All posts by nagaraj11081993

ನಿರ್ದೇಶಕ ರೋಹಿತ್ ಶೆಟ್ಟಿ ಖಾಸಗಿ ಕಾರಿನ ಮೇಲೆ ಪೊಲೀಸ್ ಸ್ಟಿಕ್ಕರ್: ವಿವಾದಕ್ಕೆ ಸ್ಪಷ್ಟನೆ

ನಿರ್ದೇಶಕ ರೋಹಿತ್ ಶೆಟ್ಟಿ ಖಾಸಗಿ ಕಾರಿನ ಮೇಲೆ ಪೊಲೀಸ್ ಸ್ಟಿಕ್ಕರ್: ವಿವಾದಕ್ಕೆ ಸ್ಪಷ್ಟನೆ

ಆ್ಯಕ್ಷನ್ ಸಿನಿಮಾಗಳ ಮೂಲಕ ಫೇಮಸ್ ಆದ ಬಾಲಿವುಡ್‌ನ ನಿರ್ದೇಶಕ ರೋಹಿತ್ ಶೆಟ್ಟಿ (Rohit Shetty) ಅವರು ಇದೀಗ ಹೊಸ ವಿವಾದವೊಂದಕ್ಕೆ ಸಿಲುಕಿದ್ದಾರೆ. ತಮ್ಮ ಖಾಸಗಿ ಕಾರುಗಳಲ್ಲಿ ಪೊಲೀಸ್ ಸ್ಟಿಕ್ಕರ್ ಮತ್ತು ಲೈಟ್‌ಗಳನ್ನು ಬಳಸಿದ ಆರೋಪ ಅವರ ಮೇಲೆ ಕೇಳಿಬಂದಿದೆ. ಈ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ರೋಹಿತ್ ಶೆಟ್ಟಿ ಅವರ ತಂಡವು ಸ್ಪಷ್ಟನೆಯನ್ನು ನೀಡಿದೆ. ಅಷ್ಟಕ್ಕೂ ರೋಹಿತ್ ಶೆಟ್ಟಿ ಅವರು ತಮ್ಮ ಸ್ವಂತ ಕಾರಿನ ಮೇಲೆ ಪೊಲೀಸ್ (Police) ಸ್ಟಿಕ್ಕರ್ ಮತ್ತು ಲೈಟ್ ಯಾಕೆ ಹಾಕಿದ್ದರು? ಅದಕ್ಕೆ ಉತ್ತರ ಸಿಕ್ಕಿದೆ.

ವರದಿಗಳ ಪ್ರಕಾರ, ರೋಹಿತ್ ಶೆಟ್ಟಿ ಅವರು ತಮ್ಮ ಎರಡು ವೈಯಕ್ತಿಕ ಐಷಾರಾಮಿ ಕಾರುಗಳಿಗೆ ಯಾವುದೇ ಮುನ್ಸೂಚನೆ ಅಥವಾ ಅನುಮತಿಯಿಲ್ಲದೆ ಪೊಲೀಸ್ ವಾಹನಗಳಲ್ಲಿ ಬಳಸುವಂತಹ ಸ್ಟಿಕ್ಕರ್ ಮತ್ತು ಲೈಟ್‌ಗಳನ್ನು ಅಳವಡಿಸಿದ್ದರು. ನಿಯಮದ ಪ್ರಕಾರ, ಪೊಲೀಸ್ ಇಲಾಖೆಯ ವಾಹನಗಳನ್ನು ಹೊರತುಪಡಿಸಿ ಬೇರೆ ಯಾವುದೇ ಖಾಸಗಿ ವಾಹನಗಳಲ್ಲಿ ಇವುಗಳನ್ನು ಬಳಸುವುದು ಕಾನೂನುಬಾಹಿರ.

ವಿವಾದದ ಕುರಿತು ಪ್ರತಿಕ್ರಿಯಿಸಿರುವ ರೋಹಿತ್ ಶೆಟ್ಟಿ ಅವರ ವಕ್ತಾರರು, ‘ಇತ್ತೀಚೆಗೆ ನಿರ್ದೇಶಕರ ನಿವಾಸದ ಬಳಿ ಗುಂಡಿನ ದಾಳಿ ನಡೆದ ಘಟನೆಯ ನಂತರ, ಪೊಲೀಸರು ಅವರಿಗೆ ಬಿಗಿ ಭದ್ರತೆಯನ್ನು ಒದಗಿಸಿದ್ದರು. ಆ ಸಮಯದಲ್ಲಿ ಭದ್ರತಾ ದೃಷ್ಟಿಯಿಂದ ಮತ್ತು ವಾಹನಗಳ ಗುರುತಿಗಾಗಿ ಆರಂಭಿಕ ಹಂತದಲ್ಲಿ ಸ್ಟಿಕ್ಕರ್‌ಗಳನ್ನು ಅಳವಡಿಸಲಾಗಿತ್ತು. ಆದರೆ ಈಗ ಅವುಗಳನ್ನು ತೆಗೆಯಲಾಗಿದೆ’ ಎಂದು ತಿಳಿಸಿದ್ದಾರೆ.

‘ಈಗಲೂ ರೋಹಿತ್ ಶೆಟ್ಟಿ ಅವರಿಗೆ ಇಬ್ಬರು ಪೊಲೀಸ್ ಸಿಬ್ಬಂದಿಯ ಭದ್ರತೆ ಮುಂದುವರಿದಿದೆ. ಇಡೀ ಪ್ರಕರಣವು ಇನ್ನೂ ತನಿಖೆಯ ಹಂತದಲ್ಲಿದೆ. ಸಂಕಷ್ಟದ ಸಮಯದಲ್ಲಿ ಸತತವಾಗಿ ಸಹಕಾರ ನೀಡುತ್ತಿರುವ ಮುಂಬೈ ಪೊಲೀಸರಿಗೆ ನಾವು ಕೃತಜ್ಞತೆ ಸಲ್ಲಿಸುತ್ತೇವೆ’ ಎಂದು ಅವರ ತಂಡದವರು ಮಾಧ್ಯಮಗಳಿಗೆ ತಿಳಿಸಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ: ರೋಹಿತ್ ಶೆಟ್ಟಿ ಮನೆಮೇಲಿನ ದಾಳಿಗೆ ನಾಲ್ಕು ತಿಂಗಳ ಹಿಂದೆಯೇ ನಡೆದಿತ್ತು ಪ್ಲ್ಯಾನ್

