All posts by nagaraj11081993

ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ್ರೆ ಇನ್ನೇನಾಗುತ್ತೆ: ಇನ್ಸ್‌ಪೆಕ್ಟರ್​​ಗೆ ಹೈಕೋರ್ಟ್ ತರಾಟೆ

ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ್ರೆ ಇನ್ನೇನಾಗುತ್ತೆ: ಇನ್ಸ್‌ಪೆಕ್ಟರ್​​ಗೆ ಹೈಕೋರ್ಟ್ ತರಾಟೆ

ಬೆಂಗಳೂರು/ಮಂಗಳೂರು, (ಮೇ 01): ಅಮಾನತುಗೊಂಡ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ ಪ್ರಕರಣ ರಾಜ್ಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದೆ. ಶಿಕ್ಷಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಂದೇಶ್ ವಿರುದ್ದ ಹೊಸ ಎಫ್ಐಆರ್ ದಾಖಲಾಗಿದೆ. ಇದೀಗ ಈ ಪ್ರಕರಣವನ್ನು ರದ್ದುಕೋರಿ ಸಂದೇಶ ಹೈಕೋರ್ಟ್ (Karnataka High Court) ಮೆಟ್ಟಿಲೇರಿದ್ದಾರೆ. ಆದ್ರೆ, ಹೈಕೋರ್ಟ್​, ಇನ್ಸ್‌ಪೆಕ್ಟರ್ ಮಾಡಿರುವುದು ಅಧಿಕಾರದ ದುರುಪಯೋಗವಲ್ಲವೇ? ದೂರು ಕೊಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ್ರೆ ಇನ್ನೇನಾಗುತ್ತೆ ಎಂದು ಸಂದೇಶ್​​ಗೆ ತರಾಟೆಗೆ ತೆಗೆದುಕೊಂಡಿದ್ದು, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿ ವಿಚಾರಣೆಯನ್ನು ಮುಂದೂಡಿದೆ.

ಮಹಿಳೆ ದಾಖಲಿಸಿದ ಅತ್ಯಾಚಾರ ಪ್ರಕರಣ ರದ್ದು ಕೋರಿ ಅಮಾನತುಗೊಂಡ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದ್ದು, ಈ ವೇಳೆ ಇನ್ಸ್​ಪೆಕ್ಟರ್ ಪರ ವಕೀಲ ವಾದ ಮಾಡಿ, ಮಹಿಳೆಯೊಂದಿಗೆ ಒಪ್ಪಿತ ಸಂಬಂಧವಿತ್ತು. ಇನ್ಸ್‌ಪೆಕ್ಟರ್ ವಿರುದ್ಧದ ಅತ್ಯಾಚಾರ ಆರೋಪಕ್ಕೆ ಆಧಾರಗಳಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್​​ಗೆ ಬಿಗ್​​ ಶಾಕ್​​: ಅತ್ಯಾಚಾರ ಪ್ರಕರಣ ದಾಖಲು

ಸಂದೇಶ್​​​ಗೆ ಹೈಕೋರ್ಟ್​ ತರಾಟೆ

ಇನ್ಸ್‌ಪೆಕ್ಟರ್ ಮಾಡಿರುವುದು ಅಧಿಕಾರದ ದುರುಪಯೋಗವಲ್ಲವೇ? ದೂರು ಕೊಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ್ರೆ ಇನ್ನೇನಾಗುತ್ತೆ ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಖಾರವಾಗಿ ಪ್ರಶ್ನಿಸಿ ವಿಚಾರಣೆಯನ್ನು ಏಪ್ರಿಲ್ 6ಕ್ಕೆ ಮುಂದೂಡಿದೆ. ಅಲ್ಲದೇ ಅಲ್ಲಿಯವರೆಗೆ ಬಂಧಿಸದಂತೆ ಮಧ್ಯಂತರ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಇದರಿಂದ ಸಂದೇಶ್​​​ಗೆ ಬಂಧನದ ಭೀತಿ ಶುರುವಾಗಿದೆ.

ಪ್ರಕರಣದ ಹಿನ್ನೆಲೆ

ಸಂತ್ರಸ್ತೆ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಮೂಡಿಬಿದಿರೆ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್ ವಿರುದ್ದ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣೆಯಲ್ಲಿ ಬಿಎನ್ ಎಸ್ 376(2)(A)(1), 376(2)(n), 384, 506 ಅಡಿ ಎಫ್ಐಆರ್ ದಾಖಲಾಗಿದೆ. ಈಗಾಗಲೇ ಮಹಿಳೆಯರನ್ನು ಲೈಂಗಿಕವಾಗಿ ಪೀಡಿಸಿದ ಆರೋಪ ಸಂದೇಶ್ ಮೇಲಿದೆ. ಇತ್ತೀಚೆಗೆ ಇಬ್ಬರು ಮಹಿಳೆಯರು ಮಾಡಿದ್ದ ಆರೋಪ ಬಾರಿ ಚರ್ಚೆಯಾಗಿತ್ತು. ಆದರೆ ಪೊಲೀಸ್ ಪ್ರಾಥಮಿಕ ತನಿಖೆಯಲ್ಲಿ ಇದು ಪ್ರಚೋದಿತ ಹಾಗೂ ಸುಳ್ಳು ಆರೋಪ ಎಂದು ಕೇಳಿಬಂದಿತ್ತು. ಇದರ ಬೆನ್ನಲ್ಲೇ ಶಿಕ್ಷಕಿಯೊಬ್ಬರು ದೂರು ನೀಡಿದ್ದು ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್, 2018 ರಿಂದ 2023ರ ವರೆಗೆ ಮನೆಗೆ ಬಂದು ಅತ್ಯಾಚಾರ ಮಾಡಿರುವುದಾಗಿ ಸ್ವತಃ ಶಿಕ್ಷಕಿ ಆರೋಪಿಸಿದ್ದಾರೆ. ಹಲವು ಕಾರಣಗಳನ್ನು ಹಿಡಿದು, ಕೆಲ ಪ್ರಕರಣಗಳ ಕುರಿತು ಬೆದರಿಸಿ ನಿರಂತರವಾಗಿ ಅತ್ಯಾಚಾರ ಮಾಡಿದ್ದಾರೆ. 2018 ರಿಂದ 2023ರವರೆಗೆ ಸತತ 5 ವರ್ಷಗಳ ಕಾಲ ಅತ್ಯಾಚಾರ ಎಸಗಿದ್ದಾರೆ. ಜೀವ ಭಯ, ಮಾನ, ಕುಟುಂಬಸ್ಥರ ವಿರುದ್ಧವೂ ಬೆದರಿಕೆ ಹಾಕಿದ್ದ ಕಾರಣ ಮೌನವಾಗಿದ್ದೆ ಎಂದು ಶಿಕ್ಷಕಿ ದೂರಿನಲ್ಲಿ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಡಿಕ್ಕಿ ಹೊಡೆದ ರಭಸಕ್ಕೆ ಹೊತ್ತಿಉರಿದ ಕಾರು: ಮೂವರು ಸಜೀವದಹನ, ಓರ್ವ ಗಂಭೀರ

ತುಮಕೂರು, ಏಪ್ರಿಲ್​ 01: ಭೀಕರ ಅಪಘಾತಕ್ಕೆ ಕಾರೊಂದು ಹೊತ್ತಿಉರಿದಿದ್ದು, ಮೂವರು ಸಜೀವದಹನವಾಗಿರುವಂತಹ (death) ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ಕೋರಗೆರೆ ಸೇತುವೆ ಮೇಲೆ ನಡೆದಿದೆ. ಮೃತರು ಗುಬ್ಬಿ ತಾಲೂಕಿನವರು ಎನ್ನಲಾಗುತ್ತಿದೆ. ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಸದ್ಯ ಗಾಯಾಳನ್ನು ಹತ್ತಿರದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹುಳಿಯಾರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನಡೆದಿದ್ದೇನು?

