All posts by nagaraj11081993

ಪೋಷಕರೇ ಎಚ್ಚರ: ಬೆಂಗಳೂರಿನ ಸ್ಕೂಲ್ ಬಸ್​ಗಳ ಚಾಲಕರ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ಮಾಡಿದ ಪೊಲೀಸರೇ ಶಾಕ್!

ಪೋಷಕರೇ ಎಚ್ಚರ: ಬೆಂಗಳೂರಿನ ಸ್ಕೂಲ್ ಬಸ್​ಗಳ ಚಾಲಕರ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ಮಾಡಿದ ಪೊಲೀಸರೇ ಶಾಕ್!

ಬೆಂಗಳೂರು, ಮಾರ್ಚ್ 28: ಮಕ್ಕಳನ್ನು ಸುರಕ್ಷಿತವಾಗಿ ಶಾಲೆಗೆ ಕಳುಹಿಸುತ್ತಿದ್ದೇವೆ ಎಂದು ಭಾವಿಸಿರುವ ಪೋಷಕರಿಗೆ ಇದು ನಿಜಕ್ಕೂ ಆಘಾತಕಾರಿ ಸುದ್ದಿ. ಮಕ್ಕಳ ಭವಿಷ್ಯ ರೂಪಿಸಬೇಕಾದ ಶಾಲಾ ವಾಹನಗಳ ಚಾಲಕರೇ ಕುಡಿದು ಬಸ್ ಚಲಾಯಿಸುತ್ತಾ (Drunk and Drive) ಮಕ್ಕಳ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿರುವುದು ಬೆಳಕಿಗೆ ಬಂದಿದೆ. ಶುಕ್ರವಾರ (ಮಾರ್ಚ್​​ 27) ಬೆಳ್ಳಂಬೆಳಗ್ಗೆ ಬೆಂಗಳೂರು ಸಂಚಾರ ಪೊಲೀಸರು (Bangalore Traffic Police) ನಡೆಸಿದ ವಿಶೇಷ ಡ್ರಂಕ್ ಆ್ಯಂಡ್ ಡ್ರೈವ್ ಕಾರ್ಯಾಚರಣೆಯಲ್ಲಿ ಭರ್ಜರಿ ಬೇಟೆ ನಡೆದಿದೆ.

ಡ್ರಂಕ್ ಆ್ಯಂಡ್ ಡ್ರೈವ್ ಚೆಕ್ಕಿಂಗ್: ಪೊಲೀಸರಿಗೇ ಶಾಕ್!

ನಗರದಾದ್ಯಂತ ಸಂಚಾರ ವಿಭಾಗದ ಪೊಲೀಸರು ನಡೆಸಿದ ‘ಸ್ಪೆಷಲ್ ಡ್ರೈವ್’ನಲ್ಲಿ ಶಾಲಾ ಬಸ್ ಹಾಗೂ ನೀರಿನ ಟ್ಯಾಂಕರ್ ಚಾಲಕರನ್ನು ತಪಾಸಣೆಗೆ ಒಳಪಡಿಸಲಾಯಿತು. ಈ ವೇಳೆ ಖಾಸಗಿ ಶಾಲಾ ಬಸ್ ಚಾಲಕರ ಹೊಣೆಗೇಡಿತನ ಕಂಡು ಪೊಲೀಸರೇ ಬೆಚ್ಚಿಬಿದ್ದಿದ್ದಾರೆ.

ಟ್ರಾಫಿಕ್ ಪೊಲೀಸ್ ಕಾರ್ಯಾಚರಣೆಯ ಅಂಕಿಅಂಶ

  • ಪಾನಮತ್ತ ಶಾಲಾ ಬಸ್ ಚಾಲಕರು: 59
  • ಪಾನಮತ್ತ ನೀರಿನ ಟ್ಯಾಂಕರ್ ಚಾಲಕರು: 14

ಲೈಸೆನ್ಸ್ ರದ್ದು ಮಾಡಲು ಕ್ರಮ

ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ ಒಟ್ಟು 73 ಚಾಲಕರ ವಿರುದ್ಧ ಐಎಂವಿ (IMV) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕುಡಿದು ವಾಹನ ಚಾಲನೆ ಮಾಡುತ್ತಿದ್ದ ಚಾಲಕರುಗಳ ಚಾಲನಾ ಪರವಾನಗಿಯನ್ನು (DL) ಅಮಾನತುಗೊಳಿಸಲು ಆರ್‌ಟಿಒ (RTO) ಕಚೇರಿಗೆ ವರದಿ ಸಲ್ಲಿಸಲಾಗುತ್ತಿದೆ ಎಂದು ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಕಾರ್ತೀಕ್ ರೆಡ್ಡಿ ತಿಳಿಸಿದ್ದಾರೆ.

ಶಾಲೆಗಳ ಆಡಳಿತ ಮಂಡಳಿ ವಿರುದ್ಧ ಆಕ್ರೋಶ

ಹತ್ತಾರು ಸಾವಿರ ರೂಪಾಯಿ ಫೀಸು ಪಡೆಯುವ ಖಾಸಗಿ ಶಾಲೆಗಳು ಚಾಲಕರ ನೇಮಕಾತಿ ವೇಳೆ ಕನಿಷ್ಠ ಜವಾಬ್ದಾರಿ ತೋರುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಧನದಾಹಿ ಶಾಲೆಗಳು ಇಂತಹ ಕುಡುಕ ಚಾಲಕರಿಗೆ ಬ್ರೇಕ್ ಹಾಕದಿದ್ದರೆ ಮಕ್ಕಳ ಅಮೂಲ್ಯ ಜೀವಕ್ಕೆ ಅಪಾಯ ಕಟ್ಟಿಬುತ್ತಿ ಎಂಬ ಆತಂಕ ಸಾರ್ವಜನಿಕರಲ್ಲಿ ವ್ಯಕ್ತವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಮೊದಲ ಪಂದ್ಯಕ್ಕೆ RCB ತಂಡದ ಮೂವರು ಅಲಭ್ಯ..!

Source link

Daily Devotional: ದೋಷ ನಿವಾರಣೆಗೆ ಹೋಮಗಳನ್ನ ಎಲ್ಲಿ ಮಾಡಬೇಕು?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ದೋಷ ನಿವಾರಣೆಗೆ ಹೋಮಗಳನ್ನು ಮನೆಯಲ್ಲಿ ಮಾಡಬೇಕೇ, ದೇವಸ್ಥಾನದಲ್ಲಿ ಮಾಡಬೇಕೇ?ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ.ಬದುಕಿನಲ್ಲಿ ಸಂಕಷ್ಟಗಳು ಎದುರಾದಾಗ, ದಿಕ್ಕು ತೋಚದಾದಾಗ, ಸಾಡೇಸಾತಿ, ಅರ್ಧಾಷ್ಟಮ, ಕರ್ಮ ಫಲಗಳಂತಹ ಸಮಸ್ಯೆಗಳಿಂದ ಬಳಲುತ್ತಿರುವಾಗ, ಅಥವಾ ಯಾವುದೇ ವೈಫಲ್ಯಗಳು ಕಾಡಿದಾಗ, ಮನುಷ್ಯ ದೈವಿಕ ಕಾರ್ಯಗಳತ್ತ ಮುಖ ಮಾಡುತ್ತಾನೆ. ಹೋಮ, ಹವನ, ಪೂಜೆಗಳು ಇದಕ್ಕೆ ಪರಿಹಾರ ಎಂಬ ನಂಬಿಕೆ ಇದೆ. ಆದರೆ, ಹೋಮಗಳನ್ನು ಮನೆಯಲ್ಲಿ ಮಾಡಿಸುವುದು ಉತ್ತಮವೇ ಅಥವಾ ದೇವಸ್ಥಾನಗಳಲ್ಲಿ ಮಾಡಿಸುವುದು ಶ್ರೇಷ್ಠವೇ ಎಂಬ ಪ್ರಶ್ನೆ ಸಾಮಾನ್ಯವಾಗಿ ಉದ್ಭವಿಸುತ್ತದೆ ಎಂದು ಗುರೂಜಿ ಹೇಳಿದ್ದಾರೆ.

