All posts by nagaraj11081993

ಜಿಎಂ ಸಿದ್ದೇಶ್ವರ್, ರೇಣುಕಾಚಾರ್ಯರನ್ನು ಒಗ್ಗೂಡಿಸಿದ ವಿಜಯೇಂದ್ರ: ದಾವಣಗೆರೆಯಲ್ಲಿ ಮ್ಯಾಜಿಕ್ ಆಗುತ್ತಾ?

ಜಿಎಂ ಸಿದ್ದೇಶ್ವರ್, ರೇಣುಕಾಚಾರ್ಯರನ್ನು ಒಗ್ಗೂಡಿಸಿದ ವಿಜಯೇಂದ್ರ: ದಾವಣಗೆರೆಯಲ್ಲಿ ಮ್ಯಾಜಿಕ್ ಆಗುತ್ತಾ?

ದಾವಣಗೆರೆ, (ಮಾರ್ಚ್ 29): ಕಾಂಗ್ರೆಸ್​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ (Davanagere South By Election) ಎದುರಾಗಿದ್ದು, ಇದೇ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ಹೀಗಾಗಿ ಕಾಂಗ್ರೆಸ್ ಬಿಜೆಪಿ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಅದರಲ್ಲೂ ಮನೆಯೊಂದು ಮೂರು ಬಾಗಿಲಾಗಿದ್ದ ಬಿಜೆಪಿಯಲ್ಲಿ ಒಗ್ಗಟ್ಟು ಪ್ರದರ್ಶನವಾಗಿದೆ. ಹೌದು…ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆಯಿಂದಲೇ ಸೋಲಾಗಿದೆ ಎಂದು ಜಿಎಂ ಸಿದ್ದೇಶ್ವರ್ ಬಹಿರಂಗವಾಗಿಯೇ ಬಿಎಸ್ ಯಡಿಯೂರಪ್ಪ ಬಣದ ವಿರುದ್ಧ ಆರೋಪಿಸಿದ್ದರು. ಅಲ್ಲದೇ ಬಿಎಸ್​ವೈ ಬಣದ ವಿರುದ್ಧವೇ ತಮ್ಮದೇಯಾದ ಟೀಮ್ ಕಟ್ಟಿ ಬಹಿರಂಗ ವಾಗ್ದಾಳಿ ನಡೆಸುತ್ತಲೇ ಬಂದಿದ್ದರು. ಖುದ್ದು ರಾಜ್ಯ ಬಿಜೆಪಿ ಉಸ್ತುವಾರಿ ಮನವೊಲಿಕೆಗೂ ಸಿದ್ದೇಶ್ವರ್ ಕ್ಯಾರೇ ಎಂದಿರಲಿಲ್ಲ, ಆದ್ರೆ, ಇದೀಗ ಏಕಾಏಕಿ ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಜತೆ ವೇದಿಕೆ ಹಂಚಿಕೊಂಡು ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಒಂದೆಡೆ ಎಂಪಿ ರೇಣುಕಾಸ್ವಾಮಿ ಇನ್ನೊಂದೆಡೆ ಜಿಎಂ ಸಿದ್ದೇಶ್ವರ್ ಮಧ್ಯದಲ್ಲಿ ವಿಜಯೇಂದ್ರ ನಿಂತುಕೊಂಡು ಕೈ ಎತ್ತಿ ಒಗ್ಗಟ್ಟು ಪ್ರದರ್ಶನ ಮಾಡಿರುವುದು ವಿಶೇಷವಾಗಿದೆ.

ಇದನ್ನೂ ಓದಿ: ದಾವಣಗೆರೆ ಬೈ ಎಲೆಕ್ಷನ್: ಬಿಎಸ್​​ವೈ ಬಣಕ್ಕೆ ತೀವ್ರ ಮುಖಭಂಗ, ಮೇಲುಗೈ ಸಾಧಿಸಿದ ಮಾಜಿ ಎಂಪಿ

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬಾಗಲಕೋಟೆ ಉಪಚುನಾವಣೆ ಅಖಾಡಕ್ಕೆ ಸಿಎಂ ಸಿದ್ದರಾಮಯ್ಯ: ಆಪ್ತನ ಮಗನ ಗೆಲುವಿಗೆ ಪಣ

ಬಾಗಲಕೋಟೆ, ಮಾರ್ಚ್​ 29: ಏ.9ರಂದು ನಡೆಯಲಿರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿರುಬಿಸಿಲಿನಲ್ಲೂ ಕಾಂಗ್ರೆಸ್​​ ನಾಯಕರು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ (Siddaramaiah) ಅಖಾಡಕ್ಕೆ ಎಂಟ್ರಿ ಕೊಡುತ್ತಿದ್ದು, ನಾಳೆಯಿಂದ ಅಭ್ಯರ್ಥಿ ಉಮೇಶ್ ಮೇಟಿ ಪರ ಮತಬೇಟೆಗೆ ಇಳಿಯಲಿದ್ದಾರೆ. ಬಾಗಲಕೋಟೆ ಕ್ಷೇತ್ರದಲ್ಲಿ 5 ದಿನ ಸಿದ್ದರಾಮಯ್ಯ ಪ್ರಚಾರ ಮಾಡಲಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಆಪ್ತರಾಗಿದ್ದ ಹಾಲುಮತದ ಹೆಚ್.ವೈ.ಮೇಟಿ ನಿಧನದಿಂದ ಬಾಗಲಕೋಟೆ ಕ್ಷೇತ್ರ ತೆರವಾಗಿತ್ತು. ಟಿಕೆಟ್​​ಗಾಗಿ ಮೇಟಿ ಕುಟುಂಬದ ಮಧ್ಯಯೇ ಫೈಟ್ ನಡೆದಿತ್ತು. ಬಳಿಕ ಹೆಚ್​​.ವೈ. ಮೇಟಿ ಅವರ ಎರಡನೇ ಮಗ ಉಮೆಶ್ ಮೇಟಿ​​ಯನ್ನು ಕಾಂಗ್ರೆಸ್​​ ತನ್ನ ಅಭ್ಯರ್ಥಿಯಾಗಿ ಘೋಷಿಸಿತ್ತು.

