All posts by nagaraj11081993

Chanakya Niti: ಗಂಡ ಹೆಂಡತಿ ನಡುವಿನ ಜಗಳಗಳಿಗೆ ನಿಜವಾದ ಕಾರಣವೇ ಈ ಅಂಶಗಳು – Kannada News

ಗಂಡ ಹೆಂಡತಿ (husband and wife) ಜಗಳ ಉಂಡು ಮಲಗೋ ತನಕ ಎಂಬ ಮಾತಿದೆ. ಆದರೆ ಈಗಿನ ಕಾಲದಲ್ಲಿ ಗಂಡ ಹೆಂಡತಿಯ ಜಗಳ ಡಿವೋರ್ಸ್‌ ತನಕ ಎಂಬಂತಾಗಿದೆ. ಹೌದು ಈಗಂತೂ ಗಂಡ ಹೆಂಡತಿಯರ ನಡುವೆ ಹೊಂದಾಣಿಕೆಯ ಗುಣವೇ ಇಲ್ಲ, ಸಣ್ಣಪುಟ್ಟ ವಿಚಾರಗಳಿಗೂ ದೊಡ್ಡದಾಗಿ ಜಗಳವಾಡಿ ಸುಂದರ ಸಂಬಂಧವನ್ನೇ ಹಾಳು ಮಾಡಿಕೊಳ್ಳುತ್ತಾರೆ. ಈ ಎಲ್ಲಾ ಜಗಳಗಳಿಗೆ ಈ ಅಂಶಗಳೇ ಮುಖ್ಯ ಕಾರಣವಾಗಿದ್ದು, ಗಂಡ ಹೆಂಡತಿ ಕೂತು ಅದನ್ನು ಬಗೆಹರಿಸಿದರೆ ಸಂಸಾರವನ್ನು ಸುಂದರವಾಗಿ ಸಾಗಿಸಬಹುದು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಚಾಣಕ್ಯರು ಹೇಳಿರುವಂತೆ ಯಾವ ಅಂಶಗಳು ಪತಿ ಪತ್ನಿಯರ ಜಗಳಕ್ಕೆ ಮುಖ್ಯ ಕಾರಣ ಎಂಬುದನ್ನು ನೋಡೋಣ ಬನ್ನಿ.

ಗಂಡ-ಹೆಂಡತಿ ಜಗಳಕ್ಕೆ ನಿಜವಾದ ಕಾರಣವೇನು?

ಅನ್ಯೋನ್ಯತೆಯ ಕೊರತೆ: ಚಾಣಕ್ಯರ ಪ್ರಕಾರ, ಪರಸ್ಪರ ಪ್ರೀತಿ, ಸ್ನೇಹ ಮತ್ತು ಗೌರವವು ದಾಂಪತ್ಯದಲ್ಲಿ ಮುಖ್ಯ. ಇವುಗಳಿಲ್ಲದೆ, ಸಂಬಂಧವು ಹೆಚ್ಚು ಕಾಲ ಉಳಿಯಲು ಸಾಧ್ಯವಿಲ್ಲ. ಗಂಡ ಮತ್ತು ಹೆಂಡತಿಯ ನಡುವೆ ಪರಸ್ಪರ ತಿಳುವಳಿಕೆಯ ಕೊರತೆ, ಸಂಬಂಧದಲ್ಲಿ ಮೋಸ ಮಾಡುವುದು ಮತ್ತು ಸಣ್ಣ ವಿಷಯಗಳನ್ನೂ ದೊಡ್ಡದಾಗಿಸುವುದು ಈ ಎಲ್ಲಾ ಅಂಶಗಳು ಸಂಬಂಧವನ್ನು ಹಾನಿಗೊಳಿಸುತ್ತದೆ. ಸಣ್ಣ ಭಿನ್ನಾಭಿಪ್ರಾಯಗಳು ಮತ್ತು ಅನಗತ್ಯ ವಾದಗಳು ಸಂಬಂಧದಲ್ಲಿ ಬಿರುಕು ಮೂಡಿಸುತ್ತದೆ. ಚಾಣಕ್ಯರ  ಪ್ರಕಾರ, ಪರಸ್ಪರರ ಅಗತ್ಯತೆಗಳು ಮತ್ತು ಭಾವನೆಗಳನ್ನು ಅರ್ಥಮಾಡಿಕೊಳ್ಳಲು ವಿಫಲರಾದ ದಂಪತಿಗಳ ನಡುವೆ ಯಾವಾಗಲೂ ಸಮಸ್ಯೆಗಳು ಉದ್ಭವಿಸುತ್ತಲೇ ಇರುತ್ತವೆ.

ಹಣಕಾಸಿನ ಸಮಸ್ಯೆಗಳು: ಚಾಣಕ್ಯರ ಪ್ರಕಾರ, ಹಣದ ವಿಷಯದಲ್ಲಿ ಯಾವಾಗಲೂ ಜಾಗರೂಕರಾಗಿರಬೇಕು. ಸಾಲ, ಆದಾಯದ ಕೊರತೆಗಳಂತಹ ಹಣಕಾಸಿನ ಸಮಸ್ಯೆಗಳು ಪತಿ ಮತ್ತು ಪತ್ನಿಯ ನಡುವಿನ ಉದ್ವಿಗ್ನತೆ ಹೆಚ್ಚಿಸುತ್ತದೆ. ಹೌದು ಆದಾಯ ಕಮ್ಮಿಯಾಗಿ ಗಂಡ ಅಥವಾ ಹೆಂಡತಿ ತಮ್ಮ ಖರ್ಚನ್ನು ತೀರಾ ಹೆಚ್ಚು ಮಾಡಿದರೆ ಇದು ಇವರಿಬ್ಬರ ನಡುವೆ ವಾಗ್ವಾದವನ್ನು ಉಂಟು ಮಾಡುತ್ತವೆ. ಇವೇ ಜಗಳಗಳು ನಡೆಯಲು ಮುಖ್ಯ ಕಾರಣವಾಗುತ್ತದೆ.

ಇದನ್ನೂ ಓದಿ: ಎಲ್ಲರೂ ನಿಮ್ಮನ್ನು ಗೌರವಿಸಬೇಕೆಂದರೆ ತಕ್ಷಣವೇ ಅಭ್ಯಾಸಗಳನ್ನು ತ್ಯಜಿಸಿ

ಪ್ರಾಮಾಣಿಕತೆಯ ಕೊರತೆ: ಚಾಣಕ್ಯ ನೀತಿಯ ಪ್ರಕಾರ, ಗಂಡ ಮತ್ತು ಹೆಂಡತಿಯ ನಡುವಿನ ಸಂಬಂಧದಲ್ಲಿ ಯಾರೇ ಒಬ್ಬರು ಪ್ರಾಮಾಣಿಕವಾಗಿಲ್ಲದಿದ್ದರೂ ಸಂಬಂಧವು ಹೆಚ್ಚು ಕಾಲ ಉಳಿಯುವುದಿಲ್ಲ. ಸಂಬಂಧದಲ್ಲಿ ಪ್ರೀತಿ, ನಂಬಿಕೆ ಕಡಿಮೆಯಾದಾಗ ಜಗಳಗಳು ಉಂಟಾಗುತ್ತವೆ. ಹಾಗಾಗಿ ಏನೇ ಆದರೂ ಗಂಡ ಮತ್ತು ಹೆಂಡತಿ ಸಂಬಂಧದಲ್ಲಿ ಪ್ರಾಮಾಣಿಕವಾಗಿರಬೇಕು. ಯಾವುದೇ ವಿಚಾರಗಳನ್ನು ಮುಚ್ಚುಮರೆ ಮಾಡಬಾರದು.

ಜವಾಬ್ದಾರಿಯ ಕೊರತೆ:  ಚಾಣಕ್ಯನ ಪ್ರಕಾರ, ಗಂಡ ಮತ್ತು ಹೆಂಡತಿ ಸಮಾನ ಜವಾಬ್ದಾರಿಗಳನ್ನು ತೆಗೆದುಕೊಳ್ಳಬೇಕು. ಒಬ್ಬರಿಗೊಬ್ಬರು ನೆರಳಿನಂತಿರಬೇಕು. ಇನ್ನೊಬ್ಬರನ್ನು ನಿರ್ಲಕ್ಷಿಸಿದರೆ, ಸಂಬಂಧವು ಮುರಿದು ಬೀಳುವುದು ಸಹಜ. ವಿಶೇಷವಾಗಿ ಮಕ್ಕಳನ್ನು ಬೆಳೆಸುವಲ್ಲಿ, ಮನೆಯನ್ನು ನಿರ್ವಹಿಸುವಲ್ಲಿ ಮತ್ತು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಯಾವುದೇ ಸಹಕಾರವಿಲ್ಲದಿದ್ದರೆ, ಜವಾಬ್ದಾರಿಯ ಹೊರೆ ಒಬ್ಬ ವ್ಯಕ್ತಿಯ ಮೇಲೆ ಬೀಳುತ್ತದೆ. ಆಗ ಮನಸ್ತಾಪ ಮೂಡಲು ಕಾರಣವಾಗುತ್ತದೆ. ಹಾಗಾಗಿ ಸಂಬಂಧ ಚೆನ್ನಾಗಿರಬೇಕೆಂದರೆ ಜವಾಬ್ದಾರಿಗಳನ್ನು ತೆಗೆದುಕೊಳ್ಳುವುದು ಉತ್ತಮ ಎಂದು ಚಾಣಕ್ಯರು ಹೇಳುತ್ತಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶ್ರೇಯಸ್ ಅಯ್ಯರ್​ಗೆ ಟಿ20 ತಂಡದ ನಾಯಕತ್ವ; ಯಾರಿಗೆ ಸಿಗಲಿದೆ ಉಪನಾಯಕತ್ವ? – Kannada News

