IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 2ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮುಂಬೈ ಇಂಡಿಯನ್ಸ್ (Mumbai Indians) ತಂಡ ಭರ್ಜರಿ ದಾಖಲೆ ನಿರ್ಮಿಸಿದೆ. ಅದು ಕೂಡ ಫ್ರಾಂಚೈಸಿ ಕ್ರಿಕೆಟ್ನಲ್ಲಿ ಯಾವುದೇ ತಂಡ ನಿರ್ಮಿಸದ ವಿಶ್ವ ದಾಖಲೆ ಎಂಬುದು ವಿಶೇಷ.
ಹೌದು, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಲೀಗ್ ಕ್ರಿಕೆಟ್ನಲ್ಲಿ 300 ಪಂದ್ಯಗಳನ್ನಾಡಿದ ಸಾಧನೆ ಮಾಡಿದೆ. ಈ ಮೂಲಕ ಲೀಗ್ ಕ್ರಿಕೆಟ್ನಲ್ಲಿ 300 ಪಂದ್ಯಗಳನ್ನಾಡಿದ ವಿಶ್ವದ ಮೊದಲ ತಂಡ ಎನಿಸಿಕೊಂಡಿದೆ.
ಮುಂಬೈ ಇಂಡಿಯನ್ಸ್ ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 278 ಪಂದ್ಯಗಳನ್ನಾಡಿದ್ದರೆ, ಚಾಂಪಿಯನ್ಸ್ ಲೀಗ್ನಲ್ಲಿ 22 ಮ್ಯಾಚ್ಗಳನ್ನಾಡಿದೆ. ಈ ಮೂಲಕ ಫ್ರಾಂಚೈಸಿ ಲೀಗ್ ಟಿ20 ಟೂರ್ನಿಯಲ್ಲಿ 300 ಮ್ಯಾಚ್ಗಳನ್ನಾಡಿದ ವಿಶ್ವದ ಮೊದಲ ತಂಡವೆಂಬ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದೆ.
ಇನ್ನು ಈ ಮುನ್ನೂರು ಮ್ಯಾಚ್ಗಳಲ್ಲಿ ಮುಂಬೈ ಇಂಡಿಯನ್ಸ್ ತಂಡವು 163 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 131 ಮ್ಯಾಚ್ಗಳಲ್ಲಿ ಸೋಲನುಭವಿಸಿದೆ. ಇನ್ನುಳಿದ 6 ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿದ್ದವು. ಇದರ ನಡುವೆ 7 ಟ್ರೋಫಿಗಳನ್ನು ಸಹ ಎತ್ತಿ ಹಿಡಿದಿದೆ.
ಅಂದರೆ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಮುಂಬೈ ಇಂಡಿಯನ್ಸ್ 5 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ಚಾಂಪಿಯನ್ಸ್ ಲೀಗ್ನಲ್ಲಿ 2 ಬಾರಿ ಕಿರೀಟ ಮುಡಿಗೇರಿಸಿಕೊಂಡಿದೆ. ಈ ಮೂಲಕ ಐಪಿಎಲ್ನ ಅತ್ಯಂತ ಯಶಸ್ವಿ ತಂಡವಾಗಿ ಗುರುತಿಸಿಕೊಂಡಿದೆ. ಈ ಯಶಸ್ಸಿನೊಂದಿಗೆ ಇದೀಗ 300 ಪಂದ್ಯಗಳನ್ನಾಡಿದ ವಿಶ್ವದ ಏಕೈಕ ತಂಡವೆಂಬ ಹೆಗ್ಗಳಿಕೆಯನ್ನು ಕೂಡ ಮುಂಬೈ ಇಂಡಿಯನ್ಸ್ ತಂಡ ತನ್ನದಾಗಿಸಿಕೊಂಡಿದೆ.
ಜೀ ಕನ್ನಡದ ‘ಅಮೃತಧಾರೆ’ (Amruthadhare) ಧಾರಾವಾಹಿಯಲ್ಲಿ ಹೊಸ ಹೊಸ ತಿರುವುಗಳು ಎದುರಾಗುತ್ತಾ ಇವೆ. ಈಗ ಮಲ್ಲಿ ಮದುವೆ ಸಂಭ್ರಮ. ಈ ಮಲ್ಲಿ ಮದುವೆಯಲ್ಲಿ ಹಲವು ಡ್ರಾಮಾಗಳು ನಡೆದಿವೆ ಎಂದರೂ ತಪ್ಪಾಗಲಾರದು. ಏಕೆಂದರೆ ಮಲ್ಲಿ ಮದುವೆ ಮಾಡಲು ಪ್ಲ್ಯಾನ್ ಮಾಡಿದ್ದು ಜೆಡಿ. ತಾನೇ ಛೂ ಬಿಟ್ಟ ವ್ಯಕ್ತಿ ಜೊತೆ ಮದುವೆ ನಡೆಸೋದು ಜೆಡಿ ಪ್ಲ್ಯಾನ್ ಆಗಿತ್ತು. ಕೊನೆ ಕ್ಷಣದಲ್ಲಿ ಮದುವೆಯಿಂದ ಆ ವ್ಯಕ್ತಿಯನ್ನು ಓಡಿಸೋದು ಪ್ಲ್ಯಾನ್ ಆಗಿತ್ತು. ಆದರೆ, ಪ್ಲ್ಯಾನ್ ಉಲ್ಟಾ ಆಗಿದೆ, ಅಷ್ಟೇ ಅಲ್ಲ, ದೊಡ್ಡ ಎಚ್ಚರಿಕೆ ಕೂಡ ರವಾನೆ ಆಗಿದೆ ಎನ್ನಬಹುದು.
ಜೆಡಿಯು ಸುನಿಲ್ ಎಂಬಾತನನ್ನು ಮಲ್ಲಿ ಪ್ರೀತಿಸುವಂತೆ ಸೂಚನೆ ಕೊಟ್ಟು ಕಳುಹಿಸಿದ್ದನು. ಆ ಸೂಚನೆಯಂತೆ ಮಲ್ಲಿಯನ್ನು ಪ್ರೀತಿಸುವ ಕೆಲಸಕ್ಕೆ ಸುನೀಲ್ ಇಳಿಸಿದ್ದ. ಆದರೆ, ಮದುವೆ ಆಗುವ ಯಾವುದೇ ಪ್ಲ್ಯಾನ್ ಇದರಲ್ಲಿ ಇರಲಿಲ್ಲ. ಪ್ರೀತಿಸೋದು, ಕೊನೆಯ ಕ್ಷಣದಲ್ಲಿ ಆಕೆತನ್ನು ಬಿಟ್ಟು ಹೋಗೋದು ಪ್ಲ್ಯಾನ್ ಆಗಿತ್ತು. ಆದರೆ, ಹಾಗಾಗಿಲ್ಲ.
ಜೆಡಿ ಮಾಡಿದ ಪ್ಲ್ಯಾನ್ ಕೊನೆಯ ಕ್ಷಣದಲ್ಲಿ ಕೈ ಕೊಟ್ಟಿದೆ ಎಂದೇ ಹೇಳಬಹುದು. ಸುನೀಲ್ ಯಾರು ಎಂಬ ವಿಷಯ ಮೊದಲು ಗೊತ್ತಾಗಿದ್ದು ಗೌತಮ್ಗೆ. ಯಾವುದೇ ಕಾರಣಕ್ಕೂ ಈ ಮದುವೆ ನಡೆದೇ ನಡೆಯಬೇಕು ಎಂದು ಪಣ ತೊಟ್ಟನು. ಆದರೆ, ಈ ವಿಷಯ ನಂತರ ಗೊತ್ತಾಗಿದ್ದು ಭೂಮಿಕಾಗೆ. ಆಕೆ ಹೇಗಾದರೂ ಮಾಡಿ ಮದುವೆ ಮಾಡಿಸಲೇಬೇಕು ಎಂದು ಪಣ ತೊಟ್ಟಿದ್ದಾಳೆ.
