All posts by nagaraj11081993

ರೈತರಿಗೆ ಖುಷಿ ಸುದ್ದಿ: ಜೂ 25ಕ್ಕೆ ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ – Kannada News | Tungabhadra Dam’s 33 New Gates to Be Inaugurated on June 25 by Karnataka, Telangana and Andhra Pradesh CMs

ಕೊಪ್ಪಳ, ಜೂನ್​​ 19: ತುಂಗಭದ್ರಾ ಜಲಾಶಯದ (Tungabhadra Dam) ಕ್ರಸ್ಟ್ ಗೇಟ್ ಮುರಿದುಬಿದ್ದು ಮೂರು ರಾಜ್ಯಗಳ ಒಂಬತ್ತು ಜಿಲ್ಲೆಗಳಲ್ಲಿ ಆತಂಕ ಮೂಡಿಸಿದ್ದ ಸಮಸ್ಯೆಗೆ ಇದೀಗ ಶಾಶ್ವತ ಪರಿಹಾರ ಸಿಕ್ಕಿದೆ. ಜಲಾಶಯದ ಒಟ್ಟು 33 ಗೇಟ್‌ಗಳನ್ನು ಯಶಸ್ವಿಯಾಗಿ ಬದಲಾಯಿಸಲಾಗಿದ್ದು, ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದೆ. ಇದೇ ಜೂನ್ 25 ರಂದು ಕರ್ನಾಟಕ (Karnataka), ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು ಜಂಟಿಯಾಗಿ ಈ ನೂತನ ಗೇಟ್‌ಗಳನ್ನು ಉದ್ಘಾಟಿಸಲಿದ್ದಾರೆ.

ಮುಖ್ಯಾಂಶಗಳು

  • ತುಂಗಭದ್ರಾ ಜಲಾಶಯದ ಕ್ರಷ್ಟ್ ಗೇಟ್​ಗಳ ಉದ್ಘಾಟನೆಗ ಕ್ಷಣಗಣನೆ
  • ಜೂನ್ 25 ರಂದು ಮೂರು ರಾಜ್ಯಗಳ ಸಿಎಂಗಳಿಂದ ಲೋಕಾರ್ಪಣೆ
  • 55 ರಿಂದ 60 ವರ್ಷಗಳವರೆಗೆ ಬಾಳಿಕೆ ಬರಲಿರುವ ಕ್ರಷ್ಟ್ ಗೇಟ್​ಗಳು

51 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ: 55 ರಿಂದ 60 ವರ್ಷಗಳವರೆಗೆ ಬಾಳಿಕೆ

ಕರ್ನಾಟಕದ ನಾಲ್ಕು ಜಿಲ್ಲೆಗಳು ಮಾತ್ರವಲ್ಲದೆ, ನೆರೆಯ ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳಿಗೂ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ 2024ರ ಆಗಸ್ಟ್ 10ರಂದು ಕೊಚ್ಚಿಹೋಗಿತ್ತು. ಈ ಘಟನೆಯ ಬಳಿಕ ತಂತ್ರಜ್ಞರ ಸಮಿತಿಯು ಜಲಾಶಯದ ಎಲ್ಲಾ 33 ಗೇಟ್‌ಗಳನ್ನು ಬದಲಾಯಿಸಲು ಸೂಚನೆ ನೀಡಿತ್ತು. ಅದರಂತೆ ಸುಮಾರು 51 ಕೋಟಿ ರೂ. ವೆಚ್ಚದಲ್ಲಿ ಈ ಮಹತ್ವದ ಕಾಮಗಾರಿಯನ್ನು ಕೈಗೊಂಡು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಈ ಹೊಸ ಕ್ರಸ್ಟ್ ಗೇಟ್‌ಗಳು ಮುಂದಿನ 55 ರಿಂದ 60 ವರ್ಷಗಳವರೆಗೆ ಬಾಳಿಕೆ ಬರಲಿವೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ತುಂಗಭದ್ರಾ ಡ್ಯಾಂ ಬಗ್ಗೆ ಸರ್ಕಾರದಿಂದ ಬಿಗ್ ಅಪ್​ಡೇಟ್: ರೈತರು ಫುಲ್ ಖುಷ್

ಲೋಕಾರ್ಪಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಗುರುವಾರ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ಜಲಾಶಯಕ್ಕೆ ಭೇಟಿ ನೀಡಿದ ಸಚಿವ ರಾಮಲಿಂಗಾರೆಡ್ಡಿ, ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿದರು. ತದನಂತರ ಮುನಿರಾಬಾದ್‌ನ ಹೈಸ್ಕೂಲ್ ಮೈದಾನದಲ್ಲಿ ಸಿದ್ಧಗೊಳ್ಳುತ್ತಿರುವ ಬೃಹತ್ ವೇದಿಕೆ, ವಾಹನ ಸಂಚಾರ ವ್ಯವಸ್ಥೆ, ಬ್ಯಾರಿಕೇಡ್ ಅಳವಡಿಕೆ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಕೈಗೊಳ್ಳಲಾದ ಮುನ್ನೆಚ್ಚರಿಕೆ ಕ್ರಮಗಳನ್ನು ವೀಕ್ಷಿಸಿ, ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿದರು.

ವೇಗವಾಗಿ ಕಾಮಗಾರಿ ಮುಗಿಸಿರುವುದು ನಮ್ಮ ಸರ್ಕಾರದ ಬದ್ಧತೆ: ಶಾಸಕ ರಾಘವೇಂದ್ರ ಹಿಟ್ನಾಳ್

ಈ ಐತಿಹಾಸಿಕ ಸಮಾರಂಭದಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಉದ್ಘಾಟನೆಯ ಜೊತೆಗೆ, ಮೂರು ರಾಜ್ಯಗಳ ನಡುವಿನ ನೀರಿನ ಹಂಚಿಕೆ, ನೀರಾವರಿ ಯೋಜನೆಗಳು ಹಾಗೂ ಅಂತಾರಾಜ್ಯ ನದಿ ವಿವಾದಗಳ ಕುರಿತು ಮಹತ್ವದ ಚರ್ಚೆಗಳು ನಡೆಯಲಿವೆ. ವಿಶೇಷವಾಗಿ ಮೇಕೆದಾಟು, ಮಹಾದಾಯಿ ಹಾಗೂ ನವಲಿ ಸಮಾನಾಂತರ ಜಲಾಶಯ ನಿರ್ಮಾಣದ ಕುರಿತು ಕೇಂದ್ರ ಸರ್ಕಾರದೊಂದಿಗೆ ನಡೆಸಬೇಕಾದ ಮಾತುಕತೆಗಳ ಬಗ್ಗೆಯೂ ಈ ವೇದಿಕೆಯಲ್ಲಿ ಸಮಾಲೋಚನೆ ನಡೆಸಲು ನಿರ್ಧರಿಸಲಾಗಿದೆ. ವಿರೋಧ ಪಕ್ಷವಾದ ಬಿಜೆಪಿ ಈ ವಿಷಯದಲ್ಲಿ ಸಾಲು ಸಾಲು ಆರೋಪಗಳನ್ನು ಮಾಡಿದರೂ, ಅತ್ಯಂತ ವೇಗವಾಗಿ ಕಾಮಗಾರಿ ಮುಗಿಸಿರುವುದು ನಮ್ಮ ಸರ್ಕಾರದ ಬದ್ಧತೆಯನ್ನು ತೋರಿಸುತ್ತದೆ ಎಂದು ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದರು.

ಇದನ್ನೂ ಓದಿ: ತುಂಗಭದ್ರಾ ಜಲಾಶಯದ ಮೊದಲ ಕ್ರಸ್ಟ್ ಗೇಟ್ ಅಳವಡಿಕೆ ಯಶಸ್ವಿ: ಅದರ ಭಾರ, ಅಗಲ-ಉದ್ದ ಎಷ್ಟು ಗೊತ್ತಾ?

ಒಟ್ಟಾರೆ ತುಂಗಭದ್ರಾ ಜಲಾಶಯದ ಹೊಸ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಕೇವಲ ಒಂದು ಕಾಮಗಾರಿಯ ಉದ್ಘಾಟನೆ ಮಾತ್ರವಲ್ಲ, ಮೂರು ರಾಜ್ಯಗಳ ನೀರಿನ ಹಂಚಿಕೆ ಮತ್ತು ನೀರಾವರಿ ಭವಿಷ್ಯದ ಕುರಿತ ಮಹತ್ವದ ಚರ್ಚೆಗೆ ವೇದಿಕೆಯಾಗಿದೆ. ಜೊತೆಗೆ ಮೂರು ರಾಜ್ಯದ ಒಂಬತ್ತು ಜಿಲ್ಲೆಯ ಜನರು ಹಾಗೂ ರೈತರಿಗೆ ಖುಷಿಯ ಕ್ಷಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕಂಗನಾಗೆ ತೀವ್ರ ನಿರಾಶೆ; ಮೊದಲ ವಾರದಲ್ಲಿ ‘ಭಾರತ್ ಭಾಗ್ಯ ವಿಧಾತ’ ಗಳಿಕೆ ಕೇವಲ 6 ಕೋಟಿ ರೂ. – Kannada News | Kangana Ranaut Bharat Bhhagya Viddhaata Box Office Collection Week 1 and budget

ಬಾಲಿವುಡ್‌ನ ವಿವಾದಿತ ಹಾಗೂ ಖ್ಯಾತ ನಟಿ ಕಂಗನಾ ರಣಾವತ್ (Kangana Ranaut) ಪ್ರಮುಖ ಪಾತ್ರದಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಭಾರತ್ ಭಾಗ್ಯ ವಿಧಾತ’ (Bharat Bhhagya Viddhaata) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ತೀವ್ರ ಹಿನ್ನಡೆ ಅನುಭವಿಸಿದೆ. ಜೂನ್ 12ರಂದು ಬಿಡುಗಡೆಯಾಗಿದ್ದ ಈ ಸಿನಿಮಾ ಮೊದಲ ವಾರದಲ್ಲಿ ಕೇವಲ 6.55 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಅತ್ಯಂತ ನೀರಸ ಪ್ರತಿಕ್ರಿಯೆ ಪಡೆದಿದೆ.

