All posts by nagaraj11081993

April Festival List 2026: ಏಪ್ರಿಲ್ ತಿಂಗಳಲ್ಲಿ ಆಚರಿಸಲಾಗುವ ಪ್ರಮುಖ ಹಬ್ಬಗಳ ಪಟ್ಟಿ ಇಲ್ಲಿದೆ

April Festival List 2026: ಏಪ್ರಿಲ್ ತಿಂಗಳಲ್ಲಿ ಆಚರಿಸಲಾಗುವ ಪ್ರಮುಖ ಹಬ್ಬಗಳ ಪಟ್ಟಿ ಇಲ್ಲಿದೆ

ಹಬ್ಬ ಹರಿದಿನಗಳನ್ನು ಎಲ್ಲರೂ ಸಂಭ್ರಮಿಸುವವರೇ. ಈ ಹಿಂದೂ ಧರ್ಮದಲ್ಲಿ ವರ್ಷಪೂರ್ತಿ ವಿವಿಧ ಹಬ್ಬಗಳು (festivals), ಆಚರಣೆಗಳಿವೆ. ಏಪ್ರಿಲ್ ತಿಂಗಳಲ್ಲಿ ಹಲವು ಹಬ್ಬಗಳಿವೆ. ನಾವೀಗ ವರ್ಷದ ಮೂರನೇ ತಿಂಗಳಾದ ಮಾರ್ಚ್ ಕಳೆದು ಏಪ್ರಿಲ್ ತಿಂಗಳಿಗೆ ಕಾಲಿಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಅದಕ್ಕೂ ಮುನ್ನ ಏಪ್ರಿಲ್ ತಿಂಗಳಲ್ಲಿ ಆಚರಿಸಲಾಗುವ ಹಬ್ಬಗಳು, ವ್ರತಾಚರಣೆಗಳ ಬಗ್ಗೆ  ನೀವು ತಿಳಿದುಕೊಳ್ಳಿ.

ಏಪ್ರಿಲ್ ತಿಂಗಳಲ್ಲಿ ಆಚರಿಸುವ ಹಬ್ಬಗಳ ಪಟ್ಟಿ ಇಲ್ಲಿದೆ;

  • ಏಪ್ರಿಲ್ 02 – ಹನುಮಜಯಂತಿ
  • ಏಪ್ರಿಲ್ 02 – ಪೂರ್ಣಿಮಾ
  • ಏಪ್ರಿಲ್ 03- ಗುಡ್ ಫ್ರೈಡೇ
  • ಏಪ್ರಿಲ್ 03- ಚೈತ್ರ ಕೃಷ್ಣ ಪಕ್ಷ
  • ಏಪ್ರಿಲ್ 04 – ಈಸ್ಟರ್ ಶನಿವಾರ
  • ಏಪ್ರಿಲ್ 05 – ಸಂಕಷ್ಟಹರ ಚತುರ್ಥಿ
  • ಏಪ್ರಿಲ್ 11 – ವೃಷಭ ಜಯಂತಿ
  • ಏಪ್ರಿಲ್ 13 – ವಲ್ಲಭಾಚಾರ್ಯ ಜಯಂತಿ
  • ಏಪ್ರಿಲ್ 13 – ಸರ್ವೈಕಾದಶಿ ವರೂಥಿನಿ
  • ಏಪ್ರಿಲ್ 14 – ಮೇಷ ಸಂಕ್ರಮಣ
  • ಏಪ್ರಿಲ್ 15 – ಸೌರಯುಗಾದಿ (ವಿಷು)
  • ಏಪ್ರಿಲ್ 15 – ಪ್ರದೋಷ
  • ಏಪ್ರಿಲ್ 15 – ಮಾಸ ಶಿವರಾತ್ರಿ
  • ಏಪ್ರಿಲ್ 17 – ಅಮಾವಾಸ್ಯಾ
  • ಏಪ್ರಿಲ್ 18 – ವೈಶಾಖ ಶುಕ್ಲಪಕ್ಷ
  • ಏಪ್ರಿಲ್ 19 – ಪರಶುರಾಮ ಜಯಂತಿ
  • ಏಪ್ರಿಲ್ 20 – ಬಸವೇಶ್ವರ ಜಯಂತಿ
  • ಏಪ್ರಿಲ್ 20 – ಅಕ್ಷಯ ತೃತೀಯ
  • ಏಪ್ರಿಲ್ 21- ಶಂಕರಾಚಾರ್ಯ ಜಯಂತಿ
  • ಏಪ್ರಿಲ್ 21 – ವಿಜಯ ಧ್ವಜಾಚಾರ್ಯ ಪುಣ್ಯತಿಥಿ
  • ಏಪ್ರಿಲ್ 22 – ರಾಮಾನುಜಾಚಾರ್ಯ ಜಯಂತಿ
  • ಏಪ್ರಿಲ್ 23 – ಗಂಗೋತ್ಪತ್ತಿ
  • ಏಪ್ರಿಲ್ 27 – ಮಹಾನಕ್ಷತ್ರ ಭರಣಿ
  • ಏಪ್ರಿಲ್ 27 – ಸರ್ವೈಕಾದಶಿ ಮೋಹಿನಿ
  • ಏಪ್ರಿಲ್ 28 – ವೇದ ವ್ಯಾಸ ಜಯಂತಿ
  • ಏಪ್ರಿಲ್ 28 – ಪ್ರದೋಷ
  • ಏಪ್ರಿಲ್ 30 – ನರಸಿಂಹ ಜಯಂತಿ

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

Source link

19 ವರ್ಷಗಳಲ್ಲೇ ಮೊದಲ ಬಾರಿ… CSK ಪಾಲಿಗೆ ಇದು ಅಂತಿಂಥ ಸೋಲಲ್ಲ!

Source link

KHPT Recruitment 2026: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿ ನೇಮಕಾತಿ; ಪದವೀಧರರು ಅರ್ಹರು

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ಅಧಿಕೃತ ಅಧಿಸೂಚನೆಯ ಮೂಲಕ ವಿವಿಧ ಉದ್ಯೋಗಾವಕಾಶಗಳನ್ನು ಘೋಷಿಸಿದೆ. ರಾಜ್ಯದ ಚಾಮರಾಜನಗರ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 18 ಕ್ಷೇತ್ರ ತನಿಖಾಧಿಕಾರಿ (Field Investigator) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸುವುದು ಅಗತ್ಯ. ಏಕೆಂದರೆ ಇಂದೇ (ಮಾರ್ಚ್ 31) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ಮಾನದಂಡಗಳ ಪ್ರಕಾರ ಆಕರ್ಷಕ ವೇತನವನ್ನು ನೀಡಲಾಗುವುದು. ವಯೋಮಿತಿಯಲ್ಲಿನ ಸಡಿಲಿಕೆಯು ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್‌ನ ನಿಯಮಾವಳಿಗಳಿಗೆ ಅನುಗುಣವಾಗಿರಲಿದೆ. ವಿಶೇಷವೆಂದರೆ, ಈ ನೇಮಕಾತಿ ಪ್ರಕ್ರಿಯೆಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ, ಇದು ಎಲ್ಲಾ ವರ್ಗದ ಅರ್ಹ ಅಭ್ಯರ್ಥಿಗಳಿಗೆ ಮುಕ್ತವಾಗಿ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡುತ್ತದೆ.

