All posts by nagaraj11081993

ಕೊಹ್ಲಿಯ ಕಿಸ್​​ಗೆ ನಾಚಿ ನೀರಾದ ಅನುಷ್ಕಾ ಶರ್ಮಾ

ಕೊಹ್ಲಿಯ ಕಿಸ್​​ಗೆ ನಾಚಿ ನೀರಾದ ಅನುಷ್ಕಾ ಶರ್ಮಾ

ಐಪಿಎಲ್ 2026ರ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 201 ರನ್​ ಕಲೆಹಾಕಿದರೆ, ಈ ಗುರಿಯನ್ನು ಆರ್​ಸಿಬಿ ಕೇವಲ 15.4 ಓವರ್​ಗಳಲ್ಲಿ ಚೇಸ್ ಮಾಡಿದೆ.

ಈ ಚೇಸಿಂಗ್​ನಲ್ಲಿ ವಿರಾಟ್ ಕೊಹ್ಲಿಯ ಕೊಡುಗೆ ಅಜೇಯ 69 ರನ್​ಗಳು. ಅದು ಸಹ ಕೇವಲ 38 ಎಸೆತಗಳಲ್ಲಿ. ಈ ಭರ್ಜರಿ ಬ್ಯಾಟಿಂಗ್ ಮೂಲಕ ಆರ್​ಸಿಬಿ ತಂಡವನ್ನು ಗೆಲುವಿನ ದಡ ಸೇರಿಸಿದ ಬಳಿಕ ವಿರಾಟ್ ಕೊಹ್ಲಿ ಮೈದಾನದಿಂದಲೇ ತಮ್ಮ ಪತ್ನಿ ಅನುಷ್ಕಾ ಶರ್ಮಾಗೆ ಫ್ಲೈಯಿಂಗ್ ಕಿಸ್ (flying kiss) ನೀಡಿ ಗಮನ ಸೆಳೆದರು.

ಅತ್ತ ಅನುಷ್ಕಾ ಶರ್ಮಾ ಕೂಡ ಫ್ಲೈಯಿಂಗ್ ಕಿಸ್​ ನೀಡುತ್ತಿದ್ದಂತೆ ಇತ್ತ ಕಡೆಯಿಂದ ವಿರಾಟ್ ಕೊಹ್ಲಿ ತಮ್ಮ ‘ತುಂಟಾಟ’ ಪ್ರದರ್ಶಿಸಿದರು. ಇದನ್ನು ನೋಡಿ ನಾಚಿಕೆಯೊಂದಿಗೆ ಅನುಷ್ಕಾ ಶರ್ಮಾ ನಗುತ್ತಿರುವ ವಿಡಿಯೋ ವೈರಲ್ ಆಗಿದೆ.

 

Source link

ಸಾಲವಾಗಿ ಕೊಟ್ಟಿರುವ ಹಣ, ಒಡವೆ ವಾಪಸ್ ಕೇಳಿದ್ದಕ್ಕೆ ಮನೆ ಮಾಲೀಕರನ್ನೇ ಕೊಂದ ಕೆಲಸದಾಕೆ

ಗುಜರಾತ್, ಮಾರ್ಚ್​ 29: ಸಾಲವಾಗಿ ಕೊಟ್ಟಿರುವ ಒಡವೆ ಹಾಗೂ ಹಣವನ್ನು ವಾಪಸ್ ಕೇಳಿದ್ದಕ್ಕೆ, ಕೆಲಸದಾಕೆ ಮನೆ ಮಾಲೀಕರನ್ನೇ ಕೊಲೆ(Murder)  ಮಾಡಿರುವ ಘಟನೆ ಗುಜರಾತ್​ನ ಪಾಲನ್​ಪುರದಲ್ಲಿ ನಡೆದಿದೆ. ಶಾಂತಿ ಬೆನ್ ಅಕೇಡಿವಾಲಾ ಮಾರ್ಚ್ 22 ರಿಂದ ಕಾಣೆಯಾಗಿದ್ದರು, ಆದರೆ ಆಕೆಯ ಶವವನ್ನು ಸ್ಥಳೀಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪ್ರಮುಖ ಆರೋಪಿ ರೇಖಾ ರಾಥೋಡ್​ಗೆ ಶಾಂತಿ ಬೆನ್ ಕುಟುಂಬವು ಕಳೆದ 15 ವರ್ಷಗಳಿಂದ ಪರಿಚಯವಿತ್ತು. ರೇಖಾ ಮೊದಲು ಮನೆ ಸಹಾಯಕಿಯಾಗಿ ಕೆಲಸ ಮಾಡಲು ಪ್ರಾರಂಭಿಸಿದ್ದರು, ಮತ್ತು ನಂತರ ಅವರು ಸ್ನೇಹಿತರಾದರು, ನಂತರ ಅವರು ತಮ್ಮ ಪೀಠೋಪಕರಣ ವ್ಯವಹಾರವನ್ನು ಪ್ರಾರಂಭಿಸಿದರು.

ಪೊಲೀಸ್ ವರದಿಗಳ ಪ್ರಕಾರ, ಶಾಂತಿ ಬೆನ್ ಸುಮಾರು ಒಂದು ವರ್ಷದ ಹಿಂದೆ ರೇಖಾ ಅವರ ವ್ಯವಹಾರಕ್ಕೆ ಸಹಾಯ ಮಾಡಲು ಅಪಾರ ಪ್ರಮಾಣದ ಚಿನ್ನಾಭರಣ ಮತ್ತು ಹಣವನ್ನು ಸಾಲವಾಗಿ ನೀಡಿದ್ದರು. ಶಾಂತಿ ಬೆನ್ ತನ್ನ ವಸ್ತುಗಳನ್ನು ಹಿಂದಿರುಗಿಸುವಂತೆ ಒತ್ತಾಯಿಸಿದಾಗ ರೇಖಾ ಅವರ ಕೊಲೆಗೆ ಸಂಚು ರೂಪಿಸಿದ್ದಳು ಎಂಬುದು ತಿಳಿದುಬಂದಿದೆ.

ಮಾರ್ಚ್ 22 ರ ರಾತ್ರಿ, ಶಾಂತಿ ಬೆನ್ ಅವರನ್ನು ಭೇಟಿಯ ನೆಪದಲ್ಲಿ ರೇಖಾ ಅವರ ಪೀಠೋಪಕರಣ ಅಂಗಡಿಗೆ ಕರೆದುಕೊಂಡು ಬರಲಾಗಿತ್ತು. ರೇಖಾ ಮತ್ತು ಆಕೆಯ ನಾಲ್ವರು ಸಹಾಯಕರು ಆಕೆಯನ್ನು ಕ್ರೂರವಾಗಿ ಕೊಲೆ ಮಾಡುವ ಮೊದಲು ಮಾದಕ ದ್ರವ್ಯ ಸೇವಿಸಿದ್ದರು ಎಂದು ಆರೋಪಿಸಲಾಗಿದೆ.