ಮೂಲಗಳ ಪ್ರಕಾರ, ಈ ಸಿನಿಮಾ ಸುಮಾರು 35 ಕೋಟಿಯಿಂದ 40 ಕೋಟಿ ರೂಪಾಯಿ ಬಜೆಟ್‌ನಲ್ಲಿ ನಿರ್ಮಾಣಗೊಂಡಿದೆ. ಆದರೆ ಚಿತ್ರದ ಮೊದಲ ವಾರದ ಕಲೆಕ್ಷನ್ ನೋಡಿದರೆ ಚಿತ್ರಕ್ಕೆ ಹೂಡಿಕೆ ಮಾಡಿದ ಬಜೆಟ್ ಕೈಸೇರುವುದು ಕೂಡ ಅನುಮಾನ ಎನ್ನುವಂತಾಗಿದೆ. ಮೊದಲ ವಾರದಲ್ಲೇ ಚಿತ್ರದ ಗಳಿಕೆ ಕೇವಲ ಲಕ್ಷಗಳಿಗೆ ಕುಸಿದಿರುವುದು ಚಿತ್ರತಂಡಕ್ಕೆ ದೊಡ್ಡ ಆಘಾತ ತಂದಿದೆ.

ಬಾಕ್ಸ್ ಆಫೀಸ್ ಟ್ರ್ಯಾಕರ್ ‘ಸ್ಯಾಕ್ನಿಲ್ಕ್’ ವರದಿಯ ಪ್ರಕಾರ, ಸಿನಿಮಾ ಮೊದಲ ವಾರಾಂತ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡಿತ್ತು. ಆದರೆ ಸೋಮವಾರದಿಂದ ಕಲೆಕ್ಷನ್ ಸಂಪೂರ್ಣವಾಗಿ ಕುಸಿದಿದೆ. ಸೋಮವಾರ ಮತ್ತು ಮಂಗಳವಾರ ತಲಾ 65 ಲಕ್ಷ ರೂಪಾಯಿ ಗಳಿಸಿದರೆ, ಬುಧವಾರ 55 ಲಕ್ಷ ಹಾಗೂ ಶುಕ್ರವಾರ ಕೇವಲ 45 ಲಕ್ಷ ರೂಪಾಯಿಗೆ ಕಲೆಕ್ಷನ್ ಕುಸಿದಿದೆ.

ಇದರೊಂದಿಗೆ ದೇಶೀಯ ಮಾರುಕಟ್ಟೆಯಲ್ಲಿ ಚಿತ್ರದ ಒಟ್ಟು ಗಳಿಕೆ 6.55 ಕೋಟಿ ರೂಪಾಯಿಗೆ ಬಂದು ನಿಂತಿದೆ. ಈ ವಾರ ಶಾಹಿದ್ ಕಪೂರ್, ರಶ್ಮಿಕಾ ಮಂದಣ್ಣ, ಕೃತಿ ಸನನ್ ನಟನೆಯ ‘ಕಾಕ್‌ಟೇಲ್ 2’ ಸಿನಿಮಾ ಬಿಡುಗಡೆ ಆಗಿರುವುದರಿಂದ ಕಂಗನಾ ಚಿತ್ರದ ಮುಂದಿನ ಹಾದಿ ಇನ್ನಷ್ಟು ಕಠಿಣವಾಗಲಿದೆ. ಸದ್ಯಕ್ಕಂತೂ ಈ ಸಿನಿಮಾ ಚೇತರಿಸಿಕೊಳ್ಳುವ ಯಾವುದೇ ಲಕ್ಷಣ ಕಾಣುತ್ತಿಲ್ಲ.

ಇದನ್ನೂ ಓದಿ: ‘ಬಾಲಿವುಡ್‌ನಲ್ಲಿ ಪಾಕಿಸ್ತಾನ ಪ್ರೇಮ ಹೆಚ್ಚಿದೆ’: ರಣವೀರ್ ಸಿಂಗ್ ಪರ ಬ್ಯಾಟ್ ಬೀಸಿದ ಕಂಗನಾ ರಣಾವತ್

2008ರಲ್ಲಿ ಮುಂಬೈನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ 20 ಗರ್ಭಿಣಿಯರ ಪ್ರಾಣ ಉಳಿಸಿದ ನರ್ಸ್ ಅಂಜಲಿ ಕುಲ್ತೆ ಅವರ ನೈಜ ಘಟನೆಯನ್ನು ಆಧರಿಸಿ ಈ ಚಿತ್ರವನ್ನು ಮಾಡಲಾಗಿದೆ. ಚಿತ್ರ ಬಿಡುಗಡೆಯಾದ ಬೆನ್ನಲ್ಲೇ ಹರಿಯಾಣ ಮುಖ್ಯಮಂತ್ರಿ ನಾಯಬ್ ಸಿಂಗ್ ಸೈನಿ ಚಿತ್ರವನ್ನು ವೀಕ್ಷಿಸಿ, ಇದು ಪ್ರತಿಯೊಬ್ಬ ಭಾರತೀಯನಲ್ಲೂ ಧೈರ್ಯ ಮತ್ತು ಮಾನವೀಯತೆಯನ್ನು ಜಾಗೃತಗೊಳಿಸುವ ಸಿನಿಮಾ ಎಂದು ಶ್ಲಾಘಿಸಿ ಹರಿಯಾಣದಲ್ಲಿ ತೆರಿಗೆ ಮುಕ್ತ ಎಂದು ಘೋಷಿಸಿದ್ದರು. ಆದರೂ ಸಿನಿಮಾ ಗೆದ್ದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಅಡ್ಡಮತದಾನ: ಜೆಡಿಎಸ್​​​, ಬಿಜೆಪಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ, ಹೈಕಮಾಂಡ್ ಬುಲಾವ್, ತಲೆದಂಡವಾಗುತ್ತಾ? – Kannada News | NDA MLAs Cross Voting Shock in Karnataka: bjp high command calls To State Leaders

ಬೆಂಗಳೂರು, (ಜೂನ್ 19): ಕರ್ನಾಟಕ ವಿಧಾನಪರಿಷತ್​ನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ (Karnataka Assembly Council Elections) ಕಾಂಗ್ರೆಸ್​ನ (Congress) ಐವರು, ಬಿಜೆಪಿಯ  (BJP)ಇಬ್ಬರು ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ.ಈ ಫಲಿತಾಂಶ ರಾಜ್ಯ ರಾಜಕಾರಣದ ನಿರೀಕ್ಷೆಯಂತೆಯೇ ಆಗಿದೆ. ಆದ್ರೆ ಅಚ್ಚರಿ ಎಂಬಂತೆ, ರಾಜ್ಯ ಸರ್ಕಾರದ ವಿರುದ್ಧ ಒಗ್ಗಟ್ಟು ಪ್ರದರ್ಶಿಸಬೇಕಿದ್ದ ಬಿಜೆಪಿ, ಜೆಡಿಎಸ್ ಶಾಸಕರು ಪಕ್ಷಕ್ಕೆ ಕೈಕೊಟ್ಟಿದ್ದು, 11 ಶಾಸಕರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಹಾಕಿದ್ದಾರೆ. ಇದು, ರಾಜ್ಯ ಕಾಂಗ್ರೆಸ್​ನಲ್ಲಿ ಆಂತರಿಕ ಕಲಹ ಇದೆ ಅಂತಾ ಸದಾ ದಾಳ ಉರುಳುತ್ತಿದ್ದ ದೋಸ್ತಿಗಳಿಗೆ ಮುಖಭಂಗವಾಗುವಂತೆ ಮಾಡಿದೆ. ಅಲ್ಲದೇ ಇದೀಗ ದೋಸ್ತಿಗಳ ನಡುವೆ ಅಡ್ಡಮತದಾನದ (Cross Voting)  ಸಂಖ್ಯೆಯ ಗೊಂದಲ ಸೃಷ್ಟಿಯಾಗಿದೆ. ಇನ್ನೊಂದೆಡೆ ಅಡ್ಡಮತದಾನವನ್ನು ಗಂಭಿರವಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರಿಗೆ ಬುಲಾವ್ ನೀಡಿದೆ.

ಮುಖ್ಯಾಂಶಗಳು

  • ಪರಿಷತ್​ ಚುನಾವಣೆಯಲ್ಲಿ ಬಿಜೆಪಿಯಿಂದ ಅಡ್ಡಮತದಾನ ಹಿನ್ನೆಲೆ
  • ಕರ್ನಾಟಕ ಬಿಜೆಪಿ ನಾಯಕತ್ವದ ಬಗ್ಗೆ ಹೈಕಮಾಂಡ್​ ಅಸಮಾಧಾನ
  • ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್​ನಿಂದ ಬುಲಾವ್
  • ವಿಜಯೇಂದ್ರ,ಅಶೋಕ್, ರಾಧಾಮೋಹನ್ ದಾಸ್​ಗೆ ಬುಲಾವ್

ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್

11 ಎನ್​​​​ಡಿಎ ಶಾಸಕರು ಅಡ್ಡಮತದಾನವನ್ನು ಬಿಜೆಪಿ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ನಾಯಕರಿಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ.  ಅಡ್ಡಮತದಾನದಿಂದ ಅಸಮಾಧಾನಗೊಂಡಿರುವ ಹೈಕಮಾಂಡ್ ಈ ಬಗ್ಗೆ ಚರ್ಚಿಸಲು ರಾಜ್ಯಾಧ್ಯಕ್ಷ ವಿಜಯೇಂದ್ರ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅವರಿಗೆ ದೆಹಲಿಗೆ ಬರುವಂತೆ ಬುಲಾವ್ ಕೊಟ್ಟಿದೆ.