ಜನವರಿ 31ರ ರಾತ್ರಿ ರೋಹಿತ್ ಶೆಟ್ಟಿ ಅವರ ನಿವಾಸದ ಮೇಲೆ 4 ಸುತ್ತು ಗುಂಡು ಹಾರಿಸಲಾಗಿತ್ತು. ಕಿಡಿಗೇಡಿಗಳು ನಡೆಸಿದ ಈ ಕೃತ್ಯದಿಂದ ಬಾಲಿವುಡ್ ಸೆಲೆಬ್ರಿಟಿಗಳಲ್ಲಿ ಆತಂಕ ಹೆಚ್ಚಾಯಿತು. ದಾಳಿಗೆ ಕಾರಣ ಏನು ಎಂದು ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆ ಗುಂಡಿನ ದಾಳಿ ಬಳಿಕ ರೋಹಿತ್ ಶೆಟ್ಟಿ ಅವರಿಗೆ ಪೊಲೀಸರು ಭದ್ರತೆ ಒದಗಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ

ನವದೆಹಲಿ, ಏಪ್ರಿಲ್ 1: ಚಂಡೀಗಢದ ಪಂಜಾಬ್ ಬಿಜೆಪಿ ಕಚೇರಿಯ (BJP Office) ಹೊರಗೆ ಇಂದು ಸ್ಫೋಟ ಸಂಭವಿಸಿದೆ. ಸೆಕ್ಟರ್ 37ರಲ್ಲಿರುವ ಕಚೇರಿಯ ಬಳಿಯ ಪಾರ್ಕಿಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ಗ್ರೆನೇಡ್ ಅನ್ನು ಎಸೆಯುತ್ತಿರುವ ವಿಡಿಯೋ ಕೂಡ ವೈರಲ್ ಆಗಿದೆ. ಚಂಡೀಗಢದ ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಕೈಯಲ್ಲಿ ಹೆಲ್ಮೆಟ್ ಹಿಡಿದಿರುವ ವ್ಯಕ್ತಿಯೊಬ್ಬ ಗ್ರೆನೇಡ್ ತೆಗೆದು ಎಸೆಯುತ್ತಿರುವುದನ್ನು ಇನ್ನೊಬ್ಬ ವ್ಯಕ್ತಿ ರೆಕಾರ್ಡ್ ಮಾಡಿದ್ದಾನೆ. ಬಳಿಕ ಭಾರೀ ಸ್ಫೋಟದ ಸದ್ದು ಕೇಳುತ್ತದೆ. ದಾಳಿ ನಡೆಸಿದ ಇಬ್ಬರು ಶಂಕಿತರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸಿಸಿಟಿವಿಯಲ್ಲಿ ಅವರ ಮುಖಗಳು ಸೆರೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆಯುತ್ತಿದೆ

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕದ ಮಹಿಳಾ ಕ್ರಿಕೆಟರ್ಸ್​ಗೆ ಪಿಂಚಣಿ ಘೋಷಿಸಿದ ಕೆಎಸ್​ಸಿಎ

ಅಸಾಧ್ಯವಾದುದ್ದನ್ನು ಸಾಧ್ಯವಾಗಿಸಿ, ಎಲ್ಲಾ ಆಡೆತಡೆಗಳನ್ನು ನಿವಾರಿಸಿ 2026 ರ ಐಪಿಎಲ್ ಪಂದ್ಯವನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸುವಲ್ಲಿ ಯಶಸ್ವಿಯಾಗಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ (KSCA) ಇದೀಗ ರಾಜ್ಯದ ಮಾಜಿ ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೆ ಪಿಂಚಣಿ (Karnataka’s Former Women Cricketers Get KSCA Pension) ಸೌಲಭ್ಯವನ್ನು ಘೋಷಿಸಿದೆ. ಸೀನಿಯರ್ ಮಹಿಳಾ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಮಾಜಿ ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೆ ಮಾಸಿಕ ಪಿಂಚಣಿ ನೀಡಲು ಕೆಎಸ್‌ಸಿಎ ನಿರ್ಧರಿಸಿದೆ.

ಪಿಂಚಣಿಗೆ ಯಾರು ಅರ್ಹರು?

ಈ ಪಿಂಚಣಿ ಸೌಲಭ್ಯವನ್ನು 55 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಮಹಿಳಾ ಆಟಗಾರ್ತಿಯರಿಗೆ ನೀಡಲಾಗುವುದು. ಆದರೆ ಕರ್ನಾಟಕದ ಮಹಿಳಾ ಆಟಗಾರ್ತಿಯರು ಈಗಾಗಲೇ ಬಿಸಿಸಿಐನಿಂದ ಪಿಂಚಣಿ ಪಡೆಯುತಿದ್ದರೆ, ಅವರು ಈ ಪ್ರಯೋಜನಕ್ಕೆ ಅರ್ಹರಾಗಿರುವುದಿಲ್ಲ. ಆದಾಗ್ಯೂ ಅರ್ಹ ಆಟಗಾರ್ತಿಯರು ರಾಜ್ಯಕ್ಕಾಗಿ ತಮ್ಮ ಪ್ರಾತಿನಿಧ್ಯ ಮತ್ತು ಆಡಿದ ಪಂದ್ಯಗಳ ಸಂಖ್ಯೆಯನ್ನು ಸಾಬೀತುಪಡಿಸುವ ದಾಖಲೆಗಳನ್ನು ಒದಗಿಸಬೇಕಾಗುತ್ತದೆ ಎಂದು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ತಿಳಿಸಿದೆ.

ಈ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು?