ಕೊನೆಗೂ ಇವರ ಮದುವೆ ನಡೆದಂತೆ ಕಾಣಿಸುತ್ತದೆ. ಈಗ ರಿಲೀಸ್ ಆದ ಪ್ರೋಮೋದಲ್ಲಿ ಮಲ್ಲಿ ಕತ್ತಿನಲ್ಲಿ ತಾಳಿ ಕಾಣಿಸಿದೆ. ಹೀಗಾಗಿ ಮದುವೆ ನಡೆದಿದೆ ಎಂಬುದು ಸ್ಪಷ್ಟವಾಗಿದೆ. ಹೆಣ್ಣಿನ ಕಣ್ಣೀರು, ಯುದ್ಧದ ಆರಂಭ ಎಂದು ಮಲ್ಲಿ ಎಚ್ಚರಿಕೆ ನೀಡಿದ್ದಾಳೆ. ಈ ಎಚ್ಚರಿಕೆಯನ್ನು ಆತ ಯಾವ ರೀತಿಯಲ್ಲಿ ತೆಗೆದುಕೊಳ್ಳುತ್ತಾನೆ ಎಂಬ ಕುತೂಹಲ ಮೂಡಿದೆ. ಜೆಡಿ ಇಷ್ಟು ದಿನ ಹಾಯಾಗಿದ್ದ. ಮುಂದಿನ ದಿನಗಳಲ್ಲಿ ಅದನ್ನು ಬದಲಿಸುವ ಎಲ್ಲಾ ಸಾಧ್ಯತೆ ಇದೆ.
ಟೆಹ್ರಾನ್, ಮಾರ್ಚ್ 30: ಇರಾನ್ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ(Mojtaba Khamenei) ಯಿಂದ ಹೊಸ ಸಂದೇಶ ಬಿಡುಗಡೆಯಾಗಿದೆ. ಲಿಖಿತ ಸಂದೇಶದಲ್ಲಿ ಅಮೆರಿಕ ಮತ್ತು ಇಸ್ರೇಲ್ ವಿರುದ್ಧದ ಯುದ್ಧದಲ್ಲಿ ಇರಾಕ್ ಜನರು ನೀಡಿದ ಬೆಂಬಲಕ್ಕೆ ಅವರು ಧನ್ಯವಾದ ಅರ್ಪಿಸಿದ್ದಾರೆ ಎಂದು ಇರಾನಿನ ಮಾಧ್ಯಮಗಳು ವರದಿ ಮಾಡಿವೆ. ಅಯತೊಲ್ಲಾ ಖಮೇನಿ ಮರಣದ ನಂತರ ಹೊಸ ಸರ್ವೋಚ್ಚ ನಾಯಕ ಕಾಣಿಸಿಕೊಂಡಿಲ್ಲ, ಇಲ್ಲಿಯವರೆಗೆ ಕೆಲವೇ ಲಿಖಿತ ಹೇಳಿಕೆಗಳನ್ನು ನೀಡಿದ್ದಾರೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳದಿರುವುದು ಅವರ ಇರುವಿಕೆಯ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿತ್ತು.
ಅದೇ ಸಮಯದಲ್ಲಿ ಟ್ರಂಪ್ ಕೂಡ ಮೊಜ್ತಬಾ ಬದುಕಿರುವುದು ಅನುಮಾನ ಎಂದಿದ್ದರು. ವಾಯುದಾಳಿಯಲ್ಲಿ ಉಂಟಾದ ಗಾಯಗಳಿಂದ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ರಾಜ್ಯ ದೂರದರ್ಶನ ಮತ್ತು ಕೆಲವು ಇರಾನ್ ಅಧಿಕಾರಿಗಳು ಸೂಚಿಸಿದ್ದಾರೆ.ಶಿಯಾ ಪಕ್ಷವಾದ ಇರಾಕ್ನ ಇಸ್ಲಾಮಿಕ್ ಸುಪ್ರೀಂ ಕೌನ್ಸಿಲ್ ಮತ್ತು ಬಾಗ್ದಾದ್ನಲ್ಲಿರುವ ಇರಾನಿನ ರಾಯಭಾರಿಯ ನಡುವಿನ ಸಭೆಯ ನಂತರ ಈ ಸಂದೇಶವನ್ನು ನೀಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಸಂದೇಶವನ್ನು ಯಾವ ಚಾನೆಲ್ ಮೂಲಕ ಕಳುಹಿಸಲಾಗಿದೆ ಎಂಬುದರ ಕುರಿತು ಹೆಚ್ಚಿನ ವಿವರಗಳನ್ನು ಒದಗಿಸಲಾಗಿಲ್ಲ. ಸರ್ವೋಚ್ಚ ನಾಯಕರಾಗಿ ಅಧಿಕಾರ ವಹಿಸಿಕೊಂಡ ನಂತರ, ಮೊಜ್ತಬಾ ಖಮೇನಿ ಅವರು ಸರ್ವೋಚ್ಚ ನಾಯಕರಾಗಿ ತಮ್ಮ ಮೊದಲ ಹೇಳಿಕೆ ಮತ್ತು ಪರ್ಷಿಯನ್ ಹೊಸ ವರ್ಷವಾದ ನೌರುಜ್ ಸಂದರ್ಭದಲ್ಲಿ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ.
ರಾಜ್ಯ ಮಾಧ್ಯಮಗಳು ಮೊಜ್ತಾಬಾ ಖಮೇನಿಯವರ ಫೋಟೋಗಳನ್ನು ನಿಯಮಿತವಾಗಿ ಪ್ರಕಟಿಸುತ್ತವೆ, ಆದರೆ ಅವು ಹೊಸದೋ ಅಥವಾ ಹಳೆಯದೋ ಎಂಬುದನ್ನು ಅವರು ಎಲ್ಲೂ ಹೇಳಿಲ್ಲ.
1979 ರ ಇಸ್ಲಾಮಿಕ್ ಕ್ರಾಂತಿಯ ನಂತರದ ಮೂರನೇ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ, ಅವರ ತಂದೆ ಮತ್ತು ಕ್ರಾಂತಿಯ ಸಂಸ್ಥಾಪಕ ಅಯತೊಲ್ಲಾ ರುಹೊಲ್ಲಾ ಖಮೇನಿ ಅವರ ಉತ್ತರಾಧಿಕಾರಿಯಾಗಿದ್ದಾರೆ.
ಫೆ.28ರಂದು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಗಳು ಇರಾಕ್ನ ಜನರಿಂದ ವ್ಯಾಪಕ ವಿರೋಧ ಎದುರಿಸಿತ್ತು. ಇರಾಕ್ನಲ್ಲಿರುವ ಇರಾನ್ ಬೆಂಬಲಿತ ಗುಂಪುಗಳು ಡ್ರೋನ್ಗಳು ಮತ್ತು ರಾಕೆಟ್ಗಳಿಂದ ಅಮೆರಿಕದ ನೆಲೆಗಳ ಮೇಲೆ ದಾಳಿ ಮಾಡಿದ್ದವು. ಈ ದಾಳಿಗಳು ಕೆಲವು ರಾಜತಾಂತ್ರಿಕ ಮತ್ತು ಮಿಲಿಟರಿ ಸೌಲಭ್ಯಗಳನ್ನು ಕೂಡ ಹಾನಿಗೊಳಿಸಿದ್ದವು.