ಅಭಿವೃದ್ಧಿಗಾಗಿ, ಶ್ರೇಯಸ್ಸಿಗಾಗಿ, ಆರೋಗ್ಯಕ್ಕಾಗಿ ಅಥವಾ ಸಮೃದ್ಧಿಗಾಗಿ ಮಾಡುವ ಹೋಮಗಳನ್ನು ಮನೆಯಲ್ಲಿ ಮಾಡಿಸಿಕೊಳ್ಳುವುದು ಸೂಕ್ತ. ಉದಾಹರಣೆಗೆ, ವಾಸ್ತು ಪೂಜೆ, ಗಣಹೋಮ, ಸತ್ಯನಾರಾಯಣ ಸ್ವಾಮಿ ಹೋಮಗಳನ್ನು ಮನೆಯಲ್ಲಿ ಮಾಡಬಹುದು. ಆದರೆ, ಸರ್ಪದೋಷ, ಮೃತ್ಯುದೋಷ, ಗ್ರಹದೋಷಗಳಂತಹ ದೋಷ ನಿವಾರಣಾ ಹೋಮಗಳು ಮತ್ತು ಶಾಂತಿ ಪೂಜೆಗಳನ್ನು ಸಂಬಂಧಪಟ್ಟ ದೇವಾಲಯಗಳಲ್ಲಿ ಮಾಡಿಸುವುದು ಹೆಚ್ಚು ಫಲಪ್ರದ ಎಂಬುದು ಡಾ. ಬಸವರಾಜ್ ಗುರೂಜಿಯ ಸಲಹೆ.

 

 

 

Source link

Horoscope Today: ಇಂದು ಈ ರಾಶಿಯವರು ಹಣಕಾಸು ವಿಚಾರದಲ್ಲಿ ಎಚ್ಚರ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 28​, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ದಶಮಿ ತಿಥಿಯಾಗಿದೆ. ಇಂದು ರಾಹುಕಾಲ ಬೆಳಿಗ್ಗೆ 9:21 ರಿಂದ 10:53 ರವರೆಗೆ ಇರಲಿದ್ದು, ಸರ್ವಸಿದ್ಧಿ ಕಾಲ ಮಧ್ಯಾಹ್ನ 1:56 ರಿಂದ 3:28 ರವರೆಗೆ ಇರುತ್ತದೆ. ಶನಿ ಭಗವಾನ್, ಹನುಮಾನ್ ಮತ್ತು ಶ್ರೀ ವೆಂಕಟೇಶ್ವರ ಸ್ವಾಮಿಯ ಆಶೀರ್ವಾದಕ್ಕೆ ಈ ದಿನವು ವಿಶೇಷವಾಗಿದೆ ಎಂದು ಗುರೂಜಿ ಹೇಳಿದ್ದಾರೆ.

 

 

 

Source link

ಹತ್ತೇ ದಿನದಲ್ಲಿ ‘KGF 2’ ಲೈಫ್​​ ಟೈಮ್ ಕಲೆಕ್ಷನ್ ಬ್ರೇಕ್ ಮಾಡಲಿದೆ ‘ಧುರಂಧರ್ 2’

‘ಧುರಂಧರ್ 2’ ಸಿನಿಮಾ (Dhurandhar 2 Movie) ಬಾಕ್ಸ್ ಆಫೀಸ್​​​ನಲ್ಲಿ ಅಬ್ಬರಿಸುತ್ತಿದೆ. ಈ ಚಿತ್ರದ ಕಲೆಕ್ಷನ್ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಈ ಸಿನಿಮಾ ಒಂದೇ ವಾರಕ್ಕೆ ಸಾವಿರ ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇನ್ನು 10 ದಿನಕ್ಕೆ ‘ಕೆಜಿಎಫ್ 2’ ಲೈಫ್​​ಟೈಮ್ ದಾಖಲೆಯನ್ನು ಬ್ರೇಕ್ ಮಾಡುವ ಎಲ್ಲಾ ಸೂಚನೆ ಸಿಕ್ಕಿದೆ. ಹೀಗೆಯೇ ಗಳಿಕೆ ಮುಂದುವರಿದರೆ ಸಿನಿಮಾ ಮತ್ತಷ್ಟು ದಾಖಲೆಗಳನ್ನು ಬ್ರೇಕ್ ಮಾಡುವ ಸಾಧ್ಯತೆ ಇದೆ.

‘ಧುರಂಧರ್ 2’ ಸಿನಿಮಾದಲ್ಲಿ ರಣವೀರ್ ಸಿಂಗ್ ನಟಿಸಿದ್ದಾರೆ. ಈ ಚಿತ್ರದಲ್ಲಿ ಸಾರಾ ಅರ್ಜುನ್, ಸಂಜಯ್ ದತ್, ಅರ್ಜುನ್ ರಾಮ್​ ಪಾಲ್ ಮೊದಲಾದವರು ಬಣ್ಣ ಹಚ್ಚಿದ್ದಾರೆ. ಈ ಸಿನಿಮಾ ವಿಶ್ವ ಮಟ್ಟದಲ್ಲಿ 1,128 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇಂದು ಚಿತ್ರದ ಕಲೆಕ್ಷನ್ 100 ಕೋಟಿ ರೂಪಾಯಿ ದಾಟಲಿದೆ. ಹಾಗಾದಲ್ಲಿ ‘ಕೆಜಿಎಫ್ 2’ ದಾಖಲೆಯನ್ನು ಈ ಸಿನಿಮಾ 10 ದಿನದಲ್ಲಿ ಬ್ರೇಕ್ ಮಾಡಿದಂತೆ ಆಗಲಿದೆ.

ಯಶ್​ ನಟನೆಯ ‘ಕೆಜಿಎಫ್ 2’ ಸಿನಿಮಾ 2022ರಲ್ಲಿ ರಿಲೀಸ್ ಆಯಿತು. ಈ ಸಿನಿಮಾ ಬಾಕ್ಸ್ ಆಫೀಸ್​​​ನಲ್ಲಿ 1200 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಬಾಲಿವುಡ್​​ನಲ್ಲೂ ಈ ಸಿನಿಮಾ ಹಲವು ದಾಖಲೆಗಳನ್ನು ಬರೆದಿತ್ತು. ಈಗ ಆ ದಾಖಲೆ ಕೇವಲ 10 ದಿನದಲ್ಲಿ ‘ಧುರಂಧರ್ 2’ ಉಡೀಸ್ ಮಾಡಿದೆ.