ಇದೇ ಜೂನ್ 6 ರಿಂದ ಅಫ್ಘಾನಿಸ್ತಾನ ಹಾಗೂ ಭಾರತದ ನಡುವೆ ಟೆಸ್ಟ್ ಹಾಗೂ ಏಕದಿನ ಸರಣಿ ಆರಂಭವಾಗಲಿದೆ. ಈ ಸರಣಿ ಮುಗಿದ ಬಳಿಕ ಜೂನ್ 26 ರಿಂದ ಐರ್ಲೆಂಡ್ ವಿರುದ್ಧ ಮತ್ತು ಜುಲೈ 1 ರಿಂದ ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯನ್ನು ಆಡಬೇಕಾಗಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾವನ್ನು ಯಾರು ಮುನ್ನಡೆಸುತ್ತಾರೆ ಎಂಬುದು ಇದುವರೆಗೆ ಖಚಿತವಾಗಿಲ್ಲ. ಏಕೆಂದರೆ ಸೂರ್ಯಕುಮಾರ್ ಯಾದವ್ ಅವರನ್ನು ಟಿ20 ತಂಡದಿಂದ ಕೈಬಿಡುವ ಬಗ್ಗೆ ಬಿಸಿಸಿಐ ಚಿಂತಿಸುತ್ತಿದೆ. ಹೀಗಾಗಿ ಅವರ ಸ್ಥಾನದಲ್ಲಿ ಯಾರು ತಂಡವನ್ನು ಮುನ್ನಡೆಸಲಿದ್ದಾರೆ ಎಂಬುದು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ. ಆದರೆ ಅದಕ್ಕೂ ಮುನ್ನ ನಾಯಕನ ಸ್ಥಾನಕ್ಕೆ ಶ್ರೇಯಸ್ ಅಯ್ಯರ್ ಅವರ ಹೆಸರು ಬಲವಾಗಿ ಕೇಳಿಬರುತ್ತಿದೆ.

ಶ್ರೇಯಸ್ ಅಯ್ಯರ್ ಟೀಂ ಇಂಡಿಯಾದ ಮುಂದಿನ ಟಿ20 ನಾಯಕರಾಗಲಿದ್ದು, ಈ ಬಗ್ಗೆ ಗುರುವಾರ ಅಧಿಕೃತ ಘೋಷಣೆ ಹೊರಬೀಳಬಹುದು ಎಂದು ವರದಿಯಾಗಿದೆ. ವರದಿಯ ಪ್ರಕಾರ, ಗುರುವಾರ ನಡೆಯಲಿರುವ ಬಿಸಿಸಿಐನ ಅಪೆಕ್ಸ್ ಕೌನ್ಸಿಲ್‌ನ ಆನ್‌ಲೈನ್ ಸಭೆಯಲ್ಲಿ ಶ್ರೇಯಸ್ ಅಯ್ಯರ್ ಅವರನ್ನು ಟಿ20 ನಾಯಕರನ್ನಾಗಿ ನೇಮಿಸುವ ಸಾಧತ್ಯೆಗಳಿವೆ.

ಶ್ರೇಯಸ್​ಗೆ ಟಿ20 ತಂಡದ ನಾಯಕತ್ವ

ಇನ್ನೊಂದು ವರದಿಯ ಪ್ರಕಾರ, ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್, ಸಂಜು ಸ್ಯಾಮ್ಸನ್ ಅವರನ್ನು ಟಿ20 ನಾಯಕರನ್ನಾಗಿ ನೇಮಿಸುವ ಇರಾದೆಯಲ್ಲಿದ್ದರು. ಆದರೆ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಇದಕ್ಕೆ ಒಪ್ಪಲಿಲ್ಲ ಎಂಬ ವರದಿಗಳಿವೆ. ಪರಸ್ಪರ ಒಪ್ಪಿಗೆಯ ಮೇರೆಗೆ, ಶ್ರೇಯಸ್ ಅಯ್ಯರ್ ಅವರನ್ನು ಭಾರತದ ಮುಂದಿನ ಟಿ20 ನಾಯಕನನ್ನಾಗಿ ನೇಮಿಸಲಾಗುತ್ತಿದೆ. ಹೀಗಾಗಿ ಅಯ್ಯರ್ ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಗಳಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಈ ಎರಡೂ ಪ್ರವಾಸಗಳಿಗೆ ತಂಡದ ಆಯ್ಕೆ ಸಭೆಗಳು ಜೂನ್ 6 ರ ಶನಿವಾರ ನಡೆಯಲಿದ್ದು, ಶ್ರೇಯಸ್ ಅಯ್ಯರ್ ಹಾಜರಿರುವ ನಿರೀಕ್ಷೆಯಿದೆ.

ನಾಯಕನಾಗಿ ಅಯ್ಯರ್ ಪ್ರದರ್ಶನ

ಶ್ರೇಯಸ್ ಅಯ್ಯರ್ ಐಪಿಎಲ್‌ನ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾಗಿದ್ದು, 2018 ರಿಂದ ಐಪಿಎಲ್​ನ ಭಾಗವಾಗಿರುವ ಅಯ್ಯರ್ 101 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದಾರೆ. ನಾಯಕನಾಗಿ 55 ಪಂದ್ಯಗಳನ್ನು ಗೆದ್ದಿರುವ ಅಯ್ಯರ್ 54.45 ರ ಗೆಲುವಿನ ಶೇಕಡಾವಾರು ಹೊಂದಿದ್ದಾರೆ. ಹಾಗೆಯೇ ಅಯ್ಯರ್ ನಾಯಕತ್ವದಲ್ಲಿ, ತಂಡವು 41 ಪಂದ್ಯಗಳನ್ನು ಸೋತಿದೆ, ಎರಡು ಪಂದ್ಯಗಳು ಟೈ ಆಗಿದ್ದರೆ, ಮೂರು ಪಂದ್ಯಗಳು ಡ್ರಾದೊಂದಿಗೆ ಕೊನೆಗೊಂಡಿವೆ. ಶ್ರೇಯಸ್ ಡೆಲ್ಲಿ ಕ್ಯಾಪಿಟಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳನ್ನು ಮುನ್ನಡೆಸಿದ್ದಾರೆ. ಹಾಗೆಯೇ ಅಯ್ಯರ್ ಅವರ ನಾಯಕತ್ವದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಐಪಿಎಲ್ 2024 ಪ್ರಶಸ್ತಿಯನ್ನು ಗೆದ್ದಿತು. ಇದಾದ ಬಳಿಕ 2025 ರ ಐಪಿಎಲ್‌ನಲ್ಲಿ ಅಯ್ಯರ್ ಪಂಜಾಬ್ ತಂಡವನ್ನು ಫೈನಲ್​ಗೇರಿಸಿದ್ದರು.

ತಿಲಕ್​ಗೆ ಉಪನಾಯಕತ್ವ

ಮಾಧ್ಯಮ ವರದಿಗಳ ಪ್ರಕಾರ, ತಿಲಕ್ ವರ್ಮಾಗೆ ಉಪನಾಯತ್ವ ನೀಡುವುದು ಕೂಡ ಖಚಿತವಾಗಿದೆ. ಹೀಗಾಗಿ ತಿಲಕ್ ವರ್ಮಾ, ಅಕ್ಷರ್ ಪಟೇಲ್ ಬದಲಿಗೆ ತಂಡದ ಉಪನಾಯಕರಾಗಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಈ ವಸ್ತುಗಳನ್ನು ಗ್ಯಾಸ್‌ ಒಲೆ ಪಕ್ಕ ಇಡಲೇಬೇಡಿ; ಯಾಕೆ ಗೊತ್ತಾ? – Kannada News

ಅಡುಗೆ ಮಾಡುವಾಗ ಕೆಲಸ ಇನ್ನಷ್ಟು ಸುಲಭವಾಗಲಿ ಎಂದು ಕೆಲವೊಂದು ವಸ್ತುಗಳನ್ನು ಕೈಗೆಟಕುವಂತೆ ಗ್ಯಾಸ್‌ ಸ್ಟೌವ್‌ (gas stove) ಪಕ್ಕವೇ ಇಟ್ಟುಬಿಡುತ್ತೇವೆ. ಈ ರೀತಿ ಕೆಲವು ವಸ್ತುಗಳನ್ನು ಗ್ಯಾಸ್‌ ಸ್ಟೌವ್‌ ಪಕ್ಕ ಇಡಲೇಬಾರದಂತೆ, ಏಕೆಂದರೆ ಒಂದು ಸಣ್ಣ ನಿರ್ಲಕ್ಷ್ಯ ಕೂಡ ದೊಡ್ಡ ಅಪಾಯವನ್ನು ಉಂಟು ಮಾಡಬಹುದು. ಹೌದು ಗ್ಯಾಸ್‌ ಸ್ಟೌವ್‌ ಪಕ್ಕದಲ್ಲಿ ಈ ಕೆಲವೊಂದು ವಸ್ತುಗಳನ್ನಿಟ್ಟರೆ ಅವುಗಳಿಗೆ ಬಹುಬೇಗನೆ ಬೆಂಕಿಗೆ ತಗಲುತ್ತವೆ, ಅಲ್ಲದೆ ಆ ವಸ್ತುಗಳ ಗುಣಮಟ್ಟವೂ ಹಾಳಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ತಿಳಿದೋ ತಿಳಿಯದೆಯೋ ಗ್ಯಾಸ್‌ ಸ್ಟೌವ್‌ ಪಕ್ಕದಲ್ಲಿ  ಈ ಕೆಲವೊಂದು ವಸ್ತುಗಳನ್ನು ಇಟ್ಟಿದ್ದರೆ ಅವುಗಳನ್ನು ತಕ್ಷಣವೇ ತೆಗೆದು ಬಿಡಿ. ಆ ವಸ್ತುಗಳು ಯಾವುವು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಗ್ಯಾಸ್‌ ಸ್ಟೌವ್‌ ಪಕ್ಕ ಈ ವಸ್ತುಗಳನ್ನು ಇಡಲೇಬೇಡಿ:

 ಅಡುಗೆಮನೆ ಬಟ್ಟೆಗಳು: ಕೆಲವೊಮ್ಮೆ, ಅಡುಗೆಮನೆಯಲ್ಲಿ ಅಡುಗೆ ಮಾಡುವಾಗ, ನಾವು ನಮ್ಮ ಕೈಗಳನ್ನು ಒರೆಸಲು ಅಥವಾ ಬಿಸಿ ಪಾತ್ರೆಗಳನ್ನು ಹಿಡಿಯಲು ಬಟ್ಟೆಗಳನ್ನು ಬಳಸುತ್ತೇವೆ. ಹೆಚ್ಚಿನವರು ಈ ಬಟ್ಟೆಗಳನ್ನು ಗ್ಯಾಸ್‌ ಸ್ಟೌವ್‌ ಪಕ್ಕದಲ್ಲಿಯೇ ಇಟ್ಟುಬಿಡುತ್ತಾರೆ. ಅಡುಗೆ ಮಾಡುವಾಗ ಆತುರದಲ್ಲಿ, ಈ ಬಟ್ಟೆಗಳು ಆಕಸ್ಮಿಕವಾಗಿ ಜ್ವಾಲೆಗಳು ಅಥವಾ ಬಿಸಿ ಪಾತ್ರೆಗಳೊಂದಿಗೆ ಸಂಪರ್ಕಕ್ಕೆ ಬಂದರೆ ಅವುಗಳಿಗೆ ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಳ್ಳಬಹುದು. ಆದ್ದರಿಂದ ನ್ಯಾಪ್ಕಿನ್‌ ಅಥವಾ ಅಡುಗೆ ಬಟ್ಟೆಗಳನ್ನು ಗ್ಯಾಸ್‌ ಸ್ಟೌವ್‌ ಪಕ್ಕ ಇಡಬೇಡಿ.

ಅಡುಗೆ ಎಣ್ಣೆ ಬಾಟಲಿಗಳು: ಅಡುಗೆಗೆ ಎಣ್ಣೆ ಅತ್ಯಗತ್ಯ. ಅಡುಗೆ ಕೆಲಸ ಆದಷ್ಟು ಸುಲಭವಾಗಿ ಆಗಲಿ ಎಂದು ಬಹುತೇಕ ಎಲ್ಲರೂ ಈ ಎಣ್ಣೆ  ಬಾಟಲಿಗಳನ್ನು ಗ್ಯಾಸ್‌ ಸ್ಟೌವ್‌ ಪಕ್ಕದಲ್ಲಿಯೇ ಇಟ್ಟುಬಿಡುತ್ತಾರೆ.  ಒಲೆಯ ಬಳಿ ಇಟ್ಟ ಎಣ್ಣೆ ಬಾಟಲಿಗಳು ಬೇಗನೆ ಬಿಸಿಯಾಗುತ್ತವೆ. ಅದರಲ್ಲೂ  ಅವು ಪ್ಲಾಸ್ಟಿಕ್ ಆಗಿದ್ದರೆ, ಅವು ಕರಗಿ ಎಣ್ಣೆ ಸೋರಿಕೆಯಾಗುವ ಅಪಾಯವಿದೆ. ಇದಲ್ಲದೆ, ಬೆಂಕಿ ಜ್ವಾಲೆಗೆ ಎಣ್ಣೆ ತಾಕಿದರೆ ಬೆಂಕಿ ಹತ್ತಿಕೊಳ್ಳುವ ಸಾಧ್ಯತೆ ಇರುತ್ತದೆ.

ಪೇಪರ್ ಮತ್ತು ಶಾಪಿಂಗ್ ಬ್ಯಾಗ್‌ಗಳು: ಅನೇಕರು ಅಂಗಡಿಯಿಂದ ವಸ್ತುಗಳನ್ನು ತಂದ ಬಳಿಕ ಆ ವಸ್ತುಗಳ ಪೇಪರ್‌ ಮತ್ತು ಪ್ಲಾಸ್ಟಿಕ್‌ ಕವರ್‌ಗಳಲ್ಲೂ ಅಡುಗೆ ಮನೆಯಲ್ಲೇ ಇಟ್ಟುಬಿಡುತ್ತಾರೆ. ಕೆಲವು ಮನೆಗಳಲ್ಲಿ ಗ್ಯಾಸ್‌ ಒಲೆ ಪಕ್ಕವೇ ಪೇಪರ್‌, ಬ್ಯಾಗ್‌ಗಳನ್ನು ಇಟ್ಟುಬಿಡುತ್ತಾರೆ. ಈ ವಸ್ತುಗಳಿಗೆ ಸುಲಭವಾಗಿ ಬೆಂಕಿ ತಾಕುವ ಕಾರಣ ಅವುಗಳನ್ನು ಗ್ಯಾಸ್‌ ಒಲೆಯಿಂದ ಸಾಧ್ಯವಾದಷ್ಟು ದೂರವಿಡಿ.

ಬೆಂಕಿಕಡ್ಡಿಗಳು ಮತ್ತು ಲೈಟರ್‌ಗಳು: ಗ್ಯಾಸ್ ಹೊತ್ತಿಸಲು ಒಲೆಯ ಬಳಿ ಬೆಂಕಿಕಡ್ಡಿಗಳು ಮತ್ತು ಲೈಟರ್‌ಗಳನ್ನು ಇಡುವುದು ಸಾಮಾನ್ಯ. ಆದರೆ ಈ ರೀತಿ ಮಾಡುವುದು ಸರಿಯಲ್ಲ. ಏಕೆಂದರೆ ಶಾಖದ ನೇರ ಸಂಪರ್ಕವು ಲೈಟರ್‌ಗೆ ಹಾನಿಯಾಗಬಹುದು  ಆದ್ದರಿಂದ ಈ ವಸ್ತುಗಳನ್ನು  ಸುರಕ್ಷಿತ ಸ್ಥಳದಲ್ಲಿ ಇಡಬೇಕು.

ಇದನ್ನೂ ಓದಿ: ಅಡುಗೆ ಮಾಡುವಾಗ ಎಲ್​ಪಿಜಿ ಉಳಿಸಬೇಕಾ? ಹೀಗೆ ಮಾಡಿದರೆ 15 ದಿನ ಹೆಚ್ಚು ಗ್ಯಾಸ್ ಬಳಸಬಹುದು!

ಮರದ ಚಮಚಗಳು ಮತ್ತು ಚಾಪ್ ಬೋರ್ಡ್‌ಗಳು: ಮರದ ಚಮಚಗಳು ಮತ್ತು ಚಾಪ್ ಬೋರ್ಡ್‌ಗಳು ಅಡುಗೆಮನೆಯಲ್ಲಿ ತುಂಬಾ ಉಪಯುಕ್ತವಾಗಿರುವ ವಸ್ತುಗಳು, ಆದ್ದರಿಂದ ಹೆಚ್ಚಿನವರು ಅವುಗಳನ್ನು ಗ್ಯಾಸ್‌ ಒಲೆಯ ಪಕ್ಕದಲ್ಲಿಯೇ ಇಟ್ಟುಬಿಡುತ್ತಾರೆ. ಈ ರೀತಿ ಬಿಸಿ ಬರ್ನರ್ ಬಳಿ ಮರದ ವಸ್ತುಗಳನ್ನು ಇಟ್ಟರೆ ಅವು ಕಪ್ಪಾಗಬಹುದು, ಬಿರುಕು ಬಿಡಬಹುದು ಅಥವಾ ಅವುಗಳಿಗೆ ಬೆಂಕಿ ಹಿಡಿದುಕೊಳ್ಳಬಹುದು.

ಉಪ್ಪು, ಸಕ್ಕರೆ ಮತ್ತು ಮಸಾಲೆ ಜಾಡಿಗಳು: ಅಡುಗೆ ಮಾಡುವಾಗ ಸುಲಭವಾಗಿ ಲಭ್ಯವಾಗುವಂತೆ ಅನೇಕ ಜನರು ಉಪ್ಪು, ಮೆಣಸು, ಅರಿಶಿನ ಮತ್ತು ಗರಂ ಮಸಾಲೆ ಸೇರಿಂದ ಅಡುಗೆಗೆ ಉಪಯುಕ್ತವಾದ ಬಹುತೇಕ ಎಲ್ಲಾ ವಸ್ತುಗಳನ್ನು ಒಲೆಯ ಪಕ್ಕದಲ್ಲಿಯೇ ಇಟ್ಟುಬಿಡುತ್ತಾರೆ. ಗ್ಯಾಸ್‌ ಒಲೆಯ ತೀವ್ರವಾದ ಶಾಖ ಮತ್ತು ಅನಿಲದಿಂದ ಬರುವ ಉಗಿಯ ತೇವಾಂಶವು ಮಸಾಲೆ ಡಬ್ಬಿಗಳ ಒಳಗೆ ಸುಲಭವಾಗಿ ಪ್ರವೇಶಿಸುತ್ತದೆ. ಪರಿಣಾಮವಾಗಿ, ದುಬಾರಿ ಮಸಾಲೆಗಳು ಬೇಗನೆ ಹಾಳಾಗುತ್ತವೆ, ಅವುಗಳ ಪರಿಮಳವೂ ಹೋಗಿಬಿಡುತ್ತದೆ.

