Headlines

nagaraj11081993

ಮದುವೆ ಮಂಟಪದಲ್ಲಿ ಡ್ಯಾನ್ಸ್​ ಬಿಟ್ಟು ಪಂಜ ಕುಸ್ತಿಗಿಳಿದ ವಧು-ವರ – Kannada News

ನವದೆಹಲಿ, ಜೂನ್ 03: ಸಾಮಾನ್ಯವಾಗಿ ಮದುವೆ(Marriage)ಮಂಟಪದಲ್ಲಿ ವಧು-ವರರು ನಾಚಿಕೆಯಿಂದ ನಿಂತಿರುವುದನ್ನು ಅಥವಾ ರೋಮ್ಯಾಂಟಿಕ್ ಆಗಿ ನೃತ್ಯ ಮಾಡುವುದನ್ನು ನಾವು ನೋಡಿರುತ್ತೇವೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ವೈರಲ್ ಆಗುತ್ತಿರುವ ವಿಡಿಯೋವೊಂದರಲ್ಲಿ ವಧು ಇವೆಲ್ಲವನ್ನೂ ಬದಿಗಿಟ್ಟು, ವರನಿಗೆ ನೇರವಾಗಿ ಪಂಜ ಕುಸ್ತಿ ಸವಾಲು ಹಾಕಿ ಸಖತ್ ಮನರಂಜನೆ ನೀಡಿದ್ದಾಳೆ. ಗುಲಾಬಿ ಬಣ್ಣದ ಮದುವೆಯ ಲೆಹೆಂಗಾ ಧರಿಸಿದ್ದ ವಧು, ಮಂಟಪದ ಮಧ್ಯದಲ್ಲಿದ್ದ ಟೇಬಲ್ ಮೇಲಿಟ್ಟು ವರನಿಗೆ ಸವಾಲು ಹಾಕಿದಳು. ನನ್ನೊಂದಿಗೆ ಸ್ಪರ್ಧಿಸಲು ಹುಡುಗಿಯರನ್ನಲ್ಲ, ಹುಡುಗರನ್ನು ಕರೆತನ್ನಿ”ಎಂದು ಆತ್ಮವಿಶ್ವಾಸದಿಂದ ಕೂಗಿದ ವಧುವಿನ…

Read More

World Bicycle Day 2026: ಸೈಕಲ್‌ ಸವಾರಿ ಪರಿಸರ, ನಮ್ಮ ಆರೋಗ್ಯ ಎರಡಕ್ಕೂ ಒಳ್ಳೆಯದು – Kannada News

ಸೈಕಲ್‌ (Bicycle) ಕೈಗೆಟಕುವ, ಆರೋಗ್ಯದಾಯಕ  ಹಾಗೂ ಪರಿಸರ ಸ್ನೇಹಿ ಸಾರಿಗೆ ವಿಧಾನವಾಗಿದ್ದು, ಹಿಂದೆಲ್ಲಾ ಜನ ಓಡಾಟಕ್ಕೆ ಸೈಕಲ್‌ಗಳನ್ನೇ ಬಳಸುತ್ತಿದ್ದರು. ಆದರೆ ಇಂದಿನ ಈ ಆಧುನಿಕ ಜಗತ್ತಿನಲ್ಲಿ ಸೈಕಲ್‌ ಬಳಕೆ ತೀರಾ ಕಡಿಮೆಯಾಗಿದೆ. ಪ್ರತಿಷ್ಠೆಯ ದೃಷ್ಟಿಯಿಂದ ಹಾಗೂ ಸಮಯ ಉಳಿಸಲು ಜನರು ಸೈಕಲ್ ಬಳಸುವುದನ್ನು ಬಿಟ್ಟು ಸ್ಕೂಟರ್, ಬೈಕ್ ಮತ್ತು ಕಾರುಗಳನ್ನು ಬಳಸಲು ಪ್ರಾರಂಭಿಸಿದ್ದಾರೆ.‌ ಹೀಗೆ ವಾಹನಗಳ ಬಳಕೆ ಹೆಚ್ಚಾದಂತೆ ಪರಿಸರ ಕೂಡ ಮಾಲಿನ್ಯವಾಗುತ್ತಿದೆ. ಈ ನಿಟ್ಟಿನಲ್ಲಿ ಪರಿಸರ ಸಂರಕ್ಷಣೆಗಾಗಿ ಸೈಕಲ್‌ ಸವಾರಿ ಮಾಡಲು ಜನರನ್ನು ಪ್ರೋತ್ಸಾಹಿಸಲು, ಸೈಕ್ಲಿಂಗ್‌ನ…