ಆಪ್ತನ ಮಗನ ಗೆಲ್ಲಿಸಲು 5 ದಿನ ಪ್ರಚಾರ

ಸದ್ಯ ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿರುವ ಸಿಎಂ ಸಿದ್ದರಾಮಯ್ಯ, ಸರ್ಕಾರದ ವರ್ಚಸ್ಸಿನ ಜೊತೆ ಸಮುದಾಯ ಗೌರವ ಕಾಪಾಡಬೇಕಿದೆ. ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿದಾಗ ಒಮ್ಮೆ ಮಾತ್ರ ಪ್ರಚಾರ ನಡೆಸಿದ್ದರು. ಆದರೆ ಇದೀಗ ಆಪ್ತನ ಮಗನ ಗೆಲ್ಲಿಸಲು 5 ದಿನ ಪ್ರಚಾರ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆ ಉಪ ಚುನಾವಣೆ: ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ

ನಾಳೆ ಅಂದರೆ ಮಾರ್ಚ್​ 30ರ ಬೆಳಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಬಳ್ಳಾರಿ ಜಿಲ್ಲೆಯ ಜಿಂದಾಲ್ ಏರ್​ಸ್ಟ್ರಿಪ್​ಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ನಂತರ ಹೆಲಿಕಾಪ್ಟರ್​ನಲ್ಲಿ ಆಲಮಟ್ಟಿ ಡ್ಯಾಮ್​ನತ್ತ ಪ್ರಯಾಣ ಬೆಳಸಲಿದ್ದಾರೆ. ಆಲಮಟ್ಟಿ ಡ್ಯಾಮ್ ಹೆಲಿಪ್ಯಾಡ್​ನಿಂದ ಕಾರಿನಲ್ಲಿ ಸುತಗುಂಡಾರ ಗ್ರಾಮಕ್ಕೆ ಆಗಮಿಸುವ ಸಿಎಂ, ಮಧ್ಯಾಹ್ನ 1 ಗಂಟೆಗೆ ಸುತಗುಂಡಾರ ಗ್ರಾಮದಲ್ಲಿ ಅಭ್ಯರ್ಥಿ ಉಮೇಶ್ ಮೇಟಿ ಪರ ಪ್ರಚಾರ ಮಾಡಲಿದ್ದಾರೆ.

ಇದನ್ನೂ ಓದಿ: ಮೂರನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು?

ನಂತರ ನಾಯನೇಗಲಿ, ರಾಂಪುರ, ಬೇವೂರು ಗ್ರಾಮಗಳಲ್ಲಿ ಮತಯಾಚನೆ ಬಳಿಕ ಅಂದು ರಾತ್ರಿ ಆಲಮಟ್ಟಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಇನ್ನು ಮಾರ್ಚ್ 31ರಂದು ಬೆಳಗ್ಗೆ 11ಕ್ಕೆ ಮುಗಳೊಳ್ಳಿ, ಮಧ್ಯಾಹ್ನ 1ಗಂಟೆಗೆ ನೀಲಾನಗರ, 4ಗಂಟೆಗೆ ಐಹೊಳೆ ಮತ್ತು 6ಗಂಟೆಗೆ ಅಮೀನಗಢದಲ್ಲಿ ಸಿಎಂ ಸಿದ್ದರಾಮಯ್ಯ ಮತಯಾಚನೆ ಮಾಡಲಿದ್ದಾರೆ. ಏಪ್ರಿಲ್ 3, 4 ಮತ್ತು 6ರಂದು 2ನೇ ಹಂತದಲ್ಲಿ ಮತ್ತೆ ಪ್ರಚಾರ ಮಾಡಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮತ್ತೆ ಬಾಲಿವುಡ್​​ಗೆ ನಯನತಾರಾ, ಈ ಬಾರಿ ಮತ್ತೊಬ್ಬ ಖಾನ್​​ಗೆ ಜೋಡಿ

ನಯನತಾರಾ (Nayantara) ಅನ್ನು ಲೇಡಿ ಸೂಪರ್ ಸ್ಟಾರ್ ಎಂದೇ ಕರೆಯುವುದು. ಎರಡು ದಶಕಕ್ಕೂ ಹೆಚ್ಚು ಸಮಯದಿಂದಲೂ ಸಹ ನಯನತಾರಾ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕಳೆದ ಎರಡು ದಶಕದಿಂದಲೂ ಸ್ಟಾರ್ ಪಟ್ಟವನ್ನು ಉಳಿಸಿಕೊಂಡು ಬರುತ್ತಿದ್ದಾರೆ. ಕನ್ನಡ ಸೇರಿದಂತೆ ದಕ್ಷಿಣದ ಎಲ್ಲ ಭಾಷೆಗಳಲ್ಲಿಯೂ ನಾಯಕಿಯಾಗಿ ನಟಿಸಿದ್ದಾರೆ ನಯನತಾರಾ. ಆದರೆ ಇತ್ತೀಚೆಗಷ್ಟೆ ಅಂದರೆ 2023 ರಲ್ಲಿ ಅವರು ಬಾಲಿವುಡ್​​ಗೆ ಮೊದಲ ಬಾರಿಗೆ ಕಾಲಿಟ್ಟಿದ್ದರು. ಅದೂ ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಮೂಲಕ. ಇದೀಗ ಮತ್ತೆ ಹಿಂದಿ ಸಿನಿಮಾನಲ್ಲಿ ನಟಿಸಲಿದ್ದಾರೆ ನಯನತಾರಾ. ಈ ಬಾರಿ ಮತ್ತೊಬ್ಬ ಸ್ಟಾರ್ ಖಾನ್ ಜೊತೆಗೆ.

ನಯನತಾರಾ ಅವರು ಸಲ್ಮಾನ್ ಖಾನ್ ಜೊತೆಗೆ ನಟಿಸಲು ರೆಡಿಯಾಗಿದ್ದಾರೆ. ಸಲ್ಮಾನ್ ಖಾನ್ ನಟಿಸಲಿರುವ ಹೊಸ ಸಿನಿಮಾನಲ್ಲಿ ನಯನತಾರಾ ನಾಯಕಿಯಾಗಿ ನಟಿಸಲಿದ್ದಾರೆ. ವಿಶೇಷವೆಂದರೆ ಈ ಸಿನಿಮಾದ ನಿರ್ದೇಶಕ ಮತ್ತು ನಿರ್ಮಾಪಕ ಇಬ್ಬರೂ ಸಹ ದಕ್ಷಿಣದವರೇ ಆಗಿದ್ದಾರೆ. ಇದೇ ಕಾರಣಕ್ಕೆ ದಕ್ಷಿಣ ಭಾರತದ ಸ್ಟಾರ್ ನಟಿಯನ್ನು ಬಾಲಿವುಡ್​​ ಸ್ಟಾರ್​ ನಟನ ಎದುರು ನಾಯಕಿಯಾಗಿ ಆಯ್ಕೆ ಮಾಡಿದ್ದಾರೆ.

