Headlines

nagaraj11081993

Bengaluru Air Quality: ಸುಧಾರಿಸುತ್ತಿಲ್ಲ ಮಂಗಳೂರಿನ ವಾಯು ಗುಣಮಟ್ಟ!

ಬೆಂಗಳೂರು, ಮಾರ್ಚ್​ 28: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಏರ್ ಕ್ವಾಲಿಟಿಯಲ್ಲಿ  (Bengaluru Air Quality) ಏರುಪೇರಾಗುತ್ತಲೇ ಇದೆ. ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ. ಆದರೆ ಇಂದು ಉಡುಪಿಯ ಏರ್ ಕ್ವಾಲಿಟಿ ನೋಡಿದಾಗ ಆತಂಕ ಸೃಷ್ಟಿಯಾಗುವುದಂತೂ ನಿಜ. 100ರಿಂದ 150ರ ಒಳಗಿದ್ದ ಉಡುಪಿಯ AQI ಇಂದು ಒಮ್ಮೆಲೇ 200ರ ಗಡಿ ದಾಟಿರುವುದು ಆಶ್ಚರ್ಯವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಗಾಳಿಯ ಗುಣಮಟ್ಟ 150ಕ್ಕೂ ಹೆಚ್ಚಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ…

Read More

Daily Devotional: ನೀವು ಸಿಹಿ ಹೆಚ್ಚು ಇಷ್ಟಪಡುತ್ತೀರಾ? ಹಾಗಿದ್ರೆ ಜ್ಯೋತಿಷ್ಯದ ಪ್ರಕಾರ ನಿಮ್ಮ ವ್ಯಕ್ತಿತ್ವ ತಿಳಿಯಿರಿ

ನಮ್ಮ ದೈನಂದಿನ ಜೀವನದಲ್ಲಿ ಸಿಹಿ ಮತ್ತು ಖಾರವಾದ ಆಹಾರಕ್ಕೆ ವಿಭಿನ್ನ ಪ್ರಾಮುಖ್ಯತೆಯಿದೆ. ಕೆಲವರು ಸಿಹಿ ಆಹಾರವನ್ನು ಹೆಚ್ಚು ಇಷ್ಟಪಟ್ಟರೆ, ಮತ್ತೆ ಕೆಲವರು ಖಾರದ ಆಹಾರಕ್ಕೆ ಆದ್ಯತೆ ನೀಡುತ್ತಾರೆ. ಈ ಆಹಾರದ ಆಯ್ಕೆ ನಮ್ಮ ಜಾತಕದಲ್ಲಿರುವ ಗ್ರಹಗಳ ಸ್ಥಿತಿಗತಿಗಳ ಮೇಲೆ ಅವಲಂಬಿತವಾಗಿರುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರ ತಿಳಿಸುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಸಿಹಿ ಆಹಾರವನ್ನು ಇಷ್ಟಪಡುವ ವ್ಯಕ್ತಿಗಳು: ಸಿಹಿ ಆಹಾರವನ್ನು…

Read More

ಬಿಗ್ ಬಾಸ್ ಮುಗಿದ ಬಳಿಕ ಮೊದಲ ಬಾರಿಗೆ ಸಿನಿಮಾ ಘೋಷಿಸಿದ ಸಂಗೀತಾ ಶೃಂಗೇರಿ

ಸಂಗೀತಾ ಶೃಂಗೇರಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಸ್ಪರ್ಧಿಸಿದ್ದರು. ಈ ಸೀಸನ್ ಬಳಿಕ ಅವರು ಸಿಂಹಿಣಿ ಎಂದೇ ಫೇಮಸ್ ಆದರು. ಇದಾದ ಬಳಿಕ ಅವರು ಒಪ್ಪಿಕೊಂಡ ಮೊದಲ ಸಿನಿಮಾ ಸೆಟ್ಟೇರಿದೆ. ಸಂಗೀತಾ ಶೃಂಗೇರಿ ಅವರು ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕ ‘ಮಾರಿಗೋಲ್ಡ್​’ ಸಿನಿಮಾ ರಿಲೀಸ್ ಆಯಿತು. ಆದರೆ, ಈ ಚಿತ್ರ ಬಿಗ್ ಬಾಸ್​​ಗೂ ಮೊದಲು ಶೂಟ್ ಆಗಿತ್ತು. ಈಗ ಹೊಸ ಸಿನಿಮಾ ಒಪ್ಪಿಕೊಂಡಿರೋದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ‘ಪದ್ಮನಾಭ ಆ್ಯಂಡ್ ಫ್ಯಾಮಿಲಿ’ ಹೆಸರಿನ…