ರಾಜ್ಯದಲ್ಲಿ ಮಾಜಿ ಮಹಿಳಾ ಆಟಗಾರ್ತಿಯರು ನೀಡಿದ ಕೊಡುಗೆಗಳನ್ನು ಗುರುತಿಸುವುದು ಮತ್ತು ಗೌರವಿಸುವುದು ಈ ನಿರ್ಧಾರದ ಹಿಂದಿರುವ ಉದ್ದೇಶ ಎಂದು ಕೆಎಸ್‌ಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ಹೇಳಿದ್ದಾರೆ. ಕರ್ನಾಟಕ ಕ್ರಿಕೆಟ್ ಸಂಘದ ಈ ನಿರ್ಧಾರವು ರಾಜ್ಯದ ಯುವ ಮಹಿಳಾ ಆಟಗಾರ್ತಿಯರಿಗೆ ಸ್ಫೂರ್ತಿ ನೀಡುತ್ತದೆ. ರಾಜೇಶ್ವರಿ ಗಾಯಕ್ವಾಡ್ ಮತ್ತು ಶ್ರೇಯಾಂಕ ಪಾಟೀಲ್ ಸೇರಿದಂತೆ ಕರ್ನಾಟಕವು ಟೀಂ ಇಂಡಿಯಾಕ್ಕೆ ಹಲವಾರು ಆಟಗಾರ್ತಿಯರನ್ನು ನೀಡಿದ್ದು, ರಾಜ್ಯದಿಂದ ದೇಶವನ್ನು ಪ್ರತಿನಿಧಿಸುವವರ ಸಂಖ್ಯೆ ಹೆಚ್ಚಾಗಲಿ ಎಂಬುದು ಕೆಎಸ್​ಸಿಎ ಉದ್ದೇಶವಾಗಿದೆ.

ಬಿಸಿಸಿಐನಿಂದಲೂ ಸಿಗಲಿದೆ ಪಿಂಚಣಿ

ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿಯಾದ ಬಿಸಿಸಿಐ, ಈಗಾಗಲೆ ಮಹಿಳಾ ಆಟಗಾರ್ತಿಯರಿಗೂ ಪಿಂಚಣಿ ನೀಡುತ್ತಿದೆ. ಅದರಂತೆ ತಂಡದ ಪರ ಅಂತರರಾಷ್ಟ್ರೀಯ ಪಂದ್ಯಗಳನ್ನಾಡಿದ್ದ ಆಟಗಾರ್ತಿಯರಿಗೆ ಮಾಸಿಕವಾಗಿ 52,500 ರೂ. ಪಿಂಚಣಿ ಸಿಗುತ್ತದೆ. ಹಾಗೆಯೇ 2003 ಕ್ಕಿಂತ ಮೊದಲು ನಿವೃತ್ತರಾದ ಪ್ರಥಮ ದರ್ಜೆ ಕ್ರಿಕೆಟರ್ಸ್​ಗೆ ತಿಂಗಳಿಗೆ 45,000 ರೂ. ಸಿಗಲಿದೆ. 25 ಕ್ಕೂ ಹೆಚ್ಚು ಪಂದ್ಯಗಳನ್ನು ಆಡಿದ ಮತ್ತು 1993 ಕ್ಕಿಂತ ಮೊದಲು ನಿವೃತ್ತರಾದ ಹಿರಿಯ ಟೆಸ್ಟ್ ಆಟಗಾರ್ತಿಯರು ತಿಂಗಳಿಗೆ 70,000 ರೂ. ಪಿಂಚಣಿ ಪಡೆಯುತ್ತಾರೆ.

Source link

ಮದುವೆಯಾದ ಒಂದು ತಿಂಗಳಲ್ಲೇ ಅತ್ತೆಗೆ ವಿಷ ಹಾಕಿ ಹಣ, ಒಡವೆಯೊಂದಿಗೆ ವಧು ಪರಾರಿ

ಲಕ್ನೋ, ಏಪ್ರಿಲ್ 1: ಅಲ್ವಾರ್‌ನಲ್ಲಿ ನವವಧುವೊಬ್ಬಳು ಅತ್ತೆಗೆ ವಿಷ ಹಾಕಿ, ಹಣ ಮತ್ತು ಆಭರಣಗಳೊಂದಿಗೆ ಪರಾರಿಯಾಗಿದ್ದಾಳೆ. ಆರೋಪಿ ವಧು ಚಿನ್ನ ಮತ್ತು ಬೆಳ್ಳಿ ಆಭರಣಗಳ ಜೊತೆಗೆ ಸುಮಾರು 30,000 ರೂ. ಹಣ ತೆಗೆದುಕೊಂಡು ಪರಾರಿಯಾಗಿದ್ದಾಳೆ. ನವವಿವಾಹಿತ ವಧು ರೇಖಾ ಕೌರ್ ತನ್ನ ಅತ್ತೆಗೆ ವಿಷ ಹಾಕಿ ಆಭರಣ ಮತ್ತು ನಗದು ದೋಚಿ ಪರಾರಿಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯು ಅವರ ಪತಿ ವಿಕ್ರಮ್‌ಜೀತ್ ಸಿಂಗ್ ಮತ್ತು ಅವರ ಕುಟುಂಬವನ್ನು ತೀವ್ರ ಆಘಾತಕ್ಕೆ ದೂಡಿದೆ.

ಮೇ 26, 2025ರಂದು ಗುರುದ್ವಾರದಲ್ಲಿ ನಡೆದ ಸಮಾರಂಭದಲ್ಲಿ ರೇಖಾಳನ್ನು ವಿವಾಹವಾದ ವಿಕ್ರಮ್‌ಜೀತ್ ಮದುವೆಗೆ 5 ಲಕ್ಷ ರೂ.ಗಳಿಗೂ ಹೆಚ್ಚು ಖರ್ಚು ಮಾಡಿದ್ದರು. ರೇಖಾಗೆ ಈ ಮೊದಲೇ ಮದುವೆಯಾಗಿ ವಿಚ್ಛೇದನವಾಗಿತ್ತು. ಆಕೆಗೆ ಇಬ್ಬರು ಮಕ್ಕಳಿದ್ದರು. ಮದುವೆಯ ನಂತರ ಅವಳ ನಡವಳಿಕೆ ಬದಲಾಯಿತು. ಜೂನ್ 23, 2025ರಂದು ಆಕೆ ತನ್ನ ಅತ್ತೆಗೆ ಬಡಿಸಿದ ಊಟದಲ್ಲಿ ಫಿನಾಯಿಲ್ ಬೆರೆಸಿದ್ದಳು. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ರೇಖಾ ಚಿನ್ನ ಮತ್ತು ಬೆಳ್ಳಿಯ ಹಾರಗಳು, ಬಳೆಗಳು ಮತ್ತು ಉಂಗುರಗಳು ಸೇರಿದಂತೆ ಹಲವಾರು ಲಕ್ಷ ರೂ. ಮೌಲ್ಯದ ಆಭರಣಗಳನ್ನು ಮತ್ತು 30,000 ರೂ.ಗಳನ್ನು ತೆಗೆದುಕೊಂಡು ಮನೆಯಿಂದ ಪರಾರಿಯಾಗಿದ್ದಾಳೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ತೆಲಂಗಾಣ ಟೆಕ್ಕಿ ದಂಪತಿಯ ಜೀವವನ್ನೇ ತೆಗೆಯಿತು ಎಐ! ಆಗಿದ್ದೇನು ಗೊತ್ತಾ?

