Headlines

nagaraj11081993

IPL 2026: ಆರ್​ಸಿಬಿ- ಎಸ್‌ಆರ್‌ಎಚ್ ಮುಖಾಮುಖಿ ದಾಖಲೆ ಹೇಗಿದೆ? ಕಳೆದ 5 ಪಂದ್ಯಗಳ ಫಲಿತಾಂಶವೇನು?

ಇಂಡಿಯನ್ ಪ್ರೀಮಿಯರ್ ಲೀಗ್​ನ 19 ನೇ ಸೀಸನ್​ನ (IPL 2026)  ಮೊದಲ ಪಂದ್ಯ ಮಾರ್ಚ್ 28 ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB vs SRH) ನಡುವೆ ನಡೆಯಲಿದೆ. ಒಂದೆಡೆ ಆರ್​ಸಿಬಿ ಹಾಲಿ ಚಾಂಪಿಯನ್ ಆಗಿದ್ದರೆ, ಮತ್ತೊಂದೆಡೆ ಸನ್‌ರೈಸರ್ಸ್ ಹೈದರಾಬಾದ್‌ ಕಳೆದ ಆವೃತ್ತಿಯಲ್ಲಿ 5ನೇ ಸ್ಥಾನಕ್ಕೆ ತೃಪ್ತಿಪಡೆದುಕೊಂಡಿತ್ತು. ಆದಾಗ್ಯೂ ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ಹೊಂದಿರುವ ಎಸ್‌ಆರ್‌ಎಚ್ ತಂಡವನ್ನು ಕಡಿಮೆ ಅಂದಾಜು ಮಾಡುವಂತಿಲ್ಲ. ಇತ್ತ ಬ್ಯಾಟಿಂಗ್‌ ಹಾಗೂ…

Read More

Video: ತಿಂಗಳಿಗೆ 75,000 ರೂ ಸಂಪಾದಿಸುವ ಮುಂಬೈ ಆಟೋ ಚಾಲಕ

ಮುಂಬೈ, ಮಾರ್ಚ್ 27: ಈಗಿನ ಕಾಲದಲ್ಲಿ ಓದಿಕೊಂಡವರು ಕಾರ್ಪೊರೇಟ್ ಉದ್ಯೋಗಗಳತ್ತ (Corporate job) ಆಸಕ್ತಿ ತೋರಿಸುತ್ತಾರೆ. ಸ್ವ ಉದ್ಯೋಗಕ್ಕೆ ಕೈ ಹಾಕುವುದು ಕಡಿಮೆಯೇ. ಆದರೆ, ಸ್ವಂತ ದುಡಿಮೆಯಿಂದಲೂ ಲಕ್ಷಾನುಗಟ್ಟಲೆ ದುಡಿಯಬಹುದು ಅನೇಕರಿಗೆ ತಿಳಿದೇ ಇಲ್ಲ. ಆದರೆ ಮುಂಬೈ (Mumbai) ಆಟೋಚಾಲಕರೊಬ್ಬರ ದಿನದ ಸಂಪಾದನೆ ಕೇಳಿದ್ರೆ ನೀವು ಶಾಕ್ ಆಗ್ತೀರಾ. ದಿನಕ್ಕೆ 2500 ರೂ ಸಂಪಾದಿಸುವ ಈ ಆಟೋಚಾಲಕ ತಿಂಗಳಿಗೆ 75,000 ರೂ ಸಂಪಾದನೆ ಮಾಡ್ತಾರಂತೆ. ಈ ವಿಡಿಯೋ ಕಾರ್ಪೊರೇಟ್ ಸಂಬಳದ ಕುರಿತು ಚರ್ಚೆಯನ್ನು ಹುಟ್ಟುಹಾಕಿದೆ. @uvichar_ ಹೆಸರಿನ…