ದಕ್ಷಿಣದ ಖ್ಯಾತ ಸಿನಿಮಾ ನಿರ್ಮಾಪಕ ಮತ್ತು ವಿತರಕ ದಿಲ್ ರಾಜು ಅವರು ಸಲ್ಮಾನ್ ಖಾನ್ ನಟಿಸಲಿರುವ ಹೊಸ ಸಿನಿಮಾದ ನಿರ್ಮಾಣ ಮಾಡಲಿದ್ದಾರೆ. ಈ ಸಿನಿಮಾವನ್ನು ತೆಲುಗಿನ ಖ್ಯಾತ ನಿರ್ದೇಶಕ ವಂಶಿ ಪೈಡಪಲ್ಲಿ ನಿರ್ದೇಶನ ಮಾಡಲಿದ್ದಾರೆ. ಈ ಸಿನಿಮಾದ ನಾಯಕಿಯಾಗಿ ನಯನತಾರಾ ನಟಿಸಲಿದ್ದಾರೆ. ಪ್ರಸ್ತುತ ಸಲ್ಮಾನ್ ಖಾನ್ ‘ಮಾತೃಭೂಮಿ’ (ಈ ಮುಂಚೆ ಬ್ಯಾಟಲ್ ಆಫ್ ಗಲ್ವಾನ್) ಹೆಸರಿನ ಸಿನಿಮಾನಲ್ಲಿ ನಟಿಸುತ್ತಿದ್ದು, ಸಿನಿಮಾದ ಚಿತ್ರೀಕರಣ ಕ್ಲೈಮ್ಯಾಕ್ಸ್ ಹಂತದಲ್ಲಿದೆ.

ಇದನ್ನೂ ಓದಿ:‘ಟಾಕ್ಸಿಕ್’ ಬಿಡುಗಡೆಗೂ ಮುನ್ನ 31.5 ಕೋಟಿ ರೂ. ಮೌಲ್ಯದ ಮನೆ ಖರೀದಿಸಿದ ನಯನತಾರಾ

ವಂಶಿ ಪೈಡಪಲ್ಲಿ ತುಸು ಭಿನ್ನ ರೀತಿಯ ಸಿನಿಮಾ ನಿರ್ದೇಶಕ. ಸಾಮಾಜಿಕ ಸಂದೇಶವುಳ್ಳ ಕಮರ್ಶಿಯಲ್ ಸಿನಿಮಾಗಳನ್ನು ಮಾಡುತ್ತಾ ಯಶಸ್ಸು ಕಾಣುತ್ತಾ ಬಂದಿದ್ದಾರೆ. ಪ್ರಭಾಸ್ ನಟನೆಯ ‘ಮುನ್ನಾ’ ವಂಶಿ ಅವರ ಮೊದಲ ಸಿನಿಮಾ. ಜೂ ಎನ್​​ಟಿಆರ್ ನಟನೆಯ ಕೌಟುಂಬಿಕ ಸಿನಿಮಾ ‘ಬೃಂದಾವನಂ’ ಭಾರಿ ದೊಡ್ಡ ಹಿಟ್. ರಾಮ್ ಚರಣ್ ನಟನೆಯ ‘ಯೆವಡು’ ಸಹ ಹಿಟ್ ಆಯ್ತು. ಫೀಲ್ ಗುಡ್ ಸಿನಿಮಾ ‘ಊಪಿರಿ’, ಸಾಮಾಜಿಕ ಸಂದೇಶ ಹೊಂದಿದ್ದ ಮತ್ತು ರಾಷ್ಟ್ರಪ್ರಶಸ್ತಿಗೂ ಭಾಜನವಾದ ‘ಮಹರ್ಷಿ’ ಸಿನಿಮಾ ಸಹ ವಂಶಿ ಅವರದ್ದೇ ನಿರ್ದೇಶನ. 2023 ರಲ್ಲಿ ಬಿಡುಗಡೆ ಆದ ದಳಪತಿ ವಿಜಯ್ ನಟನೆಯ ‘ವಾರಿಸು’ ನಿರ್ದೇಶಿಸಿದ್ದು ಸಹ ವಂಶಿ ಪೈಡಪಲ್ಲಿ. ಇದೀಗ ಅವರು ಸಲ್ಮಾನ್ ಖಾನ್​​ಗಾಗಿ ಸಿನಿಮಾ ಮಾಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಲೀಗ್ ಹಂತದ ಅರ್ಧದಷ್ಟು ಪಂದ್ಯಗಳಿಗೆ ಧೋನಿ ಅಲಭ್ಯ

Source link

Vastu Broom Placement: ಮನೆಯಲ್ಲಿ ಪೊರಕೆಯನ್ನು ಈ ದಿಕ್ಕಿನಲ್ಲಿ ಇಡಲೇಬೇಡಿ; ಅಪಾಯ ತಪ್ಪಿದ್ದಲ್ಲ!

ಭಾರತೀಯ ಸಂಪ್ರದಾಯದಲ್ಲಿ ಪೊರಕೆಯನ್ನು ಕೇವಲ ಕಸ ಗುಡಿಸುವ ಸಾಮಾನ್ಯ ಸಾಧನವಾಗಿ ನೋಡದೆ, ಅದನ್ನು ಲಕ್ಷ್ಮಿ ದೇವಿಯ ಸಾಕಾರ ರೂಪವೆಂದು ಗೌರವಿಸಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಪೊರಕೆಯು ಮನೆಯಲ್ಲಿರುವ ಬಡತನ ಮತ್ತು ಅಶುಭವನ್ನು ‘ಕಸ’ದ ರೂಪದಲ್ಲಿ ಹೊರಹಾಕಿ, ಸ್ವಚ್ಛತೆಯ ಮೂಲಕ ದೈವಿಕ ಅನುಗ್ರಹವನ್ನು ತರುತ್ತದೆ. ಆದರೆ, ಈ ಪವಿತ್ರ ವಸ್ತುವನ್ನು ಮನೆಯಲ್ಲಿ ಎಲ್ಲಿ ಇಡಬೇಕು ಮತ್ತು ಹೇಗೆ ಬಳಸಬೇಕು ಎಂಬುದರ ಕುರಿತು ಅನೇಕ ಧಾರ್ಮಿಕ ನಂಬಿಕೆಗಳಿವೆ. ಈ ನಿಯಮಗಳನ್ನು ಪಾಲಿಸುವುದರಿಂದ ಮನೆಗೆ ಸಂಪತ್ತು ಮತ್ತು ಶುಭ ಫಲಗಳು ಲಭಿಸುತ್ತವೆ ಎಂಬುದು ಹಿರಿಯರ ನಂಬಿಕೆ.