Read More

ಹಾಡಹಗಲೇ ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾದ ಖದೀಮರು: ಸಿಸಿಟಿವಿ ವಿಡಿಯೋ ನೋಡಿ

ನೆಲಮಂಗಲ, ಮಾರ್ಚ್ 28: ಹಾಡಹಗಲೇ, ಜನಸಂಚಾರ ಇರುವ ಪ್ರದೇಶದಲ್ಲೇ ಖದೀಮರು ಮಹಿಳೆಯೊಬ್ಬರ ಮಾಂಗಲ್ಯ ಸರ ಕಿತ್ತು ಪರಾರಿಯಾದ ಘಟನೆ ನೆಲಮಂಗಲ ತಾಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಂಬಿಕಾ ಎಂಬವರು ಸ್ನೇಹಿತೆಯೊಂದಿಗೆ ಬೇಕರಿ ಮುಂದೆ ನಿಂತು ಮಾತನಾಡುತ್ತಿದ್ದಾಗ, ಅಲ್ಲೇ ಜ್ಯೂಸ್ ಕುಡಿಯುತ್ತಿದ್ದಂತೆ ನಟಿಸಿದ ಇಬ್ಬರು ಖತರ್ನಾಕ್ ಖದೀಮರು ಕ್ಷಣಾರ್ಧದಲ್ಲಿ ಮಹಿಳೆಯ ಕತ್ತಿಗೆ ಕೈ ಹಾಕಿ ಚಿನ್ನದ ಸರವನ್ನು ಕಿತ್ತು ಪರಾರಿಯಾಗಿದ್ದಾರೆ. ಸರ…

Read More

IPL ನಿಂದ ಇಬ್ಬರು ಆಟಗಾರರಿಗೆ ನಿಷೇಧ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಆರಂಭಕ್ಕೆ ವೇದಿಕೆ ಸಜ್ಜಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಈ ಮುಖಾಮುಖಿಗೂ ಮುನ್ನವೇ ಇಂಗ್ಲೆಂಡ್ ಆಟಗಾರ ಬೆನ್ ಡಕೆಟ್ ಐಪಿಎಲ್​ನಿಂದ ಹಿಂದೆ ಸರಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದ ಬೆನ್ ಡಕೆಟ್ ಟೂರ್ನಿ ಆರಂಭಕ್ಕೂ ಮುನ್ನ ತಮ್ಮ ಒಪ್ಪಂದದಿಂದ ಹಿಂದೆ ಸರಿದ ಕಾರಣ ಇದೀಗ ನಿಷೇಧಕ್ಕೆ ಒಳಗಾಗಿದ್ದಾರೆ. ಅಂದರೆ ಬಿಸಿಸಿಐ ನಿಯಮದಂತೆ, ಯಾವುದೇ ವಿದೇಶಿ ಆಟಗಾರ…