ನಾಲ್ವರು ಇಂದು ಪಂಚಣಿಯಹಳ್ಳಿ ಹತ್ತಿರದ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದುಕೊಂಡು ವಾಪಸ್​ ಆಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಸೇತುವೆಯ ತಡೆಗೊಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಕಾರಿನಲ್ಲಿದ್ದ ಮೂವರು ಸಜೀವದಹನವಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದ್ದು,  ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಕಸ್ಮಿಕ ಬೆಂಕಿ: ಕುರಿಗಾಹಿ ಸೇರಿ 45 ಕುರಿಗಳು ಸಜೀವದಹನ

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೊರಾಳ ಗ್ರಾಮದಲ್ಲಿ ತಡರಾತ್ರಿ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಗೆ ಕುರಿಗಾಹಿ ಸೇರಿದಂತೆ ಸುಮಾರು 45 ಕುರಿಗಳು ಸಜೀವ ದಹನಗೊಂಡಿರುವಂತಹ ಘಟನೆ ನಡೆದಿದೆ. ಶಂಕರ ಮೇತ್ರ (65) ಮೃತ ವ್ಯಕ್ತಿ. ಪ್ರಾಥಮಿಕ ತನಿಖೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಥವಾ ಬೇರೆ ಆಕಸ್ಮಿಕ ಕಾರಣದಿಂದ ಬೆಂಕಿ ತಗುಲಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ತನ್ನದೇ ಟೆಂಪೋದಲ್ಲಿ ಶವವಾಗಿ ಪತ್ತೆಯಾದ ಮಾಲೀಕ: ಸಾವಿನ ಸುತ್ತ ಅನುಮಾನದ ಹುತ್ತ

ಇನ್ನು ಈ ಘಟನೆ ಔರಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಮಾಹಿತಿ ದೊರಯುತ್ತಿದ್ದಂತೆ ಬೀದರ್ ಎಸ್ಪಿ ಪ್ರದೀಪ್ ಗುಂಟೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಘಟನೆಯ ನಿಖರ ಕಾರಣ ಸ್ಪಷ್ಟವಾಗಿಲ್ಲ.

ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ. ಬೈಕ್‌ನಲ್ಲಿ ಪೊಲೀಸ್ ಠಾಣೆಗೆ ಹೊರಟ್ಟಿದ್ದ ಶ್ರೀನಿವಾಸ್(54) ಮೃತ ವ್ಯಕ್ತಿ. ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಜೀಪ್ ಚಾಲಕರಾಗಿದ್ದರು. ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಗದಗ: ಎಗ್ಗಿಲ್ಲದೇ ನಡೀತಿದೆ ಅಕ್ರಮ ಮರಳು ಲೂಟಿ, ಸರ್ಕಾರಕ್ಕೆ ನಿತ್ಯ ಲಕ್ಷಾಂತರ ರೂ. ತೆರಿಗೆ ವಂಚನೆ

ಗದಗ, ಏಪ್ರಿಲ್ 1: ಗದಗ (Gadag) ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಮರಳು ಗಣಿಗಾರಿಕೆ ಎಗ್ಗಿಲ್ಲದೇ ಸಾಗಿದ್ದು, ಕಾನೂನಿನ ಭಯವಿಲ್ಲದೇ ಹಗಲು-ರಾತ್ರಿ ಮರಳು ಲೂಟಿ ಮಾಡಲಾಗುತ್ತಿದೆ. ಸಕ್ರಮದ ಪರವಾನಗಿ ಪಡೆದು ಅದರ ಮರೆಯಲ್ಲಿ ಅಕ್ರಮವಾಗಿ ಮರಳು ಸಾಗಿಸುವ ಮೂಲಕ ಸರ್ಕಾರಕ್ಕೆ ನಿತ್ಯ ಲಕ್ಷಾಂತರ ರೂಪಾಯಿ ತೆರಿಗೆ ವಂಚನೆ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಸಕ್ರಮದ ಹೆಸರಲ್ಲಿ ಅಕ್ರಮದ ಅಟ್ಟಹಾಸ

ನರಗುಂದ ತಾಲೂಕಿನ ವಾಸನ, ಕಲ್ಲಾಪುರ ಹಾಗೂ ಶಿರೋಳ ಗ್ರಾಮಗಳ ವ್ಯಾಪ್ತಿಯ ಪಟ್ಟಾ ಭೂಮಿಯಲ್ಲಿ ಮರಳು ತೆಗೆಯಲು ಸರ್ಕಾರದಿಂದ ಅನುಮತಿ ಪಡೆಯಲಾಗಿದೆ. ಆದರೆ, ನಿಯಮದ ಪ್ರಕಾರ 10-12 ಟನ್‌ಗೆ ಬಿಲ್ ಮಾಡಿ, ವಾಸ್ತವದಲ್ಲಿ 15-18 ಟನ್ ಮರಳನ್ನು ಓವರ್‌ಲೋಡ್ ಮಾಡಿ ಸಾಗಿಸಲಾಗುತ್ತಿದೆ. ಗಣಿಗಾರಿಕೆ ನಡೆಯುವ ಜಾಗದಲ್ಲಿ ಸಿಸಿ ಕ್ಯಾಮರಾ ಅಳವಡಿಸಿಲ್ಲ ಹಾಗೂ ವೇ-ಬ್ರಿಡ್ಜ್ (ತೂಕದ ಯಂತ್ರ) ವ್ಯವಸ್ಥೆಯೂ ಇಲ್ಲದೆ ಬೇಕಾಬಿಟ್ಟಿ ಲೂಟಿ ಮಾಡಲಾಗುತ್ತಿದೆ.

ಅಧಿಕಾರಿಗಳ ಎದುರಲ್ಲೇ ಸಾಗಾಟ!

ಅಚ್ಚರಿಯ ವಿಷಯವೆಂದರೆ, ಈ ಓವರ್‌ಲೋಡ್ ಟಿಪ್ಪರ್‌ಗಳು ನರಗುಂದ ಪೊಲೀಸ್ ಠಾಣೆ ಹಾಗೂ ತಹಶೀಲ್ದಾರ್ ಕಚೇರಿಯ ಮುಂದೆಯೇ ರಾಜಾರೋಷವಾಗಿ ಸಂಚರಿಸುತ್ತಿದ್ದರೂ ಅಧಿಕಾರಿಗಳು ಮಾತ್ರ ‘ಡೋಂಟ್ ಕೇರ್’ ಎನ್ನುತ್ತಿದ್ದಾರೆ. ಬೋಟ್ ಬಳಸಿ ಮರಳು ಫಿಲ್ಟರ್ ಮಾಡುವುದು ನಿಷೇಧವಿದ್ದರೂ, ಇಲ್ಲಿ ಬಹಿರಂಗವಾಗಿ ಬೋಟ್ ಬಳಸಿ ಮರಳು ತೆಗೆಯಲಾಗುತ್ತಿದೆ. ಅಧಿಕಾರಿಗಳು ಲೂಟಿಕೋರರೊಂದಿಗೆ ಕೈಜೋಡಿಸಿ ಕುಂಭಕರ್ಣ ನಿದ್ದೆಗೆ ಜಾರಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವಧಿ ಮುಗಿದರೂ ನಿಂತಿಲ್ಲ ದಂಧೆ

ವಾಸನ ಗ್ರಾಮದಲ್ಲಿ ಕೆಲವು ಪಟ್ಟಾ ಜಮೀನುಗಳ ಲೀಜ್ ಅವಧಿ ಮುಗಿದಿದ್ದರೂ ರಾತ್ರೋರಾತ್ರಿ ಮರಳು ಲೂಟಿ ಮುಂದುವರಿದಿದೆ. ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹಾಗೂ ಎಸಿ ಗಂಗಪ್ಪ ಅವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.

