ಬೆಂಗಳೂರು, ಮಾರ್ಚ್ 28: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಏರುಪೇರಾಗುತ್ತಲೇ ಇದೆ. ವಾಯು ಗುಣಮಟ್ಟ ಎಲ್ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ. ಆದರೆ ಇಂದು ಉಡುಪಿಯ ಏರ್ ಕ್ವಾಲಿಟಿ ನೋಡಿದಾಗ ಆತಂಕ ಸೃಷ್ಟಿಯಾಗುವುದಂತೂ ನಿಜ. 100ರಿಂದ 150ರ ಒಳಗಿದ್ದ ಉಡುಪಿಯ AQI ಇಂದು ಒಮ್ಮೆಲೇ 200ರ ಗಡಿ ದಾಟಿರುವುದು ಆಶ್ಚರ್ಯವಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಗಾಳಿಯ ಗುಣಮಟ್ಟ 150ಕ್ಕೂ ಹೆಚ್ಚಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 158ಕ್ಕೆ ತಲುಪಿದೆ. ಕೆಲ ದಿನಗಳಿಂದ ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಏರ್ ಕ್ವಾಲಿಟಿ ತೀರಾ ಕಳಪೆ ಮಟ್ಟಕ್ಕೆ ಇಳಿದಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.
ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)
ನಮ್ಮ ದೈನಂದಿನ ಜೀವನದಲ್ಲಿ ಸಿಹಿ ಮತ್ತು ಖಾರವಾದ ಆಹಾರಕ್ಕೆ ವಿಭಿನ್ನ ಪ್ರಾಮುಖ್ಯತೆಯಿದೆ. ಕೆಲವರು ಸಿಹಿ ಆಹಾರವನ್ನು ಹೆಚ್ಚು ಇಷ್ಟಪಟ್ಟರೆ, ಮತ್ತೆ ಕೆಲವರು ಖಾರದ ಆಹಾರಕ್ಕೆ ಆದ್ಯತೆ ನೀಡುತ್ತಾರೆ. ಈ ಆಹಾರದ ಆಯ್ಕೆ ನಮ್ಮ ಜಾತಕದಲ್ಲಿರುವ ಗ್ರಹಗಳ ಸ್ಥಿತಿಗತಿಗಳ ಮೇಲೆ ಅವಲಂಬಿತವಾಗಿರುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರ ತಿಳಿಸುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.
ಸಿಹಿ ಆಹಾರವನ್ನು ಇಷ್ಟಪಡುವ ವ್ಯಕ್ತಿಗಳು:
ಸಿಹಿ ಆಹಾರವನ್ನು ಹೆಚ್ಚು ಇಷ್ಟಪಡುವವರ ಮೇಲೆ ಮುಖ್ಯವಾಗಿ ಗುರು ಗ್ರಹ (ಬೃಹಸ್ಪತಿ) ಮತ್ತು ಶುಕ್ರ ಗ್ರಹಗಳ ಪ್ರಭಾವವಿರುತ್ತದೆ. ಈ ಗ್ರಹಗಳ ಅನುಗ್ರಹದಿಂದಾಗಿ, ಸಿಹಿ ಪ್ರಿಯರು ಸಾಮಾನ್ಯವಾಗಿ ಕೆಲವು ವಿಶಿಷ್ಟ ಗುಣಲಕ್ಷಣಗಳನ್ನು ಹೊಂದಿರುತ್ತಾರೆ. ಇವರು ಸಾತ್ವಿಕ ಸ್ವಭಾವದವರು, ನಿಧಾನವಾಗಿ ಮಾತನಾಡುವವರು, ತಾಳ್ಮೆ ಮತ್ತು ಸೌಮ್ಯತೆಯನ್ನು ಹೊಂದಿರುತ್ತಾರೆ. ಯಾವುದೇ ಕಷ್ಟದ ಸಂದರ್ಭದಲ್ಲಿ ಗಲಿಬಿಲಿಗೊಳ್ಳದೆ, ಯೋಚನಾಶಕ್ತಿಯಿಂದ ವರ್ತಿಸುತ್ತಾರೆ. ಸಂಬಂಧಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾರೆ ಮತ್ತು ವಿವಾಹ ವಿಷಯಗಳಲ್ಲಿ ತಮ್ಮದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚು. ಇವರಲ್ಲಿ ಕಲೆ ಮತ್ತು ಪ್ರತಿಭೆ ಹೆಚ್ಚಾಗಿರುತ್ತದೆ. ಜೀವನದಲ್ಲಿ ಹಾಸಿಗೆ ಇದ್ದಷ್ಟು ಕಾಲು ಚಾಚುವ ಪ್ರವೃತ್ತಿ ಹೊಂದಿರುತ್ತಾರೆ. ಕೆಲವೊಮ್ಮೆ ಸಾಧಕರಾಗಿದ್ದರೂ, ಅದೃಷ್ಟವನ್ನು ಸರಿಯಾಗಿ ಬಳಸಿಕೊಳ್ಳದಿರುವ ಸಾಧ್ಯತೆಯೂ ಇರುತ್ತದೆ. ಇವರು ಬೇರೆಯವರ ಅಧೀನದಲ್ಲಿ ಇರಲು ಇಷ್ಟಪಡುವುದಿಲ್ಲ.
