nagaraj11081993

Viral: ಎಂಟು ವರ್ಷಗಳ ಕಾಲ ಕೆಲಸ ಮಾಡಿದ ಬಾಸ್‌ನ್ನು ವಜಾಗೊಳಿಸಿದ ಕಂಪನಿ ನಿರ್ಧಾರದಿಂದ ಉದ್ಯೋಗಿ ಶಾಕ್

ಇತ್ತೀಚೆಗಿನ ದಿನಗಳಲ್ಲಿ ಕೆಲಸ ಉಳಿಸಿಕೊಳ್ಳೋದು ಕಷ್ಟದ ಕೆಲಸ. ಕಂಪನಿಗಳಲ್ಲಿ (company) ವಿವಿಧ ಕಾರಣಗಳಿಂದಾಗಿ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಹೀಗಾಗಿ ಖಾಸಗಿ ಕಂಪನಿಗಳಿಗೆ ಕೆಲಸಕ್ಕೆ ಸೇರಿಕೊಂಡರೆ ಉದ್ಯೋಗ ಭದ್ರತೆಯಂತೂ ಇಲ್ಲವೇ ಇಲ್ಲ. ಯಾವಾಗ ಹೇಗೆ ಕೆಲಸ ಹೋಗುತ್ತದೆ ಎಂದು ಹೇಳಲು ಅಸಾಧ್ಯ. ಇದೀಗ ಉದ್ಯೋಗಿಯೊಬ್ಬರು ತಮ್ಮ ಕಚೇರಿಯಲ್ಲಿ ನಡೆದ ಘಟನೆಯನ್ನು ವಿವರಿಸಿದ್ದಾರೆ. ಒಂದಲ್ಲ ಎರಡಲ್ಲ, ಬರೋಬ್ಬರಿ ಎಂಟು ವರ್ಷಗಳಿಂದ ಒಂದೇ ಕಂಪನಿಯಿಂದ ಕೆಲಸ ಮಾಡುತ್ತಿದ್ದ ತನ್ನ ಬಾಸ್‌ನ್ನು (Boss) ಹೆಚ್ ಆರ್ ಕೆಲಸದಿಂದ ತೆಗೆದು…

Read More

ಟ್ರಂಪ್ ಹಾಕಿದ ಟ್ಯಾರಿಫ್​ಗಳಿಗೆ ಬದಲಾಗಿ ಸಿಗಲಿದೆ ರೀಫಂಡ್; ಯಾರಿಗೆ ಸಿಗುತ್ತೆ ಆದ್ಯತೆ?

ವಾಷಿಂಗ್ಟನ್, ಏಪ್ರಿಲ್ 1: ಡೊನಾಲ್ಡ್ ಟ್ರಂಪ್ ವಿಧಿಸಿರುವ ಟ್ಯಾರಿಫ್ ಕ್ರಮವನ್ನು ಅಮೆರಿಕದ ಸುಪ್ರೀಮ್ ಕೋರ್ಟ್ ಅಮಾನ್ಯಗೊಳಿಸಿದೆ. ಈ ಟ್ಯಾರಿಫ್ ಸಂಗ್ರಹ ಅಕ್ರಮವಾಗಿದೆ ಎಂದು ಹೇಳಿ ಟ್ಯಾರಿಫ್ ಅನ್ನು (US Tariffs) ರದ್ದುಗೊಳಿಸಿದೆ. ಆದರೆ, ಅಷ್ಟರಲ್ಲಾಗಲೇ ಅಮೆರಿಕ ಸಾಕಷ್ಟು ಟ್ಯಾರಿಫ್ ಅನ್ನು ಸಂಗ್ರಹಿಸಿದ್ದಾಗಿದೆ. ಈ ಹಿನ್ನೆಲೆಯಲ್ಲಿ ಅಮೆರಿಕ ಸುಂಕ ಪ್ರಾಧಿಕಾರವು ಟ್ಯಾರಿಫ್ ಪಾವತಿಸಿದವರಿಗೆ ರೀಫಂಡ್ ಮಾಡಲು ವ್ಯವಸ್ಥೆ ಮಾಡಿದೆ. ಒಂದು ಅಂದಾಜು ಪ್ರಕಾರ 166 ಬಿಲಿಯನ್ ಡಾಲರ್​ನಷ್ಟು ಟ್ಯಾರಿಫ್ ಸಂಗ್ರಹವಾಗಿದ್ದು, ಅವೆಲ್ಲವನ್ನೂ ಹಂತ ಹಂತವಾಗಿ ರೀಫಂಡ್ ಮಾಡಲಾಗಬಹುದು. ಈ…