Read More

‘ಪೆದ್ದಿ’ಗೆ ಹೆದರಿದ ವರುಣ್ ಧವನ್ ಸಿನಿಮಾ? ಮೊದಲ ದಿನವೇ ಟಿಕೆಟ್​ ಮೇಲೆ ಶೆ.50 ಆಫರ್ – Kannada News

ಬಾಲಿವುಡ್ ಅಂಗಳದಲ್ಲಿ ಈಗ ಹೊಸದೊಂದು ಆಸಕ್ತಿದಾಯಕ ಬೆಳವಣಿಗೆ ನಡೆದಿದೆ. ಈ ಶುಕ್ರವಾರ (ಜೂನ್ 5) ಬಿಡುಗಡೆಯಾಗಲಿರುವ ವರುಣ್ ಧವನ್ ನಟನೆಯ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಚಿತ್ರತಂಡ ಭರ್ಜರಿ ಆಫರ್ ಒಂದನ್ನು ಘೋಷಿಸಿದೆ. ಸಿನಿಮಾದ ಮೊದಲ ದಿನದಂದೇ ಟಿಕೆಟ್ ದರದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡುವುದಾಗಿ ಘೋಷಣೆ ಮಾಡಿದೆ. ಸಾಮಾನ್ಯವಾಗಿ ಸಿನಿಮಾ ರಿಲೀಸ್ ಆಗಿ ಒಂದು ತಿಂಗಳು ಕಳೆದ ಬಳಿಕ ಆಫರ್ ನೀಡುವುದು ಸಾಮಾನ್ಯ. ಆದರೆ, ವರುಣ್ ಧವನ್ ಸಿನಿಮಾ ಬೇರೆಯದೇ ರೀತಿಯ…

Read More

DK Shivakumar Oath Taking: ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!

ಬೆಂಗಳೂರು, ಜೂನ್ 3: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸುತ್ತಿರುವುದರಿಂದ ಇಡೀ ಬೆಂಗಳೂರು ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ನಿಯೋಜಿತ ಸಿಎಂಗೆ ಶುಭ ಕೋರಲು ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಬೆಂಬಲಿಗರು ನಗರದ ಬಹುತೇಕ ಕಡೆಗಳಲ್ಲಿ ಬೃಹತ್ ಫ್ಲೆಕ್ಸ್, ಬ್ಯಾನರ್ ಹಾಗೂ ಕಟೌಟ್‌ಗಳನ್ನು ಅಳವಡಿಸಿದ್ದಾರೆ. ವಿಶೇಷವಾಗಿ ರಾಜರಾಜೇಶ್ವರಿ ನಗರ (ಆರ್ ಆರ್ ನಗರ) ವ್ಯಾಪ್ತಿಯ ಸುಮನಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಅವರ ಬರೋಬ್ಬರಿ 100 ಅಡಿ ಎತ್ತರದ ಬೃಹತ್ ಕಟೌಟ್ ನಿರ್ಮಿಸಿ ಭರ್ಜರಿಯಾಗಿ…

Read More

Daily Devotional: ಮರಣ ಹೊಂದುವ ಮುನ್ನ ಅಂತಿಮ ಐದು ನಿಮಿಷ ಹೇಗಿರುತ್ತೆ? ಆಧ್ಯಾತ್ಮಿಕ ವಿಶ್ಲೇಷಣೆ ಇಲ್ಲಿದೆ – Kannada News

