಿಷಯವಾಗಿ ನಟಿ ಜಾನ್ಹವಿ ಅವರನ್ನೇ ಟಾರ್ಗೆಟ್ ಮಾಡಿ ಟೀಕೆ ಮಾಡುತ್ತಿದ್ದಾರೆ. ‘ಜಾನ್ಹವಿ ಕಪೂರ್ ಅತಿಯಾಗಿ ಅಂಗ ಪ್ರದರ್ಶನ ಮಾಡಿದ್ದಾರೆ’ ಎಂದು ಟೀಕೆ ಮಾಡಿದ್ದಾರೆ. ಆದರೆ ಈ ರೀತಿಯ ಟೀಕೆಗಳನ್ನು ನಟಿ ಆಶಿಕಾ ರಂಗನಾಥ್ ವಿರೋಧಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ನಟಿ ಆಶಿಕಾ ರಂಗನಾಥ್, ‘ಒಬ್ಬ ನಟಿಯಾಗಿ ನಾವು ನಿರ್ದೇಶಕರ ದೃಷ್ಟಿಕೋನವನ್ನು ತೆರೆಯ ಮೇಲೆ ತರಲು ಪ್ರಯತ್ನಿಸುತ್ತೇವೆ. ಚಿತ್ರಕಥೆ ಬರೆಯುವುದು, ದೃಶ್ಯಗಳನ್ನು ಹೇಗೆ ಶೂಟ್ ಮಾಡಬೇಕು ಮತ್ತು ಪಾತ್ರವನ್ನು ಹೇಗೆ ಪ್ರಸ್ತುತಪಡಿಸಬೇಕು ಎಂದು ನಿರ್ಧರಿಸುವುದು ಸಂಪೂರ್ಣವಾಗಿ ನಿರ್ದೇಶಕ ಮತ್ತು ಚಿತ್ರತಂಡದ ಜವಾಬ್ದಾರಿಯಾಗಿರುತ್ತದೆ. ಹಾಗಾಗಿ, ಇದರಲ್ಲಿ ನಟಿಯ ತಪ್ಪು ಏನೂ ಇರುವುದಿಲ್ಲ ಮತ್ತು ಅವರನ್ನು ದೂಷಿಸುವುದು ಸರಿಯಲ್ಲ’ ಎಂದು ಹೇಳಿದ್ದಾರೆ. ಆ ಮೂಲಕ ಜಾನ್ಹವಿ ಕಪೂರ್ ಅವರಿಗೆ ಬೆಂಬಲ ಸೂಚಿಸಿದ್ದಾರೆ.

ಸಿನಿಮಾಗಳಲ್ಲಿ ಮಹಿಳಾ ಪಾತ್ರಗಳ ಚಿತ್ರಣದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡ ಅವರು, ‘ಪ್ರೇಕ್ಷಕರು ಈಗ ಹೆಚ್ಚು ಜಾಗೃತರಾಗಿದ್ದಾರೆ ಮತ್ತು ಕಥೆಯಲ್ಲಿ ಪಾತ್ರಗಳಿಗೆ ಇರುವ ಪ್ರಾಮುಖ್ಯತೆಯನ್ನು ಗಮನಿಸುತ್ತಾರೆ. ಆದರೆ ಸಿನಿಮಾ ಎನ್ನುವುದು ಒಂದು ಕಲಾ ಮಾಧ್ಯಮವಾಗಿದ್ದು, ಅಲ್ಲಿ ನಿರ್ದೇಶಕರು ಕತೆಯ ಬೇಡಿಕೆಗೆ ತಕ್ಕಂತೆ ಕೆಲಸ ಮಾಡುತ್ತಾರೆ. ಒಂದು ವೇಳೆ ದೃಶ್ಯಗಳು ಪ್ರೇಕ್ಷಕರಿಗೆ ಇಷ್ಟವಾಗದಿದ್ದರೆ, ಆ ವಿಮರ್ಶೆಯನ್ನು ಸೃಜನಾತ್ಮಕ ತಂಡಕ್ಕೆ ತಲುಪಿಸಬೇಕೇ ಹೊರತು ಕಲಾವಿದರನ್ನು ದೂರುವುದು ತರವಲ್ಲ’ ಎಂದು ಆಶಿಕಾ ಹೇಳಿದ್ದಾರೆ.

