All posts by nagaraj11081993

Horoscope Today 30 March: ಈ ರಾಶಿಯವರಿಗೆ ಏನಾದರೂ ಹೊಸತನ್ನು ಮಾಡುವ ಉತ್ಸಾಹ

Horoscope Today 30 March: ಈ ರಾಶಿಯವರಿಗೆ ಏನಾದರೂ ಹೊಸತನ್ನು ಮಾಡುವ ಉತ್ಸಾಹ

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಸೋಮ ಪಕ್ಷ : ಶುಕ್ಲ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಆಶ್ಲೇಷಾ, ಯೋಗ : ಧೃತಿ, ಕರಣ : ಭದ್ರ, ಸೂರ್ಯೋದಯ – 06 – 22 am, ಸೂರ್ಯಾಸ್ತ – 06 – 35 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 07:54 – 09:26, ಯಮಗಂಡ ಕಾಲ 10:57 – 12:29, ಗುಳಿಕ ಕಾಲ 14:00 – 15:32

ಮೇಷ ರಾಶಿ: ಸ್ನೇಹಿತರ ಜೊತೆ ಹೆಚ್ಚಿನ ಸಮಯವನ್ನು ಕಳೆಯಬೇಕು ಎಂದಿದ್ದರೂ ಆಗದು. ಸಂಸಾರವನ್ನು ಮುನ್ನಡೆಸುವ ಚಾತುರ್ಯವನ್ನು ನೀವು ತಿಳಿದುಕೊಳ್ಳುವಿರಿ. ಸಂಗಾತಿಯ ಜೊತೆ ಮಾತು ಮಿತಿಮೀರಬಹುದು.‌ ನಿಮ್ಮ ಆದಾಯ ಮತ್ತು ಖರ್ಚಿಗೆ ನೀವು ಯೋಜನೆ ಸಿದ್ಧಪಡಿಸಿದರೆ ಅದು ನಿಮಗೆ ಒಳ್ಳೆಯದು. ನೀವು ಕೆಲವು ಹೊಸ ಒಪ್ಪಂದಗಳ ಲಾಭವನ್ನು ಪಡೆಯುತ್ತೀರಿ. ಅಚಾತುರ್ಯದಿಂದ ತಪ್ಪನ್ನು ಮಾಡಿ, ಪಶ್ಚಾತ್ತಾಪ ಪಡುವಿರಿ. ಆದಾಯಕ್ಕಿಂತ ಖರ್ಚು ಹೆಚ್ಚಾಗಿ ಆತಂಕ ಪಡುವಿರಿ. ಕುಟುಂಬದ ಸದಸ್ಯರ ಪ್ರೀತಿಯು ಸಿಕ್ಕಿ ಹರ್ಷಿಸುವಿರಿ.

ವೃಷಭ ರಾಶಿ: ನೀವು ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯವನ್ನು ಸ್ವೀಕರಿಸುತ್ತೀರಿ. ವ್ಯಾಪಾರ ಯೋಜನೆಯನ್ನು ಪೂರ್ಣಗೊಳಿಸಲು ನೀವು ಹೆಚ್ಚು ಗಮನ ಹರಿಸಬೇಕು. ಆರ್ಥಿಕ ಯೋಜನೆಗಳಿಗೆ ಉತ್ತೇಜನ ದೊರೆಯಲಿದೆ. ಪರಸ್ಪರ ಸಹಕಾರದ ಭಾವನೆ ನಿಮ್ಮೊಳಗೆ ಉಳಿಯುತ್ತದೆ. ಸಾಲದ ಬಾಧೆಯು ನಿಮ್ಮ ಮನಸ್ಸನ್ನು ಚುಚ್ಚುವುದು. ನೆಮ್ಮದಿಗೆ ನಿಮ್ಮದೇ ಮಾರ್ಗವನ್ನು ಅನುಸರಿಸಿ. ಇನ್ನೊಬ್ಬರನ್ನು ಸರಿ ಮಾಡಲು ಹೋಗಿ ನೀವೇ ಹಾಳಾಗಬಹುದು.

ಮಿಥುನ ರಾಶಿ: ಜೀವನದ ಗುರಿಯೊಂದನ್ನು ಸಾಧನೆಯಾಗಲಿದೆ. ಹಳೆಯ ಕೆಲಸಗಳು ಅತಿ ವೇಗವಾಗಿ ನೆರವೇರಲಿವೆ. ಕುಟುಂಬದಲ್ಲಿ ನಡೆಯುತ್ತಿರುವ ಸಮಸ್ಯೆಗಳನ್ನು ಯಾವುದೇ ಹೊರಗಿನವರಿಗೆ ಬಹಿರಂಗಪಡಿಸುವುದು ಬೇಡ. ಯಾರಾದರೂ ಲಾಭ ಪಡೆಯಲು ಪ್ರಯತ್ನಿಸಬಹುದು. ನೀವು ಶುಭ ಸಮಾರಂಭಗಳಲ್ಲಿ ಭಾಗವಹಿಸಬಹುದು. ಸಂಗಾತಿಯ ಮಾತುಗಳು ನಿಮಗೆ ಕಿರಿಕಿರಿಯನ್ನು ಕೊಡುವುದು. ನಿಮಗೆ ಅಭದ್ರತೆಯು ಕಾಡಬಹುದು. ಸಂಗಾತಿಯು ನಿಮಗೆ ಬೇಕಾದ ಹಣವನ್ನು ನೀಡುವರು. ಸಂಶೋಧನೆಯು ನಿಮಗೆ ಖುಷಿ ಕೊಡುವುದು.

