ಬೆಂಗಳೂರು, ಮಾರ್ಚ್ 28: ಐಪಿಎಲ್ ಮ್ಯಾಚ್ಗಳ ಟಿಕೆಟ್ (IPL Ticket)ವಿಚಾರವಾಗಿ ಸದನದಲ್ಲಿ ನಡೆದ ಚರ್ಚೆಯು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಶಾಸಕರು ತಮಗೆ ಐಪಿಎಲ್ ಟಿಕೆಟ್ಗಳನ್ನು ನೀಡಬೇಕೆಂದುದಕ್ಕೆ ಸ್ಪಂದಿಸಿರುವ ಕೆಎಸ್ಸಿಎ, ತಥಾಸ್ತು ಎಂದಿದೆ. ಸದನದಲ್ಲಿ ಚರ್ಚೆಯಾಗಿ ಕೇವಲ 24 ಗಂಟೆಗಳಲ್ಲಿಯೇ ಈ ರೀತಿಯ ಸ್ಪಂದನೆ ದೊರೆತಿರುವುದೂ ವಿವಾದವೆದ್ದಿದೆ. ಆದರೆ ಈ ಎಲ್ಲಾ ಜಟಾಪಟಿ ನಡುವೆ ಎಮ್ಎಲ್ಎ ಸುರೇಶ್ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟಿಕೆಟ್ಗಳನ್ನು ನಿರಾಕರಿಸಿದ್ದಾರೆ.
ಟಿಕೆಟ್ ಬೇಡವೆಂದು ಫೆಸ್ಬುಕ್ ಪೋಸ್ಟ್ ಹಂಚಿಕೊಂಡ ಶಾಸಕ
ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಮತ್ತು ವಿಪಕ್ಷ ನಾಯಕ ಅಶೋಕ್ ಐಪಿಎಲ್ ಟಿಕೆಟ್ಗಾಗಿ ಅಧಿವೇಶನದಲ್ಲಿ ಧ್ವನಿ ಎತ್ತಿದ ಬೆನ್ನಲ್ಲೇ ಕೆಎಸ್ಸಿಎ ಉದ್ಘಾಟನಾ ಪಂದ್ಯಕ್ಕೆ ಶಾಸಕರಿಗೆ 2+1 ಒಟ್ಟು 3 ಟಿಕೆಟ್ ನೀಡಲು ಕೆಎಸ್ಸಿಎ ಒಪ್ಪಿಕೊಂಡಿದೆ. ಸದ್ಯ ಒಬ್ಬ ಶಾಸಕರಿಗೆ ಎರಡು ಟಿಕೆಟ್ ನೀಡಲು ಒಪ್ಪಿರುವ ಕೆಎಸ್ಸಿಎ, ಮುಂದಿನ ಐಪಿಎಲ್ ಪಂದ್ಯಕ್ಕೆ 5 ಟಿಕೆಟ್ ನೀಡುವ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದೆ. ಇದೆಲ್ಲದರ ನಡುವೆ ವಿಜಯೇಂದ್ರ ಟಿಕೆಟ್ ನಿರಾಕರಿಸಿದ್ದಲ್ಲದೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಸುರೇಶ್ ಕುಮಾರ್ ಕೂಡ ತಮ್ಮ ಸಾಮಾಜಿಕ ಜಾಲತಾನದ ಪೋಸ್ಟ್ ಮೂಲಕ ತಾನು ಟಿಕೆಟ್ ತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಶಾಸಕರು ಐಪಿಎಲ್ ಟಿಕೆಟ್ ಸ್ವೀಕರಿಸುವುದನ್ನು ಖಂಡಿಸಿರುವ ಸುರೇಶ್ ಕುಮಾರ್ , ಮಾಧ್ಯಮಗಳಲ್ಲಿ ಸುದ್ದಿಯಾಗಿರುವಂತೆ ಪ್ರತಿಯೊಬ್ಬ ಶಾಸಕರಿಗೆ ಎರಡು ಟಿಕೆಟ್ ಹಾಗೂ ಮುಂದಿನ ದಿನಗಳಲ್ಲಿ ಐದು ಟಿಕೆಟ್ ನೀಡುವ ವಿಷಯಕ್ಕೆ ತಮ್ಮ ಸ್ಪಷ್ಟ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಸರಿಯಾದ ನಿರ್ಧಾರವಲ್ಲ ಎಂದ ಶಾಸಕ, ವಿಧಾನಸಭೆಯಲ್ಲಿ ಚರ್ಚೆ ನಡೆದ 24 ಗಂಟೆಗಳಲ್ಲಿ ಸರ್ಕಾರ ತಕ್ಷಣ ಘೋಷಣೆ ಮಾಡಿರುವುದು ಆಶ್ಚರ್ಯಕರ. ಜನಪ್ರತಿನಿಧಿಗಳ ವಿಷಯ ಬಂದಾಗ ಮಾತ್ರ ಕಾರ್ಯ ಕೈಗೊಳ್ಳುವುದರಿಂದ ಸಾರ್ವಜನಿಕ ನಂಬಿಕೆಗೆ ಹೊಣೆ ಬರುತ್ತದೆ. ಆ ಟಿಕೆಟ್ ಅಥವಾ ಪಾಸ್ಗಳನ್ನು ನಾನು ಸವಿನಯವಾಗಿ ನಿರಾಕರಿಸುತ್ತೇನೆ. ವಿಐಪಿ ಸಂಸ್ಕೃತಿ ಮುಂದುವರಿದಂತೆ ರಾಜಕಾರಣಿಗಳು ಜನರ ದೃಷ್ಟಿಯಲ್ಲಿ ಇನ್ನಷ್ಟು ಕನಿಷ್ಠರಾಗುತ್ತಾರೆ ಎಂದು ಬರೆದುಕೊಂಡಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಮಾವ ಹಾಗೂ ನಿರ್ಮಾಪಕ ವಶು ಭಗ್ನಾನಿ ಇತ್ತೀಚೆಗೆ ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ. ಸಿನಿಮಾ ನಿರ್ಮಾಣ ಮಾಡಿ ಅವರು ಸಾಕಷ್ಟು ಕೈ ಸುಟ್ಟುಕೊಂಡಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಅವರ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ಫ್ಲಾಪ್ ಆಗಿವೆ. ಈ ಕಾರಣಕ್ಕೆ ಹಣ ಸಂಪಾದನೆಗೆ ವಶು ಅವರು ರಿಯಲ್ ಎಸ್ಟೇಟ್ ಮೇಲೆ ಗಮನ ಹರಿಸಿದ್ದಾರೆ. ಅವರು ಈಗ ಖ್ಯಾತ ಕ್ರಿಕೆಟರ್ಗೆ ಅಪಾರ್ಟ್ಮೆಂಟ್ ಮಾರಾಟ ಮಾಡಿದ್ದಾರೆ.
