nagaraj11081993

ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ, ಮೈಜುಂ ಎನ್ನಿಸೋ ವಿಡಿಯೋ ವೈರಲ್

ಮಂಗಳೂರು, ಏಪ್ರಿಲ್ 1: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿಯಾದ ಭೀಕರ ಅಪಘಾತ ಸಂಭವಿಸಿದೆ. ಘಟನೆ ದೃಶ್ಯವು ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮೈ ಜುಂ ಎನ್ನುವಂತಿದೆ. ನಡೆದಿದ್ದೇನು? ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ಭಾರತಿ (48) ಎಂಬುವವರೇ ಗಾಯಗೊಂಡ ಮಹಿಳೆ. ಇವರು ಬೆಳಗ್ಗೆ ಮಗಳು ದೀಪಶ್ರೀ ಅವರೊಂದಿಗೆ ಗುಳಿಗಜ್ಜ ಕಟ್ಟೆಗೆ ಕಾಣಿಕೆ ಹಾಕುವ ಸಲುವಾಗಿ ಬಂದಿದ್ದರು. ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯನ್ನು…

Read More

IND vs ZIM: ಜಿಂಬಾಬ್ವೆ ತೆರಳಲಿದೆ ಟೀಮ್ ಇಂಡಿಯಾ: ಬಿಸಿಸಿಐಯಿಂದ ಟಿ20 ಸರಣಿಯ ವೇಳಾಪಟ್ಟಿ ಪ್ರಕಟ

ಬೆಂಗಳೂರು (ಏ. 01): ಭಾರತ ಕ್ರಿಕೆಟ್ ತಂಡದ (Indian Cricket Team) ಆಟಗಾರರು ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ಮಧ್ಯೆ ಬಿಸಿಸಿಐ, ಭಾರತ ತಂಡವು ಜುಲೈ 2026 ರಲ್ಲಿ ಮೂರು ಪಂದ್ಯಗಳ ಟಿ20ಐ ಸರಣಿಗಾಗಿ ಜಿಂಬಾಬ್ವೆಗೆ ಪ್ರವಾಸ ಕೈಗೊಳ್ಳಲಿದೆ ಎಂದು ಘೋಷಿಸಿದೆ. ಇದು 2024 ರಲ್ಲಿ ಐದು ಪಂದ್ಯಗಳನ್ನು ಆಡಿದ ನಂತರ ಅವರ ಮೊದಲ ಭೇಟಿಯಾಗಿದೆ. ಸರಣಿಯು ಜುಲೈ 23 ರ ಗುರುವಾರ ಹರಾರೆಯಲ್ಲಿ ಮೊದಲ ಟಿ20 ಯೊಂದಿಗೆ ಆರಂಭಗೊಳ್ಳಲಿದೆ. ಜುಲೈ 19 ರಂದು…

Read More

ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ, ಮೈ ಜುಂ ಎನ್ನಿಸುವ ದೃಶ್ಯ

ಕನ್ಯಾಕುಮಾರಿ, ಏ.1: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ಸೊಂದು ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದ ಭೀಕರ ಘಟನೆ ನಡೆದಿದೆ. ವೇಗವಾಗಿ ಬಂದ ಬಸ್ ಸವಾರರನ್ನು ಗಾಳಿಯಲ್ಲಿ ತೂರಿದ ದೃಶ್ಯಗಳು ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ವರದಿಗಳ ಪ್ರಕಾರ, ಅತಿ ವೇಗವಾಗಿ ಚಲಿಸುತ್ತಿದ್ದ ಕೇರಳ ಸರ್ಕಾರಿ ಬಸ್ ಮೊದಲು ರಸ್ತೆಯಲ್ಲಿದ್ದ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ನಂತರ ಚಾಲಕನ ನಿಯಂತ್ರಣ ತಪ್ಪಿದ ಬಸ್, ಎದುರಿಗೆ ಬರುತ್ತಿದ್ದ ದ್ವಿಚಕ್ರ ವಾಹನದಲ್ಲಿದ್ದ ದಂಪತಿಗೆ…

Read More

ಇರಾನ್​ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾದಲ್ಲಿದ್ದಾರಾ? ರಾಯಭಾರಿ ಹೇಳಿದ್ದೇನು?