ಖಾರ ಆಹಾರವನ್ನು ಇಷ್ಟಪಡುವ ವ್ಯಕ್ತಿಗಳು:
ಖಾರವಾದ ಆಹಾರವನ್ನು ಇಷ್ಟಪಡುವವರ ಮೇಲೆ ಕುಜ ಗ್ರಹ (ಮಂಗಳ) ಮತ್ತು ರವಿ ಗ್ರಹಗಳ (ಸೂರ್ಯ) ಪ್ರಭಾವ ಹೆಚ್ಚಾಗಿರುತ್ತದೆ. ಇಂತಹ ವ್ಯಕ್ತಿಗಳು ಶಕ್ತಿವಂತರು, ಧೈರ್ಯವಂತರು ಮತ್ತು ಸವಾಲುಗಳನ್ನು ಎದುರಿಸಲು ಸಿದ್ಧರಿರುತ್ತಾರೆ. ಇವರಲ್ಲಿ ಒಂದು ಪ್ರಮುಖ ಗುಣವೆಂದರೆ ಬೇಗ ನಿರ್ಧಾರ ತೆಗೆದುಕೊಳ್ಳುವುದು. ಕೆಲವೊಮ್ಮೆ ಇದು ಆತುರದ ನಿರ್ಧಾರಗಳಾಗಿ ಮಾರ್ಪಟ್ಟು ಜೀವನದಲ್ಲಿ ಅಡೆತಡೆಗಳಿಗೆ ಕಾರಣವಾಗಬಹುದು. ಖಾರ ಪ್ರಿಯರು ನೇರವಾಗಿ ಮಾತನಾಡುವವರು, ಸ್ಪಷ್ಟವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವವರು ಆಗಿರುತ್ತಾರೆ. ಕೋಪ ಹೆಚ್ಚಾಗಿದ್ದರೂ, ಹೋರಾಟದ ಮನೋಭಾವ ಹೊಂದಿರುತ್ತಾರೆ. ತಮ್ಮನ್ನು ಇತರರೊಂದಿಗೆ ಹೋಲಿಸಿಕೊಳ್ಳುವ ಪ್ರವೃತ್ತಿ ಇವರಲ್ಲಿ ಕಂಡುಬರುತ್ತದೆ.
ಜೀವನದಲ್ಲಿ ಸಿಹಿ ಮತ್ತು ಖಾರ ಎರಡೂ ಅವಶ್ಯಕ. ಬೇವಿನ-ಬೆಲ್ಲ, ಎಳ್ಳು-ಬೆಲ್ಲದಂತಹ ಸಂಪ್ರದಾಯಗಳು ಈ ಸಮತೋಲನದ ಮಹತ್ವವನ್ನು ಸಾರುತ್ತವೆ. ಪೂರ್ವಿಕರು ಹಬ್ಬಗಳಲ್ಲಿ ಇಂತಹ ಆಹಾರ ಪದ್ಧತಿಗಳನ್ನು ಧಾರ್ಮಿಕವಾಗಿ, ವೈಜ್ಞಾನಿಕವಾಗಿ ಮತ್ತು ಸಾಮಾಜಿಕವಾಗಿ ಆಯಾ ಕಾಲಕ್ಕೆ ತಕ್ಕಂತೆ ರೂಪಿಸಿದ್ದಾರೆ. ಕೇವಲ ಸಿಹಿ ಅಥವಾ ಕೇವಲ ಖಾರ ಸೇವಿಸುವುದರಿಂದ ದೇಹಕ್ಕೆ ಸಂಪೂರ್ಣ ಪೋಷಣೆ ದೊರೆಯುವುದಿಲ್ಲ. ಸಮತೋಲಿತ ಆಹಾರ ಸೇವನೆ ದೇಹಕ್ಕೆ ಅತ್ಯಗತ್ಯ. ಸಿಹಿ ಮತ್ತು ಖಾರದ ಆಹಾರದ ಆಯ್ಕೆಯು ನಮ್ಮ ಶರೀರದಲ್ಲಿರುವ ರಜೋಗುಣ, ತಮೋಗುಣ ಮತ್ತು ಸಾತ್ವಿಕ ಗುಣಗಳನ್ನು ಪ್ರಜ್ವಲಿಸಲು ಮತ್ತು ವ್ಯಕ್ತಪಡಿಸಲು ಸಹಾಯ ಮಾಡುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಸಂಗೀತಾ ಶೃಂಗೇರಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಸ್ಪರ್ಧಿಸಿದ್ದರು. ಈ ಸೀಸನ್ ಬಳಿಕ ಅವರು ಸಿಂಹಿಣಿ ಎಂದೇ ಫೇಮಸ್ ಆದರು. ಇದಾದ ಬಳಿಕ ಅವರು ಒಪ್ಪಿಕೊಂಡ ಮೊದಲ ಸಿನಿಮಾ ಸೆಟ್ಟೇರಿದೆ.
ಸಂಗೀತಾ ಶೃಂಗೇರಿ ಅವರು ಬಿಗ್ ಬಾಸ್ನಿಂದ ಹೊರ ಬಂದ ಬಳಿಕ ‘ಮಾರಿಗೋಲ್ಡ್’ ಸಿನಿಮಾ ರಿಲೀಸ್ ಆಯಿತು. ಆದರೆ, ಈ ಚಿತ್ರ ಬಿಗ್ ಬಾಸ್ಗೂ ಮೊದಲು ಶೂಟ್ ಆಗಿತ್ತು. ಈಗ ಹೊಸ ಸಿನಿಮಾ ಒಪ್ಪಿಕೊಂಡಿರೋದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.
‘ಪದ್ಮನಾಭ ಆ್ಯಂಡ್ ಫ್ಯಾಮಿಲಿ’ ಹೆಸರಿನ ಹೊಸ ಸಿನಿಮಾ ಸೆಟ್ಟೇರಿದೆ. ಇಸ್ಮಾಯಿಲ್ ಅವರು ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ತುಳು ಹಾಗೂ ಕನ್ನಡ ಚಿತ್ರರಂಗದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಈ ಸಿನಿಮಾ ಬಗ್ಗೆ ಕುತೂಹಲ ಮೂಡಿದೆ.
