All posts by nagaraj11081993

ವಿಕ್ಟೋರಿಯಾ ಆಸ್ಪತ್ರೆ ಮೇಲೆ ಲೋಕಾ ದಿಢೀರ್ ದಾಳಿ! ಐಸಿಯು ಅವ್ಯವಸ್ಥೆ ಬಯಲು

ವಿಕ್ಟೋರಿಯಾ ಆಸ್ಪತ್ರೆ ಮೇಲೆ ಲೋಕಾ ದಿಢೀರ್ ದಾಳಿ! ಐಸಿಯು ಅವ್ಯವಸ್ಥೆ ಬಯಲು

ಬೆಂಗಳೂರು, ಮಾರ್ಚ್​ 28: ಕರ್ನಾಟಕ ಲೋಕಾಯುಕ್ತ ತಂಡದ ಏಕಾಏಕಿ ಭೇಟಿ ವೇಳೆ ಶಾಂತವೇರಿ ಗೋಪಾಲ ಗೌಡ ಆಸ್ಪತ್ರೆಯ (ವಿಕ್ಟೋರಿಯಾ ಆಸ್ಪತ್ರೆ) ಟ್ರಾಮಾ ಕೇರ್ ಸೆಂಟರ್‌ನಲ್ಲಿ ಗಂಭೀರ ಅವ್ಯವಸ್ಥೆಗಳು ಬೆಳಕಿಗೆ ಬಂದಿವೆ. ಐಸಿಯುನಲ್ಲಿ ಅವಧಿ ಮೀರಿದ ಔಷಧಿಗಳು ಪತ್ತೆಯಾಗಿದ್ದು, ಖಾಲಿ ಹಾಸಿಗೆಗಳಿದ್ದರೂ ತುರ್ತು ರೋಗಿಗೆ ದಾಖಲಾತಿ ನಿರಾಕರಿಸಿರುವುದು ಗಮನಕ್ಕೆ ಬಂದಿದೆ.

ಹಾಸಿಗೆಗಳಿದ್ದರೂ ರೋಗಿಗಳಿಗೆ ದಾಖಲಾತಿ ಇಲ್ಲ!

ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ , ವೆಂಟಿಲೇಟರ್ ದೋಷದಿಂದ ಹಾಸಿಗೆಗಳು ಬಳಸಿಲ್ಲ ಎಂದು ಹೇಳಿರುವುದು ಆಸ್ಪತ್ರೆಯ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದಿದ್ದಾರೆ. ಪ್ರಕರಣದ ವರದಿಯನ್ನು ಮುಖ್ಯ ಕಾರ್ಯದರ್ಶಿ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ಕಳುಹಿಸಲು ಸೂಚಿಸಲಾಗಿದ್ದು, ವಿಚಾರಣೆಯನ್ನು ಏಪ್ರಿಲ್ 27ಕ್ಕೆ ಮುಂದೂಡಲಾಗಿದೆ.

ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ವರ್ಗಾಯಿಸಲು ಒತ್ತಾಯ

ಆಸ್ಪತ್ರೆ ಆವರಣದಲ್ಲಿ ಖಾಸಗಿ ಆಂಬ್ಯುಲೆನ್ಸ್ ಚಾಲಕರು ಮತ್ತು ಮಧ್ಯವರ್ತಿಗಳು ಸಕ್ರಿಯವಾಗಿರುವುದು ಬೆಳಕಿಗೆ ಬಂದಿದೆ. ಅವರು ವೈದ್ಯರನ್ನು ಸಂಪರ್ಕಿಸಿ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲು ಒತ್ತಾಯಿಸುತ್ತಿದ್ದರೆಂಬ ಆರೋಪವೂ ಕೇಳಿಬಂದಿದೆ. ಕೆಲವು ಸಿಬ್ಬಂದಿ ಖಾಸಗಿ ಆಂಬ್ಯುಲೆನ್ಸ್ ಬಳಸುವಂತೆ ರೋಗಿಗಳ ಬಂಧುಗಳ ಮೇಲೆ ಒತ್ತಡ ಹೇರಿರುವುದು ತಿಳಿದುಬಂದಿದೆ.