ಇದನ್ನೂ ಓದಿ: ನಮಗೆ ರಸ್ತೆ ಇಲ್ಲ, 500 ಕೋಟಿ ರೂ. ಕೊಡಿ: ‘ಧುರಂಧರ್ 2’ ತಂಡಕ್ಕೆ ಪಾಕಿಸ್ತಾನಿಗಳ ಮನವಿ

‘ಧುರಂಧರ್ 2’ ಸಿನಿಮಾ ಇಷ್ಟು ಅಬ್ಬರದ ಕಲೆಕ್ಷನ್ ಮಾಡಲು ಚಿತ್ರದ ಟಿಕೆಟ್ ಬೆಲೆ ಕೂಡ ಕಾರಣ. ಹೌದು, ಸಿನಿಮಾ ಟಿಕೆಟ್ ದರವನ್ನು ತಂಡದವರು ಬೇಕಾಬಿಟ್ಟಿ ಏರಿಕೆ ಮಾಡಿದ್ದಾರೆ. ಕರ್ನಾಟಕದಲ್ಲಂತೂ ಮಲ್ಟಿಪ್ಲೆಕ್ಸ್​​ಗಳಲ್ಲಿ 400 ರೂಪಾಯಿಯಿಂದ ಟಿಕೆಟ್ ದರ ಆರಂಭ ಆಗುತ್ತದೆ. ಇದು ಚಿತ್ರಕ್ಕೆ ಲಾಭ ತಂದಿದೆ. ಈ ಸಿನಿಮಾದಿಂದ ಜಿಯೋ ಪ್ರೊಡಕ್ಷನ್ಸ್ ದೊಡ್ಡ ಲಾಭ ಕಾಣುತ್ತಿದೆ. ಈ ಗಳಿಕೆ ಇನ್ನೂ ಕೆಲವು ವಾರ ಮುಂದುವರಿಯುವ ನಿರೀಕ್ಷೆ ಇದೆ. ಈ ಚಿತ್ರದ ಒಟ್ಟಾರೆ ಕಲೆಕ್ಷನ್ 2000 ಸಾವಿರ ಕೋಟಿ ರೂಪಾಯಿ ದಾಟುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

IPL 2026: ಐಪಿಎಲ್​​ನಿಂದ 9 ಆಟಗಾರರು ಔಟ್..!

Source link

ಇಂದಿನಿಂದ ಐಪಿಎಲ್​, ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ತಡರಾತ್ರಿ 2 ಗಂಟೆಯವರೆಗೆ ನಮ್ಮ ಮೆಟ್ರೋ ಸಂಚಾರ

ಬೆಂಗಳೂರು, ಮಾರ್ಚ್ 28: ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಐಪಿಎಲ್ ಪಂದ್ಯದ ಹಿನ್ನೆಲೆಯಲ್ಲಿ ಬಿಎಂಆರ್‌ಸಿಎಲ್ (BMRCL) ಮೆಟ್ರೋ ರೈಲು ಸೇವಾ ಅವಧಿಯನ್ನು ವಿಸ್ತರಿಸಿದೆ. ಕ್ರಿಕೆಟ್ ಪ್ರೇಕ್ಷಕರಿಗೆ ಸುಗಮ ಪ್ರಯಾಣ ಕಲ್ಪಿಸಲು ಮತ್ತು ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರೇಕ್ಷಕರು ಹೆಚ್ಚು ಮೆಟ್ರೋ ಸೇವೆಯನ್ನೇ ಬಳಸಿಕೊಳ್ಳುವಂತೆ ಸಂಚಾರಿ ಪೊಲೀಸರೂ ಸಹ ಮನವಿ ಮಾಡಿದ್ದಾರೆ.

ಪಂದ್ಯದ ದಿನದಂದು ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ಸೇವೆಯನ್ನು ರಾತ್ರಿ 11 ಗಂಟೆಯ ಬದಲಾಗಿ ತಡರಾತ್ರಿ 2 ಗಂಟೆಯವರೆಗೆ ವಿಸ್ತರಿಸಲಾಗಿದೆ. ಮೆಜೆಸ್ಟಿಕ್ ನಿಲ್ದಾಣದಿಂದ ನಾಲ್ಕೂ ದಿಕ್ಕುಗಳಿಗೆ ಕೊನೆಯ ರೈಲು ಮಧ್ಯರಾತ್ರಿ 1:30ಕ್ಕೆ ಹೊರಡಲಿದೆ.

ಕೊನೆಯ ರೈಲು ಹೊರಡುವ ಸಮಯ

  • ವೈಟ್‌ಫೀಲ್ಡ್ (ಕಾಡುಗೋಡಿ): ರಾತ್ರಿ 12:30
  • ಚಲ್ಲಘಟ್ಟ: ರಾತ್ರಿ 12:45
  • ರೇಷ್ಮೆ ಸಂಸ್ಥೆ ಮತ್ತು ಮಾದಾವರ: ರಾತ್ರಿ 12:45
  • ಬೊಮ್ಮಸಂದ್ರ: ರಾತ್ರಿ 01:00
  • ಆರ್.ವಿ. ರಸ್ತೆ: ರಾತ್ರಿ 02:00

ಟಿಕೆಟ್ ರಹಿತ ಪ್ರಯಾಣಕ್ಕೆ ಕ್ಯೂಆರ್ ಕೋಡ್

ಐಪಿಎಲ್ ಪಂದ್ಯದ ಟಿಕೆಟ್‌ಗಳಲ್ಲಿ ಈಗಾಗಲೇ ನಮ್ಮ ಮೆಟ್ರೋ ಕ್ಯೂಆರ್ ಕೋಡ್ (ಟೂ-ವೇ ಟ್ರಾವೆಲ್) ಮುದ್ರಿತವಾಗಿರುತ್ತದೆ. ಡಿಜಿಟಲ್ ಟಿಕೆಟ್ ಹೊಂದಿರುವವರು ಸಹ ಇದನ್ನು ಬಳಸಿ ಪ್ರಯಾಣಿಸಬಹುದು. ಕ್ರೀಡಾಂಗಣಕ್ಕೆ ಬರುವವರು ಕಬ್ಬನ್ ಪಾರ್ಕ್ ಅಥವಾ ಮಹಾತ್ಮ ಗಾಂಧಿ ರಸ್ತೆ ಮೆಟ್ರೋ ನಿಲ್ದಾಣಗಳನ್ನು ಬಳಸಲು ಸೂಚಿಸಲಾಗಿದೆ.