Read More

ಮೊನಾಲಿಸಾ ಭೋಸ್ಲೆಗೆ ಸಂಕಷ್ಟ; ವೈರಲ್ ಸುಂದರಿ ಮೇಲೆ ಮಾನನಷ್ಟ ಮೊಕದ್ದಮೆ

ಮೊನಾಲಿಸಾ ಭೋಸ್ಲೆ (Monalisa Bhosle) ಇತ್ತೀಚೆಗೆ ಪ್ರೇಮ ವಿವಾಹವಾದರು. ಆರು ತಿಂಗಳ ಕಾಲ ಫರ್ಮಾನ್ ಖಾನ್ ಎಂಬ ವ್ಯಕ್ತಿಯನ್ನು ಪ್ರೀತಿಸುತ್ತಿದ್ದ ಮೊನಾಲಿಸಾ ಇತ್ತೀಚೆಗೆ ಕೇರಳ ಪೊಲೀಸರ ಸಮ್ಮುಖದಲ್ಲಿ ವಿವಾಹವಾದರು. ಬಾಲಿವುಡ್ ನಿರ್ದೇಶಕ ಸನೋಜ್ ಮಿಶ್ರಾ ಇವರ ಮದುವೆ ಅಮಾನ್ಯವಾಗಿದೆ ಎಂದು ಆಕ್ಷೇಪಿಸಿದರು. ನಿರ್ದೇಶಕ ಸನೋಜ್ ಮಿಶ್ರಾ ಸಿನಿಮಾದಲ್ಲಿಯೇ ಮೊನಾಲಿಸಾ ನಟಿಸುತ್ತಿದ್ದಾರೆ. ಅವರು ಕೆಟ್ಟದಾಗಿ ನಡೆದುಕೊಂಡಿದ್ದಾರೆ ಎಂದು ಮೊನಾಲಿಸಾ ಆರೋಪಿಸಿದ್ದರು. ಇದನ್ನು ಸನೋಜ್ ಅಲ್ಲಗಳೆದಿದ್ದಾರೆ. ಇತ್ತೀಚೆಗೆ ಕೇರಳದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೊನಾಲಿಸಾ, ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ…

Read More

ಕರ್ನಾಟಕ ಹವಾಮಾನ ವರದಿ: ಇಂದೂ ಮುಂದುವರೆದ ವರುಣನ ಆರ್ಭಟ! 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು, ಮಾರ್ಚ್​ 28: ರಾಜ್ಯದ ಹಲವೆಡೆ ಕಳೆದ ಮೂರು-ನಾಲ್ಕು ದಿನಗಳಿಂದ ಗುಡುಗು ಸಹಿತ ಮಳೆಯಾಗಿದೆ. ಇಂದೂ ಸಹ ಹಲವೆಡೆ ಮಳೆಯಾಗುವ (Weather Forecast)  ಸೂಚನೆಯಿದ್ದು, ಹವಾಮಾನ ಇಲಾಖೆ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಕೆಲ ಭಾಗಗಳಲ್ಲಿ ಒಣ ಹವೆಯ ವಾತಾವರಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​ ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಎಲ್ಲೆಲ್ಲಿ ಮಳೆಯಾಗುವ…

Read More

ಫೋಟೋ ತೆಗ್ದಿಲ್ಲ ಅಂದ್ರೇನೆ ಸಮಸ್ಯೆ; ಅಕ್ಷಯ್ ಕುಮಾರ್ ನೇರ ಮಾತು

ಬಾಲಿವುಡ್, ಸ್ಯಾಂಡಲ್​​ವುಡ್ ಸೇರಿದಂತೆ ಎಲ್ಲಾ ಚಿತ್ರರಂಗದಲ್ಲೂ ಪಾಪರಾಜಿ ಸಂಸ್ಕೃತಿ ಜೋರಾಗಿದೆ. ಸೆಲೆಬ್ರಿಟಿಗಳು ಎಲ್ಲೇ ಕಾಣಿಸಿಕೊಂಡರೂ ಫೋಟೋ ಕ್ಲಿಕ್ಕಿಸುತ್ತಾರೆ, ವಿಡಿಯೋ ಸೆರೆ ಹಿಡಿಯಲಾಗುತ್ತದೆ. ನಂತರ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಲಾಗುತ್ತದೆ. ಈ ವಿಷಯ ಸಾಕಷ್ಟು ಚರ್ಚೆ ಆಗುತ್ತಿದೆ ಎಂದೇ ಹೇಳಬಹುದು. ಕೆಲವರು ಇದನ್ನು ವಿರೋಧಿಸಿದರೆ, ಇನ್ನೂ ಕೆಲವರು ಇದನ್ನು ಬೆಂಬಲಿಸುತ್ತಿದ್ದಾರೆ. ಹೀಗಿರುವಾಗಲೇ ಅಕ್ಷಯ್ ಕುಮಾರ್ ಅವರು ಈ ವಿಷಯವಾಗಿ ಮಾತನಾಡಿದ್ದಾರೆ. ಫೋಟೋ ತೆಗೆದಿಲ್ಲ ಅಂದ್ರೇನೆ ಸಮಸ್ಯೆ ಅಂತ ಅವರು ನೇರವಾಗಿ ಹೇಳೀದ್ದಾರೆ. ಬಾಲಿವುಡ್​​​ ಅಲ್ಲಿ ಜಯಾ ಬಚ್ಚನ್ ಸೇರಿದಂತೆ…