ಕರ್ಕಾಟಕ ರಾಶಿ: ನಿಮ್ಮ ವಿಶ್ವಾಸ ದುರುಪಯೋಗವಾಗದಂತೆ ನೋಡಿಕೊಳ್ಳಿ. ಮಾತಿನಿಂದ ಅನಾವಶ್ಯಕ ಮನಸ್ತಾಪವಾಗುವುದು. ಕೆಲವು ಪ್ರಮುಖ ಚರ್ಚೆಯಲ್ಲಿ ಭಾಗವಹಿಸಬಹುದು. ವ್ಯವಹಾರದಲ್ಲಿ ಕೆಲವು ಹಳೆಯ ಯೋಜನೆಗಳಿಂದ ನೀವು ಉತ್ತಮ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಕುಟುಂಬ ಸದಸ್ಯರಿಂದ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ನಿಮ್ಮ ಅಭಿಪ್ರಾಯವೂ ಮುಖ್ಯವಾಗಬಹುದು. ಇದ್ದ ನಿಮ್ಮ ಸ್ವಭಾವದಲ್ಲಿ ಪರಿವರ್ತನೆ ಕಾಣಿಸಿಕೊಳ್ಳುವುದು. ನಿಮ್ಮ ವಸ್ತುಗಳ ಉಪಯೋಗವನ್ನು ನೀವು ಬಹಳ ನಿರ್ಲಕ್ಷ್ಯದಿಂದ ಮಾಡುವಿರಿ.

ಸಿಂಹ ರಾಶಿ: ವ್ಯಾಪಾರ ವ್ಯವಹಾರಗಳು ಚೇತರಿಕೆ ಕಾಣಲಿವೆ ಹಾಗೂ ಆದಾಯ ವೃದ್ಧಿಸಲಿವೆ. ನೀವು ಕೆಲಸಕ್ಕೆ ಯೋಗ್ಯವಾದ ಗೌರವವನ್ನೂ ಪಡೆಯಬಹುದು. ಸಾಮಾಜಿಕ ಸಮಸ್ಯೆಗಳು ಹೆಚ್ಚಾಗುವುದು. ನಿಮ್ಮ ವಿರೋಧಿಗಳು ನಿಮಗೆ ತೊಂದರೆ ನೀಡಲು ಪ್ರಯತ್ನಿಸುತ್ತಾರೆ. ನಿಮ್ಮ ಬುದ್ಧಿವಂತಿಕೆಯಿಂದ ಸುಲಭವಾಗಿ ಸೋಲಿಸಲು ಸಾಧ್ಯವಾಗುತ್ತದೆ. ಅಪರೂಪದ ವ್ಯಕ್ತಿಗಳ ಭೇಟಿಯಾಗಲಿದೆ. ನಿಮ್ಮ ಸರಳತೆಯು ನಿಮಗೆ ಧನಾತ್ಮಕ ಅಂಶಗಳಿಗೆ ಕಾರಣವಾಗುವುದು. ಯಾರ ಮೇಲಾದರೂ ಮುನಿಸು ತಾತ್ಕಾಲಿಕವಾಗಿ ಇರುವುದು.

ಕನ್ಯಾ ರಾಶಿ: ನೀವು ಚಿಂತನಶೀಲವಾಗಿ ಕೆಲಸ ಮಾಡಿದರೆ, ಅದು ನಿಮಗೆ ಉತ್ತಮ. ನೀವು ಕೆಲವು ಹೊಸ ಕೆಲಸವನ್ನು ಪ್ರಾರಂಭಿಸಲು ಯೋಚಿಸಿದ್ದರೆ, ನಿಮ್ಮ ಆಸೆಯೂ ಈಡೇರಬಹುದು. ನಿಮ್ಮ ಮಗುವಿಗೆ ನೀವು ಹೊಸ ವಾಹನವನ್ನು ಮನೆಗೆ ತರಬಹುದು. ನೀವು ಸ್ನೇಹಿತನ ಜೊತೆ ವಿವಾದವನ್ನು ಹೊಂದಿದ್ದರೆ, ಅವರು ನಿಮ್ಮನ್ನು ಸಮಾಧಾನಪಡಿಸಲು ಬರಬಹುದು. ನಿಮ್ಮ ಆಲೋಚನೆಯನ್ನು ಕೆಲವಷ್ಟಕ್ಕೆ ಸೀಮಿತಗೊಳಿಸಿಕೊಳ್ಳುವಿರಿ. ಉತ್ತಮ ವಸ್ತುಗಳು ಸಿಕ್ಕರೂ ಅದನ್ನು ಉಳಿಸಿಕೊಳ್ಳಲು ಕಷ್ಟಪಡುವಿರಿ.

ತುಲಾ ರಾಶಿ; ಯಾವುದೇ ವ್ಯತಿರೇಕ ಸನ್ನಿವೇಶಗಳನ್ನು ನಿಭಾಯಿಸಲು ಪ್ರಯತ್ನಿಸಬೇಕಾಗುತ್ತದೆ. ಮನೆಯ ಅಲಂಕಾರದ ಬಗ್ಗೆಯೂ ನೀವು ಸಂಪೂರ್ಣ ಗಮನ ಹರಿಸುವಿರಿ. ಕುಟುಂಬದ ಸದಸ್ಯರಿಂದ ನೀವು ಆಚ್ಚರಿಯ ಉಡುಗೊರೆಯನ್ನು ಪಡೆಯಬಹುದು. ಹೆತ್ತವರ ಆಶೀರ್ವಾದವು ನಿಮಗೆ ಉತ್ಸಾಹವನ್ನು ಕೊಡಬಹುದು. ನಿಮ್ಮ ನಿರ್ಧಾರವನ್ನು ಮತ್ತೋಬ್ಬರಿಗೆ ಹೇರುವುದು ಬೇಡ. ಅನುಭವಿಗಳ ಮಾರ್ಗದರ್ಶನದಲ್ಲಿ ಮುನ್ನಡೆಯುವಿರಿ. ಆದಷ್ಟು ಸಮಾಧಾನದಿಂದ ಶತ್ರುಗಳನ್ನು ಗೆಲ್ಲಲು ಪ್ರಯತ್ನಿಸಿ.