ಪೊರಕೆಯನ್ನು ಇಡುವ ವಿಧಾನದ ಬಗ್ಗೆ ಬಹಳ ಎಚ್ಚರಿಕೆ ವಹಿಸಬೇಕು. ಸಾಮಾನ್ಯವಾಗಿ ಅನೇಕರು ಪೊರಕೆಯನ್ನು ಬಳಸಿದ ನಂತರ ಅದರ ಗುಡಿಸುವ ಭಾಗ ಕೆಳಗೆ ಇರುವಂತೆ ಇಡುತ್ತಾರೆ, ಆದರೆ ಇದು ತಪ್ಪು ವಿಧಾನ. ಇದರಿಂದ ಪೊರಕೆಗೆ ಹಾನಿಯಾಗುವುದಲ್ಲದೆ ವಾಸ್ತು ದೋಷವೂ ಉಂಟಾಗುತ್ತದೆ. ಬದಲಾಗಿ, ಪೊರಕೆಯನ್ನು ಯಾವಾಗಲೂ ಲಂಬವಾಗಿ ಅಥವಾ ಮಲಗಿಸಿ ಇಡಬೇಕು, ಅಂದರೆ ಅದರ ಗುಡಿಸುವ ಭಾಗವು ಮೇಲ್ಮುಖವಾಗಿರಬೇಕು. ಇನ್ನು ಮುಖ್ಯವಾದ ವಿಷಯವೆಂದರೆ, ಮನೆಯಲ್ಲಿ ಎಂದಿಗೂ ಎರಡು ಪೊರಕೆಗಳನ್ನು ಒಟ್ಟಿಗೆ ಇಡಬಾರದು; ಇದು ಅಶುಭದ ಸಂಕೇತವೆಂದು ಪರಿಗಣಿಸಲಾಗಿದೆ.

ವಾಸ್ತು ಪ್ರಕಾರ ದಿಕ್ಕುಗಳಿಗೆ ಹೆಚ್ಚಿನ ಮಹತ್ವವಿದ್ದು, ಪೊರಕೆಯನ್ನು ಈಶಾನ್ಯ ಮೂಲೆಯಲ್ಲಿ ಎಂದಿಗೂ ಇಡಬಾರದು. ಈಶಾನ್ಯವು ದೈವಿಕ ಶಕ್ತಿಯ ಮೂಲವಾಗಿದ್ದು, ಅಲ್ಲಿ ಕಸ ಗುಡಿಸುವ ವಸ್ತುವನ್ನು ಇಡುವುದು ಸರಿಯಲ್ಲ. ಬದಲಾಗಿ, ನೈಋತ್ಯ ಅಥವಾ ಪಶ್ಚಿಮ ದಿಕ್ಕಿನಲ್ಲಿ ಪೊರಕೆಯನ್ನು ಇಡುವುದು ಅತ್ಯಂತ ಶುಭ. ಇದು ಆರ್ಥಿಕ ಸಂಕಷ್ಟಗಳನ್ನು ದೂರಮಾಡಿ ಲಕ್ಷ್ಮಿ ದೇವಿಯ ಆಶೀರ್ವಾದವನ್ನು ತರುತ್ತದೆ. ಅಲ್ಲದೆ, ಮನೆಯೊಳಗೆ ಬರುವ ಅತಿಥಿಗಳ ಕಣ್ಣಿಗೆ ಪೊರಕೆ ನೇರವಾಗಿ ಬೀಳಬಾರದು; ಅದನ್ನು ಯಾರೂ ಗಮನಿಸದ ಶಾಂತವಾದ ಮೂಲೆಯಲ್ಲಿ ಅಡಗಿಸಿ ಇಡುವುದು ಸೂಕ್ತ.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ಮನೆಯನ್ನು ಗುಡಿಸುವಾಗಲೂ ಕೆಲವು ಶಿಸ್ತುಬದ್ಧ ಕ್ರಮಗಳಿವೆ. ಕಸವನ್ನು ಎಂದಿಗೂ ಈಶಾನ್ಯದ ಕಡೆಗೆ ಗುಡಿಸಬಾರದು, ಬದಲಾಗಿ ದಕ್ಷಿಣದ ಕಡೆಗೆ ಗುಡಿಸಬೇಕು. ಒಂದು ಕೋಣೆಯ ಕಸವನ್ನು ಗುಡಿಸಿ ಆ ಕೋಣೆಯಲ್ಲಿಯೇ ಅದನ್ನು ಎತ್ತಿ ಹೊರಹಾಕಬೇಕು. ಕಸವನ್ನು ಒಂದು ಕೋಣೆಯಿಂದ ಮತ್ತೊಂದು ಕೋಣೆಗೆ ದೂಡುವುದು ಅಥವಾ ಹೊಸ್ತಿಲ ಮೇಲೆ ಗುಡಿಸುವುದು ಅತ್ಯಂತ ಅಶುಭ. ಏಕೆಂದರೆ, ಮನೆಯ ದ್ವಾರವನ್ನು ಮಹಾಲಕ್ಷ್ಮಿಯ ರೂಪವೆಂದು ನಂಬಲಾಗುತ್ತದೆ. ಅರಿಶಿನ-ಕುಂಕುಮದಿಂದ ಪೂಜಿಸಬೇಕಾದ ಹೊಸ್ತಿಲ ಮೇಲೆ ಕಸವನ್ನು ಹಾಕುವುದು ಮನೆಗೆ ದಾರಿದ್ರ್ಯವನ್ನು ತರುತ್ತದೆ ಎಂಬ ನಂಬಿಕೆಯಿದೆ.

ಪೊರಕೆಯನ್ನು ಅತ್ಯಂತ ಪವಿತ್ರವಾಗಿ ಕಾಣಬೇಕು ಮತ್ತು ಅದನ್ನು ಎಂದಿಗೂ ಕಾಲಿನಿಂದ ತುಳಿಯಬಾರದು. ದೇವತೆಗಳ ವರಪ್ರಸಾದವೆಂದು ನಂಬಲಾದ ಈ ವಸ್ತುವನ್ನು ಪಾದಗಳಿಂದ ಸ್ಪರ್ಶಿಸುವುದು ಅಗೌರವದ ಸಂಕೇತವಾಗಿದೆ. ಇನ್ನು ಪೊರಕೆ ಖರೀದಿಸುವ ವಿಷಯಕ್ಕೆ ಬಂದರೆ, ಎಣ್ಣೆ ಅಥವಾ ಉಪ್ಪಿನಂತೆ ಇದಕ್ಕೆ ನಿರ್ದಿಷ್ಟ ದಿನಗಳ ನಿರ್ಬಂಧವಿಲ್ಲ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ. ಅಗತ್ಯವಿದ್ದಾಗ ಹೊಸ ಪೊರಕೆಯನ್ನು ಖರೀದಿಸಬಹುದು. ಈ ಸರಳ ವಾಸ್ತು ನಿಯಮಗಳನ್ನು ಪಾಲಿಸುವುದರಿಂದ ಮನೆಯಲ್ಲಿ ಶಾಂತಿ, ನೆಮ್ಮದಿ ಮತ್ತು ಆರ್ಥಿಕ ಸಮೃದ್ಧಿ ನೆಲೆಸುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಗ ಸತ್ತಿದ್ದಾನೆ, ಸೊಸೆಯಿಂದ ಜೀವನಾಂಶ ಕೊಡಿಸಿ ಎಂದು ಕೋರ್ಟ್ ಮೆಟ್ಟಿಲೇರಿದ ವೃದ್ಧ ದಂಪತಿ; ನ್ಯಾಯಾಲಯ ಹೇಳಿದ್ದೇನು?