ಇದನ್ನೂ ಓದಿ: ಪ್ರತ್ಯೇಕ ಘಟನೆ: ರಜೆ ತಂದ ಆಪತ್ತು; ಈಜಲು ತೆರಳಿದ್ದ ಐವರು ಬಾಲಕರು ನೀರುಪಾಲು

ಜಿಲ್ಲಾಡಳಿತವೇ ಈ ದಂಧೆಗೆ ರಕ್ಷಣೆ ನೀಡುತ್ತಿದೆಯೇ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ. ಇನ್ನಾದರೂ ಜಿಲ್ಲಾಡಳಿತ ಎಚ್ಚೆತ್ತು ತೆರಿಗೆ ಕಳ್ಳರ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

LSG vs DC IPL 2026 Live Score: ಲಕ್ನೋ- ಡೆಲ್ಲಿ ಮುಖಾಮುಖಿ – Kannada News | Lucknow Super Giants vs Delhi Capitals IPL 2026 Live Cricket Score LSG vs DC Match on 1st April latest news in Kannada

ಐಪಿಎಲ್ 2026 ರ ಐದನೇ ಪಂದ್ಯವು ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. ಎರಡೂ ತಂಡಗಳು ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿವೆ. ಈ ಪಂದ್ಯದೊಂದಿಗೆ ಎರಡೂ ತಂಡಗಳು ತಮ್ಮ ಅಭಿಯಾನವನ್ನು ಪ್ರಾರಂಭಿಸುತ್ತವೆ. ರಿಷಭ್ ಪಂತ್ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮುನ್ನಡೆಸುತ್ತಿದ್ದರೆ, ಅಕ್ಷರ್ ಪಟೇಲ್ ದೆಹಲಿ ತಂಡವನ್ನು ಮುನ್ನಡೆಸುತ್ತಿದ್ದಾರೆ.

Source link

ಮಹತ್ವದ ಕಾರ್ಯಕ್ಕೆ ಕೈ ಹಾಕಿದ ಅಲ್ಲು ಅರ್ಜುನ್ ಅಭಿಮಾನಿಗಳು, ಎಲ್ಲರಿಗೂ ಮಾದರಿ

ಭಾರತದಲ್ಲಿ ಸಿನಿಮಾ (Cinema) ನಟರನ್ನು ಆರಾಧಿಸುವವರ ಸಂಖ್ಯೆ ಹೆಚ್ಚು. ಅದರಲ್ಲೂ ದಕ್ಷಿಣ ಭಾರತ ಚಿತ್ರರಂಗದಲ್ಲಿ ಈ ಸಂಸ್ಕೃತಿ ತುಸು ಹೆಚ್ಚಾಗಿಯೇ ಇದೆ. ದಕ್ಷಿಣದಲ್ಲಿ ಸ್ಟಾರ್ ನಟರುಗಳ ಅಭಿಮಾನಿಗಳು ಪರಸ್ಪರ ಕಿತ್ತಾಡುವುದು, ಜಗಳ ಮಾಡುವುದು, ಪರಸ್ಪರರ ನಟರ ನಿಂದನೆ ಮಾಡುವುದು, ಚಿತ್ರಮಂದಿರಗಳಲ್ಲಿ ಗಲಾಟೆ ಮಾಡುವುದು ಕೆಲವು ಸಂದರ್ಭದಲ್ಲಿ ಇದೇ ಕಾರಣಕ್ಕೆ ಕೊಲೆಗಳು ಸಹ ನಡೆದಿರುವುದು ಇದೆ. ಆದರೆ ತೀರಾ ಅಪರೂಪಕ್ಕೆ ಈ ಅಭಿಮಾನಿ ಸಂಘಗಳು ನಿಜಕ್ಕೂ ಸಮಾಜದಲ್ಲಿ ಬದಲಾವಣೆ ತರುವ ಕಾರ್ಯಗಳನ್ನು ಮಾಡುತ್ತವೆ. ಇದೀಗ ಅಲ್ಲು ಅರ್ಜುನ್ ಅವರ ಅಭಿಮಾನಿಗಳು ಈ ರೀತಿಯ ಒಂದು ಅಭಿನಂದನಾರ್ಹ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಅಭಿಮಾನಿ ಸಂಘಗಳು ಸಾಮಾನ್ಯವಾಗಿ ಸ್ಟಾರ್ ನಟನ ಹುಟ್ಟುಹಬ್ಬದಂದು ಅನ್ನದಾನ ಮಾಡುತ್ತಾರೆ, ತೀರ ಹೆಚ್ಚೆಂದರೆ ರಕ್ತದಾನ ಮಾಡುತ್ತಾರೆ. ಎಲ್ಲೋ ಕೆಲವರು ಸರ್ಕಾರಿ ಶಾಲೆ ಮಕ್ಕಳಿಗೆ ಪುಸ್ತಕ ಬ್ಯಾಗು ವಿತರಣೆ ಮಾಡುತ್ತಾರೆ. ಇವು ಸಹ ಒಳ್ಳೆಯ ಸಮಾಜ ಮುಖಿ ಕೆಲಸಗಳೇ ಆದರೆ ಇದೀಗ ಅಲ್ಲು ಅರ್ಜುನ್ ಅಭಿಮಾನಿಗಳು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದು, ಇಡೀ ಸಮಾಜದ ಮೇಲೆ ಪರಿಣಾಮ ಬೀರಬಹುದಾದಂಥಹ ಒಂದು ಕಾರ್ಯಕ್ಕೆ ಕೈ ಹಾಕಿದ್ದಾರೆ. ಅದುವೇ ಎಚ್​​ಪಿವಿ (HPV) ಲಸಿಕೆ ಅಭಿಯಾನ.

ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ (Cervical Cancer) ಉಂಟುಮಾಡುವ ಪ್ರಮುಖ ಕಾರಣಗಳಲ್ಲಿ ಒಂದಾದ HPV (ಹ್ಯೂಮನ್ ಪ್ಯಾಪಿಲೋಮವೈರಸ್) ಬಗ್ಗೆ ಜಾಗೃತಿ ಮೂಡಿಸಲು ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರ ಅಭಿಮಾನಿಗಳು ಮುಂದಾಗಿದ್ದಾರೆ. ಭಾರತ ಸರ್ಕಾರವು ದೇಶಾದ್ಯಂತ HPV ಲಸಿಕೆಯನ್ನು ಉತ್ತೇಜಿಸುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ 13 ರಿಂದ 16 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಈ ಲಸಿಕೆ ಉಚಿತವಾಗಿ ಲಭ್ಯವಿದೆ. ಇದರ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ‘ಅಲ್ಲು ಅರ್ಜುನ್ ಫ್ಯಾನ್ಸ್ ಅಸೋಸಿಯೇಷನ್’ ವಿಶೇಷ ಅಭಿಯಾನ ಕೈಗೆತ್ತಿಕೊಂಡಿದೆ.