ವೃಶ್ಚಿಕ ರಾಶಿ: ನೀವು ಕುಟುಂಬದ ಜೊತೆ ಹೊರಗೆ ಹೋಗಲು ಯೋಜಿಸಬಹುದು. ಆದರೆ ಕುಟುಂಬದ ಸಮಸ್ಯೆಗಳನ್ನು ಒಟ್ಟಿಗೆ ಪರಿಹರಿಸಲೂ ನೀವು ಪ್ರಯತ್ನಿಸಬೇಕು. ಇಲ್ಲದಿದ್ದರೆ ಅದು ನಿಮ್ಮ ಸಂಬಂಧಗಳಲ್ಲಿ ಬಿರುಕು ಉಂಟುಮಾಡಬಹುದು. ಯಾವುದೇ ಕೆಲಸಕ್ಕೆ ಬೇರೆಯವರ ಮೇಲೆ ಅವಲಂಬಿತರಾಗಬೇಡಿ. ನಿಮ್ಮ ಉದ್ಯಮದ ಅಭಿವೃದ್ಧಿಗೆ ತುರ್ತು ಸಭೆಯನ್ನು ಮಾಡಬೇಕಾದೀತು. ಹೊಸ ವಾಹನ ಖರೀದಿಯ ಪ್ರಸ್ತಾಪವನ್ನು ಸದ್ಯ ತಳ್ಳಿಹಾಕುವಿರಿ. ಆರ್ಥಿಕ ಬಲವನ್ನು ನೋಡಿ ಖರ್ಚಿನ ನಿರ್ಧಾರವನ್ನು ಮಾಡಿ.

ಧನು ರಾಶಿ: ನಿಮ್ಮ ಪ್ರೀತಿಪಾತ್ರರಿಗೆ ನಿಮ್ಮ ಮೇಲೆ ಸಂಪೂರ್ಣ ನಂಬಿಕೆ ಇರುತ್ತದೆ. ನಿಮ್ಮ ಕೆಲಸದಲ್ಲಿ ನೀವು ಅನಿರೀಕ್ಷಿತ ಭಡ್ತಿಯನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಮಕ್ಕಳ ವೃತ್ತಿಜೀವನದ ಬಗ್ಗೆ ನೀವು ಪ್ರಮುಖ ನಿರ್ಧಾರವನ್ನು ಹಿರಿಯರು ವಿಚಾರಿಸುವರು. ನಿಮ್ಮ ಸಂಗಾತಿಯ ಜೊತೆ ಚರ್ಚಿಸಿದರೆ ಅದು ನಿಮಗೆ ಇನ್ನೂ ಉತ್ತಮವಾಗಿರುತ್ತದೆ. ಅಗ್ನಿಯ ಭೀತಿಯು ನಿಮಗೆ ಅಧಿಕವಾಗಿ ಕಾಡುವುದು. ಮಕ್ಕಳನ್ನು ತಿದ್ದುವುದು ನಿಮಗೆ ಕಷ್ಟವಾದೀತು. ನಿಮ್ಮ ಸ್ವಭಾವವನ್ನು ದುರುಪಯೋಗ ಮಾಡಿಕೊಳ್ಳುವರು. ಹತ್ತಾರು ವಿಚಾರವು ನಿಮ್ಮ ತಲೆಯಲ್ಲಿ ಓಡಾಡುವುದು.

ಮಕರ ರಾಶಿ: ಇಂದು ಮುಖ್ಯವಾಗಿ ಯಾವುದೇ ಕಾರ್ಯಕ್ಕೆ ಆರ್ಥಿಕ ಮುಗ್ಗಟ್ಟು ಬಂದು ಅರ್ಧಕ್ಕೆ ನಿಲ್ಲಿಸುವ ಸಾಧ್ಯತೆ ಇದೆ. ಆದರೆ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ನೀವು ಕೈಲಾದಷ್ಟು ಪ್ರಯತ್ನಿಸುತ್ತೀರಿ. ನಿಮ್ಮ ಸಹೋದರನ ಜೊತೆ ನಿಮ್ಮ ಆಪ್ತತೆಯು ಹೆಚ್ಚಾಗುತ್ತದೆ. ವಿದೇಶದಲ್ಲಿರುವ ಕುಟುಂಬದ ಸದಸ್ಯರಿಂದ ನೀವು ಒಳ್ಳೆಯ ಸುದ್ದಿಯನ್ನು ಕೇಳಬಹುದು. ಆಹಾರವು ಸರಿಯಾಗಿ ಸಿಗದೇ ನಿಮಗೆ ಸಂಕಟವಾಗಬಹುದು. ದುಡಿಮೆಯ ಬೆನ್ನೇರಿ ಸಂಬಂಧಗಳನ್ನು ಸಡಿಲಮಾಡಿಕೊಳ್ಳುವಿರಿ. ವಿದ್ಯಾರ್ಥಿಗಳಿಗೆ ಒಮ್ಮನಸ್ಸು ಬರುವುದು ಕಷ್ಟವಾಗುವುದು.

ಕುಂಭ ರಾಶಿ: ಯಾರ ಹೊಗಳಿಕೆಗೂ ಮರುಳಾಗದಿರಿ. ಆತುರದಲ್ಲಿ ಯಾವುದೇ ಕೆಲಸ ಮಾಡುವುದನ್ನು ಮುಖ್ಯ ಕಾರ್ಯಗಳೇ ಮರೆತುಹೋಗಬಹುದು. ನೀವು ವೈಯಕ್ತಿಕ ವಿಷಯಗಳ ಮೇಲೆ ಸಂಪೂರ್ಣ ಗಮನವನ್ನು ಹೊಂದಿದ್ದರೆ ನಿಮಗೆ ಒಳ್ಳೆಯದು. ಬಂಧುಗಳಿಂದ ಕೆಲಸವು ಹಾಳಾಗಬಹುದು. ಕಾನೂನಿಗೆ ವಿದ್ಧವಾದ ಕಾರ್ಯವನ್ನು ಸಮರ್ಥಿಸಿಕೊಳ್ಳದಿರಿ. ಸಂಗಾತಿಯ ಮಾತುಗಳು ನಿಮಗೆ ಬೇಸರ ತರಿಸಬಹುದು.