“ಜಾತಸ್ಯ ಮರಣಂ ಧ್ರುವಂ” ಎಂಬ ವೇದವಾಕ್ಯದಂತೆ, ಹುಟ್ಟಿದ ಪ್ರತಿಯೊಬ್ಬರಿಗೂ ಮರಣ ನಿಶ್ಚಿತ. ರೋಗರುಜಿನೆಗಳು, ಅಪಘಾತಗಳು ಅಥವಾ ಹೃದಯಾಘಾತದಂತಹ ಕಾರಣಗಳಿಂದ ಮರಣ ಸಂಭವಿಸಬಹುದಾದರೂ, ಈ ಅಂತಿಮ ಕ್ಷಣಗಳಲ್ಲಿ, ವಿಶೇಷವಾಗಿ ಆತ್ಮ ದೇಹವನ್ನು ತ್ಯಜಿಸುವ ಕೊನೆಯ ಐದು ನಿಮಿಷಗಳಲ್ಲಿ ಏನಾಗುತ್ತದೆ ಎಂಬುದು ಆಧ್ಯಾತ್ಮಿಕವಾಗಿ ಮಹತ್ವಪೂರ್ಣವಾಗಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಸಾವಿನ ಕೊನೆಯ ಐದು ನಿಮಿಷಗಳಲ್ಲಿ, ದೇಹವು ಹಲವಾರು ಪ್ರಕ್ರಿಯೆಗಳಿಗೆ…

Read More

ಡಿಕೆ ಶಿವಕುಮಾರ್ ಪ್ರಮಾಣವಚನ: ಖಾಕಿ ಭದ್ರಕೋಟೆಯಾದ ಲೋಕಭವನ! 2000ಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿ ನಿಯೋಜನೆ – Kannada News

ಲೋಕಭವನ ಸುತ್ತ ಬ್ಯಾರಿಕೇಡ್ ಹಾಕಿ ಭದ್ರತಾ ಸಿದ್ಧತೆ ಮಾಡಿರುವುದುImage Credit source: tv9 ಬೆಂಗಳೂರು, ಜೂನ್ 3: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಇಂದು ಅಧಿಕಾರ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ, ಸಮಾರಂಭ ನಡೆಯಲಿರುವ ಲೋಕಭವನ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಹಾಗೂ ಸಂಚಾರ ದಟ್ಟಣೆ ನಿಯಂತ್ರಿಸಲು ಇಡೀ…

Read More

ಕುವೈತ್, ಬಹ್ರೇನ್‌ನಲ್ಲಿರುವ ಅಮೆರಿಕ ನೆಲೆಗಳ ಮೇಲೆ ಇರಾನ್ ದಾಳಿ – Kannada News

ಕುವೈತ್, ಜೂನ್ 03: ಕೆಶ್ಮ್​ ದ್ವೀಪದ ಮೇಲಿನ ದಾಳಿಗೆ ಪ್ರತೀಕಾರವಾಗಿ ಇರಾನ್(Iran) ಕುವೈತ್ ಹಾಗೂ ಬಹ್ರೇನ್​ನಲ್ಲಿರುವ ಅಮೆರಿಕ ನೆಲೆಗಳ ಮೇಲೆ ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪರ್ಷಿಯನ್ ಕೊಲ್ಲಿ ವಲಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಮಿಲಿಟರಿ ಉದ್ವಿಗ್ನತೆಯ ನಡುವೆಯೇ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಹಾಗೂ ನಾಗರಿಕರ ಸುರಕ್ಷತೆಯನ್ನು ಕಾಯ್ದುಕೊಳ್ಳಲು ಕುವೈತ್ ಮತ್ತು ಬಹ್ರೇನ್ ಸರ್ಕಾರಗಳು ಅತ್ಯಂತ ವ್ಯವಸ್ಥಿತ ಹಾಗೂ ಯಶಸ್ವಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿವೆ. ಬುಧವಾರ ಮುಂಜಾನೆ ಇರಾನ್‌ನ ಕೆಶ್ಮ್ ದ್ವೀಪದ ಘಟನೆಗೆ ಪ್ರತೀಕಾರವಾಗಿ ಕುವೈತ್ ಮತ್ತು…