ಇದನ್ನೂ ಓದಿ:ಜೂ ಎನ್​​ಟಿಆರ್-ನೀಲ್ ಸಿನಿಮಾಕ್ಕೆ ಜೊತೆಯಾದ ಹಾಲಿವುಡ್ ತಂಡ

ಪ್ರತಿ ವರ್ಷ ಒಂದು ಅರ್ಥಪೂರ್ಣ ಸಾಮಾಜಿಕ ಕಾರ್ಯ ಮಾಡಬೇಕು ಎನ್ನುವ ಅಲ್ಲು ಅರ್ಜುನ್ ಅವರ ಆಶಯದಂತೆ, ಈ ಬಾರಿ ಅಭಿಮಾನಿಗಳು HPV ಲಸಿಕೆ ಜಾಗೃತಿಯನ್ನು ತಮ್ಮ ಗುರಿಯನ್ನಾಗಿ ಮಾಡಿಕೊಂಡಿದ್ದಾರೆ. ಹಳ್ಳಿಗಳಲ್ಲಿ ಮತ್ತು ಅರೆ-ನಗರ ಪ್ರದೇಶಗಳಲ್ಲಿ ಈ ಆರೋಗ್ಯ ಸಮಸ್ಯೆಯ ಬಗ್ಗೆ ಅರಿವು ಕಡಿಮೆ ಇರುವುದರಿಂದ, ಅಲ್ಲಿನ ಜನರಿಗೆ ಲಸಿಕೆಯ ಪ್ರಾಮುಖ್ಯತೆಯನ್ನು ತಿಳಿಸುವುದು ಮತ್ತು ಉಚಿತ ಲಸಿಕೆಯ ಪ್ರಯೋಜನ ಪಡೆಯುವಂತೆ ಪ್ರೇರೇಪಿಸುವುದು ಅಭಿಮಾನಿಗಳ ಮುಖ್ಯ ಉದ್ದೇಶವಾಗಿದೆ.

ಅಭಿಮಾನಿ ಸಂಘವನ್ನು ಸಮಾಜದ ಒಳಿತಿಗಾಗಿ ಬಳಸುತ್ತಿರುವ ಅಲ್ಲು ಅರ್ಜುನ್ ಅವರ ಈ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಭಿಮಾನಿ ಸಂಘದ ಉದ್ದೇಶ ಕೇವಲ ಸ್ಟಾರ್ ನಟನ ಬೆಂಬಲ ಮಾತ್ರವಲ್ಲದೆ, ಸಮಾಜಕ್ಕೆ ಒಳ್ಳೆಯದನ್ನು ಮಾಡುವುದು ಕೂಡ ಆಗಿದೆ ಎಂದು ಈ ಅಭಿಯಾನ ಸಾಕ್ಷಿಯಾಗಲಿದೆ. ಅಭಿಮಾನಿಗಳು, ಕಟೌಟ್ ಕಟ್ಟಲು, ಹಾಲಿನಭಿಷೇಕ ಮಾಡಲು, ಚಿತ್ರಮಂದಿರಗಳನ್ನು ಸಿಂಗರಿಸಲು ಮಾತ್ರವಲ್ಲ, ಅವರನ್ನು ಸಮಾಜದ ಆಸ್ತಿಯನ್ನಾಗಿಸಬೇಕು ಎಂಬುದಕ್ಕೆ ಅಲ್ಲು ಅರ್ಜುನ್ ಮಾದರಿ ಹಾಕಿಕೊಟ್ಟಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬೈರತ್‌ನಲ್ಲಿ ಇಸ್ರೇಲ್ ನೌಕಾಪಡೆಯಿಂದ ಹಿಜ್ಬೊಲ್ಲಾದ ಕಮಾಂಡರ್ ಹತ್ಯೆ

ಟೆಹ್ರಾನ್, ಏಪ್ರಿಲ್ 1: ದಕ್ಷಿಣ ಲೆಬನಾನ್‌ನಲ್ಲಿ ಭಯೋತ್ಪಾದಕ ಗುಂಪಿನ ಮಿಲಿಟರಿ ಚಟುವಟಿಕೆಗೆ ಕಾರಣರಾಗಿದ್ದ ಹೆಜ್ಬೊಲ್ಲಾದ ಟಾಪ್ ಕಮಾಂಡರ್ ನಿನ್ನೆ ಬೈರತ್‌ನಲ್ಲಿ ನಡೆದ ಇಸ್ರೇಲ್ ನೌಕಾಪಡೆಯ ದಾಳಿಯಲ್ಲಿ (Israel Attack) ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಲೆಬನಾನ್ ರಾಜಧಾನಿಯಲ್ಲಿ ನಡೆದ ದಾಳಿಯಲ್ಲಿ ಹಜ್ ಯೂಸುಫ್ ಇಸ್ಮಾಯಿಲ್ ಹಶೆಮ್ ಸಾವನ್ನಪ್ಪಿದ್ದಾರೆ. ಅವರು ಸೆಪ್ಟೆಂಬರ್ 2024ರಲ್ಲಿ ಅಲಿ ಕರಕಿಯಿಂದ ದಕ್ಷಿಣದ ಟಾಪ್ ಕಮಾಂಡರ್ ಹುದ್ದೆಯನ್ನು ವಹಿಸಿಕೊಂಡರು.

ಈ ಬಗ್ಗೆ ಐಡಿಎಫ್ ಮಾಹಿತಿ ಪ್ರಕಟಿಸಿದ್ದು, ಇಸ್ರೇಲಿ ದಾಳಿಯಲ್ಲಿ ಹಿಜ್ಬೊಲ್ಲಾ ಕಮಾಂಡರ್ ಹಜ್ ಯೂಸುಫ್ ಇಸ್ಮಾಯಿಲ್ ಹಶೆಮ್ ಮೃತಪಟ್ಟಿದ್ದಾರೆ ಎಂದು ಘೋಷಿಸಿದೆ. ಹಶೆಮ್ ಅವರು 40 ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಹೆಜ್ಬೊಲ್ಲಾದ ಹಿರಿಯ ಕಮಾಂಡರ್ ಮತ್ತು ಭಯೋತ್ಪಾದಕ ಸಂಘಟನೆಯಲ್ಲಿ ಕೇಂದ್ರ ವ್ಯಕ್ತಿ ಎಂದು ಮಿಲಿಟರಿ ಹೇಳಿದೆ.


ಇರಾನ್‌ನೊಂದಿಗಿನ ಯುದ್ಧದ ನಡುವೆ ಯುದ್ಧಗಳು ಉಲ್ಬಣಗೊಂಡ ನಂತರ ಇಸ್ರೇಲ್‌ನಿಂದ ಕೊಲ್ಲಲ್ಪಟ್ಟ ಅತ್ಯಂತ ಹಿರಿಯ ಹಿಜ್ಬೊಲ್ಲಾ ಕಮಾಂಡರ್ ಹಶೆಮ್ ಆಗಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಚಿಯಾ, ಕಲ್ಲಂಗಡಿ ಬೆನ್ನಲ್ಲೇ ಕರಬೂಜಕ್ಕೂ ತಟ್ಟಿದ ಯುದ್ಧದ ಬಿಸಿ: ದರ ಕುಸಿತ, ಹೊಲದಲ್ಲೇ ಕೊಳೆಯುತ್ತಿರುವ ಹಣ್ಣು

ಬೀದರ್, ಏಪ್ರಿಲ್​ 01: ಗಲ್ಫ್​ ರಾಷ್ಟ್ರದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಸದ್ಯ ಕರಬೂಜ ಹಣ್ಣು (muskmelon) ಬೆಳೆಗಾರರಿಗೂ ತಟ್ಟಿದೆ. ಹೀಗಾಗಿ ಏಕಾಏಕಿ ಕರಬೂಜ ಹಣ್ಣಿನ ದರ ಕುಸಿತವಾಗಿದ್ದು, ರೈತರಿಗೆ ಸಂಕಷ್ಟ ತಂದೊಡ್ಡಿದೆ. ಉತ್ತಮ ಗುಣಮಟ್ಟದ ಕರಬೂಜ ಹಣ್ಣು ಮಾರಾಟವಾಗದೇ ಹೊಲದಲ್ಲಿಯೇ ಕೊಳೆಯುತ್ತಿದ್ದು, ರೈತರು ಕಂಗಾಲಾಗಿದ್ದಾರೆ.