ಇದನ್ನೂ ಓದಿ:ಬಾಕ್ಸ್ ಆಫೀಸ್‌ನಲ್ಲಿ ‘ಪೆದ್ದಿ’ ಹವಾ; ಎರಡನೇ ದಿನವೂ ಭರ್ಜರಿ ಗಳಿಕೆ

‘ಪೆದ್ದಿ’ ಸಿನಿಮಾನಲ್ಲಿ ನಾಯಕಿ ಜಾನ್ಹವಿ ಕಪೂರ್ ಅವರನ್ನು ಕೆಟ್ಟದಾಗಿ ತೋರಿಸಲಾಗಿದೆ. ಕತೆಗೆ ಯಾವ ರೀತಿಯಲ್ಲೂ ಅವಶ್ಯಕ ಇಲ್ಲದೇ ಹೋದರೂ ಸಹ ನಟಿಯ ಅಂಗಾಂಗಗಳ ಮೇಲೆ ಫೋಕಸ್ ಮಾಡಿ ಗ್ಲಾಮರಸ್ ಆಗಿ ತೋರಿಸಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ವಿರೋಧ ವ್ಯಕ್ತವಾದ ಬೆನ್ನಲ್ಲೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ನಿರ್ದೇಶಕ ಬುಚ್ಚಿಬಾಬು ಸನಾ, ತಾವು ಜಾನ್ಹವಿ ಅವರ ಗ್ಲಾಮರಸ್ ದೃಶ್ಯಗಳಿಗೆ ಕತ್ತರಿ ಹಾಕುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ತಮ್ಮಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮೆ ಕೇಳುವುದಾಗಿಯೂ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 10:15 pm, Sat, 6 June 26

Source link

ಬಿಜೆಪಿ ಶಾಸಕ ಶರಣು ಸಲಗರ್​​ಗೆ ಬಂಧನದ ಭೀತಿ: 2023ರ ಬಕ್ರೀದ್ ಗಲಾಟೆ ಕೇಸ್‌ನಲ್ಲಿ ಶಾಸಕನಿಗೆ ಬಿಗ್ ಶಾಕ್ – Kannada News

ಬೀದರ್, ಜೂ.6: 2023ರ ಬಕ್ರೀದ್ ಹಬ್ಬದ ವೇಳೆ ನಡೆದ ಗೋಹತ್ಯೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಶರಣು ಸಲಗರ್ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಶಾಸಕರ ವಿರುದ್ಧ ಜಾಮೀನು ರಹಿತ (ನಾನ್‌ಬೈಲೆಬಲ್) ಬಂಧನ ವಾರಂಟ್ ಹೊರಡಿಸಿದೆ. 2023ರ ಜುಲೈ 1ರಂದು ನಡೆದ ಘಟನೆಯಲ್ಲಿ, ಅಕ್ರಮ ಗೋಹತ್ಯೆ ತಡೆಯಲು ಶಾಸಕರು ಮುಸ್ಲಿಂ ಸಮುದಾಯದ ಮನೆಯೊಂದಕ್ಕೆ ತೆರಳಿ ಗಲಾಟೆ ಮಾಡಿದ್ದರು ಎನ್ನಲಾಗಿದೆ. ಈ ಪ್ರಕರಣದ ವಿಚಾರಣೆಗೆ ಬರುವಂತೆ ಶಾಸಕ ಶರಣು ಸಲಗರ್​​ಗೆ ಹಲವು ಬಾರಿ ನೋಟಿಸ್ ನೀಡಲಾಗಿದ್ದರೂ, ಅವರು ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಬಂಧನ ವಾರಂಟ್ ಜಾರಿ ಮಾಡಿದ್ದು, ಯಾವುದೇ ಕ್ಷಣದಲ್ಲಾದರೂ ಶಾಸಕರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಗಳಿವೆ. ಶಾಸಕರನ್ನು ಬಂಧಿಸಲು ಪೊಲೀಸರು ಅವರ ಬಸವಕಲ್ಯಾಣ ನಿವಾಸಕ್ಕೆ ತೆರಳಿದ್ದರೂ, ಶಾಸಕರು ಅಲ್ಲಿ ಲಭ್ಯವಿರದ ಕಾರಣ ವಾಪಸ್ ತೆರಳಿದ್ದಾರೆ. ಸದ್ಯ ಶಾಸಕರು ಎಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿಲ್ಲ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಮ್ಯಾಂಗೊ ಪಚ್ಚ’ ಸಿನಿಮಾ ಬಗ್ಗೆ ನಟ ಸುದೀಪ್ ಮಾತು: ವಿಡಿಯೋ – Kannada News