ಇದನ್ನೂ ನೋಡಿ: ಪರಿಷತ್ ಚುನಾವಣೆಯಲ್ಲಿ ಜೆಡಿಎಸ್​ಗೆ ಸೋಲು: ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ

ದೋಸ್ತಿಗಳಲ್ಲೇ ಅಡ್ಡಮತದಾನದ ಸಂಖ್ಯೆ ಗೊಂದಲ

ಹೌದು…ಬಿಜೆಪಿ ಹಾಗೂ ಜೆಡಿಎಸ್​ ದೋಸ್ತಿಗಳ ನಡುವೆ ಅಡ್ಡಮತದಾನದ ಸಂಖ್ಯೆಯ ಗೊಂದಲ ಸೃಷ್ಟಿಯಾಗಿದೆ. ಒಟ್ಟು 11 ಶಾಸಕರು ಅಡ್ಡಮತದಾನ ಮಾಡಿದ್ದಾರೆ ಅನ್ನೋದು ಅಧಿಕೃತ ಮಾಹಿತಿ. ಆದ್ರೆ ಈ ಸಂಖ್ಯೆಯಲ್ಲಿ ಬಿಜೆಪಿಯವರು ಎಷ್ಟು? ಜೆಡಿಎಸ್​ ಶಾಸಕರು ಇನ್ನೆಷ್ಟು ಎನ್ನುವ ಪ್ರಶ್ನೆ ಎದ್ದಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ತಮ್ಮ ಪಕ್ಷದ ನಾಲ್ವರು ಶಾಸಕರು ಅಡ್ಡಮತದಾನ ಮಾಡಿರೋದಾಗಿ ಹೇಳ್ತಿದ್ದಾರೆ. ಆದ್ರೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ದಳ ಪಡೆಯ ಆರೇಳು ಶಾಸಕರು ಕ್ರಾಸ್ ವೋಟಿಂಗ್ ಮಾಡಿದ್ದಾರೆ ಅಂತಿದ್ದಾರೆ. ಹೀಗಾಗಿ ಮೈತ್ರಿ ನಾಯಕರ ನಡುವೆ ಅಂಕಿ ಸಂಖ್ಯೆಯ ಗೊಂದಲ ಇರುವುದು ಇಲ್ಲಿ ಗೆದ್ದು ಕಾಣುತ್ತಿದೆ.

ರಾಜ್ಯ ರಾಜಕಾರಣದಲ್ಲಿ ಬದಲಾಗುತ್ತಿರುವ ರಾಜಕೀಯ ಸಮೀಕರಣಗಳ ಪ್ರಭಾವ ಅಡ್ಡಮತದಾನದ ಮೇಲೆ ಬಿದ್ದಿದೆ ಅನ್ನೋದು ರಾಜಕೀಯ ವಿಶ್ಲೇಷಣೆ. ಕಾಂಗ್ರೆಸ್ ಬೆಂಬಲಿಸಿದವರಿಗೆ ಮುಂದಿನ ಚುನಾವಣೆಗೆ ಟಿಕೆಟ್, ಬಿಜೆಪಿ-ಜೆಡಿಎಸ್ ಶಾಸಕರ ಅಭಿವೃದ್ಧಿಗೆ ಅನುದಾನದ ಭರವಸೆ ಕೊಟ್ಟಿರೋ ಮಾತು ರಾಜಕೀಯ ಪಡಸಾಲೆಯಲ್ಲಿ ಹರಿದಾಡ್ತಿದೆ. ಕೇಸರಿ-ದಳ ಶಾಸಕರಿಗೆ ಸಕಲ ರೀತಿಯಲ್ಲಿ ಸಹಾಯ ಹಸ್ತ ಭರವಸೆ ಕಾರಣಕ್ಕೆ ಕ್ರಾಸ್ ವೋಟಿಂಗ್ ಆಗಿರೋದಾಗಿ ತಿಳಿದುಬಂದಿದೆ.

ಇನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯವರು ಸಂಖ್ಯಾಬಲ ಇದ್ದದಿದ್ರೂ ಜೆಡಿಎಸ್​ ಅಭ್ಯರ್ಥಿಯನ್ನ ಕಣಕ್ಕಿಳಿಸಿದ್ದರು. ಹೀಗೆ ತಮ್ಮದೇ ಪಕ್ಷದ ಶಾಸಕರ ನಿಷ್ಠೆಯನ್ನ ಸತ್ವಪರೀಕ್ಷೆಗೆ ಒಳಪಡಿಸಿದ್ದರು. ಆದ್ರೆ ಒಂದಿಬ್ಬರು ಶಾಸಕರು ಅಡ್ಡಮತದಾನ ಮಾಡೋ ಬಗ್ಗೆ ಹೆಚ್​ಡಿಕೆಗೆ ನಿರೀಕ್ಷೆ ಇತ್ತಂತೆ. ಆದ್ರೆ ಮೂಲಗಳ ಮಾಹಿತಿ ಪ್ರಕಾರ ನಾಲ್ಕೈದು ಶಾಸಕರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಅಡ್ಡಮತದಾನ ಮಾಡಿದ್ದಾರೆ. ಈ ಬೆಳವಣಿಗೆ ಹೆಚ್​ಡಿಕೆಗೆ ಬೇಸರ ತರಿಸಿದೆ. ಹೀಗಾಗಿ ಕುಮಾರಸ್ವಾಮಿ ಅಡ್ಡಮತದಾನವನ್ನ ನಂಬಿಕೆ ದ್ರೋಹ ಎಂದು ವಿಶ್ಲೇಷಣೆ ಮಾಡಿದ್ದಾರೆ.

ಪರಿಷತ್ ಪ್ರತಿಷ್ಠೆಯ ಕದನದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ರಾಜ್ಯ ಕಾಂಗ್ರೆಸ್​ನೊಳಗೆ ಆತಂರಿಕ ಕಲಹ ಅಂತಿದ್ದ ವಿಪಕ್ಷಗಳಲ್ಲೇ ದೊಡ್ಡ ಬಿರುಕು ಇರೋದು ಬಟಾಬಯಲಾಗಿದೆ. ಮೈತ್ರಿಯೊಳಗಿನ ಅಸಮಾಧಾನ, ಗೊಂದಲ ಹಾಗೂ ಪಕ್ಷದ ಮೇಲಿನ ಬೇಸರದ ಬಗ್ಗೆ ಸದ್ಯ ರಾಜಕೀಯ ವಿಶ್ಲೇಷಣೆ ನಡೀತಿದೆ.

ಶಿಸ್ತು ಕ್ರಮಕೈಗೊಳ್ಳುತ್ತಾರಾ ಕುಮಾರಸ್ವಾಮಿ?

ಒಂದಿಬ್ಬರು ಶಾಸಕರು ಅಡ್ಡಮತದಾನ ಮಾಡಬಹುದು ಎಂದು ಕುಮಾರಸ್ವಾಮಿ ಅವರು ಮೊದಲೇ ನಿರೀಕ್ಷೆ ಮಾಡಿದ್ದರು. ಆದ್ರೆ, ನಿರೀಕ್ಷೆಗಿಂತ ಹೆಚ್ಚಿನ ಶಾಸಕರು ಅಡ್ಡಮತದಾನ ಮಾಡಿರುವುದು ಕುಮಾರಸ್ವಾಮಿಯ ಆಕ್ರೋಶ, ಬೇಸರಕ್ಕೆ ಕಾರಣವಾಗಿದೆ. ಹೀಗಾಗಿ ಕುಮಾರಸ್ವಾಮಿ ಅವರು JDS ಶಾಸಕಾಂಗ ಸಭೆ ಕರೆದಿದ್ದಾರೆ. ಇಂದು (ಜೂನ್ 19) ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಎಚ್​.ಡಿ.ಕುಮಾರಸ್ವಾಮಿ ನಿವಾಸದಲ್ಲಿ ಶಾಸಕಾಂಗ ಸಭೆ ನಡೆಯಲಿದೆ. ಈ ಮೂಲಕ ಅಡ್ಡ ಮತದಾನ ಮಾಡಿದವರ ಪತ್ತೆ ಕೆಲಸ ನಡೆದಿದೆ. ಅಲ್ಲದೇ ಅಡ್ಡ ಮತದಾನ ಮಾಡಿದವರ ವಿರುದ್ಧ ಶಿಸ್ತು ಕ್ರಮದ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ಕೆಲ ಶಾಸಕರ ತಲೆದಂಡವಾಗುವ ಸಾಧ್ಯತೆಗಳಿವೆ.