ಮೀನ ರಾಶಿ: ನೀವು ಇಂದು ಹೊರಗಿನವರಿಗೆ ಯಾವುದೇ ನಿಮ್ಮ ಆಂತರಿಕ ಮಾಹಿತಿಯನ್ನು ಬಹಿರಂಗಪಡಿಸಬಾರದು. ರಕ್ತ ಸಂಬಂಧಿಗಳು ಮೊದಲಿಗಿಂತ ಉತ್ತಮವಾಗಿರುತ್ತಾರೆ. ನಿಮ್ಮ ಯೋಜನೆಗಳನ್ನು ನೀವು ವೇಗವಾಗಕಸುವಿರಿ. ಇಂದು ನೀವು ದೇವರ ಆರಾಧನೆಯಲ್ಲಿ ಮಗ್ನರಾಗುವಿರಿ. ಸಿಟ್ಟಾಗುವ ಸ್ಥಿತಿಯಲ್ಲಿಯೂ ನೀವು ಶಾಂತರಾಗುವಿರಿ. ಮನೆಯ ಕೆಲಸವೆಲ್ಲವೂ ಹಾಗೆಯೇ ಇರಿಸಿಕೊಂಡು ಬಂಧುಗಳ ಮನೆಗೆ ಹೋಗಲಿದ್ದೀರಿ.

ಲೋಹಿತ ಹೆಬ್ಬಾರ್-8762924271 (what’s app only)

Source link

MI vs KKR: 13 ವರ್ಷಗಳ ಸತತ ಸೋಲಿಗೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್ ನಾಯಕ ಅಜಿಂಕ್ಯ ರಹಾನೆ ಹಾಗೂ ರಘುವಂಶಿ ಅವರ ಅರ್ಧಶತಕದ ನೆರವಿನಿಂದ 220 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಮುಂಬೈ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ರಿಕಲ್ಟನ್ ಅವರ ಅರ್ಧಶತಕದ ನೆರವಿನಿಂದ ಈ ಬೃಹತ್ ಗುರಿಯನ್ನು ಬೆನ್ನಟ್ಟಿ ಗೆಲುವು ಸಾಧಿಸಿತು. ಈ ಮೂಲಕ ಮುಂಬೈ ಐಪಿಎಲ್ ಐತಿಹಾಸದಲ್ಲಿ ಅತ್ಯಧಿಕ ಮೊತ್ತ ಬೆನ್ನಟ್ಟಿದ ದಾಖಲೆ ಬರೆಯುವುದರ ಜೊತೆಗೆ ತನ್ನ ಸೋಲಿನ ಸರಣಿಗೂ ಅಂತ್ಯ ಹಾಡಿದೆ.

ವಾಸ್ತವವಾಗಿ ಮುಂಬೈ ಇಂಡಿಯನ್ಸ್ ತಂಡ 2012 ರ ಐಪಿಎಲ್​ನಂತರ ಇಲ್ಲಿಯವರೆಗೆ ಪ್ರತಿ ಆವೃತ್ತಿಯ ತನ್ನ ಮೊದಲ ಪಂದ್ಯದಲ್ಲಿ ಸತತ ಸೋಲುಗಳನ್ನು ಕಂಡಿತ್ತು. ಅಂದರೆ ಸತತ 13 ಆವೃತ್ತಿಗಳ ಮೊದಲ ಪಂದ್ಯದಲ್ಲಿ ಮುಂಬೈಗೆ ಗೆಲುವು ಧಕ್ಕಿರಲಿಲ್ಲ. ಆದರೆ ಈ ಸತತ ಸೋಲಿನ ಸರಣಿಯನ್ನು 2026 ರ ಆವೃತ್ತಿಯಲ್ಲಿ ಮುರಿಯುವಲ್ಲಿ ಮುಂಬೈ ಇಂಡಿಯನ್ಸ್ ಯಶಸ್ವಿಯಾಗಿದೆ. ಹಾಗೆಯೇ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಗುರಿ ಬೆನ್ನಟ್ಟಿದ ದಾಖಲೆಯನ್ನು ಬರೆದಿದೆ. 2021 ರಲ್ಲಿ ಮುಂಬೈ, ಸಿಎಸ್​ಕೆ ನೀಡಿದ್ದ 219 ರನ್​ಗಳ ಗುರಿ ಬೆನ್ನಟ್ಟಿ ಗೆದ್ದಿತ್ತು. ಇದೀಗ 221 ರನ್ ಬೆನ್ನಟ್ಟಿ ಮುಂಬೈ ತನ್ನ ಹಳೆಯ ದಾಖಲೆಯನ್ನು ಮುರಿದಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್‌ಗಳಿಗೆ 220 ರನ್‌ಗಳ ಬೃಹತ್ ಮೊತ್ತವನ್ನು ಕಲೆಹಾಕಿತು. ನಾಯಕ ಅಜಿಂಕ್ಯ ರಹಾನೆ, ಹೊಸ ಆರಂಭಿಕ ಆಟಗಾರ ಫಿನ್ ಅಲೆನ್ (37) ಅವರೊಂದಿಗೆ ತಂಡಕ್ಕೆ 69 ರನ್‌ಗಳ ಸ್ಫೋಟಕ ಆರಂಭವನ್ನು ನೀಡಿದರು. ರಹಾನೆ (67) ಭರ್ಜರಿ ಅರ್ಧಶತಕ ಗಳಿಸಿದರೆ, ನಂತರ ಬಂದ ಯುವ ಬ್ಯಾಟ್ಸ್‌ಮನ್ ಅಂಗ್‌ಕ್ರಿಶ್ ರಘುವಂಶಿ ಕೂಡ (51) ಸ್ಫೋಟಕ ಅರ್ಧಶತಕ ಗಳಿಸಿದರು. ಮುಂಬೈ ಪರ, ಶಾರ್ದೂಲ್ ಠಾಕೂರ್ 3 ವಿಕೆಟ್‌ ಕಬಳಿಸಿದರು.