ಟೆಹ್ರಾನ್, ಏಪ್ರಿಲ್ 1: ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ(Murder) ನಡೆದು ಒಂದು ತಿಂಗಳು ಕಳೆದಿದೆ. ಅವರ ಸಾವಿನ ಬಳಿಕ ಮಗ ಮೊಜ್ತಬಾ ಖಮೇನಿಯವರನ್ನು ನೂತನ ಸರ್ವೋಚ್ಚ ನಾಯಕನನ್ನಾಗಿ ನೇಮಿಸಲಾಯಿತು. ಅಧಿಕಾರ ವಹಿಸಿಕೊಂಡ ಬಳಿಕ ಮೊಜ್ತಬಾ ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿಲ್ಲ. ಅವರು ತಮ್ಮ ತಂದೆಯ ಅಂತ್ಯಕ್ರಿಯೆಗೂ ಬಂದಿಲ್ಲ.ಅವರು ಪತ್ರದ ಮೂಲದ ತಮ್ಮ ಹೇಳಿಕೆ ನೀಡುತ್ತಿದ್ದು, ಅವರ ಆರೋಗ್ಯ ಹಾಗೂ ಅವರೆಲ್ಲಿದ್ದಾರೆ ಎನ್ನುವ ಅನುಮಾನ ಕಾಡಿದೆ. ಕೆಲವರು ಗಂಭೀರವಾಗಿ ಗಾಯಗೊಂಡಿರಬಹುದು ಅಥವಾ ಮೃತಪಟ್ಟಿರಬಹುದು ಎಂದು ಹೇಳಿದ್ದಾರೆ….

Read More

ಅತೀ ವೇಗ… ಬೆನ್​ ಡಕೆಟ್​ಗೆ ಬರೋಬ್ಬರಿ 1,100 ಪೌಂಡ್ ಫೈನ್..!

ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಬೆನ್ ಡಕೆಟ್ ಇತ್ತೀಚೆಗೆ ಎರಡು ಪ್ರಮುಖ ಕಾರಣಗಳಿಗಾಗಿ ಸುದ್ದಿಯಲ್ಲಿದ್ದಾರೆ. ಒಂದು, ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಹಿಂದೆ ಸರಿದಿರುವುದು. ಮತ್ತೊಂದು, ಅತಿವೇಗದ ಚಾಲನೆಗಾಗಿ ನ್ಯಾಯಾಲಯದಿಂದ ದಂಡಕ್ಕೆ ಗುರಿಯಾಗಿರುವುದು. ಬೆನ್ ಡಕೆಟ್ ಅವರು ತಮ್ಮ ಲ್ಯಾಂಡ್ ರೋವರ್ ಕಾರನ್ನು ನಿಗದಿಗಿಂತ ಹೆಚ್ಚಿನ ವೇಗದಲ್ಲಿ ಚಲಾಯಿಸಿದ್ದಕ್ಕಾಗಿ ದಂಡ ತೆತ್ತಿದ್ದಾರೆ. ಆಗಸ್ಟ್ 24, 2025 ರಂದು ಸ್ಟಾಫರ್ಡ್‌ಶೈರ್‌ನ ಎ50 ರಸ್ತೆಯಲ್ಲಿ ಡಕೆಟ್​ 93 ಮೈಲಿ ವೇಗದಲ್ಲಿ ಕಾರು ಚಲಾಯಿಸಿದ್ದರು. ಈ ರಸ್ತೆಯಲ್ಲಿ ಗಂಟೆಗೆ 70…

Read More

ತೆಲಂಗಾಣ ಟೆಕ್ಕಿ ದಂಪತಿಯ ಜೀವವನ್ನೇ ತೆಗೆಯಿತು ಎಐ! ಆಗಿದ್ದೇನು ಗೊತ್ತಾ?