ಪ್ಲಾಸ್ಟಿಕ್ ವಸ್ತುಗಳು: ಅಡುಗೆ ಮನೆಯಲ್ಲಿ ನೀವು ಬಳಸುವಂತಹ ಪ್ಲಾಸ್ಟಿಕ್‌ ವಸ್ತುಗಳನ್ನು ಯಾವುದೇ ಕಾರಣಕ್ಕೂ ಗ್ಯಾಸ್‌ ಒಲೆ ಪಕ್ಕದಲ್ಲಿ ಇಡಬೇಡಿ. ಇದರಿಂದ ಆ ವಸ್ತಗಳು ಬೇಗನೆ ಹಾಳಾಗುತ್ತವೆ.ಗ್ಯಾಸ್ ಸ್ಟೌವ್ ಸುತ್ತಲಿನ ಪ್ರದೇಶವನ್ನು ಯಾವಾಗಲೂ ಒಣಗಿರುವಂತೆ ನೋಡಿಕೊಳ್ಳಿ ಮತ್ತು ಸ್ವಚ್ಛವಾಗಿಡಿ. ಸ್ಟೌವ್ ಬಳಿ ಅನಗತ್ಯ ಪ್ಲಾಸ್ಟಿಕ್ ಮತ್ತು ಕಾಗದದ ವಸ್ತುಗಳನ್ನು ಸಂಗ್ರಹಿಸುವುದನ್ನು ತಪ್ಪಿಸಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾಂಗ್ರೆಸ್ ಜೊತೆ ಬ್ರೇಕಪ್; ಇಂಡಿಯ ಒಕ್ಕೂಟದ ಸಭೆ ಬಹಿಷ್ಕರಿಸಲು ಡಿಎಂಕೆ ನಿರ್ಧಾರ – Kannada News

ಚೆನ್ನೈ, ಜೂನ್ 4: ತಮಿಳುನಾಡು ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸೀಟು ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಮತ್ತು ಡಿಎಂಕೆ ನಡುವೆ ತೀವ್ರ ಭಿನ್ನಾಭಿಪ್ರಾಯ ತಲೆದೋರಿದೆ. ಇದರ ಬೆನ್ನಲ್ಲೇ, ದೆಹಲಿಯಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಇಂಡಿಯ (INDIA) ಒಕ್ಕೂಟದ ಸಭೆಯಿಂದ ದೂರ ಉಳಿಯಲು ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನಿರ್ಧರಿಸಿದ್ದಾರೆ. ಇದು ರಾಷ್ಟ್ರ ಮಟ್ಟದಲ್ಲಿ ವಿರೋಧ ಪಕ್ಷಗಳ ಮೈತ್ರಿಗೆ ದೊಡ್ಡ ಹಿನ್ನಡೆಯಾಗಿದೆ.

ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಲಭಿಸಿರಲಿಲ್ಲ. ವಿಜಯ್ ನೇತೃತ್ವದ ಟಿವಿಕೆ ತಮಿಳುನಾಡಿನ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಸರ್ಕಾರ ರಚಿಸಲು ಬೇಕಾದ ಬಹುಮತವಿರಲಿಲ್ಲ. ಈ ವೇಳೆ ಡಿಎಂಕೆ ಜೊತೆಗಿನ ದಶಕಗಳ ಮೈತ್ರಿ ಮುರಿದುಕೊಂಡ ಕಾಂಗ್ರೆಸ್​ ಟಿವಿಕೆಗೆ ಬೆಂಬಲ ಸೂಚಿಸಿತ್ತು. ಇದರಿಂದ ಡಿಎಂಕೆ ಕಾಂಗ್ರೆಸ್ ನೇತೃತ್ವದ ಇಂಡಿಯ ಒಕ್ಕೂಟದಿಂದ ಹೊರಬರಲು ನಿರ್ಧರಿಸಿದೆ.

ಇದನ್ನೂ ಓದಿ: ತಮಿಳುನಾಡು ರಾಜಕೀಯದಲ್ಲಿ ಹೊಸ ತಿರುವು; ಎಐಎಡಿಎಂಕೆಗೆ ರಾಜೀನಾಮೆ ನೀಡಿ ಟಿವಿಕೆಯತ್ತ ಮುಖ ಮಾಡಿದ 3 ಶಾಸಕರು

ರಾಷ್ಟ್ರ ಮಟ್ಟದ ಮೈತ್ರಿಗಿಂತ ತಮಿಳುನಾಡಿನಲ್ಲಿ ತಮ್ಮ ಪಕ್ಷದ ಹಿತಾಸಕ್ತಿ ಮತ್ತು ಪ್ರಾದೇಶಿಕ ಅಸ್ತಿತ್ವವೇ ತಮಗೆ ಮುಖ್ಯ ಎಂಬುದನ್ನು ಡಿಎಂಕೆ ಈ ನಿರ್ಧಾರದ ಮೂಲಕ ಸ್ಪಷ್ಟಪಡಿಸಿದೆ. ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಒಟ್ಟಾಗಿ ಸ್ಪರ್ಧಿಸಿದ್ದ ಈ ಮೈತ್ರಿಯಲ್ಲಿ ಈಗ ಬಿರುಕು ಮೂಡಿರುವುದು ಇಂಡಿಯ ಒಕ್ಕೂಟದ ಇತರ ನಾಯಕರಲ್ಲಿ ಆತಂಕ ಮೂಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಾರ್ವಜನಿಕರ ಕುಂದು ಕೊರತೆಗಳ ನಿರ್ವಹಣೆಗೆ, NRIಗೆ ಪ್ರತ್ಯೇಕ ಸಚಿವಾಲಯ: ಸಿಎಂ ಡಿಕೆಶಿ ಮಹತ್ವ ಘೋಷಣೆ – Kannada News

ಬೆಂಗಳೂರು, (ಜೂನ್ 04): ಡಿಕೆ ಶಿವಕುಮಾರ್ (DK Shivakumar) ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆಯೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾಗಿದ್ದಾರೆ.ಇದಕ್ಕೆ ಪೂರಕವೆಂಬಂತೆ ಇಂದು (ಜೂನ್ 04) ವಿಧಾನಸೌಧದಲ್ಲಿ ರಾಜ್ಯದ ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳ ವಿಶೇಷ ಸಭೆ ನಡೆಸಿದ್ದು, ಖಡಕ್ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಅಲ್ಲದೇ ರಾಜ್ಯದ ಅಭಿವೃದ್ಧಿ, ಕಾನೂನು ಸುವ್ಯಸ್ಥೆ ಹಾಗೂ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವ ಕುರಿತು ಅಧಿಕಾರಿಗಳಿಗೆ ಪಾಠ ಮಾಡಿದ್ದಾರೆ. ಇನ್ನು ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಸಾರ್ವಜನಿಕ ಕುಂದು ಕೊರತೆಗಳ ನಿರ್ವಹಣೆಗೆ ಮತ್ತು ಅನಿವಾಸಿ ಭಾರತೀಯರಿಗೆ (ಎನ್ಆರ್‌ಐ) ಸಂಬಂಧಪಟ್ಟಂತೆ ಪ್ರತ್ಯೇಕ ಸಚಿವಾಲಯಗಳನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದು ಘೋಷಿಸಿದರು.

ಮುಖ್ಯಾಂಶಗಳು

  • ಸಿಎಂ ಆದ ಬಳಿಕೆ ಡಿಕೆ ಶಿವಕುಮಾರ್ ಅಧಿಕಾರಿಗಳ ಜೊತೆ ಮೊದಲ ಮಹತ್ವದ ಸಭೆ
  • ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳ ಜತೆ ಸಭೆ ಮಾಡಿ ಆಡಳಿತ ಯಂತ್ರಕ್ಕೆ ಚುರುಕು
  • ಪಾರದರ್ಶಕ ಆಡಳಿತಕ್ಕೆ ಒತ್ತು ನೀಡಿದ ಸಿಎಂ ಡಿಕೆ ಶಿವಕುಮಾರ್
  • ಸಾರ್ವಜನಿಕರು ಕುಂದುಕೊರತೆ ಆಲಿಸಲು ಪ್ರತ್ಯೇಕ ಸಚಿವಾಲಯ ಘೋಷಣೆ

ಸಾರ್ವಜನಿಕ ಕುಂದುಕೊರತೆಗೆ ಪ್ರತ್ಯೇಕ ಸಚಿವಾಲಯ

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಸಾರ್ವಜನಿಕ ಕುಂದುಕೊರತೆಗೆ ಪ್ರತ್ಯೇಕ ಸಚಿವಾಲಯ ರಚನೆ ಮಾಡಲಾಗುವುದು. ದಿನಕ್ಕೆ ಎರಡು ಮೂರು ತಂಡ ಪ್ರತಿಭಟನೆ ಮಾಡುತ್ತಿರುತ್ತದೆ. ಅವರ ಅಹವಾಲು ಕೇಳಬೇಕಾಗಿದೆ. ಯಾಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ? ಅವರ ಬೇಡಿಕೆಗಳೇನು? ಸಮಸ್ಯೆಗಳೇನು? ಎಂಬ ಬಗ್ಗೆ ತಿಳಿದುಕೊಳ್ಳಬೇಕಾಗಿದೆ. ಬಳಿಕ ಅವರ ಸಮಸ್ಯೆಗೆ ಸ್ಪಂದಿಸಲು, ಪ್ರತ್ಯೇಕ ಸಚಿವಾಲಯ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆಶಿ, ಅಧಿಕಾರಿಗಳಿಗೆ ಕೊಟ್ಟ ಖಡಕ್ ಸೂಚನೆಗಳೇನು?