Read More

ಮಂಗಳನ ವೇಗ, ಆವೇಶ ನೋಡಿದ್ರೆ ಈ ರಾಶಿಯವರಿಗೆ ದೊಡ್ಡದಾಗಿ ಏನೋ ಕಾದಿದೆ

ಮೀನ ರಾಶಿಯಲ್ಲಿ ಮಂಗಳ ಮತ್ತು ಶನಿಯರ ಸಂಯೋಗವು ಜ್ಯೋತಿಷ್ಯ ಶಾಸ್ತ್ರದಲ್ಲಿ ದ್ವಂದ್ವ ಯುದ್ಧದಂತೆ ಭಾಸವಾಗುತ್ತದೆ. ಶನಿಯು ಶಿಸ್ತು, ನಿಧಾನಗತಿ ಮತ್ತು ಕರ್ಮದ ಸಂಕೇತವಾದರೆ, ಮಂಗಳನು ವೇಗ, ಆವೇಶ ಮತ್ತು ಶಕ್ತಿಯ ಪ್ರತೀಕ. ಈ ಎರಡು ಶಕ್ತಿಗಳು ಮೀನ ಎಂಬ ಜಲತತ್ವದ ರಾಶಿಯಲ್ಲಿ ಸಂಧಿಸಿದಾಗ ಉಂಟಾಗಲಿದೆ. ​ಜಾಗತಿಕ ಮತ್ತು ಸಾಮಾಜಿಕ ಪ್ರಭಾವಗಳು ​ಮೀನ ರಾಶಿಯು ಸಮುದ್ರ ಮತ್ತು ಜಲಮೂಲಗಳನ್ನು ಪ್ರತಿನಿಧಿಸುವುದರಿಂದ, ಈ ಯುತಿಯು ಜಗತ್ತಿನಾದ್ಯಂತ ಸಂಚಲನ ಮೂಡಿಸುತ್ತದೆ. ​ನೈಸರ್ಗಿಕ ಬದಲಾವಣೆ: ಸಮುದ್ರದಲ್ಲಿ ಚಂಡಮಾರುತ, ಸುನಾಮಿ ಅಥವಾ ಅನಿರೀಕ್ಷಿತ ಮಳೆ…

Read More

ಸಿನಿಮಾ ಬಿಡುಗಡೆಗೂ ಮುನ್ನ ದೇವರ ಮೊರೆಹೋಗಿ, ‘ಇಡೀ ದೇಶಕ್ಕಾಗಿ ಪ್ರಾರ್ಥಿಸಿದೆ’ ಎಂದ ಅಕ್ಷಯ್ ಕುಮಾರ್

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ‘ಭೂತ್ ಬಂಗ್ಲಾ’ (Bhooth Bangla) ಸಿನಿಮಾದ ಬಿಡುಗಡೆಯ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಶೀಘ್ರದಲ್ಲೇ ಈ ಚಿತ್ರ ರಿಲೀಸ್ ಆಗಲಿದೆ. ಬಿಡುಗಡೆಗೂ ಮುನ್ನ ಅವರು ದೇವರ ಮೊರೆಹೋಗಿದ್ದಾರೆ. ಬುಧವಾರ (ಏಪ್ರಿಲ್ 1) ಬೆಳಿಗ್ಗೆ ಮಧ್ಯಪ್ರದೇಶದ ಉಜ್ಜಯಿನಿಯ ಪ್ರಸಿದ್ಧ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಕ್ಷಯ್ ಕುಮಾರ್ (Akshay Kumar) ಜೊತೆ ಅವರ ಅತ್ತೆ, ಹಿರಿಯ ನಟಿ ಡಿಂಪಲ್ ಕಪಾಡಿಯಾ ಸಾಥ್ ನೀಡಿದರು. ದೇವಸ್ಥಾನಕ್ಕೆ…