ಸದಾಶಿವ ಶೆಟ್ಟಿ ಅವರು ‘ಪದ್ಮನಾಭ ಆ್ಯಂಡ್ ಫ್ಯಾಮಿಲಿ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ನಿರೀಕ್ಷೆ ಹುಟ್ಟುಹಾಕಿದೆ. ಬಿಗ್ ಬಾಸ್ ಬಳಿಕ ಒಪ್ಪಿದ ಮೊದಲ ಸಿನಿಮಾ ಇದಾಗಿದೆ.
ಸಂಗೀತಾ ಶೃಂಗೇರಿ ಅವರು ಕಿರುತೆರೆ ಮೂಲಕ ಗಮನ ಸೆಳೆದವರು. ಆ ಬಳಿಕ ಅವರು ಹಿರಿತೆರೆಗೆ ಕಾಲಿಟ್ಟರು. ಬಿಗ್ ಬಾಸ್ ಅವರಿಗೆ ಮತ್ತಷ್ಟು ಜನಪ್ರಿಯತೆ ತಂದುಕೊಟ್ಟಿತು.
ನೆಲಮಂಗಲ, ಮಾರ್ಚ್ 28: ಹಾಡಹಗಲೇ, ಜನಸಂಚಾರ ಇರುವ ಪ್ರದೇಶದಲ್ಲೇ ಖದೀಮರು ಮಹಿಳೆಯೊಬ್ಬರ ಮಾಂಗಲ್ಯ ಸರ ಕಿತ್ತು ಪರಾರಿಯಾದ ಘಟನೆ ನೆಲಮಂಗಲ ತಾಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಂಬಿಕಾ ಎಂಬವರು ಸ್ನೇಹಿತೆಯೊಂದಿಗೆ ಬೇಕರಿ ಮುಂದೆ ನಿಂತು ಮಾತನಾಡುತ್ತಿದ್ದಾಗ, ಅಲ್ಲೇ ಜ್ಯೂಸ್ ಕುಡಿಯುತ್ತಿದ್ದಂತೆ ನಟಿಸಿದ ಇಬ್ಬರು ಖತರ್ನಾಕ್ ಖದೀಮರು ಕ್ಷಣಾರ್ಧದಲ್ಲಿ ಮಹಿಳೆಯ ಕತ್ತಿಗೆ ಕೈ ಹಾಕಿ ಚಿನ್ನದ ಸರವನ್ನು ಕಿತ್ತು ಪರಾರಿಯಾಗಿದ್ದಾರೆ. ಸರ ಎಳೆದ ರಭಸಕ್ಕೆ ಮಹಿಳೆ ನೆಲಕ್ಕುರುಳಿದ್ದಾರೆ. ಸುಮಾರು 55 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕದ್ದೊಯ್ಯಲಾಗಿದೆ.
ಸರ ಕಳವಿನ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ. ಘಟನೆ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
ವರದಿ: ಮಂಜುನಾಥ್, ಟಿವಿ9 ನೆಲಮಂಗಲ
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಆರಂಭಕ್ಕೆ ವೇದಿಕೆ ಸಜ್ಜಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಈ ಮುಖಾಮುಖಿಗೂ ಮುನ್ನವೇ ಇಂಗ್ಲೆಂಡ್ ಆಟಗಾರ ಬೆನ್ ಡಕೆಟ್ ಐಪಿಎಲ್ನಿಂದ ಹಿಂದೆ ಸರಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದ ಬೆನ್ ಡಕೆಟ್ ಟೂರ್ನಿ ಆರಂಭಕ್ಕೂ ಮುನ್ನ ತಮ್ಮ ಒಪ್ಪಂದದಿಂದ ಹಿಂದೆ ಸರಿದ ಕಾರಣ ಇದೀಗ ನಿಷೇಧಕ್ಕೆ ಒಳಗಾಗಿದ್ದಾರೆ. ಅಂದರೆ ಬಿಸಿಸಿಐ ನಿಯಮದಂತೆ, ಯಾವುದೇ ವಿದೇಶಿ ಆಟಗಾರ ಹರಾಜಿನಲ್ಲಿ ಮಾರಾಟವಾದ ನಂತರ, ವೈದ್ಯಕೀಯ ಕಾರಣಗಳಿಲ್ಲದೆ ಟೂರ್ನಿಯಿಂದ ಹಿಂದೆ ಸರಿದರೆ ಅಂತಹ ಆಟಗಾರರನ್ನು ಮುಂದಿನ ಎರಡು ವರ್ಷಗಳ ಕಾಲ ಐಪಿಎಲ್ನಿಂದ ನಿಷೇಧಿಸಲಾಗುತ್ತದೆ. ಅದರಂತೆ ಇಬ್ಬರು ಇಂಗ್ಲೆಂಡ್ ಆಟಗಾರರು ಐಪಿಎಲ್ನಿಂದ ನಿಷೇಧಕ್ಕೆ ಒಳಗಾಗಿದ್ದಾರೆ. ಅವರೆಂದರೆ…
ಹ್ಯಾರಿ ಬ್ರೂಕ್: ಐಪಿಎಲ್ 2025ರ ಮೆಗಾ ಹರಾಜಿನ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಇಂಗ್ಲೆಂಡ್ನ ಹೊಡಿಬಡಿ ದಾಂಡಿಗ ಹ್ಯಾರಿ ಬ್ರೂಕ್ ಅವರನ್ನು ಬರೋಬ್ಬರಿ 6.25 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಟೂರ್ನಿ ಆರಂಭಕ್ಕೂ ಮುನ್ನ ಕೆಲಸದ ಒತ್ತಡದ ಕಾರಣ ನೀಡಿ ಹಿಂದೆ ಸರಿದಿದ್ದರಿಂದ ಅವರ ಮೇಲೆ 2 ವರ್ಷಗಳವರೆಗೆ ನಿಷೇಧ ಹೇರಲಾಗಿದೆ. ಹೀಗಾಗಿಯೇ ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಹ್ಯಾರಿ ಬ್ರೂಕ್ ಹೆಸರು ಕಾಣಿಸಿಕೊಂಡಿರಲಿಲ್ಲ. ಅಂದರೆ 2027 ರ ಹರಾಜಿನಲ್ಲಿ ಅವರು ಹೆಸರು ನೀಡಬಹುದು.