ಬೆಂಗಳೂರು, ಮಾರ್ಚ್ 30: ಹೊಸ ಹಣಕಾಸು ವರ್ಷದ ಆರಂಭದ ದಿನವೇ ವಾಹನ ಸವಾರರಿಗೆ ದೊಡ್ಡ ಶಾಕ್ ಎದುರಾಗಿದೆ. ಏಪ್ರಿಲ್ 1 ಬುಧವಾರದಿಂದ ಜಾರಿಗೆ ಬರುವಂತೆ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಪ್ರಯಾಣ ಶುಲ್ಕವನ್ನು (Toll Price) ಹೆಚ್ಚಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ತೀರ್ಮಾನಿಸಿದೆ. ಇದರಿಂದಾಗಿ ಕರ್ನಾಟಕದ ಪ್ರಮುಖ 9 ಹೆದ್ದಾರಿಗಳಲ್ಲಿ ಸಂಚಾರ ನಡೆಸುವ ಕಾರು, ಬಸ್ ಮತ್ತು ಲಾರಿಗಳ ಟೋಲ್ ದರದಲ್ಲಿ ಶೇ 4 ರಿಂದ 5 ರಷ್ಟು ಏರಿಕೆಯಾಗಲಿದೆ.
ಟೋಲ್ ವಾರ್ಷಿಕ ಪಾಸ್ ದರವೂ ಏರಿಕೆ!
ರಾಜ್ಯದ ಆರ್ಥಿಕ ಜೀವನಾಡಿಗಳಂತಿರುವ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ, ಬೆಂಗಳೂರು-ತುಮಕೂರು, ಬೆಂಗಳೂರು-ಹೈದರಾಬಾದ್ ಮತ್ತು ಬೆಂಗಳೂರು-ಹಾಸನ ಸೇರಿದಂತೆ ಒಟ್ಟು 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೊಸ ದರ ಅನ್ವಯವಾಗಲಿದೆ. ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು ಹೊರತುಪಡಿಸಿ ಉಳಿದೆಲ್ಲಾ ವರ್ಗದ ವಾಹನಗಳಿಗೆ ಈ ಹೊರೆ ತಟ್ಟಲಿದೆ. ವಿಶೇಷವೆಂದರೆ ವಾರ್ಷಿಕ ಪಾಸ್ ದರವೂ ಸಹ ಏರಿಕೆಯಾಗಲಿದ್ದು, 3,000 ರೂ. ಇದ್ದ ಶುಲ್ಕ ಈಗ 3,075 ರೂ.ಗೆ ಏರಲಿದೆ.
ಯಾವೆಲ್ಲ ಹೆದ್ದಾರಿಗಳಲ್ಲಿ ಟೋಲ್ ದರ ಹೆಚ್ಚಳ?
ರಾಷ್ಟ್ರೀಯ ಹೆದ್ದಾರಿ 48: ಬೆಂಗಳೂರು – ತುಮಕೂರು-ಹಾವೇರಿ-ಬೆಳಗಾವಿ-ಮುಂಬೈ
ರಾಷ್ಟ್ರೀಯ ಹೆದ್ದಾರಿ 275: ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ವೇ
ರಾಷ್ಟ್ರೀಯ ಹೆದ್ದಾರಿ 44: ಬೆಂಗಳೂರು – ಹೈದರಾಬಾದ್
ರಾಷ್ಟ್ರೀಯ ಹೆದ್ದಾರಿ – 75 ಬೆಂಗಳೂರು- ಹಾಸನ- ಮಂಗಳೂರು
ರಾಷ್ಟ್ರೀಯ ಹೆದ್ದಾರಿ 75: ಬೆಂಗಳೂರು-ಹೊಸಕೋಟೆ-ಕೋಲಾರ
ರಾಷ್ಟ್ರೀಯ ಹೆದ್ದಾರಿ 66: ಮಂಗಳೂರು-ಉಡುಪಿ-ಕುಂದಾಪುರ
ರಾಷ್ಟ್ರೀಯ ಹೆದ್ದಾರಿ 50/52: ವಿಜಯಪುರ-ಹೊಸಪೇಟೆ-ಚಿತ್ರದುರ್ಗ
ಪ್ರತಿ ವರ್ಷ ನಿರ್ವಹಣೆಯ ಹೆಸರಿನಲ್ಲಿ ಶೇ 5ರಷ್ಟು ಟೋಲ್ ದರ ಏರಿಕೆ ಮಾಡುತ್ತಿರುವುದಕ್ಕೆ ವಾಹನ ಸವಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ನಮ್ಮ ಸಂಬಳ ವರ್ಷಕ್ಕೆ ಶೇ 1 ಅಥವಾ 2ರಷ್ಟು ಮಾತ್ರ ಏರಿಕೆಯಾಗುತ್ತದೆ, ಆದರೆ ಟೋಲ್ ದರ ಮಾತ್ರ ಶೇ. 5ರಷ್ಟು ಹೆಚ್ಚಾಗುತ್ತಿದೆ. ಇದು ಎಷ್ಟು ಸರಿ’ ಎಂದು ವಾಹನ ಮಾಲೀಕರು ಪ್ರಶ್ನಿಸುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆ ಟೋಲ್ ದರ ಏರಿಕೆ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
‘ಧುರಂಧರ್ 2’ ಸಿನಿಮಾ ರಿಲೀಸ್ ಆಗುವಾಗ ಎಷ್ಟು ನಿರೀಕ್ಷೆಗಳು ಇದ್ದವು ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಈ ಚಿತ್ರದ ಎದುರು ಮತ್ತೊಂದು ಸಿನಿಮಾ ತೆರೆಗೆ ಬರಬೇಕು ಎಂದರೆ ಅದು ಸಣ್ಣ ವಿಷಯ ಅಲ್ಲ. ಆದಾಗ್ಯೂ ಇಂತಹ ಚಾಲೆಂಜ್ ಅನ್ನು ‘ಲವ್ ಮಾಕ್ಟೇಲ್ 3’ ಸಿನಿಮಾ (Love Mocktail 3) ಸ್ವೀಕರಿಸಿತು. ಈ ಚಿತ್ರ ಫ್ಯಾಮಿಲಿ ಆಡಿಯನ್ಸ್ಗೆ ಇಷ್ಟ ಆಗಿದೆ. ಹೀಗಾಗಿ, ಸಿನಿಮಾದ ಕಲೆಕ್ಷನ್ ಒಳ್ಳೆಯ ರೀತಿಯಲ್ಲೇ ಆಗಿದೆ. ಎರಡನೇ ಭಾನುವಾರವೂ ಸಿನಿಮಾ ಉತ್ತಮ ಗಳಿಕೆ ಮಾಡಿದೆ.
‘ಧುರಂಧರ್ 2’ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಗಳಿಕೆ ಮಾಡುತ್ತಿದೆ. ಈ ಚಿತ್ರದಲ್ಲಿ ದೊಡ್ಡ ದೊಡ್ಡ ಸ್ಟಾರ್ಗಳಿವೆ. ಇದರ ಜೊತೆಗೆ ಇದು ಪ್ಯಾನ್ ಇಂಡಿಯಾ ಸಿನಿಮಾ. ಆದರೆ, ‘ಲವ್ ಮಾಕ್ಟೇಲ್ 3’ ಸಿನಿಮಾ ಆ ರೀತಿ ಅಲ್ಲ. ಇದರ ಬಜೆಟ್ ಕಡಿಮೆ. ಡಾರ್ಲಿಂಗ್ ಕೃಷ್ಣ ಚಿತ್ರದ ಹೀರೋ, ನಿರ್ದೇಶಕ. ‘ಲವ್ ಮಾಕ್ಟೇಲ್’ ಹಾಗೂ ‘ಲವ್ ಮಾಕ್ಟೇಲ್ 2’ ಚಿತ್ರದ ಗೆಲುವು ‘ಲವ್ ಮಾಕ್ಟೇಲ್ 3’ ಸಿನಿಮಾ ಮೇಲೆ ನಿರೀಕ್ಷೆ ಮೂಡಲು ಪ್ರಮುಖ ಕಾರಣ.