ಈ ಹಿನ್ನೆಲೆ, ಖಾಸಗಿ ಆಂಬ್ಯುಲೆನ್ಸ್ ಸೇವೆಯನ್ನು ನಿಯಂತ್ರಿಸಲು ಪ್ರೀಪೇಯ್ಡ್ ವ್ಯವಸ್ಥೆ ಜಾರಿಗೆ ತರಬೇಕೆಂದು ಲೋಕಾಯುಕ್ತ ಸೂಚಿಸಿದೆ. ಈ ಬಗ್ಗೆ ಕ್ರಮ ಕೈಗೊಂಡಿರುವ ವಿವರಗಳನ್ನು ನೀಡಲು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ವೈದ್ಯಕೀಯ ಶಿಕ್ಷಣ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.

ಅಕ್ರಮ ಚಟುವಟಿಕೆಗಳಿಗೆ ಬ್ರೇಕ್

ಲೋಕಾಯುಕ್ತ ಮುಂದೆ ಟ್ರಾಮಾ ಕೇರ್ ಸೆಂಟರ್‌ನ ಸಮಸ್ಯೆಗಳ ಕುರಿತು ಡಾ. ಅಸೀಮಾ ಅವರು ಮಾಹಿತಿ ನೀಡಿದ್ದು, ಹಾಸಿಗೆಗಳ ಕೊರತೆಯಿಂದ ಖಾಸಗಿ ಆಂಬ್ಯುಲೆನ್ಸ್ ಚಾಲಕರು ಹಾಗೂ ಮಧ್ಯವರ್ತಿಗಳು ರೋಗಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದರು. ಅವರಿಂದ ಉಂಟಾಗುವ ಅಡಚಣೆಗಳನ್ನು ನಿಯಂತ್ರಣಕ್ಕೆ ಬಾರದ ಮಟ್ಟಕ್ಕೆ ತಲುಪಿದ್ದು, ಕೆಲವೊಮ್ಮೆ ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿಯ ಮೇಲೆ ದಾಳಿ ನಡೆದ ಘಟನೆಗಳೂ ನಡೆದಿವೆ ಎಂದು ತಿಳಿಸಿದರು.

ಇದನ್ನೂ ಓದಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಹುಟ್ಟಿದ್ದೇ ಒಂದು ಭೀಕರ ಅಗ್ನಿದುರಂತದಿಂದ! ಇದರ ಹಿಂದಿರುವ ಅರಮನೆಯ ಆ ರಹಸ್ಯ ನಿಮಗೆ ಗೊತ್ತೇ?

ಆದರೆ ಈ ಬಗ್ಗೆ ಯಾವುದೇ ನಿರ್ದಿಷ್ಟ ದೂರು ದಾಖಲಾಗಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ದಕ್ಷಿಣ ವಿಭಾಗದ ಡಿಸಿಪಿ ಲೋಕಾಯುಕ್ತರಿಗೆ ತಿಳಿಸಿದ್ದಾರೆ. ಈ ಹಿನ್ನೆಲೆ ಆಸ್ಪತ್ರೆ ಆವರಣದಲ್ಲಿ ಪೊಲೀಸ್ ಬಂದೋಬಸ್ತ್ ಬಲಪಡಿಸಿ, ಅಕ್ರಮ ಚಟುವಟಿಕೆ ನಡೆಸುವವರನ್ನು ಗುರುತಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತ ಸೂಚನೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

PSLನ ಬಿಗ್ ಆಫರ್ ತ್ಯಜಿಸಿ IPLಗೆ ಬಂದ ಆಸ್ಟ್ರೇಲಿಯನ್ ವೇಗಿ..!

Source link

ಸಂಜನಾ ಬುರ್ಲಿ ಮದುವೆಯ ಫೋಟೋಗಳು ಎಷ್ಟು ಸುಂದರವಾಗಿವೆ ನೋಡಿ

Source link

Girl Child as Lakshmi: ಹೆಣ್ಣು ಮಗು ಜನಿಸಿದರೆ ಮನೆಯ ಅದೃಷ್ಟವೇ ಬದಲಾಗುತ್ತದೆಯೇ? ಶಾಸ್ತ್ರಗಳು ಹೇಳುವುದೇನು?