ಲಕ್ನೋ, ಮಾರ್ಚ್ 29: ತಮ್ಮ ಮಗ ಸತ್ತಿದ್ದಾನೆ. ಸೊಸೆಯಿಂದ ತಮಗೆ ಜೀವನಾಂಶ (ಮೈಂಟೆನೆನ್ಸ್) ಕೊಡಿಸಿ ಎಂದು ವೃದ್ಧ ದಂಪತಿಯೊಂದು ಕೋರ್ಟ್ ಮೆಟ್ಟಿಲೇರಿದ ಘಟನೆ ಬೆಳಕಿಗೆ ಬಂದಿದೆ. ಈ ವೃದ್ಧರ ಪರವಾಗಿ ತೀರ್ಪು ಕೊಡಲು ಕೋರ್ಟ್ ನಿರಾಕರಿಸಿತು. ಇದರೊಂದಿಗೆ ಎರಡು ಕೋರ್ಟ್​ಗಳಲ್ಲಿ ವೃದ್ಧರ ಪರವಾಗಿ ತೀರ್ಪು ಬರಲಿಲ್ಲ. ಫ್ಯಾಮಿಲಿ ಕೋರ್ಟ್​ನಲ್ಲಿ ತಮ್ಮ ಮನವಿ ತಿರಸ್ಕೃತಗೊಂಡ ಬಳಿಕ ಈ ವೃದ್ಧರು ಉತ್ತರಪ್ರದೇಶದ ಅಲಾಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲಿಯೂ ಅವರ ಪರವಾಗಿ ತೀರ್ಪು ಬರಲಿಲ್ಲ. ನೈತಿಕ ಬದ್ಧತೆಯನ್ನು ಕಾನೂನು ಬದ್ಧತೆ ಎಂದು ಪರಿಗಣಿಸಲು ಆಗುವುದಿಲ್ಲ. ಸೊಸೆಯಿಂದ ಜೀವನಾಂಶ ಕೊಡಿಸುವ ಅವಕಾಶ ಇಲ್ಲ ಎಂದು ಹೈಕೋರ್ಟ್ ಪೀಠ (Allahabad High Court) ತನ್ನ ತೀರ್ಪಿನಲ್ಲಿ ತಿಳಿಸಿತು.

ಉತ್ತರಪ್ರದೇಶ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಕಾನ್ಸ್ಟೆಬಲ್​ವೊಬ್ಬರು 2021ರಲ್ಲಿ ಮೃತಪಡುತ್ತಾರೆ. 2016ರಲ್ಲಿ ಆತನ ವಿವಾಹವಾಗಿರುತ್ತದೆ. ಆತನ ಹೆಂಡತಿ ಕೂಡ ಯುಪಿ ಪೊಲೀಸ್ ಇಲಾಖೆಯಲ್ಲಿ ಕಾನ್ಸ್​ಟೆಬಲ್ ಆಗಿರುತ್ತಾರೆ. ತಮ್ಮ ಸೊಸೆಗೆ ಸಾಕಷ್ಟು ಸ್ವತಂತ್ರ ಆದಾಯ ಇದೆ. ತಮ್ಮ ಮಗನ ನಿಧನದ ನಂತರ ಆಕೆಗೆ ಸರ್ವಿಸ್ ಬೆನಿಫಿಟ್ಸ್ ಕೂಡ ಸಿಕ್ಕಿದೆ. ಹೀಗಾಗಿ, ತಮಗೆ ಆಕೆಯಿಂದ ಜೀವನಾಂಶ ಕೊಡಿಸುವಂತೆ ಕೌಟುಂಬಿಕ ನ್ಯಾಯಾಲಯವೊಂದರಲ್ಲಿ ಮನವಿ ಮಾಡಿದ್ದರು. ಆದರೆ, ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಇವರ ಅರ್ಜಿಯನ್ನು ಈ ಕೆಳಗಿನ ಕೋರ್ಟ್ ತಿರಸ್ಕರಿಸಿತ್ತು.

ಇದನ್ನೂ ಓದಿ: ಚಾಕೊಲೇಟ್ ಕದ್ದಿದ್ದಾಳೆಂದು 12 ವರ್ಷದ ಮಗಳನ್ನು ದೊಣ್ಣೆಯಿಂದ ಹೊಡೆದು ಕೊಂದ ತಂದೆ

ಇದಾದ ಬಳಿಕ ಈ ವೃದ್ಧ ದಂಪತಿಯು ಅಲಹಾಬಾದ್ ಹೈಕೋರ್ಟ್​ನಲ್ಲಿ ಮೇಲ್ಮನವಿ ಮಾಡಿತು. ಅರ್ಜಿದಾರರು ವೃದ್ಧರು ಮತ್ತು ಅನಕ್ಷರಸ್ಥರಾಗಿದ್ದಾರೆ. ಮಗನ ಮೇಲೆ ಅವಲಂಬಿತರಾಗಿದ್ದರು. ಅವರ ನಿಧನದಿಂದ ಅವರ ಬದುಕು ನಿರ್ವಹಣೆ ಕಷ್ಟವಾಗಿದೆ. ಅಸಹಾಯಕ ಅತ್ತೆ ಮಾವನವರನ್ನು ಪಾಲನೆ ಮಾಡುವ ನೈತಿಕ ಹೊಣೆ ಸೊಸೆಗೆ ಇರುತ್ತದೆ. ಇದನ್ನು ಕಾನೂನು ಬದ್ಧತೆಯಾಗಿ ಪರಿಗಣಿಸಬೇಕು ಎಂದು ವೃದ್ಧ ದಂಪತಿ ಪರ ವಕೀಲರು ಕೋರ್ಟ್​ನಲ್ಲಿ ವಾದಿಸದ್ದರು.