‘ಲವ್ ಮಾಕ್ಟೇಲ್ 3’ ಚಿತ್ರ 11 ದಿನಕ್ಕೆ 11.15 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಭಾನುವಾರ ಸಿನಿಮಾ 1.23 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಮುಂದಿನ ದಿನಗಳಲ್ಲಿ ಸಿನಿಮಾದ ಕಲೆಕ್ಷನ್ ತಗ್ಗುವ ಸಾಧ್ಯತೆ ಇದೆ. ಸದ್ಯ ಸಿನಿಮಾ ಈಗಾಗಲೇ ಲಾಭದಲ್ಲೇ ಇದೆ ಎಂದು ಹೇಳಲಾಗುತ್ತಾ ಇದೆ.
‘ಲವ್ ಮಾಕ್ಟೇಲ್ 3’ ಚಿತ್ರದಲ್ಲಿ ಸಿಗರೇಟ್, ಮದ್ಯ ಬಳಕೆಯ ದೃಶ್ಯ ಇಲ್ಲ. ಯಾವುದೇ ಡಬಲ್ ಮೀನಿಂಗ್ ಜೋಕ್ ಇಲ್ಲ. ಹೊಡೆದಾಟ-ಬಡಿದಾಟಕ್ಕಂತೂ ಅವಕಾಶವೇ ಇಲ್ಲ. ಈ ಎಲ್ಲಾ ಕಾರಣದಿಂದ ಸಿನಿಮಾ ಫ್ಯಾಮಿಲಿ ಆಡಿಯನ್ಸ್ಗೆ ಇಷ್ಟ ಆಗಿದೆ. ಈ ಚಿತ್ರದ ಒಟಿಟಿ ಹಾಗೂ ಟಿವಿ ಹಕ್ಕು ಒಳ್ಳೆಯ ರೇಟ್ಗೆ ಮಾರಾಟ ಆಗಿವೆ ಎಂದು ಹೇಳಲಾಗುತ್ತಾ ಇದೆ. ಈ ಚಿತ್ರದ ಹಾಡುಗಳು ಕೂಡ ಪ್ರೇಕ್ಷಕರಿಗೆ ಇಷ್ಟ ಆಗಿದೆ.
ಇತ್ತೀಚೆಗೆ ‘ಲವ್ ಮಾಕ್ಟೇಲ್ 3’ ಸಿನಿಮಾ ವಿವಾದ ಸೃಷ್ಟಿ ಮಾಡಿತ್ತು. ಈ ಚಿತ್ರದ ಕಥೆ ನಮ್ಮದು ಎಂದು ರಾಘವೇಂದ್ರ ನಾಯ್ಕ್ ಅವರು ದೂರಿದ್ದರು. ಗುರು ದೇಶಪಾಂಡೆ ಕೂಡ ರಾಘವೇಂದ್ರ ಅವರಿಗೆ ಧ್ವನಿಯಾದರು. ಈ ಪ್ರಕರಣ ನಂತರ ಸುಖಾಂತ್ಯ ಕಂಡಿತು.
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 30, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ದ್ವಾದಶಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ. ಆಶ್ಲೇಷ ನಕ್ಷತ್ರದಲ್ಲಿ ಚಂದ್ರನ ಸಂಚಾರವು ವಿವಿಧ ರಾಶಿಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಅವರು ವಿವರಿಸಿದ್ದಾರೆ.
ಇಸ್ಲಾಮಾಬಾದ್, ಮಾರ್ಚ್ 30: ಪಾಕಿಸ್ತಾನ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಈಜಿಪ್ಟ್ ವಿದೇಶಾಂಗ ಸಚಿವರನ್ನು ಸ್ವಾಗತಿಸುವಾಗ ಕಾಲು ಜಾರಿ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಮತ್ತು ಅಧಿಕಾರಿಗಳು ತಕ್ಷಣ ಅವರನ್ನು ಮೇಲಕ್ಕೆತ್ತಲು ಸಹಾಯ ಮಾಡಿದರು. ಅದೃಷ್ಟವಶಾತ್, ಅವರು ಬಿದ್ದಿದ್ದರಿಂದ ಯಾವುದೇ ಗಂಭೀರ ಗಾಯಗಳಾಗಿಲ್ಲ.
ಇರಾನ್-ಇಸ್ರೇಲ್-ಅಮೆರಿಕದ ನಡುವೆ ನಡೆಯುತ್ತಿರುವ ಉದ್ವಿಗ್ನತೆ ಕಡಿಮೆ ಮಾಡಲು ತಾವು ಮಧ್ಯಸ್ಥಿಕೆ ವಹಿಸುತ್ತೇವೆ ಎಂದು ಪಾಕಿಸ್ತಾನ ಮುಂದೆ ಬಂದಿದೆ. ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿ, ಇಶಾಕ್ ದಾರ್ ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ ಎಂದು ಸ್ಪಷ್ಟಪಡಿಸಿದೆ. ಅವರು ಪ್ರಸ್ತುತ ಈಜಿಪ್ಟ್, ಟರ್ಕಿ ಮತ್ತು ಸೌದಿ ಅರೇಬಿಯಾದ ನಾಯಕರೊಂದಿಗೆ ಪ್ರಮುಖ ಚರ್ಚೆಗಳನ್ನು ನಡೆಸುತ್ತಿದ್ದಾರೆ.
ಹಾರ್ಮುಜ್ ಜಲಸಂಧಿಯ ಮೂಲಕ ಪಾಕಿಸ್ತಾನ ಧ್ವಜ ಹೊಂದಿರುವ 20 ಹೆಚ್ಚುವರಿ ಹಡಗುಗಳಿಗೆ ಸಾಗಣೆಗೆ ಇರಾನ್ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಅವರು ಹೇಳಿದ್ದಾರೆ. ಒಪ್ಪಂದದ ಪ್ರಕಾರ, ಈಗ ಪ್ರತಿದಿನ ಎರಡು ಹಡಗುಗಳು ಈ ಮಾರ್ಗದಲ್ಲಿ ಸಾಗಲು ಸಾಧ್ಯವಾಗುತ್ತದೆ.
‘ಧುರಂಧರ್ 2’ ಸಿನಿಮಾ (Dhurandhar 2) ಎರಡನೇ ಭಾನುವಾರವೂ ತನ್ನ ಅಬ್ಬರವನ್ನು ಮುಂದುವರಿಸಿದೆ. ಈ ಚಿತ್ರ ಮೊದಲ ವಾರದಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿತ್ತು. ಅದನ್ನು ಎರಡನೇ ವಾರವೂ ಮುಂದುವರಿಸಿದೆ. ಎರಡನೇ ಭಾನುವಾರ ಸಿನಿಮಾ 68 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ನಿಜಕ್ಕೂ ದೊಡ್ಡ ಕಲೆಕ್ಷನ್ ಎಂದು ಬಾಕ್ಸ್ ಆಫೀಸ್ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ.