Source link

ಒಂದೆಡೆ ರಾಮುಲು, ಇನ್ನೊಂದೆಡೆ ಸಚಿವ ತಿಮ್ಮಾಪುರ: ಕೈ ಕೈ ಮಿಲಾಯಿಸಿದ ಕಾರ್ಯಕರ್ತರು

ಬಾಗಲಕೋಟೆ, (ಮಾರ್ಚ್ 29): ಬಿಜೆಪಿ ಹಾಗೂ ಕಾಂಗ್ರೆಸ್​​ನ ಘಟಾನುಘಟಿ ನಾಯಕರು ಬಾಗಲಕೋಟೆಗೆ ಎಂಟ್ರಿ ಕೊಟ್ಟಿದ್ದು, ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಅದರಂತೆ ಬೇವೂರು ಗ್ರಾಮದಲ್ಲಿ ಇಂದು (ಮಾರ್ಚ್ 29) ಬಿಜೆಪಿಯಿಂದ ಶ್ರೀರಾಮುಲು ಹಾಗೂ ಕಾಂಗ್ರೆಸ್​​ನಿಂದ ಸಚಿವ ತಿಮ್ಮಾಪುರ ಅವರು ಚುನಾವಣಾ ಪ್ರಚಾರ ನಡೆಸಿದ್ದು, ಈ ವೇಳೆ ಇಬ್ಬರ ರ್ಯಾಲಿ ಎದುಬದುರಾಗಿದೆ. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಕೂಗಾಡಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

MI vs KKR: 550 ಸಿಕ್ಸರ್​ಗಳು..! ಇತಿಹಾಸ ನಿರ್ಮಿಸಿದ ರೋ‘ಹಿಟ್’ ಶರ್ಮಾ

Source link

9 ವರ್ಷ ಹಳೆಯ ‘ಬಾಹುಬಲಿ 2’ ದಾಖಲೆ ಮುರಿದ ‘ಧುರಂಧರ್ 2’

ಧುರಂಧರ್ 2’ (Dhurandhar 2) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಅಕ್ಷರಷಃ ಅಬ್ಬರಿಸುತ್ತಿದೆ. ಬಿಡುಗಡೆ ಆದ ಎಲ್ಲ ಸೆಂಟರ್​​ಗಳಲ್ಲೂ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಹಿಂದಿ ಸಿನಿಮಾಗಳು ದಕ್ಷಿಣದಲ್ಲಿ ಓಡುವುದು ಕಡಿಮೆ, ಅದರಲ್ಲೂ ತಮಿಳುನಾಡು, ಆಂಧ್ರ, ಕೇರಳಗಳಲ್ಲಿ ಬಹಳ ಕಡಿಮೆ. ಆದರೆ ಅಲ್ಲಿಯೂ ಸಹ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ದೇಶದಲ್ಲಿ ಮಾತ್ರವೇ ಅಲ್ಲದೆ, ವಿದೇಶಗಳಲ್ಲಿಯೂ ದೊಡ್ಡ ಮೊತ್ತವನ್ನು ಗಳಿಕೆ ಮಾಡುತ್ತಿದೆ. ಹಳೆಯ ಬಾಕ್ಸ್ ಆಫೀಸ್ ದಾಖಲೆಗಳನ್ನು ಪುಡಿಗಟ್ಟುತ್ತಿದೆ ‘ಧುರಂಧರ್ 2’ ಸಿನಿಮಾ. ಇದೀಗ ಒಂಬತ್ತು ವರ್ಷ ಹಳೆಯ ‘ಬಾಹುಬಲಿ 2’ ದಾಖಲೆಯೊಂದನ್ನು ಸಿನಿಮಾ ಮುರಿದಿದ್ದು, ‘ಬಾಹುಬಲಿ 2’ ನಿರ್ಮಾಪಕ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಎಲ್ಲರಿಗೂ ಗೊತ್ತಿರುವಂತೆ ‘ಬಾಹುಬಲಿ 2’ ಸಿನಿಮಾ ಭಾರತದಲ್ಲೇ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾಗಳಲ್ಲಿ ಹಲವು ವರ್ಷಗಳಿಂದಲ ಎರಡನೇ ಸ್ಥಾನದಲ್ಲಿದೆ. ಇನ್ನೂ ಈ ದಾಖಲೆಯನ್ನು ‘ಧುರಂಧರ್ 2’ ಸಿನಿಮಾಕ್ಕೆ ಮುರಿಯಲು ಆಗಿಲ್ಲ. ಆದರೆ ಉತ್ತರ ಅಮೆರಿಕದ ಬಾಕ್ಸ್ ಆಫೀಸ್‌ನಲ್ಲಿ ಕಳೆದ 9 ವರ್ಷಗಳಿಂದ ಅಚ್ಚಳಿಯದ ದಾಖಲೆ ಬರೆದಿದ್ದ ಪ್ರಭಾಸ್ ಅಭಿನಯದ ‘ಬಾಹುಬಲಿ 2’ ಚಿತ್ರದ ದಾಖಲೆಯನ್ನು ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2: ದ ರಿವೆಂಜ್’ ಮುರಿದಿದೆ.

ಎಸ್ಎಸ್ ರಾಜಮೌಳಿ ನಿರ್ದೇಶನದ ‘ಬಾಹುಬಲಿ 2’ ಉತ್ತರ ಅಮೆರಿಕದಲ್ಲಿ 20.19 ಮಿಲಿಯನ್ ಡಾಲರ್ (192 ಕೋಟಿ ರೂಪಾಯಿಗಳು) ಗಳಿಸಿ ದಾಖಲೆ ನಿರ್ಮಿಸಿತ್ತು. ಈಗ ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ ಈಗಾಗಲೇ 19.33 ಮಿಲಿಯನ್ ಡಾಲರ್ (183 ಕೋಟಿ ರೂಪಾಯಿಗಳು) ಗಳಿಸಿದ್ದು, ಅತಿ ಶೀಘ್ರದಲ್ಲೇ ಅಂದರೆ ಸೋಮವಾರದ ವೇಳೆಗೆ ಬಾಹುಬಲಿಯ ದಾಖಲೆಯನ್ನು ಹಿಂದಿಕ್ಕುವ ನಿರೀಕ್ಷೆಯಿದೆ. ‘ಬಾಹುಬಲಿ 2’ ಸಿನಿಮಾದ ಈ ಕಲೆಕ್ಷನ್ ದಾಖಲೆಯನ್ನು ಕಳೆದ ಒಂಬತ್ತು ವರ್ಷಗಳಿಂದ ಯಾರೂ ಸಹ ಮುರಿದಿರಲಿಲ್ಲ.