ಭಾರತೀಯ ಪರಂಪರೆಯಲ್ಲಿ ಹೆಣ್ಣು ಮಗುವಿನ ಜನನವು ಕೇವಲ ಒಂದು ಕುಟುಂಬದ ವಿಸ್ತರಣೆಯಲ್ಲ, ಅದು ಸಾಕ್ಷಾತ್ ಲಕ್ಷ್ಮಿ ದೇವಿಯ ಆಗಮನವೆಂದೇ ಶತಶತಮಾನಗಳಿಂದ ನಂಬಿಕೊಂಡು ಬರಲಾಗಿದೆ. ಮನೆಯ ಅಂಗಳದಲ್ಲಿ ಹೆಣ್ಣು ಮಗುವಿನ ನಗು ಕೇಳಿಸಿದರೆ ಅಲ್ಲಿ ದಾರಿದ್ರ್ಯ ಸುಳಿಯುವುದಿಲ್ಲ ಎಂಬ ಮಾತು ಕೇವಲ ಭಾವನಾತ್ಮಕ ನುಡಿಯಲ್ಲ, ಅದರ ಹಿಂದೆ ಆಳವಾದ ಆಧ್ಯಾತ್ಮಿಕ ಮತ್ತು ಜ್ಯೋತಿಷ್ಯ ಶಾಸ್ತ್ರದ ಕಾರಣಗಳಿವೆ. ಹೆಣ್ಣು ಮಗು ಜನಿಸಿದಾಗ ಆಕೆಯ ಜಾತಕದಲ್ಲಿರುವ ಗ್ರಹಗತಿಗಳು ಇಡೀ ಕುಟುಂಬದ ಅದೃಷ್ಟವನ್ನೇ ಬದಲಿಸುವ ಶಕ್ತಿ ಹೊಂದಿರುತ್ತವೆ ಎಂದು ಶಾಸ್ತ್ರಗಳು ಉಲ್ಲೇಖಿಸುತ್ತವೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೆಣ್ಣು ಮಗುವಿನ ಜಾತಕದಲ್ಲಿ ಚಂದ್ರ, ಶುಕ್ರ ಮತ್ತು ಗುರು ಗ್ರಹಗಳು ಬಲವಾಗಿದ್ದರೆ, ಆಕೆ ಕಾಲಿಟ್ಟ ಕ್ಷಣದಿಂದಲೇ ಮನೆಯಲ್ಲಿ ಆರ್ಥಿಕ ಪ್ರಗತಿ ಮತ್ತು ಸುಖ-ಶಾಂತಿ ನೆಲೆಸುತ್ತದೆ. ಸ್ತ್ರೀ ಶಕ್ತಿಯು ಮನೆಯಲ್ಲಿನ ನಕಾರಾತ್ಮಕತೆಯನ್ನು ದೂರಮಾಡಿ, ಸಕಾರಾತ್ಮಕ ಶಕ್ತಿಯನ್ನು ವೃದ್ಧಿಸುತ್ತದೆ. ಅದಕ್ಕಾಗಿಯೇ ಹೆಣ್ಣು ಮಗುವನ್ನು ‘ಭಾಗ್ಯಲಕ್ಷ್ಮಿ’ ಎಂದು ಕರೆಯಲಾಗುತ್ತದೆ. ಆಕೆಯ ಜನನದ ನಂತರ ತಂದೆ-ತಾಯಿಯ ಬಾಳಿನಲ್ಲಿ ಸ್ಥಗಿತಗೊಂಡಿದ್ದ ಕೆಲಸಗಳು ಪೂರ್ಣಗೊಳ್ಳುವುದು, ಹೊಸ ಆಸ್ತಿ ಅಥವಾ ವಾಹನಗಳ ಖರೀದಿಯಂತಹ ಶುಭ ಘಟನೆಗಳು ಸಂಭವಿಸುವುದು ಆಕೆಯ ಅದೃಷ್ಟದ ಪ್ರತಿಫಲವೆಂದೇ ಪರಿಗಣಿತವಾಗಿದೆ.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

“ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾ:” ಎನ್ನುವ ವೇದವಾಣಿಯಂತೆ, ಎಲ್ಲಿ ಸ್ತ್ರೀಯರಿಗೆ ಗೌರವ ಸಿಗುತ್ತದೆಯೋ ಅಲ್ಲಿ ದೇವತೆಗಳು ನೆಲೆಸುತ್ತಾರೆ. ಮಗಳನ್ನು ಪ್ರೀತಿ ಮತ್ತು ಗೌರವದಿಂದ ಕಾಣುವ ಮನೆಯಲ್ಲಿ ಶುಕ್ರ ಗ್ರಹವು ಬಲಗೊಳ್ಳುತ್ತದೆ. ಜ್ಯೋತಿಷ್ಯದಲ್ಲಿ ಶುಕ್ರನು ಐಶ್ವರ್ಯ ಮತ್ತು ಭೌತಿಕ ಸುಖಗಳ ಕಾರಕನಾಗಿದ್ದು, ಮಗಳ ಸಂತೋಷವು ಪರೋಕ್ಷವಾಗಿ ಕುಟುಂಬದ ಸಮೃದ್ಧಿಗೆ ದಾರಿಯಾಗುತ್ತದೆ. ಹೀಗೆ ತನ್ನೊಂದಿಗೆ ಪುಣ್ಯದ ಫಲವನ್ನು ಹೊತ್ತು ತರುವ ಮಗಳು, ಇಡೀ ಕುಟುಂಬಕ್ಕೆ ದೈವಿಕ ಆಶೀರ್ವಾದದ ರೂಪವಾಗಿದ್ದಾಳೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನೇಪಾಳ: ಬಲೆನ್ ಶಾ ಅಧಿಕಾರ ಸ್ವೀಕಾರ ಬೆನ್ನಲ್ಲೇ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ

ಕಾಠ್ಮಂಡು, ಮಾರ್ಚ್ 28: ನೇಪಾಳ (Nepal) ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ನೂತನ ಪ್ರಧಾನಿಯಾಗಿ ಬಾಲೆನ್ ಶಾ ಹಾಗೂ ಸಂಪುಟ ಸಚಿವರು ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ (KP Sharma Oli) ಅವರನ್ನು ಬಂಧಿಸಲಾಗಿದೆ. ಕಳೆದ ವರ್ಷ ನಡೆದ ಭ್ರಷ್ಟಾಚಾರ ವಿರೋಧಿ ‘ಜೆನ್ ಜಿ (Gen Z)’ ಪ್ರತಿಭಟನೆಯ ವೇಳೆ ಕನಿಷ್ಠ 77 ಜನರ ಸಾವಿಗೆ ಕಾರಣವಾದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಲಿ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಒಲಿ ಅವರೊಂದಿಗೆ ಮಾಜಿ ಗೃಹ ಸಚಿವ ರಮೇಶ್ ಲೇಖಕ್ ಅವರನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸ್ ವಕ್ತಾರ ಓಂ ಅಧಿಕಾರಿ ಖಚಿತಪಡಿಸಿದ್ದಾರೆ.

ವಿಶೇಷ ನ್ಯಾಯಾಲಯದ ಮಾಜಿ ನ್ಯಾಯಾಧೀಶ ಗೌರಿ ಬಹದ್ದೂರ್ ಕಾರ್ಕಿ ನೇತೃತ್ವದ ತನಿಖಾ ಸಮಿತಿಯು ನೀಡಿದ ಶಿಫಾರಸಿನ ಮೇರೆಗೆ ಈ ಬಂಧನವಾಗಿದೆ. ಪ್ರತಿಭಟನಾಕಾರರ ಮೇಲೆ ಅತಿಯಾದ ಮತ್ತು ಅನಿಯಂತ್ರಿತ ಬಲಪ್ರಯೋಗ ಮಾಡಿದ್ದಲ್ಲದೆ, ಹಿಂಸಾಚಾರವನ್ನು ತಡೆಯುವಲ್ಲಿ ಒಲಿ ಸರ್ಕಾರ ವಿಫಲವಾಗಿತ್ತು ಎಂದು ತನಿಖಾ ಸಮಿತಿಯ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ವಿಶೇಷವೆಂದರೆ, ಬಾಲೆನ್ ಶಾ ಅವರು ನೇಪಾಳದ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಮರುದಿನವೇ ಈ ಪ್ರಮುಖ ಬೆಳವಣಿಗೆ ನಡೆದಿದೆ.