Read More

IPL 2026: ಐಪಿಎಲ್​ನಲ್ಲಿ ಹೊಸ ನಿಯಮ

IPL 2026: ಇಂಡಿಯನ್ ಪ್ರೀಮಿಯರ್​ ಲೀಗ್​ನ 19ನೇ ಆವೃತ್ತಿಗಾಗಿ ಬಿಸಿಸಿಐ (BCCI) ಕೆಲವು ಕಟ್ಟುನಿಟ್ಟಾದ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಇವುಗಳಲ್ಲಿ ಆಟಗಾರರ ಶಿಸ್ತು ಮತ್ತು ಮೈದಾನದ ನಿರ್ವಹಣೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಈ ಮೂಲಕ ಶಿಸ್ತು ಬದ್ಧ ಐಪಿಎಲ್ ಟೂರ್ನಿ ಆಯೋಜಿಸಲು ಪ್ಲ್ಯಾನ್ ರೂಪಿಸಿದೆ. ಇದಕ್ಕಾಗಿ ಜಾರಿ ಮಾಡಲಾಗಿರುವ ಹೊಸ ನಿಯಮಗಳ ಪಟ್ಟಿ ಈ ಕೆಳಗಿನಂತಿದೆ… ಅಭ್ಯಾಸಕ್ಕೆ ನಿರ್ಬಂಧ: ಪಂದ್ಯ ನಡೆಯುವ ದಿನದಂದು ಮೈದಾನದಲ್ಲಿ ಯಾವುದೇ ರೀತಿಯ ಅಭ್ಯಾಸ ಅಥವಾ ವಾರ್ಮ್-ಅಪ್ ಮಾಡಲು ಅವಕಾಶವಿಲ್ಲ. ನೆಟ್ಸ್…

Read More

‘ಧುರಂಧರ್ 2’ ಹಣ ಮಾಡಿದ್ದು ನೋಡಿ ಬದಲಾದ ರಾಜಮೌಳಿ; ಎರಡು ಭಾಗದಲ್ಲಿ ‘ವಾರಣಾಸಿ’

‘ಧುರಂಧರ್ 2’ ಸಿನಿಮಾ (Dhurandhar 2) ಸೂಪರ್ ಹಿಟ್ ಆಗಿದೆ. ಮೊದಲ ಭಾಗ ಅಬ್ಬರಿಸಿತ್ತು. ಇದು ಎರಡನೇ ಪಾರ್ಟ್​​ ಹಿಟ್ ಆಗು ಸಹಕಾರಿ ಆಗಿದೆ. ಇಷ್ಟು ದಿನಗಳ ಕಾಲ ಮೊದಲ ಪಾರ್ಟ್ ರಿಲೀಸ್ ಆಗಿ ಬಹು ಸಮಯದ ಬಳಿಕ ಎರಡನೇ ಪಾರ್ಟ್ ಬರುತ್ತಿತ್ತು. ಆದರೆ, ‘ಧುರಂಧರ್ 2’ ವಿಷಯದಲ್ಲಿ ಆ ರೀತಿ ಆಗಿಲ್ಲ. ‘ಧುರಂಧರ್’ ರಿಲೀಸ್ ಆಗಿ ಕೇವಲ ಮೂರೇ ತಿಂಗಳಲ್ಲಿ ‘ಧುರಂಧರ್ 2’ ಸಿನಿಮಾ ತೆರೆಗೆ ಬಂದಿದೆ. ಇದು ಚಿತ್ರಕ್ಕೆ ಸಹಕಾರಿ ಆಗಿದೆ. ಈಗ ಇದರಿಂದ…

Read More