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಉದ್ಯೋಗ ಪಡೆಯುವುದು ಹೇಗೆ? ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ನೇಮಕಾತಿ ಪ್ರಕ್ರಿಯೆಯು ಪ್ರಮುಖವಾಗಿ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಮತ್ತು ಸಂದರ್ಶನದ ಆಧಾರದ ಮೇಲೆ ನಡೆಯಲಿದೆ. ಆಸಕ್ತರು ಮೊದಲು ಅಧಿಕೃತ ಅಧಿಸೂಚನೆಯನ್ನು ಕೂಲಂಕಷವಾಗಿ ಓದಿ, ತಾವು ಅರ್ಹತಾ ಮಾನದಂಡಗಳನ್ನು ಪೂರೈಸುತ್ತೇವೆಯೇ ಎಂದು ಖಚಿತಪಡಿಸಿಕೊಳ್ಳಬೇಕು.

ಅರ್ಜಿ ಸಲ್ಲಿಸಲು ಇಚ್ಛಿಸುವವರು ಕೆಎಚ್‌ಪಿಟಿ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್‌ಲೈನ್ ಫಾರ್ಮ್ ಅನ್ನು ಭರ್ತಿ ಮಾಡಬೇಕು. ಅಗತ್ಯವಿರುವ ಎಲ್ಲಾ ವಿವರಗಳನ್ನು ನಮೂದಿಸಿ, ಸ್ಕ್ಯಾನ್ ಮಾಡಿದ ದಾಖಲೆಗಳು ಮತ್ತು ಇತ್ತೀಚಿನ ಫೋಟೋವನ್ನು ಅಪ್‌ಲೋಡ್ ಮಾಡುವ ಮೂಲಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಅರ್ಜಿ ಸಲ್ಲಿಸಿದ ನಂತರ, ಮುಂದಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ಸ್ವೀಕೃತಿ ಪ್ರತಿಯನ್ನು ಪ್ರಿಂಟ್ ತೆಗೆದುಕೊಳ್ಳುವುದು ಸೂಕ್ತ. ನೆನಪಿಡಿ, ಇಂದೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ, ಹಾಗಾಗಿ ವಿಳಂಬ ಮಾಡದೆ ತಕ್ಷಣವೇ ಅರ್ಜಿ ಸಲ್ಲಿಸಿ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

3 ಮದುವೆ, ಸಾಕಷ್ಟು ಅಫೇರ್: ಮೇಕಪ್ ಆರ್ಟಿಸ್ಟ್​​ ನವರಂಗಿ ಆಟಕ್ಕೆ ಉದ್ಯಮಿಯ ಬಲಿ?

ಮಂಗಳೂರು, ಮಾರ್ಚ್​​ 31: ಮದುವೆಯಾದ ಒಂದೇ ತಿಂಗಳಿಗೆ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ, ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಕಾರ್ಕಳದಲ್ಲಿ ನಡೆದಿತ್ತು. ಈ ಪ್ರಕರಣಕ್ಕೀಗ ಸ್ಫೋಟಕ ತಿರುವು ಸಿಕ್ಕಿದ್ದು ಪತ್ನಿ ಸೌಮ್ಯಾಳ ನವರಂಗಿ ಆಟವೇ ಸುದೀಪ್ ಸಾವಿಗೆ ಕಾರಣ ಎಂಬ ಅನುಮಾನ ವ್ಯಕ್ತವಾಗಿದೆ. ಮದುವೆಯಾಗಿ ಕೆಲವೇ ದಿನಗಳಲ್ಲಿ ಪತ್ನಿಯ ಸರಣಿ ಮ್ಯಾರೇಜ್ ಕಹಾನಿ ಬಯಲಾಗಿತ್ತು. ಹೀಗಾಗಿ ಮದುವೆಯಾದ ಒಂದು ತಿಂಗಳ ಬಳಿಕ ತನ್ನ ತಂದೆ-ತಾಯಿ ಮನೆಗೆ ಬಂದಿದ್ದ ಸುದೀಪ್​​ ಪತ್ನಿ ಹಣ ಒಡವೆ ಕಿತ್ತುಕೊಂಡಿದ್ದಾಳೆ, ತುಂಬಾ ಟಾರ್ಚರ್ ಕೊಡುತ್ತಿದ್ದಾಳೆ ಎಂದು ಅಲವತ್ತುಕೊಂಡಿದ್ದರು ಎನ್ನಲಾಗಿದೆ.

ಪತಿ ಸುದೀಪ್​​ ತನ್ನ ತಂದೆ-ತಾಯಿ ಬಳಿ ಬಂದಿರುವ ವಿಷಯ ತಿಳಿದ ಸೌಮ್ಯಾ ಸ್ಕೂಟಿಯಲ್ಲೇ ನೂರು ಕಿಲೋಮೀಟರ್ ಪ್ರಯಾಣ ಮಾಡಿ ಬಂದಿದ್ದಳು. ನೆಲ್ಯಾಡಿಯಲ್ಲಿ ತಾಯಿ ಜೊತೆ ಕಾರಿನಲ್ಲಿ ತರೆಳುತ್ತಿದ್ದ ಸುದೀಪ್​​ರನ್ನು ಅಡ್ಡಗಟ್ಟಿ, ಗ್ರಾಮಸ್ಥರ ಎದುರು ಗಲಾಟೆ ಮಾಡಿದ್ದಳು ಬಳಿಕ ಪತಿ ಕಾರು ಹತ್ತಿದ್ದ ಈಕೆ ಅರ್ಧ ದಾರಿಯಲ್ಲೇ ತಾಯಿಯನ್ನು ಇಳಿಸುವಂತೆ ಹಿಂಸಿಸಿದ್ದಳು. ಆಕೆಯ ಕಾಟ ತಾಳಲಾರದೆ ಸುದೀಪ್​​ ರಾತ್ರಿ ವೇಳೆ ತಾಯಿಯನ್ನು ರಸ್ತೆಯಲ್ಲಿ ಇಳಿಸಿ ಪತ್ನಿ ಮನೆಗೆ ತೆರಳಿದ್ದರು. ಈ ವಿಚಾರವಾಗಿ ಅವರು ಬಹಳ ನೊಂದಿದ್ದರು ಎಂಬ ವಿಚಾರವೀಗ ಬಯಲಾಗಿದೆ.