ಮತ್ತಷ್ಟು ಓದಿ: ಚಿಕ್ಕಬಳ್ಳಾಪುರ: ಗಂಡನ ಕೈ-ಕಾಲು ಮುರಿದು ವಿಕೃತವಾಗಿ ಕೊಲೆ; ನೌಟಂಕಿ ಪತ್ನಿ ಅರೆಸ್ಟ್​

ಅಪರಾಧದ ಸಾಕ್ಷ್ಯವನ್ನು ಅಳಿಸಲು, ಆರೋಪಿಗಳು ಶಾಂತಿ ಬೆನ್ ಅವರ ದೇಹವನ್ನು ಒಂದು ಚೀಲದಲ್ಲಿ ತುಂಬಿದ್ದರು, ನಂತರ ಅವಶೇಷಗಳನ್ನು ಸಾಗಿಸಿ ಪಾಲನ್‌ಪುರದಲ್ಲಿರುವ ಶೋ ರೂಂನ ನೆಲಮಾಳಿಗೆಯಲ್ಲಿ ಎಸೆಯಲಾಯಿತು. ಆಕೆಯ ಕುಟುಂಬವು ಕಾಣೆಯಾಗಿದೆ ಎಂದು ದೂರು ನೀಡಿದ ನಂತರ ಪೊಲೀಸರು ಹುಡುಕಾಟ ಆರಂಭಿಸಿದರು. ಶಾಂತಿ ಬೆನ್ ಅವರ ಮಗಳು ನ್ಯಾನ್ಸಿ ಮತ್ತು ಸಹೋದರಿ ಕೈಲಾಶ್ ಬೆನ್ ಸೇರಿದಂತೆ ಅವರ ಕುಟುಂಬ ಸದಸ್ಯರು ಪೊಲೀಸ್ ಠಾಣೆಯಲ್ಲಿ ಸಾಧ್ಯವಾದಷ್ಟು ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಆರಂಭದಲ್ಲಿ ಅವರು ಆಕೆಯ ದೇಹವನ್ನು ಪಡೆಯಲು ನಿರಾಕರಿಸಿದರು, ದ್ರೋಹಕ್ಕೆ ಉತ್ತರವಾಗಿ ಆರೋಪಿಯನ್ನು ಸಾರ್ವಜನಿಕವಾಗಿ ಮೆರವಣಿಗೆ ಮಾಡಬೇಕೆಂದು ಒತ್ತಾಯಿಸಿದರು. ರೇಖಾ ರಾಥೋಡ್ ಮತ್ತು ಅವರ ಒಬ್ಬ ಸಹಾಯಕ ಪ್ರಸ್ತುತ ಪೊಲೀಸ್ ವಶದಲ್ಲಿದ್ದಾರೆ. ಈ ಪಿತೂರಿಯಲ್ಲಿ ಭಾಗಿಯಾಗಿರುವ ಇತರ ಮೂವರು ವ್ಯಕ್ತಿಗಳನ್ನು ಪತ್ತೆಹಚ್ಚಲು ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದಾರೆ.
ಕೊಲೆ, ಕ್ರಿಮಿನಲ್ ಪಿತೂರಿ ಮತ್ತು ಸಾಕ್ಷ್ಯ ನಾಶದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಇರಾನ್-ಇಸ್ರೇಲ್- ಅಮೆರಿಕ ನಡುವಿನ ಯುದ್ಧವು ಜಾಗತಿಕ ಬಿಕ್ಕಟ್ಟನ್ನು ಸೃಷ್ಟಿಸುತ್ತಿವೆ: ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್​ 29: ಪ್ರಸ್ತುತ ಇರಾನ್-ಇಸ್ರೇಲ್-ಅಮೆರಿಕ ನಡುವಿನ ಯುದ್ಧವು ಜಾಗತಿಕ ಬಿಕ್ಕಟ್ಟು ಸೃಷ್ಟಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಇಂದು ಮನ್​ ಕಿ ಬಾತ್​ನ 132ನೇ ಸಂಚಿಕೆಯಲ್ಲಿ ಮಾತನಾಡಿದ ಅವರು, ಯುದ್ಧವನ್ನು ಎದುರಿಸುತ್ತಿರುವ ಈ ದೇಶ ನಮ್ಮ ಇಂಧನ ಅಗತ್ಯಗಳಿಗೆ ಪ್ರಮುಖ ಕೇಂದ್ರವಾಗಿದೆ ಎಂದು ಪ್ರಧಾನಿ ಹೇಳಿದರು. ಇದು ಪೆಟ್ರೋಲ್ ಮತ್ತು ಡೀಸೆಲ್‌ಗೆ ಸಂಬಂಧಿಸಿದಂತೆ ಜಾಗತಿಕ ಬಿಕ್ಕಟ್ಟನ್ನು ಸೃಷ್ಟಿಸುತ್ತಿದೆ.

ನಮ್ಮ ಜಾಗತಿಕ ಸಂಬಂಧಗಳು, ವಿವಿಧ ದೇಶಗಳಿಂದ ನಾವು ಪಡೆಯುವ ಸಹಕಾರ ಮತ್ತು ಕಳೆದ ದಶಕದಲ್ಲಿ ನಮ್ಮ ರಾಷ್ಟ್ರವು ನಿರ್ಮಿಸಿರುವ ಸಾಮರ್ಥ್ಯಗಳು ಭಾರತವು ಈ ಸವಾಲುಗಳನ್ನು ಧೈರ್ಯದಿಂದ ಎದುರಿಸಲು ಅನುವು ಮಾಡಿಕೊಟ್ಟಿವೆ ಎಂದರು.

ಇದು ಖಂಡಿತವಾಗಿಯೂ ಸವಾಲಿನ ಸಮಯಗಳು ಎಂದು ಅವರು ಹೇಳಿದರು. ಇಂದು, “ಮನ್ ಕಿ ಬಾತ್” ಮೂಲಕ, ಅವರು ಮತ್ತೊಮ್ಮೆ ಎಲ್ಲಾ ನಾಗರಿಕರನ್ನು ಒಗ್ಗೂಡಿ ಈ ಸವಾಲನ್ನು ಜಯಿಸುವಂತೆ ಒತ್ತಾಯಿಸುತ್ತಾರೆ. ಈ ವಿಷಯವನ್ನು ರಾಜಕೀಯಗೊಳಿಸಬಾರದು. ಇದು 140 ಕೋಟಿ ನಾಗರಿಕರ ಹಿತಾಸಕ್ತಿಗಳಿಗೆ ಸಂಬಂಧಿಸಿದ ವಿಷಯವಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಇರಾನ್ ಯುದ್ಧದ ನಡುವೆ ಸೌದಿ ಕ್ರೌನ್ ಪ್ರಿನ್ಸ್ ಜೊತೆ ಪ್ರಧಾನಿ ಮೋದಿ ಮಾತುಕತೆ

ದೇಶದ ಜನತೆಗೆ ಜಾಗರೂಕರಾಗಿರಿ ಮತ್ತು ವದಂತಿಗಳನ್ನು ಎಂದು ಮನವಿ ಮಾಡುತ್ತೇನೆ, ಸರ್ಕಾರವು ನಿಮಗೆ ನಿರಂತರವಾಗಿ ಒದಗಿಸುತ್ತಿರುವ ಮಾಹಿತಿಯನ್ನು ಮಾತ್ರ ನಂಬಿ ಮತ್ತು ಅದರ ಆಧಾರದ ಮೇಲೆ ಮುನ್ನುಗ್ಗಿ. ಪ್ರತಿ ಬಾರಿಯೂ ನಾವು 1.4 ಬಿಲಿಯನ್ ನಾಗರಿಕರ ಬಲದಿಂದ ಹಿಂದಿನ ಬಿಕ್ಕಟ್ಟುಗಳನ್ನು ಸೋಲಿಸಿದಂತೆ, ಈ ಬಾರಿಯೂ ನಾವೆಲ್ಲರೂ ಈ ಕಠಿಣ ಪರಿಸ್ಥಿತಿಯಿಂದ ಹೊರಬರುತ್ತೇವೆ ಎಂದು ನನಗೆ ವಿಶ್ವಾಸವಿದೆ ಎಂದರು.