ಬೆಂಗಳೂರು, ಏಪ್ರಿಲ್ 01: ಮಂಗಳವಾರ ಬೆಳಗ್ಗೆ ತೆಲಂಗಾಣ ಮೂಲದ ಟೆಕ್ಕಿ ದಂಪತಿ ಆತ್ಮಹತ್ಯೆ (Suicide) ಮಾಡಿಕೊಂಡಿರುವುದು ಬೆಳಕಿಗೆ ಬಂದಿತ್ತು. ಪ್ರಾಥಮಿಕವಾಗಿ ಕೌಟುಂಬಿಕ ಕಲಹದ ಹಿನ್ನೆಲೆ ಗಂಡ-ಹೆಂಡತಿ ಇಬ್ಬರೂ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಆದರೆ ಟೆಕ್ಕಿ ಸಾವಿಗೆ ನಿಜವಾದ ಕಾರಣ ಈಗ ಬಯಲಾಗಿದೆ. ಕೃತಕ ಬುದ್ಧಿಮತ್ತೆ (AI) ಹೊಡೆತಕ್ಕೆ ಕೆಲಸ ಕಳೆದುಕೊಂಡಿದ್ದ ಭಾನು ಚಂದರ್ ರೆಡ್ಡಿ, ಖಿನ್ನತೆಯಿಂದ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ತೆಲಂಗಾಣ ಮೂಲದ 32 ವರ್ಷದ ಭಾನು ಚಂದರ್ ರೆಡ್ಡಿ…

Read More

ಎಲೆಕ್ಟ್ರಿಕ್ ಕಾರು ಪ್ರಿಯರಿಗೆ ಶಾಕ್: ಇನ್ಮುಂದೆ ಕರ್ನಾಟಕದಲ್ಲಿ ಇವಿ ವಾಹನಗಳೂ ದುಬಾರಿ! ಕಾರಣ ಇಲ್ಲಿದೆ

ಬೆಂಗಳೂರು, ಏಪ್ರಿಲ್ 1: ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳನ್ನು (Electric Vehicle) ಉತ್ತೇಜಿಸಲು ಕಳೆದ ಹತ್ತು ವರ್ಷಗಳಿಂದ ನೀಡಲಾಗುತ್ತಿದ್ದ ರಸ್ತೆ ತೆರಿಗೆ (Road Tax) ವಿನಾಯಿತಿಯನ್ನು ಹಿಂಪಡೆಯಲು ಕರ್ನಾಟಕ ಸರ್ಕಾರ ಮುಂದಾಗಿದೆ. ಈ ಸಂಬಂಧ ‘ಕರ್ನಾಟಕ ಮೋಟಾರು ವಾಹನ ತೆರಿಗೆ (ತಿದ್ದುಪಡಿ) ವಿಧೇಯಕ 2026’ಕ್ಕೆ ಈಗಾಗಲೇ ಅನುಮೋದನೆ ಪಡೆಯಲಾಗಿದ್ದು, ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ. ಯಾವ ಇವಿ ವಾಹನಕ್ಕೆ ಎಷ್ಟು ತೆರಿಗೆ? ಹೊಸ ನಿಯಮದ ಪ್ರಕಾರ, ಎಲೆಕ್ಟ್ರಿಕ್ ಕಾರುಗಳು, ಜೀಪುಗಳು ಮತ್ತು ಖಾಸಗಿ ಬಸ್‌ಗಳ…

Read More

UPSC Free Coaching: UPSC ಆಕಾಂಕ್ಷಿಗಳಿಗೆ ಗುಡ್​ನ್ಯೂಸ್; ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳ ತಯಾರಿಗಾಗಿ ಉಚಿತ ವಸತಿ ಸಹಿತ ತರಬೇತಿ