ಇದನ್ನೂ ಓದಿ:  ಭಾರತಕ್ಕೆ ಶಾಕ್ ನೀಡಲಿದೆಯೇ ರಷ್ಯಾ? ಏಪ್ರಿಲ್ 1 ರಿಂದ ಕಚ್ಚಾ ತೈಲ ರಫ್ತು ಸ್ಥಗಿತ!

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿರುವ ನೂತನ ಗೃಹ ಸಚಿವ ಸುದನ್ ಗುರುಂಗ್, ‘ಕೊಟ್ಟ ಮಾತಿನಂತೆ ನಾವು ನಡೆದಿದ್ದೇವೆ. ಕಾನೂನಿಗಿಂತ ಯಾರೂ ಮೇಲಲ್ಲ. ಇದು ಯಾರ ವಿರುದ್ಧದ ಸೇಡಲ್ಲ, ಬದಲಾಗಿ ನ್ಯಾಯದ ಆರಂಭವಷ್ಟೇ’ ಎಂದು ಉಲ್ಲೇಖಿಸಿದ್ದಾರೆ. ಸೆಪ್ಟೆಂಬರ್ 8 ರಂದು ಪ್ರತಿಭಟನಾಕಾರರ ಮೇಲೆ ನಡೆದ ದಾಳಿಯನ್ನು ಹತ್ಯೆ ಎಂದು ಪರಿಗಣಿಸಿ ವಿಚಾರಣೆ ನಡೆಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ರಿಲೀಸ್ ಆಗಿ ಕೆಲವೇ ವಾರಕ್ಕೆ ಒಟಿಟಿಗೆ ಬರ್ತಿದೆ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ

ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಇತ್ತೀಚೆಗೆ ಥಿಯೇಟರ್​ ಅಲ್ಲಿ ಬಿಡುಗಡೆ ಕಂಡಿತು. ಮಾರ್ಚ್ 19ರಂದ ಸಿನಿಮಾ ‘ಧುರಂಧರ್ 2’ ಎದುರು ರಿಈಸ್ ಆಗಿ, 100 ಕೋಟಿ ರೂಪಾಯಿ ಗಳಿಸಲು ಒದ್ದಾಡುತ್ತಿದೆ. ಮಾಸ್ ಆ್ಯಕ್ಷನ್ ಎಂಟರ್ಟೈನರ್ ಆಗಿರುವ ಈ ಚಿತ್ರದಲ್ಲಿ ಶ್ರೀಲೀಲಾ ನಾಯಕಿ. ರಾಶಿ ಖನ್ನಾ ಕೂಡ ಮತ್ತೊಂದು ಪ್ರಮುಖ ಪಾತ್ರದಲ್ಲಿ ಮಿಂಚಿದ್ದಾರೆ. ಕಾಲಿವುಡ್ ನಟ ಪಾರ್ಥಿಬನ್ ಈ ಚಿತ್ರದಲ್ಲಿ ಖಳನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರ ರಿಲೀಸ್ ಆದ ಕೆಲವೇ ವಾರದಲ್ಲಿ ಒಟಿಟಿಗೆ ಬರುತ್ತಿದೆ.