ಬೆನ್ ಡಕೆಟ್: ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಈ ಬಾರಿಯ ಮಿನಿ ಹರಾಜಿನ ಮೂಲಕ ಇಂಗ್ಲೆಂಡ್ ತಂಡದ ಎಡಗೈ ದಾಂಡಿಗ ಬೆನ್ ಡಕೆಟ್ ಅವರನ್ನು 2 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಟೂರ್ನಿ ಆರಂಭಕ್ಕೂ ಮುನ್ನ ಅಂತರಾಷ್ಟ್ರೀಯ ಕ್ರಿಕೆಟ್ನತ್ತ ಗಮನ ಹರಿಸುವ ಸಲುವಾಗಿ ಐಪಿಎಲ್ನಿಂದ ಹಿಂದೆ ಸರಿಯುತ್ತಿರುವುದಾಗಿ ಡಕೆಟ್ ತಿಳಿಸಿದ್ದಾರೆ. ಹೀಗಾಗಿ ಅವರ ಮೇಲೂ 2 ವರ್ಷಗಳ ನಿಷೇಧ ಹೇರಲಾಗಿದೆ. ಹೀಗಾಗಿ 2027ರ ಹರಾಜಿಗೆ ಬೆನ್ ಡಕೆಟ್ ಅವರ ಹೆಸರನ್ನು ಪರಿಗಣಿಸಲಾಗುವುದಿಲ್ಲ.
ಮೊನಾಲಿಸಾ ಭೋಸ್ಲೆ (Monalisa Bhosle) ಇತ್ತೀಚೆಗೆ ಪ್ರೇಮ ವಿವಾಹವಾದರು. ಆರು ತಿಂಗಳ ಕಾಲ ಫರ್ಮಾನ್ ಖಾನ್ ಎಂಬ ವ್ಯಕ್ತಿಯನ್ನು ಪ್ರೀತಿಸುತ್ತಿದ್ದ ಮೊನಾಲಿಸಾ ಇತ್ತೀಚೆಗೆ ಕೇರಳ ಪೊಲೀಸರ ಸಮ್ಮುಖದಲ್ಲಿ ವಿವಾಹವಾದರು. ಬಾಲಿವುಡ್ ನಿರ್ದೇಶಕ ಸನೋಜ್ ಮಿಶ್ರಾ ಇವರ ಮದುವೆ ಅಮಾನ್ಯವಾಗಿದೆ ಎಂದು ಆಕ್ಷೇಪಿಸಿದರು. ನಿರ್ದೇಶಕ ಸನೋಜ್ ಮಿಶ್ರಾ ಸಿನಿಮಾದಲ್ಲಿಯೇ ಮೊನಾಲಿಸಾ ನಟಿಸುತ್ತಿದ್ದಾರೆ. ಅವರು ಕೆಟ್ಟದಾಗಿ ನಡೆದುಕೊಂಡಿದ್ದಾರೆ ಎಂದು ಮೊನಾಲಿಸಾ ಆರೋಪಿಸಿದ್ದರು. ಇದನ್ನು ಸನೋಜ್ ಅಲ್ಲಗಳೆದಿದ್ದಾರೆ.
ಇತ್ತೀಚೆಗೆ ಕೇರಳದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೊನಾಲಿಸಾ, ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದರು. ನಿರ್ದೇಶಕ ಸನೋಜ್ ಮಿಶ್ರಾ ಚಲನಚಿತ್ರ ಅವಕಾಶದ ಹೆಸರಿನಲ್ಲಿ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ, ಎಲ್ಲೆಡೆ ಸ್ಪರ್ಶಿಸುವ ಮೂಲಕ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅವರು ಹೇಳಿದ್ದರು. ಈ ಬಗ್ಗೆ ತನ್ನ ಕುಟುಂಬಕ್ಕೆ ಹೇಳಿದ್ದರೂ, ಅದು ತನ್ನ ಮೊದಲ ಚಿತ್ರವಾದ್ದರಿಂದ ತನ್ನ ಕುಟುಂಬವು ಮೌನವಾಗಿರಲು ಹೇಳಿತ್ತು ಎಂದು ಮೊನಾಲಿಸಾ ಹೇಳಿದರು. ನಿರ್ದೇಶಕ ಸನೋಜ್ ಮಿಶ್ರಾ ಇತ್ತೀಚೆಗೆ ಮೊನಾಲಿಸಾ ಅವರ ಆರೋಪಗಳಿಗೆ ಪ್ರತಿಕ್ರಿಯಿಸಿದರು.