ವಶು ಅವರದ್ದು ಬಾಲಿವುಡ್ನಲ್ಲಿ ದೊಡ್ಡ ಹೆಸರು. ಅವರ ನಿರ್ಮಾಣ ಸಂಸ್ಥೆಯಿಂದ ‘ಕೂಲಿ ನಂಬರ್ 1’, ‘ಪ್ಯಾರ್ ಕಿಯಾ ತೋ ಡರ್ನಾ ಕ್ಯಾ’, ‘ಬಿವಿ ನಂಬರ್ 1’, ‘ಮಿಷನ್ ರಾಣಿಗಂಜ್’ ಮೊದಲಾದ ಚಿತ್ರಗಳನ್ನು ಪ್ರೊಡ್ಯೂಸ್ ಮಾಡಿದ್ದಾರೆ. ಆದರೆ, ಇತ್ತೀಚೆಗೆ ಅವರು ನಿರ್ಮಾಣ ಮಾಡಿದ ಸಿನಿಮಾಗಳು ನೆಲಕಚ್ಚಿವೆ. ಹೀಗಾಗಿ, ಪ್ರಾಪರ್ಟಿ ಸಿದ್ಧಪಡಿಸಿ ಅದನ್ನು ಮಾರುವ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ
ಜಾಕಿ ಭಗ್ನಾನಿ, ವಶು ಭಗ್ನಾನಿ ಹಾಗೂ ಪೂಜಾ ಭಗ್ನಾನಿ ಅವರಿಂದ ಖ್ಯಾತ ಕ್ರಿಕೆಟರ್ ಶುಭ್ಮನ್ ಗಿಲ್ ಅವರು 20.7 ಕೋಟಿ ರೂಪಾಯಿ ಕೊಟ್ಟು ಈ ಅಪಾರ್ಟ್ಮೆಂಟ್ ಖರೀದಿ ಮಾಡಿದ್ದಾರೆ. ಜುಹು ಭಾಗದಲ್ಲಿರೋ ಅಪಾರ್ಟ್ಮೆಟ್ನ 12ನೇ ಅಂತಸ್ತಿನಲ್ಲಿ ಇವರು ಮನೆ ಖರೀದಿ ಮಾಡಿದ್ದಾರೆ. ಇದು 3,369 ಅಡಿ ಇದೆ.
ವಶು ಅವರು ಸಿನಿಮಾ ರಂಗ ತೊರೆಯುತ್ತಾರಾ? ಖಂಡಿತವಾಗಿಯೂ ಇಲ್ಲ. ವಶು ಸಿನಿಮಾಗಳನ್ನು ನಿರ್ಮಾಣ ಮಾಡುವ ಕೆಲಸ ಮುಂದುವರಿಸುತ್ತಿದ್ದಾರೆ. ಕೆಲವು ಸಿನಿಮಾಗಳನ್ನು ನಿರ್ಮಾಣ ಮಾಡುವ ಕೆಲಸವನ್ನು ಇವರು ಮಾಡುತ್ತಿದ್ದಾರೆ.
ವಶು ಭಗ್ನಾನಿ ನಿರ್ಮಾಣದ ‘ಮಿಷನ್ ರಾಣಿಗಂಜ್’ ಸಿನಿಮಾ ಹೀನಾಯವಾಗಿ ಸೋತಿತ್ತು. ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ನಟಿಸಿದ್ದರು. ಈ ಚಿತ್ರದಲ್ಲಿ ನಟಿಸಿದ್ದಕ್ಕೆ ಅಕ್ಷಯ್ಗೆ ಸಂಭಾವನೆ ನೀಡಿರಲಿಲ್ಲ ವಶು. ಈ ಬಗ್ಗೆ ಅಕ್ಷಯ್ ಕುಮಾರ್ ಅವರು ಮಾತನಾಡಿದ್ದರು. ಆದಾಗ ಸಂಭಾವನೆ ಕೊಡಿ ಎಂದಿದ್ದರಂತೆ.
ಮೈಸೂರು, ಮಾರ್ಚ್ 28: ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಪೊಲೀಸರು 12 ಕೋಟಿ ರೂಪಾಯಿ ಮೌಲ್ಯದ ಡ್ರಗ್ (Drugs) ದಾಸ್ತಾನು ಪತ್ತೆ ಮಾಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಪುರ ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.