ಈ ದೇಶಗಳಲ್ಲಿ ಭಾರತದ ಲಕ್ಷಾಂತರ ಕುಟುಂಬಗಳ ಸಂಬಂಧಿಕರು ವಾಸಿಸುತ್ತಿದ್ದಾರೆ, ವಿಶೇಷವಾಗಿ ಗಲ್ಫ್ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅಲ್ಲಿನ 1 ಕೋಟಿಗೂ ಹೆಚ್ಚು ಭಾರತೀಯರಿಗೆ ಎಲ್ಲಾ ರೀತಿಯ ಸಹಾಯವನ್ನು ಒದಗಿಸಿದ್ದಕ್ಕಾಗಿ ನಾನು ಗಲ್ಫ್ ರಾಷ್ಟ್ರಗಳಿಗೆ ತುಂಬಾ ಕೃತಜ್ಞನಾಗಿದ್ದೇನೆ.

ಯುದ್ಧ ನಡೆಯುತ್ತಿರುವ ಪ್ರದೇಶವು ನಮ್ಮ ಇಂಧನ ಅಗತ್ಯಗಳ ಪ್ರಮುಖ ಕೇಂದ್ರವಾಗಿದೆ. ಇದರಿಂದಾಗಿ, ವಿಶ್ವಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬಿಕ್ಕಟ್ಟು ಬೆಳೆಯುತ್ತಿದೆ ಎಂದು ಹೇಳಿದರು. ಇಡೀ ಜಗತ್ತು ಕೋವಿಡ್ ನಿಂದಾಗಿ ದೀರ್ಘಕಾಲದವರೆಗೆ ಹಲವಾರು ಸಮಸ್ಯೆಗಳನ್ನು ಎದುರಿಸಿದೆ ಎಂದು ನಮಗೆಲ್ಲರಿಗೂ ನೆನಪಿದೆ.

ಕೋವಿಡ್ ಬಿಕ್ಕಟ್ಟಿನಿಂದ ಹೊರಬಂದ ನಂತರ, ಜಗತ್ತು ಹೊಸ ಆರಂಭದೊಂದಿಗೆ ಪ್ರಗತಿಯ ಹಾದಿಯಲ್ಲಿ ಮುಂದುವರೆಯುತ್ತದೆ ಎಂದು ನಾವೆಲ್ಲರೂ ನಿರೀಕ್ಷಿಸಿದ್ದೆವು, ಆದರೆ ಪ್ರಪಂಚದ ವಿವಿಧ ಪ್ರದೇಶಗಳಲ್ಲಿ ಯುದ್ಧ ಉದ್ವಿಗ್ನತೆಯನ್ನು ಹೆಚ್ಚಿಸುತ್ತಲೇ ಇದೆ ಎಂದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ಧುರಂಧರ್ 2’ ಎದುರು ತೆರೆಕಂಡರೂ ಸೂಪರ್ ಹಿಟ್ ಆದ ‘ಲವ್ ಮಾಕ್ಟೇಲ್ 3’

‘ಧುರಂಧರ್ 2’ ಸಿನಿಮಾದ ಹವಾ ಹೇಗಿದೆ ಎಂಬುದು ಗೊತ್ತೇ ಇದೆ. ಅಂತಹ ದೈತ್ಯ ಸಿನಿಮಾದ ಎದುರು ಚಿಕ್ಕ ಸಿನಿಮಾಗಳು ಪೈಪೋಟಿ ನೀಡುವುದು ಕಷ್ಟ. ಆದರೆ ಕನ್ನಡದ ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾ ಪೈಪೋಟಿ ನೀಡಿದೆ. ಕನ್ನಡದ ಪ್ರೇಕ್ಷಕರನ್ನು ಗಮನದಲ್ಲಿ ಇಟ್ಟುಕೊಂಡು ಬಿಡುಗಡೆ ಆದ ಈ ಸಿನಿಮಾ ಸೂಪರ್ ಹಿಟ್ ಆಗಿದೆ. ಆ ಖುಷಿಯನ್ನು ಹಂಚಿಕೊಳ್ಳಲು ಚಿತ್ರತಂಡದವರು ಇತ್ತೀಚೆಗೆ ಸಕ್ಸಸ್ ಮೀಟ್ ಆಯೋಜಿಸಿದ್ದರು. ನಿರ್ದೇಶಕ-ನಟ ಡಾರ್ಲಿಂಗ್ ಕೃಷ್ಣ (Darling Krishna), ಮಿಲನಾ ನಾಗರಾಜ್ ಸೇರಿದಂತೆ ಇಡೀ ಚಿತ್ರತಂಡದವರು ಇದರಲ್ಲಿ ಭಾಗಿಯಾಗಿದ್ದರು.

ಈ ಸಂದರ್ಭದಲ್ಲಿ ಮಿಲನಾ ನಾಗರಾಜ್ ಮಾತನಾಡಿದರು. ‘ಪಾರ್ಟ್ 1 ಹಾಗೂ 2 ಗೆದ್ದಾಗ ಖುಷಿಯಾಗಿತ್ತು. ಆದರೆ ಮೂರನೇ ಆವೃತ್ತಿಯ ಗೆಲುವು ನನ್ನನ್ನು ಭಾವುಕಳನ್ನಾಗಿಸಿದೆ. ಇದಕ್ಕೆ ಪ್ರೇಕ್ಷಕರ ಕಡೆಯಿಂದ ಬರುತ್ತಿರುವ ಪ್ರತಿಕ್ರಿಯೆಗಳಿಂದ ಮನದುಂಬಿ ಬಂದಿದೆ’ ಎಂದು ಅವರು ಹೇಳಿದರು. ಡಾರ್ಲಿಂಗ್ ಕೃಷ್ಣ ಮಾತನಾಡಿ, ಕ್ರಿಸ್‌ಮೀ ಬ್ಯಾನರಿನಡಿಯಲ್ಲಿ ವರ್ಷಕ್ಕೊಂದು ಸಿನಿಮಾ ಮಾಡುವ ಯೋಜನೆಯಿದೆ ಎಂದು ಹೇಳಿದರು.

‘ನಾವು ತುಂಬಾ ಲೆಕ್ಕಾಚಾರವಿಟ್ಟುಕೊಂಡೇ ಮುಂದುವರಿಯುತ್ತೇವೆ. ಯಾವುದೇ ಮುಲಾಜಿಗೆ ಬಿದ್ದು ಯಾರನ್ನೂ ಆಯ್ಕೆ ಮಾಡಿಕೊಳ್ಳುವುದಿಲ್ಲ. ನಮ್ಮ ತಂಡದಲ್ಲಿ ಇರುವವರೆಲ್ಲರೂ ಪಕ್ಕಾ ಪ್ರತಿಭಾವಂತರು ಆಗಿರುವುದರಿಂದಲೇ ಅವಕಾಶ ಪಡೆದುಕೊಂಡಿದ್ದಾರೆ. ಅವರ ಪ್ರತಿಭೆಯನ್ನು ನಾವು ಬಳಸಿಕೊಂಡಿದ್ದೇವೆ. ಆದ್ದರಿಂದ ಸಿನಿಮಾ ತಂಡದವರ್‍ಯಾರೂ ನಮಗೆ ಥ್ಯಾಂಕ್ಸ್ ಹೇಳುವ ಹಾಗಿಲ್ಲ’ ಎಂದು ಡಾರ್ಲಿಂಗ್ ಕೃಷ್ಣ ಹೇಳಿದರು.

‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯು ಈ ಸಿನಿಮಾವನ್ನು ವಿತರಣೆ ಮಾಡಿದೆ. ಆ ಬಗ್ಗೆ ಮಾತನಾಡಿದ ಸುಪ್ರೀತ್ ಅವರು, ‘ಇದು ಈ ವರ್ಷದ ಮೊದಲ ಹಿಟ್ ಸಿನಿಮಾ. ಬಿಡುಗಡೆಗೂ ಒಂದಷ್ಟು ದಿನಗಳ ಮುಂಚೆ ಡಾರ್ಲಿಂಗ್ ಕೃಷ್ಣ ಸಿನಿಮಾ ತೋರಿಸಿದ್ದರು. ಅದಾದ ಬಳಿಕ ಟಾಕ್ಸಿಕ್‌ನಿಂದ ತೆರವಾದ ಜಾಗಕ್ಕೆ ಲವ್ ಮಾಕ್ಟೇಲ್ ಆಗಮಿಸಿತ್ತು. ಪ್ರೇಕ್ಷಕರೆಲ್ಲ ಅತ್ಯುತ್ತಮ ಪ್ರತಿಕ್ರಿಯೆ ನೀಡುವ ಮೂಲಕ ಲವ್ ಮಾಕ್ಟೇಲ್ 3 ಗೆದ್ದಿದೆ. ಯುಎಸ್‌ಎ, ಆಸ್ಟ್ರೇಲಿಯಾ, ಜರ್ಮನಿ ಮುಂತಾದ ಕಡೆಗಳಲ್ಲಿಯೂ ಭರ್ಜರಿಯಾಗಿಯೇ ಬುಕ್ಕಿಂಗ್ ಓಪನ್ ಆಗಿದೆ’ ಎಂದರು.

ಇದನ್ನೂ ಓದಿ: Love Mocktail 3 Review: ನಗಿಸುತ್ತಾ ಅಳಿಸುವ ತಂದೆ-ಮಗಳ ಎಮೋಷನಲ್ ಕಹಾನಿ

ನಿರ್ದೇಶಕ ಶಶಾಂಕ್ ಅವರು ಈ ಕಾರ್ಯಕ್ರಮಕ್ಕೆ ಅಥಿತಿಯಾಗಿ ಆಗಮಿಸಿದ್ದರು. ‘ಈ ಕಾಲಮಾನದಲ್ಲಿ ಯಾವುದೇ ಸಿನಿಮಾದ ಸಕ್ಸಸ್ ಮೀಟ್ ಎಂಬ ವಿಚಾರವೇ ಹಿತವೆನಿಸುತ್ತದೆ. ಈ ವರ್ಷದ ಆರಂಭದಿಂದ ಒಂದು ರೀತಿಯ ನಿರಾಶದಾಯಕ ವಾತಾವರಣ ಕನ್ನಡ ಚಿತ್ರರಂಗವನ್ನು ಆವರಿಸಿಕೊಂಡಿತ್ತು. ಇಂಥ ಹೊತ್ತಿನಲ್ಲಿ ಲವ್ ಮಾಕ್ಟೇಲ್ ಗೆದ್ದಿರುವುದರಿಂದ ಚಿತ್ರರಂಗಕ್ಕೆ ಹೊಸ ಚೈತನ್ಯ ಬಂದಂತಾಗಿದೆ’ ಎಂದು ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹಗಲೊಂದೇ ಅಲ್ಲ, ರಾತ್ರಿ ವೇಳೆಯ ಉಷ್ಣತೆಯೂ ಹೆಚ್ಚಳ: ಆರೋಗ್ಯದ ಮೇಲೆ ಗಂಭೀರ ಪರಿಣಾಮದ ಭೀತಿ

ಬೆಂಗಳೂರು, ಮಾರ್ಚ್​​ 29: ರಾಜ್ಯದ ಕೆಲ ಜಿಲ್ಲೆಗಳಲ್ಲಿ ವರುಣನ ಅಬ್ಬರದ ನಡುವೆಯೂ ಬಹುತೇಕ ಕಡೆ ತೀವ್ರ ಸೆಕೆಯ ವಾತಾವರಣ ಮುಂದುವರಿದಿದೆ. ವಿಪರೀತ ಉಷ್ಣತೆಯ ಪರಿಣಾಮ ಜನ ನಾನಾ ಸಮಸ್ಯೆಗಳಿಗೆ ಸಿಲುಕಿದ್ದಾರೆ. ಈ ನಡುವೆ ವರದಿಯೊಂದು ಆಘಾತಕಾರಿ ಅಂಶಗಳನ್ನು ಬಿಚ್ಚುಟ್ಟಿದ್ದು, ಮೂರು ದಶಕಗಳ ಹಿಂದೆ ಇದ್ದುದಕ್ಕಿಂತ ಈಗ ಕನಿಷ್ಠ 9 ರಿಂದ 13 ಹೆಚ್ಚುವರಿ ಉಷ್ಣತೆ ಹೊಂದಿರುವ ರಾತ್ರಿಗಳನ್ನು ಕರ್ನಾಟಕ ಅನುಭವಿಸುತ್ತಿದೆ. ಇದರಿಂದ ಜನರ ಉತ್ಪಾದಕತೆ ಮೇಲೆ ಪರಿಣಾಮ ಉಂಟಾಗುತ್ತಿರುವುದಲ್ಲದೆ, ಗಂಭೀರ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗುತ್ತಿದೆ ಎಂದು ತಿಳಿಸಿದೆ.

ಕೌನ್ಸಿಲ್​​ ಆನ್​​ ಎನರ್ಜಿ, ಎನ್​​ವೈರ್ನ್​​ಮೆಂಟ್​​ ಆ್ಯಂಡ್​​ ವಾಟರ್​​ ಪ್ರಕಟಿಸಿರುವ ಹೌ ಎಕ್ಸ್ಟ್ರೀಮ್​​ ಹೀಟ್​​ ಇಸ್​​ ಇಂಪ್ಯಾಕ್ಟಿಂಗ್​​ ಇಂಡಿಯಾ: ಅಸೆಸಿಂಗ್​​ ಡಿಸ್ಟ್ರಿಕ್ಟ್​​ ಲೆವೆಲ್​​ ಹೀಟ್​​ ರಿಸ್ಕ್​​ ವರದಿಯ ಪ್ರಕಾರ ತೇವಾಂಶದ ಏರಿಕೆ ಸೇರಿದಂತೆ ಕನಿಷ್ಠ 35 ಕಾರಣಗಳು ರಾತ್ರಿ ವೇಳೆ ತಾಪಮಾನ ಹೆಚ್ಚಲು ಕಾರಣವಾಗಿವೆ. ಈ ವರದಿ ಪ್ರಕಾರ, ಕರ್ನಾಟಕದ ಶೇ.93ರಷ್ಟು ಜಿಲ್ಲೆಗಳು ಅತ್ಯಧಿಕ ಹಾಗೂ ಹೆಚ್ಚು ಉಷ್ಣ ಅಪಾಯ ವರ್ಗಗಳಲ್ಲಿ ಸೇರಿವೆ. ಕರಾವಳಿ ಜಿಲ್ಲೆಗಳು ಮತ್ತು ಮಲನಾಡಿನ ಮೂರು ಜಿಲ್ಲೆಗಳು ಅತ್ಯಧಿಕ ಅಪಾಯದ ವಿಭಾಗದಲ್ಲಿವೆ.