ಇದನ್ನೂ ಓದಿ: ಮದ್ವೆಯಾದ ಒಂದೇ ತಿಂಗಳಲ್ಲಿ ವಿರಸ; ಮೇಕಪ್ ಆರ್ಟಿಸ್ಟ್​​ನ ವಿವಾಹವಾಗಿದ್ದ ಉದ್ಯಮಿ ದುರಂತ ಸಾವು

ಇನ್ನು ಸಾಮಾಜಿಕ ಜಾಲತಾಣದ ಮೂಲಕ ಸುದೀಪ್​​ಗೆ ಸೌಮ್ಯಾ ಪರಿಚಯ ಆಗಿತ್ತು. ಇವರಿಬ್ಬರೂ ಮದುವೆಯ ಬಗ್ಗೆ ನಿರ್ಧರಿಸಿದಾಗ ಅವಸರ ಮಾಡಬೇಡ. ತಾಳ್ಮೆಯಿಂದಿರು, ಎಲ್ಲಾ ವಿಚಾರಿಸಿ ಮದುವೆ ಮಾಡುತ್ತೇವೆ ಎಂದು ಪೋಷಕರು ಹೇಳಿದ್ದರು. ಹೀಗಿದ್ದರೂ ಆತುರಕ್ಕೆ ಬಿದ್ದ ಸುದೀಪ್​​ ಪೋಷಕರಿಗೆ ತಿಳಿಸದೆ ಫೆ.16ಕ್ಕೆ ದೇವಸ್ಥಾನದಲ್ಲಿ ಮದುವೆಯಾಗಿದ್ದರೆ, ಫೆ.17ರಂದು ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸುದೀಪ್​​ ಪೋಷಕರು, ಆಕೆಗೆ ಇದು ಮೂರನೇ ಮದುವೆ ಅಂತಾ ನಮಗೆ ಗೊತ್ತಿರಲಿಲ್ಲ. ಮಾ.16ಕ್ಕೆ ಮಗ ಮನೆಗೆ ಬಂದು ಆಕೆಯ ಟಾರ್ಚರ್ ಬಗ್ಗೆ ಹೇಳಿಕೊಂಡಿದ್ದ. ಮಾ.17ಕ್ಕೆ ನೆಲ್ಯಾಡಿಯಲ್ಲಿ ಬಂದು ಗಲಾಟೆ ಮಾಡಿ ಸುದೀಪ್​​ನ ಆಕೆ ಕರೆದುಕೊಂಡು ಹೋಗಿದ್ದಳು. ಬಳಿಕ ಅಲ್ಲಿ ಏನಾಯ್ತು ಗೊತ್ತಿಲ್ಲ. ಮಾ.22ಕ್ಕೆ ಆತ ಆಸ್ಪತ್ರೆಯಲ್ಲಿರೋದು ನಮಗೆ ತಿಳಿಯಿತು. ಆಸ್ಪತ್ರೆಗೆ ಹೋಗಿ ಕೇಳಿದಾಗ ಫುಡ್ ಪಾಯಿಸನ್, ಜಾಂಡೀಸ್ ಅಂತಾ ಕತೆ ಹೇಳಿದ್ರು. ಇದ್ರಲ್ಲಿ ಕೊಲೆ ಸಂಶಯ ಇರೋದ್ರಿಂದ ಉನ್ನತ ಮಟ್ಟದ ತನಿಖೆ ಆಗಬೇಕು ಎಂದವರು ಕಣ್ಣೀರು ಹಾಕಿದ್ದಾರೆ.

ಇನ್ನು ಸೌಮ್ಯ ಶೆಟ್ಟಿಯ ವಿಷವರ್ತುಲದಲ್ಲಿ ಸಿಲುಕಿ ಹೈರಾಣಾಗಿ ಹೊರಬಂದಿದ್ದ ಕಲಾವಿದ, ದೈವದ ಆರಾಧಕ ವೇಣು ಶೆಟ್ಟಿ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಆಕೆಯಿಂದ ಬಹಳ ಟಾರ್ಚರ್ ಅನುಭವಿಸಿ ಊರು ಬಿಟ್ಟು ಹೋಗಿದ್ದೆ. ಆಕೆಯ ಜೊತೆಗಿನ ಮದುವೆ ಕ್ಯಾನ್ಸಲ್ ಮಾಡಿದ್ರಿಂದ ಇನ್ನಿಲ್ಲದ ರೀತಿಯಲ್ಲಿ ಕಿರುಕುಳ ಅನುಭವಿಸಿದ್ದು, ಜೀವನದಲ್ಲಿ ಮದುವೆಯೇ ಬೇಡ ಎಂದು ನಿರ್ಧರಿಸಿದ್ದೇನೆ. ಸೈಕಾಲಜಿ ಓದಿದ್ದರೂ ಆಕೆಯ ಕಾಟಕ್ಕೆ ಮಾನಸಿಕವಾಗಿ ಕುಗ್ಗಿದ್ದೆ ಎಂದು ಹೇಳುವ ಮೂಲಕ ಸೌಮ್ಯಾಳ ನಿಜ ರೂಪವನ್ನು ಬಿಚ್ಚಿಟ್ಟಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Video: ಯಮನನ್ನೇ ಯಾಮಾರಿಸಿ ಸಾವು ಗೆದ್ದ ಅಣ್ಣ-ತಂಗಿ