ಆಸ್ಪತ್ರೆ ಬಳಿಯೇ ನಡೀತಿತ್ತು ಚಟುವಟಿಕೆ
ಮೈಸೂರು ಸಿದ್ಧಿಖಿ ಮೊಹಲ್ಲಾ ನಿವಾಸಿ ಮೊಹಮ್ಮದ್ ಇರ್ಫಾನ್ ಮತ್ತು ಹುಣಸೂರಿನ ಮೊಹಮ್ಮದ್ ಇರ್ಫಾನ್ ಆರೋಪಿಗಳಾಗಿದ್ದು, ಇವರ ಜಮೀನಿನಲ್ಲಿ ಸಿಂಥೆಟಿಕ್ ಡ್ರಗ್ ತಯಾರಿಕೆ ಮತ್ತು ಸಂಗ್ರಹಣೆ ನಡೆಸಲಾಗುತ್ತಿದ್ದುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ದಾಸನಪುರ ಗ್ರಾಮದಲ್ಲಿ ಇರುವ ಪಕ್ಕದ ಆಸ್ಪತ್ರೆ ಕಾವಲ್ನಲ್ಲಿ ಇದ್ದ ಒಂಟಿ ಮನೆಯಲ್ಲಿ ಈ ಚಟುವಟಿಕೆ ನಡೆಯುತ್ತಿತ್ತು ಎನ್ನಲಾಗಿದೆ. ಹುಣಸೂರು ಟೌನ್ ರೆಹಮತ್ ಮೊಹಲ್ಲಾ ನಿವಾಸಿಯ ಶೆಡ್ನಲ್ಲಿ ಕಚ್ಚಾ ವಸ್ತುಗಳನ್ನು ಸಂಗ್ರಹಿಸಿಡಲಾಗಿತ್ತು ಎಂದು ತಿಳಿದುಬಂದಿದೆ.
ಪೊಲೀಸರು ಜಪ್ತು ಮಾಡಿದ ವಸ್ತುಗಳು
ಪೊಲೀಸರು 7.35 ಕೆ.ಜಿ ತೂಕದ ಮೆಫೆಡ್ರೋನ್ ಮತ್ತು 41 ಕೆ.ಜಿ ತೂಕದ ಡ್ರಗ್ಸ್ ಪ್ರಿಕರ್ಸರ್ ವಸ್ತುಗಳನ್ನು ವಶಪಡಸಿಕೊಂಡಿದ್ದು, ಒಟ್ಟು 48 ಕೆ.ಜಿ ತೂಕದ ಡ್ರಗ್ಸ್ ಪದಾರ್ಥಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳು ಈ ರೀತಿಯಾಗಿ ಸಿಂಥೆಟಿಕ್ ಡ್ರಗ್ಸ್ ತಯಾರಣೆ ಮತ್ತು ವಿತರಣೆ ಮಾಡುತ್ತಿದ್ದಂತೆ ಪೊಲೀಸರು ವರದಿ ನೀಡಿದ್ದಾರೆ. ಪ್ರಕರಣವನ್ನು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಬೆಂಗಳೂರು: ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಕಂದಾಯ ಇಲಾಖೆಯು ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಉಪ ತಹಶೀಲ್ದಾರ್ ಮತ್ತು ಕಾನೂನು ಬೆರಳಚ್ಚುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಹುದ್ದೆಗಳ ವಿವರ ಮತ್ತು ಸಂಬಳ:
ಕಂದಾಯ ಇಲಾಖೆಯಲ್ಲಿ ಒಟ್ಟು 3 ಹುದ್ದೆಗಳು ಖಾಲಿ ಇದ್ದು, ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಈ ಹುದ್ದೆಗಳಿಗೆ ಮಾಸಿಕ ರೂ. 22,000 ರಿಂದ 55,000/- ವರೆಗೆ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ವಿಶೇಷವಾಗಿ ಐಎಂಎ (IMA) ಮತ್ತು ಇತರ ಕಂಪನಿ ವಂಚನೆ ಪ್ರಕರಣಗಳ ವಿಶೇಷ ಅಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದ ಕಚೇರಿಯಲ್ಲಿ ಕೆಲಸ ಮಾಡಲು ಈ ನೇಮಕಾತಿ ನಡೆಯುತ್ತಿದೆ.
ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:
ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ LLB, BE/B.Tech (CSE/IS), ಅಥವಾ PG ಡಿಪ್ಲೊಮಾ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಅನುಭವ ಮತ್ತು ಅರ್ಹತೆಗೆ ಅನುಗುಣವಾಗಿ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ಇನ್ನು ವಯೋಮಿತಿಯ ವಿಷಯಕ್ಕೆ ಬಂದರೆ, ಅಭ್ಯರ್ಥಿಯ ಗರಿಷ್ಠ ವಯಸ್ಸು 65 ವರ್ಷಗಳು ಮೀರಿರಬಾರದು ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ:
ಈ ಹುದ್ದೆಗಳಿಗೆ ಆಸಕ್ತರು ಆಫ್ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅದರೊಂದಿಗೆ ಅಗತ್ಯವಿರುವ ಸ್ವಯಂ-ದೃಢೀಕರಿಸಿದ ದಾಖಲೆಗಳನ್ನು (ವಯಸ್ಸಿನ ಪುರಾವೆ, ಶೈಕ್ಷಣಿಕ ದಾಖಲೆಗಳು, ಅನುಭವದ ಪತ್ರ ಇತ್ಯಾದಿ) ಲಗತ್ತಿಸಬೇಕು. ಭರ್ತಿ ಮಾಡಿದ ಅರ್ಜಿಯನ್ನು ಏಪ್ರಿಲ್ 04 ರೊಳಗೆ “ವಿಶೇಷ ಅಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದ ಕಚೇರಿ (ಐಎಂಎ ಮತ್ತು ಇತರ ಕಂಪನಿ ವಂಚನೆ ಪ್ರಕರಣಗಳು)” ಈ ವಿಳಾಸಕ್ಕೆ ತಲುಪುವಂತೆ ಕಳುಹಿಸಬೇಕು.