ಪವನ್ ಕಲ್ಯಾಣ್ ಅವರ ‘ಉಸ್ತಾದ್ ಭಗತ್ ಸಿಂಗ್’ ಜನರಿಗೆ ಇಷ್ಟ ಆಗಿಲ್ಲ. ಹರೀಶ್ ಶಂಕರ್ ಅವರ ಡೈಲಾಗ್ಸ್, ಶ್ರೀಲೀಲಾ ಮತ್ತು ರಾಶಿ ಖನ್ನಾ ಅವರ ಗ್ಲಾಮರ್ ಕೆಲಸಕ್ಕೆ ಬರಲಿಲ್ಲ. ಚಿತ್ರದಲ್ಲಿನ ಕೆಲ ಸಕಾರಾತ್ಮಕ ಅಂಶಗಳ ಹೊರತಾಗಿಯೂ, ಉಸ್ತಾದ್ ಭಗತ್ ಸಿಂಗ್ ಅವರ ಚಿತ್ರ ಕಥೆ ಮತ್ತು ನಿರೂಪಣೆಯ ವಿಷಯದಲ್ಲಿ ಸ್ವಲ್ಪ ದುರ್ಬಲವಾಗಿ ಕಾಣುತ್ತದೆ. ಇದರ ಜೊತೆಗೆ, ‘ಧುರಂಧರ್ 2’ ಬಿಡುಗಡೆಯು ಉಸ್ತಾದ್‌ಗೆ ಮೈನಸ್ ಆಗಿ ಪರಿಣಮಿಸಿದೆ. ಇದರಿಂದಾಗಿ, ಪವನ್ ಕಲ್ಯಾಣ್ ಅವರ ಚಿತ್ರವು ಸಾಧಾರಣ ಕಲೆಕ್ಷನ್‌ಗಳನ್ನು ಮಾತ್ರ ಪಡೆಯುತ್ತಿದೆ. ಈಗ ಚಿತ್ರದ OTT ಸ್ಟ್ರೀಮಿಂಗ್ ಬಗ್ಗೆ ಒಂದು ಕುತೂಹಲಕಾರಿ ಸುದ್ದಿ ಕೇಳಿಬರುತ್ತಿದೆ.

ಇದನ್ನೂ ಓದಿ: ‘ಧುರಂಧರ್ 2’ ವಿರುದ್ಧ ‘ಉಸ್ತಾದ್ ಭಗತ್ ಸಿಂಗ್’ ಬಾಕ್ಸ್ ಆಫೀಸ್ ಹರಸಾಹಸ

‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಡಿಜಿಟಲ್ ಸ್ಟ್ರೀಮಿಂಗ್ ಹಕ್ಕುಗಳು ಥಿಯೇಟ್ರಿಕಲ್ ಬಿಡುಗಡೆಗೂ ಮೊದಲೇ ಮಾರಾಟವಾಗಿವೆ. ಜನಪ್ರಿಯ OTT ಕಂಪನಿ ನೆಟ್‌ಫ್ಲಿಕ್ಸ್ ಈ ಚಿತ್ರವನ್ನು ಭಾರಿ ಬೆಲೆಗೆ ಖರೀದಿಸಿದೆ. ಚಿತ್ರದ ನಿರ್ಮಾಪಕ ನವೀನ್ ಎರ್ನೇನಿ ಪತ್ರಿಕಾಗೋಷ್ಠಿಯಲ್ಲಿ, ಉಸ್ತಾದ್ ಚಿತ್ರವು ಥಿಯೇಟ್ರಿಕಲ್ ಬಿಡುಗಡೆಯಾದ ಸುಮಾರು 5 ವಾರಗಳ ಅಂತರದಲ್ಲಿ OTT ನಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಿದ್ದರು. ಆದರೆ, ಅದಕ್ಕೂ ಮೊದಲೇ ಅಂದರೆ ಏಪ್ರಿಲ್ 16ರಂದು ಸಿನಿಮಾ ಒಟಿಟಿಯಲ್ಲಿ ಸ್ಟ್ರೀಮಿಂಗ್ ಆಗಲಿದೆ ಎನ್ನಲಾಗಿದೆ.

‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ 65 ಕೋಟಿ ರೂಪಾಯಿ ಗಳಿಸಿದೆ. ದಿನ ಕಳೆದಂತೆ ಚಿತ್ರವು ಕಡಿಮೆ ಕಲೆಕ್ಷನ್ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL 2026: CSK ಅಭಿಮಾನಿಗಳಿಗೆ ಬಿಗ್ ಶಾಕ್: ಎಂಎಸ್​ ಧೋನಿ ಅಲಭ್ಯ..!

Source link

‘ನೀವೆಲ್ಲಾ ಟೆರರಿಸ್ಟ್​ಗಳು’: ಮುಸ್ಲಿಮ್ ವಿದ್ಯಾರ್ಥಿಗೆ ಕ್ಲಾಸ್​ನಲ್ಲೇ ಅವಮಾನಿಸಿದ ಪ್ರೊಫೆಸರ್!