Read More

ಜೂ ಎನ್​​ಟಿಆರ್-ನೀಲ್ ಸಿನಿಮಾಕ್ಕೆ ಜೊತೆಯಾದ ಹಾಲಿವುಡ್ ತಂಡ

ಜೂ ಎನ್​​ಟಿಆರ್ (Jr NTR) ನಟಿಸಿ ಪ್ರಶಾಂತ್ ನೀಲ್ (Prashant Neel) ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾ ‘ಡ್ರ್ಯಾಗನ್’, ‘ವಾರಣಾಸಿ’, ‘ಪೆದ್ದಿ’ ಇನ್ನಿತರೆ ಕೆಲ ಸಿನಿಮಾಗಳ ರೀತಿ ದೊಡ್ಡ ಸದ್ದು ಮಾಡುತ್ತಿಲ್ಲ ಆದರೆ ಸದ್ದಿಲ್ಲದೇ ಬೃಹತ್ ಆದ, ಭಾರಿ ಬಜೆಟ್​​ನ ಹಾಗೂ ಅಂತರಾಷ್ಟ್ರೀಯ ಗುಣಮಟ್ಟದ ಸಿನಿಮಾವನ್ನು ತಯಾರು ಮಾಡುತ್ತಿದೆ ಚಿತ್ರತಂಡ. ಪ್ರಶಾಂತ್ ನೀಲ್ ತಮ್ಮ ಈ ವರೆಗಿನ ಸಿನಿಮಾಗಳನ್ನು ಸೆಟ್​​ಗಳಲ್ಲಿಯೇ ನಿರ್ಮಿಸಿರುವುದು ಹೆಚ್ಚು. ಆದರೆ ಇದೇ ಮೊದಲ ಬಾರಿಗೆ ನೀಲ್ ಅವರು ಹೊರದೇಶಕ್ಕೆ ಸಹ ಹೋಗಿದ್ದು, ಅಲ್ಲಿ…

Read More

ಟೋಲ್‌ನಲ್ಲಿ ಹೊಸ ನಿಯಮ: ಕ್ಯಾಶ್‌ಲೆಸ್‌ನಿಂದ ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ

ನೆಲಮಂಗಲ, ಏಪ್ರಿಲ್ 1: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇಂದಿನಿಂದ (ಏಪ್ರಿಲ್ 1) ನಗದುರಹಿತ ಟೋಲ್ ಪಾವತಿ ಕಡ್ಡಾಯಗೊಳಿಸಲಾಗಿದೆ. ಹೊಸ ನಿಯಮದ ಪ್ರಕಾರ, ವಾಹನ ಸವಾರರು ಟೋಲ್ ಶುಲ್ಕವನ್ನು ನಗದು ರೂಪದಲ್ಲಿ ಪಾವತಿಸುವಂತಿಲ್ಲ. ಬದಲಿಗೆ, ಫಾಸ್ಟ್‌ಟ್ಯಾಗ್ ಅಥವಾ ಡಿಜಿಟಲ್ ಪಾವತಿ ವಿಧಾನಗಳಾದ ಫೋನ್‌ಪೇ ಮತ್ತು ಗೂಗಲ್‌ಪೇ ಮೂಲಕ ಸ್ಕ್ಯಾನ್ ಮಾಡಿ ಶುಲ್ಕ ಪಾವತಿಸಬೇಕಾಗುತ್ತದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಹಿಂದೆ ಹೊರಡಿಸಿದ್ದ ಸುತ್ತೋಲೆಯಂತೆ ಈ ಕ್ರಮ ಜಾರಿಯಾಗಿದೆ. ಬೆಂಗಳೂರು ಸಮೀಪದ ನೆಲಮಂಗಲದ ಟೋಲ್ ಬಳಿ ಈ ಹೊಸ ನಿಯಮವನ್ನು ಪರಿಣಾಮಕಾರಿಯಾಗಿ…