ಇದನ್ನೂ ಓದಿ:‘ಧುರಂಧರ್ 2’, ‘ಕೇರಳ ಸ್ಟೋರಿ’ ಸಿನಿಮಾಗಳ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ಈ ಸಾಧನೆಯ ಬಗ್ಗೆ ಟ್ವೀಟ್ ಮಾಡಿರುವ ‘ಬಾಹುಬಲಿ’ ಚಿತ್ರದ ನಿರ್ಮಾಪಕ ಶೋಭು ಯಾರ್ಲಗಡ್ಡ ಅವರು, ‘ನಿನ್ನೆ ನಾನು ‘ಧುರಂಧರ್ 2’ ಸಿನಿಮಾ ನೋಡಿದೆ, ಸಿನಿಮಾ ನನಗೆ ತುಂಬಾ ಇಷ್ಟವಾಯಿತು. ಈ ಚಿತ್ರವು ಭಾರತ ಮತ್ತು ವಿಶ್ವದಾದ್ಯಂತ ಹೊಸ ಬಾಕ್ಸ್ ಆಫೀಸ್ ದಾಖಲೆಗಳನ್ನು ನಿರ್ಮಿಸುತ್ತಿರುವುದು ಸಂತೋಷ ತಂದಿದೆ. ಇಡೀ ತಂಡಕ್ಕೆ ಅಭಿನಂದನೆಗಳು’ ಎಂದು ಬರೆದಿದ್ದಾರೆ. ಕಳೆದ ವರ್ಷ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾ ಇದೇ ನಾರ್ತ್ ಅಮೆರಿಕನಲ್ಲಿ 19.70 ಮಿಲಿಯನ್ ಡಾಲರ್ ಅಂದರೆ ಸುಮಾರು 184 ಕೋಟಿ ರೂಪಾಯಿಗಳನ್ನು ಗಳಿಸಿತ್ತು. ಆದರೆ ‘ಬಾಹುಬಲಿ 2’ ದಾಖಲೆಯನ್ನು ಅದಕ್ಕೆ ಮುರಿಯಲು ಆಗಿರಲಿಲ್ಲ. ಆದರೆ ಈಗ ‘ಧುರಂಧರ್ 2’ ಸಿನಿಮಾ ಸುಲಭವಾಗಿ ಆ ದಾಖಲೆಯನ್ನು ಮುರಿದಿದೆ.

2017 ರಲ್ಲಿ ಬಿಡುಗಡೆ ಆಗಿದ್ದ ‘ಬಾಹುಬಲಿ 2’ ಸಿನಿಮಾ ವಿಶ್ವದಾದ್ಯಂತ ಒಟ್ಟು ಸುಮಾರು 1800 ಕೋಟಿಗೂ ಹೆಚ್ಚು ಹಣ ಗಳಿಸಿದೆ. ‘ಧುರಂಧರ್ 2’ ಸಿನಿಮಾ ಈ ದಾಖಲೆಯನ್ನು ಮುರಿಯಲು ಮುನ್ನುಗ್ಗುತ್ತಿದೆ. ಸಿನಿಮಾ ಬಿಡುಗಡೆ ಆಗಿ 11 ದಿನಗಳಾಗಿದ್ದು ಈ ವರೆಗೆ 1200 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಸಿನಿಮಾ 1800 ಕೋಟಿ ಗಳಿಸುವ ನಿರೀಕ್ಷೆ ಇದೆ. ‘ಧುರಂಧರ್ 2’ ಸಿನಿಮಾ 1800 ಕೋಟಿ ಗಳಿಸಿದಲ್ಲಿ ಬಾಕ್ಸ್ ಆಫೀಸ್ ಕಲೆಕ್ಷನ್ ಲೆಕ್ಕದಲ್ಲಿ ಎರಡನೇ ಸ್ಥಾನಕ್ಕೇರಲಿದೆ. ಮೊದಲ ಸ್ಥಾನಕ್ಕೇರಲು ‘ದಂಗಲ್’ ಸಿನಿಮಾವನ್ನು ಹಿಂದಿಕ್ಕಬೇಕಿದೆ. ಆ ಸಿನಿಮಾ ವಿಶ್ವದಾದ್ಯಂತ 2200 ಕೋಟಿ ರೂಪಾಯಿ ಗಳಿಕೆ ಮಾಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನಲ್ಲಿ ಧರೆಗುರುಳಿದ ಮರದ ಬೃಹತ್ ರೆಂಬೆ: ತಪ್ಪಿದ ಭಾರೀ ಅನಾಹುತ

ಬೆಂಗಳೂರು, (ಮಾರ್ಚ್ 29): ಗಾಳಿಯ ರಭಸಕ್ಕೆ ಮರದ ಬೃಹತ್ ರೆಂಬೆ ಕೊಂಬೆ ಧರೆಗುರುಳಿದಿರುವ ಘಟನೆ ಬೆಂಗಳೂರಿನ ಕುವೆಂಪು ಮೆಟ್ರೋ ಸ್ಟೇಷನ್ ಬಳಿಯ ಮರಿಯಪ್ಪ ಕಾಲೇಜು ಬಳಿ ನಡೆದಿದೆ. ಅದೃಷ್ಟವಶಾತ್ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೃಹತ್ ರೆಂಬೆ ಕೊಂಬೆಗಳು ಉರುಳಿದ ಹಿನ್ನೆಲೆಯಲ್ಲಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಕೆಲಕಾಲ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿತ್ತು. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಜಿಬಿಎ ಅರಣ್ಯ ಘಟಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಮುರಿದುಬಿದ್ದಿದ್ದ ರೆಂಬೆ ಕೊಂಬೆಗಳನ್ನು ತೆರವುಗೊಳಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಗ್ಯಾಸ್ ಸಿಲಿಂಡರ್ ಅಭಾವ ಬಗ್ಗೆ ಭಕ್ತರಿಗೆ ಸಿದ್ಧಗಂಗಾಶ್ರೀ ಮಹತ್ವದ ಕರೆ