ಇತ್ತೀಚಿನ ಸಂದರ್ಶನವೊಂದರಲ್ಲಿ ಸನೋಜ್ ಮಿಶ್ರಾ, ಮೊನಾಲಿಸಾ ಅವರ ಹೇಳಿಕೆಗಳು ಸುಳ್ಳು ಎಂದು ಹೇಳಿದ್ದಾರೆ. ‘ಅವರ ಕುಟುಂಬದ ಸುಮಾರು 7-8 ಜನರು ಇನ್ನೂ ಉಜ್ಜಯಿನಿಯಲ್ಲಿರುವ ನನ್ನ ಮನೆಯಲ್ಲಿ ವಾಸಿಸುತ್ತಿದ್ದಾರೆ. ನಾನು ಅವರ ಮದುವೆ ಅಮಾನ್ಯ ಎಂದು ಹೇಳಿದೆ. ಅದಕ್ಕಾಗಿಯೇ ಅವರು ನನ್ನ ಮೇಲೆ ಆರೋಪ ಮಾಡಿದರು. ಇಷ್ಟು ದಿನ, ನಾನು ಅವರಿಗೆ ಸಂಭಾಷಣೆ ಹೇಳುವುದು, ನಟಿಸುವುದು, ಕಥೆಯನ್ನು ಅರ್ಥಮಾಡಿಕೊಳ್ಳುವುದು ಮತ್ತು ನಗುವುದು ಮತ್ತು ಅಳುವುದು ಹೇಗೆ ಎಂದು ಕಲಿಸಲು ಶ್ರಮಿಸುತ್ತಿದ್ದಾಗ, ಅವರಿಗೆ ಯಾವುದೇ ಸಮಸ್ಯೆಗಳಿರಲಿಲ್ಲ. ಅವರ ಮೇಲೆ ಹಲ್ಲೆ ನಡೆದಿದ್ದರೆ, ಅವರು ತಕ್ಷಣವೇ ತಮ್ಮ ಕುಟುಂಬಕ್ಕೆ ದೂರು ನೀಡುತ್ತಿದ್ದರು. ಆದರೆ ಅವರು ಫರ್ಮಾನ್ ಖಾನ್ ಅವರೊಂದಿಗಿನ ಅವರ ಮದುವೆ ಅಮಾನ್ಯ ಎಂದು ನಾನು ಅವರಿಗೆ ಹೇಳಿದ್ದರಿಂದ ಅವರು ನನ್ನ ಮೇಲೆ ಅಂತಹ ಆರೋಪಗಳನ್ನು ಮಾಡಿದರು’ ಎಂದು ಅವರು ಹೇಳಿದರು.
ಮೊನಾಲಿಸಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಅವರು ಹೇಳಿದ್ದಾರೆ. ಶೀಘ್ರದಲ್ಲೇ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಸನೋಜ್ ಮಿಶ್ರಾ ಸ್ಪಷ್ಟಪಡಿಸಿದ್ದಾರೆ. ಒಂದು ಅಥವಾ ಎರಡು ದಿನಗಳಲ್ಲಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಅವರು ಹೇಳಿದರು. ಅವರು ಹೇಳುವುದು ನಿಜವಾಗಿದ್ದರೆ, ಅವರು ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದಿದ್ದಾರೆ.
ಬೆಂಗಳೂರು, ಮಾರ್ಚ್ 28: ರಾಜ್ಯದ ಹಲವೆಡೆ ಕಳೆದ ಮೂರು-ನಾಲ್ಕು ದಿನಗಳಿಂದ ಗುಡುಗು ಸಹಿತ ಮಳೆಯಾಗಿದೆ. ಇಂದೂ ಸಹ ಹಲವೆಡೆ ಮಳೆಯಾಗುವ (Weather Forecast) ಸೂಚನೆಯಿದ್ದು, ಹವಾಮಾನ ಇಲಾಖೆ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಕೆಲ ಭಾಗಗಳಲ್ಲಿ ಒಣ ಹವೆಯ ವಾತಾವರಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್?
ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ?
ಕರಾವಳಿಯ ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಒಣಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ 30-40 Km/h ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಶುಷ್ಕ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ.
ಬಾಲಿವುಡ್, ಸ್ಯಾಂಡಲ್ವುಡ್ ಸೇರಿದಂತೆ ಎಲ್ಲಾ ಚಿತ್ರರಂಗದಲ್ಲೂ ಪಾಪರಾಜಿ ಸಂಸ್ಕೃತಿ ಜೋರಾಗಿದೆ. ಸೆಲೆಬ್ರಿಟಿಗಳು ಎಲ್ಲೇ ಕಾಣಿಸಿಕೊಂಡರೂ ಫೋಟೋ ಕ್ಲಿಕ್ಕಿಸುತ್ತಾರೆ, ವಿಡಿಯೋ ಸೆರೆ ಹಿಡಿಯಲಾಗುತ್ತದೆ. ನಂತರ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಲಾಗುತ್ತದೆ. ಈ ವಿಷಯ ಸಾಕಷ್ಟು ಚರ್ಚೆ ಆಗುತ್ತಿದೆ ಎಂದೇ ಹೇಳಬಹುದು. ಕೆಲವರು ಇದನ್ನು ವಿರೋಧಿಸಿದರೆ, ಇನ್ನೂ ಕೆಲವರು ಇದನ್ನು ಬೆಂಬಲಿಸುತ್ತಿದ್ದಾರೆ. ಹೀಗಿರುವಾಗಲೇ ಅಕ್ಷಯ್ ಕುಮಾರ್ ಅವರು ಈ ವಿಷಯವಾಗಿ ಮಾತನಾಡಿದ್ದಾರೆ. ಫೋಟೋ ತೆಗೆದಿಲ್ಲ ಅಂದ್ರೇನೆ ಸಮಸ್ಯೆ ಅಂತ ಅವರು ನೇರವಾಗಿ ಹೇಳೀದ್ದಾರೆ.