ಮಗನ ಸಾವಿನಿಂದಾಗಿ ಸೊಸೆಗೆ ಕೆಲಸ ಸಿಕ್ಕಿತು ಎಂದು ಹೇಳುವ ಯಾವ ದಾಖಲೆಯೂ ಇಲ್ಲ. ನೈತಿಕ ಬದ್ಧತೆಯನ್ನು ಕಾನೂನು ಬದ್ಧತೆ ಎಂದು ಪರಿಗಣಿಸಲು ಆಗುವುದಿಲ್ಲ ಎಂದು ಅಲಹಾಬಾದ್ ಉಚ್ಚ ನ್ಯಾಯಾಲಯದ ಪೀಠದಿಂದ ತೀರ್ಪು ಬಂದಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಇರಾನ್ ಮೇಲೆ ವಿಧ್ವಂಸಕ ದಾಳಿಗೆ ಸಜ್ಜಾಗಿರುವ B-52 ಬಾಂಬರ್ ವಿಶೇಷತೆ ಏನು?

ವಾಷಿಂಗ್ಟನ್, (ಮಾರ್ಚ್​ 29): ಅಮೆರಿಕ (America)  , ಇಸ್ರೆಲ್  (Israel) ಮತ್ತು ಇರಾನ್ (Iran) ನಡುವಿನ ಯುದ್ಧ 30ನೇ ದಿನಕ್ಕೆ ಕಾಲಿಟ್ಟಿದ್ದು, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚು ಅಪಾಯಕಾರಿಯಾಗುತ್ತಿದೆ. ಉಲ್ಬಣಗೊಳ್ಳುತ್ತಿರುವ ಪರಿಸ್ಥಿತಿಯ ನಡುವೆ ಅಮೆರಿಕದ ಎಚ್ಚರಿಕೆಗೂ ಇರಾನ್ ಬಗ್ಗುತ್ತಿಲ್ಲ. ಬದಲಾಗಿ ಪ್ರತಿದಾಳಿ ಮುಂದುವರೆಸಿದೆ. ಇದರಿಂದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್, ತಮ್ಮ ವಾಯುಸೇನೆಯ ಶಕ್ತಿಶಾಲಿ ಬಾಂಬರ್ B-52 ವಿಮಾನ (US B-52 Bomber) ಮೂಲಕ ಇರಾನ್ ಮೇಲೆ ವಿಧ್ವಂಸಕ ದಾಳಿಗೆ ಸಜ್ಜಾಗಿದ್ದಾರೆ. ಹೌದು.. ಅಮೆರಿಕ ಇರಾನ್‌ ವಿರುದ್ಧದ ಯುದ್ದಕ್ಕಾಗಿ ಈಗ ಮತ್ತಷ್ಟು ಯುದ್ದ ವಿಮಾನಗಳನ್ನ ಮಧ್ಯಪ್ರಾಚ್ಯಕ್ಕೆ ಕಳಿಸುತ್ತಿದೆ. ಅದರಲ್ಲೂ ಬಿ-52 ಬಾಂಬರ್‌ ಯುದ್ದ ವಿಮಾನಗಳನ್ನ ಹೆಚ್ಚು ಕಳಿಸುತ್ತಿದ್ದು, ಇಂದು (ಮಾರ್ಚ್ 29) ಮತ್ತೆ ಎರಡು ಬಿ-52 ಯುದ್ದ ವಿಮಾನಗಳು ಬ್ರಿಟನ್‌ನ ವಾಯು ನೆಲೆಗೆ ಆಗಮಿಸಿವೆ. ಇದರೊಂದಿಗೆ ಇರಾನ್‌ ವಿರುದ್ಧದ್ದ ಯುದ್ದಕ್ಕಾಗಿ ಅಮೆರಿಕ ಕಳಿಸಿರುವ ಬಿ-52 ಯುದ್ದ ವಿಮಾನಗಳ ಸಂಖ್ಯೆ ಈಗ 23ಕ್ಕೇರಿದೆ.

ಇನ್ನು ಟ್ರಂಪ್ ಬಳಸಲು ಮುಂದಾದ ಅಮೆರಿಕ ವಾಯುಸೇನೆಯ ಶಕ್ತಿಶಾಲಿ ಬಾಂಬರ್ B-52 ವಿಮಾನ ಸಾಮರ್ಥ್ಯ ಎಷ್ಟು ಎನ್ನುವುದನ್ನು ನೋಡುವುದಾದರೆ, 1950ರಲ್ಲಿ ಅಮೆರಿಕ ವಾಯುಸೇನೆಯ ಶಕ್ತಿಶಾಲಿ ಬಾಂಬರ್ B-52 ವಿಮಾನವನ್ನು ಪರಿಚಯಿಸಲಾಗಿದೆ. ಅಣ್ವಸ್ತ್ರ, ಭಾರಿ ತೂಕದ ಬಾಂಬ್​ಗಳನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯ ಹೊಂದಿದೆ. ಪರಮಾಣು ಕ್ರೂಸ್ ಮಿಸೈಲ್ ಹೊತ್ತೊಯ್ಯಲಿದೆ. ಹಾಗೇ ಈ B-52 ವಿಮಾನ 32,000 ಕೆಜಿಗೂ ಹೆಚ್ಚು ತೂಕದ ವಸ್ತುಗಳ ಜೊತೆಗೆ 14,000 ಕಿ.ಮೀಟರ್​ ಗಿಂತ ಹೆಚ್ಚು ದೂರ ಹಾರಬಲ್ಲದು.

ಇದನ್ನೂ ಓದಿ:  ಹಾರ್ಮುಜ್ ಜಲಸಂಧಿ, ಖಾರ್ಗ್​ ದ್ವೀಪದ ಮೇಲೆ ದಾಳಿ ಮಾಡುತ್ತಾ ಅಮೆರಿಕ, 3,500 ಸೈನಿಕರನ್ನು ನಿಯೋಜಿಸಿರುವುದೇಕೆ?

Source link

IPL 2026: ಹೀನಾಯ ಸೋಲಿನ ನಡುವೆಯೂ ದಾಖಲೆ ಬರೆದ ಇಶಾನ್ ಕಿಶನ್

Source link

ಬೆಂಗಳೂರು ಬಿಟ್ಟು 40 ಕಿಮೀ ಹೋದ್ರೆ ಸೌದೆ ಸಿಗುತ್ತೆ: ಕಟ್ಟಿಗೆ ಬಳಸುವಂತೆ ಸಚಿವ ಮುನಿಯಪ್ಪ ಕರೆ

ಬೆಂಗಳೂರು, ಮಾರ್ಚ್​ 29: ಗಲ್ಫ್ ಯುದ್ಧವೂ 30ನೇ ದಿನಕ್ಕೆ ಕಾಲಿಟ್ಟಿದೆ. ಇತ್ತ ಕರುನಾಡಲ್ಲಿ ಸಮರದ ಎಫೆಕ್ಟ್ ಬೀರಿದ್ದು, ಅಡುಗೆ ಅನಿಲ ಅಭಾವ (Gas Cylinder Crisis) ಮುಂದುವರಿದಿದೆ. ವಾಣಿಜ್ಯ ಸಿಲಿಂಡರ್ ಸಿಗದೇ ಹೋಟೆಲ್, ಕೈಗಾರಿಕೆಗಳು ಥಂಡಾ ಹೊಡೆದಿವೆ. ಜನರು ಖಾಲಿ ಗ್ಯಾಸ್​ ಸಿಲಿಂಡರ್​ ಹಿಡಿದು ಏಜೆನ್ಸಿಗಳತ್ತ ಧಾವಿಸುತ್ತಿದ್ದಾರೆ. ಈ ಮಧ್ಯೆ ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಸಿಲಿಂಡರ್​ ಅಭಾವ ಇರುವುದರಿಂದ ಸೌದೆ ಒಲೆ ಬಳಸುವಂತೆ ಕರೆ ನೀಡಿದ್ದಾರೆ.