Read More

ಟೀಕೆಗಳ ಬೆನ್ನಲ್ಲೇ ಟೀಮ್ ಇಂಡಿಯಾಗೆ ನಬಿ ಎಂಟ್ರಿ..! – Kannada News

ದೇಶಿಯ ಕ್ರಿಕೆಟ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದರೂ ಭಾರತ ತಂಡಕ್ಕೆ ಆಯ್ಕೆಯಾಗದ ಜಮ್ಮು ಮತ್ತು ಕಾಶ್ಮೀರದ ಸ್ಟಾರ್ ವೇಗಿ ಆಖಿಬ್ ನಬಿ ಅವರಿಗೆ ಕೊನೆಗೂ ಟೀಮ್ ಇಂಡಿಯಾದಿಂದ ಬುಲಾವ್ ಬಂದಿದೆ. ಆದರೆ ಆಟಗಾರನಾಗಿ ಅಲ್ಲ. ಬದಲಾಗಿ ಟೀಮ್ ಇಂಡಿಯಾದ ನೆಟ್​ ಬೌಲರ್ ಆಗಿ ಎಂಬುದು ವಿಶೇಷ. ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದ ಸಿದ್ಧತೆಗಾಗಿ ಬಿಸಿಸಿಐ ಆಖಿಬ್ ನಬಿ ಅವರನ್ನು ಅಧಿಕೃತ ನೆಟ್ ಬೌಲರ್ ಹಾಗೂ ಸ್ಟ್ಯಾಂಡ್‌ಬೈ ಆಟಗಾರನಾಗಿ ಆಯ್ಕೆ ಮಾಡಿದೆ. ಅದರಂತೆ ಇದೀಗ ಅವರು ಮುಲ್ಲನ್‌ಪುರದಲ್ಲಿ ಟೀಮ್ ಇಂಡಿಯಾ…

Read More

Garuda Purana: ಅಂತ್ಯಸಂಸ್ಕಾರದ ನಂತರ ಹಿಂತಿರುಗಿ ನೋಡಬಾರದು ಯಾಕೆ? ಶಾಸ್ತ್ರಗಳು ಹೇಳುವುದೇನು? – Kannada News

ಅಂತ್ಯಸಂಸ್ಕಾರದ ನಂತರ ಹಿಂತಿರುಗಿ ನೋಡಬಾರದು ಯಾಕೆ?Image Credit source: Pinterest ಹಿಂದೂ ಧರ್ಮದಲ್ಲಿ ಮನುಷ್ಯನ ಜನನದಿಂದ ಮರಣದವರೆಗೆ ಒಟ್ಟು 16 ಸಂಸ್ಕಾರಗಳನ್ನು ಹೇಳಲಾಗಿದೆ. ಇವುಗಳಲ್ಲಿ 16ನೇ ಹಾಗೂ ಕೊನೆಯ ಸಂಸ್ಕಾರವೇ ‘ಅಂತ್ಯಸಂಸ್ಕಾರ’. ಗರುಡ ಪುರಾಣದ ಪ್ರಕಾರ “ಯಾವುದೇ ವ್ಯಕ್ತಿಯ ಅಂತ್ಯಸಂಸ್ಕಾರ ಮುಗಿದ ನಂತರ, ಅವರ ಕುಟುಂಬದವರು ಅಥವಾ ಸಂಬಂಧಿಕರು ಸ್ಮಶಾನದಿಂದ ವಾಪಸ್ ಬರುವಾಗ ಎಂದಿಗೂ ಹಿಂತಿರುಗಿ (ತಿರುಗಿ) ನೋಡಬಾರದು.” ಇದರ ಹಿಂದೆ ಒಂದು ದೊಡ್ಡ ಧಾರ್ಮಿಕ ಮತ್ತು ಆಧ್ಯಾತ್ಮಿಕ ಕಾರಣವಿದೆ. ಮರಣ ಎಂಬುದು ಶಾಶ್ವತ ಸತ್ಯ: “ಈ…

Read More

DK Shivakumar Oath Taking Live: ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ – Kannada News

ಬೆಂಗಳೂರು, ಜೂನ್ 03: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದು, ಅವರೊಂದಿಗೆ ಸಿದ್ದರಾಮಯ್ಯ ಮತ್ತು 10 ರಿಂದ 12 ಮಂದಿ ಶಾಸಕರೂ ಸಹ ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ. ಈ ಸಮಾರಂಭಕ್ಕೆ 10,000ಕ್ಕೂ ಹೆಚ್ಚು ವಿವಿಐಪಿ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಭದ್ರತೆಗಾಗಿ 1,500ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಧರ್ಮಗುರುಗಳೂ ಸಹ ಈ ಕಾರ್ಯಕ್ರಮದಲ್ಲಿದ್ದು, ಸಂಜೆ 4:05ಕ್ಕೆ ಸರಿಯಾಗಿ ಪದಗ್ರಹಣ ನೆರವೇರಲಿದೆ. ಕರ್ನಾಟಕ ರಾಜಕಾರಣದಲ್ಲಿ ಅಧಿಕಾರ ಹಂಚಿಕೆಯ…

Read More