ಕರಬೂಜ ಹಣ್ಣು ಮಾರಾಟದಲ್ಲಿ ಭಾರೀ ಕುಸಿತ

ಗಲ್ಫ್​ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ಬೀದರ್ ಜಿಲ್ಲೆಯ ಕರಬೂಜ ಹಣ್ಣು ಬೆಳೆಗಾರರಿಗೆ ತಟ್ಟಿದೆ. ಯುದ್ಧದ ಪರಿಣಾಮವಾಗಿ ರಫ್ತು ವ್ಯವಸ್ಥೆ ಅಸ್ತವ್ಯಸ್ತವಾಗಿದ್ದು, ಕರಬೂಜ ಹಣ್ಣು ಮಾರಾಟದಲ್ಲಿ ಭಾರೀ ಕುಸಿತ ಕಂಡುಬಂದಿದೆ. ಒಮ್ಮೆ ಉತ್ತಮ ಬೇಡಿಕೆ ಹೊಂದಿದ್ದ ಕರಬೂಜ ಹಣ್ಣು, ಇದೀಗ ಬೆಲೆ ಕುಸಿತದಿಂದ ರೈತರನ್ನು ಸಂಕಷ್ಟಕ್ಕೆ ತಳ್ಳಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಕರಬೂಜ ಕೆಜಿಗೆ ಕೇವಲ 4ರಿಂದ 5 ರೂಗೆ ಮಾರಾಟವಾಗುತ್ತಿದೆ.

ಇದನ್ನೂ ಓದಿ: ಇರಾನ್ ಯುದ್ಧದ ಪರಿಣಾಮ ಬೀದರ್ ಕಲ್ಲಂಗಡಿಗೂ ಇಲ್ಲ ಬೆಲೆ!

ಈ ದರದಲ್ಲಿ ಕಟಾವು ಮತ್ತು ಸಾಗಾಟ ವೆಚ್ಚ ಸಹ ಮರಳದ ಪರಿಸ್ಥಿತಿ ನಿರ್ಮಾಣವಾಗಿದೆ. ಆತಂಕಕಾರಿ ಸಂಗತಿ ಅಂದರೆ ಉತ್ತಮ ಗುಣಮಟ್ಟದ ಕರಬೂಜ ಇದ್ದರೂ ಖರೀದಿದಾರರ ಕೊರತೆಯಿಂದ ಹೊಲದಲ್ಲೇ ಕೊಳೆಯುವಂತಾಗಿದೆ. ಇದರಿಂದ ರೈತರಿಗೆ ಭಾರೀ ನಷ್ಟ ಉಂಟಾಗಿದೆ. ಜಿಲ್ಲೆಯ ಬಹುತೇಕ ಕರಬೂಜ ಬೆಳೆಗಾರರು ಈ ಸಂಕಷ್ಟವನ್ನು ಎದುರಿಸುತ್ತಿದ್ದು, ಸರ್ಕಾರದ ನೆರವಿಗೆ ಕಾದಿದ್ದಾರೆ.

ಜಿಲ್ಲೆಯೊಂದರಲ್ಲಿಯೇ ಸುಮಾರು 2 ಸಾವಿರಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಕರಬೂಜ ಬೆಳೆಯನ್ನ ಬೆಳೆಯುತ್ತಿದ್ದಾರೆ. ಔಷಧಿ ಗುಣಲಕ್ಷಣ ಹಾಗೂ ಪೌಷ್ಟಿಕಾಂಶ ಇರುವ ಗುಣಮಟ್ಟದ ಕರಬೂಜ, ಗಲ್ಫ್​ ರಾಷ್ಟ್ರಕ್ಕೆ ಹೆಚ್ಚಾಗಿ ರಫ್ತು ಆಗುತ್ತಿತ್ತು. ಈ ಕರಬೂಜ ಹಣ್ಣಿಗೆ ಅಂತಾರಾಷ್ಟ್ರಿಯ ಮಟ್ಟದಲ್ಲಿ ಬಹುಬೇಡಿಕೆ ಇದೆ.

ಕೈಕೊಟ್ಟ ಕರಬೂಜ ಬೆಳೆ

ಒಣ ಹವಾಮಾನದಲ್ಲಿ, ವಾರಕ್ಕೊಂದು ಬಾರಿ ತುಂತುರು ನೀರಾವರಿ ನೀಡಿದರೆ ಸಾಕು. 90 ರಿಂದ 100 ದಿನದಲ್ಲಿ ಫಸಲು ಬರುತ್ತದೆ. ಒಂದು ಎಕರೆ ಪ್ರದೇಶಕ್ಕೆ 40 ರಿಂದ 50 ಸಾವಿರ ರೂ ವೆಚ್ಚ ಬರಲಿದ್ದು, ಪೈರು ಬೆಳೆಸಿ ನಾಟಿ ಅಥವಾ ಬಿತ್ತನೆ ಬೀಜ ನೇರವಾಗಿ ಸಾಲು ಬಿಟ್ಟು ಬೆಳೆಯಬಹುದು. ಒಮ್ಮೆ ಮಾತ್ರ ರಾಸಾಯನಿಕ ಗೊಬ್ಬರ ನೀಡಿದರೆ ಸಾಕು. ಸ್ಥಳಿಯ ವಾತಾವರಣಕ್ಕೆ ಬೆಳೆಯಬಹುದಾದ ಬೆಳೆ ಇದಾಗಿದ್ದು ಹೀಗಾಗಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ವರ್ಷ ಕರಬೂಜ ಬೆಳೆದಿದ್ದರು. ಆದರೆ ಯುದ್ಧದಿಂದ ದರದಲ್ಲಿ ಭಾರಿ ಪ್ರಮಾಣದಲ್ಲಿ ಕುಸಿತವಾಗಿದ್ದು ಕಟಾವು ಮಾಡದೆ ಹಾಗೆಯೇ ಹೊಲದಲ್ಲಿ ಬಿಟ್ಟಿದ್ದಾರೆ. ಲಾಭದ ನಿರಿಕ್ಷೇಯಲ್ಲಿದ್ದ ರೈತರಿಗೆ ಕರಬೂಜ ಬೆಳೆ ಕೈಕೊಟ್ಟಿದ್ದು, ಸಾಲದ ಸುಳಿಗೆ ಸಿಲುಕುವಂತಾಗಿದೆ ಎಂದು ರೈತ ಅವಿನಾಶ ಅಳಲು ತೋಡಿಕೊಂಡದ್ದಾರೆ.