ನವದೆಹಲಿ, ಮಾರ್ಚ್ 28: ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ದೆಹಲಿಗೆ (Delhi) ತೆರಳುತ್ತಿದ್ದ ಇಂಡಿಗೋ ವಿಮಾನವೊಂದು (IndiGo Flight) ಎಂಜಿಜಿನ್ ವೈಫಲ್ಯದ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿದ್ದ ಎಲ್ಲಾ 161 ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದು, ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.
ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ ಘಟನೆಯ ವಿವರ
ಇಂಡಿಗೋ ಸಂಸ್ಥೆಯ ಬೋಯಿಂಗ್ 737 (ವಿಮಾನ ಸಂಖ್ಯೆ 6E 579) ಶನಿವಾರ ಬೆಳಗ್ಗೆ ವಿಶಾಖಪಟ್ಟಣಂನಿಂದ ದೆಹಲಿಗೆ ಪ್ರಯಾಣ ಬೆಳೆಸಿತ್ತು. ವಿಮಾನವು ದೆಹಲಿ ವಿಮಾನ ನಿಲ್ದಾಣವನ್ನು ತಲುಪುವ ಕೆಲವೇ ನಿಮಿಷಗಳ ಮೊದಲು ಎಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೈಲಟ್ಗಳು ಎಮರ್ಜೆನ್ಸಿ ಲ್ಯಾಂಡಿಂಗ್ಗೆ ಅನುಮತಿ ಕೋರಿದ್ದಾರೆ.
ಬೆಳಗ್ಗೆ 10:39ಕ್ಕೆ ವಿಮಾನ ನಿಲ್ದಾಣದಲ್ಲಿ ‘ಫುಲ್ ಎಮರ್ಜೆನ್ಸಿ’ ಘೋಷಿಸಲಾಯಿತು. ಮುನ್ನೆಚ್ಚರಿಕಾ ಕ್ರಮವಾಗಿ ಅಗ್ನಿಶಾಮಕ ದಳದ ವಾಹನಗಳು ಮತ್ತು ತುರ್ತು ಚಿಕಿತ್ಸಾ ತಂಡಗಳು ರನ್ವೇ ಬಳಿ ಸನ್ನದ್ಧವಾಗಿದ್ದವು. ಅದೃಷ್ಟವಶಾತ್, ಬೆಳಗ್ಗೆ 10:54ಕ್ಕೆ ವಿಮಾನವು ಸುರಕ್ಷಿತವಾಗಿ ಭೂಸ್ಪರ್ಶ ಮಾಡಿತು.
ಟರ್ಕಿ ಸಂಸ್ಥೆಯ ವಿಮಾನ
ಈ ವಿಮಾನವನ್ನು ಇಂಡಿಗೋ ಸಂಸ್ಥೆಯು ಟರ್ಕಿಯ ‘ಕೊರೆಂಡನ್ ಏರ್ಲೈನ್ಸ್’ನಿಂದ ಗುತ್ತಿಗೆ ಆಧಾರದ ಮೇಲೆ ಪಡೆದುಕೊಂಡಿತ್ತು. ಸದ್ಯ ವಿಮಾನವನ್ನು ತಪಾಸಣೆಗೆ ಒಳಪಡಿಸಲಾಗಿದೆ. ಪ್ರಯಾಣಿಕರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ ಎಂದು ಇಂಡಿಗೋ ತಿಳಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಒಂದೆಡೆ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು… ಮತ್ತೊಂದೆಡೆ ಬಲಿಷ್ಠ ದಾಂಡಿಗರ ಸನ್ರೈಸರ್ಸ್ ಹೈದರಾಬಾದ್… ಎರಡು ಮದಗಜಗಳ ಕಾಳಗದೊಂದಿಗೆ ಐಪಿಎಲ್ ಸೀಸನ್-19 ಗೆ ಚಾಲನೆ ದೊರೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಮಾ.28) ನಡೆಯಲಿರುವ ಐಪಿಎಲ್ನ ಉದ್ಘಾಟನಾ ಪಂದ್ಯದಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಇಂತಹದೊಂದು ನಿರೀಕ್ಷೆಗೆ ಕಾರಣ ಉಭಯ ತಂಡಗಳಲ್ಲಿರುವ ಸ್ಟಾರ್ ಆಟಗಾರರ ದಂಡು.
ಏಕೆಂದರೆ ಆರ್ಸಿಬಿ ತಂಡದಲ್ಲಿ ಸ್ಟಾರ್ ಬ್ಯಾಟರ್ಗಳಿದ್ದರೆ, ಎಸ್ಆರ್ಹೆಚ್ ತಂಡದಲ್ಲಿ ಹೊಡಿಬಡಿ ದಾಂಡಿಗರ ದಂಡೇ ಕಾಣಿಸಿಕೊಂಡಿದೆ. ಹೀಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ರನ್ ಮಳೆಯನ್ನು ನಿರೀಕ್ಷಿಸಬಹುದು.