ಇದನ್ನೂ ಓದಿ: ಹಾಸನ ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಮಳೆ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

CEEW ಫೆಲೋ ವಿಶ್ವಾಸ್ ಚಿತಾಲೆ ಅವರ ಪ್ರಕಾರ, ದಟ್ಟ ಜನಸಂಖ್ಯೆಯ ಜಿಲ್ಲೆಗಳಲ್ಲಿ ಹೆಚ್ಚಿನ ಉಷ್ಣತೆ ಹೊಂದಿರುವ ರಾತ್ರಿಗಳ ಪ್ರಮಾಣ ಹೆಚ್ಚಾಗಿದೆ. ಬೆಂಗಳೂರು ಮಾತ್ರವಲ್ಲದೆ ಮೈಸೂರು, ಮಂಗಳೂರು, ಶಿವಮೊಗ್ಗ ಮತ್ತು ಹುಬ್ಬಳ್ಳಿ-ಧಾರವಾಡಂತಹ ನಗರೀಕರಣಗೊಳ್ಳುತ್ತಿರುವ ನಗರಗಳಲ್ಲಿಯೂ ಇದೇ ಪ್ರವೃತ್ತಿ ಕಾಣಿಸಿದೆ. 1981ರಿಂದ 2022ರವರೆಗೆ ಭಾರತದಲ್ಲಿ ಉಷ್ಣತೆಯ ತೀವ್ರತೆ ನಿರಂತರವಾಗಿ ಏರಿಕೆಯಾಗಿದೆ. ಇದರ ಪರಿಣಾಮವಾಗಿ 2013, 2016, 2019, 2022 ಮತ್ತು 2024ರಲ್ಲಿ ಭಾರೀ ಹೀಟ್‌ವೇವ್‌ಗಳು ಸಂಭವಿಸಿವೆ. ಕರ್ನಾಟಕದಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ವಿಜಯಪುರ, ಬೆಳಗಾವಿ, ಬೀದರ, ಕಲಬುರಗಿ, ಮೈಸೂರು, ಬಾಗಲಕೋಟೆ ಮತ್ತು ಶಿವಮೊಗ್ಗ ಜಿಲ್ಲೆಗಳು ಅತ್ಯಧಿಕ ಅಪಾಯದ ವರ್ಗದಲ್ಲಿದ್ದರೆ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಮಧ್ಯಮ ಅಪಾಯದ ವರ್ಗದಲ್ಲಿವೆ.

ಆರೋಗ್ಯದ ಮೇಲೆ ಪರಿಣಾಮ

ಕಳೆದ ದಶಕದಲ್ಲಿ ಬಹಳ ಉಷ್ಣಾಂಶ ಹೊಂದಿರುವ ರಾತ್ರಿಗಳ ಸಂಖ್ಯೆ, ಹೆಚ್ಚಿನ ಹೀಟ್​​ ಹೊಂದಿರುವ ದಿನಗಳಿಗಿಂತ ವೇಗವಾಗಿ ಏರಿವೆ. ಭಾರತದಲ್ಲಿನ ಸುಮಾರು ಶೇ. 70ರಷ್ಟು ಜಿಲ್ಲೆಗಳು ಪ್ರತೀ ಬೇಸಿಗೆಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಈ ರೀತಿಯ ರಾತ್ರಿಗಳನ್ನು ಅನುಭವಿಸಿವೆ. ಅಧಿಕ ಉಷ್ಣಾಣ ವಾತಾವರಣದ ರಾತ್ರಿಗಳು ದೇಹಕ್ಕೆ ದಿನದ ಉಷ್ಣದಿಂದ ತಂಪಾಗಲು ಅವಕಾಶ ನೀಡದೇ, ಹೀಟ್ ಎಕ್ಸಾಸ್ಷನ್, ಹೀಟ್ ಸ್ಟ್ರೋಕ್, ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆಗಳು ಹಾಗೂ ಮೂತ್ರಪಿಂಡ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸುತ್ತವೆ ಎಂದು ಚಿತಾಲೆ ಹೇಳಿರೋದಾಗಿ ಡೆಕ್ಕನ್​​ ಹೆರಾಲ್ಡ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಪರಪ್ಪನ ಅಗ್ರಹಾರದಲ್ಲಿ ಅಲೋಕ್ ಕುಮಾರ್ ಬಗ್ಗೆ ವಿಡಿಯೋ ಮಾಡಿದ್ದ ಕಿಡಿಗೇಡಿಗಳು!

ಬೆಂಗಳೂರು, ಮಾರ್ಚ್​ 29: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಪತ್ತೆ, ಡ್ರಗ್ಸ್ ಸಾಗಾಟ ಇವೆಲ್ಲ ಹೊಸದೇನಲ್ಲ. ಆದರೆ ಇತ್ತೀಚಿಗೆ ಡಿಜಿಪಿ ಅಲೋಕ್ ಕುಮಾರ್ (DGP Alok Kumar )ಅವರ ಕಟ್ಟುನಿಟ್ಟಾದ ಕ್ರಮದಿಂದ ಈ ಎಲ್ಲಾ ಅವ್ಯವಹಾರಗಳಿಗೆ ಬ್ರೇಕ್ ಬೀಳುವ ನಿರೀಕ್ಷೆಯಿತ್ತು. ಆದರೆ ಈಗ ಮತ್ತೊಮ್ಮೆ ಜೈಲಿನೊಳಗೇ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಬೆಳಕಿಗೆ ಬಂದಿದೆ.

ಡ್ರೈನೇಜ್​ನಲ್ಲಿ ಮೊಬೈಲ್ ಫೋನ್​ಗಳು ಪತ್ತೆ

ವಿಡಿಯೋದಲ್ಲಿ ಜೈಲಿನಲ್ಲಿ ಮೊಬೈಲ್, ಟಿವಿ ಹಾಗೂ ನೆಟ್‌ಫ್ಲಿಕ್ಸ್‌ನಂತಹ ಸೌಲಭ್ಯಗಳು ಲಭ್ಯವಿವೆ ಎಂದು ಹೇಳಲಾಗಿದ್ದು, ಡಿಜಿಪಿ ಅಲೋಕ್ ಕುಮಾರ್ ಅವರೇ ಮೊಬೈಲ್ ನೀಡಿದ್ದಾರೆಂದೂ ಕೈದಿಗಳು ಹೇಳಿದ್ದಾರೆ. ಈ ವಿಡಿಯೋ ನಿಜವಾಗಿಯೂ ಜೈಲಿನೊಳಗೇ ಚಿತ್ರೀಕರಿಸಲ್ಪಟ್ಟಿದೆಯೇ ಅಥವಾ ಬೇರೆಡೆ ಸೆಟಪ್ ಮಾಡಿ ಚಿತ್ರಿಸಿಲಾಗಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಡಿಯೋ ವೈರಲ್ ಆದ ನಂತರ ಪೊಲೀಸರು ತಕ್ಷಣವೇ ಜೈಲಿನಲ್ಲಿ ಪರಿಶೀಲನೆ ನಡೆಸಿದರು. ಕೇಂದ್ರ ಕಾರಾಗೃಹದ 9ನೇ ಬ್ಯಾರಕ್‌ನಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ವೇಳೆ ಡ್ರೈನೇಜ್ ಮಾರ್ಗದಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಹಾಲಿನ ಪ್ಯಾಕೆಟ್‌ಗಳಲ್ಲಿ ಸುತ್ತಿ ಅಡಗಿಸಿಡಲಾಗಿದ್ದ ಮೊಬೈಲ್​ಗಳನ್ನು ಅಧಿಕಾರಿಗಳು ಆರೋಪಿಗಳಿಂದಲೇ ಹೊರತೆಗೆಸಿದ್ದಾರೆ.