Read More

ತನ್ನದೇ ಟೆಂಪೋದಲ್ಲಿ ಶವವಾಗಿ ಪತ್ತೆಯಾದ ಮಾಲೀಕ: ಸಾವಿನ ಸುತ್ತ ಅನುಮಾನದ ಹುತ್ತ

ಚಿಕ್ಕಬಳ್ಳಾಪುರ, ಏಪ್ರಿಲ್​ 01: ಅಶೋಕ್ ಲೇಲ್ಯಾಂಡ್ ಮಿನಿ ಟೆಂಪೋ ಮಾಲೀಕ ಕಂ ಚಾಲಕನೋರ್ವ ತನ್ನ ಟೆಂಪೋವನ್ನು ನಂಬಿಕೊಂಡು ಬಾಡಿಗೆಗೆ ಹೋಗುವುದರ ಮೂಲಕ ಜೀವನ ಸಾಗಿಸುತ್ತಿದ್ದ. ಬಾಡಿಗೆಗೆ ಹೋಗಿ ಬರುವುದಾಗಿ ಹೇಳಿ ಹೋದವನು ಟೆಂಪೋದಲ್ಲೇ ಶವವಾಗಿ ಪತ್ತೆಯಾಗಿದ್ದು (death), ಕೊಲೆ ಶಂಕೆ ವ್ಯಕ್ತವಾಗಿದೆ. ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ಕ್ಕೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರ ತಾಲೂಕಿನ ಆರೂರು ಗ್ರಾಮದಲ್ಲಿ ಘಟನೆ ನಡೆದಿದೆ. ನಡೆದಿದ್ದೇನು? ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುರುಬರಕುಂಟೆಯ ಕಾಲೋನಿ ನಿವಾಸಿ 48 ವರ್ಷದ ಸುಬ್ರಮಣಿ, ಶನಿವಾರ…

Read More

ಅಸ್ಸಾಂನ ಚಹಾ ತೋಟಕ್ಕೆ ಪ್ರಧಾನಿ ಭೇಟಿ, ಕಾರ್ಮಿಕರೊಂದಿಗೆ ಚಹಾ ಎಲೆಗಳ ಕಿತ್ತ ಮೋದಿ, ಸೆಲ್ಫಿ, ಒಂದಿಷ್ಟು ಹರಟೆ

ಪ್ರಧಾನಿ ನರೇಂದ್ರ ಮೋದಿ ಅಸ್ಸಾಂನಲ್ಲಿ ಎರಡು ಚುನಾವಣಾ ರ್ಯಾಲಿಗೂ ಮುನ್ನ ದಿಬ್ರುಗಢದಲ್ಲಿರುವ ಚಹಾ ತೋಟಕ್ಕೆ ಭೇಟಿ ನೀಡಿದ್ದಾರೆ. ಅವರು ಚಹಾವನ್ನು ಅಸ್ಸಾಂನ ಆತ್ಮವೆಂದು ಬಣ್ಣಿಸಿದ್ದಾರೆ. ಇಲ್ಲಿಂದ ಬರುವ ಚಹಾ ಪ್ರಪಂಚದಾದ್ಯಂತ ತಲುಪಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇಂದು ಬೆಳಗ್ಗೆ ದಿಬ್ರುಗಢದಲ್ಲಿ, ನಾನು ಒಂದು ಚಹಾ ತೋಟಕ್ಕೆ ಭೇಟಿ ನೀಡಿ ಇಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರೊಂದಿಗೆ ಸಂವಹನ ನಡೆಸಿದೆ. ಇದು ಬಹಳ ಸ್ಮರಣೀಯ ಅನುಭವವಾಗಿತ್ತು ಎಂದು ಪ್ರಧಾನಿ ಮೋದಿ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ. ಪ್ರತಿಯೊಂದು ಚಹಾ ತೋಟಗಾರ ಕುಟುಂಬಗಳ…