ಕಳೆದ ಸೀಸನ್ನಲ್ಲಿ ಆರ್ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಅತ್ಯುತ್ತಮ ಆರಂಭ ಒದಗಿಸಿದ್ದರು. ಈ ಆರಂಭವನ್ನು ಬೃಹತ್ ಮೊತ್ತವನ್ನಾಗಿ ಪರಿವರ್ತಿಸುವಲ್ಲಿ ರಜತ್ ಪಾಟಿದಾರ್, ಟಿಮ್ ಡೇವಿಡ್, ರೊಮಾರಿಯೊ ಶೆರ್ಫಡ್ ಹಾಗೂ ಜಿತೇಶ್ ಶರ್ಮಾ ಯಶಸ್ವಿಯಾಗಿದ್ದರು.
ಇತ್ತ ಎಸ್ಆರ್ಹೆಚ್ ತಂಡದ ಶಕ್ತಿ ಬಿರುಸಿನ ಬ್ಯಾಟಿಂಗ್. ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ ಮತ್ತು ಹೆನ್ರಿಕ್ ಕ್ಲಾಸೆನ್ ಹೊಡಿಬಡಿ ಬ್ಯಾಟಿಂಗ್ಗೆ ಹೆಸರುವಾಸಿ. ಇದೀಗ ಲಿಯಾಮ್ ಲಿವಿಂಗ್ಸ್ಟೋನ್ ಕೂಡ ತಂಡಕ್ಕೆ ಸೇರ್ಪಡೆಯಾಗಿರುವುದರಿಂದ ಬೃಹತ್ ಮೊತ್ತವನ್ನು ನಿರೀಕ್ಷಿಸಬಹುದು.
ದುರ್ಬಲ ಬೌಲಿಂಗ್ ಪಡೆ:
ಉಭಯ ತಂಡಗಳಲ್ಲಿ ಸ್ಟಾರ್ ಬ್ಯಾಟರ್ಗಳಿದ್ದರೂ ಬೌಲಿಂಗ್ ವಿಭಾಗವು ದುರ್ಬಲವಾಗಿದೆ. ಅಂದರೆ ಆರ್ಸಿಬಿ ಪರ ಭುವನೇಶ್ವರ್ ಕುಮಾರ್ ಬಿಟ್ಟರೆ, ಅತ್ಯುತ್ತಮ ಎನಿಸಿಕೊಳ್ಳುವಂತಹ ಮತ್ತೋರ್ವ ವೇಗಿ ಇಲ್ಲ. ಇನ್ನು ಸ್ಪಿನ್ನರ್ ಆಗಿ ಕೃನಾಲ್ ಪಾಂಡ್ಯ ಅವರನ್ನೇ ಆರ್ಸಿಬಿ ನೆಚ್ಚಿಕೊಂಡಿದೆ.
ಅತ್ತ ಸನ್ರೈಸರ್ಸ್ ಹೈದರಾಬಾದ್ ಕಥೆ ಕೂಡ ಬೇರೆಯಲ್ಲ. ಎಸ್ಆರ್ಹೆಚ್ ತಂಡದ ಪ್ರಮುಖ ವೇಗಿಯಾಗಿ ಕಾಣಿಸಿಕೊಳ್ಳುತ್ತಿರುವುದು ಮಾಜಿ ಆರ್ಸಿಬಿ ಬೌಲರ್ ಹರ್ಷಲ್ ಪಟೇಲ್. ಇನ್ನು ಸ್ಪಿನ್ನರ್ ಜವಾಬ್ದಾರಿ ಲಿಯಾಮ್ ಲಿವಿಂಗ್ಸ್ಟೋನ್ ಹೆಗಲೇರಲಿದೆ.
ಇಬ್ಬರು ಪ್ರಮುಖರು ಅಲಭ್ಯ:
ಆರ್ಸಿಬಿ ತಂಡದ ಪ್ರಮುಖ ವೇಗಿ ಜೋಶ್ ಹೇಝಲ್ವುಡ್ ಫಿಟ್ನೆಸ್ ಕಾರಣದಿಂದಾಗಿ ಮೊದಲ ಪಂದ್ಯದಿಂದ ಹೊರಗುಳಿಯುತ್ತಿದ್ದಾರೆ. ಇದೇ ಕಾರಣದಿಂದಾಗಿ ಆರ್ಸಿಬಿ ತಂಡದ ಬೌಲಿಂಗ್ ವಿಭಾಗ ದುರ್ಬಲವಾಗಿದೆ ಎನ್ನಬಹುದು.
ಅತ್ತ ಸನ್ರೈಸರ್ಸ್ ಹೈದರಾಬಾದ್ ತಂಡದಲ್ಲಿರುವ ಏಕೈಕ ಅನುಭವಿ ವೇಗಿ ಪ್ಯಾಟ್ ಕಮಿನ್ಸ್ ಕೂಡ ಫಿಟ್ನೆಸ್ ಸಮಸ್ಯೆ ಕಾರಣ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗುತ್ತಿದ್ದಾರೆ. ಹೀಗಾಗಿ ಆರ್ಸಿಬಿ ತಂಡಕ್ಕಿಂತ ಎಸ್ಆರ್ಹೆಚ್ ತಂಡದ ಬೌಲಿಂಗ್ ವಿಭಾಗ ಅತ್ಯಂತ ದುರ್ಬಲವಾಗಿದೆ ಎನ್ನಬಹುದು.