ಕಳೆದ ವರ್ಷ ಡಿಸೆಂಬರ್ 5ರಂದು ಬಂದ ‘ಧುರಂಧರ್’ ಸಿನಿಮಾ ಹಿಟ್ ಆದ ಹಿನ್ನೆಲೆಯಲ್ಲಿ ‘ಧುರಂಧರ್ 2’ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆ ನಿರೀಕ್ಷೆಯನ್ನು ನಿರ್ದೇಶಕ ಆದಿತ್ಯ ಧಾರ್ ಅವರು ಹುಸಿ ಮಾಡಿಲ್ಲ. ಅವರು ಸಿನಿಮಾನ ಜನರು ಗೆಲ್ಲಿಸಿದ್ದಾರೆ. ರಣವೀರ್ ಸಿಂಗ್ ಅವರ ಅದ್ಭುತ ನಟನೆ ಕೂಡ ಗಮನ ಸೆಳೆದಿದೆ. ಇದು ಸಿನಿಮಾ ಗೆಲುವಿಗೆ ಸಹಕಾರಿ ಆಗಿದೆ.
‘ಧುರಂಧರ್ 2’ ಸಿನಿಮಾ 11ನೇ ದಿನಕ್ಕೆ ಭಾರತದಲ್ಲಿ 1,011 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಈ ಚಿತ್ರದ ನೆಟ್ ಕಲೆಕ್ಷನ್ 846 ಕೋಟಿ ರೂಪಾಯಿ ಆಗಿದೆ. ಈ ಸಿನಿಮಾದ ವಿಶ್ವ ಮಟ್ಟದ ಗ್ರಾಸ್ ಕಲೆಕ್ಷನ್ 1,361 ಕೋಟಿ ರೂಪಾಯಿ ಆಗಿದೆ. ‘ಧುರಂಧರ್ 2’ ಸಿನಿಮಾ ಈಗಾಗಲೇ ‘ಕೆಜಿಎಫ್ 2’ ದಾಖಲೆಯನ್ನು ಮುರಿದಿದೆ. ‘ಕೆಜಿಎಫ್ 2’ ಚಿತ್ರದ ಲೈಫ್ ಟೈಮ್ ಕಲೆಕ್ಷನ್ 1,250 ಕೋಟಿ ರೂಪಾಯಿ ಆಸುಪಾಸಿನಲ್ಲಿದೆ. ಅದನ್ನು ಕೇವಲ 11 ದಿನಕ್ಕೆ ‘ಧುರಂಧರ್ 2’ ಸಿನಿಮಾ ಮುರಿದು ಹಾಕಿದೆ. ಸಿನಿಮಾದ ಒಟ್ಟಾರೆ ಕಲೆಕ್ಷನ್ ಬಗ್ಗೆಯೂ ಸಾಕಷ್ಟು ಕುತೂಹಲ ಮೂಡಿದೆ. ಈ ಚಿತ್ರ ಭಾರತದಲ್ಲೇ 1500 ಕೋಟಿ ರೂಪಾಯಿ ಗಳಿಸುವ ಸಾಧ್ಯತೆ ಇದೆ. ಹಾಗಾದಲ್ಲಿ ಹೊಸ ಇತಿಹಾಸ ಸೃಷ್ಟಿ ಆಗಲಿದೆ.
‘ಧುರಂಧರ್ 2’ ಚಿತ್ರವನ್ನು ಆದಿತ್ಯ ಧಾರ್ ಅವರು ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ರಣವೀರ್ ಸಿಂಗ್ ಹೀರೋ. ಸಾರಾ ಅರ್ಜುನ್ ನಾಯಕಿ. ಇನ್ನೂ ಹಲವು ಸೆಲೆಬ್ರಿಟಿಗಳು ಚಿತ್ರದ ಭಾಗ ಆಗಿದ್ದಾರೆ. ಈ ಚಿತ್ರವನ್ನು ಕೆಲವರು ಪ್ರೊಪೊಗಾಂಡ ಸಿನಿಮಾ ಎಂದು ಟೀಕೆ ಮಾಡಿದ್ದೂ ಇದೆ.
ದಾವಣಗೆರೆ, ಬಾಗಲಕೋಟೆ, ಮಾರ್ಚ್ 30: ಕರ್ನಾಟಕದಲ್ಲಿ ಉಪಚುನಾವಣೆಯ (Karnataka By Election) ಅಖಾಡ ದಿನೇ ದಿನೇ ರಂಗೇರುತ್ತಿದೆ. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ನಡುವೆ ಭಾರೀ ಪೈಪೋಟಿ ನಡೆಯುತ್ತಿರುವ ನಡುವೆಯೇ ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಮತ್ತು ಮುನಿಸಿನ ಚರ್ಚೆಗಳು ಜೋರಾಗಿವೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಹಿನ್ನೆಲೆ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಸಾಕಷ್ಟು ಒತ್ತಾಯಿಸಿದ್ದರು. ಮುಸ್ಲಿಂ ಮುಖಂಡ ಸಾಧಿಕ್ ಪೈಲ್ವಾನ್ಗೆ ಟಿಕೆಟ್ ನೀಡುವಂತೆ ಪಕ್ಷದ ನಾಯಕರಿಗೆ ಮನವಿ ಮಾಡಿದ್ದಲ್ಲದೇ, ಎಷ್ಟು ಖರ್ಚಾದರೂ ಗೆಲ್ಲಿಸಿಕೊಂಡು ಬರುತ್ತೇನೆ ಎಂದು ಭರವಸೆ ನೀಡಿದ್ದರು. ಆದರೂ ಟಿಕೆಟ್ ಸಿಕ್ಕಿಲ್ಲ.
ಕೊನೆಗೆ ಹೈಕಮಾಂಡ್ ಶಾಮನೂರು ಕುಟುಂಬದ ಸಮರ್ಥ್ಗೆ ಟಿಕೆಟ್ ನೀಡಿದ ಬಳಿಕ ಜಮೀರ್ ಅಹ್ಮದ್ ಅಸಮಾಧಾನಗೊಂಡಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಹೀಗಾಗಿಯೇ ಜಮೀರ್ ಅಹ್ಮದ್ ದಾವಣಗೆರೆ ಪ್ರಚಾರದಿಂದ ದೂರ ಉಳಿದಿದ್ದಾರೆ ಎಂದು ಹೇಳಲಾಗುತ್ತಿದೆ.
ಕೇರಳ ಚುನಾವಣಾ ಪ್ರಚಾರದಲ್ಲಿ ವ್ಯಸ್ತರಾದ ಜಮೀರ್
ಇದೀಗ ಜಮೀರ್ ಕೇರಳದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದಲ್ಲಿ ವ್ಯಸ್ತರಾಗಿದ್ದು, ವಯನಾಡಿನ ಕಲ್ಪೆಟ್ಟ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿದ್ಧಿಕ್ ಪರ ಮತಯಾಚನೆ ನಡೆಸುತ್ತಿದ್ದಾರೆ. ಅಲ್ಲಿಯೂ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪ್ರಸ್ತಾಪಿಸಿ ಪ್ರಚಾರ ನಡೆಸುತ್ತಿದ್ದಾರೆ.
ಈ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಟೀಕೆಗಳನ್ನು ಮಾಡಿದ್ದಾರೆ. ಕಾಂಗ್ರೆಸ್ ಮುಸ್ಲಿಮರಿಗೆ ಟಿಕೆಟ್ ನೀಡದೆ ಮೋಸ ಮಾಡಿದೆ ಎಂದು ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ, ಪಕ್ಷದಲ್ಲಿ ಟಿಕೆಟ್ ಕೇಳುವ ಹಕ್ಕು ಎಲ್ಲರಿಗೂ ಇದೆ ಎಂದಿದ್ದಾರೆ.