Read More

ಹಾವು ರಕ್ಷಣೆ ಕುರಿತ ಕರೆಗಳ ಏರಿಕೆಗೆ GBA ಹೈರಾಣ: ಇತ್ತ ಅಗತ್ಯ ಸೌಲಭ್ಯ, ವೇತನ ಇಲ್ಲದೆ ಸಂಕಷ್ಟದಲ್ಲಿ ಉರಗ ರಕ್ಷಕರು

ಬೆಂಗಳೂರು, ಏಪ್ರಿಲ್​​ 01: ನಗರದಲ್ಲಿ ಹಾವುಗಳ ಕಾಟ ಹೆಚ್ಚಿದ್ದು ಇವುಗಳನ್ನು ಹಿಡಿಯಲು ಸಹಾಯ ಕೋರಿ ಜಿಬಿಎಗೆ ಪ್ರತಿದಿನ 150ಕ್ಕೂ ಹೆಚ್ಚು ಕರೆಗಳು ಬರುತ್ತಿವೆ. ಆದರೆ ಈ ಸೇವೆಗೆ ಇರುವ 7 ಸದಸ್ಯರ ತಂಡಕ್ಕೆ ಎಲ್ಲ ಕರೆಗಳಿಗೂ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ. ಮೇ ಮತ್ತು ಜೂನ್ ತಿಂಗಳಲ್ಲಿ ಹಾವುಗಳು ಮೊಟ್ಟೆ ಇಡುವ ಹಾಗೂ ಮರಿ ಹೊರಬರುವ ಅವಧಿಯಾಗಿರುವುದರಿಂದ ಕರೆಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ರಕ್ಷಕರ ಸಂಖ್ಯೆಯನ್ನು ದ್ವಿಗುಣಗೊಳಿಸಲು GBA ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ….

Read More

ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ: ನಮ್ಮ ಯೋಜನೆಯಿಂದ ಅವನಿಗೆ ಕೆಲಸವಿಲ್ಲದಂತಾಗಲಿದೆ

ಬಾಲುಸ್ಸೇರಿ, ಏ.1 : ಕೇರಳ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಯುಡಿಎಫ್ (UDF) ನಾಯಕರು ಮತದಾರರನ್ನು ಸೆಳೆಯಲು ವಿನೂತನ ಹಾದಿ ಹಿಡಿದಿದ್ದಾರೆ. ಬಾಲುಸ್ಸೇರಿಯಲ್ಲಿ ಬಸ್ ಪ್ರಯಾಣದ ವೇಳೆ ‘ಯಮರಾಜನ’ ವೇಷಧಾರಿ ವ್ಯಕ್ತಿಯನ್ನು ಭೇಟಿಯಾದ ನಾಯಕರು, ತಮ್ಮ ಹೊಸ ಆರೋಗ್ಯ ಯೋಜನೆಯಿಂದ ಯಮರಾಜನಿಗೆ ಕೆಲಸವಿಲ್ಲದಂತಾಗಲಿದೆ ಎಂದು ವ್ಯಂಗ್ಯವಾಡಿದ್ದಾರೆ. ಯುಡಿಎಫ್ ಅಧಿಕಾರಕ್ಕೆ ಬಂದರೆ ಜಾರಿಗೆ ತರಲಿರುವ ‘ಉಮ್ಮನ್ ಚಾಂಡಿ ಆರೋಗ್ಯ ವಿಮಾ ಯೋಜನೆ’ಯಡಿ ಪ್ರತಿ ಕುಟುಂಬಕ್ಕೆ ವಾರ್ಷಿಕ 25 ಲಕ್ಷ ರೂಪಾಯಿ ಮೊತ್ತದ ಆರೋಗ್ಯ ವಿಮೆಯನ್ನು ಒದಗಿಸುವುದಾಗಿ ಭರವಸೆ ನೀಡಲಾಗಿದೆ….

Read More