ಹರಿಯಾಣದ ಸಿರ್ಸಾದ ತನ್ನ ಚಿಕ್ಕಮ್ಮ ಪಿಂಕಿ ಕೌರ್ ಸಹಾಯದಿಂದ ರೇಖಾ ಇದೇ ರೀತಿಯ ಪ್ಲಾನ್ ಮಾಡಿ ಹಲವಾರು ಯುವಕರನ್ನು ಸಿಲುಕಿಸಿದ್ದಾಳೆ ಎಂದು ತನಿಖೆಯಿಂದ ತಿಳಿದುಬಂದಿದೆ. ವಿಕ್ರಮ್‌ಜೀತ್ ಜುಲೈ 14, 2025ರಂದು ಅರಾವಳಿ ವಿಹಾರ್ ಪೊಲೀಸ್ ಠಾಣೆಗೆ ದೂರು ನೀಡಿದರು. ಆದರೆ ಅವರು ತಕ್ಷಣ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಬಳಿಕ ಅವರು ರೇಖಾ ಮತ್ತು ಪಿಂಕಿ ವಿರುದ್ಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು.

ಇದಾದ ಬಳಿಕ ತನಿಖೆ ನಡೆಸಿದ ಪೊಲೀಸರು ರೇಖಾ ಮತ್ತು ಆಕೆಯ ಚಿಕ್ಕಮ್ಮ ಹರಿಯಾಣ ಮತ್ತು ರಾಜಸ್ಥಾನದಲ್ಲಿ ಹಲವಾರು ಪುರುಷರನ್ನು ಗುರಿಯಾಗಿಸಿಕೊಂಡು ವಂಚನೆ ನಡೆಸಿದ್ದಾರೆ ಎಂದು ದೃಢಪಡಿಸಿದ್ದಾರೆ. ತನಿಖೆ ಮುಂದುವರೆದಿದ್ದು, ನ್ಯಾಯಾಲಯದ ಪ್ರಕ್ರಿಯೆಯ ನಂತರ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಸೂಚಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ: IAS ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಅನುಮತಿ ನೀಡಿ ಹೈಕೋರ್ಟ್ ಆದೇಶ

ಬೆಂಗಳೂರು, (ಮೇ 01): ಐಎಎಸ್ ಅಧಿಕಾರಿ ರೋಹಿಣಿ  ಸಿಂಧೂರಿ (Rohini Sindhuri) ವಿರುದ್ಧದ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್​ (Karnataka High Court) ಮಹತ್ವದ ಆದೇಶ ಹೊರಡಿಸಿದೆ. ಸೆಕ್ಷನ್ 17ಎ ಅಡಿ ತನಿಖೆಗೆ ಅನುಮತಿ ನೀಡಲು ಅಧೀನ ಕಾರ್ಯದರ್ಶಿ, ಸಿಬ್ಬಂದಿ, ಆಡಳಿತ ಸುಧಾರಣಾ ಇಲಾಖೆಗೆ ನಿರ್ದೇಶಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಭ್ರಷ್ಟಾಚಾರ ಕ್ಯಾನ್ಸರ್, ಪ್ಲೇಗ್ ಇದ್ದಂತೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಹಾಗೇ ಬಿಟ್ಟರೆ ಪ್ರಜಾಸತ್ತಾತ್ಮಕ ಅಂಗಗಳನ್ನು ಅಸ್ಥಿರಗೊಳಿಸುತ್ತದೆ. ಭ್ರಷ್ಟಾಚಾರದ ಆರೋಪವಿದ್ದಾಗ ತನಿಖೆ ನಡೆಯದೇ ಸತ್ಯ ಬಹಿರಂಗವಾಗುವುದಿಲ್ಲ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.

Source link

ಯೇಸು ಕ್ರಿಸ್ತನ ಅಂತ್ಯಕ್ರಿಯೆಗೆ ಬಳಸಿದ್ದ ಬಟ್ಟೆಗೆ ಭಾರತದ ನಂಟು; ವಿಜ್ಞಾನಿಗಳ ಸಂಶೋಧನೆ ಹೇಳೋದೇನು?

ನವದೆಹಲಿ, ಏಪ್ರಿಲ್ 1: ಕ್ರೈಸ್ತ ಧರ್ಮೀಯರಿಂದ ಪೂಜಿಸಲ್ಪಡುವ ಯೇಸು ಕ್ರಿಸ್ತನ ಬಗ್ಗೆ ಇಂದಿಗೂ ಸಂಶೋಧನೆಗಳು ನಡೆಯುತ್ತಲೇ ಇವೆ. ಟುರಿನ್ ಶ್ರೌಡ್ (ಯೇಸು ಕ್ರಿಸ್ತನ ಅಂತ್ಯಕ್ರಿಯೆ ವೇಳೆ ಸುತ್ತಲು ಬಳಸಲಾದ ಬಿಳಿಯ ಬಟ್ಟೆ) ಕುರಿತು ಈಗ ಹೊಸ ಸಂಶೋಧನೆ ಅಚ್ಚರಿಯ ಸಂಗತಿಯನ್ನು ಬಯಲು ಮಾಡಿದೆ. ಅತ್ಯಾಧುನಿಕ ಡಿಎನ್‌ಎ (DNA) ವಿಶ್ಲೇಷಣೆ ಈ ಬಟ್ಟೆಗೂ ಭಾರತಕ್ಕೂ ಸಂಬಂಧವಿದೆ ಎಂದು ತಿಳಿಸಿದೆ. ವಿಜ್ಞಾನಿಗಳು ಈ ಬಟ್ಟೆಯ ಮೇಲಿರುವ ಧೂಳಿನ ಕಣಗಳು ಮತ್ತು ಪರಾಗವನ್ನು ಪರೀಕ್ಷಿಸಿದಾಗ ಅದರಲ್ಲಿ ಪ್ರಪಂಚದ ವಿವಿಧ ಭಾಗಗಳ ಸಸ್ಯಗಳ ಡಿಎನ್‌ಎ ಪತ್ತೆಯಾಗಿದೆ. ಅವುಗಳಲ್ಲಿ ಭಾರತಕ್ಕೆ ಸೇರಿದ ಸಸ್ಯಗಳ ಡಿಎನ್​ಎ ಕೂಡ ಇದೆ.