ಇದನ್ನೂ ಓದಿ: ಐಪಿಎಲ್ ವಿಐಪಿ ಟಿಕೆಟ್‌ಗಾಗಿ ಶಾಸಕರ ಪಟ್ಟು: ನಾವು ಸಾಮಾನ್ಯರೇ? ಕ್ಯೂನಲ್ಲಿ ನಿಲ್ಲಲಾಗದೆಂದ ಕಾಶಪ್ಪನವರ್‌ಗೆ ತೇಜಸ್ವಿ ಸೂರ್ಯ ಟಾಂಗ್!

ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ

ವಾಹನ ದಟ್ಟಣೆ ನಿಯಂತ್ರಿಸಲು ನಗರದ 44 ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚಿನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ದ್ವಿಚಕ್ರ ವಾಹನಗಳಿಗೆ 30 ರೂ. ಮತ್ತು ಕಾರುಗಳಿಗೆ 60 ರೂ. ದರ ಇರಲಿದೆ. ಇದು ಮೆಟ್ರೋ ಸೇವೆ ಮುಕ್ತಾಯವಾಗುವವರೆಗೆ ಅನ್ವಯವಾಗುತ್ತದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಿನ ಭವಿಷ್ಯ: ಇಂದು ಈ ರಾಶಿಯವರು ಪ್ರೀತಿಪಾತ್ರರನ್ನು ಬಿಟ್ಟಕೊಡಲಾರರು

ಮೇಷ ರಾಶಿ:

ಇಂದು ಬರುವ ಸಮಸ್ಯೆಗಳನ್ನು ಸುಲಭವಾಗಿ ನಿಭಾಯಿಸಬಲ್ಲಿರಿ. ಪಿತ್ರಾರ್ಜಿತ ಆಸ್ತಿಯನ್ನು ದೊರಕಿಸಿಕೊಳ್ಳುವ ಸಂಭವವಿದೆ. ಮಕ್ಕಳ‌ ಜೊತೆ ಸಂತಸದ ದಿನವಾಗಿರುವುದು. ಬಂಧು ಮಿತ್ರರ ಆಗಮನ ಸಾಧ್ಯತೆಯೂ ಕಂಡುಬರುವುದು. ವೈವಾಹಿಕ ಜೀವನವು ಒತ್ತಡದಿಂದ ಇರಲಿದೆ. ನಿಮ್ಮ ಪ್ರೀತಿಪಾತ್ರರ ಮಾತನ್ನು ಉಳಿಸಿಕೊಳ್ಳಲು ಕಷ್ಟವಾದೀತು. ಔದಾರ್ಯವು ಅಧಿಕವಾಗಿ ಬೇಡ. ಆಲಸ್ಯದಿಂದ ಇರುವ ಕಾರಣ ಯಾವ ಕೆಲಸವೂ ಸರಿಯಾದ ಸಮಯಕ್ಕೆ ಮಾಡುವುದಿಲ್ಲ.

ವೃಷಭ ರಾಶಿ:

ಯಾವುದಕ್ಕೂ ಮಿತಿ ಇರಲಿ, ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡವರಿಗೆ ಯಶಸ್ಸು. ಕಾರ್ಮಿಕ ವರ್ಗದವರಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸ. ಸರ್ಕಾರಿ ಕೆಲಸಗಳಿಗೆ ಅಲೆದಾಡುವ ಸಾಧ್ಯತೆ ಕಂಡುಬರುವುದು. ನಿಮ್ಮ ಸಂಗಾತಿಯ ಸೃಜನಶೀಲತೆಯನ್ನು ನೋಡಿ ನೀವು ತುಂಬಾ ಸಂತೋಷಪಡುತ್ತೀರಿ. ನಿಮ್ಮ ಮಾತಿನಿಂದ ಸಮಾಧಾನವು ಬರುವುದು. ದೂರದಲ್ಲಿರುವ ಮಕ್ಕಳನ್ನು ನೋಡುವ ಆಸೆಯಾಗಬಹುದು. ಉದ್ಯಮದ ಕಾರಣ ಪ್ರಯಾಣ ಮಾಡುವ ಸ್ಥಿತಿಯು ಬರಬಹುದು.

ಮಿಥುನ ರಾಶಿ:

ನೀವು ಪರಿಚಿತರ ಸ್ವತ್ತನ್ನು ಗೊತ್ತಾಗದೇ ಅಪಹರಿಸುವಿರಿ. ದಾಂಪತ್ಯದಲ್ಲಿ ನೆಮ್ಮದಿ, ಶಾಂತಿ ಸಮಾಧಾನವನ್ನು ಪ್ರಯತ್ನಪೂರ್ವಕವಾಗಿ. ಕಂಡುಕೊಳ್ಳುವಿರಿ. ನಿಂತ ಕೆಲಸ ಕಾರ್ಯಗಳನ್ನು ಚಾಲನೆಗೊಳಿಸಿರಿ. ನೀವು ಚಿಂತಿತರಾಗಿರುವ ಕಾರಣ ಮಾನಸಿಕ ಒತ್ತಡವೂ ಇರುತ್ತದೆ. ಮಾನಸಿಕ ಸ್ಥಿತಿಯೂ ಬಹಳ ಆಹ್ಲಾದದಿಂದ ಇರಲಿದೆ. ಯಾವ ಹೂಡಿಕೆಯು ನಿಮಗೆ ಲಾಭದಾಯಕವಾಗುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಅನ್ಯ ಚಟುವಟಿಕೆಯಲ್ಲಿ ಆಸಕ್ತಿ ಅಧಿಕ.

ಕರ್ಕಾಟಕ ರಾಶಿ:

ವೃತ್ತಿರಂಗದಲ್ಲಿ ಸಮಾಧಾನಕರವಲ್ಲದ ವಾತಾವರಣವಿರಲಿದೆ.‌ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಫಲಿತಾಂಶ ಉತ್ಸಾಹವನ್ನು ಕೊಡುವುದು. ವ್ಯಾಪಾರ ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುವಿರಿ. ಉದ್ಯೋಗಸ್ಥರು ಇಂದು ಕೆಲವು ನಿರಾಶೆಯನ್ನು ಎದುರಿಸಬೇಕಾಗಬಹುದು. ನಿಮ್ಮ ವಿಳಂಬ ಕಾರ್ಯಕ್ಕೆ ಹೇಳಿಸಿಕೊಳ್ಳಬೇಕಾದೀತು. ಪದೋನ್ನತಿಯ ಬಗ್ಗೆ ಕೇಳಿದರೂ ಏನೂ ಪ್ರಯೋಜನವಾಗದು. ಹಣಕಾಸಿನ ವ್ಯವಹಾರದ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸಿಕೊಳ್ಳಿ.