ಇದನ್ನೂ ಓದಿ: ಚಿಯಾ ಬೆಳೆಗಾರರಿಗೆ ತಟ್ಟಿದ ಯುದ್ಧದ ಬಿಸಿ: ಸರ್ರನೆ ಕುಸಿದ ದರ; ಬೀದರ್​​ ರೈತರು ಕಂಗಾಲು

ಜಿಲ್ಲೆಯ ಬಹುತೇಕ ರೈತರು ಕಲ್ಲಂಗಡಿ ಹಾಗೂ ಕರಬೂಜ ಕೃಷಿಯಲ್ಲಿ ತೊಡಗಿದ್ದಾರೆ. ಒಮ್ಮೆ ನಾಟಿ ಮಾಡಿದ ನಂತರ ಯಾವುದೇ ಖರ್ಚು ಇಲ್ಲದೇ ಶೂನ್ಯ ಬಂಡವಾಳದಲ್ಲಿ ಬೆಳೆಯುವ ಬೆಳೆ ಇದಾಗಿದೆ. ಆದರೆ ಯುದ್ದದಿಂದಾಗಿ ದರ ಕುಸಿತವಾಗಿದ್ದು, ರೈತರನ್ನ ಕಂಗಾಲು ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮನೆದಲ್ಲಿ ಹಿರಿಯರು ಇದ್ದಾರಾ? ಹಾಗಿದ್ರೆ ನೀವು ಈ ಸಲಹೆಗಳನ್ನು ಅನುಸರಿಸಲೇಬೇಕು

ಮನೆಯಲ್ಲಿ ಹಿರಿಯರಿದ್ದರೆ ಮನೆ ಮಂದಿಗೆಲ್ಲಾ ಒಂದು ರೀತಿಯ ಸಂತೋಷ. ಆದರೆ ಅವರ ಜೊತೆ ಕಾಲಕಳೆಯುವುದರ ಜೊತೆಗೆ ಅವರ ಆರೋಗ್ಯದ ಕಡೆ ವಿಶೇಷ ಗಮನ ನೀಡುವುದು ಅತ್ಯಂತ ಮುಖ್ಯವಾಗುತ್ತದೆ. ಏಕೆಂದರೆ ವಯಸ್ಸು ಹೆಚ್ಚಾಗುತ್ತಿದ್ದಂತೆ ಹಲವಾರು ರೀತಿಯ ಕಾಯಿಲೆಗಳು ಬರುವ ಅಪಾಯ ಕೂಡ ಹೆಚ್ಚಾಗಿಯೇ ಇರುತ್ತದೆ. ಹಾಗಾಗಿ ಹಿರಿಯರ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಲು ಏನು ಮಾಡಬೇಕು ಎಂಬುದರ ಕುರಿತು ತಿಳಿದುಕೊಂಡಿರುವುದು ಬಹಳ ಮುಖ್ಯವಾಗುತ್ತದೆ. ವಯೋವೃದ್ಧರಲ್ಲಿ ಹೈ ಬಿಪಿ (Hypertension), ಶುಗರ್, ಎಲುಬಿನ ನೋವು ಮತ್ತು ನೆನಪಿನ ಶಕ್ತಿ ಕುಂದುವುದು ಮುಂತಾದ ಸಮಸ್ಯೆಗಳು ಸಾಮಾನ್ಯವಾಗಿರುತ್ತವೆ. ವೈದ್ಯರ ಪ್ರಕಾರ, ಕೆಲವು ಸರಿಯಾದ ಅಭ್ಯಾಸಗಳನ್ನು ಅನುಸರಿಸಿದರೆ ಹಿರಿಯರು ದೀರ್ಘಕಾಲ ಆರೋಗ್ಯಕರ ಜೀವನ ನಡೆಸಬಹುದು ಮತ್ತು ಹಲವು ಕಾಯಿಲೆಗಳಿಂದ ದೂರವಿರಬಹುದು. ಹಾಗಾದರೆ ಅವರ ಆರೋಗ್ಯವನ್ನು ಯಾವ ರೀತಿ ಕಾಪಾಡಿಕೊಳ್ಳಬೇಕು, ಎಷ್ಟು ದಿನಗಳಿಗೊಮ್ಮೆ ಆರೋಗ್ಯ ತಪಾಸಣೆ ನಡೆಸಬೇಕು ಎಂಬುದರ ಬಗ್ಗೆ ತಿಳಿದುಕೊಂಡಿರಬೇಕಾಗುತ್ತದೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಸರಿಯಾದ ಆಹಾರ ಅತ್ಯಾವಶ್ಯಕ:

ಡಾ. ಪ್ರಸೂನ್ ಅವರ ಪ್ರಕಾರ, ಹಿರಿಯರನ್ನು ಕಾಯಿಲೆಗಳಿಂದ ರಕ್ಷಿಸುವುದಷ್ಟೇ ಅಲ್ಲ, ಇದ್ದ ಕಾಯಿಲೆಗಳ ಸರಿಯಾದ ನಿರ್ವಹಣೆಯೂ ಮುಖ್ಯವಾಗುತ್ತದೆ. ಎಲ್ಲವೂ ಔಷಧಿಗಳಿಂದ ಮಾತ್ರ ಸರಿಯಾಗಬೇಕೆಂದಿಲ್ಲ. ಹಲವಾರು ಸಂದರ್ಭಗಳಲ್ಲಿ ಸರಿಯಾದ ಆಹಾರ ಪದ್ಧತಿ ಆರೋಗ್ಯದಲ್ಲಿ ಮಹತ್ವದ ಬದಲಾವಣೆ ತರುತ್ತದೆ. ಅದರಲ್ಲಿಯೂ ಹಿರಿಯರ ಆಹಾರದಲ್ಲಿ ಪ್ರೋಟೀನ್, ಫೈಬರ್ ಮತ್ತು ವಿಟಮಿನ್‌ಗಳು ಸಮರ್ಪಕವಾಗಿ ಇರಬೇಕು. ಹಸಿರು ತರಕಾರಿ, ಹಣ್ಣು ಮತ್ತು ಬೇಳೆಗಳನ್ನು ಆಹಾರದಲ್ಲಿ ಇರುವಂತೆ ನೋಡಿಕೊಳ್ಳಬೇಕು. ಬೆಳಗಿನ ಉಪಾಹಾರವನ್ನು ಸಮಯಕ್ಕೆ ಸರಿಯಾಗಿ ನೀಡಬೇಕು ಮತ್ತು ರಾತ್ರಿ ತಡವಾಗಿ ಊಟ ಕೊಡಬಾರದು.

ಇದನ್ನೂ ಓದಿ: ಕುತ್ತಿಗೆಯ ಭಾಗದಲ್ಲಿ ಕಪ್ಪಾಗುವುದಕ್ಕೆ ಕಾರಣವೇನು? ಇದು ಯಾವ ಕಾಯಿಲೆಯ ಮುನ್ಸೂಚನೆ?

ಹಿರಿಯರ ಜೊತೆ ಹೆಚ್ಚು ಸಮಯ ಕಳೆಯಿರಿ:

ಹಿರಿಯರ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವೂ ಬಹಳ ಮುಖ್ಯ. ಆದ್ದರಿಂದ ಅವರೊಂದಿಗೆ ಸಮಯ ಕಳೆಯುವುದು ಅಗತ್ಯ. ಅವರ ಮಾತುಗಳನ್ನು ಕೇಳಿ, ನಿಮ್ಮ ಮಾತುಗಳನ್ನು ಅವರೊಂದಿಗೆ ಹಂಚಿಕೊಳ್ಳಿ. ಅವರಿಗೆ ಏಕಾಂಗಿ ಭಾವನೆ ಉಂಟಾಗದಂತೆ ನೋಡಿಕೊಳ್ಳಿ. ಏಕಾಂಗಿಯಾಗಿದ್ದೇನೆ ಎನಿಸುವುದು ಮಾನಸಿಕ ಒತ್ತಡ ಮತ್ತು ಡಿಪ್ರೆಶನ್ ಸಮಸ್ಯೆಗಳನ್ನು ಹೆಚ್ಚಿಸಬಹುದು. ಹಾಗಾಗಿ ಕುಟುಂಬದ ಸದಸ್ಯರು ಅವರೊಂದಿಗೆ ಮಾತನಾಡಬೇಕು.