ಈ ಬಟ್ಟೆಯನ್ನು ತಯಾರಿಸಲು ಬಳಸಲಾದ ನೂಲು ಭಾರತದ ಗಿಡದ್ದಾಗಿರಬಹುದು ಅಥವಾ ಈ ಬಟ್ಟೆಯ ನೇಯ್ಗೆಯನ್ನು ಭಾರತದಲ್ಲಿ ನಡೆಸಿರಬಹುದು ಅಥವಾ ಈ ಬಟ್ಟೆಯು ಭಾರತದ ಮೂಲಕ ಮಧ್ಯಪ್ರಾಚ್ಯಕ್ಕೆ ರವಾನೆಯಾಗಿರಬಹುದು ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ. ಇಟಲಿಯ ಪಡುವಾ ವಿಶ್ವವಿದ್ಯಾಲಯದ ಸಂಶೋಧಕರು ಈ ಅಧ್ಯಯನ ನಡೆಸಿದ್ದಾರೆ. ಜೀನ್ ಸೀಕ್ವೆನ್ಸಿಂಗ್ ತಂತ್ರಜ್ಞಾನವನ್ನು ಬಳಸಿಕೊಂಡು ಸಂಶೋಧನೆ ಮಾಡಿದ್ದಾರೆ.

ಇದನ್ನೂ ಓದಿ: ಯೇಸುಕ್ರಿಸ್ತನ ಜನ್ಮಸ್ಥಳವಾದ ಬೆಥ್ ಲೆಹೆಮ್‌ನಲ್ಲಿ ಕ್ರಿಸ್‌ಮಸ್ ಟ್ರೀ ಇಲ್ಲ, ಹಬ್ಬದ ಸಂಭ್ರಮವೂ ಇಲ್ಲ

ಯೇಸು ಕ್ರಿಸ್ತನ ಮೈಮೇಲಿದ್ದ ಈ ಬಟ್ಟೆಯ ಮೇಲೆ ಕೇವಲ ಭಾರತದ್ದು ಮಾತ್ರವಲ್ಲದೆ ಚೀನಾ, ಮಧ್ಯಪ್ರಾಚ್ಯ ಮತ್ತು ಯುರೋಪ್‌ಗೆ ಸೇರಿದ ಸಸ್ಯಗಳ ಡಿಎನ್‌ಎ ಕೂಡ ಪತ್ತೆಯಾಗಿದೆ. ಹೀಗಾಗಿ ಈ ಬಟ್ಟೆಯು ಜಗತ್ತಿನಾದ್ಯಂತ ಸಂಚರಿಸಿದೆ ಎಂಬುದು ಸಾಬೀತಾಗಿದೆ. ​ಇಟಲಿಯ ಟುರಿನ್ ನಗರದ ಸೇಂಟ್ ಜಾನ್ ದಿ ಬ್ಯಾಪ್ಟಿಸ್ಟ್ ಕೆಥೆಡ್ರಲ್‌ನಲ್ಲಿ ಈ ಬಟ್ಟೆಯನ್ನು ಇರಿಸಲಾಗಿದೆ. ಇದು 4.4 ಮೀಟರ್ ಉದ್ದ ಮತ್ತು 1.1 ಮೀಟರ್ ಅಗಲದ ಲಿನಿನ್ ಬಟ್ಟೆಯಾಗಿದ್ದು, ಇದರ ಮೇಲೆ ಶಿಲುಬೆಗೇರಿಸಲ್ಪಟ್ಟ ವ್ಯಕ್ತಿಯ ಅಸ್ಪಷ್ಟ ಚಿತ್ರವಿದೆ. ಇದು ಯೇಸು ಕ್ರಿಸ್ತರ ಅಂತ್ಯಕ್ರಿಯೆಯ ವೇಳೆ ಬಳಸಿದ ಬಟ್ಟೆ ಎಂದು ಕ್ರೈಸ್ತ ಧರ್ಮದ ಭಕ್ತರು ನಂಬುತ್ತಾರೆ. ಆದರೆ, ಇದುವರೆಗೂ ಈ ಬಗ್ಗೆ ಹಲವು ಸಂಶೋಧನೆಗಳು ನಡೆದಿವೆ.

ಇದನ್ನೂ ಓದಿ: Christmas 2025: ಯೇಸುಕ್ರಿಸ್ತರ ಜನ್ಮ ದಿನಾಚರಣೆಯ ಸಂಭ್ರಮ; ಕ್ರಿಸ್ಮಸ್‌ ಹಬ್ಬದ ಇತಿಹಾಸ, ಮಹತ್ವವನ್ನು ತಿಳಿಯಿರಿ

ಈ ಬಟ್ಟೆಯಲ್ಲಿ ಯೇಸು ಕ್ರಿಸ್ತನ ದೇಹವನ್ನು ಶಿಲುಬೆಗೇರಿಸಿದ ನಂತರ ಸುತ್ತಿಡಲಾಗಿದೆ ಎಂದು ನಂಬಲಾಗಿದೆ. ಇದರ ಮೇಲೆ ಕ್ರಿಸ್ತನನ್ನು ಹೋಲುವ ಮುಖವೂ ಇದೆ. ಇಟಲಿಯ ಪಡೋವಾ ವಿಶ್ವವಿದ್ಯಾಲಯದ ಗಿಯಾನಿ ಬಾರ್ಕಾಸಿಯಾ, 2015ರಲ್ಲಿ ಮೊದಲು ಇದು ಭಾರತದಲ್ಲಿ ತನ್ನ ಮೂಲವನ್ನು ಹೊಂದಿರಬಹುದು ಎಂದು ಅಭಿಪ್ರಾಯಪಟ್ಟಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

LSG vs DC: ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ಲಕ್ನೋ ‘ಸೂಪರ್ ಸ್ಟಾರ್ಸ್’