Read More

ನಮಗೆ ರಸ್ತೆ ಇಲ್ಲ, 500 ಕೋಟಿ ರೂ. ಕೊಡಿ: ‘ಧುರಂಧರ್ 2’ ತಂಡಕ್ಕೆ ಪಾಕಿಸ್ತಾನಿಗಳ ಮನವಿ

ಆದಿತ್ಯ ಧರ್ (Aditya Dhar) ನಿರ್ದೇಶನ ಮಾಡಿರುವ ‘ಧುರಂಧರ್ 2’ ಸಿನಿಮಾ ಸೂಪರ್ ಹಿಟ್ ಆಗಿದೆ. ಮೊದಲ ಭಾಗದ ರೀತಿಯೇ ಈ ಸೀಕ್ವೆಲ್ ಕೂಡ ಧೂಳೆಬ್ಬಿಸುತ್ತಿದೆ. ವಿಶ್ವಾದ್ಯಂತ ಬಾಕ್ಸ್ ಆಫೀಸ್​​ನಲ್ಲಿ ಈ ಸಿನಿಮಾ ಈಗಾಗಲೇ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಪಾಕಿಸ್ತಾನದಲ್ಲಿ ‘ಧುರಂಧರ್ 2’ (Dhurandhar 2) ಸಿನಿಮಾ ಬಿಡುಗಡೆ ಆಗಿಲ್ಲ. ಹಾಗಿದ್ದರೂ ಕೂಡ ಅಲ್ಲಿನ ಜನರು ಈ ಸಿನಿಮಾ ಬಗ್ಗೆ ಮಾತನಾಡುತ್ತಿದ್ದಾರೆ. ಯಾಕೆಂದರೆ, ಈ ಚಿತ್ರದ ಕಥೆ ನಡೆಯುವುದೇ ಪಾಕಿಸ್ತಾನದಲ್ಲಿ. ಈಗ…

Read More

ಹೊಂಬಾಳೆ ಬಳಿಕ ರಾಜ್ ಬಿ ಶೆಟ್ಟಿಯಿಂದಲೂ ದೂರಾದರೇ ರಿಷಬ್?

ರಿಷಬ್ ಶೆಟ್ಟಿ (Rishab Shetty), ಕರ್ನಾಟಕದ ಪ್ಯಾನ್ ಇಂಡಿಯಾ ಸ್ಟಾರ್ ನಟ. ‘ಕಾಂತಾರ’ ಮತ್ತು ‘ಕಾಂತಾರ ಚಾಪ್ಟರ್ 1’ ಸಿನಿಮಾದ ಬಳಿಕ ರಿಷಬ್​​ರ ಖ್ಯಾತಿ ದೇಶದೆಲ್ಲೆಡೆ ಹರಡಿದೆ. ‘ಕಾಂತಾರ ಚಾಪ್ಟರ್ 1’ ಬಳಿಕ ಅವರಿಗೆ ತೆಲುಗು, ಬಾಲಿವುಡ್​​ನಿಂದಲೂ ಆಫರ್​​ಗಳು ಬರುತ್ತಿದ್ದು, ಇದೀಗ ರಿಷಬ್ ಅವರು ತೆಲುಗಿನ ‘ಜೈ ಹನುಮಾನ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಹೊಸ ಸಿನಿಮಾದ ತಯಾರಿಯಲ್ಲಿ ತೊಡಗಿರುವ ಸುಳಿವನ್ನೂ ಸಹ ಸಾಮಾಜಿಕ ಜಾಲತಾಣದ ಮೂಲಕ ನೀಡಿದ್ದಾರೆ. ‘ಕಾಂತಾರ: ಚಾಪ್ಟರ್ 2’ ಸಿನಿಮಾದ ಬಳಿಕ ರಿಷಬ್ ಶೆಟ್ಟಿ…

Read More

ನಿತೀಶ್ ಕುಮಾರ್ ಮಾರ್ಚ್​ 30ರಂದು ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ

ಪಾಟ್ನಾ, ಮಾರ್ಚ್​ 27: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ಮಾರ್ಚ್​ 30ರಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮಾರ್ಚ್ 16 ರಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಗೆಲುವು ಸಾಧಿಸಿದ್ದರು.ಒಬ್ಬ ವ್ಯಕ್ತಿಯು ಏಕಕಾಲದಲ್ಲಿ ಎರಡು ಸದನಗಳ ಸದಸ್ಯತ್ವವನ್ನು ಹೊಂದಲು ಸಾಧ್ಯವಿಲ್ಲ, ಇದು 14 ದಿನಗಳಲ್ಲಿ ಒಂದು ಸ್ಥಾನವನ್ನು ತ್ಯಜಿಸುವುದು ಕಡ್ಡಾಯ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ, ಆದರೆ ಅವರು ತಮ್ಮ ಸ್ಥಾನವನ್ನು ತ್ಯಜಿಸಿಲ್ಲ. ಎರಡು…

Read More

IPL ಪಂದ್ಯದ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಅಶೋಕ್​​ ಎಚ್ಚರಿಕೆ: ವಿಪಕ್ಷ ನಾಯಕ ಹೇಳಿದ್ದೇನು?