ನಾಯಕರನ್ನು ಭೇಟಿ ಮಾಡುತ್ತಿರುವ ಶಾಸಕರು

ಅಡ್ಡಮತದಾನ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಬಿಜೆಪಿಯ ಕೆಲ ಶಾಸಕರು, ತಮ್ಮ ನಾಯಕರುಗಳನ್ನ ಭೇಟಿ ಮಾಡುತ್ತಿದ್ದಾರೆ. ಬೈರತಿ ಬಸವರಾಜ್, ಚಂದ್ರು ಲಮಾಣಿ ಹಾಗೂ ಕೃಷ್ಣಾ ನಾಯ್ಕ್  ವಿರುದ್ಧ ಅಡ್ಡಮತದಾನ ಆರೋಪ ಕೇಳಿಬಂದಿದೆ. ಹೀಗಾಗಿ ಈ ಎಲ್ಲಾ ಶಾಸಕರು ರಾಜ್ಯಾಧ್ಯಕ್ಷ, ವಿಪಕ್ಷ ನಾಯಕರನ್ನು ಭೇಟಿ ಮಾಡಿ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದು, ನಾವು ನಿಗದಿ ಮಾಡಿದ್ದ ನಾಲ್ಕ ಮತಗಳು ಜೆಡಿಎಸ್ ಗೆ ಹೋಗಿವೆ. ದುರ್ಯೋಧನ ಐಹೊಳೆ, ಚಂದ್ರು ಲಮಾಣಿ, ಕೃಷ್ಣಾ ನಾಯ್ಕ್ ಮತ್ತು ಯತ್ನಾಳ್ ಹೆಸರು  ಮಾಧ್ಯಮದಲ್ಲಿ ಕೆಲವು ಬರುತ್ತಿರುವ ಕಾರಣ ಕೃಷ್ಣಾ ನಾಯ್ಕ್ ಮತ್ತು ಚಂದ್ರು ಲಮಾಣಿ ಬೇಸರಗೊಂಡಿದ್ದಾರೆ. ನಮ್ಮ ವರದಿ ಬರುವವರೆಗೂ ಯಾರ ಮೇಲೂ ಅನುಮಾನ ವ್ಯಕ್ತಪಡಿಸುವುದಿಲ್ಲ. ಯಾರ ಮೇಲೂ ಅನುಮಾನ ಪಡುವುದು ಬೇಡ. ವರದಿ ಬಂದ ಮೇಲೆ ನಾವೇ ಅಡ್ಡ ಮತದಾನ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಒಟ್ಟಿನಲ್ಲಿ ಪರಿಷತ್ ಚುನಾವಣೆಯಲ್ಲಿ  ನಡೆದ ಅಡ್ಡಮತದಾನ ದೋಸ್ತಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್​​ನಲ್ಲಿ ಮಹತ್ವ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಅಂತಿಮವಾಗಿ ಅಡ್ಡಮತದಾನ ಮಾಡಿದವರನ್ನು  ಪತ್ತೆ ಮಾಡಿ ಯಾವ ಕ್ರಮಕೈಗೊಳ್ಳುತ್ತವೆ ಎಂದು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಜಿಯೋ ಐಪಿಒಗೆ ಸಜ್ಜು; 27 ಕೋಟಿ ಹೊಸ ಈಕ್ವಿಟಿ ಷೇರುಗಳ ಹಂಚಿಕೆ; ಆರ್​​ಐಎಲ್ ಎಜಿಎಂ ಸಭೆಯಲ್ಲಿ ಅಂಬಾನಿ ಮಾಹಿತಿ – Kannada News | Jio Platforms IPO, board approval, DRHP to be filed today, 27 crore equity shares fresh issue, says RIL

ರಿಲಯನ್ಸ್ ಜಿಯೋImage Credit source: Avishek Das/SOPA images/LightRocket via Getty Images

ನವದೆಹಲಿ, ಜೂನ್ 19: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ತನ್ನ ಅಂಗಸಂಸ್ಥೆಯಾದ ಜಿಯೋ ಪ್ಲಾಟ್‌ಫಾರ್ಮ್ಸ್​ನ (Jio Platforms) ಐಪಿಒ (IPO) ಆಗಲಿರುವುದನ್ನು ಖಚಿತಪಡಿಸಿದೆ. ಆರ್​ಐಎಲ್​ನ ವಾರ್ಷಿಕ ಮಹಾಸಭೆಯಲ್ಲಿ ಷೇರುದಾರರನ್ನು ಉದ್ದೇಶಿಸಿ ಮಾತನಾಡಿದ ಛೇರ್ಮನ್ ಮುಕೇಶ್ ಅಂಬಾನಿ ಅವರು ಜಿಯೋ ಪ್ಲಾಟ್​ಫಾರ್ಮ್ಸ್​ನ ಐಪಿಒಗೆ ಇವತ್ತು ಸೆಬಿ ಬಳಿ ಡಿಎಚ್​ಆರ್​ಪಿಯನ್ನು ಸಲ್ಲಿಸುತ್ತಿರುವುದಾಗಿ ತಿಳಿಸಿದ್ದಾರೆ. ಐಪಿಒಗೆ ರಿಲಯನ್ಸ್ ಮಂಡಳಿಯ ಅನುಮೋದನೆ ಸಿಕ್ಕಿರುವುದಾಗಿಯೂ ಹೇಳಿದ್ದಾರೆ.

ಜಿಯೋ ಪ್ಲಾಟ್​ಫಾರ್ಮ್ಸ್ ಐಪಿಒ ವಿವರ

ಜಿಯೋ ಪ್ಲಾಟ್‌ಫಾರ್ಮ್ಸ್ ತನ್ನ ಐಪಿಒ ಮೂಲಕ ಮಾರುಕಟ್ಟೆಗೆ ಹೊಸದಾಗಿ 27 ಕೋಟಿ ಈಕ್ವಿಟಿ ಷೇರುಗಳನ್ನು ಹೊರತರಲಿದೆ. ಇದು ಸಂಪೂರ್ಣವಾಗಿ ‘ಫ್ರೆಶ್ ಇಶ್ಯೂ’ (Fresh Issue) ಆಗಿರಲಿದೆ. ಪ್ರತೀ ಷೇರಿನ ಮುಖಬೆಲೆ 10 ರೂ ಇರುತ್ತದೆ.

ಇದನ್ನೂ ಓದಿ: Reliance AGM 2026: ರಿಲಯನ್ಸ್ ಇಂಡಸ್ಟ್ರೀಸ್​ನಿಂದ ಭರ್ಜರಿ ಬಂಡವಾಳ ವೆಚ್ಚ; ಒಂದು ವರ್ಷದಲ್ಲಿ 1.44 ಲಕ್ಷ ಕೋಟಿ ರೂ ವೆಚ್ಚ

ಫ್ರೆಶ್ ಇಶ್ಯೂ ಎಂದರೇನು?: ಇಲ್ಲಿ ಹಳೆಯ ಹೂಡಿಕೆದಾರರು ತಮ್ಮ ಷೇರುಗಳನ್ನು ಮಾರಾಟ ಮಾಡುತ್ತಿಲ್ಲ (OFS ಇಲ್ಲ). ಬದಲಾಗಿ, ಕಂಪನಿಯು ನೇರವಾಗಿ ಹೊಸ ಷೇರುಗಳನ್ನು ಸೃಷ್ಟಿಸಿ ಮಾರುಕಟ್ಟೆಗೆ ಬಿಡುತ್ತಿದೆ. ಇದರಿಂದ ಬರುವ ಹಣವನ್ನು ಕಂಪನಿಯು ತನ್ನ ಮುಂದಿನ ಅಭಿವೃದ್ಧಿ ಕಾರ್ಯಗಳು ಮತ್ತು ಕಾರ್ಯಾಚರಣೆಯ ಅಗತ್ಯಗಳಿಗಾಗಿ ಬಳಸಿಕೊಳ್ಳಲಿದೆ.

ರಿಲಯನ್ಸ್ ಇಂಡಸ್ಟ್ರೀಸ್ ಈ ಐಪಿಒಗೆ ಸಂಬಂಧಿಸಿದಂತೆ ತನ್ನ ನಿಯಂತ್ರಕ ದಾಖಲೆಗಳಲ್ಲಿ ಈ ಮಾಹಿತಿಯನ್ನು ಸ್ಪಷ್ಟಪಡಿಸಿದೆ.

ಜಿಯೋ ಐಪಿಒದಿಂದ ಏನು ನಿರೀಕ್ಷಿಸಬಹುದು?

27 ಕೋಟಿ ಷೇರುಗಳನ್ನು ವಿತರಿಸುವ ಮೂಲಕ ಜಿಯೋ ಪ್ಲಾಟ್‌ಫಾರ್ಮ್ಸ್ ಭಾರಿ ಪ್ರಮಾಣದ ಬಂಡವಾಳವನ್ನು ಸಂಗ್ರಹಿಸಲು ಸಜ್ಜಾಗಿದೆ. ಒಂದು ಅಂದಾಜು ಪ್ರಕಾರ ಈ ಐಪಿಒ ಮೌಲ್ಯ 37,000 ಕೋಟಿ ರೂ ಇರುವ ಅಂದಾಜಿದೆ. ಇದು ಭಾರತದ ಷೇರು ಮಾರುಕಟ್ಟೆ ಇತಿಹಾಸದಲ್ಲೇ ಅತಿದೊಡ್ಡ ಐಪಿಒ ಎನ್ನುವ ದಾಖಲೆ ಬರೆಯಬಹುದು.

ಇದನ್ನೂ ಓದಿ: ಅಕ್ಸೆಂಚರ್ ಕೊಟ್ಟ ಒಂದು ರಿಪೋರ್ಟ್​ಗೆ ಭಾರತದ ಷೇರುಬಜಾರು ಅಲ್ಲೋಲಕಲ್ಲೋಲ; ಶುಕ್ರವಾರ 2 ಲಕ್ಷ ಕೋಟಿ ರೂ ನಷ್ಟ

ಮಾರುಕಟ್ಟೆಯ ಮೇಲಿನ ಪರಿಣಾಮ

ಜಿಯೋದಂತಹ ಬೃಹತ್ ಸಂಸ್ಥೆಯ ಐಪಿಒ ಮಾರುಕಟ್ಟೆಯಲ್ಲಿ ದೊಡ್ಡ ಸಂಚಲನ ಮೂಡಿಸುವ ನಿರೀಕ್ಷೆಯಿದೆ. ಇದು ಡಿಜಿಟಲ್ ಮತ್ತು ಟೆಲಿಕಾಂ ವಲಯದ ಹೂಡಿಕೆದಾರರ ಪಾಲಿಗೆ ಒಂದು ಪ್ರಮುಖ ಅವಕಾಶವಾಗಲಿದೆ. ಪ್ರಸ್ತುತ ದಿನಗಳಲ್ಲಿ ತಂತ್ರಜ್ಞಾನ ಮತ್ತು ಡಿಜಿಟಲ್ ಸೇವೆಗಳ ಬೇಡಿಕೆ ಹೆಚ್ಚುತ್ತಿರುವುದರಿಂದ, ಜಿಯೋ ಪ್ಲಾಟ್‌ಫಾರ್ಮ್ಸ್‌ನ ಈ ಐಪಿಒ ಮೇಲೆ ಹೂಡಿಕೆದಾರರು ಮತ್ತು ಮಾರುಕಟ್ಟೆ ವಿಶ್ಲೇಷಕರು ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ – Kannada News | Karnataka CM D.K. Shivakumar and Wife Offer Prayers at Tirupati Timmappa Temple