ಸಿಂಹ ರಾಶಿ:

ಇನ್ನೊಬ್ಬರ ನೇರವಾದ ಮಾತಿನಿಂದ ನಿಮಗೆ ನೋವಾಗುವುದು. ವಿಶೇಷವಾಗಿ ನೀವು ನಿಮ್ಮ ಪ್ರೀತಿಪಾತ್ರರು ಇತರ ಜೊತೆ ತುಂಬಾ ಸ್ನೇಹದಿಂದಿರುವುದನ್ನು ಕಂಡಾಗ ಅಸೂಯೆ ಉಂಟಾಗಲಿದೆ. ದೂರ ಪ್ರಯಾಣಕ್ಕೆ ಒಳ್ಳೆಯ ದಿನವಲ್ಲ. ದಾಂಪತ್ಯ ಜೀವನದಲ್ಲಿ ಪ್ರೀತಿ ಮತ್ತು ಸಂತೋಷ ಉಳಿಯುತ್ತದೆ. ಹಿರಿಯರಿಂದ ನಿಮಗೆ ಮೆಚ್ಚುಗೆ ಸಿಗಬಹುದು. ದಾಂಪತ್ಯದಲ್ಲಿ ಪ್ರೀತಿಗೆ ನೀವು ಮಾರುಹೋಗಬಹುದು. ಅತಿಥಿಗಳ ಆಗಮನವು ನಿಮ್ಮ ಮನೆಗೆ ಆಗಲಿದೆ.

ಕನ್ಯಾ ರಾಶಿ:

ಇಂದು ನಿಮ್ಮ ಸಾಮಾಜಿಕ ಕಾಳಜಿಯನ್ನು ಜನರು ಹೊಗಳುವರು. ಹಣಕಾಸಿನ ಸ್ಥಿತಿ ಉತ್ತಮವಾಗಿಸಿಕೊಳ್ಳುವಿರಿ. ಮನೆಯ ಕಿರಿಕಿರಿಯನ್ನು ಸಹಿಸಲು ಸಾಧ್ಯವಾಗದು. ಸಮೀಪದ ಏಕಾಂತ ಸ್ಥಳಕ್ಕೆ ಹೋಗಿ ಮನಸ್ಸಿಗೆ ಶಾಂತಿಯನ್ನು ಕೊಡುವಿರಿ. ಶ್ರಮವಹಿಸಿ ದುಡಿಯುವವರಿಗೆ ಉತ್ತಮ ದಿನ. ಅವರು ತಮ್ಮ ಕೆಲಸದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ. ಕೆಲವು ಮಾನಸಿಕ ಸ್ಥಿತಿಯನ್ನು ಬಿಡಲು ಪ್ರಯತ್ನಿಸುವಿರಿ. ಆದರೆ ಅದು ನಿಮಗೆ ಗೊತ್ತಿಲ್ಲದೇ ನಿಮ್ಮನ್ನು ಆವರಿಸಬಹುದು.

ತುಲಾ ರಾಶಿ:

ಇಂದು ಅನಿರೀಕ್ಷಿತ ಲಾಭದಿಂದ ತೃಪ್ತಿ ಇರವುದು. ನಿಮ್ಮ ಸಂಬಂಧಿಕರಿಂದ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಅಗತ್ಯವಾಗಿ ಇರುತ್ತದೆ. ಪ್ರೀತಿಯ ಜೀವನವನ್ನು ನಡೆಸುವ ಜನರು ಇಂದು ಕೆಲವು ಸಮಸ್ಯೆಗಳನ್ನು ಎದುರಿಸುವಿರಿ. ಸಾರ್ವಜನಿಕವಾಗಿ ಸಿಗುವ ಮನ್ನಣೆಯನ್ನು ವಿರೋಧಿಸುವರು. ಧನದ ಸಹಾಯವನ್ನು ನಿಮ್ಮ ಸ್ನೇಹಿತರು ನಿಮ್ಮಿಂದ ಬಯಸುವರು. ಇಂದು ಅಧಿಕ ಒತ್ತಡವಿಲ್ಲದೇ ಕಾರ್ಯವು ಮುಗಿಯುವುದು. ವಿದೇಶಪ್ರಯಾಣದಿಂದ ಖುಷಿಯು ಇರಲಿದೆ.

ವೃಶ್ಚಿಕ ರಾಶಿ:

ಸ್ವಂತ ಕಾರ್ಯಕ್ಕೆ ಸಂಬಂಧಿಸಿದಂತೆ ಅಲ್ಪ ಪ್ರಯೋಜನವನ್ನು ಪಡೆಯುವಿರಿ. ನಿಮ್ಮ ಕೆಲಸವನ್ನು ನೀವು ಆನಂದಿಸುವಿರಿ ಮತ್ತು ಮುಂದೆ ಸಾಗುತ್ತೀರಿ. ಬಿಡದೇ ಹಠದಿಂದ ಮಾಡುವ ಕೆಲಸವು ಪೂರ್ಣವಾಗುವುದು. ಅದೃಷ್ಟ ನಿಮ್ಮ ಕಡೆ ಇರುತ್ತದೆ. ನೀವು ಯಾವುದೇ ಸವಾಲಿಗೆ ಹೆದರುವುದಿಲ್ಲ. ಮೆಚ್ಚುಗೆಯ ಮಾತಿನಿಂದ ಸಂಕೋಚಗೊಳ್ಳುವಿರಿ. ಆರಿಸಿಕೊಂಡ ಆಯ್ಕೆಯು ನಿಮಗೆ ಇಷ್ಟವಾಗದೇ ಈಗ ಇರುವುದು. ಪರಿಚಿತರ ವಿಚಾರದಲ್ಲಿ ನೀವು ನಕಾರಾತ್ಮಕವಾಗಿ ಮಾತನಾಡುವಿರಿ.

ಧನು ರಾಶಿ:

ನಿಮ್ಮ ಕುಟುಂಬದ ಜೊತೆ ನೀವು ಮುರಿಯಲಾಗದ ಬಂಧವನ್ನು ಬೆಳೆಸಿಕೊಳ್ಳುವಿರಿ. ಕೆಲಸಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ನೀವು ಮೆಚ್ಚುಗೆ ಪಡೆಯುತ್ತೀರಿ ಮತ್ತು ನಿಮ್ಮ ಕೆಲಸದ ಹೊರೆ ಹೆಚ್ಚಾಗುತ್ತದೆ. ನಿಮ್ಮ ಬಲವೃದ್ಧಿಗೆ ಬೇಕಾದ ತಯಾರಿಯನ್ನು ಮಾಡಿಕೋಳ್ಳುವುದು ಉತ್ತಮ. ಮಹಿಳೆಯರು ಆದಾಯದಲ್ಲಿ ಮುನ್ನಡೆ ಸಾಧಿಸುವರು ಇಂದು. ಇನ್ನೊಬ್ಬರ ಕಡೆಯಿಂದ ಕೆಲಸವನ್ನು ಮಾಡಿಸಿಕೊಳ್ಳುವ ಸಂದರ್ಭವು ಬರಬಹುದು.

ಮಕರ ರಾಶಿ:

ನಿಮಗೆ ಹಣಕಾಸಿನ ನೆರವು ಕುಟುಂಬ ವರ್ಗದವರ ಯಾರಿಂದಲಾದರೂ ದೊರೆಯುವುದು. ಆದಾಯದ ದೃಷ್ಟಿಯಿಂದ ಇಂದು ಉತ್ತಮ ದಿನವಾಗಿರುತ್ತದೆ. ನಿಮಗೆ ಖರ್ಚು ಕೂಡ ಇರುತ್ತದೆ, ಆದರೆ ಹೆಚ್ಚು ಅಲ್ಲ. ಉದ್ಯೋಗಿಗಳು ಯಾವುದೇ ಎದುರಾಳಿಯ ಬಗ್ಗೆ ಸಕ್ರಿಯವಾಗಿ ಜಾಗರೂಕರಾಗಿರಬೇಕು. ವಿಳಂಬದ ಕಾರ್ಯಕ್ಕೆ ನೀವೇ ಜವಾಬ್ದಾರರು. ಮಿತ್ರರ ಆರ್ಥಿಕತೆಗೆ ನೀವು ಸಹಾಯ ಮಾಡುವಿರಿ. ಉದ್ಯಮವನ್ನು ಮಾಡುವವರಿಗೆ ಕೆಲವು ತೊಂದರೆಗಳು ಬರಬಹುದು.