ಮುಜಾಫರ್​ನಗರ, ಮಾರ್ಚ್​ 31: ಮುಜಾಫರ್​ನಗರದಲ್ಲಿ ನಡೆದ ಅಪಘಾತವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.ಮರಳು ತುಂಬಿದ್ದ ಟ್ರಕ್ ಒಂದು ಅಣ್ಣ ತಂಗಿ ಹೋಗುತ್ತಿದ್ದ ಬೈಕ್​ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ, ಸವಾರ ನಿಯಂತ್ರಣ ತಪ್ಪಿ ತಂಗಿ ಜತೆ ನಡು ರಸ್ತೆಗೆ ಬಿದ್ದಿದ್ದಾರೆ. ಆಗ ಟ್ರಕ್ ಬೈಕ್ ಮೇಲೆ ಹರಿದಿದೆ. ಅವರಿಬ್ಬರು ಬೈಕ್ ಬಿಟ್ಟು ರಸ್ತೆಗೆ ಬಿದ್ದ ಪರಿಣಾಮ ಸ್ವಲ್ಪದರಲ್ಲೇ ಅಪಘಾತ ತಪ್ಪಿದೆ. ಕೆಲವು ದಿನಗಳ ಹಿಂದೆ ದೆಹಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿ 58 ರಲ್ಲಿ ನ್ಯೂ ಮಂಡಿ ಕೊತ್ವಾಲಿ ಪ್ರದೇಶದಲ್ಲಿ ಈ ಘಟನೆ ನಡೆದಿತ್ತು. ಸಹರಾನ್‌ಪುರದಿಂದ ಬರುತ್ತಿದ್ದ ನಿಯಂತ್ರಣ ತಪ್ಪಿದ ಟ್ರಕ್ ಎರಡು ವಾಹನಗಳಿಗೆ ಡಿಕ್ಕಿ ಹೊಡೆದು ನಂತರ ಬೈಕ್ ಮೇಲೆ ಹರಿದಿತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ದಳಪತಿ ವಿಜಯ್ ಆಸ್ತಿ ವಿವರದಿಂದ ಬಹಿರಂಗವಾಯ್ತು ದೊಡ್ಡ ಸುಳ್ಳು

ದಳಪತಿ ವಿಜಯ್ (Thalapathy Vijay) ಭಾರತದ ಹಾಲಿ ಸೂಪರ್ ಸ್ಟಾರ್ ನಟರುಗಳಲ್ಲಿ ಒಬ್ಬರು. ತಮಿಳುನಾಡಿನಲ್ಲಿ ಮಾತ್ರವಲ್ಲದೆ ದೇಶದ ನಾನಾ ರಾಜ್ಯಗಳಲ್ಲಿ ಕೋಟ್ಯಂತರ ಅಭಿಮಾನಿಗಳನ್ನು ದಳಪತಿ ವಿಜಯ್ ಹೊಂದಿದ್ದಾರೆ. ವಿಜಯ್ ಅವರ ಸಿನಿಮಾಗಳು ನೂರಾರು ಕೋಟಿ ಬಾಕ್ಸ್ ಆಫೀಸ್​​ನಲ್ಲಿ ಕಲೆಕ್ಷನ್ ಮಾಡುತ್ತವೆ. ಇದರ ಜೊತೆಗೆ ವಿಜಯ್, ಭಾರತದಲ್ಲಿಯೇ ಅತಿ ಹೆಚ್ಚು ಸಂಭಾವನೆ ಪಡೆವ ನಟ ಎಂದು ಸಹ ಹೇಳಲಾಗುತ್ತಿತ್ತು. ಆದರೆ ಇದೀಗ ದಳಪತಿ ವಿಜಯ್ ಚುನಾವಣೆಗೆ ಸ್ಪರ್ಧಿಸಿದ್ದು, ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರದಲ್ಲಿ ತಮ್ಮ ಆಸ್ತಿ ವಿವರವನ್ನು ಸಹ ಘೋಷಣೆ ಮಾಡಿದ್ದಾರೆ. ಈ ಆಸ್ತಿ ವಿವರ ನೋಡಿದರೆ ದಳಪತಿ ವಿಜಯ್ ಬಗ್ಗೆ ಹೇಳಲಾಗಿದ್ದ ದೊಡ್ಡ ಸುಳ್ಳೊಂದು ಬಹಿರಂಗವಾಗಿದೆ.

ವಿಜಯ್ ಅವರು ಭಾರತದಲ್ಲೇ ಅತಿ ಹೆಚ್ಚು ಸಂಭಾವನೆ ಪಡೆವ ನಟ ಎಂಬ ಸುದ್ದಿ ಹರಡಲಾಗಿತ್ತು, ಅವರ ಅಭಿಮಾನಿಗಳು ಇದಕ್ಕೆ ಭಾರಿ ಪ್ರಚಾರ ನೀಡಿದ್ದರು. ಆದರೆ ಈಗ ವಿಜಯ್ ಅವರ ಆಸ್ತಿ ವಿವರ ನೋಡಿದರೆ ಇದು ಸುಳ್ಳು ಎಂಬುದು ಸ್ಪಷ್ಟವಾಗುತ್ತಿದೆ. ವಿಜಯ್ ಅವರು ಪ್ರತಿ ಸಿನಿಮಾಕ್ಕೆ 200 ರಿಂದ 250 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎಂದು ಸುದ್ದಿಯಾಗಿತ್ತು. ಈಗ ಅವರ ಕೊನೆಯ ಸಿನಿಮಾ ಆಗಿರುವ, ಇನ್ನೂ ಬಿಡುಗಡೆ ಆಗದ ‘ಜನ ನಾಯಗನ್’ ಸಿನಿಮಾಕ್ಕೆ 275 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿತ್ತು. ಆದರೆ ವಿಜಯ್ ಅವರ ಆಸ್ತಿ ವಿವರ ನೋಡಿದರೆ ಇದೆಲ್ಲ ಸುಳ್ಳು ಎಂದು ತಿಳಿದು ಬರುತ್ತಿದೆ.

ದಳಪತಿ ವಿಜಯ್ ಅವರು ನಾಮಪತ್ರದಲ್ಲಿ ಐದು ವರ್ಷಗಳ ವಾರ್ಷಿಕ ಆದಾಯ, ಆಸ್ತಿಗಳ ಮಾಹಿತಿಯನ್ನು ನೀಡಿದ್ದಾರೆ. ಇದರಲ್ಲಿ 2021-22ರ ಆರ್ಥಿಕ ವರ್ಷದಲ್ಲಿ ಮಾತ್ರವೇ ವಿಜಯ್ ಅವರು 237 ಕೋಟಿ ರೂಪಾಯಿ ಹಣ ಗಳಿಕೆ ಮಾಡಿದ್ದಾರೆ. ಅದರ ಹೊರತಾಗಿ ಇನ್ನುಳಿದ ಹಣಕಾಸು ವರ್ಷಗಳಲ್ಲಿ ವಿಜಯ್ ಅವರ ವಾರ್ಷಿಕ ಗಳಿಕೆ 200 ಕೋಟಿ ಸಹ ದಾಟಿಲ್ಲ. ವಿಜಯ್ ಅವರು ಕಳೆದ ಹಣಕಾಸು ವರ್ಷ ಅಂದರೆ 2024-25 ರಲ್ಲಿ 184 ಕೋಟಿ ಗಳಿಸಿದ್ದಾರೆ, 2023-24ರಲ್ಲಿ 105 ಕೋಟಿ ಗಳಿಕೆ ಮಾಡಿದ್ದಾರೆ. 2022-23 ರಲ್ಲಿ 198 ಕೋಟಿ ಗಳಿಸಿದ್ದಾರೆ. 2021-22 ರಲ್ಲಿ 237 ಕೋಟಿ ಮತ್ತು ಕೋವಿಡ್ ಸಮಯವಾದ 2020-21 ರಲ್ಲಿ ಕೇವಲ 8 ಕೋಟಿ ಗಳಿಕೆ ಮಾಡಿದ್ದಾರೆ.