ತಿರುಪತಿ, ಜೂ.19: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಪತ್ನಿಯೊಂದಿಗೆ ತಿರುಪತಿಗೆ ಭೇಟಿ ನೀಡಿ, ಬೆಳ್ಳಂಬೆಳಿಗ್ಗೆ ತಿಮ್ಮಪ್ಪನ ದರ್ಶನ ಪಡೆದರು. ನೂತನ ಸಚಿವ ಸಂಪುಟದ ವಿಸ್ತರಣೆಯ ನಂತರ ಡಿ.ಕೆ. ಶಿವಕುಮಾರ್ ಅವರ ಈ ಭೇಟಿಯು ಮಹತ್ವ ಪಡೆದುಕೊಂಡಿದೆ. ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕುಟುಂಬ ಸಮೇತ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರು, ಮುಂಜಾನೆಯ ದರ್ಶನದಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಡಿ.ಕೆ. ಶಿವಕುಮಾರ್ ಅವರ ಮೊದಲ ತಿರುಪತಿ ಭೇಟಿ ಇದಾಗಿತ್ತು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಮ್ಮ ಮೆಟ್ರೋ 3ನೇ ಹಂತದ ಯೋಜನೆ: 3,627 ಮರಗಳ ಹನನಕ್ಕೆ BMRCLನಿಂದ ಪ್ರಸ್ತಾವನೆ ಸಲ್ಲಿಕೆ – Kannada News | Namma Metro Phase 3: Green Cover at Risk as BMRCL Proposes Felling of 3,627 Trees in Bengaluru

ಸಾಂದರ್ಭಿಕ ಚಿತ್ರImage Credit source: PTI and Getty Images

ಬೆಂಗಳೂರು, ಜೂನ್​​ 19: ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಗಾಗಿ ಮರಗಳ ಹನನಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಬೆಂಗಳೂರಿನಲ್ಲಿ (Bengaluru) ಬರೋಬ್ಬರಿ 3,627 ಮರಗಳ ಮಾರಣಹೋಮಕ್ಕೆ ಸಿದ್ಧತೆ ನಡೆದಿದೆ. ಈ ಸಂಬಂಧ ಗ್ರೇಟರ್​​ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅರಣ್ಯ ವಿಭಾಗಕ್ಕೆ BMRCL ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದು, ಆ ಬೆನ್ನಲ್ಲೇ ಮರಗಳನ್ನು ಕಡಿಯುವ ಸಂಬಂಧ  ಸಾರ್ವಜನಿಕ ಪ್ರಕಟಣೆ ಕೂಡ ಹೊರಡಿಸಿ ಆಕ್ಷೇಪಣೆ ಸಲ್ಲಿಕೆಗೆ ಜಿಬಿಎ ಅವಕಾಶ ನೀಡಿದೆ.

ಮುಖ್ಯಾಂಶಗಳು

  • ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ಮರಗಳ ಮಾರಣಹೋಮ
  • 3,627 ಮರಗಳ ಹನನಕ್ಕೆ GBA ಅರಣ್ಯ ವಿಭಾಗಕ್ಕೆ BMRCLನಿಂದ ಪ್ರಸ್ತಾಪ
  • ಈ ಸಂಬಂಧ ಸಾರ್ವಜನಿಕರಿಂದ ಆಕ್ಷೇಪಣೆ ಸಲ್ಲಿಕೆಗೂ ಅವಕಾಶ

ಮೆಟ್ರೋ ನಿಲ್ದಾಣ, ಮೆಟ್ರೋ ವಯಾಡಕ್ಟ್ ಜೊತೆಗೆ ಡಬಲ್ ಡೆಕ್ಕರ್ ಫ್ಲೈ ಓವರ್ ನಿರ್ಮಾಣಕ್ಕೆ ಯೋಜನೆ ನಡೆದಿದ್ದು, 2,426 ವಿವಿಧ ಜಾತಿಯ ಮರಗಳು ಹಾಗೂ 1,201 ಅಡಕೆ ಮರಗಳಿಗೆ ಈಗ ಕಂಟಕ ಎದುರಾಗಿದೆ. ಸಾರ್ವಜನಿಕರ ಆಕ್ಷೇಪಣೆ ಗಮನಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಬಿಎ ಅರಣ್ಯ ವಿಭಾಗ ಮಾಹಿತಿ ನೀಡಿದೆ. ಹೊಸಹಳ್ಳಿ, ಕೆಹೆಚ್​​ಬಿ ಕಾಲೋನಿ, ಕಾಮಾಕ್ಷಿಪಾಳ್ಯ, ಸುಮನಹಳ್ಳಿ ಕ್ರಾಸ್, ಸುಂಕದಕಟ್ಟೆ, ಹೇರೋಹಳ್ಳಿ, ಬ್ಯಾಡರಹಳ್ಳಿ, ಕಾಮತ್ ಲೇಔಟ್ ಕಡಬಗೆರೆ ಪ್ರದೇಶಗಳು ಯೋಜನೆಯಿಂದ ಭಾದಿತವಾಗಲಿವೆ.

ಇದನ್ನೂ ಓದಿ: ನಮ್ಮ ಮೆಟ್ರೋ ರೆಡ್ ಲೈನ್ ವೆಚ್ಚ ಕಡಿತಕ್ಕೆ ಒಂದು ಸ್ಟೇಷನನ್ನೇ ಕೈಬಿಡಲು ನಿರ್ಧರಿಸಿದ ಬಿಎಂಆರ್​ಸಿಎಲ್!

ಜೆಪಿ ನಗರ 4ನೇ ಹಂತದಿಂದ ಕೆಂಪಾಪುರವರೆಗೆ ಹೊರವರ್ತುಲ ರಸ್ತೆಯ (ORR) ಮೂಲಕ 32.15 ಕಿ.ಮೀ ಮತ್ತು ಹೊಸಹಳ್ಳಿಯಿಂದ ಕಡಬಗೆರೆವರೆಗೆ ಮಾಗಡಿ ರಸ್ತೆಯ ಮೂಲಕ 12.50 ಕಿ.ಮೀ ಸೇರಿ ಒಟ್ಟು 44.65 ಕಿ.ಮೀ ಮೆಟ್ರೋ ಮಾರ್ಗವನ್ನು ಈ ಯೋಜನೆ ಒಳಗೊಂಡಿದೆ. ಡಬಲ್ ಡೆಕ್ಕರ್‌ ಯೋಜನೆ ಸೇರ್ಪಡೆಯಿಂದ ಅನುಮೋದನೆಗಾಗಿ ಬಾಕಿ ಉಳಿದಿದ್ದ ನಮ್ಮ ಮೆಟ್ರೋ 3ನೇ ಹಂತಕ್ಕೆ ಕೇಂದ್ರ ಸರ್ಕಾರದ ಅನುಮೋದನೆ ಶೀಘ್ರವೇ ದೊರೆಯುವ ಸಾಧ್ಯತೆ ಇದೆ ಎಂಬ ಬಗ್ಗೆ ಇತ್ತೀಚೆಗಷ್ಟೇ ವರದಿಯಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಸೂಪರ್ ಕಿಂಗ್ಸ್ ಪರ ಐತಿಹಾಸಿಕ ಶತಕ ಸಿಡಿಸಿದ 41 ವರ್ಷದ ಫಾಫ್ ಡು ಪ್ಲೆಸಿಸ್ – Kannada News | MLC 2026: Faf Du Plessis’ Record Century Secures Texas Super Kings Win vs Seattle Orcas

4ನೇ ಆವೃತ್ತಿಯ ಮೇಜರ್ ಲೀಗ್ ಕ್ರಿಕೆಟ್ ಇಂದಿನಿಂದ ಆರಂಭವಾಗಿದೆ. ಈ ಆವೃತ್ತಿಯ ಮೊದಲ ಪಂದ್ಯದಲ್ಲಿ ಟೆಕ್ಸಾಸ್ ಸೂಪರ್ ಕಿಂಗ್ಸ್ ಹಾಗೂ ಸಿಯಾಟಲ್ ಓರ್ಕಾಸ್‌ ತಂಡಗಳು ಮುಖಾಮುಖಿಯಾಗಿದ್ದವು. ಎರಡೆರಡು ಶತಕಗಳಿಗೆ ಸಾಕ್ಷಿಯಾದ ಈ ಉದ್ಘಾಟನಾ ಪಂದ್ಯದಲ್ಲಿ ಸಿಯಾಟಲ್ ಓರ್ಕಾಸ್‌ ತಂಡವನ್ನು ಮಣಿಸಿದ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡ ಗೆಲುವಿನ ಶುಭಾರಂಭ ಮಾಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸಿಯಾಟಲ್ ಓರ್ಕಾಸ್‌ ತಂಡ ಟಿಮ್ ಸೈಫರ್ಟ್​ ಅವರ ಶತಕದಿಂದಾಗಿ 220 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡ ನಾಯಕ ಫಾಫ್ ಡು ಪ್ಲೆಸಿಸ್ ಅವರ ಅಜೇಯ ಶತಕದ ನೆರವಿನಿಂದ 18.3 ಓವರ್​ಗಳಲ್ಲಿ ಗೆಲುವಿನ ನಗೆ ಬೀರಿತು.