ಪ್ರತಿನಿತ್ಯ ತಮ್ಮ ಹಕ್ಕುಗಳಿಗಾಗಿ ಅನೇಕ ಹೋರಾಟಗಾರರು, ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತವೆ.ಅವರ ಸಮಸ್ಯೆಗಳನ್ನು ಆಲಿಸುವುದು ಸರ್ಕಾರದ ಕರ್ತವ್ಯ.ಹೀಗಾಗಿ ಹೋರಾಟಗಾರರ ಆಹವಾಲುಗಳನ್ನು ಆಲಿಸಲು ಪ್ರತ್ಯೇಕ ಮಂತ್ರಿ ಹಾಗೂ ಸಚಿವಾಲಯನ್ನು ಮಾಡಲಿದ್ದೇವೆ. ವಾರಕ್ಕೊಬ್ಬ ಸಚಿವರು ಭೇಟಿ ಮಾಡಿ ಮಾತನಾಡಲಿದ್ದಾರೆ. ಹೋರಾಟಗಾರರ ನೋವಿಗೆ ಸ್ಪಂದಿಸುವ ಕೆಲಸವನ್ನು ಈ ಸಚಿವಾಲಯ ಮಾಡಲಿದೆ ಎಂದು ವಿವರಿಸಿದರು.

ಎನ್ಆರ್‌ಐಗೆ ಪ್ರತ್ಯೇಕ ಸಚಿವಾಲಯ

ಇನ್ನು ಎನ್ಆರ್‌ಐಗೆ ಪ್ರತ್ಯೇಕ ಸಚಿವಾಲಯ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಇದೇ ವೇಳೆ ತಿಳಿಸಿದರು. ಹಲವು ಎನ್‌ಆರ್‌ಐಗಳು ರಾಜ್ಯದಲ್ಲಿ ಹೂಡಿಕೆ ಮಾಡುತ್ತಾರೆ. ಅವರ ಸಮಸ್ಯೆಗಳು, ಅವರ ಹೂಡಿಕೆಗಳಿಗೆ ಬೇಕಾದ ಪೂರಕ ವಾತಾವರಣ, ಅವರ ಸಮಸ್ಯೆ ನಿವಾರಣೆಗಾಗಿ, ಸಮನ್ವಯತೆಗಾಗಿ ಪ್ರತ್ಯೇಕ ಎನ್ಆರ್‌ಐ ಸಚಿವಾಲಯ ಮಾಡಲು ತೀರ್ಮಾನ ಮಾಡಲಾಗಿದೆ ಎಂದರು.

ಸಾರ್ವಜನಿಕರ ಸಮಸ್ಯೆಗಳಿಗೆ ಸಿಗುತ್ತಾ ಸ್ಪಂದನೆ?

ಇನ್ನು ಅನೇಕ ವಿಚಾರವಾಗಿ ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ಹಂಚಿಕೊಳ್ಳಲು ಸೂಕ್ತ ವೇದಿಕೆ ಇರಲಿಲ್ಲ. ನಾಮಕಾಸ್ತೆವಾಗಿ ಆಯಾ ಅಧಿಕಾರಿಗಳು ಬಂದು ಮನವಿ ಸ್ವೀಕರಿಸಿ ಸುಮ್ಮನಾಗುತ್ತಿದ್ದರು. ಆದ್ರೆ, ಇದೀಗ ಪ್ರತ್ಯೇಕ ಸಚಿವಾಲಯ ರಚನೆಯಾದರೆ ಸಾರ್ವಜನಿಕರ ಕುಂದುಕೊರತೆಗಳನ್ನು ಕೇಳಲು ನಿರ್ಧಿಷ್ಟವಾದ ಸ್ಥಳ ಹಾಗೂ ಅದಕ್ಕೊಬ್ಬರು ಸಚಿವರು ಇರುತ್ತಾರೆ. ಹೀಗಾಗಿ ಜನರ ಕಷ್ಟಗಳನ್ನ ಆಲಿಸಲು ಒಂದು ಕಚೇರಿ ಇರುತ್ತೆ. ಆದ್ರೆ, ಅದು ಎಷ್ಟರ ಮಟ್ಟಿಗೆ ಜನರು ಕಷ್ಟಗಳನ್ನ ಆಲಿಸುತ್ತೆ ಎನ್ನುವುದನನ್ನು ಕಾದುನೋಡಬೇಕಿದೆ.

Source link

‘ಪೆದ್ದಿ’ ಸಿನಿಮಾಕ್ಕೆ ಬರಲಿದೆಯೇ ಸೀಕ್ವೆಲ್? ಕತೆಯಲ್ಲಿ ಇದೆಯೇ ಸುಳಿವು? – Kannada News

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಇಂದು (ಜೂನ್ 04) ಬಿಡುಗಡೆ ಆಗಿದೆ. ಸಿನಿಮಾದ ಬಗ್ಗೆ ಧನಾತ್ಮಕ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ರಾಮ್ ಚರಣ್ ಬಹಳ ಶ್ರಮ ಹಾಕಿ ಸಿನಿಮಾ ಮಾಡಿದ್ದಾರೆಂದು ಅಭಿಮಾನಿಗಳು ಕೊಂಡಾಡುತ್ತಿದ್ದಾರೆ. ಮೊದಲ ದಿನವೇ ದೇಶದಾದ್ಯಂತ ರಾಮ್ ಚರಣ್ ಅವರ ಸಿನಿಮಾ ತುಂಬಿದ ಗೃಹಗಳ ಪ್ರದರ್ಶನ ಕಂಡಿದೆ. ರಾಮ್ ಚರಣ್ ಅಭಿಮಾನಿಗಳು ಮತ್ತು ಸಿನಿಮಾ ಪ್ರೇಮಿಗಳು ಇಬ್ಬರೂ ಸಹ ಸಿನಿಮಾ ನೋಡಿ ಖುಷಿ ಪಟ್ಟಿದ್ದಾರೆ.

ಇತ್ತೀಚೆಗೆ ಬಿಡುಗಡೆ ಆಗುವ ದೊಡ್ಡ ಬಜೆಟ್​​ನ ಪ್ಯಾನ್ ಇಂಡಿಯಾ ಸಿನಿಮಾಗಳೆಲ್ಲ ಸೀಕ್ವೆಲ್​​ಗಳು ಬರುತ್ತಿವೆ. ಇತ್ತೀಚೆಗಂತೂ ಸೀಕ್ವೆಲ್​​ಗಳ ಕಾಲವಾಗಿದೆ. ಕೆಲವರಂತೂ ‘ಸಿನಿಮ್ಯಾಟಿಕ್ ಯೂನಿವರ್ಸ್​​’ ಸಹ ಮಾಡುತ್ತಿದ್ದಾರೆ. ಈಗ ‘ಪೆದ್ದಿ’ ಸಿನಿಮಾ ಸಹ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಈ ಸಿನಿಮಾದ ಸೀಕ್ವೆಲ್ ಸಹ ಬರಲಿದೆಯೇ ಎಂಬ ಕುತೂಹಲ ಪ್ರೇಕ್ಷಕರಲ್ಲಿ ಸಹಜವಾಗಿದೆ. ಈ ಪ್ರಶ್ನೆಗೆ ಕೆಲ ದಿನಗಳ ಹಿಂದೆಯೇ ನಿರ್ದೇಶಕ ಬುಚ್ಚಿಬಾಬು ಸನಾ ಉತ್ತರ ನೀಡಿದ್ದಾರೆ.

ಸಾಮಾನ್ಯವಾಗಿ ಸೀಕ್ವೆಲ್ ಮಾಡುವ ಉದ್ದೇಶವುಳ್ಳ ನಿರ್ದೇಶಕರು ಸಿನಿಮಾದ ಅಂತ್ಯದಲ್ಲಿ ಸುಳಿವು ನೀಡುತ್ತಾರೆ. ಆದರೆ ‘ಪೆದ್ದಿ’ ಸಿನಿಮಾದ ಅಂತ್ಯದಲ್ಲಿ ಸೀಕ್ವೆಲ್ ಬರುವುದರ ಬಗ್ಗೆ ಯಾವುದೇ ಸುಳಿವನ್ನು ನೀಡಲಾಗಿಲ್ಲ. ಕೆಲ ದಿನಗಳ ಹಿಂದಷ್ಟೆ ಈ ಬಗ್ಗ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಬುಚ್ಚಿಬಾಬು ಸನಾ, ತಮಗೆ ‘ಪೆದ್ದಿ’ಯ ಕತೆ ಕೇವಲ ಒಂದು ಕತೆಯಾಗಿ ಹೊಳೆದಿತ್ತು, ಹಾಗಾಗಿ ಅದನ್ನು ಒಂದೇ ಸಿನಿಮಾ ಮಾಡಿದ್ದೇನೆ. ‘ಪೆದ್ದಿ’ ಬರುತ್ತಾನೆ, ಆತ ಸಾಧಿಸುತ್ತಾನೆ, ಆತನ ಕತೆ ಮುಗಿಯುತ್ತದೆ ಅಷ್ಟೆ, ಸೀಕ್ವೆಲ್​​ಗಾಗಿ ಅದನ್ನು ಹಿಗ್ಗಿಸುವ ಅವಶ್ಯಕತೆ ಇಲ್ಲ’ ಎಂದಿದ್ದರು.