ಇದನ್ನೂ ಓದಿ:ದಳಪತಿ ವಿಜಯ್ 603 ಕೋಟಿ ರೂಪಾಯಿ ಆಸ್ತಿ ವಿವರ ಬಹಿರಂಗ: ಪತ್ನಿ ಬಳಿ ಎಷ್ಟಿದೆ?

ವಿಜಯ್ ಅವರು ಪ್ರತಿ ಸಿನಿಮಾಕ್ಕೆ 200 ಕೋಟಿ ಪಡೆಯುತ್ತಾರೆ ಎನ್ನಲಾಗಿತ್ತು. ಆದರೆ ಅವರ ಆಸ್ತಿ ವಿವರ ನೋಡಿದರೆ ಅದು ಸಳ್ಳೆಂಬುದು ಖಾತ್ರಿ ಆಗುತ್ತಿದೆ. ವಿಜಯ್ ಅವರ ಇತರೆ ಉದ್ಯಮಗಳಿಂದಲೂ ಒಟ್ಟು ಗೂಡಿಯೇ ವಾರ್ಷಿ 200 ಕೋಟಿ ಗಳಿಕೆ ದಾಟಿಲ್ಲ (2021-22ರ ಆರ್ಥಿಕ ವರ್ಷ ಹೊರತುಪಡಿಸಿ).

ವಿಜಯ್ ಅವರು ಟಿವಿಕೆ (ತಮಿಳಗ ವೆಟ್ರಿ ಕಳಗಂ) ಪಕ್ಷ ಸ್ಥಾಪಿಸಿದ್ದು, ತಮಿಳುನಾಡು ವಿಧಾನಸಭೆ ಚುನಾವಣೆಗೆ ಬಹುತೇಕ ಎಲ್ಲ ಕ್ಷೇತ್ರಗಳಿಂದಲೂ ಸ್ಪರ್ಧಿಗಳನ್ನು ಕಣಕ್ಕೆ ಇಳಿಸಿದ್ದಾರೆ. ಸ್ವತಃ ವಿಜಯ್ ಅವರು ತಿರುಚಿ ಈಸ್ಟ್ ಮತ್ತು ಪೆರಂಬೂರು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಭರ್ಜರಿಯಾಗಿ ಚುನಾವಣೆ ಪ್ರಚಾರವನ್ನೂ ಸಹ ಮಾಡುತ್ತಿದ್ದಾರೆ. ಫಲಿತಾಂಶ ಏನಾಗುತ್ತದೆಯೋ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ತಾಹಿರ್ ಅನ್ವರ್ ಯಾರು? ಪಾಕಿಸ್ತಾನದಲ್ಲಿ ಮಸೂದ್ ಅಜರ್ ಸಹೋದರ ಅನುಮಾನಾಸ್ಪದವಾಗಿ ಸಾವು

ಇಸ್ಲಾಮಾಬಾದ್, ಮಾರ್ಚ್​ 31: ಪಾಕಿಸ್ತಾನ(Pakistan) ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ನಾಯಕ ಮಸೂದ್ ಅಜರ್​ನ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ಮೃತಪಟ್ಟಿದ್ದಾನೆ. ಬಹಾವಲ್ಪುರದಲ್ಲಿ ಆತನ ಅಂತ್ಯಕ್ರಿಯೆ ನಡೆದಿದೆ ಎಂದು ವರದಿಯಾಗಿದೆ. ಅವನ ಸಾವು ಹೇಗೆ ಸಂಭವಿಸಿದೆ ಎಂಬುದರ ಬಗ್ಗೆ ಸಂಘಟನೆ ಬಹಿರಂಗಗೊಳಿಸಿಲ್ಲ. ತಾಹಿರ್ ಅನ್ವರ್ ತನ್ನ ಸಹೋದರನ ಭಯೋತ್ಪಾದಕ ಸಂಘಟನೆಯಾದ ಜೈಶ್-ಎ-ಮೊಹಮ್ಮದ್‌ನೊಂದಿಗೆ ಸಹ ಸಂಬಂಧ ಹೊಂದಿದ್ದ ಎನ್ನಲಾಗಿದೆ.

ಸೋಮವಾರ ತಡರಾತ್ರಿ ಬಹಾವಲ್ಪುರದ ಜಾಮಿಯಾ ಮಸೀದಿ ಉಸ್ಮಾನ್ ವಾಲಿ ಬಳಿ ತಾರಿಕ್​ನನ್ನು ಸಮಾಧಿ ಮಾಡಲಾಗಿದೆ ಎಂದು ಸಂಘಟನೆಯ ಅಧಿಕೃತ ಚಾನೆಲ್ ಮೂಲಕ ದೃಢಪಡಿಸಲಾಗಿದೆ. ವರ್ಷಗಳಿಂದ ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಎಂದು ಹೇಳಲಾಗಿದೆ.

ಕೆಲವು ತಿಂಗಳುಗಳಿಂದ, ಪಾಕಿಸ್ತಾನದಲ್ಲಿ ವಿವಿಧ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದ ಹಲವಾರು ಜನರನ್ನು ಕೊಲ್ಲಲಾಗಿದೆ. ಅನೇಕ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಪರಿಣಾಮವಾಗಿ, ತಾಹಿರ್ ಸಾವಿನ ಬಗ್ಗೆ ವಿವಿಧ ಊಹಾಪೋಹಗಳು ಹರಡುತ್ತಿವೆ. ಆದಾಗ್ಯೂ, ಆತನ ಮೇಲೆ ದಾಳಿ ನಡೆದಿದೆ ಎಂಬುದಕ್ಕೆ ಯಾವುದೇ ಮಾಹಿತಿ ಇನ್ನೂ ಹೊರಬಂದಿಲ್ಲ.

ತಾಹಿರ್ ಅನ್ವರ್ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ನ ಹಿರಿಯ ಸಹೋದರ. ಅನ್ವರ್ ಮಸೂದ್ ಅಜರ್ ನ ಐವರು ಸಹೋದರರಲ್ಲಿ ಒಬ್ಬ. ಅನ್ವರ್ ಜೈಶ್-ಎ-ಮೊಹಮ್ಮದ್ ನ ಕಾರ್ಯಾಚರಣೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ.ಇತ್ತೀಚಿನ ದಿನಗಳಲ್ಲಿ ಮಸೂದ್ ಅಜರ್ ಕುಟುಂಬದಲ್ಲಿ ಸರಣಿ ಸಾವುಗಳು ಸಂಭವಿಸಿವೆ.