ನಾಗರಿಕ ಸೇವಾ ಪರೀಕ್ಷೆಗಳ (UPSC) ತಯಾರಿಯಲ್ಲಿ ತೊಡಗಿರುವ ಅಭ್ಯರ್ಥಿಗಳಿಗೆ ದೆಹಲಿಯ ಪ್ರತಿಷ್ಠಿತ ಜಾಮಿಯಾ ಮಿಲಿಯಾ ಇಸ್ಲಾಮಿಯಾ (JMI) ವಿಶ್ವವಿದ್ಯಾಲಯವು ಒಂದು ಅದ್ಭುತ ಅವಕಾಶವನ್ನು ಹೊತ್ತು ತಂದಿದೆ. 2027ರ ಯುಪಿಎಸ್‌ಸಿ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳ ತಯಾರಿಗಾಗಿ ಉಚಿತ ವಸತಿ ಸಹಿತ ತರಬೇತಿಯನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದ ಅಭ್ಯರ್ಥಿಗಳಿಗೆ ಗಮನಾರ್ಹ ಅಂಶ: ಈ ತರಬೇತಿ ಕಾರ್ಯಕ್ರಮದ ಪ್ರವೇಶ ಪರೀಕ್ಷೆಯು ದೇಶದ ಪ್ರಮುಖ 13 ನಗರಗಳಲ್ಲಿ ನಡೆಯಲಿದ್ದು, ನಮ್ಮ ಬೆಂಗಳೂರಿನಲ್ಲಿಯೂ ಪರೀಕ್ಷಾ ಕೇಂದ್ರವಿರಲಿದೆ. ಇದರಿಂದಾಗಿ ಕರ್ನಾಟಕದ ವಿದ್ಯಾರ್ಥಿಗಳು ದೆಹಲಿ…

Read More

IPL 2026: RCB ತಂಡದ ಏಪ್ರಿಲ್ ತಿಂಗಳ ವೇಳಾಪಟ್ಟಿ ಇಲ್ಲಿದೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಉದ್ಘಾಟನಾ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ದ್ವಿತೀಯ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಆರ್‌ಸಿಬಿ ತನ್ನ ಎರಡನೇ ಪಂದ್ಯದಲ್ಲಿ ಬದ್ಧ ವೈರಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವನ್ನು ಎದುರಿಸಲಿದೆ. ಹೈವೋಲ್ಟೇಜ್ ಪಂದ್ಯವೆಂದೇ ಬಿಂಬಿತವಾಗಿರುವ ಈ ಮ್ಯಾಚ್​ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ಪಂದ್ಯ ಯಾವಾಗ? ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯವು ಏಪ್ರಿಲ್ 5 ರಂದು ನಡೆಯಲಿದೆ. ಅಂದರೆ…

Read More

ಏಪ್ರಿಲ್ 4ರಿಂದ ಜೀ ಕನ್ನಡದಲ್ಲಿ ‘ಜೋಡಿ ನಂ.1′ ಶೋ; ಜಡ್ಜ್​​-ಸ್ಪರ್ಧಿ ಇಬ್ಬರೂ ಸೂಪರ್

ಜೀ ಕನ್ನಡದಲ್ಲಿ ಹೊಸ ಹೊಸ ರಿಯಾಲಿಟಿ ಶೋಗಳು ಪ್ರಸಾರ ಕಾಣುತ್ತಾ ಇರುತ್ತವೆ. ಎಲ್ಲಾ ರಿಯಾಲಿಟಿ ಶೋಗಳು ಸಾಕಷ್ಟು ಮನರಂಜನೆ ನೀಡುವ ರೀತಿಯಲ್ಲಿ ಇದೆ. ಈಗ ಹೊಸ ರಿಯಾಲಿಟಿ ಶೋ ಪ್ರಸಾರ ಕಾಣಲು ರೆಡಿ ಆಗಿದೆ. ಅದುವೇ ‘ಜೋಡಿ ನಂಬರ್ 1’. ಏಪ್ರಿಲ್ 4ರಂದು ರಾತ್ರಿ 9 ಗಂಟೆಗೆ ಈ ಶೋ ಪ್ರಸಾರ ಕಾಣಲಿದೆ. ‘ಅಮೃತಧಾರೆ’ ಧಾರಾವಾಹಿ ಜೋಡಿ ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ ಸೇರಿದಂತೆ ಅನೇಕರು ಜಡ್ಜ್ ಸ್ಥಾನದಲ್ಲಿ ಇದ್ದಾರೆ ಅನ್ನೋದು ವಿಶೇಷ. ಜೀ ಕನ್ನಡದಲ್ಲಿ…

Read More