ನಿಯಮಿತ ಆರೋಗ್ಯ ತಪಾಸಣೆ ಅಗತ್ಯ:

ಹಿರಿಯರಲ್ಲಿ ಕಂಡುಬರುವ ಯಾವುದೇ ಆರೋಗ್ಯ ಸಮಸ್ಯೆಯನ್ನು ನಿರ್ಲಕ್ಷಿಸಬಾರದು. ಸಮಯಕ್ಕೆ ಸರಿಯಾಗಿ ವೈದ್ಯರ ಸಲಹೆ ಪಡೆಯಬೇಕು ಮತ್ತು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಬೇಕು. ಇದರಿಂದ ಕಾಯಿಲೆಗಳನ್ನು ಆರಂಭದಲ್ಲೇ ಗುರುತಿಸಿ ಸರಿಯಾದ ಚಿಕಿತ್ಸೆ ಪಡೆಯಬಹುದು. ಮನೆದಲ್ಲಿ ಹಿರಿಯರ ಸುರಕ್ಷತೆ ಅತ್ಯಂತ ಮುಖ್ಯ. ಸರಿಯಾದ ಆಹಾರ, ಪ್ರೀತಿ ಮತ್ತು ಕಾಳಜಿ, ಹಾಗೂ ಸುರಕ್ಷಿತ ಪರಿಸರದಿಂದ ಹಿರಿಯರ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ

ದಾವಣಗೆರೆ, (ಮೇ 01): ಕರ್ನಾಟಕದಲ್ಲಿ ಎರಡು ವಿಧಾನಭಾ ಕ್ಷೇತ್ರಗಳ ಉಪಚುನಾವಣೆ ರಂಗೇರಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ತಮ್ಮ ಅಭ್ಯರ್ಥಿ ಗೆಲುವಿಗೆ ಬಿರು ಬಿಸಿಲಿನಲ್ಲೂ ಗಲ್ಲಿ ಗಲ್ಲಿ ಸುತ್ತುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಸಹ ಬಾಗಲಕೋಟೆಯಲ್ಲಿ ಮೂರು ದಿನ ತಮ್ಮ ಅಭ್ಯರ್ಥಿ ಉಮೇಶ್ ಮೇಟಿ ಪರವಾಗಿ ಭರ್ಜರಿ ಪ್ರಚಾರ ಮಾಡಿ ಇದೀಗ ದಾವಣೆಗೆರೆ ಅಖಾಡಕ್ಕಿಳಿದಿದ್ದಾರೆ. ಹೌದು…ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಾಗಲಕೋಟೆ ಮುಗಿಸಿಕೊಂಡು ಇಂದು (ಮೇ 01) ದಾವಣಗೆರೆಗೆ ಕಾಲಿಟ್ಟಿದ್ದು, ತಮ್ಮ ಅಭ್ಯರ್ಥಿ ಸಮರ್ಥ್ ಪರವಾಗಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಆದ್ರೆ, ಕಾರ್ಯಕರ್ತರು ಸಿಎಂ ಅವರನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲು ಪಟಾಕಿ ಹಚ್ಚಲು ರೆಡಿ ಮಾಡಿಕೊಂಡಿದ್ದರು. ಆದ್ರೆ, ಪಟಾಕಿ ಹಚ್ಚಲು ಅವಕಾಶ ಸಿಗದಿದಕ್ಕೆ ಯುವರು ಕೊಂಚ ಅಸಮಧಾನಗೊಂಡಿದ್ದು, ನಮ್ಮೂರಲ್ಲಿ ಜಾಸ್ತಿ ಹೊತ್ತು ಭಾಷಣ ಮಾಡಿಲ್ಲ ಎಂದು ಅಭಿಮಾನಿಯೋರ್ವ ಪ್ರೀತಿಯಿಂದ ಸಿದ್ದರಾಮಯ್ಯನವರಿಗೆ ಹೇಳಿದ ಪ್ರಸಂಗ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮದುವೆಯಾದರೂ ಡೇಟಿಂಗ್ ಆ್ಯಪ್ ಬಳಸುವವರಲ್ಲಿ ಬೆಂಗಳೂರಿಗೆ ನಂಬರ್ 1 ಸ್ಥಾನ!

ಬೆಂಗಳೂರು, ಏಪ್ರಿಲ್ 1: ಮದುವೆಯಾದರೂ ಡೇಟಿಂಗ್ ಆ್ಯಪ್ (Dating App) ಬಳಸುವವರ ಸಂಖ್ಯೆ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಎಂಬ ಆತಂಕಕಾರಿ ಸಂಗತಿಯನ್ನು ಸಮೀಕ್ಷೆಯೊಂದು ಬೆಳಕಿಗೆ ತಂದಿದೆ. ಮದುವೆಯಾದರೂ ತಮ್ಮ ಅಕ್ರಮ ಸಂಬಂಧಕ್ಕಾಗಿ ಡೇಟಿಂಗ್ ಆ್ಯಪ್ ಮೂಲಕ ಸಂಗಾತಿಯನ್ನು ಹೊಂದುವವರ ಸಂಖ್ಯೆಯಲ್ಲಿ ಬೆಂಗಳೂರು (Bengaluru) ಭಾರತದಲ್ಲಿ ನಂಬರ್ 1 ಸ್ಥಾನದಲ್ಲಿದೆ. ಇದರಲ್ಲಿ 30-45 ವರ್ಷ ವಯಸ್ಸಿನ ಬಳಕೆದಾರರ ಸಂಖ್ಯೆ ಗಣನೀಯವಾಗಿದೆ. ಗ್ಲೀಡೆನ್‌ ಎಂಬ ಆ್ಯಪ್ ಮಾಡಿರುವ ಸಮೀಕ್ಷೆ ಈ ವಿಷಯವನ್ನು ಬಹಿರಂಗಪಡಿಸಿದೆ. ತಂತ್ರಜ್ಞಾನ ಮುಂದುವರೆದಂತೆ ಅದರಿಂದಾಗುವ ಅಡ್ಡಪರಿಣಾಮಗಳೂ ಕಡಿಮೆಯೇನಿಲ್ಲ ಎಂಬುದಕ್ಕೆ ಇದೊಂದು ನಿದರ್ಶನ. ಈ ಅಧ್ಯಯನ ಕೆಲಸದ ಸ್ಥಳದಲ್ಲಿ ಹೆಚ್ಚಿನ ಸಂವಹನ, ಭಾವನಾತ್ಮಕ ಅತೃಪ್ತಿ ಮತ್ತು ಸ್ವಾತಂತ್ರ್ಯದ ಬಯಕೆ ಈ ರೀತಿ ವಿವಾಹೇತರ ಸಂಬಂಧಕ್ಕಾಗಿ ಹಪಹಪಿಸಲು ಕಾರಣವಾಗುತ್ತವೆ ಎಂದು ಸೂಚಿಸುತ್ತವೆ. ಏಕೆಂದರೆ, ನಗರ ಪ್ರದೇಶಕ್ಕೆ ಹೋಲಿಸಿದರೆ ಹಳ್ಳಿಗಳಲ್ಲಿ ಈ ರೀತಿಯ ಆ್ಯಪ್​ಗಳ ಬಳಕೆ ತೀರಾ ಇಲ್ಲವೇ ಇಲ್ಲ ಎನ್ನಬಹುದು.