ಸೌದೆ ಒಲೆಗಳನ್ನು ಬಳಸುವಂತೆ ಸಚಿವ ಕೆ.ಹೆಚ್ ಮುನಿಯಪ್ಪ ಮನವಿ

ಬೆಂಗಳೂರಿನಲ್ಲಿರುವ ಅವರ ಖಾಸಗಿ ನಿವಾಸದಲ್ಲಿ ಸುದ್ದಿಗೋಷ್ಠಿ ಮಾಡಿದ ಸಚಿವ ಕೆ.ಹೆಚ್ ಮುನಿಯಪ್ಪ, ಸಿಲಿಂಡರ್​ ಅಭಾವ ಇರುವುದರಿಂದ ಹಳ್ಳಿ ಭಾಗದ ಜನರು ಸೌದೆ ಒಲೆಗಳನ್ನು ಬಳಸಿ. ಬೆಂಗಳೂರು ಬಿಟ್ಟು 40 ಕಿಲೋಮೀಟರ್ ಹೋದರೆ ಸೌದೆ ಸಿಗುತ್ತೆ. ಅರಣ್ಯ ಪ್ರದೇಶದ ಹಸಿ ಮರ ಬಿಟ್ಟು ಒಣ ಕಟ್ಟಿಗೆ ಬಳಸುವಂತೆ ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕೊವಿಡ್ ರೀತಿ ಹೋರಾಟ: ಪ್ರಧಾನಿ ಮೋದಿ ಸಭೆ ಬಳಕ ಸಚಿವ ಮುನಿಯಪ್ಪ ಶಾಕಿಂಗ್​ ಹೇಳಿಕೆ

ರಾಜ್ಯದಲ್ಲಿ ಸಿಲಿಂಡರ್​ ಕೊರತೆಗೆ ಕೇಂದ್ರ ಸರ್ಕಾರವೇ ಕಾರಣ. ಡಿಸ್ಟ್ರಿಬ್ಯೂಟರ್​ಗಳ ಮೇಲೆ ದೂರು ಬರುತ್ತಿವೆ. ಡೊಮೆಸ್ಟಿಕ್ ಸಿಲಿಂಡರ್ ಈ ಹಿಂದಿನಂತೆ ಮುಂದುವರಿಯುತ್ತೆ. ಆಯಿಲ್ ಕಂಪನಿಗಳಿಗೆ ಸರ್ಕಾರ ಈಗಾಗಲೇ ಸೂಚನೆ ನೀಡಿದೆ. ಸಕಾಲಕ್ಕೆ ಗ್ರಾಹಕರ ಮನೆ ಬಾಗಿಲಿಗೆ ಸಿಲಿಂಡರ್ ತಲುಪಿಸಬೇಕು. ಸಿಲಿಂಡರ್​ಗಾಗಿ ಯಾರು ಕೂಡ ಕ್ಯೂ ನಿಲ್ಲಬಾರದು. ನೀವು ಬುಕ್ಕಿಂಗ್ ಮಾಡಿದ್ದರೆ ನಿಮ್ಮ ಮನೆಗೆ ಸಿಲಿಂಡರ್ ಬರುತ್ತೆ. ಕೇಂದ್ರ ಸರ್ಕಾರ ಗ್ಯಾಸ್​ ಪೂರೈಸಲು ಪ್ರಯತ್ನ ಮಾಡುತ್ತಿದೆ. ಈಗ 40% ಸಿಲಿಂಡರ್ ಪೂರೈಕೆ ಆಗುತ್ತಿದೆ ಎಂದು ಹೇಳಿದ್ದಾರೆ.

ಇಂದಿನಿಂದಲೇ ವಾಣಿಜ್ಯ ಎಲ್​​ಪಿಜಿ ಸಿಲಿಂಡರ್‌ಗಳ ವಿತರಣೆ

ರಾಜ್ಯಕ್ಕೆ ವಾಣಿಜ್ಯ ಎಲ್​​ಪಿಜಿ ಸಿಲಿಂಡರ್ ಪೂರೈಕೆಯನ್ನು ಶೇ. 68 ಗೆ ಹೆಚ್ಚಿಸಲಾಗಿದೆ. ರಾಜ್ಯ ಸರ್ಕಾರವು ಇಂದಿನಿಂದಲೇ ಹೆಚ್ಚುವರಿ ವಾಣಿಜ್ಯ ಎಲ್​​ಪಿಜಿ ಸಿಲಿಂಡರ್‌ಗಳನ್ನು ವಿತರಿಸಲಾಗುತ್ತಿದೆ. ಶಿಕ್ಷಣ ಸಂಸ್ಥೆಗಳು, ವಸತಿ ನಿಲಯಗಳು, ಆಸ್ಪತ್ರೆ ಮತ್ತು ಇತರೆ ಅವಶ್ಯಕ ಸಂಸ್ಥೆಗಳಿಗೆ 4200 ಸಿಲಿಂಡರ್ ಹಂಚಿಕೆ ಮಾಡಲಾಗಿದೆ. ಸರ್ಕಾರಿ, ಪಿಎಸ್​​ಯು ಸಂಸ್ಥೆಗಳು, ವಿಮಾನ ನಿಲ್ದಾಣ, ರೈಲು, ಬಸ್ ನಿಲ್ದಾಣಗಳ ಕ್ಯಾಂಟೀನ್‌ಗಳಿಗೆ 1200 ಸಿಲಿಂಡರ್ ಹಂಚಲಾಗಿದೆ ಎಂದರು.