ಮುಖಾಮುಖಿ ದಾಖಲೆ:
ಆರ್ಸಿಬಿ ಮತ್ತು ಎಸ್ಆರ್ಹೆಚ್ ತಂಡಗಳು ಈವರೆಗೆ 26 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಸನ್ರೈಸರ್ಸ್ ಹೈದರಾಬಾದ್ ತಂಡವು 13 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಇನ್ನು ಆರ್ಸಿಬಿ ಗೆದ್ದಿರುವುದು 11 ಪಂದ್ಯಗಳಲ್ಲಿ ಮಾತ್ರ. ಈ ಅಂಕ ಅಂಶಗಳನ್ನು ಗಮನಿಸಿದರೆ ಆರ್ಸಿಬಿಗಿಂತ ಸನ್ರೈಸರ್ಸ್ ಹೈದರಾಬಾದ್ ತಂಡವು ಮೇಲುಗೈ ಹೊಂದಿದೆ.
ಇದಾಗ್ಯೂ ಕಳೆದ 5 ಪಂದ್ಯಗಳ ಮುಖಾಮುಖಿಯಲ್ಲಿ ಆರ್ಸಿಬಿ 3 ಬಾರಿ ಎಸ್ಆರ್ಹೆಚ್ ತಂಡಕ್ಕೆ ಸೋಲುಣಿಸಿದೆ. ಹೀಗಾಗಿ ಪ್ರಸ್ತುತ ಆರ್ಸಿಬಿ ತಂಡ ಸನ್ರೈಸರ್ಸ್ ತಂಡಕ್ಕಿಂತ ಬಲಿಷ್ಠವಾಗಿದೆ ಎನ್ನಬಹುದು.
ಇನ್ನು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉಭಯ ತಂಡಗಳು 8 ಬಾರಿ ಮುಖಾಮುಖಿಯಾಗಿದ್ದಾರೆ. ಈ ವೇಳೆ ಆರ್ಸಿಬಿ ತಂಡವು 5 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದೆ. ಅಂದರೆ ತವರು ಮೈದಾನದಲ್ಲಿ ಎಸ್ಆರ್ಹೆಚ್ ವಿರುದ್ಧ ಆರ್ಸಿಬಿ ಉತ್ತಮ ದಾಖಲೆ ಹೊಂದಿದೆ.
ಹೀಗಾಗಿ ಇಂದಿನ ಪಂದ್ಯದಲ್ಲೂ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವೇ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ.
ತುಮಕೂರು, ಮಾರ್ಚ್ 28: ಶಿರಾ ತಾಲ್ಲೂಕಿನ ಸಾಕ್ಷಿಹಳ್ಳಿಯಲ್ಲಿ ಕುಂಬಾರಳ್ಳಿ ಸ್ತ್ರೀಶಕ್ತಿ ಸಂಘದ ಮಹಿಳೆಯರು ಅಕ್ರಮ ಮದ್ಯ ಮಾರಾಟಕ್ಕೆ ಪ್ರತಿಭಟನೆ ನಡೆಸಿದ್ದಾರೆ. ಬೆಳಿಗ್ಗೆ 6 ಗಂಟೆಗೆ ಚಿಲ್ಲರೆ ಅಂಗಡಿಗಳಿಗೆ ಮದ್ಯ ಸರಬರಾಜು ಮಾಡುತ್ತಿರುವ MSIL ಮದ್ಯದ ಅಂಗಡಿಯನ್ನು ಮಹಿಳೆಯರು ಮುತ್ತಿಗೆ ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಘದ ಮಹಿಳೆಯರು, ಅಕ್ರಮ ಮಾರಾಟ ನಿಲ್ಲಿಸದಿದ್ದರೆ ಅಂಗಡಿಗೆ ಬೀಗ ಹಾಕುವ ಮತ್ತು ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ.
ಬಾಗಲಕೋಟೆ, ಮಾರ್ಚ್ 28: ಬಾಗಲಕೋಟೆ ಉಪಚುನಾವಣೆ (By election) ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದ್ದು, ರಾಜಕೀಯ ಪಕ್ಷಗಳು ತಮ್ಮದೇ ಆದ ತಂತ್ರಗಳನ್ನು ಅನುಸರಿಸುತ್ತಿವೆ. ಈ ಸಂದರ್ಭದಲ್ಲಿ, ರಾಜ್ಯದ ಪ್ರಮುಖ ಅಲ್ಪಸಂಖ್ಯಾತ ನಾಯಕರೆಂದು ಗುರುತಿಸಿಕೊಂಡಿರುವ ವಕ್ಫ್ ಸಚಿವ ಜಮೀರ್ ಅಹ್ಮದ್ ಅವರಿಗೆ ಬಾಗಲಕೋಟೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಇಲ್ಲಿನ ಅಂಜುಮನ್ ಸಮಿತಿಯ ಪದಾಧಿಕಾರಿಗಳು ಹಾಗೂ ಬೆಂಬಲಿಗರು ಜಮೀರ್ ಅಹ್ಮದ್ ಅವರು ಪ್ರಚಾರಕ್ಕೆ ಬರುವುದನ್ನು ವಿರೋಧಿಸಿ ‘ಗೋ ಬ್ಯಾಕ್ ಜಮೀರ್ ಅಹ್ಮದ್’ ಅಭಿಯಾನ ನಡೆಸಿದ್ದಾರೆ.