ಇದನ್ನೂ ಓದಿ:Peddi Movie review: ‘ಪೆದ್ದಿ’: ರಾಮ್ ಚರಣ್ ಸಿಕ್ಸರ್, ನಿರ್ದೇಶಕ ರನೌಟ್

‘ಪೆದ್ದಿ’ ಸಿನಿಮಾವು ಒಂದು ಘನ ಉದ್ದೇಶವನ್ನು ಈಡೇರಿಸಲೆಂದು ಕ್ರೀಡಾಪಟುವಾಗುವ ಸಣ್ಣ ಗ್ರಾಮದ ಮಾಮೂಲಿ ಯುವಕನೊಬ್ಬನ ಕತೆ. ಸಿನಿಮಾನಲ್ಲಿ ನಟ ರಾಮ್ ಚರಣ್ ಅವರು ಕ್ರಿಕೆಟ್, ಕುಸ್ತಿ ಮತ್ತು ಮತ್ತೊಂದು ಕ್ರೀಡೆಯನ್ನು ಆಡುತ್ತಾರೆ. ಆಟದ ಮೂಲಕ ತಮಗಾಗಿ ಒಂದು ಐಡೆಂಟಿಟಿಯನ್ನು ಕಟ್ಟಿಕೊಳ್ಳುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾನಲ್ಲಿ ಶಿವರಾಜ್ ಕುಮಾರ್ ಅವರು ಕುಸ್ತಿ ಗುರುವಾಗಿ ನಟಿಸಿದ್ದಾರೆ. ಜಾನ್ಹವಿ ಕಪೂರ್ ನಾಯಕಿ. ಎಆರ್ ರೆಹಮಾನ್ ಸಂಗೀತ ನೀಡಿದ್ದಾರೆ. ರತ್ನವೇಲು ಕ್ಯಾಮೆರಾ ಇದೆ. ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಸಿನಿಮಾಕ್ಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸಂಪೂರ್ಣ ಎಥನಾಲ್ ಇಂಧನದಲ್ಲಿ ಓಡಬಲ್ಲ ಭಾರತದ ಮೊದಲ ಪ್ಯಾಸೆಂಜರ್ ಕಾರು ಬಿಡುಗಡೆ – Kannada News

ನವದೆಹಲಿ, ಜೂನ್ 4: ಭಾರತದ ಪ್ರಮುಖ ವಾಹನ ತಯಾರಿಕಾ ಸಂಸ್ಥೆಯಾದ ಮಾರುತಿ ಸುಜುಕಿ (Maruti Suzuki), ದೇಶದ ಮೊದಲ 100% ಎಥನಾಲ್ ಆಧಾರಿತ ‘ಫ್ಲೆಕ್ಸ್ ಫ್ಯುಯೆಲ್’ (Flex-Fuel) ಕಾರು ವ್ಯಾಗನ್ಆರ್ (WagonR) ಅನ್ನು ಬಿಡುಗಡೆ ಮಾಡಿದೆ. ಇದು ಭಾರತದ ಆಟೋಮೊಬೈಲ್ ಇತಿಹಾಸದಲ್ಲೇ 100% ಶುದ್ಧ ಎಥನಾಲ್ (E100) ಮತ್ತು ಪೆಟ್ರೋಲ್ ಎರಡರಲ್ಲೂ ಚಲಿಸಬಲ್ಲ ಸಾಮರ್ಥ್ಯ ಹೊಂದಿರುವ ಮೊದಲ ಮಾಸ್-ಮಾರ್ಕೆಟ್ (ಸಾಮಾನ್ಯ ಜನರಿಗಾಗಿ ಬಿಡುಗಡೆಯಾದ) ಪ್ಯಾಸೆಂಜರ್ ಕಾರ್ ಆಗಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಸಮ್ಮುಖದಲ್ಲಿ ಈ ಕಾರನ್ನು ಅನಾವರಣಗೊಳಿಸಲಾಯಿತು. ಈ ಫ್ಲೆಕ್ಸ್ ಫ್ಯುಯೆಲ್ ಇಂಜಿನ್ ಅನ್ನು ಶೇ. 20 ರಿಂದ ಹಿಡಿದು ಶೇ. 100 ರಷ್ಟು ಎಥನಾಲ್ ಮಿಶ್ರಣದ ಇಂಧನದಲ್ಲೂ ಸುಲಭವಾಗಿ ಚಲಿಸುವಂತೆ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಇದಕ್ಕಾಗಿ ಇಂಜಿನ್‌ನ ಫ್ಯುಯೆಲ್ ಲೈನ್‌ಗಳು, ಇಂಜೆಕ್ಟರ್‌ಗಳು ಮತ್ತು ಸೀಲ್‌ಗಳನ್ನು ತುಕ್ಕು ನಿರೋಧಕವಾಗಿ (Corrosion-resistant) ಮಾರ್ಪಡಿಸಲಾಗಿದೆ.

ಇದನ್ನೂ ಓದಿ: ಅಮೆರಿಕಕ್ಕೆ ಹೋಗಿ ದೊಡ್ಡ ಉದ್ಯಮಗಳನ್ನು ಕಟ್ಟಿದ ವಲಸಿಗರಲ್ಲಿ ಭಾರತೀಯರೇ ಅತಿಹೆಚ್ಚು

ಸಾಮಾನ್ಯ ಪೆಟ್ರೋಲ್ ಕಾರುಗಳಿಗೆ ಹೋಲಿಸಿದರೆ ಈ ಫ್ಲೆಕ್ಸ್ ಫ್ಯುಯೆಲ್ ಕಾರುಗಳ ತಯಾರಿಕಾ ವೆಚ್ಚ ಸುಮಾರು ₹40,000 ದಿಂದ ₹50,000 ದಷ್ಟು ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ.

ಫ್ಲೆಕ್ಸ್ ಫುಯೆಲ್ ಕಾರಿನಿಂದ ಲಾಭಗಳೇನು?

  • ಮಾಲಿನ್ಯ ಇಳಿಕೆ: ಎಥನಾಲ್ ಪರಿಸರಸ್ನೇಹಿ ಇಂಧನವಾಗಿದ್ದು, ಇದು ಪೆಟ್ರೋಲ್‌ಗಿಂತ ಅತ್ಯಂತ ಕಡಿಮೆ ಪ್ರಮಾಣದ ಇಂಗಾಲದ ಹೊರಸೂಸುವಿಕೆಯನ್ನು (Carbon emissions) ಹೊಂದಿರುತ್ತದೆ. ಇದರಿಂದ ಮಹಾನಗರಗಳಲ್ಲಿ ವಾಯು ಮಾಲಿನ್ಯ ಗಣನೀಯವಾಗಿ ಕಡಿಮೆಯಾಗುತ್ತದೆ.
  • ಆಮದು ವೆಚ್ಚದ ಉಳಿತಾಯ: ಪ್ರಸ್ತುತ ಭಾರತವು ತನ್ನ ತೈಲ ಅಗತ್ಯದ 87% ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತದೆ. ದೇಶೀಯವಾಗಿ ಎಥನಾಲ್ ಬಳಕೆ ಹೆಚ್ಚಾದಂತೆ ಕಚ್ಚಾ ತೈಲದ ಆಮದು ಕಡಿಮೆಯಾಗಿ, ದೇಶದ ಕೋಟ್ಯಂತರ ರೂಪಾಯಿ ವಿದೇಶಿ ವಿನಿಮಯ ಉಳಿತಾಯವಾಗುತ್ತದೆ.
  • ರೈತರಿಗೆ ಆರ್ಥಿಕ ಬಲ: ಎಥನಾಲ್ ಅನ್ನು ಕಬ್ಬಿನ ಕಾಕಂಬಿ (Molasses), ಜೋಳ, ನುಚ್ಚಕ್ಕಿ ಮತ್ತು ಕೃಷಿ ತ್ಯಾಜ್ಯಗಳಿಂದ ತಯಾರಿಸಲಾಗುತ್ತದೆ. ಹಾಗಾಗಿ ಈ ತಂತ್ರಜ್ಞಾನದಿಂದ ದೇಶದ ರೈತರ ಆದಾಯ ಹೆಚ್ಚಾಗಲಿದ್ದು, ಗ್ರಾಮೀಣ ಆರ್ಥಿಕತೆಗೆ ದೊಡ್ಡ ಬಲ ಸಿಗಲಿದೆ.

ಇದನ್ನೂ ಓದಿ: ಪ್ರಧಾನಿ ಮೋದಿಯೊಂದಿಗೆ ವೆನಿಜುವೆಲಾ ಅಧ್ಯಕ್ಷೆ ಮಾತುಕತೆ; ಪ್ರಸ್ತಾಪಿತ ಇಂಧನ ಒಪ್ಪಂದದಿಂದ ಭಾರತಕ್ಕೇನು ಲಾಭ?