Source link

ಹೋಟೆಲ್ ಬಳಿ ಡ್ರಗ್ಸ್ ಸೇವನೆ: ಪ್ರಶ್ನಿಸಿದ್ದಕ್ಕೆ ಗಲಾಟೆ; ಸಿಕ್ಕಸಿಕ್ಕ ವಸ್ತುಗಳಿಂದ ಹೊಡೆದಾಟ

ಬೆಂಗಳೂರು, ಏಪ್ರಿಲ್​ 01: ಕಾಫಿ ಶಾಪ್‌ ಬಳಿ ಡ್ರಗ್ಸ್ ಸೇವನೆ ಆರೋಪ ಹಿನ್ನೆಲೆ ಹೋಟೆಲ್ ಸಿಬ್ಬಂದಿ ಮತ್ತು ಯುವಕರ ಗುಂಪ್ಪಿನ ನಡುವೆ ಭಾರಿ ಗಲಾಟೆ (fight) ನಡೆದಿರುವಂತಹ ಘಟನೆ ಕೊತ್ತನೂರಿನ ಭಾರತಿ ಸಿಟಿಯ ಕಾಫಿ ಶಾಪ್​​ ಬಳಿ ನಿನ್ನೆ ರಾತ್ರಿ ನಡೆದಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ಮತ್ತು ಪ್ರತಿದೂರು ದಾಖಲಾಗಿದ್ದು, ತನಿಖೆ ನಡೆಸಿದ್ದಾರೆ.

ನಡೆದಿದ್ದೇನು?

ಹೋಟೆಲ್ ಸಿಬ್ಬಂದಿ ಮತ್ತು ಸ್ಥಳೀಯ ಯುವಕರ ಗುಂಪಿನ ನಡುವೆ ನಡೆದ ಈ ಗಲಾಟೆಗೆ ಡ್ರಗ್ಸ್ ಸೇವನೆ ಆರೋಪವೇ ಕಾರಣ ಎನ್ನಲಾಗಿದೆ. ಹೆಣ್ಣೂರು ಭಾಗದಿಂದ ಬಂದಿದ್ದ ಕೆಲ ಯುವಕರು ಹೋಟೆಲ್ ಬಳಿ ಸಿರಿಂಜ್ ಮೂಲಕ ಡ್ರಗ್ಸ್ ಇಂಜೆಕ್ಟ್ ಮಾಡಿಕೊಳ್ಳುತ್ತಿದ್ದರು ಎಂದು ಆರೋಪಿಸಲಾಗಿದೆ.

ಇದನ್ನು ಸಿಸಿ ಕ್ಯಾಮೆರಾಗಳ ಮೂಲಕ ಗಮನಿಸಿದ ಹೋಟೆಲ್ ಸಿಬ್ಬಂದಿ, ತಕ್ಷಣವೇ ಯುವಕರನ್ನು ಪ್ರಶ್ನಿಸಿದ್ದಾರೆ. ಅಲ್ಲದೆ, ಇನ್ನು ಮುಂದೆ ತಮ್ಮ ಹೋಟೆಲ್‌ಗೆ ಬರದಂತೆ ಯುವಕರ ಸಂಬಂಧಿಕರಿಗೂ ಮಾಹಿತಿ ನೀಡಿದ್ದಾರೆ. ಇದರಿಂದ ಕೆರಳಿದ ಯುವಕರ ಗುಂಪು, ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ: ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸಕ್ಕೆಂದು ಸಿದ್ಧಗಂಗಾ ಮಠಕ್ಕೆ ಬಂದಿದ್ದ ಭಕ್ತ ಸಾವು

ಹಲ್ಲೆಗೆ ಪ್ರತಿಯಾಗಿ ಹೋಟೆಲ್ ಸಿಬ್ಬಂದಿಯೂ ಯುವಕರ ಗ್ಯಾಂಗ್ ಮೇಲೆ ಹಲ್ಲೆ ನಡೆಸಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಗಲಾಟೆಯಲ್ಲಿ ಚೇರ್​ ಸೇರಿದಂತೆ ಕೈಗೆ ಸಿಕ್ಕಸಿಕ್ಕ ವಸ್ತುಗಳನ್ನು ಬಳಸಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಒಂದೇ ಬಿಲ್ಡಿಂನ್​ನಲ್ಲಿದ್ದ ಇಬ್ಬರು ಬಾಡಿಗೆದಾರರ ಮಧ್ಯೆ ಗಲಾಟೆ: ಹಲ್ಲೆ

ಒಂದೇ ಬಿಲ್ಡಿಂಗ್​ನಲ್ಲಿದ್ದ ಇಬ್ಬರು ಬಾಡಿಗೆದಾರರ ಮಧ್ಯೆ ಗಲಾಟೆ ಮತ್ತು ಹಲ್ಲೆ ನಡೆದಿರುವಂತಹ ಘಟನೆ ಬೆಂಗಳೂರು ಬ್ಯಾಡರಹಳ್ಳಿಯ ಸಿಂಡಿಕೇಟ್ ಬ್ಯಾಂಕ್ ಲೇಔಟ್​ನಲ್ಲಿ ನಡೆದಿದೆ. ಸಂತೋಷ್​ ಮತ್ತು ಶುಭ ದಂಪತಿ ಮೇಲೆ ಮತ್ತೊಂದು ಮನೆಯವರಿಂದ ಹಲ್ಲೆ ಮಾಡಲಾಗಿದೆ.

ಮನೆಯ ಕೆಳಗಡೆ ಕಾರು ಪಾರ್ಕ್ ಮಾಡುವ ವಿಚಾರಕ್ಕೆ ಪ್ರತಿನಿತ್ಯ ಕ್ಯಾತೆ ತೆಗೆಯುತ್ತಿದ್ದರು. ಒಬ್ಬರು ಬೈಕ್ ನಿಲ್ಲಿಸಬೇಕು, ಇನ್ನೊಬ್ಬರು ಕಾರು ನಿಲ್ಲಿಸಬೇಕೆಂದು ಗಲಾಟೆ ಮಾಡುತ್ತಿದ್ದರು. ನಿನ್ನೆ ಸಂಜೆ ಮನೆಯ ಕೆಳಗಡೆ ಸಂತೋಷ್ ಕಾರು ನಿಲ್ಲಿಸಲು ಬಂದಿದ್ದರು. ಅದೇ ಸ್ಥಳದಲ್ಲಿ ಮತ್ತೊಂದು ಮನೆಯ ರತ್ನಮ್ಮ ಎಂಬುವರು ಬೈಕ್ ನಿಲ್ಲಿಸಿದ್ದರು. ಅಲ್ಲಿದ್ದ ಬೈಕ್ ತೆಗೆಯಿರಿ ನಾನು ಕಾರು ನಿಲ್ಲಿಸಬೇಕು ಎಂದು ಸಂತೋಷ್ ಹೇಳಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಗಲಾಟೆ ನಡೆದಿದೆ.

