Headlines

nagaraj11081993

Video: ಸೌಂದರ್ಯ ಸ್ಪರ್ಧೆಯ ವೇದಿಕೆಯಲ್ಲೇ ಉದುರಿಬಿತ್ತು ಸುಂದರಿಯ ಹಲ್ಲು; ವಿಡಿಯೋ ವೈರಲ್​

ಬ್ಯಾಂಕಾಕ್: ಸೌಂದರ್ಯ ಸ್ಪರ್ಧೆ ಎಂದರೆ ಅಲ್ಲಿ ಕೇವಲ ರೂಪವಷ್ಟೇ ಅಲ್ಲ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವೂ ಅತಿ ಮುಖ್ಯ. ಆದರೆ ಥೈಲ್ಯಾಂಡ್‌ನಲ್ಲಿ ಇತ್ತೀಚೆಗೆ ನಡೆದ ‘ಮಿಸ್ ಗ್ರ್ಯಾಂಡ್ ಥೈಲ್ಯಾಂಡ್’ ಸೌಂದರ್ಯ ಸ್ಪರ್ಧೆಯ ನೇರ ಪ್ರಸಾರ (Live Round) ನಡೆಯುತ್ತಿದ್ದಾಗಲೇ ಸುಂದರಿಯೊಬ್ಬಳ ಹಲ್ಲುಗಳು ಕಳಚಿ ಬಿದ್ದ ಅಪರೂಪದ ಮತ್ತು ಮುಜುಗರದ ಪ್ರಸಂಗವೊಂದು ಜರುಗಿದೆ. ಘಟನೆಯ ವಿವರ ಹೀಗಿದೆ, ಕಮಲವಾನ್ ಚನಾಗೋ ಎಂಬ ಸುಂದರಿ ತೀರ್ಪುಗಾರರ ಮುಂದೆ ನಿಂತು, ಆತ್ಮವಿಶ್ವಾಸದಿಂದ ಮಾತನಾಡಲು ಬಾಯಿ ತೆರೆದಿದ್ದಾರೆ. ಆದರೆ ಮಾತನಾಡಲು ಶುರುಮಾಡುತ್ತಿದ್ದಂತೆಯೇ ಆಕೆಯ ಬಾಯಲ್ಲಿದ್ದ…

Read More

IPL 2026: 16 ವರ್ಷ, 253 ಪಂದ್ಯಗಳ ನಂತರ ಇಂತಹದೊಂದು ಪಂದ್ಯವನ್ನಾಡಲಿದೆ ಸಿಎಸ್​ಕೆ

ಪ್ರತಿ ಐಪಿಎಲ್​ನಂತೆ ಈ ಐಪಿಎಲ್​ನಲ್ಲೂ ಆಟಗಾರರ ಇಂಜುರಿ ಸಮಸ್ಯೆ ಎಲ್ಲಾ ತಂಡಗಳನ್ನು ಕಾಡಲಾರಂಭಿಸಿದೆ. ಇದಕ್ಕೆ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಹೊರತಾಗಿಲ್ಲ. ಅದರಲ್ಲೂ ತಂಡದ ಜೀವಾಳ ಎನಿಸಿಕೊಂಡಿರುವ ಮಹೇಂದ್ರ ಸಿಂಗ್ ಧೋನಿ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಎರಡು ವಾರ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ. ಇದು ಸಿಎಸ್​ಕೆ ತಂಡಕ್ಕೆ ದೊಡ್ಡ ಆಘಾತ ಎಂದರೆ ತಪ್ಪಾಗಲಾರದು. ಏಕೆಂದರೆ ತಂಡದಲ್ಲಿ ಯುವ ಆಟಗಾರರೇ ಹೆಚ್ಚಿದ್ದು, ಅವರಿಗೆ ಧೋನಿಯ ಉಪಸ್ಥಿತಿ ಅಗತ್ಯವಾಗಿತ್ತು. ಆದರೆ ಧೋನಿ ಗಾಯಕ್ಕೆ ತುತ್ತಾಗಿದ್ದು, ಎರಡು…

Read More

ಐಪಿಎಲ್ ಪಂದ್ಯದ ಟಿಕೆಟ್‌ಗಳು ಮುಗಿದು ಮೂರು ದಿನಗಳಾಗಿವೆ: ಮೋಸ ಹೋಗುವ ಮುನ್ನ ಎಚ್ಚರ ಎಂದ ಪೊಲೀಸರು

