ಬೆಂಗಳೂರು ಸೇರಿ ರಾಜ್ಯದಲ್ಲಿ ಮೂರು ಭೀಕರ ರಸ್ತೆ ಅಪಘಾತ: ಆರು ಬಂದಿ ಸಾವು
ಬೆಂಗಳೂರು, ಮಾರ್ಚ್ 29: ರಾಜ್ಯದಲ್ಲಿ ನಡೆದ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ (Road Accidents) ಒಟ್ಟು ಆರು ಮಂದಿ ದುರ್ಮರಣಕ್ಕೀಡಾಗಿರುವ ಘಟನೆ ಬೆಳಕಿಗೆ ಬಂದಿದೆ. ರಾಯಚೂರಿನಲ್ಲಿ ಟ್ಯಾಕ್ಟರ್ ಅಪಘಾತದಲ್ಲಿ ಇಬ್ಬರು, ಚಿಕ್ಕಬಳ್ಳಾಪುರದಲ್ಲಿ ಕ್ಯಾಂಟರ್ ಡಿಕ್ಕಿ ಹೊಡೆದು ಇಬ್ಬರು ಹಾಗೂ ಬೆಂಗಳೂರಿನಲ್ಲಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಇಬ್ಬರು ಸೇರಿ ಒಟ್ಟೂ ಆರು ಜನ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಅವಘಡ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ನಾಲ್ಕು ಮೈಲ್ ಕ್ಯಾಂಪ್ ಸಮೀಪ ಅಪಘಾತ ನಡೆದಿದೆ. ಜಮೀನಿಗೆ ತಿಪ್ಪೆಗೊಬ್ಬರ…