ಇನ್ನೊಂದೆಡೆ, ಕಾಂಗ್ರೆಸ್ ಅಭ್ಯರ್ಥಿಯ ಕುಟುಂಬದಲ್ಲೇ ಸಚಿವರು ಹಾಗೂ ಸಂಸದರು ಇದ್ದಾರೆ. ಇಷ್ಟೆಲ್ಲಾ ಅಧಿಕಾರ ಇದ್ದರೂ ಮತ್ತೆ ಅಧಿಕಾರ ಬೇಕೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರಶ್ನಿಸಿದ್ದಾರೆ. ಇದಕ್ಕೆ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯಿಸಿ, ಬಿಜೆಪಿಯವರದ್ದೇನು ವಂಶವಾಹಿನಿ ರಾಜಕೀಯ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಈ ನಡುವೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಭರ್ಜರಿ ಪ್ರಚಾರ ನಡೆಸಿದ್ದಾರೆ. ನೂರಾರು ಬೆಂಬಲಿಗರೊಂದಿಗೆ ರೋಡ್ ಶೋ ನಡೆಸಿ ಮತಯಾಚನೆ ಮಾಡಿದ್ದಾರೆ. ಮತ್ತೊಂದೆಡೆ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ್ ಕರಿಯಪ್ಪ ಮನೆ ಮನೆಗೆ ತೆರಳಿ ಪ್ರಚಾರ ಆರಂಭಿಸಿದ್ದಾರೆ. ರಾಜೀವ್ ಗಾಂಧಿ ಬಡಾವಣೆ, ಎಸ್.ಎಂ. ಕೃಷ್ಣನಗರ ಹಾಗೂ ಎಸ್ಪಿಎಸ್ ನಗರ ಪ್ರದೇಶಗಳಲ್ಲಿ ಮತದಾರರನ್ನು ಭೇಟಿ ಮಾಡಿದ್ದಾರೆ.
ಬಾಗಲಕೋಟೆಯಲ್ಲಿ ರಂಗೇರಿದ ಚುನಾವಣಾ ಕಣ
ಅತ್ತ ಬಾಗಲಕೋಟೆ ಕ್ಷೇತ್ರದಲ್ಲೂ ಚುನಾವಣಾ ಕಣ ರಂಗೇರಿದೆ. ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಮತ್ತು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ನಡುವೆ ನೇರ ಪೈಪೋಟಿ ನಡೆಯುತ್ತಿದೆ. ಅಭ್ಯರ್ಥಿಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಮಾರ್ಚ್ 30, 31 ಹಾಗೂ ಏಪ್ರಿಲ್ 3, 4, 6ರಂದು ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.
ಈ ನಡುವೆ ದಿವಂಗತ ಶಾಸಕ ಹೆಚ್.ವೈ. ಮೇಟಿ ಪುತ್ರಿ ಬಾಯಕ್ಕ, ತಮ್ಮ ಸಹೋದರ ಉಮೇಶ್ ಮೇಟಿ ಪರ ಪ್ರಚಾರ ನಡೆಸುವ ವೇಳೆ ತಂದೆಯನ್ನು ನೆನೆದು ಕಣ್ಣೀರಿಟ್ಟ ಘಟನೆ ಕೂಡ ಗಮನ ಸೆಳೆಯಿತು.
ಇದಲ್ಲದೆ ಬಾಗಲಕೋಟೆ ಜಿಲ್ಲೆಯ ಬೇವೂರು ಗ್ರಾಮದಲ್ಲಿ ಪ್ರಚಾರದ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಕಾಂಗ್ರೆಸ್ ಪರ ತಿಮ್ಮಾಪುರ ಮತ್ತು ಬಿಜೆಪಿ ಪರ ರಾಮುಲು ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ‘ಗೋ ಬ್ಯಾಕ್ ರಾಮುಲು’ ಎಂದು ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಮಾತಿನ ಚಕಮಕಿ ಕೈಕೈ ವಿಲಾಯಿಸುವ ತಲುಪಿತ್ತು.
ವರದಿ: ದಾವಣಗೆರೆಯಿಂದ ಬಸವರಾಜ ದೊಡ್ಮನಿ ಜೊತೆ ರವಿ ಮೂಕಿ, ಟಿವಿ9 ಬಾಗಲಕೋಟೆ
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಸ್ನೇಹಿತರಿಗೆ ಸಹಾಯ ಮಾಡುವ ಸಲುವಾಗಿ ನಿಮಗೆ ಓಡಾಟ ಹೆಚ್ಚಾಗಲಿದೆ. ನಿಮ್ಮ ಹೆಸರಿನಲ್ಲಿ ಸಾಲ ಪಡೆದುಕೊಂಡು, ಇತರರಿಗೆ ನೀಡುವಂತಹ ಸಾಧ್ಯತೆಗಳು ಜಾಸ್ತಿ ಇವೆ. ಮನೆಯಲ್ಲಿ ಈಗಾಗಲೇ ಇಟ್ಟಿರುವಂತಹ ಬೆಲೆಬಾಳುವ ವಸ್ತುಗಳ ಕಡೆಗೆ ಮಾಮೂಲಿಗಿಂತ ಜಾಸ್ತಿ ನಿಗಾ ಇರಲಿ. ಈ ದಿನ ಏನಾದರೂ ಬ್ರಾಂಡೆಡ್ ವಸ್ತುಗಳನ್ನು ಖರೀದಿ ಮಾಡುತ್ತಿದ್ದೀರಿ ಎಂದಾದಲ್ಲಿ ಸಂಪೂರ್ಣವಾಗಿ ಪರಿಶೀಲಿಸಿ, ಪರೀಕ್ಷಿಸಿ ಆ ನಂತರ ಖರೀದಿ ಮಾಡುವುದು ಉತ್ತಮ. ನಿಮಗೆ ತುಂಬಾ ಚೆನ್ನಾಗಿ ಗೊತ್ತಿರುವ ಕೆಲಸ ಹಾಗೂ ಅದನ್ನು ಸುಲಭವಾಗಿ ಮಾಡಬಹುದು ಎಂದು ಅಂದುಕೊಂಡು ಯಾವುದನ್ನೂ ಮುಂದಕ್ಕೆ ಹಾಕುತ್ತಾ ಹೋಗಬೇಡಿ. ಗಡುವಿನಲ್ಲಿ ಮುಗಿಯದ ಕೆಲಸವೊಂದರ ಹೊಣೆಯನ್ನು ನಿಮಗೆ ಕಟ್ಟುವ ಸಾಧ್ಯತೆಗಳಿವೆ.