ಸುದೀಪ್ (Sudeep) ಅವರ ಪತ್ನಿ ಮತ್ತು ಪುತ್ರಿ ನಿರ್ಮಾಣ ಮಾಡಿರುವ, ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜಯ್ ನಟಿಸಿರುವ ‘ಮ್ಯಾಂಗೊ ಪಚ್ಚ’ ಸಿನಿಮಾ ನಿನ್ನೆ (ಜೂನ್ 5) ಬಿಡುಗಡೆ ಆಗಿದ್ದು, ಸಿನಿಮಾ ಬಿಡುಗಡೆ ಬಳಿಕ ಸುದೀಪ್ ಅವರು ಪತ್ರಿಕಾಗೋಷ್ಠಿ ನಡೆಸಿ ಸಿನಿಮಾ ಬಗ್ಗೆ ಮಾತನಾಡಿದರು. ಈ ವೇಳೆ ಸಿನಿಮಾ ಬಗ್ಗೆ, ಸಿನಿಮಾ ಬಿಡುಗಡೆ ಆದ ಬಳಿಕ ನಡೆದ ಕೆಲವು ಬೆಳವಣಿಗೆಗಳ ಬಗ್ಗೆ ಮಾತನಾಡಿದರು. ಸಿನಿಮಾನಲ್ಲಿ ತಮ್ಮ ಸೋದರಳಿಯನ ನಟನೆ, ಸಿನಿಮಾದ ಮೇಕಿಂಗ್ ಇನ್ನೂ ಕೆಲ ವಿಷಯಗಳ ಬಗ್ಗೆ ಸುದೀಪ್ ಅವರು ಲೋಕಾಭಿರಾಮವಾಗಿ ಮಾತನಾಡಿದ್ದು, ವಿಡಿಯೋ ಇಲ್ಲಿದೆ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕಾಸರಗೋಡಿನಲ್ಲಿ ಭಾರೀ ಮಳೆಗೆ ದುರಂತ: ಆಟವಾಡುತ್ತಿದ್ದಾಗ ಮಣ್ಣು ಕುಸಿದು ಮಕ್ಕಳಿಬ್ಬರು ಸಾವು – Kannada News

ಮಂಗಳೂರು, ಜೂನ್​​ 06: ಕೇರಳಂನ ಕಾಸರಗೋಡು ಜಿಲ್ಲೆಯಾದ್ಯಂತ ವರುಣಾರ್ಭಟ ತೀವ್ರಗೊಂಡಿದೆ. ಧಾರಾಕಾರ ಮಳೆಗೆ (Rain) ಮಣ್ಣು ಕುಸಿದು ಬಿದ್ದ ಪರಿಣಾಮ ಮಕ್ಕಳಿಬ್ಬರು ದಾರುಣವಾಗಿ ಸಾವನ್ನಪ್ಪಿರುವಂತಹ (death) ಘಟನೆ ಕಾಸರಗೋಡು ಜಿಲ್ಲೆಯ ಅಡೂರು ಎಂಬಲ್ಲಿ ನಡೆದಿದೆ. ಮುನ್ಸಿರ್(10) ಮತ್ತು ಮುಜಮ್ಮಿಲ್ (14) ಮೃತ‌ ಮಕ್ಕಳು. ಅಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮುಖ್ಯಾಂಶಗಳು

  • ಕಾಸರಗೋಡಿನಲ್ಲಿ ವರುಣನ ಅಟ್ಟಹಾಸ
  • ಮಳೆಯಿಂದ ಕುಸಿದ ಮಣ್ಣು
  • ಘಟನೆಯಲ್ಲಿ ಇನ್ನೋರ್ವ ಮಗುವಿನ ಸ್ಥಿತಿ ಗಂಭೀರ

ನಡೆದಿದ್ದೇನು?