ಬೆಂಗಳೂರು, ಮಾರ್ಚ್​ 28: ಪಿಇಎಸ್ ವಿಶ್ವವಿದ್ಯಾಲಯನಲ್ಲಿ ಪ್ರೊಫೆಸರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಬನಶಂಕರಿ ರಿಂಗ್ ರೋಡ್‌ನಲ್ಲಿರುವ ಕ್ಯಾಂಪಸ್‌ನಲ್ಲಿ ಪಾಠ ಮಾಡುತ್ತಿದ್ದ ವೇಳೆ ಕೋಪಗೊಂಡ ಪ್ರೊಫೆಸರ್ ಡಾ. ಮೂರಳಿಧರ ದೇಶಪಾಂಡೆ ತರಗತಿಯಲ್ಲಿದ್ದ ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದು ಅವಮಾನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆ ಎರಡು ದಿನಗಳ ಹಿಂದೆ ನಡೆದಿದೆ.

ಪಾಠದ ಮಧ್ಯದಲ್ಲಿ ಮಕ್ಕಳ ಗಲಾಟೆಯಿಂದಲೋ ಏನೋ ದೇಶಪಾಂಡೆ ಗರಂ ಆಗಿದ್ದು, ನೀವೆಲ್ಲಾ ಭಯೋತ್ಪಾದಕರು ಎಂದೆಲ್ಲಾ ನಿಂದಿಸಿದ್ದಾರೆ. ಇದೇ ವೇಳೆ ತರಗತಿಯಲ್ಲಿ ಕುಳಿತಿದ್ದ ವಿದ್ಯಾರ್ಥಿಗಳು ತಮ್ಮ ಮೊಬೈಲ್​ನಲ್ಲಿ ಘಟನೆಯನ್ನು ಸೆರೆ ಹಿಡಿದಿದ್ದಾರೆ. ಇದೇ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ಈ ಬಗ್ಗೆ ದೂರು ದಾಖಲಿಸಿದೆ. ಪ್ರಕರಣದ ಗಂಭೀರತೆಯನ್ನು ಗಮನಿಸಿದ ವಿಶ್ವವಿದ್ಯಾಲಯ ಆಡಳಿತವು ತಕ್ಷಣ ಕ್ರಮ ಕೈಗೊಂಡು ಪ್ರೊಫೆಸರ್ ಅವರನ್ನು ಅಮಾನತು ಮಾಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Viral: ಇದು ರೈತನ ವಿಭಿನ್ನ ರಾಮನವಮಿ ಸೆಲೆಬ್ರೇಶನ್; ಹೂಕೋಸಿನಲ್ಲಿ ಮೂಡಿ ಬಂದ ರಾಮ, ಸೀತೆ, ಹನುಮಂತ

ಮರ್ಯಾದಾ ಪುರುಷ, ಪುರುಷೋತ್ತಮ ಭಗವಾನ್ ಶ್ರೀ ರಾಮನ (Shri Rama) ಜನ್ಮದಿನವನ್ನು ದೇಶದೆಲ್ಲೆಡೆ ಶ್ರದ್ಧಾಭಕ್ರಿಯಿಂದ ಆಚರಿಸಲಾಗಿದೆ. ಹಿಂದೂಗಳಿಗೆ ಯುಗಾದಿ (Ugadi festival) ವರುಷದ ಮೊದಲ ಹಬ್ಬವಾದರೆ, ತದನಂತರ ಬರುವುದೇ ಈ ರಾಮನವಮಿ (Rama Navami). ಈ ಹಬ್ಬದಂದು ಕೋಟ್ಯಾಂತರ ಭಕ್ತರು ರಾಮನನ್ನು ಪೂಜಿಸಿ, ಆರಾಧಿಸುತ್ತಾರೆ. ಆದರೆ ಇಲ್ಲೊಬ್ಬ ರೈತನು ತಾನು ಬೆಳೆದ ಹೂಕೋಸಿನಲ್ಲಿ ರಾಮ, ಸೀತೆ ಹನುಮಂತನ ಚಿತ್ರ ಬಿಡಿಸಿದ ರಾಮನವಮಿಯನ್ನು ಸಂಭ್ರಮಿಸಿದ್ದಾನೆ. ಈ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಮೆಚ್ಚುಗೆಗೆ ಪಾತ್ರವಾಗಿದೆ.