ಈಗಾಗಲೇ ಕೃಷಿ ಜಮೀನು ಇರುವಂತಹವರು ಅಲ್ಲಿ ಕೆಲವು ಮುಖ್ಯವಾದ ಕೆಲಸಗಳನ್ನು ಮಾಡಿಸಲಿದ್ದೀರಿ. ಒಂದು ನಿಮ್ಮ ಕೈಯಿಂದ ಹಣವನ್ನು ಹಾಕಿ ಇದನ್ನು ಮಾಡಿಸುವ ಸಾಧ್ಯತೆ ಇದ್ದರೂ ಸ್ವಲ್ಪವಾದರೂ ಈ ಕೆಲಸಕ್ಕಾಗಿ ಸಾಲ ಮಾಡಬೇಕಾದ ಪರಿಸ್ಥಿತಿ ಉದ್ಭವಿಸಲಿದೆ. ಹೇಗಿದ್ದರೂ ಸಾಲ ಮಾಡುತ್ತಿದ್ದೇನೆ ಅಥವಾ ಬಡ್ಡಿ ಕಡಿಮೆ ಇದೆ ಎಂಬ ಕಾರಣವೊಡ್ಡಿಕೊಂಡು ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಸಾಲವನ್ನು ಪಡೆದುಕೊಂಡರೆ ಆ ನಂತರ ಪರಿತಪಿಸುವಂತೆ ಆಗುತ್ತದೆ, ಜಾಗ್ರತೆ. ಹಳೆಯ ಸ್ನೇಹಿತರು ಹಣಕಾಸಿನ ನೆರವನ್ನು ಕೇಳಿಕೊಂಡು ಬರುವ ಯೋಗ ಇದೆ. ಒಟ್ಟಿನಲ್ಲಿ ಹೇಳಬೇಕು ಅಂದರೆ, ಈ ದಿನ ಹಣಕಾಸಿನ ವಿಚಾರದಲ್ಲಿ ನೀವು ಹೇಗೆ ನಡೆದುಕೊಳ್ಳುವಿರಿ ಎಂಬುದರ ಆಧಾರದಲ್ಲಿ ಭವಿಷ್ಯದ ನಿಮ್ಮ ನೆಮ್ಮದಿಯು ನಿಂತಿರುತ್ತದೆ
ಪ್ರೀತಿ ಪ್ರೇಮದಲ್ಲಿ ಇರುವಂತಹವರು ಈ ವಿಚಾರವನ್ನು ತಮ್ಮ ಮನೆಯಲ್ಲಿ ಹೇಳಿಕೊಳ್ಳುವ ಬಗ್ಗೆ ನಿರ್ಧಾರ ಮಾಡ ಬೇಕಾಗುತ್ತದೆ. ದ್ವಿಚಕ್ರವಾಹನ ಖರೀದಿಗಾಗಿ ಈ ದಿನ ನೀವು ಅಡ್ವಾನ್ಸ್ ನೀಡುವ ಸಾಧ್ಯತೆಗಳಿವೆ. ನೀವು ಈ ಹಿಂದೆ ಯಾರಿಗೆ ಸಹಾಯ ಮಾಡಿರುತ್ತೀರೋ ಅವರು ಈ ದಿನ ನಿಮ್ಮ ನೆರವಿಗೆ ಬರಲಿದ್ದಾರೆ. ಹಳೆ ಗ್ಯಾಜೆಟ್ ಅಥವಾ ವಾಹನ ಅಥವಾ ಪೀಠೋಪಕರಣಗಳನ್ನು ಮಾರಾಟ ಮಾಡಬೇಕು ಅಂದುಕೊಳ್ಳುತ್ತಿರುವವರಿಗೆ ಅದನ್ನು ಖರೀದಿ ಮಾಡಲು ಕೆಲವರು ತಾವಾಗಿಯೇ ಮುಂದೆ ಬಂದು, ಉತ್ತಮ ಬೆಲೆಯು ನಿಮಗೆ ದೊರೆಯುವ ಸಾಧ್ಯತೆಗಳು ಕಾಣುತ್ತಿವೆ. ನಿಮಗಿಂತ ವಯಸ್ಸಿನಲ್ಲಿ ಸಣ್ಣವರ ವೈಯಕ್ತಿಕ ವಿಚಾರಗಳಿಗೆ ಯಾವುದೇ ಕಾರಣಕ್ಕೂ ತಲೆ ಹಾಕಲು ಹೋಗಬೇಡಿ.
ನೀವು ಈಗ ಇರುವಂತಹ ಸ್ಥಳದಿಂದ ಸ್ವಲ್ಪ ದೂರದಲ್ಲಿ ಅಥವಾ ನೀವು ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚು ದೂರದಲ್ಲಿ ಉದ್ಯೋಗ ದೊರೆಯುವಂತಹ ಅವಕಾಶಗಳಿವೆ. ನಿಮ್ಮ ಕೈಯಿಂದಲೇ ಹಣ ಹಾಕಿಕೊಂಡು ಮಾಡಿದಂತಹ ಕೆಲಸ ಅರ್ಧಕ್ಕೆ ನಿಂತು, ಒಂದು ಕಡೆ ಆ ಕೆಲಸವೂ ಪೂರ್ತಿಗೊಳ್ಳದೆ ಇನ್ನೊಂದು ಕಡೆ ನಿಮಗೆ ಬರಬೇಕಾದ ಹಣವು ಬಾರದೆ ಒಂದು ಬಗೆಯ ಆತಂಕ ಸೃಷ್ಟಿ ಆಗಲಿದೆ. ಮಹಿಳೆಯರಿದ್ದು, ಅದರಲ್ಲೂ ಮನೆಯಲ್ಲೇ ಇರುವಂತಹವರಿಗೆ ಕೆಲಸಕ್ಕೆ ಹೋಗುವಂತೆ ಸಂಗಾತಿ ಕಡೆಯಿಂದ ಒತ್ತಡವು ಹೆಚ್ಚಾಗಲಿದೆ. ಮಕ್ಕಳ ಸ್ವಭಾವದಲ್ಲಿ ದೊಡ್ಡ ಬದಲಾವಣೆಯನ್ನು ನೋಡುವುದಕ್ಕೆ ಸಿಗುತ್ತದೆ ಮತ್ತು ಈ ಕಾರಣಕ್ಕಾಗಿ ನೀವು ಅವರೊಂದಿಗೆ ಮಾತಿಗೆ ಮಾತನ್ನು ಬೆಳೆಸಿ, ವಾಗ್ವಾದವನ್ನು ಮಾಡಿಕೊಳ್ಳಲಿದ್ದೀರಿ.
ಸಿನಿಮಾ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವಂಥವರಿಗೆ ಹೊಸ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ನೀವು ಈಗಾಗಲೇ ಕೆಲಸ ಮಾಡಿ ಆಗಿದೆ, ನಿಮಗೆ ಬರಬೇಕಾದ ಹಣ ಹಾಗೇ ಬಾಕಿ ಉಳಿದುಹೋಗಿದೆ ಅಂತಾದಲ್ಲಿ ಈ ದಿನ ಪ್ರಯತ್ನವನ್ನು ಪಟ್ಟರೆ ಅದು ಬರುವಂಥ ದಿವಸವಾದರೂ ಗೊತ್ತಾಗುತ್ತದೆ ಅಥವಾ ಈ ದಿನ ಬಂದರೂ ಬಂದುಬಿಡಬಹುದು. ನಿಮ್ಮಲ್ಲಿ ಕೆಲವರು ಮನೆಗೆ ರೆಫ್ರಿಜರೇಟರ್ ನಂಥ ಗೃಹೋಪಯೋಗಿ ವಸ್ತುಗಳನ್ನು ತರುವಂತಹ ಯೋಗ ಇದೆ. ಈ ದಿನ ಸಣ್ಣ ಸಣ್ಣ ವಿಚಾರಕ್ಕೂ ನಿಮಗೆ ಸಿಕ್ಕಾಪಟ್ಟೆ ಸಿಟ್ಟು ಬರಲಿದೆ. ಸಾಧ್ಯವಾದಷ್ಟು ನಿಮ್ಮ ಮನಸ್ಸಿನ ಮೇಲೆ ಹತೋಟಿಯನ್ನು ಸಾಧಿಸಲು ಪ್ರಯತ್ನಿಸಿ. ಹಾಲು ಅಥವಾ ಹಾಲಿನಿಂದ ಮಾಡಿದ ಪದಾರ್ಥಗಳಿಂದ ದೂರವಿದ್ದಲ್ಲಿ ಕ್ಷೇಮ.