ಸದ್ಯ ಕಾಸರಗೋಡು ಜಿಲ್ಲೆಯಾದ್ಯಂತ ವರುಣಾರ್ಭಟ ಜೋರಾಗಿದೆ. ಮಕ್ಕಳು ತಮ್ಮ ಮನೆಯ ಸಮೀಪ ಆಟವಾಡುತ್ತಿದ್ದಾಗ ನಿರಂತರ ಮಳೆಯಿಂದಾಗಿ ನೆನೆದಿದ್ದ ಆವರಣ ಗೋಡೆಯು ಮಣ್ಣಿನ ಸಮೇತ ಕುಸಿದು ಬಿದ್ದಿದೆ. ಪರಿಣಾಮ ಮೂವರು ಮಕ್ಕಳು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ. ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಮತ್ತು ಅಡೂರು ಠಾಣೆಯ ಪೊಲೀಸರು ಯುದ್ಧೋಪಾದಿಯಲ್ಲಿ ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸಿದರಾದರೂ, ದುರದೃಷ್ಟವಶಾತ್ ಇಬ್ಬರು ಮಕ್ಕಳು ಅದಾಗಲೇ ಸಾವನ್ನಪ್ಪಿದ್ದು, ಮತ್ತೊಂದು ಮಗುವಿನ ಸ್ಥಿತಿ ಗಂಭೀರವಾಗಿದೆ.

ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಹಲವೆಡೆ ಅವಾಂತರಗಳು

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ಅವಾಂತರಗಳು ಸಂಭವಿಸಿವೆ. ಬಿಸಿಲಿನಿಂದ ಕಂಗೆಟ್ಟಿದ್ದ ಬಾಗಲಕೋಟೆಗೆ ವರುಣ ತಂಪೆರೆದಿದ್ದಾನೆ. ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಭಾರಿ ಮಳೆಗೆ ನವನಗರದ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿವೆ. ಜಿಲ್ಲಾ ಕ್ರೀಡಾಂಗಣದ ಬಳಿಯ ರಸ್ತೆಗಳು ಹಳ್ಳದಂತಾಗಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗಿದೆ. ಜಲಾವೃತ ರಸ್ತೆಯಲ್ಲೇ ವಾಹನ ಸವಾರರು ಹರಸಾಹಸಪಟ್ಟು ಮನೆಯ ಕಡೆ ಪ್ರಯಾಣಿಸಿದರು.

ಇದನ್ನೂ ಓದಿ: ಮೊದಲ ಮಳೆಗೆ ಕೊಚ್ಚಿಹೋಯ್ತು ರಾಷ್ಟ್ರೀಯ ಹೆದ್ದಾರಿ!: ಮೂಡುಬಿದಿರೆ ಮಿಜಾರಿನಲ್ಲಿ NH-169 ರಸ್ತೆ ಕುಸಿತ

ಇನ್ನು ಗದಗ ಜಿಲ್ಲೆಯ ಹಲವೆಡೆ ಮಳೆಯ ಆರ್ಭಟ ಜೋರಾಗಿದೆ. ನಿರಂತರ ಮಳೆಯಿಂದ ಗದಗ ನಗರದ ಪಂಚರಹೊಂಡ ಬಳಿಯ ರಸ್ತೆ ಕೆರೆಯಂತಾಗಿದೆ. ರಸ್ತೆಯಲ್ಲಿ ಎರಡರಿಂದ ಮೂರು ಅಡಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಪ್ರಮುಖ ಮಾರುಕಟ್ಟೆಗೆ ಹೋಗುವ ರಸ್ತೆಯೂ ಜಲಾವೃತಗೊಂಡಿದೆ.