ಬೆಂಗಳೂರಿನ, ಮಾ.28: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ ಪಂದ್ಯಕ್ಕೆ ಭರಪೂರ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕ್ರಿಕೆಟ್ ಪ್ರೇಕ್ಷಕರು ಮತ್ತು ಆರ್‌ಸಿಬಿ ಅಭಿಮಾನಿಗಳಲ್ಲಿ ಹೆಚ್ಚಿನ ಉತ್ಸಾಹ ಕಂಡುಬರುತ್ತಿದ್ದು, ಪಂದ್ಯ ಆರಂಭಕ್ಕೂ ಗಂಟೆಗಳ ಮುಂಚೆಯೇ ಕ್ರೀಡಾಂಗಣದತ್ತ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಭದ್ರತಾ ದೃಷ್ಟಿಯಿಂದ ಹಲವಾರು ಹೊಸ ವ್ಯವಸ್ಥೆಗಳನ್ನು ಜಾರಿಗೆ ತರಲಾಗಿದೆ. ಪಂದ್ಯಕ್ಕೆ ಒಟ್ಟು 2000ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಕ್ರೀಡಾಂಗಣದ ಒಳಗೆ ಹಾಗೂ ಹೊರಗೆ ನಿಯೋಜಿಸಲಾಗಿದೆ. ಐದು ಡಿಸಿಪಿಗಳು ಮತ್ತು…

Read More

ಈ ಸಲಹೆ ಅನುಸರಿಸಿದರೆ ಎಸಿ, ಕೂಲರ್‌ ಇಲ್ಲದೆಯೂ ಸುಡು ಬೇಸಿಗೆಯಲ್ಲಿ ಮನೆಯನ್ನು ತಂಪಾಗಿರಿಸಬಹುದು

ಬೇಸಿಗೆಯಲ್ಲಿನ (summer) ಉರಿ ಬಿಸಲು, ಸೆಕೆಯ ಅಬ್ಬರಕ್ಕೆ ಜನ ಹೈರಾಣಾಗುತ್ತಿದ್ದಾರೆ.  ಅನೇಕ ಜನರು ಬಿಸಿಲ ಬೇಗೆ ಹಾಗೂ ಸೆಕೆಯಿಂದ ತಪ್ಪಿಸಿಕೊಳ್ಳಲು ಮನೆಯೊಳಗೆ ಹಗಲು ರಾತ್ರಿ ಎಸಿ, ಕೂಲರ್ ಆನ್‌ ಮಾಡಿಯೇ ಇಟ್ಟು ಬಿಡುತ್ತಾರೆ. ಇದರಿಂದ ಭಾರೀ ವಿದ್ಯುತ್‌ ಖರ್ಚು ಆಗುತ್ತೆ ಜೊತೆಗೆ ಕರೆಂಟ್‌ ಬಿಲ್‌ ಕೂಡ ಜಾಸ್ತಿ ಬರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕೆಲವೊಂದು ಸ್ಮಾರ್ಟ್‌ ಟಿಪ್ಸ್‌ಗಳನ್ನು ಪಾಲಿಸುವ ಮೂಲಕ ಎಸಿ, ಕೂಲರ್‌ ಇಲ್ಲದೆಯೂ ಈ ಸುಡು ಬೇಸಿಗೆಯಲ್ಲಿ ಮನೆಯನ್ನು ಕೂಲ್‌ ಆಗಿ ಇಟ್ಟುಕೊಳ್ಳಬಹುದು. ಎಸಿ ಇಲ್ಲದೆಯೂ  ಮನೆಯನ್ನು…

Read More

ಜಮೀರ್​ ಚುನಾವಣಾ ಪ್ರಚಾರಕ್ಕೆ ಬರುತ್ತಾರಾ ಎಂದಿದ್ದಕ್ಕೆ ಸಚಿವ ಮಲ್ಲಿಕಾರ್ಜುನ ಏನಂದ್ರು ನೋಡಿ

ದಾವಣಗೆರೆ, ಮಾರ್ಚ್​ 28: ಸಚಿವ ಜಮೀರ್​ ಅಹ್ಮದ್​ರನ್ನು ಪ್ರಚಾರಕ್ಕೆ ಬರುವಂತೆ ಆಹ್ವಾನಿಸಿದ್ದೇನೆ. ಇದೀಗ ಅವರು​ ಕೇರಳ ಚುನಾವಣಾ ಪ್ರಚಾರಕ್ಕೆ ಹೋಗಿದ್ದಾರೆ. ಚುನಾವಣಾ ಪ್ರಚಾರಕ್ಕೆ ಬರದಿದ್ದರೂ ಒಳ್ಳೆಯದೇ ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಮಲ್ಲಿಕಾರ್ಜುನ ಹೇಳಿದ್ದಾರೆ. ದಾವಣಗೆರೆ ದಕ್ಷಿಣ ಉಪಚುನಾವಣೆ ಹಿನ್ನೆಲೆ ಇಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್​​ ನಗರದ ವೆಂಕಾಭೋವಿ ಕಾಲೋನಿಯಲ್ಲಿರುವ ಸಾದಿಕ್ ಪೈಲ್ವಾನ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲವೂ ಸರಿ ಹೋಗಿದೆ, ನಾವು ಸಾದಿಕ್ ಪೈಲ್ವಾನ್ ಎಲ್ಲಾ ಒಂದೇ. ಎಲ್ಲಾ…