ಇದನ್ನೂ ಓದಿ: ಪೊಲೀಸ್​ ಪಬ್ಲಿಕ್ ಪ್ರೆಸ್ ಆರ್ಮಿ ಹೆಸರಿಡಲು ಅಧಿಕಾರ ಕೊಟ್ಟವರ್ಯಾರು? ರೌಡಿಶೀಟರ್​​ ಅರ್ಜಿ ವಜಾ

ಕಾಂಕ್ರೀಟ್​ ಕ್ರಿಕೆಟ್​ ಸ್ಟಂಪ್​ ಮತ್ತು ದೊಣ್ಣೆಯಿಂದ ಸಂತೋಷ್​ ಮೇಲೆ ಹಲ್ಲೆ ಮಾಡಲಾಗಿದೆ. ಬಳಿಕ ಸಂತೋಷ್​ ಕಾರು ಡಿಕ್ಕಿ ಹೊಡೆಸಿ ​ಡ್ಯಾಮೇಜ್​ ಮಾಡಿದ್ದಾರೆ. ಗಲಾಟೆ ಮಾಡಿ ಮನಸೋ ಇಚ್ಚೆ ಹಲ್ಲೆ ನಡೆಸಿದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಸದ್ಯ ಸಂತೋಷ್​ ಕುಟುಂಬ ಬ್ಯಾಡರಹಳ್ಳಿ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ಗಲಾಟೆ, ಹಲ್ಲೆ ನಡೆಸಿದ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಗಾಯಾಳು ಸಂತೋಷ್​ ತಲೆಗೆ 10 ಸ್ಟಿಚ್​ ಹಾಕಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Chanakya Niti: ವೃತ್ತಿ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಚಾಣಕ್ಯರ ಈ ಮಾತುಗಳನ್ನು ಪಾಲಿಸಿ

ವೃತ್ತಿ ಜೀವನದಲ್ಲಿ (career) ಯಶಸ್ಸನ್ನು ಸಾಧಿಸಬೇಕೆಂಬ ಆಸೆ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಇದಕ್ಕಾಗಿ ಹಲವರು ಹಗಲಿರುಳು ಶ್ರಮಿಸುತ್ತಾರೆ. ಹೀಗೆ ಕಠಿಣ ಪರಿಶ್ರಮ ಪಟ್ಟರೂ ಹಲವರಿಗೆ ಯಶಸ್ಸು ಅನ್ನೋದು ಲಭಿಸೋದೇ ಇಲ್ಲ. ವೃತ್ತಿ ಜೀವನದ ಯಶಸ್ಸಿಗೆ ಕಠಿಣ ಪರಿಶ್ರಮವೊಂದೇ ಸಾಲುವುದಿಲ್ಲ, ಇದಕ್ಕಾಗಿ ಕೆಲವೊಂದು ಮೌಲ್ಯ, ತತ್ವಗಳನ್ನೂ ಅಳವಡಿಸಿಕೊಳ್ಳಬೇಕು ಎಂದಿದ್ದಾರೆ ಆಚಾರ್ಯ ಚಾಣಕ್ಯ. ಚಾಣಕ್ಯರು ಹೇಳಿರುವಂತೆ ವೃತ್ತಿ ಜೀವನದಲ್ಲಿ ಯಶಸ್ಸನ್ನು ಗಳಿಸಲು ಏನು ಮಾಡಬೇಕು, ಯಾವ ಸಲಹೆಗಳನ್ನು ಅಳವಡಿಸಿಕೊಳ್ಳಬೇಕು ಎಂಬುದನ್ನು ನೋಡೋಣ ಬನ್ನಿ.

ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸಲು ಏನು ಮಾಡಬೇಕು?

ಸಮಯದ ಮೌಲ್ಯವನ್ನು ಅರ್ಥಮಾಡಿಕೊಳ್ಳಿ: ಚಾಣಕ್ಯನ ಪ್ರಕಾರ, ಸಮಯವನ್ನು ಗೌರವಿಸದವರಿಗೆ ಯಶಸ್ಸು ಸಿಗುವುದಿಲ್ಲ. ಪ್ರತಿಯೊಂದು ಕೆಲಸವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವುದು ವೃತ್ತಿಜೀವನದ ಪ್ರಗತಿಗೆ ನಿರ್ಣಾಯಕವಾಗಿದೆ. ಕಳೆದುಹೋದ ಸಮಯವು ಭರಿಸಲಾಗದದು, ಆದ್ದರಿಂದ ಇಂದಿನ ಕೆಲಸಗಳನ್ನು ನಾಳೆಯವರೆಗೆ ಮುಂದೂಡುವ ತಪ್ಪನ್ನು ಎಂದಿಗೂ ಮಾಡಬೇಡಿ.

ನಿಮ್ಮ ದೌರ್ಬಲ್ಯ ಮತ್ತು ಸಾಮರ್ಥ್ಯಗಳನ್ನು ಗುರುತಿಸಿ: ಪ್ರಗತಿಗೆ ನಿಮ್ಮನ್ನು ನೀವು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ನೀವು ಯಾವುದರಲ್ಲಿ, ಯಾವ ಕೆಲಸದಲ್ಲಿ ಉತ್ತಮರಾಗಿದ್ದೀರಿ ಮತ್ತು ಎಲ್ಲಿ ಸುಧಾರಣೆ ಅಗತ್ಯವಿದೆ ಎಂಬುದನ್ನು ನೀವು ತಿಳಿದಿರಬೇಕು. ತಮ್ಮ ದೌರ್ಬಲ್ಯಗಳನ್ನು ಗುರುತಿಸಿ ಅವುಗಳನ್ನು ಸುಧಾರಿಸಿ ಮುಂದೆ ಸಾಗುವವರು ವೃತ್ತಿ ಜೀವನದ  ಓಟದಲ್ಲಿ ಮುಂದೆ ಇರುತ್ತಾರೆ ಎನ್ನುತ್ತಾರೆ ಚಾಣಕ್ಯ.