ಕುಂಭ ರಾಶಿ:

ಇಂದು ಕೆಲಸ ಕಾರ್ಯಗಳು ಮಂದ ಪ್ರಗತಿಯಲ್ಲಿ ಸಾಗಿದರೂ ಅಂತಿಮವಾಗಿ ಶುಭ ಕಾಣುವಿರಿ. ಮನೆಯ ಖರ್ಚು ಹೆಚ್ಚಾಗಲಿದೆ. ಇದು ನಿಮ್ಮ ಆದಾಯದ ಮೇಲೆ ಪರಿಣಾಮ ಬೀರುತ್ತದೆ. ಕುಟುಂಬ ಸದಸ್ಯರಲ್ಲಿ ಪರಸ್ಪರ ಸಹೋದರತ್ವ ಇರುತ್ತದೆ. ಕೆಲಸಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಅನವಶ್ಯಕ ಆಲೋಚನೆಗಳಿಂದ ಮನಸ್ಸು ಕ್ಷೋಭೆಗೊಳ್ಳುವುದು. ಆರೋಗ್ಯದ ವೃದ್ಧಿಗಾಗಿ ಧಾರ್ಮಿಕ ಕಾರ್ಯಗಳನ್ನು ಮಾಡುವಿರಿ. ಕುಟುಂಬವನ್ನು ಮೆಚ್ಚಿಕೊಳ್ಳುವಿರಿ.

ಮೀನ ರಾಶಿ:

ಪ್ರೀತಿಯ ಜೀವನದಲ್ಲಿ ಸೃಜನಶೀಲತೆ ಉಪಯುಕ್ತವಾಗುವುದು. ನಿಮ್ಮ ಪ್ರಯತ್ನಗಳು ಯಶಸ್ವಿಯಾಗುತ್ತವೆ. ವಿವಾಹಿತರು ತಮ್ಮ ವೈವಾಹಿಕ ಜೀವನದಲ್ಲಿ ಒತ್ತಡದಿಂದ ಮುಕ್ತರಾಗುತ್ತಾರೆ. ಮಕ್ಕಳ ಬಗ್ಗೆ ತುಂಬಾ ಸಂತೋಷವಾಗುತ್ತದೆ. ಯಾರೊಂದಿಗೂ ಸ್ಪರ್ಧಿಸುವ ಅವಶ್ಯಕತೆ ಇಲ್ಲ. ಖಾಸಗಿಯ ಕೆಲಸವು ನಿಮಗೆ ಸಾಕೆನಿಸಬಹುದು. ಬಂಧುಗಳಿಂದ ಮಾನಸಿಕ ಹಿಂಸೆಯಾಗುವುದು. ಆರೋಗ್ಯದ ವಿಚಾರದಲ್ಲಿ ಕೆಲಸದಲ್ಲಿ ಬದಲಾವಣೆಯು ನಿಮಗೆ ಬೇಕಾದೀತು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ದಶ‌ಮೀ, ನಿತ್ಯನಕ್ಷತ್ರ : ಪುನರ್ವಸು ಯೋಗ : ಅತಿಗಂಡ, ಕರಣ : ಕೌಲವ, ಸೂರ್ಯೋದಯ – 06 – 24 am, ಸೂರ್ಯಾಸ್ತ – 06 – 34 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:27 – 10:58, ಯಮಗಂಡ ಕಾಲ 14:01 – 15:32, ಗುಳಿಕ ಕಾಲ 06:24 – 07:56

-ಲೋಹಿತ ಹೆಬ್ಬಾರ್-8762924271 (what’s app only)

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 28ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1);