ಮೊಬೈಲ್ ದೊರಕಿದ ವೀಡಿಯೋ ಇಲ್ಲಿದೆ

ಉದ್ದೇಶಪೂರ್ವಕವಾಗಿ ಡಿಜಿಪಿ ಹೆಸರು ಹೇಳಿ ವೀಡಿಯೋ ಮಾಡಿರುವ ಕೈದಿಗಳು

ತನಿಖೆಯಲ್ಲಿ ವಿಡಿಯೋ ಮಾಡಿದ್ದ ಕೈದಿಗಳನ್ನು ಪತ್ತೆಹಚ್ಚಲಾಗಿದೆ. ದರ್ಶನ್, ಅಭಿಷೇಕ್ ಮತ್ತು ಎಂಡ್ರೋಸ್ ಎಂಬ ವಿಚಾರಣಾಧೀನ ಕೈದಿಗಳು ಈ ಕೃತ್ಯದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಇವರು ಹಿಂದೆ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳಾಗಿದ್ದು, ಬೇರೆ ಬ್ಯಾರಕ್‌ಗೆ ಸ್ಥಳಾಂತರ ಮಾಡಿದ ಹಿನ್ನೆಲೆಯಲ್ಲಿ ಅಸಮಾಧಾನದಿಂದ ಉದ್ದೇಶಪೂರ್ವಕವಾಗಿ ಡಿಜಿಪಿ ಅಲೋಕ್ ಕುಮಾರ್​ ಹೆಸರಿಗೆ ಚ್ಯುತಿ ತರಲು ವಿಡಿಯೋ ಮಾಡಿ ವೈರಲ್ ಮಾಡಿರುವ ಸಾಧ್ಯತೆ ವ್ಯಕ್ತವಾಗಿದೆ. ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರನ್ನು ಕ್ವಾರಂಟೈನ್ ಸೆಲ್‌ಗೆ ಸ್ಥಳಾಂತರಿಸಲಾಗಿದೆ.

ವೀಡಿಯೋ ಇಲ್ಲಿದೆ

ಇದನ್ನೂ ಓದಿ ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಬ್ರೇಕ್ ಹಾಕಲು ಹೊಸ ಅಸ್ತ್ರ ಪ್ರಯೋಗಿಸಿದ ಡಿಜಿಪಿ ಅಲೋಕ್ ಕುಮಾರ್

ಸಿಬ್ಬಂದಿ ಅಮಾನತು

ಘಟನೆ ಬಳಿಕ ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಅವರ ಆದೇಶದ ಮೇರೆಗೆ ವಾರ್ಡರ್‌ಗಳಾದ ಶಿವಾನಂದ ಕರ್ಲಬಟ್ಟಿ, ನಿರಂಜನ ಎ. ಕಾಮತ್ ಮತ್ತು ಹನುಮಂತಪ್ಪ ಹಡಪದ್ ಅವರನ್ನು ಅಮಾನತು ಮಾಡಲಾಗಿದೆ. ಜೊತೆಗೆ ಜೈಲರ್ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಜೈಲಿನ ಕೆಲವು ಭಾಗಗಳಲ್ಲಿ ಏರ್‌ಟೆಲ್ ಸಿಗ್ನಲ್ ಲಭ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಮತ್ತಷ್ಟು ಕಟ್ಟು ನಿಟ್ಟಾಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

Gold Rates: ಚಿನ್ನದ ಬೆಲೆ ಭರ್ಜರಿ ಹೆಚ್ಚಳ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 29: ಚಿನ್ನದ ಬೆಲೆ ಈ ವಾರಾಂತ್ಯದಲ್ಲಿ ಭರ್ಜರಿಯಾಗಿ ಏರಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಇದರ ಬೆಲೆ (Gold Rates) ಸತತವಾಗಿ ಹೆಚ್ಚುತ್ತಿದೆ. ವಾರಾಂತ್ಯದಲ್ಲಿ ಗ್ರಾಂಗೆ ಬರೋಬ್ಬರಿ 310 ರೂನಷ್ಟು ಹೆಚ್ಚಿದೆ. ಬೆಳ್ಳಿ ಬೆಲೆಯಲ್ಲೂ 5 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,35,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,48,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,35,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 29ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,809 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,575 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,107 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,809 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,575 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,575 ರೂ
  • ಚೆನ್ನೈ: 13,660 ರೂ
  • ಮುಂಬೈ: 13,575 ರೂ
  • ದೆಹಲಿ: 13,590 ರೂ
  • ಕೋಲ್ಕತಾ: 13,575 ರೂ
  • ಕೇರಳ: 13,575 ರೂ
  • ಅಹ್ಮದಾಬಾದ್: 13,580 ರೂ
  • ಜೈಪುರ್: 13,590 ರೂ
  • ಲಕ್ನೋ: 13,590 ರೂ
  • ಭುವನೇಶ್ವರ್: 13,575 ರೂ

ಇದನ್ನೂ ಓದಿ: ಏಪ್ರಿಲ್​ನಲ್ಲಿ ಗುಡ್​ಫ್ರೈಡೆ, ಬಸವಜಯಂತಿ, ಅಂಬೇಡ್ಕರ್ ಜಯಂತಿ; ಬ್ಯಾಂಕುಗಳಿಗೆ ಒಟ್ಟು 11 ದಿನ ರಜೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 560 ರಿಂಗಿಟ್ (13,229 ರುಪಾಯಿ)
  • ದುಬೈ: 501.25 ಡಿರಾಮ್ (12,934 ರುಪಾಯಿ)
  • ಅಮೆರಿಕ: 140.50 ಡಾಲರ್ (13,317 ರುಪಾಯಿ)
  • ಸಿಂಗಾಪುರ: 180.40 ಸಿಂಗಾಪುರ್ ಡಾಲರ್ (13,265 ರುಪಾಯಿ)
  • ಕತಾರ್: 499 ಕತಾರಿ ರಿಯಾಲ್ (12,976 ರೂ)
  • ಸೌದಿ ಅರೇಬಿಯಾ: 510 ಸೌದಿ ರಿಯಾಲ್ (12,882 ರುಪಾಯಿ)
  • ಓಮನ್: 53.15 ಒಮಾನಿ ರಿಯಾಲ್ (13,086 ರುಪಾಯಿ)
  • ಕುವೇತ್: 41.23 ಕುವೇತಿ ದಿನಾರ್ (12,774 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 245 ರೂ
  • ಚೆನ್ನೈ: 250 ರೂ
  • ಮುಂಬೈ: 245 ರೂ
  • ದೆಹಲಿ: 245 ರೂ
  • ಕೋಲ್ಕತಾ: 245 ರೂ
  • ಕೇರಳ: 250 ರೂ
  • ಅಹ್ಮದಾಬಾದ್: 245 ರೂ
  • ಜೈಪುರ್: 245 ರೂ
  • ಲಕ್ನೋ: 245 ರೂ
  • ಭುವನೇಶ್ವರ್: 250 ರೂ
  • ಪುಣೆ: 245

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Weekly Job Horoscope: ನಿಮ್ಮ ರಾಶಿಗನುಗುಣವಾಗಿ ವಾರದ ಉದ್ಯೋಗ ಭವಿಷ್ಯ ತಿಳಿಯಿರಿ

ಮಾರ್ಚ್ 29ರಿಂದ ಏಪ್ರಿಲ್ 04 ರವರೆಗೆ ಈ ವಾರವಿದ್ದು ​ಶ್ರಮವು ನಿರರ್ಥಕ ಎನಿಸಬಹುದು. ಕಲ್ಪಿಸಿಕೊಂಡಿದ್ದು ಆಗಿಲ್ಲ ಎಂಬ ನೋವು, ಬರಬೇಕಾದ ಹಣವು ತಲುಪದು‌. ಆತ್ಮವಿಶ್ವಾಸ ಅಲ್ಪ ಕಡಿಮೆಯಾದಂತೆ ತೋರಿದರೂ ಮತ್ತೆ ಅದು ಮೇಲೇರುವುದು. ಈಸ ಬೇಕು ಇದ್ದು ಜಯಿಸಬೇಕು ಎನ್ನುವ ಸ್ಥಿತಿ ನಿರ್ಮಾಣವಾಗಲಿದೆ.