ಟಿಮ್ ಸೈಫರ್ಟ್ ಶತಕ

ಮೊದಲು ಬ್ಯಾಟಿಂಗ್‌ ಮಾಡಿದ ಸಿಯಾಟಲ್ ಓರ್ಕಾಸ್‌ ತಂಡಕ್ಕೆ ಆರಂಭಿಕರಾದ ಟಿಮ್ ಸೈಫರ್ಟ್ ಹಾಗೂ ಶಯಾನ್ ಜಹಾಂಗೀರ್ ಸ್ಫೋಟಕ ಆರಂಭ ಒದಗಿಸಿಕೊಟ್ಟರು. ಇವರಿಬ್ಬರು ಮೊದಲ ವಿಕೆಟ್​ಗೆ 191 ರನ್​ಗಳ ಜೊತೆಯಾಟವನ್ನಾಡಿದರು. ಇದರಲ್ಲಿ ಟಿಮ್ ಸೈಫರ್ಟ್ 66 ಎಸೆತಗಳಲ್ಲಿ 8 ಬೌಂಡರಿ ಹಾಗೂ 6 ಸಿಕ್ಸರ್‌ಗಳ ಸಹಿತ 104 ರನ್ ಬಾರಿಸಿದರೆ, ಶಯಾನ್ ಜಹಾಂಗೀರ್ 47 ಎಸೆತಗಳಲ್ಲಿ 3 ಬೌಂಡರಿ ಹಾಗೂ 7 ಭರ್ಜರಿ ಸಿಕ್ಸರ್‌ಗಳ ಸಹಿತ 78 ರನ್ ಬಾರಿಸಿದರು. ಇವರಿಬ್ಬರ ಈ ದಾಖಲೆಯ ಜೊತೆಯಾಟದಿಂದಾಗಿ ಸಿಯಾಟಲ್ ತಂಡ ಕೇವಲ 2 ವಿಕೆಟ್ ಕಳೆದುಕೊಂಡು 220 ರನ್ ಪೇರಿಸಿತು.

52 ಎಸೆತಗಳಲ್ಲಿ 113 ರನ್ ಬಾರಿಸಿದ ಫಾಫ್

ಈ ಗುರಿ ಬೆನ್ನಟ್ಟಿದ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡಕ್ಕೆ ಮೊದಲ ಓವರ್​ನ ಎರಡನೇ ಎಸೆತದಲ್ಲೇ ಆಘಾತ ಎದುರಾಯಿತು. ಆರಂಭಿಕ ಸೈತೇಜ ಮುಕ್ಕಮಲ್ಲ ಶೂನ್ಯಕ್ಕೆ ಔಟಾದರು. ಆದರೆ ನಾಯಕ ಫಾಫ್ ಡು ಪ್ಲೆಸಿಸ್ ಮಾತ್ರ ಆರಂಭದಿಂದಲೇ ಹೊಡಿಬಡಿ ಆಟಕ್ಕೆ ಮುಂದಾದರು. ಇದರ ಪರಿಣಾಮವಾಗಿ ಕೇವಲ 45 ಎಸೆತಗಳಲ್ಲಿ ಶತಕ ಪೂರ್ಣಗೊಳಿಸಿದರು. ಈ ಪಂದ್ಯದಲ್ಲಿ ಅಜೇಯರಾಗಿ ಉಳಿದ ಫಾಫ್, ಕೇವಲ 52 ಎಸೆತಗಳನ್ನು ಎದುರಿಸಿ 113 ರನ್ ಗಳಿಸಿದರು. ಫಾಫ್ ಅವರ ಈ ಇನ್ನಿಂಗ್ಸ್​ನಿಂದಾಗಿ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡವು 18.3 ಓವರ್‌ಗಳಲ್ಲಿ ಕೇವಲ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು ಗುರಿಯನ್ನು ತಲುಪಿತು.

ಈ ಸಾಧನೆ ಮಾಡಿದ ಮೊದಲ ಕ್ರಿಕೆಟಿಗ

ಮೇಜರ್ ಲೀಗ್ ಕ್ರಿಕೆಟ್​ನ ಉದ್ಘಾಟನಾ ಪಂದ್ಯದಲ್ಲಿ ಅಬ್ಬರಿಸಿರುವ ಫಾಫ್ ಡು ಪ್ಲೆಸಿಸ್, ವಯಸ್ಸು ಕೇವಲ ಒಂದು ಸಂಖ್ಯೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದು, ಈ ಪಂದ್ಯದಲ್ಲಿ ಹಲವಾರು ಪ್ರಮುಖ ದಾಖಲೆಗಳನ್ನು ಮುರಿದರು. 41 ವರ್ಷ ಮತ್ತು 341 ದಿನ ವಯಸ್ಸಿನ ಫಾಫ್ ಈ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ವಿಶ್ವದ ಎಲ್ಲಾ ಟಿ20 ಲೀಗ್‌ಗಳ ಇತಿಹಾಸದಲ್ಲಿ ಶತಕ ಬಾರಿಸಿದ ಅತ್ಯಂತ ಹಿರಿಯ ಆಟಗಾರನೆಂಬ ದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆಯೂ ಈ ದಾಖಲೆ ಫಾಫ್ ಅವರ ಹೆಸರಿನಲ್ಲೇ ಇತ್ತು. ಇದೇ ಲೀಗ್​ನ ಕಳೆದ ಆವೃತ್ತಿಯಲ್ಲೂ ಫಾಫ್ 40 ಶತಕ ಬಾರಿಸಿದ್ದರು. ಈ ಮೂಲಕ 40 ವರ್ಷ ವಯಸ್ಸಿನ ನಂತರ ಎರಡು ಲೀಗ್ ಶತಕಗಳನ್ನು ಬಾರಿಸಿದ ಮೊದಲ ಆಟಗಾರನೆಂಬ ಹೆಗ್ಗಳಿಕೆಗೆ ಫಾಫ್ ಪಾತ್ರರಾಗಿದ್ದಾರೆ.

ಈ ಲೀಗ್​ನಲ್ಲಿ ನಾಲ್ಕು ಶತಕಗಳು

ನಾಯಕ ಫಾಫ್ ಡು ಪ್ಲೆಸಿಸ್ ಮೇಜರ್ ಲೀಗ್ ಕ್ರಿಕೆಟ್ (ಎಂಎಲ್‌ಸಿ) ಇತಿಹಾಸದಲ್ಲಿ ನಾಲ್ಕು ಶತಕಗಳನ್ನು ಗಳಿಸಿದ ಮೊದಲ ಮತ್ತು ಏಕೈಕ ಬ್ಯಾಟ್ಸ್‌ಮನ್ ಆಗಿದ್ದಾರೆ. ಈ ಪಂದ್ಯಾವಳಿಯಲ್ಲಿ ಬೇರೆ ಯಾವುದೇ ಬ್ಯಾಟ್ಸ್‌ಮನ್ ಅವರ ಹತ್ತಿರವೂ ಇಲ್ಲ. ಈ ಲೀಗ್‌ನ 26 ಇನ್ನಿಂಗ್ಸ್‌ಗಳಲ್ಲಿ, ಅವರು ನಾಲ್ಕು ಶತಕಗಳು ಮತ್ತು ಆರು ಅರ್ಧಶತಕಗಳು ಸೇರಿದಂತೆ 43.62 ಸರಾಸರಿಯಲ್ಲಿ 1047 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ, ಅವರ ಸ್ಟ್ರೈಕ್ ರೇಟ್ ಕೂಡ 167.25 ಆಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಲವಂತವಾಗಿ ನಟಿಯರ ಮೈಮುಟ್ಟಿ ಮಾತನಾಡಿಸಿ ಟ್ರೋಲ್ ಆದ ಹಿರಿಯ ನಿರ್ದೇಶಕ – Kannada News | Raghavendra Rao trolled for grabbing Keerthy Suresh Krithi Shetty arms

ತೆಲುಗು ಚಿತ್ರರಂಗದ ಖ್ಯಾತ ಹಿರಿಯ ನಿರ್ದೇಶಕ ಕೆ. ರಾಘವೇಂದ್ರ ರಾವ್ ಅವರು ಇತ್ತೀಚೆಗೆ ನಡೆದ ಸಿನಿಮಾವೊಂದರ ಮುಹೂರ್ತದ ವೇಳೆ ಸ್ಟಾರ್ ನಟಿಯರಾದ ಕೀರ್ತಿ ಸುರೇಶ್ (Keerthy Suresh) ಮತ್ತು ಕೃತಿ ಶೆಟ್ಟಿ ಅವರ ಕೈಗಳನ್ನು ಬಲವಂತವಾಗಿ ಹಿಡಿದು ಎಳೆದ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಮೊದಲು ಕೂಡ ಕೆ. ರಾಘವೇಂದ್ರ ರಾವ್ (Raghavendra Rao) ಅವರು ಈ ರೀತಿಯ ವರ್ತನೆಯಿಂದ ಟ್ರೋಲ್ ಆಗಿದ್ದರು. ಈಗ ಮತ್ತೆ ಅದೇ ವರ್ತನೆ ಮುಂದುವರಿಸಿದ್ದಾರೆ.

ಖ್ಯಾತ ನಿರ್ದೇಶಕ ಅನಿಲ್ ರವಿಪುಡಿ ನಿರ್ದೇಶನದ, ಹಿರಿಯ ನಟ ವೆಂಕಟೇಶ್ ಮತ್ತು ಕಲ್ಯಾಣ್ ರಾಮ್ ನಂದಮೂರಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿರುವ ಹೊಸ ಚಿತ್ರದ ಮುಹೂರ್ತ ಸಮಾರಂಭ ಗುರುವಾರ (ಜೂನ್ 18) ಹೈದರಾಬಾದ್‌ನಲ್ಲಿ ಅದ್ಧೂರಿಯಾಗಿ ನೆರವೇರಿತು. ಈ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ 84 ವರ್ಷದ ಹಿರಿಯ ನಿರ್ದೇಶಕ ಕೆ. ರಾಘವೇಂದ್ರ ರಾವ್ ಅವರಿಗೆ ಚಿತ್ರದ ಮೊದಲ ದೃಶ್ಯಕ್ಕೆ ಆ್ಯಕ್ಷನ್-ಕಟ್ ಹೇಳಲು ಆಹ್ವಾನಿಸಲಾಗಿತ್ತು.