ನಿಮ್ಮ ಯೋಜನೆಗಳನ್ನು ಯಾರಿಗೂ ಹೇಳಬೇಡಿ: ಚಾಣಕ್ಯರು ಹೇಳುವಂತೆ ನಿಮ್ಮ ಮುಂದಿನ ನಡೆ ಅಥವಾ ಪ್ರಮುಖ ಯೋಜನೆ  ಪೂರ್ಣಗೊಳ್ಳುವವರೆಗೆ ಆ ಬಗ್ಗೆ  ಯಾರಿಗೂ ಹೇಳಬೇಡಿ. ಈ ವಿಚಾರಗಳನ್ನು ರಹಸ್ಯವಾಗಿ ಇಟ್ಟುಕೊಳ್ಳುವುದರಿಂದ ನಿಮ್ಮ ಸಹೋದ್ಯೋಗಿಗಳು ಅಥವಾ ವಿರೋಧಿಗಳು ನಿಮ್ಮ ಪ್ರಗತಿಗೆ ಅಡ್ಡಿಯಾಗದಂತೆ ತಡೆಯಬಹುದು. ಜೊತೆಗೆ ನೀವು ಯಾವುದೇ ತೊಂದರೆಗಳಿಲ್ಲದೆ ಯಶಸ್ಸನ್ನು ಸಾಧಿಸಲು ಸಾಧ್ಯವಾಗುತ್ತದೆ ಎನ್ನುತ್ತಾರೆ ಚಾಣಕ್ಯ.

ಇದನ್ನೂ ಓದಿ: ತಂದೆಯ ತಪ್ಪುಗಳು ಮಗಳ ಭವಿಷ್ಯವನ್ನೇ ಹಾಳು ಮಾಡುತ್ತದೆ ಎನ್ನುತ್ತಾರೆ ಚಾಣಕ್ಯ

 ಪ್ರಾಮಾಣಿಕತೆ: ನಿಮ್ಮ ಕೆಲಸದಲ್ಲಿ ಪ್ರಾಮಾಣಿಕರಾಗಿರಿ. ಶಾರ್ಟ್‌ಕಟ್‌ಗಳ ಮೂಲಕ ಸಾಧಿಸಿದ ಗೆಲುವು ಎಂದಿಗೂ ಶಾಶ್ವತವಲ್ಲ ಎನ್ನುತ್ತಾರೆ ಆಚಾರ್ಯ ಚಾಣಕ್ಯರು. ವೃತ್ತಿ ಜೀವನದಲ್ಲಿ ಯಾವುದೇ ಅಡೆತಡೆಗಳು ಎದುರಾಗಬಾರದು ಎಂದರೆ ಪ್ರಾಮಾಣಿಕವಾಗಿ ಕೆಲಸ ಮಾಡಿ.

ವೈಫಲ್ಯಕ್ಕೆ ಹೆದರಬೇಡಿ, ಅಪಾಯಗಳನ್ನು ತೆಗೆದುಕೊಳ್ಳಲು ಕಲಿಯಿರಿ: ಕೆಲವೊಮ್ಮೆ, ನಿಮ್ಮ ವೃತ್ತಿಜೀವನದಲ್ಲಿ ದೊಡ್ಡ ಪ್ರಗತಿ ಸಾಧಿಸಲು ನೀವು ಅಪಾಯಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಚಾಣಕ್ಯನ ಪ್ರಕಾರ, ವೈಫಲ್ಯದ ಭಯದಿಂದ ಹೊಸ ಹೆಜ್ಜೆಗಳನ್ನು ಇಡಲು ಹಿಂದೇಟು ಹಾಕುವ ವ್ಯಕ್ತಿಯು ಎಂದಿಗೂ ಯಶಸ್ಸನ್ನು ಸಾಧಿಸುವುದಿಲ್ಲ. ನಿಮ್ಮ ತಪ್ಪುಗಳಿಂದ ಕಲಿಯಿರಿ ಮತ್ತು ಧೈರ್ಯದಿಂದ ಮುಂದುವರಿಯಿರಿ. ಆಗ ಮಾತ್ರ ವೃತ್ತಿ ಜೀವನದಲ್ಲಿ ಯಶಸ್ಸನ್ನು ಗಳಿಸಲು ಸಾಧ್ಯ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಉಪೇಂದ್ರ ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ರಿಯಲ್ ಸ್ಟಾರ್

ನಟ, ನಿರ್ದೇಶಕ ಉಪೇಂದ್ರ ಅವರು ಮತ್ತೆ ಪ್ರಜಾಕೀಯ (Prajaakeeya) ಕೆಲಸಗಳಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಇಂದು (ಏಪ್ರಿಲ್ 1) ಅವರು ‘ದಿ ರಿಯಲ್ ಪ್ರಜಾಕೀಯ’ ಆ್ಯಪ್ ಬಿಡುಗಡೆ ಮಾಡಿದರು. ಈ ವೇಳೆ ಅವರು ಸುದ್ದಿಗೋಷ್ಠಿ ನಡೆಸಿದರು. ಮಾಧ್ಯಮದ ಪ್ರಶ್ನೆಗಳಿಗೆ ಉತ್ತರ ನೀಡಿದರು. ಉಪೇಂದ್ರ ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂಬ ಪ್ರಶ್ನೆ ಎದುರಾಯಿತು. ‘ಭಯ ಇದ್ದಿದ್ದರೆ ನಾನು ಇಷ್ಟೆಲ್ಲ ಮಾಡುತ್ತ ಇರಲಿಲ್ಲ. ನನಗೆ ಆದಾಗ ನಾನು ಸ್ಪರ್ಧೆ ಮಾಡುತ್ತೇನೆ. ಇಲ್ಲ ಅಂತ ನಾನು ಹೇಳಿಲ್ಲ. ನೋಡೋಣ, ನನಗೂ ಟೈಮ್ ಸಿಗಬೇಕು. ನಾನು ಬಿಡುವು ಮಾಡಿಕೊಳ್ಳಬೇಕು. ಕಾರ್ಯಕರ್ತನ ರೀತಿ ಕೆಲಸ ಮಾಡಬೇಕು. ನಿಮ್ಮನ್ನೆಲ್ಲ ಭೇಟಿ ಮಾಡಿ ಅಭಿಪ್ರಾಯ ಕೇಳಬೇಕು. ಆ ಸಾಮರ್ಥ್ಯ ನನಗೆ ಇದೆಯಾ ಎಂಬುದನ್ನು ನೋಡಿಕೊಂಡು ಬರುತ್ತೇನೆ’ ಎಂದು ಉಪೇಂದ್ರ (Upendra) ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link