​ಮೇಷ:

ವೃತ್ತಿಯಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗುವಿರಿ. ಸಹೋದ್ಯೋಗಿಗಳ ಸಹಕಾರದಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳಲಿವೆ.

ವೃಷಭ:

ಕೆಲಸದ ಸ್ಥಳದಲ್ಲಿ ತಾಳ್ಮೆ ಅಗತ್ಯ. ಅನಗತ್ಯ ವಾಗ್ವಾದಗಳಿಂದ ದೂರವಿರಿ. ವಿದೇಶಿ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ಉತ್ತಮ ಅವಕಾಶಗಳು ದೊರೆಯುವ ಸಾಧ್ಯತೆಯಿದೆ. ಸ್ವಲ್ಪ ಶ್ರಮ ವಹಿಸಿದರೆ ಯಶಸ್ಸು ಖಚಿತ.

ಮಿಥುನ:

ನಿಮ್ಮ ಸೃಜನಶೀಲತೆಗೆ ಮನ್ನಣೆ ಸಿಗಲಿದೆ. ಹೊಸ ಉದ್ಯೋಗದ ಹುಡುಕಾಟದಲ್ಲಿದ್ದರೆ ಈ ವಾರ ಶುಭ ಫಲ ಸಿಗಲಿದೆ. ವ್ಯಾಪಾರಸ್ಥರಿಗೆ ಲಾಭದಾಯಕ ಸಮಯವಿದು. ಆತ್ಮವಿಶ್ವಾಸದಿಂದ ಮುನ್ನಡೆಯಿರಿ.

ಕರ್ಕಾಟಕ:

ಉದ್ಯೋಗದಲ್ಲಿ ವರ್ಗಾವಣೆಯ ಸಾಧ್ಯತೆಗಳಿವೆ. ಕೆಲಸದ ಒತ್ತಡ ಹೆಚ್ಚಾಗಿ ಮಾನಸಿಕ ಕಿರಿಕಿರಿ ಉಂಟಾಗಬಹುದು. ಶಿಸ್ತಿನಿಂದ ಕೆಲಸ ನಿರ್ವಹಿಸಿದರೆ ಸವಾಲುಗಳನ್ನು ಸಮರ್ಥವಾಗಿ ಎದುರಿಸಬಹುದು.

ಸಿಂಹ:

ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಗೌರವ ಮತ್ತು ಪ್ರತಿಷ್ಠೆ ಹೆಚ್ಚಾಗಲಿದೆ. ನಿಮ್ಮ ನಾಯಕತ್ವದ ಗುಣಗಳಿಗೆ ಪ್ರಶಂಸೆ ವ್ಯಕ್ತವಾಗಲಿದೆ. ಹೊಸ ಯೋಜನೆಗಳಿಗೆ ಇದು ಸೂಕ್ತ ಸಮಯ.

ಕನ್ಯಾ:

ಉದ್ಯೋಗದಲ್ಲಿ ಸಣ್ಣಪುಟ್ಟ ಅಡೆತಡೆಗಳು ಎದುರಾಗಬಹುದು. ಮಾತು ಬಿಗಿಹಿಡಿಯುವುದು ಉತ್ತಮ. ಹಿರಿಯ ಅಧಿಕಾರಿಗಳ ಸಲಹೆಯನ್ನು ಪಾಲಿಸಿ. ಆರ್ಥಿಕ ಲಾಭಕ್ಕಿಂತ ಅನುಭವಕ್ಕೆ ಪ್ರಾಮುಖ್ಯತೆ ನೀಡಿ.

ತುಲಾ:

ಪಾಲುದಾರಿಕೆ ವ್ಯವಹಾರದಲ್ಲಿ ಲಾಭವಿದೆ. ಉದ್ಯೋಗಿಗಳಿಗೆ ಬಡ್ತಿಯ ಸೂಚನೆಗಳಿವೆ. ತಂಡದ ಸದಸ್ಯರೊಂದಿಗೆ ಸಾಮರಸ್ಯದಿಂದ ಕಾರ್ಯನಿರ್ವಹಿಸಿ. ನಿರೀಕ್ಷಿತ ಗುರಿಯನ್ನು ಸುಲಭವಾಗಿ ತಲುಪುವಿರಿ.

ವೃಶ್ಚಿಕ:

ಶತ್ರುಗಳ ಬಗ್ಗೆ ಜಾಗ್ರತೆ ಇರಲಿ. ನಿಮ್ಮ ಕೆಲಸದ ಮೇಲೆ ಹೆಚ್ಚಿನ ಗಮನ ಹರಿಸಿ. ಕಠಿಣ ಪರಿಶ್ರಮವೊಂದೇ ನಿಮಗೆ ಯಶಸ್ಸು ತಂದುಕೊಡಬಲ್ಲದು. ವಾರದ ಅಂತ್ಯಕ್ಕೆ ಶುಭ ಸುದ್ದಿ ಕೇಳುವಿರಿ.

ಧನು:

ವೃತ್ತಿ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಬರಲಿವೆ. ಹೊಸ ಕೌಶಲ್ಯಗಳನ್ನು ಕಲಿಯಲು ಆಸಕ್ತಿ ತೋರುವಿರಿ. ಕಚೇರಿಯಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದೆ. ಆರ್ಥಿಕ ಸ್ಥಿತಿ ಸುಧಾರಿಸಲಿದೆ.

ಮಕರ:

ಕೆಲಸದ ಒತ್ತಡದಿಂದ ಕುಟುಂಬದ ಕಡೆ ಗಮನ ನೀಡಲು ಸಾಧ್ಯವಾಗದಿರಬಹುದು. ನಿಗದಿತ ಸಮಯಕ್ಕೆ ಕೆಲಸ ಮುಗಿಸಲು ಪ್ರಯತ್ನಿಸಿ. ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಹಿರಿಯರ ಸಲಹೆ ಪಡೆಯಿರಿ.

ಕುಂಭ:

ಧೈರ್ಯದಿಂದ ಕೆಲಸಗಳನ್ನು ಪೂರೈಸುವಿರಿ. ಸಣ್ಣ ಪ್ರವಾಸಗಳು ಉದ್ಯೋಗಕ್ಕೆ ಪೂರಕವಾಗಿರಲಿವೆ. ಸಹೋದ್ಯೋಗಿಗಳ ನಡುವೆ ಉಂಟಾಗಿದ್ದ ಗೊಂದಲಗಳು ಬಗೆಹರಿಯಲಿವೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮೀನ:

ಆರ್ಥಿಕವಾಗಿ ಲಾಭದಾಯಕ ವಾರವಿದು. ಉದ್ಯೋಗದಲ್ಲಿ ಸ್ಥಿರತೆ ಇರಲಿದೆ. ಹೊಸ ಹೂಡಿಕೆಗಳ ಬಗ್ಗೆ ಆಲೋಚಿಸುವಿರಿ. ಅಧಿಕಾರಿ ವರ್ಗದವರಿಂದ ಬೆಂಬಲ ಸಿಗಲಿದ್ದು, ಕೆಲಸದಲ್ಲಿ ನೆಮ್ಮದಿ ಇರಲಿದೆ.