ಮುಹೂರ್ತದ ಶಾಟ್ ನಿರ್ದೇಶಿಸುವ ಸಂದರ್ಭದಲ್ಲಿ ರಾಘವೇಂದ್ರ ರಾವ್ ಅವರು ನಟಿ ಕೀರ್ತಿ ಸುರೇಶ್ ಅವರ ಕೈಯನ್ನು ಬಲವಂತವಾಗಿ ಹಿಡಿದು ಹತ್ತಿರಕ್ಕೆ ಎಳೆದಿದ್ದಾರೆ. ಆ ನಂತರ ತಕ್ಷಣವೇ ತಮ್ಮ ನಿರ್ಧಾರ ಬದಲಾಯಿಸಿದವರಂತೆ ಮತ್ತೊಬ್ಬ ನಟಿ ಕೃತಿ ಶೆಟ್ಟಿ ಅವರ ಕೈ ಹಿಡಿದು ಎಳೆದಿದ್ದಾರೆ. ಬಳಿಕ ನಟರಾದ ವೆಂಕಟೇಶ್ ಮತ್ತು ಕಲ್ಯಾಣ್ ರಾಮ್ ಅವರ ಹೆಗಲ ಮೇಲೆ ನಟಿಯರು ಹೇಗೆ ಕೈ ಇಡಬೇಕು ಎಂದು ತೋರಿಸಿಕೊಡುವ ನೆಪದಲ್ಲಿ ಈ ರೀತಿ ವರ್ತಿಸಿದ್ದಾರೆ. ಸದ್ಯ ಈ ವಿಡಿಯೋ ಕ್ಲಿಪ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ನಟಿಯರ ಅನುಮತಿ ಇಲ್ಲದೆ ಈ ರೀತಿ ಸಾರ್ವಜನಿಕವಾಗಿ ಕೈ ಹಿಡಿದು ಎಳೆದ ಹಿರಿಯ ನಿರ್ದೇಶಕನ ವರ್ತನೆಗೆ ನೆಟ್ಟಿಗರು ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ. ‘ಈ ಮುದುಕನಿಗೆ ಪ್ರತಿ ಬಾರಿಯೂ ನಟಿಯರನ್ನು ಮುಟ್ಟಿ ನೋಡುವುದೇ ಕೆಲಸವಾಗಿದೆ’ ಎಂದು ಎಕ್ಸ್ (ಟ್ವಿಟರ್) ಬಳಕೆದಾರರೊಬ್ಬರು ಕಿಡಿಕಾರಿದ್ದಾರೆ. ‘ಮಹಿಳೆಯರ ಒಪ್ಪಿಗೆ ಇಲ್ಲದೆ ಅವರ ದೇಹ ಮುಟ್ಟಲು ಈತನಿಗೆ ಹಕ್ಕು ಕೊಟ್ಟವರು ಯಾರು? ತುಂಬಾ ಕೀಳು ಮಟ್ಟದ ವರ್ತನೆ’ ಎಂದು ಮತ್ತೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಟಿ ಕೀರ್ತಿ ಸುರೇಶ್​ಗೆ ಬಾಡಿ ಶೇಮಿಂಗ್; ಸರ್ಜರಿ ವದಂತಿಗಳಿಗೆ ಖಡಕ್ ತಿರುಗೇಟು

ಇದೇ ಮೊದಲಲ್ಲ, ಈ ಹಿಂದೆ ನಟಿ ನಿಹಾರಿಕಾ ಕೊನಿಡೇಲ ಅವರ ವಿಷಯದಲ್ಲೂ ರಾಘವೇಂದ್ರ ರಾವ್ ಇದೇ ರೀತಿ ನಡೆದುಕೊಂಡು ಟ್ರೋಲ್ ಆಗಿದ್ದರು. ‘ಹಳೇ ಕಾಲದಲ್ಲಿ ಸೋಶಿಯಲ್ ಮೀಡಿಯಾ ಇರಲಿಲ್ಲ ಎಂದು ಇವರು ಬಚಾವ್ ಆಗುತ್ತಿದ್ದರು, ಆದರೆ ಈಗಲೂ ಇವರು ಬುದ್ಧಿ ಕಲಿತಿಲ್ಲ’ ಎಂದು ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಅವರ ವಿರುದ್ಧ ಗರಂ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ರಾಂಚಿಯ ಆರ್‌ಎಸ್‌ಎಸ್ ಕಚೇರಿಯ ದಾಳಿಗೆ ಐಎಸ್‌ಐ ನಂಟು; ಭಯೋತ್ಪಾದನಾ ಕೃತ್ಯಕ್ಕೆ ಪಾಕಿಸ್ತಾನದಿಂದ ಫಂಡಿಂಗ್ – Kannada News | Sources say arrested men in RSS Ranchi office attack Case linked to ISI Funded TTH

ರಾಂಚಿ, ಜೂನ್ 19: ಜಾರ್ಖಂಡ್‌ನ ರಾಂಚಿಯಲ್ಲಿ ಜೂನ್ 16ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕಚೇರಿ ಮೇಲೆ ನಡೆದ ಪೆಟ್ರೋಲ್ ಬಾಂಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮೂವರೂ ಆರೋಪಿಗಳು ಪಾಕಿಸ್ತಾನದ ಐಎಸ್‌ಐ (ISI) ಫಂಡಿಂಗ್ ಮಾಡುತ್ತಿರುವ ‘ತೆಹ್ರೀಕ್-ಎ-ತಾಲಿಬಾನ್ ಹಿಂದೂಸ್ತಾನ್’ (TTH) ಉಗ್ರಗಾಮಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದರು ಎಂದು ಮೂಲಗಳು ತಿಳಿಸಿವೆ. ರಾಂಚಿ ಪೊಲೀಸರು ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ಜಂಟಿಯಾಗಿ ನಡೆಸಿದ ತನಿಖೆಯ ವೇಳೆ, ಆರ್‌ಎಸ್‌ಎಸ್ ಕಚೇರಿಯನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯು ಕೇವಲ ಸ್ಥಳೀಯ ಘಟನೆಯಲ್ಲ, ಇದರ ಹಿಂದೆ ಅಂತಾರಾಷ್ಟ್ರೀಯ ಉಗ್ರರ ಜಾಲ ಕೆಲಸ ಮಾಡುತ್ತಿರುವುದು ಪತ್ತೆಯಾಗಿದೆ.

ಆರೋಪಿಗಳಾದ ಸೈಫ್ ಅನ್ಸಾರಿ ಮತ್ತು ಅಮಾನ್ ಅನ್ಸಾರಿ ದುಬೈಗೆ ಪ್ರಯಾಣಿಸಿದ್ದಾಗ ಅಲ್ಲಿ ಅವರಿಗೆ ಪಾಕಿಸ್ತಾನದ ಪ್ರಜೆಯಾದ ಶಹಬಾಜ್ ರಾಣಾ ಅಲಿಯಾಸ್ ಭಟ್ಟಿ ಎಂಬಾತನ ಸಂಪರ್ಕ ಸಿಕ್ಕಿತ್ತು ಎಂದು ಮೂಲಗಳು ಬಹಿರಂಗಪಡಿಸಿವೆ. “ಇದಾದ ಬಳಿಕ ಅವರು ಉಗ್ರ ಸಿದ್ಧಾಂತಕ್ಕೆ ಒಳಗಾಗಿದ್ದು, ಭಾರತದಾದ್ಯಂತ ತೆಹ್ರೀಕ್-ಎ-ತಾಲಿಬಾನ್ ಹಿಂದೂಸ್ತಾನ್ (TTH)ನ ಭಾರತ ವಿರೋಧಿ ಚಟುವಟಿಕೆಗಳನ್ನು ಹರಡಲು ಒಪ್ಪಿಕೊಂಡಿದ್ದರು” ಎಂದು ಮೂಲಗಳು ಹೇಳಿವೆ.

ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾದ ಐಎಸ್‌ಐ, ಭಾರತದಲ್ಲಿ ಅಸ್ಥಿರತೆ ಮತ್ತು ಕೋಮು ಗಲಭೆಗಳನ್ನು ಸೃಷ್ಟಿಸಲು ಈ ಸಂಘಟನೆಗೆ ದೊಡ್ಡ ಮಟ್ಟದಲ್ಲಿ ಹಣಕಾಸಿನ ನೆರವು (ಫಂಡಿಂಗ್) ನೀಡುತ್ತಿದೆ ಎಂಬುದು ಡಿಜಿಟಲ್ ಪುರಾವೆಗಳಿಂದ ಸಾಬೀತಾಗಿದೆ. ಜಾರ್ಖಂಡ್ ಮತ್ತು ಸುತ್ತಮುತ್ತಲಿನ ರಾಜ್ಯಗಳಲ್ಲಿರುವ ಸ್ಥಳೀಯ ಸ್ಲೀಪರ್ ಸೆಲ್‌ಗಳು ಹಾಗೂ ಕೆಲವು ಯುವಕರನ್ನು ಬಳಸಿಕೊಂಡು ಈ ದಾಳಿಯನ್ನು ಕಾರ್ಯಗತಗೊಳಿಸಲಾಗಿತ್ತು.

ಇದನ್ನೂ ಓದಿ: ಆರ್​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್ ಇದ್ದ ರೈಲಿನ ಮೇಲೆ ಕಲ್ಲು ತೂರಾಟ

ಉಗ್ರರು ದಾಳಿಯ ಯೋಜನೆ ರೂಪಿಸಲು ಮತ್ತು ಪರಸ್ಪರ ಸಂವಹನ ನಡೆಸಲು ಎಂಡ್‌-ಟು-ಎಂಡ್‌ ಎನ್‌ಕ್ರಿಪ್ಶನ್ ಹೊಂದಿರುವ ‘ಟೆಲಿಗ್ರಾಮ್’ ಚಾನೆಲ್‌ಗಳು ಮತ್ತು ಕೆಲವು ಸೀಕ್ರೆಟ್ ಡಾರ್ಕ್ ವೆಬ್ ಲಿಂಕ್‌ಗಳನ್ನು ಬಳಸಿಕೊಂಡಿದ್ದರು. ಆರೋಪಿಗಳಿಂದ ವಶಪಡಿಸಿಕೊಳ್ಳಲಾದ ಮೊಬೈಲ್ ಮತ್ತು ಲ್ಯಾಪ್‌ಟಾಪ್‌ಗಳ ವಿಧಿವಿಜ್ಞಾನ ತನಿಖೆಯ ವೇಳೆ, ಪಾಕಿಸ್ತಾನ ಮೂಲದ ಹ್ಯಾಂಡ್ಲರ್‌ಗಳೊಂದಿಗೆ ಅವರು ನಡೆಸಿದ ಚಾಟ್‌ಗಳು ಮತ್ತು ಹಣ ವರ್ಗಾವಣೆಯ ವಿವರಗಳು ಪತ್ತೆಯಾಗಿವೆ.