ನಂದಿನಿ ವೆಂಕಟಾದ್ರಿ (Nandini Venkatadri) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಯುವ ರೈತನೊಬ್ಬ ತಾನು ಬೆಳೆದ ಹೂಕೋಸಿನಲ್ಲಿ ರಾಮ, ಸೀತೆ, ಹನುಮಂತನ ಚಿತ್ರ ಬಿಡಿಸಿದ ರಾಮನವಮಿಯನ್ನು ವಿಭಿನ್ನವಾಗಿ ಆಚರಿಸುವುದನ್ನು ಕಾಣಬಹುದು. ಹೊಲದಲ್ಲಿ ಹೂಕೋಸಿನ ರಾಶಿಯನ್ನು ಕಾಣಬಹುದು. ಮೂವರು ಮಹಿಳೆಯರು ಕೆಲಸದಲ್ಲಿ ತೊಡಗಿಕೊಂಡಿದ್ದು, ಯುವ ರೈತನೊಬ್ಬ ಹೂಕೋಸನ್ನು ಜೋಡಿಸಿ ರಾಮ, ಸೀತೆ, ಹನುಮಂತನ ಚಿತ್ರ ಬಿಡಿಸಿ ಅದರ ಪಕ್ಕ ಕುಳಿತಿರುವುದನ್ನು ನೀವು ನೋಡಬಹುದು.

ವೈರಲ್ ಪೋಸ್ಟ್‌ ಇಲ್ಲಿದೆ

ಇದನ್ನೂ ಓದಿ: ಮಾಡಿದ್ದುಣ್ಣೋ ಮಹಾರಾಯ, ಹೋಳಿ ಆಚರಿಸುತ್ತಿದ್ದವರ ಮೇಲೆ ಕಸ ಸುರಿಯಲು ಹೋಗಿ ಏನಾಯ್ತು ನೋಡಿ

ಮಾರ್ಚ್ 27 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ ತೊಂಭತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ನಮ್ಮ ಭಕ್ತಿಯ ಭಾವನೆಯನ್ನು ವ್ಯಕ್ತಪಡಿಸಲು ಹಲವಾರು ಮಾರ್ಗಗಳಿವೆ, ಆದ್ದರಿಂದ, ಇದು ನೈಸರ್ಗಿಕ ಹೂವಿನ ಗೌರವವಾದ ಹೂಕೋಸು ಮೂಲಕ ಭಕ್ತಿಯನ್ನು ವ್ಯಕ್ತಪಡಿಸುವ ಅತ್ಯಂತ ವಿಶಿಷ್ಟ ಮಾರ್ಗವಾಗಿದೆ ಎಂದಿದ್ದಾರೆ. ಇನ್ನೊಬ್ಬರು, ಇದು ತುಂಬಾ ಸುಂದರ ಹಾಗೂ ಹೃದಯ ಸ್ಪರ್ಶಿಯಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಜೈ ಶ್ರೀರಾಮ್ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು

‘ಲಕ್ಷ್ಮೀ ನಿವಾಸ’ ಧಾರಾವಾಹಿಯಲ್ಲಿ ಸಿದ್ದೇಗೌಡ್ರು ಹೆಸರಿನ ಪಾತ್ರವನ್ನು ಧನಂಜಯ್ ಮಾಡುತ್ತಿದ್ದಾರೆ. ಅವರು ಯುವ ಕಲಾವಿದ. ಈಗ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೇಲೆ ರಚಿತಾ ರಾಮ್​​ಗೋಸ್ಕರ ಅವರು ಕವಿಯಾಗಿದ್ದಾರೆ. ಸಾಲುಗಳ ಮೂಲಕ ರಚಿತಾಗೆ ಪ್ರಪೋಸ್ ಮಾಡಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ. ಸಿದ್ದೇಗೌಡ್ರ ಸಾಲುಗಳು ಗಮನ ಸೆಳೆದಿವೆ. ಆ ಸಂದರ್ಭದ ವಿಡಿಯೋ ಮೇಲಿದೆ ನೋಡಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link