ಮಧ್ಯಪ್ರಾಚ್ಯದ ವಾರ್ ಎಫೆಕ್ಟ್: ರೈತರ ಕಣ್ಣಲ್ಲಿ ನೀರು ತರಿಸಿದ ಈರುಳ್ಳಿ; ಪಾತಾಳಕ್ಕಿಳಿದ ಬೆಲೆ
ಬೀದರ್, ಮಾರ್ಚ್ 27: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ದೇಶ ಸೇರಿದಂತೆ ರಾಜ್ಯದ ಹಲವು ಉದ್ಯಮಗಳು ಈಗಾಗಲೇ ತತ್ತರಿಸಿ ಹೋಗಿವೆ. ಈ ನಡುವೆ ವಾರ್ ಎಫೆಕ್ಟ್ ಅನ್ನದಾತರ ಕೈಸುಡಲೂ ಆರಂಭಿಸಿದ್ದು, ಬೀದರ್ನಲ್ಲಿ ರೈತರು ಬೆಳೆದಿದ್ದ ಈರುಳ್ಳಿ ಬೆಳೆ ಅವರ ಕಣ್ಣಲ್ಲೇ ಈಗ ನೀರು ತರಿಸುತ್ತಿದೆ. ಯುದ್ಧದ ಹಿನ್ನೆಲೆ ಗಲ್ಫ್ ರಾಷ್ಟ್ರಗಳಿಗೆ ರಫ್ತಾಗುತ್ತಿದ್ದ ಈರುಳ್ಳಿ ರಫ್ತು ನಿಂತಿರುವ ಕಾರಣ ಬೆಲೆ ಪಾತಾಳಕ್ಕೆ ಕುಸಿದಿದೆ. ಪ್ರತಿ ಕೆ.ಜಿ. ಈರುಳ್ಳಿ 4ರಿಂದ 6 ರೂಪಾಯಿವರೆಗೆ ಮಾರಾಟವಾಗುತ್ತಿರುವ ಕಾರಣ ಬೆಳೆಗಾರರು ಭಾರಿ ನಷ್ಟ…