ಆರ್‌ಎಸ್‌ಎಸ್ ಕಚೇರಿ ಮೇಲಿನ ದಾಳಿಯ ಹಿಂದೆ ಪಾಕ್ ಲಿಂಕ್ ಪತ್ತೆಯಾಗುತ್ತಿದ್ದಂತೆ ಜಾರ್ಖಂಡ್ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಭದ್ರತೆಯನ್ನು ತೀವ್ರಗೊಳಿಸಲಾಗಿದೆ. ತನಿಖಾ ಸಂಸ್ಥೆಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಉಗ್ರರ ಜಾಲವನ್ನು ಸಂಪೂರ್ಣವಾಗಿ ಧ್ವಂಸಗೊಳಿಸಲು ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Video: ರಾಂಚಿಯ ಆರ್‌ಎಸ್‌ಎಸ್ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ತನಿಖೆಯಲ್ಲಿ ಅಂತಾರಾಷ್ಟ್ರೀಯ ಮತ್ತು ಭಯೋತ್ಪಾದನಾ ಲಿಂಕ್‌ಗಳು ಬಯಲಾಗಿರುವುದರಿಂದ ಈ ಪ್ರಕರಣವನ್ನು ಜಾರ್ಖಂಡ್ ಭಯೋತ್ಪಾದನಾ ನಿರೋಧಕ ದಳಕ್ಕೆ (ATS) ವರ್ಗಾಯಿಸಲು ಶಿಫಾರಸು ಮಾಡಲಾಗಿದೆ. ಇವರ ನೆಟ್‌ವರ್ಕ್ ಮತ್ತು ಫಂಡಿಂಗ್ ಕುರಿತು ತನಿಖೆ ನಡೆಸಲಾಗುತ್ತಿದ್ದು, ಇನ್ನು ಹಲವರ ಬಂಧನವಾಗುವ ಸಾಧ್ಯತೆಯಿದೆ ಎಂದು ಪೊಲೀಸರು ಹೇಳಿದ್ದಾರೆ. ಜೂನ್ 16ರ ಮಧ್ಯರಾತ್ರಿ ಇಬ್ಬರು ಯುವಕರು ಆರ್‌ಎಸ್‌ಎಸ್ ಕಚೇರಿಯ ಕಡೆಗೆ ಪೆಟ್ರೋಲ್ ಬಾಂಬ್ ಎಸೆಯುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದವು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಕರ್ನಾಟಕದ ಹಲವು ಜಿಲ್ಲಾ ಕೋರ್ಟ್​ಗಳಿಗೆ ಬಾಂಬ್ ಬೆದರಿಕೆ ಕರೆ – Kannada News | Bomb Threat Calls Received by Several District Courts Across Karnataka

ಬೆಂಗಳೂರು, ಜೂನ್​​ 19: ರಾಜ್ಯದಲ್ಲಿ ಮತ್ತೆ ಹುಸಿ ಬಾಂಬ್​​ ಬೆದರಿಕೆ (bomb threat) ಕರೆಗಳ ಹಾವಳಿ ಜೋರಾಗಿದೆ. ಇಂದು ಒಂದೇ ದಿನ ಬಾಗಲಕೋಟೆ, ದಾವಣಗೆರೆ, ಧಾರವಾಡ, ಕೋಲಾರ ಜಿಲ್ಲಾ ನ್ಯಾಯಾಲಯಗಳಿಗೆ ಅನುಮಾನಾಸ್ಪದ ಐಡಿಯಿಂದ ಬಾಂಬ್ ಬೆದರಿಕೆಯ ಇ-ಮೇಲ್​​​​ಗಳು ಬಂದಿವೆ. ಬಾಂಬ್​​ ಬೆದರಿಕೆ ಹಿನ್ನೆಲೆ ನ್ಯಾಯಾಲಯದ (court) ಆವರಣದಲ್ಲಿ ತೀವ್ರ ಆತಂಕ ಸೃಷ್ಟಿಯಾಗಿತ್ತು. ಪೊಲೀಸರು ತಪಾಸಣೆ ಮಾಡಿದ್ದಾರೆ.

ಮುಖ್ಯಾಂಶಗಳು

  • ಕರ್ನಾಟಕ ಜಿಲ್ಲಾ ನ್ಯಾಯಾಲಯಗಳಿಗೆ ಇ-ಮೇಲ್ ಬಾಂಬ್ ಬೆದರಿಕೆ
  • ಬಾಂಬ್ ನಿಷ್ಕ್ರಿಯ ದಳ ಮತ್ತು ಪೊಲೀಸರಿಂದ ತೀವ್ರ ತಪಾಸಣೆ
  • ಬಾಗಲಕೋಟೆ, ದಾವಣಗೆರೆ ಸೇರಿ ಹಲವೆಡೆ ನ್ಯಾಯಾಲಯಗಳಲ್ಲಿ ಆತಂಕ

ಸೈನೈಡ್ ವಾಯು ಗುಂಡಿಗಳು ಸ್ಫೋಟಿಸುವುದಾಗಿ ಬೆದರಿಕೆ

ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೆ karunanidhi.kundi@underworld.dog ಎಂಬ ಐಡಿಯಿಂದ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಇಂದು ಮಧ್ಯಾಹ್ನ 2 ಗಂಟೆಗೆ 23 ಸೈನೈಡ್ ವಾಯು ಗುಂಡಿಗಳು ಸ್ಫೋಟವಾಗಲಿವೆ ಎಂದು ಮೇಲ್​​ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು ಏರ್​ಪೋರ್ಟ್​ನಲ್ಲಿ ಬಾಂಬ್ ಬೆದರಿಕೆ ಹಾಕಿದ ಯುವಕನ ಬಂಧನ

ಮೊದಲು ಚಿತ್ರದುರ್ಗ ಜಿಲ್ಲಾ ನ್ಯಾಯಾಧೀಶರಿಗೆ ಮೇಲ್ ಬಂದಿದ್ದು, ಅಲ್ಲಿಂದ ಬಾಗಲಕೋಟೆಗೆ ರವಾನಿಸಲಾಗಿದೆ. ನ್ಯಾಯಾಂಗ ವಲಯದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿತ್ತು. ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದಿಂದ ಜಡ್ಜ್ ಹಾಲ್, ವಿವಿಧ ಕೊಠಡಿ ಸೇರಿ ಇಡೀ ಕೋರ್ಟ್ ತಪಾಸಣೆ ಮಾಡಿದ್ದಾರೆ.

ವಯನಾಡಿನಿಂದ ಬಾಂಬ್ ಬೆದರಿಕೆ ಕರೆ

ದಾವಣಗೆರೆ ನಗರದ ಪಿಬಿ ರಸ್ತೆ ಬಳಿ ಇರುವ ಜಿಲ್ಲಾ ಕೋರ್ಟ್ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದೆ. ಕೆರಳದ ವಯನಾಡಿನಿಂದ ಜಿಲ್ಲಾ ನ್ಯಾಯಾಲಯದ ಅಧಿಕೃತ ಇ-ಮೇಲ್​ ಐಡಿಗೆ ಸಂದೇಶ‌ ಬಂದಿದೆ. ಬೆದರಿಕೆ ಕರೆ ಬೆನ್ನಲ್ಲೇ ಅಲರ್ಟ್​ ಆದ ಪೊಲೀಸರು, ಶ್ವಾನದಳದಿಂದ ತಪಾಸಣೆ ಮಾಡಿದ್ದಾರೆ.

ಇದನ್ನೂ ಓದಿ: Bomb Threat: ಚಾಮರಾಜನಗರ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ನೌಕರರಿಗೆ ರಜೆ ಘೋಷಣೆ

ಕೋಲಾರ ಜಿಲ್ಲಾ ನ್ಯಾಯಾಲಯಕ್ಕೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಕೂಡಲೇ ಕೋರ್ಟ್ ಕಾರ್ಯಕಲಾಪಗಳನ್ನು ಸ್ಥಗಿತಗೊಳಿಸಿ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಸೇರಿದಂತೆ ಕೋಲಾರ ಗಲ್ ಪೇಟೆ ಪೊಲೀಸರು ಪರಿಶೀಲನೆ ಮಾಡಿದರು.

ಕೋರ್ಟ್ ಸುತ್ತಮುತ್ತ ಆತಂಕ

ಇನ್ನು ಕೋರ್ಟ್ ಹಾಗೂ ಕಾಂಪ್ಲೆಕ್ಸ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ಉಪನಗರ ಠಾಣಾ ವ್ಯಾಪ್ತಿಯ ಧಾರವಾಡ ಜಿಲ್ಲಾ ಕೋರ್ಟ್‌ಗೂ ಬಾಂಬ್ ಬೆದರಿಕೆ ಕರೆ ಬಂದಿದೆ. ಅಪರಿಚಿತನ ಬಾಂಬ್​ ಕರೆ ಕೋರ್ಟ್ ಸುತ್ತಮುತ್ತ ಆತಂಕ ಸೃಷ್ಟಿಸಿತ್ತು. ಕೂಡಲೇ ವಕೀಲರು ಮತ್ತು ಕಕ್ಷಿದಾರರು ನ್ಯಾಯಾಲಯ ಆವರಣದಿಂದ ಹೊರಬಂದಿದ್ದಾರೆ. ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ಆಗಮಿಸಿ ಕೋರ್ಟ್‌ನ ಒಳಗಡೆ ತಪಾಸಣೆ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link