ಈಜಲು ತೆರಳಿದ್ದ ಬಾಲಕ ಮಲಪ್ರಭಾ ನದಿಯಲ್ಲಿ ಮುಳುಗಿ ಸಾವು

ಈಜಲು ಹೋಗಿದ್ದ ಬಾಲಕ ಮಲಪ್ರಭಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮದಲ್ಲಿ ನಡೆದಿದೆ. ಆಳ ತಿಳಿಯದೇ ನದಿಯಲ್ಲಿ‌ ಮುಳುಗಿ ಮಹೇಶ್ ಗಣಾಚಾರಿ (15) ಮೃತಪಟ್ಟಿದ್ದಾನೆ. ಸದ್ಯ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ನಡೆಸಿ ಬಾಲಕನ ಶವ ಹೊರತೆಗೆದಿದ್ದಾರೆ. ಬಾಲಕನ ಮೃತದೇಹ ಸಿಗುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 9:18 pm, Sat, 6 June 26

Source link

‘ಈ ಬೆದರಿಕೆ ಬೇಡ’: ಪವನ್ ಕಲ್ಯಾಣ್ ಸಹೋದರನಿಗೆ ಪ್ರಕಾಶ್ ರೈ ಎಚ್ಚರಿಕೆ – Kannada News

ಪ್ರಕಾಶ್ ರೈ (Prakash Raj) ಮೊದಲಿನಿಂದಲೂ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರು. ರಾಜಕೀಯ ವಿಷಯಗಳ ಬಗ್ಗೆ ‘ಜಸ್ಟ್ ಆಸ್ಕಿಂಗ್’ ಹ್ಯಾಷ್ ಟ್ಯಾಗ್ ಅಡಿಯಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಬಹುತೇಕ, ಬಿಜೆಪಿಯ ಸಿದ್ಧಾಂತಗಳನ್ನು ವಿರೋಧಿಸಿ ಟ್ವೀಟ್​​ಗಳನ್ನು ಮಾಡುತ್ತಿರುತ್ತಾರೆ. ಕಳೆದ ಒಂದೆರಡು ದಿನಗಳಿಂದ ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ವಿರುದ್ಧ ಸರಣಿ ಟ್ವೀಟ್​​ಗಳನ್ನು ಮಾಡುತ್ತಿದ್ದಾರೆ. ಇದೀಗ ಪವನ್ ಕಲ್ಯಾಣ್ ಅವರ ಸಹೋದರ ನಾಗಬಾಬು ಅವರ ಟ್ವೀಟ್ ಒಂದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಕಾಶ್ ರೈ, ‘ಈ ಬೆದರಿಕೆ ಎಲ್ಲ ಬೇಡ’ ಎಂದು ಗಡುಸಾಗಿ ಹೇಳಿದ್ದಾರೆ.

ತೆಲಂಗಾಣದಲ್ಲಿ ಪವನ್ ಕಲ್ಯಾಣ್ ಅವರ ರ್ಯಾಲಿಗೆ ಅನುಮತಿ ನಿರಾಕರಿಸಲಾಗಿತ್ತು. ಇದನ್ನು ತೀವ್ರವಾಗಿ ಖಂಡಿಸಿದ್ದ ಪವನ್ ಕಲ್ಯಾಣ್, ‘ತೆಲಂಗಾಣ ಯಾರಪ್ಪನ ಆಸ್ತಿಯಲ್ಲ’ ಎಂದು ಗುಡುಗಿದ್ದರು. ಪವನ್ ಅವರ ಆ ಭಾಷಣದ ಬಗ್ಗೆ ಪರ-ವಿರೋಧ ಚರ್ಚೆಗಳು ಚಾಲ್ತಿಯಲ್ಲಿದ್ದವು. ಈ ಸಂದರ್ಭದಲ್ಲಿ ಪ್ರಕಾಶ್ ರೈ, ಪವನ್ ಕಲ್ಯಾಣ್ ಕಾಲೆಳೆದು ಟ್ವೀಟ್ ಮಾಡಿದ್ದರು. ಆ ಟ್ವೀಟ್​​ಗೆ ವಿರುದ್ಧವಾಗಿ ಪವನ್ ಕಲ್ಯಾಣ್ ಆಪ್ತ, ಪ್ರಕಾಶ್ ರೈ ಕುರಿತು ಏಕವನಚದಲ್ಲಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೆ ಇದೀಗ ಪ್ರಕಾಶ್ ರೈ ಅವರು ಪವನ್ ಕಲ್ಯಾಣ್ ಅವರ ಸಹೋದರ ನಾಗಬಾಬು ಅವರ ಟ್ವೀಟ್​​ಗೆ ಖಾರವಾಗಿ ಪ್ರತಿ ಟ್ವೀಟ್ ಮಾಡಿದ್ದಾರೆ.