ಇದನ್ನೂ ಓದಿ: ಗ್ಯಾಸ್​​​ ಅಭಾವದ ಮಧ್ಯೆ ಮಂಗಳೂರಿನ ಹೋಟೆಲ್​​​ವೊಂದರಿಂದ ಭರ್ಜರಿ ಆಫರ್​​: ಷರತ್ತು ಅನ್ವಯ

ಹೋಟೆಲ್, ಡಾಬಾ, ರೆಸ್ಟೋರೆಂಟ್, ಕ್ಯಾಂಟೀನ್, ಕ್ಯಾಫೆ, ಬೇಕರಿ, ಸಮುದಾಯ ಅಡುಗೆ ಕೇಂದ್ರಗಳು, ಪಿ.ಜಿ, ಫುಡ್ ವಸ್ತು ನಿಲಯಗಳಿಗೆ 17500 ಸಿಲಿಂಡರ್, ಬೀಜ ಸಂಸ್ಕರಣೆ, ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳು, ಜೈವೋದ್ಯಮ, ಮೀನುಗಾರಿಕೆ, ಕೋಳಿ ಸಾಕಣೆ, ರೇಷ್ಮೆ ಹುಳು ಸಾಕಣೆ ಕೇಂದ್ರಗಳಿಗೆ 6000, ಇತರ ಅವಶ್ಯಕತೆ ಆಧಾರದ ಮೇಲೆ 563 ಸಿಲಿಂಡರ್‌ ಸೇರಿದಂತೆ ಒಟ್ಟು 29463 ಕಮರ್ಷಿಯಲ್ ಸಿಲಿಂಡರ್ ನಿತ್ಯ ವಿತರಿಸಲಾಗುತ್ತಿದೆ.

ಹೆಚ್ಚಿನ ಬೆಲೆಗೆ ಸಿಲಿಂಡರ್ ಮಾರಾಟ: ಪರವಾನಗಿ ರದ್ದು ಎಂದ ಸಚಿವ ಮುನಿಯಪ್ಪ 

ಕೆಲವು ಅನಿಲ ವಿತರಕರು ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಸಿಲಿಂಡರ್ ಮಾರಾಟ ಮಾಡುತ್ತಿದ್ದಾರೆ. ಈ ಬಗ್ಗೆ ನಮಗೆ ದೂರುಗಳು ಬಂದಿವೆ. ಎಲ್ಲಾ LPG ವಿತರಕರು ಕಡ್ಡಾಯವಾಗಿ ಸರ್ಕಾರ ನಿಗದಿಪಡಿಸಿದ ದರದಲ್ಲೇ ಸಿಲಿಂಡರ್ ವಿತರಿಸಬೇಕು. ಹೆಚ್ಚುವರಿ ದರ ವಸೂಲಿ ಮಾಡಿದರೆ ಕಾನೂನು ಕ್ರಮಕೈಗೊಳ್ಳುವುದರ ಮೂಲಕ ಪರವಾನಗಿ ರದ್ದು ಮಾಡಲಾಗುವುದು. LPG ಸಿಲಿಂಡರ್ ಅಕ್ರಮ ದಾಸ್ತಾನು ಸಂಬಂಧ 1169 ಕೇಸ್ ದಾಖಲಾಗಿವೆ. ವಾಣಿಜ್ಯ ಉದ್ದೇಶಕ್ಕೆ ಬಳಸ್ತಿದ್ದ 1603 ಸಿಲಿಂಡರ್ ವಶಪಡಿಸಿಕೊಳ್ಳಲಾಗಿದೆ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ತಾಯಿ, ಅಕ್ಕನ ಕತ್ತು ಸೀಳಿ ಯುವಕ ಆತ್ಮಹತ್ಯೆಗೆ ಯತ್ನ: ಅಸಲಿಗೆ ಆಗಿದ್ದೇನು?

ಬೆಂಗಳೂರು,(ಮಾರ್ಚ್ 29): ತಾಯಿ, ಅಕ್ಕ ಹಾಗೂ ಅಕ್ಕನ ಮಗನ ಕತ್ತು ಕೊಯ್ದು ಬಳಿಕ ಆರೋಪಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ತಾಲ್ಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದಿದೆ. ಮೋಹನ್ ಗೌಡ ಎನ್ನುವಾತ ತಾಯಿ ಆಶಾ(55), ಅಕ್ಕ ವರ್ಷಿತಾ(34) ಮತ್ತು ಅಕ್ಕನ ಮಗ ಮಯಾಂಕನ ಕತ್ತು ಕೊಯ್ದು ಕೊಯ್ದಿದ್ದಾನೆ. ಬಳಿಕ ಮೋಹನ್ ಗೌಡ ಸಹ ತಾನು ಸಹ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಘಟನೆಯಲ್ಲಿ ತಾಯಿ ಆಶಾ ಹಾಗೂ ಅಕ್ಕ ವರ್ಷಿತಾ ಸಾವನ್ನಪ್ಪಿದ್ದು, ಅಕ್ಕನ ಮಗ ಮಯಾಂಕ ಹಾಗೂ ಆರೋಪಿ ಮೋಹನ್ ಗೌಡ ಸ್ಥಿತಿ ಗಂಭೀರವಾಗಿದೆ.

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮೋಹನ್ ವಿಡಿಯೋ ಒಂದನ್ನು ಚಿತ್ರೀಕರಿಸಿದ್ದ. ಸಾಲಗಾರರ ಕಾಟ ತಾಳಲಾರದೆ ನಾವು ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇವೆ ಎಂದು ವಿಡಿಯೋದಲ್ಲಿ ಹೇಳಿ ಅದನ್ನು ತನ್ನ ಸಂಬಂಧಿಕರಿಗೆ ಕಳುಹಿಸಿದ್ದ. ವಿಡಿಯೋ ನೋಡಿ ಗಾಬರಿಗೊಂಡ ಸಂಬಂಧಿಕರು ತಕ್ಷಣ ಮನೆಗೆ ಧಾವಿಸಿದ್ದಾರೆ. ಸಂಬಂಧಿಕರು ಸ್ಥಳಕ್ಕೆ ಬಂದಾಗ ಮನೆಯ ಮುಂಭಾಗದ ಬಾಗಿಲು ಲಾಕ್ ಆಗಿತ್ತು. ಒಳಗೆ ಕಿರುಚಾಟದ ಶಬ್ದ ಕೇಳಿ ಬಂದಿದೆ. ಕೂಡಲೇ ಹಿಂಬಾಗಿಲಿನ ಮೂಲಕ ಒಳಗೆ ಹೋದಾಗ ರಕ್ತದ ಮಡುವಿನಲ್ಲಿ ನಾಲ್ವರು ಬಿದ್ದಿರುವುದು ಕಂಡುಬಂದಿದೆ.

ಇದನ್ನೂ ಓದಿ: ಸಾಲಗಾರರ ಕಾಟಕ್ಕೆ ಒಂದೇ ಕುಟುಂಬದ ಇಬ್ಬರು ಬಲಿ: ಮತ್ತೆರಡು ಮಂದಿ ಸ್ಥಿತಿ ಗಂಭೀರ

Source link