ಈ ವಿರೋಧಕ್ಕೆ ಪ್ರಮುಖ ಕಾರಣ, ಅಂಜುಮನ್ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದ ಬೆಳವಣಿಗೆಗಳು. ಹಿಂದೆ ಇದ್ದ ಅಧ್ಯಕ್ಷರನ್ನು ಅವಿಶ್ವಾಸ ಗೊತ್ತುವಳಿ ಮೂಲಕ ಬದಲಾಯಿಸಿ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗಿದ್ದು, ಅದರ ಅನುಮೋದನೆಗಾಗಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ಕಳುಹಿಸಲಾಗಿತ್ತು. ಆದರೆ, ವಕ್ಫ್ ಸಚಿವರ ಇಲಾಖೆಯಿಂದ ಈ ಕೆಲಸಕ್ಕೆ ಒಂಬತ್ತು ತಿಂಗಳು ವಿಳಂಬವಾಗಿದೆ ಎಂದು ಆರೋಪಿಸಲಾಗಿದೆ. ಬಡ ಸಂಸ್ಥೆಯಾದ ಅಂಜುಮನ್ಗೆ ಅನ್ಯಾಯ ಮಾಡಲಾಗಿದೆ ಎಂಬುದು ಮುಸ್ಲಿಂ ಮುಖಂಡರ ಆರೋಪವಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಮನಸ್ಸು ಹಾಗೂ ಮೈಂಡ್ ಎರಡನ್ನು ರಿಲ್ಯಾಕ್ಸ್ ಆಗಿಸಲು ಕೆಲವರು ತಮ್ಮ ಇಷ್ಟದ ಹವ್ಯಾಸದತ್ತ ಮುಖ ಮಾಡುತ್ತಾರೆ. ಆದರೆ, ಈ ಆಪ್ಟಿಕಲ್ ಇಲ್ಯೂಷನ್ನಂತಹ (Optical Illusion) ಒಗಟಿನ ಚಿತ್ರಗಳು ನಿಮ್ಮ ಮೈಂಡ್ ರಿಲ್ಯಾಕ್ಸ್ ಆಗಿಸುತ್ತದೆ. ಅಷ್ಟೇ ಅಲ್ಲದೇ, ಈ ಮೂಲಕ ನಿಮ್ಮ ದೃಷ್ಟಿ ಸಾಮರ್ಥ್ಯ ಎಷ್ಟಿದೆ ಎಂದು ಪರೀಕ್ಷಿಸಿಕೊಳ್ಳಬಹುದು. ಇದೀಗ ಮೆದುಳಿನ ಸಾಮರ್ಥ್ಯಕ್ಕೆ ಸವಾಲೊಡ್ಡುವ ಒಗಟಿನ ಚಿತ್ರವೊಂದು ವೈರಲ್ ಆಗಿದೆ. ಈ ಚಿತ್ರದಲ್ಲಿ ಬಾಳೆ ಹಣ್ಣು ಎಲ್ಲಿದೆ ಎಂದು ಕಂಡು ಹಿಡಿಯುವುದೇ ಇಲ್ಲಿರುವ ಸವಾಲು. 9 ಸೆಕೆಂಡುಗಳೊಳಗೆ ಈ ಗುಪ್ತ ವಸ್ತುವನ್ನು ಕಂಡು ಹಿಡಿಯಬೇಕು.
ಈ ಚಿತ್ರದಲ್ಲಿ ಏನಿದೆ?
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಚಿತ್ರದಲ್ಲಿ ರಸ್ತೆ ದುರಸ್ತಿ ಕೆಲಸ ಆಗುತ್ತಿರುವುದನ್ನು ಕಾಣಬಹುದು. ಹೀಗಾಗಿ ರಸ್ತೆ ತುಂಬಾ ಜೆಸಿಬಿಗಳು ಮತ್ತು ಲೋಡರ್ಗಳಿವೆ. ಇದೆಲ್ಲದರ ನಡುವೆ ಬಾಳೆಹಣ್ಣು ಕೂಡ ಇದೆ. ನೀವು ಕಣ್ಣು ಬಿಟ್ಟು ಈ ಚಿತ್ರ ನೋಡಿದ್ರೆ ಬಾಳೆ ಹಣ್ಣು ನಿಮ್ಮ ಕಣ್ಣಿಗೆ ಕಾಣಿಸುತ್ತದೆ. ಈ ಸವಾಲು ಸ್ವೀಕರಿಸಲು ನೀವು ರೆಡಿ ಇದ್ದೀರಾ.