ಮನೆಗೆ ಸಂಬಂಧಿಕರು ಬರುವಂತಹ ಯೋಗ ಈ ದಿನ ಇದೆ. ಅವರ ಜೊತೆಗೆ ಕೆಲವು ಶುಭ ಕಾರ್ಯಗಳಲ್ಲಿ ನೀವು ಭಾಗಿಯಾಗಲಿದ್ದೀರಿ. ನಿಮ್ಮ ತಂದೆ ಅಥವಾ ತಂದೆ ಸಮಾನರಾದವರು ಸಣ್ಣ ಮಟ್ಟಿಗಾದರೂ ನಿಮಗೆ ದುಡ್ಡು ನೀಡುವ ಸಾಧ್ಯತೆಗಳಿವೆ. ವ್ಯಾಸಂಗವೋ ಅಥವಾ ಉದ್ಯೋಗವೋ ವಿದೇಶಕ್ಕಾಗಿ ತೆರಳಬೇಕು ಎಂದು ಪ್ರಯತ್ನ ನಡೆಸುತ್ತಿರುವವರಿಗೆ ಈ ತನಕ ಇದ್ದಂತ ಅಡೆತಡೆಗಳು ನಿವಾರಣೆಯಾಗಲಿವೆ. ಯಾರು ಧಾರ್ಮಿಕ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದೀರೋ ಅಂತಹವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ. ನೀವಾಗಿಯೇ ವಹಿಸಿಕೊಂಡ ಜವಾಬ್ದಾರಿಗಳನ್ನು ಗಡುವಿನೊಳಗೆ ಮುಗಿಸುವುದಕ್ಕೆ ಆದ್ಯತೆ ಕೊಡಿ.
ದೇವತಾ ಕಾರ್ಯಗಳಲ್ಲಿ ಭಾಗವಹಿಸುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಸ್ನೇಹಿತರು ಅಥವಾ ಸಂಬಂಧಿಕರು ಆಹ್ವಾನ ನೀಡಿದಲ್ಲಿ ಹೋಗಿ ಬಂದರೆ ಉತ್ತಮ. ಬಹಳ ಸಮಯದ ಹಿಂದೆ ಹೂಡಿಕೆ ಮಾಡಿದ್ದ ಷೇರು ಅಥವಾ ಮ್ಯೂಚುವಲ್ ಫಂಡ್ ಬಹಳ ಬೆಲೆ ಕಡಿಮೆ ಆಗಿ, ನಿಮಗೆ ಬೇಸರಕ್ಕೆ ಕಾರಣ ಆಗಿದ್ದಲ್ಲಿ ಈ ದಿನ ಅದರ ಬೆಲೆ ಏರುವುದಕ್ಕೆ ಅವಕಾಶಗಳಿವೆ. ಉದ್ಯೋಗ ಸ್ಥಳದಲ್ಲಿ ನಿಮಗೆ ಪದೋನ್ನತಿ ನೀಡುವ ಮುಂಚೆ ಕೆಲವು ಜವಾಬ್ದಾರಿಗಳನ್ನು ನೀಡುವುದರ ಬಗ್ಗೆ ಚರ್ಚೆಗಳಾಗಬಹುದು. ಆದ್ದರಿಂದ ಹೊಸ ಜವಾಬ್ದಾರಿಗಳೇನಾದರೂ ನಿಮಗೆ ನೀಡಲು ಮ್ಯಾನೇಜ್ ಮೆಂಟ್ ಕಡೆಯಿಂದ ಸೂಚನೆ ಬಂದಲ್ಲಿ ಯಾವುದೇ ಕಾರಣಕ್ಕೂ ನಿರಾಕರಿಸುವುದಕ್ಕೆ ಹೋಗಬೇಡಿ.
ನಿಮ್ಮಲ್ಲಿ ಕೆಲವರಿಗೆ ತೀವ್ರತರವಾದ ಚರ್ಮ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಕೆಲವು ವಿಚಾರಗಳನ್ನು ಯಾಕಾದರೂ ಮಾತನಾಡಿದೆನೋ ಎಂದು ಅಂದುಕೊಳ್ಳುವಂಥ ಸನ್ನಿವೇಶ ಮನೆಯಲ್ಲಿ ಸೃಷ್ಟಿಯಾಗಲಿದೆ. ನವ ವಿವಾಹಿತರಿಗೆ ಖರ್ಚಿನ ಪ್ರಮಾಣ ತುಂಬಾ ಹೆಚ್ಚಾಗಿ, ಆತಂಕಕ್ಕೆ ಕಾರಣವಾಗಬಹುದು ಅಥವಾ ಅದನ್ನು ಸಂಭಾಳಿಸಲು ಸಾಲ ಮಾಡಬೇಕಾಗುತ್ತದೆ. ನೀವು ಒಬ್ಬರೇ ಮಾಡಿ ಮುಗಿಸಬಹುದು ಅಂದುಕೊಂಡ ಕೆಲಸವು ವ್ಯಾಪ್ತಿ ದೃಷ್ಟಿಯಿಂದ ತುಂಬಾ ದೊಡ್ಡದಾಗಿ, ಯಾಕಾದರೂ ಈ ಕೆಲಸವನ್ನು ಒಪ್ಪಿಕೊಂಡೆನು ಎಂದು ಅನಿಸುವುದಕ್ಕೆ ಆರಂಭವಾಗುತ್ತದೆ. ಮುಖ್ಯ ಕೆಲಸಕ್ಕಾಗಿ ಮನೆಯಿಂದ ಹೊರಡುತ್ತಿದ್ದೀರಿ ಎಂದಾದರೆ ಮನಸಲ್ಲಿ ಶಿರಡಿ ಸಾಯಿಬಾಬಾರನ್ನು ನೆನಪಿಸಿಕೊಳ್ಳಿ.
ಮಾತಿನಲ್ಲಿ, ನಡವಳಿಕೆಯಲ್ಲಿ ನಿಮ್ಮಲ್ಲೊಂದು ಆಕರ್ಷಣಾ ಶಕ್ತಿ ಕಾಣಿಸಿಕೊಳ್ಳಲಿದೆ. ನೀವು ಇಡುವ ಹೆಜ್ಜೆಗಳಿಂದ ಭವಿಷ್ಯದಲ್ಲಿ ಎಂಥ ಅನುಕೂಲ ಆಗಲಿದೆ ಎಂಬ ಬಗ್ಗೆ ಸ್ಪಷ್ಟತೆ ದೊರೆಯಲಿದ್ದು, ಯಾವುದೇ ನಿರ್ಧಾರ ಅಥವಾ ಕೆಲಸದಲ್ಲೂ ಗೊಂದಲ ಇರುವುದಿಲ್ಲ. ರಾಜಕಾರಣದಲ್ಲಿ ಇರುವಂತಹವರಿಗೆ ಪದೋನ್ನತಿ ಅಥವಾ ಪ್ರಮುಖ ಜವಾಬ್ದಾರಿಗಳು ಸಿಗಬಹುದು. ನಿಮ್ಮ ಸಹೋದ್ಯೋಗಿಗಳಿಗೆ ಕೆಲವು ಕೆಲಸಗಳು ಕಷ್ಟ ಎನಿಸಿ, ಅವುಗಳನ್ನು ಪೂರ್ಣಗೊಳಿಸಲು ನಿಮ್ಮ ಸಹಾಯವನ್ನು ಕೇಳಿಕೊಂಡು ಬರಬಹುದು. ವಿದ್ಯಾರ್ಥಿಗಳು ಐಪ್ಯಾಡ್ ನಂತಹ ಗ್ಯಾಜೆಟ್ ಗಳನ್ನು ಖರೀದಿಸುವ ಯೋಗ ಇದೆ. ನೀವು ಈ ತನಕ ಹುಡುಕಾಡುತ್ತಿರುವಂತಹ ಪ್ರಮುಖ ಕಾಗದ- ಪತ್ರ ದೊರೆಯುವ ಅವಕಾಶಗಳು ಹೆಚ್ಚಿವೆ.