ಮತ್ತಷ್ಟು ಓದಿ: ಭಾರತದ ವಿರುದ್ಧದ ಭಯೋತ್ಪಾದನಾ ಸಂಘಟನೆಗೆ ಪಾಕಿಸ್ತಾನ ಆಶ್ರಯ ನೀಡುತ್ತಲೇ ಇದೆ; ಅಮೆರಿಕದ ಸಂಶೋಧನಾ ವರದಿ

ಭಾರತವು ಆಪರೇಷನ್ ಸಿಂಧೂರ್ ನಡೆಸಿದಾಗ ಬಹಾವಲ್ಪುರದಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಮಸೂದ್ ಕುಟುಂಬದ ಹತ್ತು ಸದಸ್ಯರು ಮತ್ತು ಕೆಲವು ಸಹಚರರು ಸಾವನ್ನಪ್ಪಿದ್ದಾರೆ. ಕೊಲ್ಲಲ್ಪಟ್ಟವರಲ್ಲಿ ಅವರ ಸಹೋದರಿ, ಸೋದರಳಿಯ ಮತ್ತು ಇತರ ಕುಟುಂಬ ಸದಸ್ಯರು ಸೇರಿದ್ದಾರೆ. ಮಸೂದ್ ಎಂದು ಹೇಳಲಾದ ಕೆಲವು ಆಡಿಯೊ ರೆಕಾರ್ಡಿಂಗ್‌ಗಳು ಸಹ ಸಾವನ್ನು ದೃಢಪಡಿಸಿವೆ.

ಜೈಶ್-ಎ-ಮೊಹಮ್ಮದ್ ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಭಯೋತ್ಪಾದಕ ಸಂಘಟನೆಯಾಗಿದೆ. ಭಾರತದಲ್ಲಿ ನಡೆದ ಬಹುತೇಕ ದಾಳಿಗಳಲ್ಲಿ ಜೈಶ್ ಸಂಘಟನೆ ಕೈವಾಡವಿದೆ. ಜೈಶ್ 2001 ರ ಸಂಸತ್ ದಾಳಿ, 2008 ರ ಮುಂಬೈ ದಾಳಿ, 2016 ರ ಪಠಾಣ್‌ಕೋಟ್ ದಾಳಿ ಮತ್ತು 2019 ರ ಪುಲ್ವಾಮಾ ದಾಳಿಯಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿದೆ.

ಮಸೂದ್ ಅಜರ್ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಪಟ್ಟಿಯಲ್ಲಿದ್ದ. ಮಸೂದ್ ಬಹಳ ದಿನಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲಅವನ ಇರುವಿಕೆ ಮತ್ತು ಆರೋಗ್ಯದ ಬಗ್ಗೆ ವದಂತಿಗಳು ಹರಡಿವೆ. ಆದಾಗ್ಯೂ, ಮಸೂದ್ ಪಾಕಿಸ್ತಾನದಿಂದ ಭಯೋತ್ಪಾದನೆಯನ್ನು ಹರಡುತ್ತಲೇ ಇದ್ದಾನೆ ಎಂಬ ವರದಿಗಳು ಕೂಡ ಇವೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

NHAI Summer Internship 2026: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಇಂಟರ್ನ್‌ಶಿಪ್; ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ, ತಿಂಗಳಿಗೆ 20,000ರೂ. ಸ್ಟೈಫಂಡ್!

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ದೇಶದ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗಾಗಿ ಸಮ್ಮರ್ ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಘೋಷಿಸಿದೆ. ದೇಶಾದ್ಯಂತ ನಡೆಯುತ್ತಿರುವ ಬೃಹತ್ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಲ್ಲಿ ಪ್ರಾಯೋಗಿಕ ಅನುಭವ ಪಡೆಯಲು ಬಯಸುವ ವಿವಿಧ ವಿಭಾಗಗಳ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಇದೊಂದು ಉತ್ತಮ ವೇದಿಕೆಯಾಗಿದೆ. ಎರಡು ತಿಂಗಳ ಅವಧಿಯ ಈ ಇಂಟರ್ನ್‌ಶಿಪ್ ಕಾರ್ಯಕ್ರಮವು ಮೇ 4 ರಿಂದ ಜುಲೈ 5 ರವರೆಗೆ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 20,000 ರೂಪಾಯಿ ಸ್ಟೈಫಂಡ್ ನೀಡಲಾಗುವುದು.

ಈ ಕಾರ್ಯಕ್ರಮವು ಕೇವಲ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿರದೆ, ವೈವಿಧ್ಯಮಯ ಶೈಕ್ಷಣಿಕ ಹಿನ್ನೆಲೆಯುಳ್ಳವರಿಗೂ ಅವಕಾಶ ಕಲ್ಪಿಸಿದೆ. ಸಿವಿಲ್ ಎಂಜಿನಿಯರಿಂಗ್, ಐಟಿ, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್, ಇನ್ಸ್ಟ್ರುಮೆಂಟೇಶನ್ ಮತ್ತು ಡೇಟಾ ಸೈನ್ಸ್/ಆರ್ಟಿಫಿಶಿಯಲ್ ಇಂಟೆಲಿಜೆನ್ಸ್‌ನಂತಹ ತಾಂತ್ರಿಕ ವಿಭಾಗಗಳ ಜೊತೆಗೆ, ಕಾನೂನು (BA LLB), ವಾಣಿಜ್ಯ, ವಿಜ್ಞಾನ (BA/BCom/BSc), ನಿರ್ವಹಣೆ (MBA-HR, ಫೈನಾನ್ಸ್, ಮಾರ್ಕೆಟಿಂಗ್), ಸಮೂಹ ಸಂವಹನ ಮತ್ತು ಗ್ರಂಥಾಲಯ ವಿಜ್ಞಾನದ ವಿದ್ಯಾರ್ಥಿಗಳೂ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಎನ್‌ಎಚ್‌ಎಐ ಪ್ರಧಾನ ಕಚೇರಿ ಅಥವಾ ಕ್ಷೇತ್ರ ಕಚೇರಿಗಳಲ್ಲಿ ಅನುಭವಿ ತಜ್ಞರ ಮಾರ್ಗದರ್ಶನದಲ್ಲಿ ಕೆಲಸ ಮಾಡುವ ಮೂಲಕ ರಸ್ತೆ ಯೋಜನೆಗಳ ಯೋಜನೆ, ಅನುಷ್ಠಾನ ಮತ್ತು ನಿರ್ವಹಣೆಯ ಬಗ್ಗೆ ಆಳವಾದ ಜ್ಞಾನವನ್ನು ಪಡೆಯಲಿದ್ದಾರೆ.