ಈ ದಿನ ನೀವು ಹೇಳಿದ್ದೇ ಸರಿ, ಮಾಡಿದ್ದೇ ಸರಿ ಎಂಬಂತೆ ಸುತ್ತಮುತ್ತ ಇರುವವರು ಹೇಳಲಿಕ್ಕೆ ಶುರು ಮಾಡಲಿದ್ದಾರೆ. ಇದರಿಂದ ನಿಮಗೂ ಖುಷಿ ಆಗಲಿದೆ. ನಿಮ್ಮಲ್ಲಿ ಕೆಲವರು ಈ ದಿನ ಕಾಡು- ಬೆಟ್ಟ, ಗುಡ್ಡ ಪ್ರದೇಶಗಳಿಗೆ ತೆರಳುವ ಯೋಗ ಇದೆ. ಮಿಡ್ಲ್ ಮ್ಯಾನೇಜ್ ಮೆಂಟ್ ಹುದ್ದೆಗಳಲ್ಲಿ ಇಷ್ಟು ಸಮಯ ಕೆಲಸ ಮಾಡುತ್ತಿರುವ ಕೆಲವರಿಗೆ ಹೆಚ್ಚಿನ ಜವಾಬ್ದಾರಿಯನ್ನು ನೀಡಿ, ಟಾಪ್ ಮ್ಯಾನೇಜ್ ಮೆಂಟ್ ಹುದ್ದೆಗೆ ಬಡ್ತಿ ನೀಡುವ ಸಾಧ್ಯತೆಗಳಿವೆ ಎಂಬುದು ತಿಳಿದುಬರಲಿದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಈ ದಿನ ಒಂದು ವಿಚಾರವನ್ನು ಯಾರಿಗಾದರೂ ಹೇಳಿಕೊಳ್ಳಲೇಬೇಕು ಎಂಬ ಚಡಪಡಿಕೆ ನಿಮಗೆ ಶುರುವಾಗಲಿದೆ. ಆದರೆ ಅದು ಯಾರು ಎಂಬುದನ್ನು ನಿರ್ಧರಿಸುವುದೇ ಕಷ್ಟವಾಗಲಿದೆ. ಆಲೋಚನೆ ಮಟ್ಟದಲ್ಲೇ ಇರುವಂಥ ಯೋಜನೆಗೆ ಏಕಾಏಕಿ ಹಣ ಹಾಕುವುದಕ್ಕೆ ನಿರ್ಧಾರ ಮಾಡಬೇಡಿ. ಇನ್ನು ಸಾರ್ವಜನಿಕ ಜೀವನದಲ್ಲಿ ಇರುವಂಥವರು ಬಾಯಿ ತಪ್ಪಿ ಆಡಿದಂಥ ಮಾತೊಂದರ ಬಗ್ಗೆ ವಿಪರೀತ ಚರ್ಚೆಗೆ ಗುರಿ ಆಗಬೇಕಾಗುತ್ತದೆ. ಹಲವರಿಗೆ ಸಹಾಯ ಮಾಡಿದ ನಂತರವೂ ಕೆಲವು ಆಕ್ಷೇಪದ ಮಾತುಗಳನ್ನು ಕೇಳಿಸಿಕೊಳ್ಳ ಬೇಕಾದೀತು.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಕೃಷಿ ಭೂಮಿ, ಸೈಟು ಅಥವಾ ಬೇರೆ ಯಾವುದೇ ರೀತಿಯ ಆಸ್ತಿಯನ್ನು ಖರೀದಿ ಮಾಡುವುದಕ್ಕೆ ಗಂಭೀರವಾದ ಹುಡುಕಾಟವನ್ನು ನಡೆಸಲಿದ್ದೀರಿ. ಈ ಹಿಂದೆ ಯಾವಾಗಲೋ ನೋಡಿಕೊಂಡು ಬಂದಿದ್ದಂಥ ಆಸ್ತಿಯ ಬಗ್ಗೆಯೇ ನಿಮಗೆ ಮತ್ತೆ ಪ್ರಸ್ತಾವಗಳು ಬರಬಹುದು ಅಥವಾ ನಿಮಗೆ ಅದನ್ನು ಖರೀದಿ ಮಾಡಬೇಕು ಎಂಬ ಆಲೋಚನೆ ಬರಬಹುದು. ಈ ದಿನ ನಿಮ್ಮ ಊಟ- ತಿಂಡಿಯ ಸಮಯದ ಬಗ್ಗೆ ಹೆಚ್ಚಿನ ಲಕ್ಷ್ಯವನ್ನು ನೀಡಬೇಕು. ಏಕೆಂದರೆ ನಿಮ್ಮಲ್ಲಿ ಯಾರಿಗೆ ಗ್ಯಾಸ್ಟ್ರಿಕ್ ನಂಥ ಸಮಸ್ಯೆಗಳಿವೆಯೋ ಅಂಥವರಿಗೆ ಸಮಸ್ಯೆ ಉಲ್ಬಣ ಆಗಬಹುದು.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ನಿಮ್ಮ ಪ್ರೀತಿಪಾತ್ರರಿಗೆ ಉಡುಗೊರೆಗಳನ್ನು ನೀಡುವುದಕ್ಕೆ ಹಣ ಖರ್ಚು ಮಾಡುವಂಥ ಸಾಧ್ಯತೆಗಳಿವೆ. ನಿಮ್ಮಲ್ಲಿ ಯಾರು ಮದುವೆಗಾಗಿ ಪ್ರಯತ್ನ ಮಾಡುತ್ತಿದ್ದೀರಿ, ಅಂಥವರು ಅನಿವಾರ್ಯವಾಗಿ ಹುಡುಕಾಟವನ್ನು ಮುಂದಕ್ಕೆ ಹಾಕಬೇಕಾದ ಪರಿಸ್ಥಿತಿ ಸೃಷ್ಟಿ ಆಗಲಿದೆ. ಇದೇ ಮೊದಲ ಬಾರಿಗೆ ಎಂಬಂತೆ ಮಾಡಿದ ಕೆಲಸಗಳಲ್ಲಿ ಯಶಸ್ಸು ದೊರೆಯುವುದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ನಿಮ್ಮಲ್ಲಿ ಯಾರು ಅಕ್ಕಪಕ್ಕದಲ್ಲಿಯೇ ಇರುವಂಥ ಸೈಟು, ಮನೆಯನ್ನು ಖರೀದಿ ಮಾಡಬೇಕು ಎಂದು ಪ್ರಯತ್ನಿಸುತ್ತಿರುವಿರೋ ಅಂಥವರಿಗೆ ಮನಸ್ಸಿಗೆ ಒಪ್ಪುವಂಥದ್ದು ದೊರೆಯುವ ಯೋಗ ಇದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಈ ದಿನ ಕೆಲವು ವ್ಯಕ್ತಿಗಳಿಂದ ದೂರ ಇರುವುದಕ್ಕೆ ಅಲೋಚನೆ ಮಾಡಲಿದ್ದೀರಿ. ವಿಪರೀತ ಪೊಸೆಸಿವ್ ನೆಸ್ ಅಂತಲೋ ಅಥವಾ ನೀವು ಹೇಳಿಕೊಂಡ ವಿಷಯವನ್ನು ಎಲ್ಲ ಕಡೆಗೆ ಹೇಳಿಕೊಂಡು ಬರುತ್ತಿದ್ದಾರೆ ಅಂತಲೋ ಅಥವಾ ನಿಮ್ಮ ಬಗ್ಗೆ ಹಾಗೂ ನಿಮ್ಮ ಕುಟುಂಬದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂಬ ಕಾರಣಕ್ಕೋ ಕೆಲವು ವ್ಯಕ್ತಿಗಳನ್ನು ದೂರ ಮಾಡುವುದಕ್ಕೆ ನಿರ್ಧರಿಸಲಿದ್ದೀರಿ. ನಿಮ್ಮ ಬ್ಯಾಂಕ್ ಬ್ಯಾಲೆನ್ಸ್, ಹೂಡಿಕೆ ಹಾಗೂ ಸಾಲ ಎಷ್ಟಿದೆ ಎಂಬ ಸಂಗತಿಯನ್ನು ಸ್ನೇಹಿತರು, ಆಪ್ತರ ಜತೆಗೆ ಚರ್ಚೆ ನಡೆಸುವಂಥ ಸಾಧ್ಯತೆ ಇದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಸಂತಾನ ಅಪೇಕ್ಷಿತರಿಗೆ ಅಡೆ-ತಡೆಗಳು ಜಾಸ್ತಿ ಆಗುತ್ತಿವೆ ಎಂದು ಅನಿಸಲಿಕ್ಕೆ ಆರಂಭವಾಗಲಿದೆ. ಹಣಕಾಸಿನ ವಿಚಾರಕ್ಕೆ ದಂಪತಿ ಮಧ್ಯೆ ವಾಗ್ವಾದಗಳು ಆಗಲಿವೆ. ನೀವು ಒಂದು ವೇಳೆ ವ್ಯಾಪಾರ- ವ್ಯವಹಾರವನ್ನು ಮಾಡುತ್ತಿರುವವರಾದಲ್ಲಿ ಅದರ ಒಳಸುಳಿಗಳು, ರಹಸ್ಯಗಳನ್ನು ಯಾರ ಜತೆಗೂ ಹಂಚಿಕೊಳ್ಳುವುದಕ್ಕೆ ಹೋಗಬೇಡಿ. ಪದೇಪದೇ ಸಾಲ ಕೇಳುತ್ತಾ ಕೆಲವು ವ್ಯಕ್ತಿಗಳು ಮಾನಸಿಕ ಹಿಂಸೆಗೆ ಕಾರಣ ಆಗಲಿದ್ದಾರೆ. ಬ್ಯಾಂಗಲ್ ಸ್ಟೋರ್ ಗಳನ್ನು ನಡೆಸುತ್ತಿರುವವರು ಹಾಗೂ ಸೀರೆ- ಚೂಡಿದಾರ್ ಹೀಗೆ ಹೆಣ್ಣುಮಕ್ಕಳ ದಿರಿಸುಗಳ ಮಾರಾಟದಲ್ಲಿ ತೊಡಗಿರುವವರಿಗೆ ಆದಾಯದಲ್ಲಿ ಭಾರೀ ಇಳಿಕೆ ಆಗಿ, ಚಿಂತೆಗೆ ಕಾರಣವಾಗಬಹುದು.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನೀವು ಯಾವ ವಿಚಾರವನ್ನು ಮತ್ತು ಕೆಲಸವನ್ನು ಸಾಂಪ್ರದಾಯಿಕ ಅಲ್ಲದ ರೀತಿಯಲ್ಲಿ ನಿರ್ವಹಿಸಿರುತ್ತೀರಿ ಅದರಲ್ಲಿ ಉತ್ತಮವಾದ ಫಲಿತಾಂಶವನ್ನು ನಿರೀಕ್ಷೆ ಮಾಡಬಹುದು. ನಿಮ್ಮಲ್ಲಿ ಕೆಲವರಿಗೆ ಸಂಬಂಧದಲ್ಲೇ ವಿವಾಹ ನಿಶ್ಚಯ ಆಗುವ ಸಾಧ್ಯತೆಗಳು ಕಾಣಬಹುದು. ಅದು ದೂರದ ಸಂಬಂಧ ಇರಬಹುದು ಅಥವಾ ಸೋದರತ್ತೆ ಅಥವಾ ಸೋದರಮಾವ ಈ ರೀತಿಯ ಸಂಬಂಧಿಗಳ ಮಗ ಅಥವಾ ಮಗಳ ಜತೆಗೆ ನಿಶ್ಚಯ ಆಗಬಹುದು. ಬಹಳ ಸಮಯದಿಂದ ನೀವು ಆಸೆ ಪಡುತ್ತಿದ್ದ ಅಥವಾ ನಿಮಗೆ ಇಷ್ಟವಾದ ಕೆಲವು ಕೆಲಸಗಳನ್ನು ಮಾಡಲಿದ್ದೀರಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ ಕಾಣಿಸುವಂಥ ಸೂಚನೆಗಳು ದೊರೆಯಲಿವೆ. ನಿಮ್ಮಲ್ಲಿ ಯಾರು ಉದ್ಯೋಗ ಬದಲಾವಣೆ ಮಾಡಬೇಕು ಎಂದುಕೊಳ್ಳುತ್ತಿರುವಿರಿ ಅಂಥವರಿಗೆ ಸ್ನೇಹಿತರು ಅಥವಾ ಸಂಬಂಧಿಕರ ಮೂಲಕ ರೆಫರೆನ್ಸ್ ಸಿಗಬಹುದು. ನೀವು ಈಗಿರುವ ಸ್ಥಳದಿಂದ ಬೇರೆಡೆ ತೆರಳಬೇಕು ಎಂದೇನಾದರೂ ಅಂದುಕೊಳ್ಳುತ್ತಿದ್ದಲ್ಲಿ, ಅದು ಯಾವುದೇ ಉದ್ದೇಶದಿಂದಲಾದರೂ ಇರಬಹುದು, ಅದು ಸಾಧ್ಯವಾಗುವುದಿಲ್ಲ ಎಂದೆನಿಸಲಿದೆ. ನಿಮ್ಮ ಬಗ್ಗೆ ಕಾಳಜಿ, ಅಕ್ಕರಾಸ್ಥೆ ಇಟ್ಟುಕೊಂಡು ಮಾತನಾಡುವವರು ಹೇಳುವ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ನಿಮ್ಮ ಪ್ರತಿಭೆಗೆ ಪ್ರಾಶಸ್ತ್ಯ ದೊರೆಯುವಂಥ ದಿನ ಇದಾಗಿರುತ್ತದೆ. ಮನೆಯಲ್ಲಿ ಸಂಭ್ರಮದ ವಾತಾವರಣ ಇರಲಿದ್ದು, ಹತ್ತಿರದ ಸ್ಥಳಕ್ಕಾದರೂ ತೆರಳುವಂಥ ಯೋಗ ನಿಮ್ಮ ಪಾಲಿಗೆ ಇದೆ. ನಿಮ್ಮಲ್ಲಿ ಯಾರು ಬ್ಯಾಂಕ್- ಹಣಕಾಸು ಸಂಸ್ಥೆಗಳಲ್ಲಿ ಸಾಲಕ್ಕಾಗಿ ಪ್ರಯತ್ನ ಮಾಡುತ್ತಿರುತ್ತೀರಿ ಅಂಥವರಿಗೆ ದಾಖಲೆ, ಕಾಗದ- ಪತ್ರಗಳನ್ನು ಹೊಂದಿಸಿಕೊಳ್ಳುವುದಕ್ಕೆ ಇತರರ ಸಹಾಯ ದೊರೆಯಲಿದೆ. ಮನೆಗೆ ಏರ್ ಕೂಲರ್ ಅಥವಾ ಏಸಿ ಇಂಥದ್ದನ್ನು ಖರೀದಿಸಿ ತರುವ ಬಗ್ಗೆ ಆಲೋಚನೆಯನ್ನು ಮಾಡಲಿದ್ದೀರಿ. ಊಟ- ತಿಂಡಿ ವಿಚಾರಕ್ಕೆ ಕುಟುಂಬ ಸದಸ್ಯರ ಜತೆಗೆ ಸಣ್ಣ- ಪುಟ್ಟ ಮನಸ್ತಾಪಗಳು ಆಗಬಹುದು.