ತುಮಕೂರು, ಮಾರ್ಚ್​ 29: ನಿಮ್ಮ ಬಳಿಯಿರುವ ಗ್ಯಾಸ್​ನ್ನು ವ್ಯರ್ಥ ಮಾಡಬೇಡಿ, 5 ಬಾರಿ ಚಿಂತಿಸಿ ಬಳಸಿ ಎಂದು ಸಿದ್ದಲಿಂಗಶ್ರೀ ಮನವಿ ಮಾಡಿದರು. ನಗರದ ಸಿದ್ಧಗಂಗಾ ಮಠದಲ್ಲಿ ನಡೆದ ಸುದ್ದಿಗೋಷ್ಠಿ ಮಾತನಾಡಿದ ಅವರು, ವಿದ್ಯುತ್, ನೀರು, ಎಲ್​ಪಿಜಿ, ತೈಲ ಅತ್ಯಂತ ಅಮೂಲ್ಯವಾದುದು. ನಮಗೆ ಸಿಕ್ಕಿದ್ದು ಮತ್ತೊಬ್ಬರಿಗೂ ಸಿಗಲಿ ಎಂದು ಉದಾರತೆ ಇರಲಿ. ಪ್ರತಿಯೊಂದು ವಸ್ತು ಬಳಸುವಾಗ 5 ಬಾರಿ ಯೋಚಿಸಿ ಬಳಸಿ. ನಮ್ಮ ಬಳಿ ಅಧಿಕವಾಗಿದ್ದರೂ ಮುಂದಿನ ದಿನಗಳಲ್ಲಿ ಕೊರತೆಯಾಗಬಹುದು. ಸಿದ್ಧಗಂಗಾ ಮಠದಲ್ಲಿ ಸೌದೆ, ಅಡಕೆ ಸಿಪ್ಪೆಯನ್ನು ಇಂಧನವಾಗಿ ಬಳಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಗೋಬರ್ ಗ್ಯಾಸ್ ಘಟಕ ಅಳವಡಿಸುವ ಚಿಂತನೆಯಿದೆ. ಯುದ್ಧದಂತಹ ಅನಿಶ್ಚಿತ ಪರಿಸ್ಥಿತಿಯಲ್ಲಿ ಲಭ್ಯವಿರುವ ಸಂಪನ್ಮೂಲ ಮಿತವಾಗಿ ಬಳಸುವ ಮೂಲಕ ಸಂಕಷ್ಟ ಎದುರಿಸಲು ನಾವೆಲ್ಲರೂ ಸಿದ್ಧರಿರಬೇಕು ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

MI vs KKR: 6,6,6,6,6,.. ಸಿಡಿಲಬ್ಬರದ ಅರ್ಧಶತಕ ಚಚ್ಚಿದ ರೋಹಿತ್ ಶರ್ಮಾ

ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್‌ ಹಾಗೂ ಕೆಕೆಆರ್ ನಡುವಿನ ಐಪಿಎಲ್ 2026 ರ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್ 221 ರನ್​ಗಳ ಬೃಹತ್ ಮೊತ್ತ ಕಲೆಹಾಕಿದೆ. ಈ ಗುರಿ ಬೆನ್ನಟ್ಟಿರುವ ಮುಂಬೈ ಇಂಡಿಯನ್ಸ್‌ ಪರ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ರಿಯಾನ್ ರಿಕಲ್ಟನ್ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಟ್ಟಿದ್ದು ಮಾತ್ರವಲ್ಲದೆ ಪವರ್‌ಪ್ಲೇನಲ್ಲಿಯೇ ತಂಡವನ್ನು 80 ರನ್​ಗಳ ಗಡಿ ಮುಟ್ಟಿಸಿದ್ದಾರೆ. ಇದೇ ವೇಳೆ ಹಿಟ್​ಮ್ಯಾನ್ ರೋಹಿತ್ ಶರ್ಮಾ ತಮ್ಮ ಅರ್ಧಶತಕವನ್ನು ಪೂರೈಸಿದರು.

ಈ ಐಪಿಎಲ್​ಗೆ ಭರ್ಜರಿ ತಯಾರಿ ಮಾಡಿಕೊಂಡು ಬಂದಿರುವ ರೋಹಿತ್ ಶರ್ಮಾ ದೈಹಿಕವಾಗಿಯೂ ಫಿಟ್ ಆಗಿ ಕಾಣುತ್ತಿದ್ದಾರೆ. ಅದರ ಪರಿಣಾಮ ಮೊದಲ ಪಂದ್ಯದಲ್ಲೇ ಕಂಡುಬಂದಿದೆ. ಎಂದಿನಂತೆ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್, ಆರಂಭದಲ್ಲೇ ಹೊಡಿಬಡಿ ಆಟಕ್ಕೆ ಮುಂದಾದರು. ಇದರ ಪರಿಣಾಮವಾಗಿ ರೋಹಿತ್ ಪವರ್‌ಪ್ಲೇನಲ್ಲಿಯೇ ತಮ್ಮ ಅರ್ಧಶತಕವನ್ನು ಪೂರೈಸಿದರು.

ಕೇವಲ 23 ಎಸೆತಗಳಲ್ಲಿ ಐದು ಸಿಕ್ಸರ್‌ಗಳು ಮತ್ತು ಮೂರು ಬೌಂಡರಿಗಳ ಸಹಿತ ಅರ್ಧಶತಕ ಬಾರಿಸಿದ ರೋಹಿತ್ ಶರ್ಮಾಗೆ ಇದು ಅವರ ಐಪಿಎಲ್ ವೃತ್ತಿಜೀವನದಲ್ಲಿ ಅತಿ ವೇಗದ ಅರ್ಧಶತಕವಾಗಿದೆ. ರೋಹಿತ್ ಅರ್ಧಶತಕ ಬಾರಿಸುವುದರ ಜೊತೆಗೆ ರಿಕಲ್ಟನ್ ಜೊತೆಗೂಡಿ ಮೊದಲ 6 ಓವರ್​ಗಳಲ್ಲಿ 80 ರನ್​ಗಳ ಜೊತೆಯಾಟವನ್ನು ಕಟ್ಟಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತನ್ನ ಕಾರು ಡ್ರೈವರ್ ಮಗನಿಗೆ ಎಲೆಕ್ಷನ್ ಟಿಕೆಟ್ ಕೊಟ್ಟ ವಿಜಯ್: ವಿಡಿಯೋ