Read More

ಬೆಂಗಳೂರು: ಕಾಣೆಯಾಗಿದ್ದ ಅಸ್ಸಾಂ ಮೂಲದ ಬಾಲಕಿ ಶವವಾಗಿ ಪತ್ತೆ; ಅತ್ಯಾಚಾರವೆಸಗಿ ಮುಖ ಜಜ್ಜಿ ಕೊಲೆ ಮಾಡಿದ ಕಿರಾತಕರು!

ಬೆಂಗಳೂರು , ಮಾ.28 : ರಾಜಧಾನಿಯ ಹೊರವಲಯದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮನುಷ್ಯಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಗುರುವಾರ ಸಂಜೆ ಕಾಣೆಯಾಗಿದ್ದ ಅಸ್ಸಾಂ ಮೂಲದ ಅಪ್ರಾಪ್ತ ಬಾಲಕಿಯ ಶವ ಶನಿವಾರ (ಮಾ.28) ಬೋಳುಗುಟ್ಟದ ನೀಲಗಿರಿ ತೋಪಿನಲ್ಲಿ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಸ್ಸಾಂ ಮೂಲದ ಈ ಬಾಲಕಿ ವಿಟ್ಟಸಂದ್ರ ಸಮೀಪದ ಶೆಡ್ ಒಂದರಲ್ಲಿ ತನ್ನ ಪೋಷಕರ ಜೊತೆ ವಾಸವಿದ್ದಳು. ಗುರುವಾರ ಸಂಜೆ ಮನೆ ಬಳಿ ಆಟವಾಡುತ್ತಿದ್ದ ಬಾಲಕಿ ದಿಢೀರ್ ಕಾಣೆಯಾಗಿದ್ದಳು. ಪೋಷಕರು ಸುತ್ತಮುತ್ತ ಎಲ್ಲಾ ಕಡೆ ಹುಡುಕಾಡಿದರೂ ಮಗು ಪತ್ತೆಯಾಗಿರಲಿಲ್ಲ….

Read More

ಒಡಿಶಾದ ನಯಾಗಢದಲ್ಲಿ ಬಸ್ ಅಪಘಾತ; ಐವರು ಸಾವು, ಹಲವರಿಗೆ ಗಾಯ

ನಯಾಗಢ, ಮಾರ್ಚ್ 28: ಒಡಿಶಾದಲ್ಲಿ ಪ್ರವಾಸಿ ಬಸ್ ರಸ್ತೆಬದಿಯ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮದಿಂದ 5 ಜನ ಸಾವನ್ನಪ್ಪಿದ್ದಾರೆ, 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಒಡಿಶಾದ (Odisha News) ನಯಾಗಢ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಪ್ರವಾಸಿ ಬಸ್ ರಸ್ತೆಬದಿಯ ದೊಡ್ಡ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಹಿಳೆಯರು ಸೇರಿದಂತೆ 5 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮೃತರೆಲ್ಲರೂ ಬೆರ್ಹಾಂಪುರ್ ನಿವಾಸಿಗಳಾಗಿದ್ದು, ಚಾಲಕ ಕೂಡ ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ, ಬೆರ್ಹಾಂಪುರ್‌ನಿಂದ ಹರಿಶಂಕರ್‌ಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್…

Read More

ನಟ ಎಂದುಕೊಂಡು ಇನ್ಯಾರನ್ನೋ ಕಿಡ್ನ್ಯಾಪ್​​: ಹಲ್ಲೆ ಮಾಡಿ ಬೆದರಿಕೆ ಹಾಕಿ ಬಿಟ್ಟುಕಳಿಸಿದ ಖದೀಮರು