ಗ್ಲೀಡೆನ್ ಎಂಬುದು ಒಂದು ವಿವಾಹೇತರ ಡೇಟಿಂಗ್ ಪ್ಲಾಟ್​ಫಾರ್ಮ್. ಗ್ಲೀಡೆನ್‌ನ 2025ರ ಸಮೀಕ್ಷೆಯ ಪ್ರಕಾರ, ಬೆಂಗಳೂರಿನಲ್ಲಿ ಸುಮಾರು 1.35 ಲಕ್ಷ ಬಳಕೆದಾರರು ಈ ಆ್ಯಪ್​ನಲ್ಲಿ ನೋಂದಾಯಿಸಿಕೊಂಡಿದ್ದಾರೆ. ಪುರುಷರು ಮತ್ತು ಮಹಿಳೆಯರು ಇಬ್ಬರೂ ಹೆಚ್ಚಿನ ಪ್ರಮಾಣದಲ್ಲಿ ಇದರಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ಹೆಚ್ಚಾಗಿ ದೈಹಿಕ ಅನ್ಯೋನ್ಯತೆಗಿಂತ ಭಾವನಾತ್ಮಕತೆಯನ್ನು ಬಯಸುತ್ತಾರೆ ಎಂದು ಈ ಅಧ್ಯಯನ ಸೂಚಿಸಿದೆ.

ಇದನ್ನೂ ಓದಿ: ಸದ್ದಿಲ್ಲದೆ 2ನೇ ಮದುವೆ: ತಾಳಿ ಕಟ್ಟೋ ಟೈಮಿಗೆ ಮೊದಲ ಹೆಂಡ್ತಿ ಎಂಟ್ರಿ, ಮುಂದೇನಾಯ್ತು?

ಬೆಂಗಳೂರು ನಗರದಲ್ಲಿ ನಡೆಸಿದ ಅಧ್ಯಯನಗಳ ಪ್ರಕಾರ, ಈ ಆ್ಯಪ್ ಬಳಕೆದಾರರು ಸಾಮಾನ್ಯವಾಗಿ ತಮ್ಮ ಸಂಗಾತಿಯ ಜೊತೆ ಭಾವನಾತ್ಮಕ ಸಂಬಂಧ ಇಲ್ಲದಿರುವುದು, ಅನ್ಯೋನ್ಯತೆಯ ಕೊರತೆಯ ಕಾರಣದಿಂದ ಈ ಆ್ಯಪ್ ಬಳಸುತ್ತಿರುವುದಾಗಿ ಹೇಳಕೊಂಡಿದ್ದಾರೆ.

2025ರ ಅಂತ್ಯದ ವೇಳೆಗೆ ಗ್ಲೀಡೆನ್‌ನ ಭಾರತೀಯ ಬಳಕೆದಾರರ ಸಂಖ್ಯೆಯನ್ನು ಬೆಂಗಳೂರಿನ ಬಳಕೆದಾರರು ಸರಿಸುಮಾರು ಶೇ. 17 ರಷ್ಟಿದ್ದಾರೆ. ಇವರಲ್ಲಿ ಹೆಚ್ಚಿನ ಬಳಕೆದಾರರು ಹಣಕಾಸು, ಕಾನೂನು, ಎಂಜಿನಿಯರಿಂಗ್ ಮತ್ತು ಉದ್ಯಮಶೀಲತೆಯಂತಹ ಶ್ರೀಮಂತ ಹಿನ್ನೆಲೆಯಿಂದ ಬಂದ 30ರಿಂದ 45 ವರ್ಷ ವಯಸ್ಸಿನ ವೃತ್ತಿಪರರು.

ಇದನ್ನೂ ಓದಿ: ಡೇಟಿಂಗ್​ ಆ್ಯಪ್​ನಲ್ಲಿ ಪರಿಚಯವಾದ ಸುಂದರಿಯ ಹಿಂದೆ ಹೋದ ಟೆಕ್ಕಿಗೆ ಪಂಗನಾಮ

ವಿವಾಹೇತರ ಡೇಟಿಂಗ್ ವೇದಿಕೆಯಾದ ಗ್ಲೀಡೆನ್ ತನ್ನ ಭಾರತೀಯ ಬಳಕೆದಾರರ ನೆಲೆಯಿಂದ ಸಮೀಕ್ಷೆಯ ಡೇಟಾವನ್ನು ಬಿಡುಗಡೆ ಮಾಡಿದೆ. ಇದು 2026ರಲ್ಲಿ ಭಾರತೀಯರು ಸಂಬಂಧಗಳು, ಅನ್ಯೋನ್ಯತೆ ಮತ್ತು ಒಂಟಿತನವನ್ನು ಹೇಗೆ ಹೆಚ್ಚಾಗಿ ಅನುಭವಿಸುತ್ತಿದ್ದಾರೆ ಎಂಬುದರ ವಿವರವಾದ ಚಿತ್ರಣವನ್ನು ನೀಡುತ್ತಿದೆ. ಈ ವೇದಿಕೆಯು ಭಾರತದಲ್ಲಿ 4 ಮಿಲಿಯನ್ ಬಳಕೆದಾರರನ್ನು ಹೊಂದಿದೆ. ಶೇ. 54ರಷ್ಟು ಬೆಂಗಳೂರಿನ ಬಳಕೆದಾರರು ಎಐ ಲೈಂಗಿಕ ಪಾರ್ಟನರ್​ ಅನ್ನು ಕೂಡ ಹೊಂದಿದ್ದಾರೆ ಎಂದು ಸಮೀಕ್ಷೆ ಸೂಚಿಸಿದೆ. ಬೆಂಗಳೂರು ಗ್ಲೀಡೆನ್‌ನಲ್ಲಿ ಬೇರೆ ಭಾರತೀಯ ನಗರಕ್ಕಿಂತ ಅತಿ ಹೆಚ್ಚು ಸೈನ್-ಅಪ್‌ಗಳನ್ನು ಹೊಂದಿದೆ. ಇದು ಪ್ರಮುಖ ಮೆಟ್ರೋ ನಗರಗಳಾದ ಹೈದರಾಬಾದ್ ಮತ್ತು ದೆಹಲಿಗಿಂತ ಮೇಲ್ಭಾಗದಲ್ಲಿದೆ.

ಇನ್ನೂ ಆಶ್ಚರ್ಯಕರ ಸಂಗತಿಯೆಂದರೆ ಟೈಯರ್-2 ನಗರದ ದತ್ತಾಂಶ. ಲಕ್ನೋ, ನೋಯ್ಡಾ, ಚಂಡೀಗಢ, ಸೂರತ್, ಕೊಯಮತ್ತೂರು, ಭುವನೇಶ್ವರ, ಪಾಟ್ನಾ, ಗುವಾಹಟಿ ಮತ್ತು ರಾಯ್‌ಪುರಗಳು ಈ ಆ್ಯಪ್ ಬಳಸುವವರ ಗಮನಾರ್ಹ ಹೆಚ್ಚಳವನ್ನು ತೋರಿಸುತ್ತಿವೆ. ಹಾಗೇ, ಕಳೆದ 2 ವರ್ಷಗಳಲ್ಲಿ ಮಹಿಳಾ ಬಳಕೆದಾರರ ಸಂಖ್ಯೆ ಶೇ. 148ರಷ್ಟು ಹೆಚ್ಚಾಗಿದೆ ಎಂಬುದು ಇನ್ನಷ್ಟು ಮುಖ್ಯವಾದ ಸಂಗತಿ. ಇವೆಲ್ಲವೂ ಭಾರತದಲ್ಲಿ ಆಧುನಿಕತೆ ಹೆಚ್ಚಾದಂತೆ ಅದು ಸಂಬಂಧಗಳ ಮೇಲೆ ಯಾವ ರೀತಿ ಪರಿಣಾಮ ಬೀರುತ್ತಿದೆ ಎಂಬುದರ ಎಚ್ಚರಿಕೆಯ ಗಂಟೆಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link