ಇಂಧನ ಲಭ್ಯತೆಯ ಸವಾಲು

ಪ್ರಸ್ತುತ ಮಾರುಕಟ್ಟೆಯಲ್ಲಿ ತಂತ್ರಜ್ಞಾನ ಸಿದ್ಧವಾಗಿದ್ದರೂ, ದೇಶಾದ್ಯಂತ 100% ಎಥನಾಲ್ ಇಂಧನ ಸಿಗುವ ಪಂಪ್‌ಗಳ ಕೊರತೆಯಿದೆ. ಸದ್ಯಕ್ಕೆ ದೆಹಲಿ ಮತ್ತು ಮುಂಬೈ-ನಾಗ್ಪುರ ಕಾರಿಡಾರ್‌ಗಳಲ್ಲಿ ಕೇವಲ 50 ರಿಂದ 100 ಬಂಕುಗಳಲ್ಲಿ ಮಾತ್ರ ಇಂತಹ ಇಂಧನ ಲಭ್ಯವಿದೆ. ಆದರೆ, ಮುಂದಿನ ಎರಡು ವರ್ಷಗಳಲ್ಲಿ ದೇಶಾದ್ಯಂತ ಇಂತಹ ಸುಮಾರು 5,000 ಫುಯೆಲ್ ಸೆಂಟರ್​ಗಳನ್ನು ಸ್ಥಾಪಿಸಲು ಸರ್ಕಾರ ಯೋಜಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಗುರುಗ್ರಾಮದ ಮಹಾನಗರ ಪಾಲಿಕೆ ಕಚೇರಿಗೆ ಬಾಂಬ್ ಬೆದರಿಕೆ; ಮೇಯರ್ ಕಚೇರಿ ಖಾಲಿ, ಹೈ ಅಲರ್ಟ್ ಘೋಷಣೆ – Kannada News

ಗುರುಗ್ರಾಮ, ಜೂನ್ 4: ಹರಿಯಾಣದ ಗುರುಗ್ರಾಮದಲ್ಲಿರುವ ಮಹಾನಗರ ಪಾಲಿಕೆ ಪ್ರಧಾನ ಕಚೇರಿಗೆ ಇಂದು ಬಾಂಬ್ ಬೆದರಿಕೆ (Bomb Threat) ಬಂದಿದೆ. ಪಾಲಿಕೆಯ ಮುಖ್ಯ ಕಚೇರಿ ಹಾಗೂ ಮೇಯರ್ ಅವರ ಕಾರ್ಯಾಲಯಕ್ಕೆ ಬಾಂಬ್ ಇಟ್ಟಿರುವುದಾಗಿ ಬಂದ ಅನಾಮಧೇಯ ಕರೆಯಿಂದಾಗಿ ಇಡೀ ಕಟ್ಟಡದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಇಂದು ಮಧ್ಯಾಹ್ನ ಮಹಾನಗರ ಪಾಲಿಕೆಯ ನಿಯಂತ್ರಣ ಕೊಠಡಿಗೆ ಅಪರಿಚಿತ ವ್ಯಕ್ತಿಯೊಬ್ಬನಿಂದ ಫೋನ್ ಕರೆ ಬಂದಿದ್ದು, ಕಟ್ಟಡದ ಆವರಣದಲ್ಲಿ ಮತ್ತು ಮೇಯರ್ ಕಚೇರಿಯ ಸಮೀಪದಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಹಾಕಿದ್ದ.

ಬೆದರಿಕೆ ಕರೆ ಬರುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಮೇಯರ್, ಹಿರಿಯ ಅಧಿಕಾರಿಗಳು ಹಾಗೂ ನೂರಾರು ಸಿಬ್ಬಂದಿ ಸೇರಿದಂತೆ ಇಡೀ ಕಟ್ಟಡದಲ್ಲಿದ್ದವರನ್ನು ತಕ್ಷಣವೇ ಹೊರಗೆ ಕಳುಹಿಸಿ ಕಟ್ಟಡವನ್ನು ಖಾಲಿ ಮಾಡಿಸಲಾಗಿದೆ. ಈ ಮಾಹಿತಿ ತಿಳಿಯುತ್ತಿದ್ದಂತೆ ಗುರುಗ್ರಾಮ ಪೊಲೀಸರು, ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಹಾಗೂ ಶ್ವಾನ ದಳದೊಂದಿಗೆ ಸ್ಥಳಕ್ಕೆ ಧಾವಿಸಿದ್ದರು.

ಇದನ್ನೂ ಓದಿ: ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ

ಮೇಯರ್ ಕಚೇರಿ, ಕೌನ್ಸಿಲರ್ ಗಳ ಕೊಠಡಿಗಳು, ಬೇಸ್‌ಮೆಂಟ್ ಪಾರ್ಕಿಂಗ್ ಸೇರಿದಂತೆ ಇಡೀ 5 ಅಂತಸ್ತಿನ ಕಟ್ಟಡವನ್ನು ಸಂಪೂರ್ಣವಾಗಿ ವಶಕ್ಕೆ ಪಡೆದು ತೀವ್ರ ತಪಾಸಣೆ ನಡೆಸಲಾಗಿದೆ. ಮುನ್ನೆಚ್ಚರಿಕೆಯಾಗಿ ಕಚೇರಿಯ ಸುತ್ತಮುತ್ತಲಿನ ರಸ್ತೆಗಳನ್ನು ಬಂದ್ ಮಾಡಲಾಗಿದ್ದು, ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್‌ಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.

ಇದುವರೆಗಿನ ತಪಾಸಣೆಯಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದೊಂದು ಹುಸಿ ಬಾಂಬ್ ಕರೆ ಇರಬಹುದು ಎಂದು ಶಂಕಿಸಲಾಗಿದ್ದರೂ, ಸುರಕ್ಷತೆಯ ದೃಷ್ಟಿಯಿಂದ ಯಾವುದೇ ನಿರ್ಲಕ್ಷ್ಯ ವಹಿಸದೆ ಸಂಪೂರ್ಣ ತಪಾಸಣೆ ಮುಂದುವರಿಸಲಾಗಿದೆ. ಸದ್ಯ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಪೊಲೀಸರು ಮನವಿ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚಿತ್ರದುರ್ಗ: ಮಾಜಿ ಜಿಪಂ ಸದಸ್ಯನಿಂದಲೇ ಖಾದಿ ಸಹಕಾರ ಸಂಘದ ಕೋಟ್ಯಂತರ ಆಸ್ತಿ ಕಬಳಿಕೆ – Kannada News

ಖಾದಿ ಪರಸ್ಪರ ಸಹಕಾರ ಸಂಘImage Credit source: tv9 kannada

ಚಿತ್ರದುರ್ಗ, ಜೂನ್​ 04: ಅದು ಗ್ರಾಮೋದ್ಯೋಗ ಕನಸಿನನೊಂದಿಗೆ ಹುಟ್ಟಿದ ಖಾದಿ ಸಹಕಾರ ಸಂಘ. ಅನೇಕರ ಸೇವೆಯಿಂದ ಸಂಘದ ಹೆಸರಿನಲ್ಲಿರುವ ಕೋಟ್ಯಂತರ ರೂ ಮೌಲ್ಯದ ಆಸ್ತಿಯಿದೆ. ಆದರೆ ಇದೀಗ ಸುಮಾರು 4 ಕೋಟಿ ರೂ ಮೌಲ್ಯದ ಸಂಘದ ಆಸ್ತಿ (Property) ಭೂಗಳ್ಳರ ಪಾಲಾಗಿದೆ. ನಕಲಿ ದಾಖಲೆ ಸೃಷ್ಟಿಸಿ ಸಂಘದ ಆಸ್ತಿಯನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಲಪಟಾಯಿಸಿರುವ ಆರೋಪ ಕೇಳಿ ಬಂದಿದೆ.

ಮುಖ್ಯಾಂಶಗಳು

  • ಚಿತ್ರದುರ್ಗದಲ್ಲಿ ಜಿಲ್ಲಾ ಖಾದಿ ಪರಸ್ಪರ ಸಹಕಾರ ಸಂಘದಲ್ಲಿ ಗೋಲ್​ ಮಾಲ್​​
  • ಸಂಘದ ಹೆಸರಿನಲ್ಲಿರುವ ಕೋಟ್ಯಂತರ ರೂ ಮೌಲ್ಯದ ಆಸ್ತಿ ಕಬಳಿಕೆ
  • ಮಾಜಿ ಜಿಲ್ಲಾ ಪಂಚಾಯತಿ ಸದಸ್ಯನಿಂದಲೇ ಕಬಳಿಕೆ ಆರೋಪ

ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಕೆ

ಮಹಾತ್ಮ ಗಾಂಧೀಜಿ ಅವರ ಗ್ರಾಮ ಭಾರತದ ಕನಸಿನೊಂದಿಗೆ ಚಿತ್ರದುರ್ಗದಲ್ಲಿ ಜಿಲ್ಲಾ ಖಾದಿ ಪರಸ್ಪರ ಸಹಕಾರ ಸಂಘ ನಿರ್ಮಾಣವಾಗಿತ್ತು. ಚಿತ್ರದುರ್ಗ, ಭರಮಸಾಗರ ಸೇರಿದಂತೆ ವಿವಿಧೆಡೆ ಸಂಘದ ಬೆಲೆ ಬಾಳುವ ಆಸ್ತಿಯಿದೆ. ಆದರೆ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎಸ್​ಎಂಎಲ್​ ತಿಪ್ಪೇಸ್ವಾಮಿ ಎಂಬುವವರು ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿರುವ ಆಸ್ತಿ ಲಪಟಾಯಿಸಿದ್ದಾರೆ. ಸಂಘದ ಮಾಜಿ ಉದ್ಯೋಗಿ ಜಯಪ್ಪ ಎಂಬುವರನ್ನು ಬಳಸಿಕೊಂಡು 4 ಕೋಟಿ ರೂ ಮೌಲ್ಯದ ಆಸ್ತಿಯನ್ನು ಖಾಲಿ ಜಾಗ ಎಂದು ನಕಲಿ ದಾಖಲೆ ಸೃಷ್ಟಿಸಿ 40 ಲಕ್ಷ ರೂಪಾಯಿಗೆ ಖರೀದಿಸಿದ್ದಾಗಿ ದಾಖಲೆ ಸೃಷ್ಟಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹ ಕೇಳಿಬಂದಿದೆ.