ಬೆಂಗಳೂರು, ಮಾರ್ಚ್​ 28: ವ್ಯಕ್ತಿ ಓರ್ವ ತನ್ನ ಪಾಡಿಗೆ ತಾನು ಚಹಾ ಕುಡಿಯುತ್ತಾ ಅಂಗಡಿಯೊಂದರ ಬಳಿ ನಿಂತಿದ್ದ. ಇದೇ ವೇಳೆ ಆಗಮಿಸಿದ ಮೂವರು ಕಿಡಿಗೇಡಿಗಳು ಆತನ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ. ನೋಡ ನೋಡುತ್ತಿದ್ದಂತೆ ವ್ಯಕ್ತಿಯನ್ನ ಆಟೋದಲ್ಲಿ ಹತ್ತಿಸಿಕೊಂಡಿದ್ದಾರೆ (Kidnape). ಸ್ವಲ್ಪ ಹೊತ್ತಲ್ಲೇ ಆಟೋದಿಂದ ಇಳಿಸಿ ಬೆದರಿಕೆ ಹಾಕಿ ಬಿಟ್ಟುಕಳುಹಿಸಿದ್ದಾರೆ. ಅಷ್ಟಕ್ಕೂ ಈ ವಿಚಿತ್ರ ಘಟನೆ ಬ್ಯಾಡರಹಳ್ಳಿಯ ನಾಗರಹೊಳೆ ಸರ್ಕಲ್​​ನಲ್ಲಿ ಎರಡು ದಿನದ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.​​ ನಡೆದಿದ್ದೇನು? ಶರತ್​​ ಕಿಡ್ನ್ಯಾಪ್​ ಆಗಿದ್ದ…

Read More

ಸತ್ತಿರಬಹುದು ಅಥವಾ ಕೆಟ್ಟ ಸ್ಥಿತಿಯಲ್ಲಿರಬಹುದು; ಇರಾನ್‌ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಟ್ರಂಪ್ ಶಾಕಿಂಗ್ ಹೇಳಿಕೆ

ವಾಷಿಂಗ್ಟನ್, ಮಾರ್ಚ್ 28: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿಯ ನಂತರ ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರ ಸ್ಥಳ ಮತ್ತು ಆರೋಗ್ಯದ ಬಗ್ಗೆ ಊಹಾಪೋಹಗಳು ಹರಿದಾಡುತ್ತಿವೆ. ಇದರ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಶಾಕಿಂಗ್ ಹೇಳಿಕೆ ನೀಡಿದ್ದು, ಮೊಜ್ತಬಾ ಖಮೇನಿ ಸತ್ತಿರಬಹುದು ಅಥವಾ ತುಂಬ ಕೆಟ್ಟ ಸ್ಥಿತಿಯಲ್ಲಿರಬಹುದು ಎಂದು ಹೇಳಿದ್ದಾರೆ. “ಅಮೆರಿಕದ ಮಿಲಿಟರಿ ಕಾರ್ಯಾಚರಣೆಯು ಇರಾನ್‌ನ ನಾಯಕತ್ವ ಮತ್ತು ಮಿಲಿಟರಿ ಶಕ್ತಿಯನ್ನು ನಾಶಪಡಿಸಿದೆ. ಇರಾನ್​ನ ನೂತನ ನಾಯಕ ಸತ್ತಿದ್ದಾರೆ…

Read More

Airport Jobs: ವಿಮಾನ ನಿಲ್ದಾಣದಲ್ಲಿ ಉದ್ಯೋಗ ಪಡೆಯುವುದು ಹೇಗೆ? ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ಭಾರತೀಯ ಯುವಜನತೆಯಲ್ಲಿ ವಿಮಾನ ನಿಲ್ದಾಣದ ಉದ್ಯೋಗಗಳ ಬಗ್ಗೆ ಯಾವಾಗಲೂ ಒಂದು ರೀತಿಯ ಕ್ರೇಜ್ ಇರುತ್ತದೆ. ಅತ್ಯಾಧುನಿಕ ಕೆಲಸದ ವಾತಾವರಣ, ವೃತ್ತಿಪರ ಗೌರವ ಮತ್ತು ಆಕರ್ಷಕ ವೇತನ ಶ್ರೇಣಿಯು ಈ ಕ್ಷೇತ್ರವನ್ನು ಯುವಕರ ನೆಚ್ಚಿನ ಆಯ್ಕೆಯನ್ನಾಗಿ ಮಾಡಿದೆ. ನೀವು ವಿಮಾನ ನಿಲ್ದಾಣದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸಿದ್ದರೆ, ಅಲ್ಲಿ ಲಭ್ಯವಿರುವ ವಿವಿಧ ಹುದ್ದೆಗಳು ಮತ್ತು ಅವುಗಳನ್ನು ಪಡೆಯುವ ಹಾದಿಯ ಬಗ್ಗೆ ಸವಿಸ್ತಾರವಾದ ಮಾಹಿತಿ ಇಲ್ಲಿದೆ ವಿಮಾನ ನಿಲ್ದಾಣದಲ್ಲಿ ಲಭ್ಯವಿರುವ ಪ್ರಮುಖ ಹುದ್ದೆಗಳು: ವಿಮಾನ ನಿಲ್ದಾಣದ ಕಾರ್ಯನಿರ್ವಹಣೆಯು ಕೇವಲ ವಿಮಾನ ಹಾರಾಟಕ್ಕೆ…

Read More