ಬಾಲಿವುಡ್ ಅಲ್ಲಿ ಜಯಾ ಬಚ್ಚನ್ ಸೇರಿದಂತೆ ಅನೇಕರು ಇದ್ದಾರೆ. ಅವರಿಗೆ ಪಾಪರಾಜಿಗಳನ್ನು ಕಂಡರೆ ಸಾಕು ಸಾಕಷ್ಟು ಕೋಪ ಬರುತ್ತದೆ. ಅವರು ಸಿಡಿದೇಳುತ್ತಾರೆ. ಆದರೆ, ಅಕ್ಷಯ್ ಕುಮಾರ್ ಅವರು ಆ ರೀತಿ ಅಲ್ಲ. ತಾವು ಸೆಲೆಬ್ರಿಟಿ ಎಂಬುದನ್ನು ಒಪ್ಪಿಕೊಂಡಿದ್ದು, ಫೋಟೋ ಕ್ಲಿಕ್ಕಿಸಿದರೆ ಯಾವುದೇ ಸಮಸ್ಯೆ ಇಲ್ಲ ಎಂದು ನೇರವಾಗಿ ಹೇಳಿದ್ದಾರೆ.
‘ನಾನು ವಿಮಾನ ನಿಲ್ದಾಣದಿಂದ ಹೊರ ಬರುತ್ತಿರುತ್ತೇನೆ. ಕೆಲವೊಮ್ಮೆ ನನ್ನ ಮಕ್ಕಳು, ಪತ್ನಿ ಕೂಡ ಇರ್ತಾರೆ. ನನ್ನ ಫೋಟೋ ಕ್ಲಿಕ್ಕಿಸಿದ್ರೆ ಅವನಿಗೆ ದುಡ್ಡು ಸಿಗುತ್ತೆ. ಅವನಿಗೆ ದುಡ್ಡು ಸಿಗುತ್ತೆ ಅಂದ್ರೆ ಫೋಟೋ ಕ್ಲಿಕ್ಕಿಸಿಕೊಳ್ಳಲಿ. ತೊಂದರೆ ಏನಿದೆ’ ಎಂದು ಅಕ್ಷಯ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.
‘ನನ್ನ ಫೋಟೋ ತೆಗೆದರೆ ಅವನ ಮನೆ ನಡೆಯುತ್ತೆ. ಆತ ಖುಷಿ ಪಡುತ್ತಾನೆ. ಪ್ರೈವಸಿ ಅನ್ನೋದು ಎಲ್ಲಿದೆ? ಫೋಟೋ ತೆಗೆದಿಲ್ಲ ಅಂದ್ರೇನೆ ಸಮಸ್ಯೆ. ಆಗ ಯೋಚಿಸಬೇಕು. ಆಗ ಸಮಸ್ಯೆ ಬರುತ್ತದೆ. ನಾನು ಎಲ್ಲಾದರೂ ಬಂದಾಗ ಫೋಟೋ ಕ್ಲಿಕ್ಕಸಿಲು ಜನರೇ ಬಂದಿಲ್ಲ ಎಂದ್ರೆ’ ಎಂದು ಅಕ್ಷಯ್ ಕುಮಾರ್ ಹೇಳಿದ್ದಾರೆ.
ಅಕ್ಷಯ್ ಕುಮಾರ್ ಅವರು ಒಂದು ಕಾಲದಲ್ಲಿ ಸಾಕಷ್ಟು ಬೇಡಿಕೆಯ ಹೀರೋ ಆಗಿದ್ದರು. ಆದರೆ, ಇತ್ತೀಚೆಗೆ ಬೇಡಿಕೆ ಕಡಿಮೆ ಆಗಿದೆ. ಅವರ ‘ಭೂತ್ ಬಂಗ್ಲಾ 2’ ಸಿನಿಮಾ ರಿಲೀಸ್ ಆಗುವುದರಲ್ಲಿದೆ.
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 19ನೇ ಆವೃತ್ತಿಗಾಗಿ ಬಿಸಿಸಿಐ (BCCI) ಕೆಲವು ಕಟ್ಟುನಿಟ್ಟಾದ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಇವುಗಳಲ್ಲಿ ಆಟಗಾರರ ಶಿಸ್ತು ಮತ್ತು ಮೈದಾನದ ನಿರ್ವಹಣೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಈ ಮೂಲಕ ಶಿಸ್ತು ಬದ್ಧ ಐಪಿಎಲ್ ಟೂರ್ನಿ ಆಯೋಜಿಸಲು ಪ್ಲ್ಯಾನ್ ರೂಪಿಸಿದೆ. ಇದಕ್ಕಾಗಿ ಜಾರಿ ಮಾಡಲಾಗಿರುವ ಹೊಸ ನಿಯಮಗಳ ಪಟ್ಟಿ ಈ ಕೆಳಗಿನಂತಿದೆ…
ಅಭ್ಯಾಸಕ್ಕೆ ನಿರ್ಬಂಧ: ಪಂದ್ಯ ನಡೆಯುವ ದಿನದಂದು ಮೈದಾನದಲ್ಲಿ ಯಾವುದೇ ರೀತಿಯ ಅಭ್ಯಾಸ ಅಥವಾ ವಾರ್ಮ್-ಅಪ್ ಮಾಡಲು ಅವಕಾಶವಿಲ್ಲ.
ನೆಟ್ಸ್ ಅಭ್ಯಾಸ: ತಂಡಗಳಿಗೆ ತಲಾ ಎರಡು ನೆಟ್ಸ್ ಮಾತ್ರ ನೀಡಲಾಗುತ್ತದೆ. ಒಂದು ತಂಡದ ಅಭ್ಯಾಸ ಮುಗಿದರೂ ಇನ್ನೊಂದು ತಂಡ ಅದನ್ನು ಬಳಸುವಂತಿಲ್ಲ.
ಸಿದ್ಧತೆಗೂ ನಿರ್ಬಂಧ: ಹೋಮ್ ಗ್ರೌಂಡ್ನಲ್ಲಿ ಮೊದಲ ಪಂದ್ಯಕ್ಕೆ ನಾಲ್ಕು ದಿನ ಮೊದಲು ಮುಖ್ಯ ಮೈದಾನದಲ್ಲಿ ಅಭ್ಯಾಸ ನಡೆಸುವಂತಿಲ್ಲ.