ಸೂಕ್ತ ಕ್ರಮಕ್ಕೆ ಸಂಘದ ಸದಸ್ಯರು ಆಗ್ರಹ

ಇನ್ನು ಚಿತ್ರದುರ್ಗ ನಗರ, ಮಾಳಪ್ಪನಹಟ್ಟಿ, ಮಾನಂಗಿ, ಭರಮಸಾಗರ ಸೇರಿ ವಿವಿಧೆಡೆ ಸಂಘದ ಆಸ್ತಿ ಇದೆ. ಗ್ರಾಮದ ಜನರಿಗೆ ಉದ್ಯೋಗ ಕೊಡುವ ನಿಟ್ಟಿನಲ್ಲಿ ಎಲ್ಲಾ ಕಡೆ ಕಟ್ಟಡಗಳು ನಿರ್ಮಾಣ ಮಾಡಲಾಗಿದೆ. ಆದರೆ ಭರಮಸಾಗರದಲ್ಲಿ ಮಾತ್ರ ಗ್ರಾಮ ಪಂಚಾಯತಿ ಅಧಿಕಾರಿಗಳು, ಸಬ್ ರಿಜಿಸ್ಟ್ರಾರ್ ಸೇರಿದಂತೆ ಇತರೆ ಅಧಿಕಾರಿಗಳು ಶಾಮೀಲಾಗಿ ಸಹಕಾರ ಸಂಘದ ಆಸ್ತಿ ಕಬಳಿಸಿದ್ದಾರೆ. ಈಗಾಗಲೇ ಜಿಲ್ಲಾಡಳಿತ ಮತ್ತು ಸರ್ಕಾರಕ್ಕೆ ಈ ಬಗ್ಗೆ ದೂರು ಸಲ್ಲಿಸಿದ್ದೇವೆ. ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಸಹಕಾರ ಸಂಘದ ಆಸ್ತಿ ಉಳಿಸಬೇಕು ಎಂದು ಸಂಘದ ಸದಸ್ಯ ತಿಮ್ಮಣ್ಣ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕೋಟ್ಯಂತರ ರೂ ಮೌಲ್ಯದ ಬಿಡಿಎ ಸೈಟ್ ಕಬಳಿಕೆ ಪ್ರಕರಣ ಬೆಳಕಿಗೆ: ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು

ಒಟ್ಟಾರೆಯಾಗಿ ಕೋಟೆ ನಾಡು ಚಿತ್ರದುರ್ಗದಲ್ಲಿ ಗಾಂಧೀಜಿ ಗ್ರಾಮ ಭಾರತ ಕನಸಿನೊಂದಿಗೆ ಹುಟ್ಟಿದ ಖಾದಿ ಸಹಕಾರ ಸಂಘದ ಆಸ್ತಿಯನ್ನ ನಕಲಿ ದಾಖಲೆ ಸೃಷ್ಟಿಸಿ ಕಬಳಿಕೆ ಮಾಡಿದ ಆರೋಪ ಕೇಳಿ ಬಂದಿದೆ. ಅದರಲ್ಲೂ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಎಸ್​ಎಂಎಲ್​ ತಿಪ್ಪೇಸ್ವಾಮಿ ಮತ್ತು ಅಧಿಕಾರಿಗಳ ವಿರುದ್ಧ ಆರೋಪ ಕೇಳಿ ಬಂದಿದೆ. ಹೀಗಾಗಿ, ಈ ಬಗ್ಗೆ ಜಿಲ್ಲಾಡಳಿತ ಮತ್ತು ಸರ್ಕಾರ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ನಾನು 3ನೇ ಮದುವೆ ಆಗುತ್ತಿರುವುದು ನಿಜ’; ನೇರವಾಗಿ ಒಪ್ಪಿಕೊಂಡ ಆಮಿರ್ ಖಾನ್ – Kannada News

ಬಾಲಿವುಡ್‌ನ ಖ್ಯಾತ ನಟ ಆಮಿರ್ ಖಾನ್ (Aamir Khan) ಅವರು ತಮ್ಮ ವೈಯಕ್ತಿಕ ಜೀವನದಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಲು ಸಜ್ಜಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ತಮ್ಮ ಜೊತೆಗಿರುವ ಪ್ರೇಯಸಿ ಗೌರಿ ಸ್ಪ್ರ್ಯಾಟ್ (Gauri Spratt) ಅವರನ್ನು ಜುಲೈ 5ರಂದು ವಿವಾಹವಾಗುತ್ತಿರುವುದಾಗಿ ನಟ ಆಮೀರ್ ಖಾನ್ ಅಧಿಕೃತವಾಗಿ ಖಚಿತಪಡಿಸಿದ್ದಾರೆ. ಪ್ರಸ್ತುತ ಅಮೆರಿಕ ಪ್ರವಾಸದಲ್ಲಿರುವ ಅವರು, ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸುತ್ತಾ, ‘ಮದುವೆ ಸುದ್ದಿ ನಿಜ. ಜುಲೈ 5ರಂದು ವಿವಾಹ ನಡೆಯಲಿದೆ. ನಾನೀಗ ಅಮೆರಿಕದಲ್ಲಿ ಪ್ರಯಾಣ ಮಾಡುತ್ತಿದ್ದೇನೆ’ ಎಂದು ಹೇಳಿದ್ದಾರೆ.

ಇತರೆ ಸೆಲೆಬ್ರಿಟಿಗಳಂತೆ ಅದ್ಧೂರಿ ಮದುವೆಯ ಬದಲಾಗಿ, ಈ ಜೋಡಿಯು ಅತ್ಯಂತ ಸರಳ ಮತ್ತು ಆಪ್ತರ ಸಮ್ಮುಖದಲ್ಲಿ ರಿಜಿಸ್ಟರ್ ಮ್ಯಾರೇಜ್ ಮಾಡಿಕೊಳ್ಳಲು ನಿರ್ಧರಿಸಿದೆ. ಇವರ ಮನೆಯಲ್ಲೇ ನಡೆಯಲಿರುವ ಈ ಮದುವೆ ಸಮಾರಂಭದಲ್ಲಿ ಕೇವಲ ಕುಟುಂಬದ ಸದಸ್ಯರು ಮತ್ತು ಆಪ್ತ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ ಎಂದು ವರದಿ ಆಗಿದೆ.

ಮೂಲತಃ ಬೆಂಗಳೂರಿನವರಾದ ಗೌರಿ ಸ್ಪ್ರ್ಯಾಟ್ ಅವರು ಫ್ಯಾಷನ್, ಬ್ಯೂಟಿ ಮತ್ತು ವೆಲ್ನೆಸ್ ಉದ್ಯಮದಲ್ಲಿ ಗುರುತಿಸಿಕೊಂಡಿದ್ದಾರೆ. ಸದ್ಯ ಮುಂಬೈನಲ್ಲಿ ನೆಲೆಸಿರುವ ಇವರಿಗೆ ಒಬ್ಬ ಚಿಕ್ಕ ಮಗನಿದ್ದಾನೆ. ಇವರಿಬ್ಬರ ಪರಿಚಯ ಇಂದಿನದಲ್ಲ, ಬರೋಬ್ಬರಿ 25 ವರ್ಷಗಳ ಹಿಂದೆಯೇ ಇವರು ಮೊದಲ ಬಾರಿಗೆ ಭೇಟಿಯಾಗಿದ್ದರು. ಆ ಬಳಿಕ ಸಂಪರ್ಕ ಕಳೆದುಕೊಂಡಿದ್ದ ಈ ಜೋಡಿ, ಕೆಲವು ವರ್ಷಗಳ ಹಿಂದೆ ಮತ್ತೆ ಒಂದಾಗಿ, ಸ್ನೇಹ ಪ್ರೀತಿಯಾಗಿ ಬದಲಾಗಿದೆ.

ಆಮಿರ್ ಖಾನ್ ಅವರಿಗೆ ಇದು ಮೂರನೇ ವಿವಾಹ. 1986ರಲ್ಲಿ ಮೊದಲು ರೀನಾ ದತ್ತಾ ಜೊತೆ ಅವರಿಗೆ ಮದುವೆ ಆಗಿತ್ತು. ಈ ದಂಪತಿಗೆ ಜುನೈದ್ ಖಾನ್ ಮತ್ತು ಇರಾ ಖಾನ್ ಎಂಬ ಇಬ್ಬರು ಮಕ್ಕಳು ಜನಿಸಿದರು. 2005ರಲ್ಲಿ ಚಿತ್ರನಿರ್ಮಾಪಕಿ ಕಿರಣ್ ರಾವ್ ಜೊತೆ ಆಮಿರ್ ಖಾನ್ ಅವರಿಗೆ ಎರಡನೇ ವಿವಾಹ ಆಯಿತು. ಇವರಿಗೆ ಆಜಾದ್ ರಾವ್ ಖಾನ್ ಎಂಬ ಮಗನಿದ್ದಾನೆ.

ಇದನ್ನೂ ಓದಿ: ನೆಪೋಟಿಸಂ ಇರೋದು ನಿಜ, ಅದರಿಂದಲೇ ನನಗೆ ಕೆಲಸ ಸಿಗುತ್ತಿದೆ: ಆಮಿರ್ ಖಾನ್ ಮಗನ ನೇರ ಮಾತು

ಹಳೆಯ ಎರಡೂ ಮದುವೆ ಮುರಿದುಬಿದ್ದಿದ್ದರೂ, ಆಮಿರ್ ಖಾನ್ ಅವರು ತಮ್ಮ ಮಾಜಿ ಪತ್ನಿಯರಾದ ರೀನಾ ದತ್ತಾ ಮತ್ತು ಕಿರಣ್ ರಾವ್ ಅವರೊಂದಿಗೆ ಇಂದಿಗೂ ಉತ್ತಮ ಸ್ನೇಹ ಹಾಗೂ ಗೌರವಯುತ ಬಾಂಧವ್ಯವನ್ನು ಕಾಯ್ದುಕೊಂಡಿದ್ದಾರೆ. ಸದ್ಯ ಗೌರಿ ಸ್ಪ್ರ್ಯಾಟ್ ಆಗಮನದಿಂದ ತಮ್ಮ ಜೀವನದಲ್ಲಿ ನೆಮ್ಮದಿ ಹಾಗೂ ಪರಿಪೂರ್ಣತೆ ಸಿಕ್ಕಿದೆ ಎಂದು ಆಮಿರ್ ಖಾನ್ ಹೇಳಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link