ದಳಪತಿ ವಿಜಯ್ (Thalapathy Vijay) ತಮಿಳುನಾಡು ವಿಧಾನಸಭೆ ಚುನಾವಣೆಗೆ ಧುಮುಕಿದ್ದಾರೆ. ತಮ್ಮ ಟಿವಿಕೆ ಪಕ್ಷದಿಂದ ಟಿಕೆಟ್ ವಿತರಣೆ ಆರಂಭಿಸಿದ್ದು, ರಾಜ್ಯದ ಎಲ್ಲ ಕ್ಷೇತ್ರಗಳಿಂದಲೂ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಭರ್ಜರಿ ರ್ಯಾಲಿಗಳನ್ನು ಮಾಡುತ್ತಾ ಚುನಾವಣಾ ಪ್ರಚಾರವನ್ನು ಜೋರಾಗಿ ಮಾಡುತ್ತಿದ್ದಾರೆ. ಇದೀಗ ತಮ್ಮ ಬಳಿ ಹಲವು ವರ್ಷ ಡ್ರೈವರ್ ಆಗಿ ಕೆಲಸ ಮಾಡಿದ ವ್ಯಕ್ತಿಯ ಮಗನಿಗೆ ಚುನಾವಣಾ ಟಿಕೆಟ್ ಅನ್ನು ದಳಪತಿ ವಿಜಯ್ ನೀಡಿದ್ದು, ಡ್ರೈವರ್ ಪುತ್ರ, ಕಣ್ಣೀರು ಹಾಕುತ್ತಾ ವಿಜಯ್ ಕಾಲಿಗೆ ಬೀಳುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ

ಬೆಂಗಳೂರು, (ಮಾರ್ಚ್ 29): ಪತ್ನಿಯ (Wife) ಲೈಂಗಿಕ ವಿಕೃತಿ ಮತ್ತು ನಿರಂತರ ಕಿರುಕುಳ ತಾಳಲಾರದೆ ಪತಿಯೊಬ್ಬರು (Husband) ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಬೆಳಕಿಗೆ ಬಂದಿದೆ. ಪತ್ನಿಯ ಮಾನಸಿಕ ಹಿಂಸೆ, ಲೈಂಗಿಕ ದೌರ್ಜನ್ಯ ತಾಳಲಾರದೇ ಪತಿ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ಪತ್ನಿಯ ವಿಪರೀತ ವಿಕೃತ ಲೈಂಗಿಕ ಬೇಡಿಕೆಗೆ  ಬೇಸತ್ತಿರುವ ಪತಿ,  ಆಕೆಯ ವಿಕೃತ ಕಾಮದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ತಾನು ಮಾತ್ರವಲ್ಲದೆ, ತನ್ನ ಸ್ನೇಹಿತೆಯ ಜೊತೆಯೂ ದೈಹಿಕ ಸಂಬಂಧ ಹೊಂದುವಂತೆ ಪತ್ನಿ ಒತ್ತಾಯಿಸುತ್ತಿದ್ದಾಳೆಂದು ದೂರಿನಲ್ಲಿ ವಿವರಿಸಿದ್ದಾರೆ.

ನನ್ನ ಪತ್ನಿ ಅಶ್ಲೀಲ ವೀಡಿಯೋಗಳನ್ನು ಕಳುಹಿಸಿ ವಿಕೃತವಾಗಿ ವರ್ತಿಸುತ್ತಾಳೆ. ಸ್ನೇಹಿತೆಯರ ಜೊತೆ ಸ್ವೀಟ್ ಮೆಮೋರಿ ಹಂಚಿಕೊಳ್ಳುವಂತೆ ಒತ್ತಾಯಿಸುತ್ತಾಳೆ. ಅಲ್ಲದೇ ಮದುವೆಗೂ ಮುನ್ನ ಆಕೆಯ ಸಂಬಂಧಗಳ ಬಗ್ಗೆ ಹೇಳಿ ಕಿರಿಕಿರಿ ಉಂಟುಮಾಡುತ್ತಾಳೆ.ಅಷ್ಟೇ ಅಲ್ಲ ಕುಡಿದು ಬರುವುದು, ಸ್ನೇಹಿತರ ಜೊತೆ ಅಲೆದಾಡುವುದು ಇಂದಿನ ಕಾಲದಲ್ಲಿ ಕಾಮನ್ ಎಂದು ಹೇಳಿ ವಿಕೃತವಾಗಿ ವರ್ತಿಸುತ್ತಾಳೆ. ವಿಕೃತ ದೈಹಿಕ ಸಂಪರ್ಕಕ್ಕೆ ಒಪ್ಪದೇ ಇದ್ದಾಗ ಕಿರುಕುಳ ನೀಡುತ್ತಾಳೆ ಎಂದು ಪತಿ ದೂರಿನಲ್ಲಿ ಆರೋಪಿಸಿದ್ದಾನೆ.

ಇದನ್ನೂ ಓದಿ: ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!

ಇನ್ನು ಪತ್ನಿಯ ಈ ಅಸಲಿ ಮುಖ ತಿಳಿಯುವ ಮುನ್ನವೇ ಆಕೆಗೆ ಒಡವೆಗಳನ್ನು ಕೊಟ್ಟಿದ್ದೇನೆ. ಆ ಒಡವೆಗಳನ್ನೂ ವಾಪಸ್ ನೀಡದೆ ಸತಾಯಿಸುತ್ತಿದ್ದಾಳೆ ಎಂದು ನೊಂದ ಪತಿ ತನ್ನ ಅಳಲನ್ನು ತೋಡಿಕೊಂಡಿದ್ದಾನೆ. ಈ ಸಂಬಂಧ ಅಮೃತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link