ಬಸ್ ಪ್ರಯಾಣ: ಅಭ್ಯಾಸದ ದಿನಗಳಲ್ಲಿ ಆಟಗಾರರು ಕಡ್ಡಾಯವಾಗಿ ತಂಡದ ಬಸ್ಸಿನಲ್ಲೇ ಪ್ರಯಾಣಿಸಬೇಕು. ಖಾಸಗಿ ವಾಹನಗಳ ಬಳಕೆಗೆ ನಿಷೇಧವಿದೆ.
ಕುಟುಂಬದವರಿಗೆ ನಿರ್ಬಂಧ: ಆಟಗಾರರ ಕುಟುಂಬದವರು ಅಥವಾ ಸ್ನೇಹಿತರು ತಂಡದ ಬಸ್ಸಿನಲ್ಲಿ ಪ್ರಯಾಣಿಸುವಂತಿಲ್ಲ ಮತ್ತು ಅಭ್ಯಾಸದ ವೇಳೆ ಮೈದಾನ ಪ್ರವೇಶಿಸುವಂತಿಲ್ಲ.
ಡ್ರೆಸ್ ಕೋಡ್: ಪಂದ್ಯದ ನಂತರದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸ್ಲೀವ್ಲೆಸ್ ಜೆರ್ಸಿ ಮತ್ತು ಫ್ಲಾಪಿ ಹ್ಯಾಟ್ ಧರಿಸುವುದನ್ನು ನಿಷೇಧಿಸಲಾಗಿದೆ.
ಇಂಪ್ಯಾಕ್ಟ್ ಪ್ಲೇಯರ್: ಟೀಕೆಗಳ ನಡುವೆಯೂ ಈ ನಿಯಮವು 2027 ರವರೆಗೆ ಮುಂದುವರಿಯಲಿದೆ.
ಬಾಲ್ ಬದಲಾವಣೆ: ಎರಡನೇ ಇನಿಂಗ್ಸ್ನಲ್ಲಿ ಇಬ್ಬನಿಯ ಪ್ರಭಾವ ತಡೆಯಲು 10 ಓವರ್ಗಳ ನಂತರ ಚೆಂಡನ್ನು ಬದಲಾಯಿಸಲು ಬೌಲಿಂಗ್ ತಂಡ ಮನವಿ ಮಾಡಬಹುದು.
ಆರೆಂಜ್ ಮತ್ತು ಪರ್ಪಲ್ ಕ್ಯಾಪ್: ಈ ಕ್ಯಾಪ್ ಹೊಂದಿರುವ ಆಟಗಾರರು ಪಂದ್ಯದ ಸಮಯದಲ್ಲಿ ಕಡ್ಡಾಯವಾಗಿ ಅದನ್ನು ಧರಿಸಬೇಕು.
ಬೌನ್ಸರ್ ನಿಯಮ: ಒಂದು ಓವರ್ನಲ್ಲಿ ಬೌಲರ್ಗಳು ಎರಡು ಬೌನ್ಸರ್ಗಳನ್ನು ಎಸೆಯುವ ನಿಯಮವು ಈ ಸೀಸನ್ನಲ್ಲೂ ಮುಂದುವರಿಯಲಿದೆ, ಇದು ಬ್ಯಾಟರ್ ಮತ್ತು ಬೌಲರ್ ನಡುವೆ ಸಮಾನ ಸ್ಪರ್ಧೆಯನ್ನು ನೀಡುತ್ತದೆ.
ಸ್ಮಾರ್ಟ್ ರಿಪ್ಲೇ ಸಿಸ್ಟಮ್: ತೀರ್ಪುಗಳಲ್ಲಿ ನಿಖರತೆ ತರಲು ಟಿವಿ ಅಂಪೈರ್ ಈಗ ಎಂಟು ಹೈ-ಸ್ಪೀಡ್ ಕ್ಯಾಮೆರಾಗಳ ನೇರ ದೃಶ್ಯಗಳನ್ನು ಪಡೆಯಲಿದ್ದಾರೆ. ಇದರಿಂದ ಸ್ಟಂಪಿಂಗ್, ರನ್ ಔಟ್ ಮತ್ತು ಕ್ಯಾಚ್ಗಳ ತೀರ್ಪು ಅತಿ ವೇಗವಾಗಿ ಸಿಗಲಿದೆ.
ಕ್ಯಾಚ್ ನಿಯಮ: ಆಟಗಾರನು ಚೆಂಡಿನ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸಿದ ನಂತರವೇ ಸಂಭ್ರಮಾಚರಣೆ ಮಾಡಬೇಕು, ಇಲ್ಲದಿದ್ದರೆ ಅದು ಕ್ಯಾಚ್ ಎಂದು ಪರಿಗಣಿಸಲ್ಪಡುವುದಿಲ್ಲ.
ಈ ಎಲ್ಲಾ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಒಂದು ವೇಳೆ ಈ ನಿಯಮಗಳನ್ನು ಮೀರಿದರೆ ದಂಡ ವಿಧಿಸುವ ಎಚ್ಚರಿಕೆಯನ್ನು ಸಹ ಬಿಸಿಸಿಐ ನೀಡಿದೆ. ಈ ಮೂಲಕ ಈ ಬಾರಿಯ ಐಪಿಎಲ್ ಅನ್ನು ಮತ್ತಷ್ಟು ಶಿಸ್ತುಬದ್ಧವಾಗಿ ಆಯೋಜಿಸಲು ಭಾರತೀಯ ಕ್ರಿಕೆಟ್ ಮಂಡಳಿ ಮುಂದಾಗಿದೆ.