ಲೇಖನ- ಎನ್‌.ಕೆ.ಸ್ವಾತಿ

Source link

ಯುಎಇಯ ಶಾರ್ಜಾದಲ್ಲಿ ಭಾರೀ ಪ್ರವಾಹ; ನೀರಿನಲ್ಲಿ ಮುಳುಗಿದ ವಾಹನಗಳು

ಶಾರ್ಜಾ, ಮಾರ್ಚ್ 27: ಯುನೈಟೆಡ್ ಅರಬ್ ಎಮಿರೇಟ್ಸ್‌ನ (ಯುಎಇ) ಶಾರ್ಜಾ ನಗರದಲ್ಲಿ ಭಾರೀ ಮಳೆಯಾಗಿದ್ದು, ಅನೇಕ ವಾಹನಗಳು ನೀರಿನಲ್ಲಿ ಮುಳುಗಿವೆ. ರಸ್ತೆಗಳಲ್ಲಿ ಹೊಂಡಗಳು ನಿರ್ಮಾಣವಾಗಿದ್ದು, ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಯುಎಇಯ ಶಾರ್ಜಾದಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ವಾಹನಗಳು ಸಿಲುಕಿಕೊಂಡವು. ಭಾರೀ ಮಳೆಯ ನಂತರ ಶಾರ್ಜಾದ ಜಮಾಲ್ ಅಬ್ದುನ್ನಸಿರ್ ಬೀದಿಯಲ್ಲಿ ಪ್ರವಾಹ (Flood) ಸಂಭವಿಸಿದೆ. ಇದರ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link