ಕಣ್ಣು ಅಗಲಿಸಿ ನೋಡಿದರೂ ಬಾಳೆಹಣ್ಣು ನಿಮ್ಮ ಕಣ್ಣಿಗೆ ಕಾಣಿಸಿಲ್ಲವೇ. ನೂರರಲ್ಲಿ ಹತ್ತು ಜನರಿಗೆ ಮಾತ್ರ ಈ ಗುಪ್ತ ವಸ್ತುವನ್ನು ಕಂಡು ಹಿಡಿಯಲು ಸಾಧ್ಯ. ನಿಮಗೂ ಟ್ರಿಕ್ಕಿ ಒಗಟು ಬಿಡಿಸಲು ಸಾಧ್ಯವಾಗಿಲ್ಲ ಎಂದಾದರೆ ನಾವೇ ಉತ್ತರ ಹೇಳುತ್ತೇವೆ. ಈ ಕೆಳಗಿನ ಚಿತ್ರದಲ್ಲಿ ಬಾಳೆ ಹಣ್ಣು ಎಲ್ಲಿದೆ ಎಂದು ಗುರುತಿಸಿದ್ದೇವೆ ನೋಡಿ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮೈಸೂರು, ಮಾರ್ಚ್ 28: ಸರ್ಕಾರಿ ಕಚೇರಿಗಳು, ಶಾಲೆಗಳು ಹಾಗೂ ನ್ಯಾಯಾಲಯಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಕಳೆದ ಕೆಲವು ದಿನಗಳಿಂದ ಬೆದರಿಕೆ (Bomb Threat) ಸಂದೇಶ ಕಳುಹಿಸುತ್ತಿದ್ದ ಆರೋಪಿಯನ್ನು ದೆಹಲಿ ಪೊಲೀಸರ (Delhi Police) ವಿಶೇಷ ತಂಡ ಮೈಸೂರಿನಲ್ಲಿ ಬಂಧಿಸಿದೆ. ಮೈಸೂರು (Mysuru) ನಗರದಲ್ಲಿ ಅಡಗಿ ಕುಳಿತಿದ್ದ ಶ್ರೀನಿವಾಸ್ ಎಂಬಾತನನ್ನು ಬಂಧಿಸಲಾಗಿದ್ದು, ದೆಹಲಿ ಪೊಲೀಸರ ತಂಡ ಆತನನ್ನು ಹೆಚ್ಚಿನ ವಿಚಾರಣೆಗಾಗಿ ದೆಹಲಿಗೆ ಕರೆದೊಯ್ಯಲಿದೆ. ಆರೋಪಿಯು ಒಂದೇ ತಿಂಗಳಲ್ಲಿ ಅನೇಕ ಬಾರಿ ಬಾಂಬ್ ಬೆದರಿಕೆ ಸಂದೇಶ ರವಾನೆ ಮಾಡಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ್ದ ಎಂಬುದು ತಿಳಿದುಬಂದಿದೆ.
ಮೈಸೂರಿನ ಪ್ರತಿಷ್ಠಿತ ಬಡಾವಣೆಯಲ್ಲೇ ಇದ್ದ ಆರೋಪಿ!
ಮೈಸೂರಿನ ಪ್ರತಿಷ್ಠಿತ ಬೃಂದಾವನ ಬಡಾವಣೆ ಎರಡನೇ ಹಂತದ 6ನೇ ಕ್ರಾಸ್ನಲ್ಲಿರುವ ಮನೆಯಲ್ಲಿ ಆರೋಪಿಯು ಅಡಗಿ ಕುಳಿತಿದ್ದ. ಈ ಕುರಿತು ಮಾಹಿತಿ ಪಡೆದ ದೆಹಲಿ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ, ಸ್ಥಳೀಯ ವಿವಿ ಪುರಂ ಪೊಲೀಸ್ ಠಾಣೆಯ ಸಹಕಾರದಿಂದ ದಿಢೀರ್ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧನದ ವೇಳೆ ಆರೋಪಿಯ ಮನೆಯಲ್ಲಿ ಹಲವು ಸಿಮ್ ಕಾರ್ಡ್ಗಳು ಹಾಗೂ ಲ್ಯಾಪ್ಟಾಪ್ ವಶಕ್ಕೆ ಪಡೆಯಲಾಗಿದೆ. ಇವುಗಳನ್ನು ಪರಿಶೀಲನೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ದೆಹಲಿ ಪೊಲೀಸರು ವಿಶೇಷ ತಂಡವನ್ನು ರಚಿಸಿ ತನಿಖೆ ನಡೆಸಿದ್ದರು.
ಪ್ರಸ್ತುತ ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ದೆಹಲಿಗೆ ಕರೆದೊಯ್ಯಲಾಗುತ್ತಿದ್ದು, ಈ ಹಿಂದೆ ಕಳುಹಿಸಿದ ಎಲ್ಲಾ ಬೆದರಿಕೆ ಸಂದೇಶಗಳ ಹಿನ್ನಲೆ ಹಾಗೂ ಉದ್ದೇಶಗಳ ಬಗ್ಗೆ ವಿಚಾರಣೆ ಮುಂದುವರಿಯಲಿದೆ.
ಈ ಹಿಂದೆ ಮೈಸೂರಿನಲ್ಲಿ ದೊಡ್ಡ ಡ್ರಗ್ಸ್ ತಯಾರಿಕಾ ಮತ್ತು ಪೂರೈಕೆ ಜಾಲವನ್ನು ಮಹಾರಾಷ್ಟ್ರ ಪೊಲೀಸರು ಬಯಲಿಗೆಳೆದಿದ್ದರು. ಅದಾದ ನಂತರವೂ ಮೈಸೂರಿನಲ್ಲಿ ಅನೇಕ ಡ್ರಗ್ಸ್ ಪ್ರಕರಣಗಳು ಬಯಲಿಗೆ ಬಂದಿವೆ. ಇದೀಗ ಬಾಂಬ್ ಬೆದರಿಕೆ ಸಂದೇಶಗಳ ಆರೋಪಿ ಸಹ ಮೈಸೂರಿನ ಪ್ರತಿಷ್ಠಿತ ಬಡಾವಣೆಯಲ್ಲಿ ಅಡಗಿ ಇದ್ದುದು ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ.
ಒಟ್ಟಿನಲ್ಲಿ, ಮೈಸೂರಿನಲ್ಲಿ ಸೇರಿದಂತೆ ಅನೇಕ ಕಡೆಗಳಲ್ಲಿ ಆತಂಕ ಸೃಷ್ಟಿಸಿದ್ದ ಹುಸಿ ಬಾಂಬ್ ಬೆದರಿಕೆ ಪ್ರಕರಣಕ್ಕೆ ದೆಹಲಿ ಪೊಲೀಸರು ತೆರೆ ಎಳೆದಿದ್ದು, ಆರೋಪಿಯ ಬಂಧನದಿಂದ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