‘ಧುರಂಧರ್ 2’ ಸಿನಿಮಾ (Dhurandhar 2) ಸೂಪರ್ ಹಿಟ್ ಆಗಿದೆ. ಮೊದಲ ಭಾಗ ಅಬ್ಬರಿಸಿತ್ತು. ಇದು ಎರಡನೇ ಪಾರ್ಟ್ ಹಿಟ್ ಆಗು ಸಹಕಾರಿ ಆಗಿದೆ. ಇಷ್ಟು ದಿನಗಳ ಕಾಲ ಮೊದಲ ಪಾರ್ಟ್ ರಿಲೀಸ್ ಆಗಿ ಬಹು ಸಮಯದ ಬಳಿಕ ಎರಡನೇ ಪಾರ್ಟ್ ಬರುತ್ತಿತ್ತು. ಆದರೆ, ‘ಧುರಂಧರ್ 2’ ವಿಷಯದಲ್ಲಿ ಆ ರೀತಿ ಆಗಿಲ್ಲ. ‘ಧುರಂಧರ್’ ರಿಲೀಸ್ ಆಗಿ ಕೇವಲ ಮೂರೇ ತಿಂಗಳಲ್ಲಿ ‘ಧುರಂಧರ್ 2’ ಸಿನಿಮಾ ತೆರೆಗೆ ಬಂದಿದೆ. ಇದು ಚಿತ್ರಕ್ಕೆ ಸಹಕಾರಿ ಆಗಿದೆ. ಈಗ ಇದರಿಂದ ರಾಜಮೌಳಿ ಪ್ಲ್ಯಾನ್ ಬದಲಿಸಿದ್ದಾರೆ ಎಂದು ವರದಿ ಆಗಿದೆ.
‘ಬಾಹುಬಲಿ’ ಚಿತ್ರವನ್ನು ರಾಜಮೌಳಿ ಎರಡು ಪಾರ್ಟ್ ಅಲ್ಲಿ ತಂದರು. ಅಲ್ಲಿಂದ ಎರಡು ಪಾರ್ಟ್ಗಳಲ್ಲಿ ಸಿನಿಮಾ ಮಾಡುವ ಟ್ರೆಂಡ್ ಜೋರಾಯಿತು. ಭಾರತದಲ್ಲಿ ಅನೇಕ ಭಾಷೆಗಳಲ್ಲಿ ಅನೇಕ ಸಿನಿಮಾಗಳು ಎರಡು ಪಾರ್ಟ್ ಅಲ್ಲಿ ತರಲಾಯಿತು. ಆದರೆ, ಕೊನೆ ಕೊನೆಗೆ ಇದಕ್ಕೆ ಅರ್ಥವೇ ಇಲ್ಲದಂತೆ ಆಯಿತು. ದುಡ್ಡು ಮಾಡುವ ಉದ್ದೇಶದಿಂದ ಸಿನಿಮಾಗಳನ್ನು ಎರಡು ಪಾರ್ಟ್ಗಳಲ್ಲಿ ತರಲಾಗುತ್ತಾ ಬಂತು. ಇದು ರಾಜಮೌಳಿಗೆ ಬೇಸರ ತರಿಸಿತ್ತು.
ಧುರಂಧರ್ ಸಿನಿಮಾ ರಿಲೀಸ್ಗೂ ಮೊದಲಿನ ವರದಿ ಪ್ರಕಾರ, ‘ವಾರಣಾಸಿ’ ಚಿತ್ರವನ್ನು ಒಂದೇ ಪಾರ್ಟ್ ಅಲ್ಲಿ ತೆರೆಗೆ ತರೋ ಪ್ಲ್ಯಾನ್ ಅಲ್ಲಿ ರಾಜಮೌಳಿ ಇದ್ದರು. ಎರಡು ಪಾರ್ಟ್ನ ಜನರು ಇಷ್ಟಪಡೋದಿಲ್ಲ ಎಂಬುದು ಅವರ ಊಹೆ ಆಗಿತ್ತು. ಆದರೆ, ಯಾವಾಗ ‘ಧುರಂಧರ್ 2’ ಸಿನಿಮಾ ಹಿಟ್ ಆಯಿತೋ ಅವರು ಮತ್ತೆ ಪ್ಲ್ಯಾನ್ ಬದಲಿಸಿದ್ದಾರೆ ಎನ್ನಲಾಗಿದೆ.
‘ಧುರಂಧರ್ 2’ ಸಿನಿಮಾ ಹಣ ಮಾಡುತ್ತಿರುವ ರೀತಿ ನೋಡಿ ಅನೇಕರಿಗೆ ಅಚ್ಚರಿ ಆಗಿದೆ. ಮೊದಲ ಭಾಗಕ್ಕೂ, ಎರಡನೇ ಪಾರ್ಟ್ಗೆ ಲಿಂಕ್ ಇತ್ತು. ರಾಜಮೌಳಿ ಸಿನಿಮಾಗಳಲ್ಲಿ ಸಸ್ಪೆನ್ಸ್ ಯಾವ ರೀತಿಯಲ್ಲಿ ಇಡುತ್ತಾರೆ ಎಂಬುದನ್ನು ಮತ್ತೆ ಹೇಳಬೇಕಿಲ್ಲ. ಅವರು ಈಗ ‘ವಾರಣಾಸಿ’ ಚಿತ್ರವನ್ನು ಎರಡು ಪಾರ್ಟ್ನಲ್ಲಿ ತರೋ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ.
ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ, ಪೃಥ್ವಿರಾಜ್ ಸುಕುಮಾರನ್ ಮೊದಲಾದವರು ‘ವಾರಣಾಸಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ದೊಡ್ಡ ಬಜೆಟ್ನಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಮುಂದಿನ ವರ್ಷ ಏಪ್ರಿಲ್ನಲ್ಲಿ ಸಿನಿಮಾ ತೆರೆಗೆ ಬರಲಿದೆ.