ಪವನ್ ಕಲ್ಯಾಣ್ ಅವರ ಚಿತ್ರ ಹಂಚಿಕೊಂಡಿದ್ದ ನಾಗಬಾಬು ‘ನಾಯಕನ ಮಾತು ಅಂತಿಮ. ಯಾರೂ ಅವನ ದಾರಿಯಲ್ಲಿ ಸಮಸ್ಯೆಗಳನ್ನು ನೋಡಿಲ್ಲ, ನಾಯಕನಿಗೆ ಮಾತ್ರ ಯಾವುದು ಸರಿ ಮತ್ತು ಯಾವುದು ತಪ್ಪು ಎಂದು ತಿಳಿದಿದೆ. ನಿಮ್ಮ ಅನುಮಾನಗಳನ್ನು ಮುಚ್ಚಿ, ನಿಮ್ಮ ನಾಲಿಗೆಯನ್ನು ಮೌನಗೊಳಿಸಿ ಮತ್ತು ಪ್ರಶ್ನೆಗಳನ್ನು ಮಾಡದೆ ನಾಯಕನನ್ನು ಅನುಸರಿಸಿ’ ಎಂದು ಬರೆದಿದ್ದರು.

ಇದನ್ನೂ ಓದಿ:ಪ್ರಭಾಸ್ ಸಿನಿಮಾದಿಂದ ಹೊರಬಂದ ಪ್ರಕಾಶ್ ರೈ: ಕಾರಣವೇನು?

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಕಾಶ್ ರೈ, ‘ಅನುಮಾನಗಳನ್ನು ಸುಮ್ಮನಾಗಿಸಿ, ನಾಲಗಿಯನ್ನು ಮೌನವಾಗಿಸಿ, ಪ್ರಶ್ನೆಗಳನ್ನು ಕೇಳಬೇಡಿ’ ಎಂಬ ನಿಮ್ಮ ಮಾತಿನ ಅರ್ಥವೇನು? ನಾವೇನು ಕುದುರೆಗಳಾ? ನೀವು ಹೇಳಿದಂತೆ ಕೇಳಿಕೊಂಡು ಇರಲು? ಈ ಬೆದರಿಕೆಗಳೆಲ್ಲ ಬೇಡ. ಪ್ರಶ್ನೆ ಮಾಡುವುದು ನಮ್ಮ ಹಕ್ಕು. ಯಾವ ನಾಯಕನೇ ಆದರು, ಜನರಿಗೆ ಉತ್ತರ ಕೊಡುವ ಜವಾಬ್ದಾರಿ ಆತನ ಮೇಲೆ ಇರುತ್ತದೆ. ಅರ್ಥ ಆಯಿತೆ?’ ಎಂದು ಪ್ರಕಾಶ್ ರೈ ಪ್ರಶ್ನೆ ಮಾಡಿದ್ದಾರೆ.

ನಾಗಬಾಬು ಅವರು ಪ್ರಕಾಶ್ ರೈ ಅವರ ಜನಸೇನಾ ಪಕ್ಷದ ಪ್ರಮುಖ ಮುಖಂಡರುಗಳಲ್ಲಿ ಒಬ್ಬರು. ಪವನ್ ಕಲ್ಯಾಣ್ ಅವರ ಸ್ವಂತ ಅಣ್ಣ ಸಹ. ಪವನ್ ಕಲ್ಯಾಣ್ ಅವರ ರಾಜಕೀಯ ಜರ್ನಿಯಲ್ಲಿ ನಾಗಬಾಬು ಸಹ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ, ನಾಗಬಾಬು ಮತ್ತು ಪವನ್ ಕಲ್ಯಾಣ್ ತೆಲುಗು ಚಿತ್ರರಂಗದ ಮೆಗಾ ಸಹೋದರರು ಎಂದೇ ಖ್ಯಾತರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link