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಉದ್ಯೋಗ ಪಡೆಯುವುದು ಹೇಗೆ? ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಚೌಕಟ್ಟು (NIRF) ಗುರುತಿಸಿರುವ ಉನ್ನತ ಸಂಸ್ಥೆಗಳು ಅಥವಾ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಪ್ರಸ್ತುತ ಪೂರ್ಣ ಸಮಯದ ಯುಜಿ ಅಥವಾ ಪಿಜಿ ಕೋರ್ಸ್‌ಗಳನ್ನು ಮಾಡುತ್ತಿರುವ ವಿದ್ಯಾರ್ಥಿಗಳು ಈ ಇಂಟರ್ನ್‌ಶಿಪ್‌ಗೆ ಅರ್ಹರಾಗಿರುತ್ತಾರೆ. ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಅಧಿಕೃತ ಪ್ರಮಾಣಪತ್ರವನ್ನು ನೀಡಲಾಗುವುದು, ಇದು ಅವರ ಮುಂದಿನ ವೃತ್ತಿಜೀವನಕ್ಕೆ ಹೆಚ್ಚಿನ ಮೌಲ್ಯವನ್ನು ತಂದುಕೊಡಲಿದೆ. ಆಸಕ್ತರು ಏಪ್ರಿಲ್ 15ರೊಳಗೆ ಅಧಿಕೃತ NHAI ಇಂಟರ್ನ್‌ಶಿಪ್ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕೆಂದು ಕೋರಲಾಗಿದೆ.

NHAI ಸಮ್ಮರ್ ಇಂಟರ್ನ್‌ಶಿಪ್ ಕಾರ್ಯಕ್ರಮಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್​ ಮೇಲೆ ಕ್ಲಿಕ್ ಮಾಡಿ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆನ್​ಲೈನ್ ಪೋಸ್ಟ್ ಹಾಕುವಾಗ ಹುಷಾರ್; ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳಿಗೂ ಬಿಸಿ; ಇದು ಸರ್ಕಾರದ ಪ್ರಸ್ತಾವಿತ ಐಟಿ ನಿಯಮಗಳ ಎಫೆಕ್ಟ್

ನವದೆಹಲಿ, ಮಾರ್ಚ್ 31: ಕೇಂದ್ರ ಸರ್ಕಾರ 2021ರ ಮಾಹಿತಿ ತಂತ್ರಜ್ಞಾನ ಮಾರ್ಗಸೂಚಿ ಮತ್ತು ಡಿಜಿಟಲ್ ಮೀಡಿಯಾ ನೈತಿಕ ಸಂಹಿತೆ ನಿಯಮಗಳನ್ನು ಪರಿಷ್ಕರಿಸುತ್ತಿದೆ. ಈ ಸಂಬಂಧ ತಿದ್ದುಪಡಿ ತರುತ್ತಿದ್ದು ಅದರ ಕರಡು ನಿಯಮಗಳನ್ನು ನಿನ್ನೆ ಸೋಮವಾರ ಬಹಿರಂಗಪಡಿಸಿದೆ. ಸಾಮಾನ್ಯ ಸೋಷಿಯಲ್ ಮೀಡಿಯಾ ಬಳಕೆದಾರನ (social media user) ಮೇಲೆ ಪರಿಣಾಮ ಬೀರಲಿರುವುದು ಸೇರಿದಂತೆ ಕೆಲ ಪ್ರಮುಖ ಸಂಗತಿಗಳು ಈ ಪ್ರಸ್ತಾವಿತ ನಿಯಮಗಳಲ್ಲಿವೆ.

ಗಮನಿಸಬೇಕಾದ ಹೊಸ ಐಟಿ ನಿಯಮಗಳಿವು…

ಆನ್​ಲೈನ್​ನಲ್ಲಿ ಸಾಮಾನ್ಯ ಬಳಕೆದಾರರು ಹಾಕುವ ಪೋಸ್ಟ್​ಗಳು ಸೂಕ್ಷ್ಮವಿದ್ದರೆ, ಅವರಿಗೆ ಸರ್ಕಾರದಿಂದಲೇ ನೇರವಾಗಿ ನೋಟೀಸ್ ಹೋಗಬಹುದು.

ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳಿಗೆ ಸರ್ಕಾರ ನೀಡುವ ಸೂಚನೆಗಳು ಗೈಡ್​ಲೈನ್ಸ್ ಮಾತ್ರವೇ ಆಗದೆ, ಕಾನೂನಾತ್ಮಕವಾಗಿ ಪಾಲಿಸುವಂಥದ್ದಿರುತ್ತವೆ. ಇವನ್ನು ಪಾಲಿಸದಿದ್ದರೆ ಕಾನೂನು ಪ್ರಕ್ರಿಯೆ ಎದುರಿಸಬೇಕಾಗುತ್ತದೆ.

ಇದನ್ನೂ ಓದಿ: ವಿವಿಧ ಪೋಸ್ಟ್ ಆಫೀಸ್ ಸ್ಕೀಮ್ಸ್; ಏಪ್ರಿಲ್-ಜೂನ್ ಕ್ವಾರ್ಟರ್​ಗೆ ಬಡ್ಡಿದರ ಘೋಷಣೆ; ಇಲ್ಲಿದೆ ಪಟ್ಟಿ

ಸಾಮಾನ್ಯ ಬಳಕೆದಾರರ ಮೇಲೆ ಯಾಕೆ ಸರ್ಕಾರದ ಕಣ್ಣು?

ಇವತ್ತು ಸೋಷಿಯಲ್ ಮೀಡಿಯಾ ಮತ್ತು ಆನ್​ಲೈನ್ ಪ್ಲಾಟ್​ಫಾರ್ಮ್​ಗಳು ಗಣನೀಯವಾಗಿ ವಿಸ್ತರಣೆ ಕಂಡಿವೆ. ಮಾಧ್ಯಮ ಸಂಸ್ಥೆಗಳಿಗಿಂತ ಹೆಚ್ಚು ಪ್ರಭಾವಶಾಲಿಯಾದ ಪೋಸ್ಟ್​ಗಳು ಸಾಮಾನ್ಯ ಯೂಸರ್​​ಗಳಿಂದ ಬರುತ್ತವೆ. ಸೋಷಿಯಲ್ ಮೀಡಿಯಾದಲ್ಲಿ ತಪ್ಪು ಮಾಹಿತಿ ಸುಲಭವಾಗಿ ಹರಡಬಹುದು. ಇನ್ಸ್​ಟಾಗ್ರಾಮ್ ಇನ್​ಫ್ಲುಯೆನ್ಸರ್​ಗಳು, ಯೂಟ್ಯೂಬ್ ಚಾನಲ್ ನಡೆಸುವವರು ಮೊದಲಾದವರು ಪ್ರಸಕ್ತ ವಿದ್ಯಮಾನಗಳ ಬಗ್ಗೆ ವ್ಯಕ್ತಪಡಿಸುವ ಅಭಿಪ್ರಾಯಗಳು ಇತರರನ್ನು ಪ್ರಭಾವಿತಗೊಳಿಸಬಹುದು. ಹೀಗಾಗಿ, ಸರ್ಕಾರವು ಈ ಬಳಕೆದಾರರ ಪೋಸ್ಟ್​ಗಳ ಮೇಲೆ ನಿಗಾ ಇರಿಸಲು ಹೊರಟಿರಬಹುದು.

ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳಿಗೆ ಹೆಚ್ಚಿನ ಜವಾಬ್ದಾರಿ

ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳು ಇಂತಿಂತಹ ಕಂಟೆಂಟ್​ಗಳ ಮೇಲೆ ನಿಗಾ ಇರಿಸಬೇಕು ಎಂದು ಸರ್ಕಾರದಿಂದ ಸಲಹೆ, ಸೂಚನೆಗಳು, ಮಾರ್ಗಸೂಚಿಗಳು ಇವೆ. ಆದರೆ, ಈ ಮಾರ್ಗಸೂಚಿಗಳನ್ನು ಪಾಲಿಸಲೇಬೇಕು ಎನ್ನುವ ಕಟ್ಟುಪಾಡು ಇರಲಿಲ್ಲ. ಈಗ ಪ್ರಸ್ತಾವಿತ ನಿಯಮಗಳ ಪ್ರಕಾರ, ಸರ್ಕಾರ ನೀಡುವ ಮಾರ್ಗಸೂಚಿಗಳನ್ನು ಕಟ್ಟುಪಾಡುಗಳಂತೆ ಭಾವಿಸಿ ಕಾರ್ಯ ನಿರ್ವಹಿಸಬೇಕಾಗುತ್ತದೆ. ಇಂಥ ತಪ್ಪು ಪೋಸ್ಟ್ ಅನ್ನು ತೆಗೆದುಹಾಕಬೇಕೆಂದರೆ ಅದನ್ನು ತೆಗೆಯುವುದು ಅನಿವಾರ್ಯ. ಇಲ್ಲದಿದ್ದರೆ ಕಾನೂನು ಪ್ರಕ್ರಿಯೆ ಎದುರಿಸಬೇಕಾಗುತ್ತದೆ.

ಇದನ್ನೂ ಓದಿ: ಹೆಚ್ಚು ನಾಮಿನಿಗಳು, ಸೊನ್ನೆ ಲೋನ್ ಪ್ರೀಪೇಮೆಂಟ್ ಚಾರ್ಜ್; ಜನಸಾಮಾನ್ಯರು ಗಮನಿಸಬೇಕಾದ ಹೊಸ ನಿಯಮಗಳಿವು

ಕೆಲ ವಾರಗಳ ಹಿಂದೆ ಸರ್ಕಾರವು ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳಿಗೆ ನೀಡಿದ ನಿರ್ದೇಶನದ ಪ್ರಕಾರ, ಒಂದು ಪೋಸ್ಟ್ ಅನ್ನು ತೆಗೆದುಹಾಕುವಂತೆ ಸೂಚನೆ ನೀಡಿದರೆ ಅದನ್ನು ಪಾಲಿಸುವ ಅವಧಿಯನ್ನು 24-36 ಗಂಟೆಗಳಿಂದ ಕೇವಲ 2-3 ಗಂಟೆಗೆ ಇಳಿಸಲಾಗಿದೆ.

ಸದ್ಯ ಸರ್ಕಾರದ ಕರಡು ನಿಯಮಗಳ ಬಗ್ಗೆ ಯಾರಿಗೇ ಆದರೂ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಏಪ್ರಿಲ್ 14ರವರೆಗೂ ಕಾಲಾವಕಾಶ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ವೇಗವಾಗಿ ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ ಹೊರಗೆಸೆಯಲ್ಪಟ್ಟ ವಿದ್ಯಾರ್ಥಿನಿಯರು! ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಮಂಗಳೂರು, ಮಾರ್ಚ್ 31: ವೇಗವಾಗಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಎಸೆಯಲ್ಪಟ್ಟ ಭೀಕರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಇಬ್ಬರು ವಿದ್ಯಾರ್ಥಿನಿಯರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯ ವಿವರ: ಪುತ್ತೂರಿನಿಂದ ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಗೇರುಕಟ್ಟೆ ಎಂಬಲ್ಲಿ ಅಕ್ಕ-ತಂಗಿ ಹತ್ತಿದ್ದರು. ಬಸ್ ಕಳಿಯ ಗ್ರಾಮದ ರೇಷ್ಮೆರೋಡ್ ಎಂಬಲ್ಲಿನ ತಿರುವಿನಲ್ಲಿ ವೇಗವಾಗಿ ಚಲಿಸುತ್ತಿದ್ದಾಗ, ಬಸ್ಸಿನ ಬಾಗಿಲು ಏಕಾಏಕಿ ತೆರೆದುಕೊಂಡಿದೆ. ಈ ವೇಳೆ ಬಾಗಿಲ ಬಳಿಯೇ ನಿಂತಿದ್ದ ಅಕ್ಕ ಮೊದಲು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಅವರನ್ನು ರಕ್ಷಿಸಲು ಹೋದ ತಂಗಿ ಕೂಡ ನಿಯಂತ್ರಣ ತಪ್ಪಿ ಬಸ್ಸಿನಿಂದ ಹೊರಕ್ಕೆ ಬಿದ್ದಿದ್ದಾರೆ.

ಈ ಇಡೀ ದೃಶ್ಯವು ರಸ್ತೆಯ ಪಕ್ಕದಲ್ಲಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನೋಡುವವರ ಎದೆ ನಡುಗಿಸುವಂತಿದೆ. ಬಿದ್ದ ತಕ್ಷಣ ಸ್ಥಳೀಯರು ಓಡಿ ಬಂದು ವಿದ್ಯಾರ್ಥಿನಿಯರನ್ನು ರಕ್ಷಿಸಿ, ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಸ್ಸಿನ ನಿರ್ವಹಣೆ ಮತ್ತು ಚಾಲಕನ ನಿರ್ಲಕ್ಷ್ಯದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

Source link