– ಲೋಹಿತ ಹೆಬ್ಬಾರ್ – 8762924271

Source link

ಕಾರ್ಕಳ, ಶಿರ್ವದಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಮತ್ತು ಕ್ರಿಕೆಟ್ ಬೆಟ್ಟಿಂಗ್ ಆರೋಪದಡಿ ಐವರ ಬಂಧನ

ಉಡುಪಿ, ಮಾರ್ಚ್​ 29: ಜಿಲ್ಲೆಯ ಕಾರ್ಕಳ ಮತ್ತು ಶಿರ್ವ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿಯ ಮೇಲೆ ದಾಳಿ ಮಾಡಲು ಯತ್ನಿಸಿದ ಹಾಗೂ ಕ್ರಿಕೆಟ್ ಬೆಟ್ಟಿಂಗ್ ಜಾಲದಲ್ಲಿ ತೊಡಗಿದ್ದ ಪ್ರಕರಣಗಳಡಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಕುರಿತು ಕಾರ್ಕಳ ಮತ್ತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರ ಮೇಲೆ ಗಾಡಿ ಹರಿಸಲು ಯತ್ನ

ಮೊದಲ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಂಚಿಕಟ್ಟೆ ಸಮೀಪದ ಹೋಂಡಾ ಶೋರೂಮ್ ಬಳಿ ನಡೆದಿದೆ. ಕಾರ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಪ್ರಸನ್ನ ಎಂ.ಎಸ್. ಮತ್ತು ಅವರ ತಂಡವು ಬಂಗ್ಲೆಗುಡ್ಡೆ ವೃತ್ತದಿಂದ ಬರುತ್ತಿದ್ದ ಕಪ್ಪು ಕಾರನ್ನು ನಿಲ್ಲಿಸಲು ಪ್ರಯತ್ನಪಟ್ಟರು. ಆದರೆ ಕಾರಿನಲ್ಲಿದ್ದವರು ವಾಹನವನ್ನು ನಿಲ್ಲಿಸುವ ಬದಲು, ಪೊಲೀಸ್ ಸಿಬ್ಬಂದಿಯ ಮೇಲೆಯೇ ದಾಳಿ ಮಾಡಲು ಯತ್ನಿಸಿದರೆಂದು ಆರೋಪಿಸಲಾಗಿದೆ. ಆರೋಪಿಗಳು ವಾಹನವನ್ನು ಪೊಲೀಸರ ಮೇಲೆ ಹರಿಸಲು ಪ್ರಯತ್ನಿಸಿ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿರ್ವ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಮಂಜುನಾಥ ಮರಬಾಡ ಅವರ ತಂಡಕ್ಕೆ ಅದೇ ಕಾರು ಸಂಶಯಾಸ್ಪದವಾಗಿ ಬೆಳ್ಮಣ್​ದಿಂದ ಬರುತ್ತಿರುವ ಮಾಹಿತಿ ಲಭ್ಯವಾಗಿತ್ತು. ವಾಹನವನ್ನು ತಡೆದಾಗ ಚಾಲಕ ಮೊದಲು ವೇಗ ಕಡಿಮೆ ಮಾಡಿದರೂ, ಬಳಿಕ ಪೊಲೀಸ್ ಅಧಿಕಾರಿಯನ್ನು ತಳ್ಳಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಎಂದು ಹೇಳಲಾಗಿದೆ. ನಂತರ ಶಿರ್ವ ಪಟ್ಟಣದಲ್ಲಿ ಪೊಲೀಸರು ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಬೆಟ್ಟಿಂಗ್ ಮೂಲಕ ವಂಚನೆ

ಬಂಧಿತರನ್ನು ನಾಡೂರು ನಿವಾಸಿ ಸುಧರ್ಷನ್ ಶೆಟ್ಟಿ (29), ಹೆರೂರು ನಿವಾಸಿ ಕಾರ್ತವ್ಯ ಶೆಟ್ಟಿ (27), ಮೂಡೂರು ನಿವಾಸಿ ಅರುಣ್ ಶೆಟ್ಟಿ (29), ಹೆಬ್ರಿಯ ಬೆಲಂಜೆ ನಿವಾಸಿ ತೇಜಸ್ (28) ಮತ್ತು ಬೈಂದೂರು ತಾಲೂಕಿನ ಶಿರೂರು ನಿವಾಸಿ ಪ್ರಜ್ವಲ್ ಶೆಟ್ಟಿ (29) ಎಂದು ಗುರುತಿಸಲಾಗಿದೆ. ತನಿಖೆ ವೇಳೆ ಆರೋಪಿಗಳು ಸಂಘಟಿತ ಕ್ರಿಕೆಟ್ ಬೆಟ್ಟಿಂಗ್ ಜಾಲದಲ್ಲಿ ತೊಡಗಿದ್ದರೆಂದು ಪತ್ತೆಯಾಗಿದೆ. ಜನರನ್ನು ಹಣ ಹೂಡಿಕೆ ಮಾಡಲು ಪ್ರೇರೇಪಿಸಿ, ಮೋಸ ಮಾಡಿ ಅಕ್ರಮ ಜೂಜಾಟದಲ್ಲಿ ತೊಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

Video: ಬಾಟಲಿಯಲ್ಲಿ ಪೆಟ್ರೋಲ್ ತುಂಬಲು ನಿರಾಕರಿಸಿದ್ದಕ್ಕೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಹಿಗ್ಗಾಮುಗ್ಗ ಥಳಿತ

ಬಾಟಲಿಯಲ್ಲಿ ಪೆಟ್ರೋಲ್ ತುಂಬಲು ನಿರಾಕರಿಸಿದ್ದಕ್ಕೆ ಗುಂಪೊಂದು ಪೆಟ್ರೋಲ್ ಬಂಕ್ ಸಿಬ್ಬಂದಿ ಮೇಲೆ ಮನ ಬಂದತೆ ದಾಳಿ ನಡೆಸಿರುವ ಘಟನೆ ವರದಿಯಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಹತ್ತಾರು ಗೂಂಡಾಗಳು ಇಬ್ಬರು ಬಂಕ್ ಸಿಬ್ಬಂದಿಯನ್ನು ಥಳಿಸುತ್ತಿರುವುದನ್ನು ಕಾಣಬಹುದು. ಇದು ಕೋಪವಲ್ಲ ದೌರ್ಜನ್ಯ ಎಂದು ನೆಟ್ಟಿಗರು ಕರೆದಿದ್ದಾರೆ. ಆ ಸಿಬ್ಬಂದಿ ಊಟಕ್ಕೆಂದು ಢಾಬಾಕ್ಕೆ ಬಂದ ಸಮಯದಲ್ಲಿ ಅವರ ಮೇಲೆ ದಾಳಿ ನಡೆದಿದೆ. ಈ ಘಟನೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಜನರು ಮನವಿ ಮಾಡಿದ್ದಾರೆ. ಇಲ್ಲದಿದ್ದರೆ ಅಂಥವರು ಯಾರದ್ದೂ ಭಯವಿಲ್ಲದೆ ಗೂಂಡಾಗಿರಿ ಮುಂದುವರೆಸುತ್ತಾರೆ ಎಂದೂ ಹೇಳಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link