ಬೆಂಗಳೂರು, ಮಾರ್ಚ್​​ 27: ಐಪಿಎಲ್ ಪಂದ್ಯಗಳ ಸುರಕ್ಷತೆ ಮತ್ತು ಟಿಕೆಟ್ ವಿತರಣೆ ಕುರಿತು ರಾಜ್ಯ ಸರ್ಕಾರಕ್ಕೆ ವಿಧಾನಸೌಧದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಎಚ್ಚರಿಕೆ ನೀಡಿದ್ದಾರೆ. ಹಿಂದಿನ ಐಪಿಎಲ್ ಪಂದ್ಯದ ಸಂದರ್ಭ ಸಂಭವಿಸಿದ ಕಾಲ್ತುಳಿತದಲ್ಲಿ 11 ಅಮಾಯಕರು ಮೃತಪಟ್ಟಿದ್ದನ್ನು ಉಲ್ಲೇಖಿಸಿದ ಅವರು, ರಾಜ್ಯ ಸರ್ಕಾರದ ಬೇಜವಾಬ್ದಾರಿ ಹಾಗೂ ಅಧಿಕಾರಿಗಳ ನಡೆ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಅಲ್ಲದೆ ಮುಂಬರುವ ಐಪಿಎಲ್ ಪಂದ್ಯಗಳು ಸುಗಮವಾಗಿ ನಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಯಾವುದೇ ಅಹಿತಕರ ಘಟನೆ ಸಂಭವಿಸಿದಲ್ಲಿ…

Read More

5 ವರ್ಷ ಹಿಂದಿನ ಕೊಲೆ ಪ್ರಕರಣದಲ್ಲಿ 7 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಸಂಬಲ್ಪುರ, ಮಾರ್ಚ್ 27: ಒಡಿಶಾದ ಕತರ್ಬಗಾ ಪೊಲೀಸ್ ವ್ಯಾಪ್ತಿಯ ಪದನ್ಪಲಿಯಲ್ಲಿ 2021 ರಲ್ಲಿ ನಡೆದ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಲ್ಪುರದ ಸೆಷನ್ಸ್ ನ್ಯಾಯಾಲಯವು ಗುರುವಾರ 7 ಜನರಿಗೆ ಜೀವಾವಧಿ ಶಿಕ್ಷೆ (life imprisonment) ವಿಧಿಸಿದೆ ಮತ್ತು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಒಬ್ಬ ಆರೋಪಿಯನ್ನು ಖುಲಾಸೆಗೊಳಿಸಿದೆ. ನ್ಯಾಯಾಲಯದ ಆದೇಶಗಳ ಪ್ರಕಾರ ಶಿಕ್ಷೆಗಳನ್ನು ಏಕಕಾಲದಲ್ಲಿ ಜಾರಿಗೊಳಿಸಲು ನಿರ್ದೇಶಿಸಲಾಗಿದೆ. ಕತರ್ಬಗಾ ಪೊಲೀಸ್ ವ್ಯಾಪ್ತಿಯ ಗುಲಾಮಾಲ್ ಗ್ರಾಮದಲ್ಲಿ 2021ರಲ್ಲಿ ನಡೆದ ಪ್ರಕಾಶ್ ಪ್ರಧಾನ್ ಅವರ ಸಂಚಲನ ಮೂಡಿಸಿದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಲ್ಪುರದ…

Read More

SSLC ಒಟ್ಟು ಮಾರ್ಕ್ಸ್​​ 625ದಿಂದ 525ಕ್ಕೆ ಇಳಿಕೆ: ಹಿಂದಿ ಅಂಕಕ್ಕೆ ಕೋಕ್

ಬೆಂಗಳೂರು, ಮಾರ್ಚ್​ 27: ಎಸ್​​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಯನ್ನು ಕಡ್ಡಾಯಗೊಳಿಸಬಾರದು ಮತ್ತು ಅಂಕ ಪಟ್ಟಿಯಿಂದ ಹೊರಗಿಡುವಂತೆ ಇತ್ತೀಚೆಗೆ ವಿವಿಧ ಕನ್ನಡ ಪರ ಸಂಘಟನೆಗಳು ಸರ್ಕಾರಕ್ಕೆ ಒತ್ತಾಯಿಸಿದ್ದವು. ಇದರ ಬೆನ್ನಲ್ಲೇ ಎಸ್​​ಎಸ್​​ಎಲ್​ಸಿ ಪರೀಕ್ಷೆಗೆ 525 ಅಂಕಗಳು ನಿಗದಿ ಮಾಡಲಾಗಿದೆ. ತೃತೀಯ ಭಾಷೆಯ ಅಂಕಕ್ಕೆ ಕೊಕ್​ ನೀಡಲಾಗಿದೆ. ಆ ಮೂಲಕ ಕರ್ನಾಟಕದ ಎಸ್​​ಎಸ್​ಎಲ್​​ಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಮಹತ್ವದ ಸುದ್ದಿ ನೀಡಿದೆ. ರಾಜ್ಯದಲ್ಲಿ ಎಸ್​​ಎಸ್​ಎಲ್​​ಸಿ ಪರೀಕ್ಷೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಶಿಕ್ಷಣ ಇಲಾಖೆ ಎಸ್​​ಎಸ್​ಎಲ್​​ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆಗೆ ಮುಂದಾಗಿದೆ. ಇನ್ನು…

Read More

IPL 2026: ಯಾವ ಚಾನೆಲ್‌ನಲ್ಲಿ ಐಪಿಎಲ್ ನೇರಪ್ರಸಾರ? ಮೊಬೈಲ್​ನಲ್ಲಿ ಉಚಿತವಾಗಿ ವೀಕ್ಷಿಸುವುದು ಹೇಗೆ?

ಇಂಡಿಯನ್ ಪ್ರೀಮಿಯರ್ ಲೀಗ್‌ನ 19 ನೇ ಸೀಸನ್ (IPL 2026 ) ಮಾರ್ಚ್ 28 ರಿಂದ ಪ್ರಾರಂಭವಾಗುತ್ತಿದೆ. ಮೊದಲಿಗೆ ಕೇವಲ 20 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿದ್ದ ಬಿಸಿಸಿಐ (BCCI), ಟೂರ್ನಿ ಆರಂಭಕ್ಕೆ ಎರಡು ದಿನಗಳಿರುವಾಗ ಉಳಿದ 50 ಪಂದ್ಯಗಳನ್ನು ಪ್ರಕಟಿಸಿತು. ಇದರರ್ಥ ಈ ಬಾರಿಯ ಐಪಿಎಲ್​ನ ಪೂರ್ಣ ವೇಳಾಪಟ್ಟಿ ಪ್ರಕಟವಾಗಿದೆ. ಈ ಆವೃತ್ತಿಯಲ್ಲಿ ಒಟ್ಟು 12 ಡಬಲ್ ಹೆಡರ್ ಪಂದ್ಯಗಳು ನಡೆಯಲಿದ್ದು, 12 ನಗರಗಳು ಈ ಟೂರ್ನಿಗೆ ಆತಿಥ್ಯವಹಿಸುತ್ತಿವೆ. ಲೀಗ್​ನ ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು…

Read More

ಸಿಎಂ ಸಿದ್ದರಾಮಯ್ಯ ಸಂಧಾನ ಸಕ್ಸಸ್: ಪಲ್ಟಿ ಹೊಡೆದ ಪೈಲ್ವಾನ್

ಬೆಂಗಳೂರು/ದಾವಣಗೆರೆ, (ಮಾರ್ಚ್ 27): ದಾವಣಗೆರೆ ದಕ್ಷಿಣ ವಿಧಾನಸಭೆ ಉಪಚುನಾವಣೆ ರಂಗೇರಿದ್ದು, ಇನ್ನೊಂದೆಡೆ ಕಾಂಗ್ರೆಸ್​​ಗೆ ಮುಸ್ಲಿಂ ಮತಗಳ ಆತಂಕ ಕಾಡುತ್ತಿದೆ. ಯಾಕಂದ್ರೆ ತಮ್ಮ ಸಮುದಾಯಕ್ಕೆ ಟಿಕೆಟ್ ಕೈತಪ್ಪಿದ್ದರಿಂದ ಮುಸ್ಲಿಮರು ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದು, ಬರೋಬ್ಬರಿ 14 ಮುಸ್ಲಿಂ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅದರಲ್ಲೂ ಮುಖ್ಯವಾಗಿ ಸಾಧಿಕ್ ಪೈಲ್ವಾನ್ ಪ್ರಮುಖರಾಗಿದ್ದು, ಕಾಂಗ್ರೆಸ್ ವೋಟ್ ಬ್ಯಾಂಕ್ ಒಡೆಯುತ್ತಾರೆ ಎನ್ನುವ ಭಯ ಇತ್ತು. ಆದ್ರೆ, ಇದೀಗ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಂಧಾನ ಯಶಸ್ವಿಯಾಗಿದ್ದು, ಪೈಲ್ವಾನ್ ಬಂಡಾಯ ಶಮನ ಮಾಡುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಆದ್ರೆ,…

Read More