All posts by nagaraj11081993

Video: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಅಯೋಧ್ಯೆ, ರಾಮಲಲ್ಲಾನಿಗೆ ಸೂರ್ಯ ತಿಲಕ; ಇಲ್ಲಿದೆ ಅದ್ಭುತ ವಿಡಿಯೋ!

Video: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಅಯೋಧ್ಯೆ, ರಾಮಲಲ್ಲಾನಿಗೆ ಸೂರ್ಯ ತಿಲಕ; ಇಲ್ಲಿದೆ ಅದ್ಭುತ ವಿಡಿಯೋ!

ಅಯೋಧ್ಯೆ ಸೇರಿದಂತೆ ದೇಶಾದ್ಯಂತ ಶ್ರೀ ರಾಮನವಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ನೂತನ ರಾಮ ಮಂದಿರದಲ್ಲಿ ಬಾಲರಾಮಲಲ್ಲಾನ ವಿಗ್ರಹದ ಹಣೆಯ ಮೇಲೆ ಸೂರ್ಯನ ಕಿರಣಗಳು ನೇರವಾಗಿ ಸ್ಪರ್ಶಿಸಿ, ಸೂರ್ಯ ತಿಲಕವಿಟ್ಟಂತೆ ಭಾಸವಾದ ಐತಿಹಾಸಿಕ ಕ್ಷಣಕ್ಕೆ ಅಯೋಧ್ಯೆ ಸಾಕ್ಷಿಯಾಯಿತು. ಈ ಅದ್ಭುತ ದೃಶ್ಯದ ವಿಡಿಯೋ ಇಲ್ಲಿದೆ ನೋಡಿ

ರಾಮಲಲ್ಲಾನ ವಿಗ್ರಹದ ಹಣೆಗೆ ಸೂರ್ಯನ ಕಿರಣಗಳು ಬೀಳುವಂತೆ ವಿಶೇಷ ವಾಸ್ತು ವಿನ್ಯಾಸ ಮಾಡಲಾಗಿದೆ. ಐಐಟಿ, ಭಾರತೀಯ ತಂತ್ರಜ್ಞಾನ ಸಂಸ್ಥೆ ವಿಜ್ಞಾನಿಗಳು ಮತ್ತು ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್‌ನ ತಜ್ಞರು ಜಂಟಿಯಾಗಿ ಈ ಆಪ್ಟೋ-ಮೆಕ್ಯಾನಿಕಲ್ ಸಿಸ್ಟಮ್ ಅನ್ನು ವಿನ್ಯಾಸಗೊಳಿಸಿದ್ದಾರೆ. ಮಂದಿರದ ಶಿಖರದ ಮೇಲ್ಭಾಗದಲ್ಲಿ ಅಳವಡಿಸಲಾಗಿರುವ ಕನ್ನಡಿಗಳು ಮತ್ತು ಲೆನ್ಸ್‌ಗಳ ಮೂಲಕ ಸೂರ್ಯನ ಬೆಳಕು ಗರ್ಭಗುಡಿಯನ್ನು ಪ್ರವೇಶಿಸಿ, ಸರಿಯಾಗಿ ಮಧ್ಯಾಹ್ನ 12 ಗಂಟೆಗೆ ಬಾಲರಾಮನ ಹಣೆಯ ಮೇಲೆ 58 ಮಿಲಿಮೀಟರ್ ಗಾತ್ರದ ತಿಲಕವಾಗಿ ಗೋಚರಿಸಿತು.

51 ಇಂಚು ಎತ್ತರದ ಬಾಲರಾಮನ ವಿಗ್ರಹವನ್ನು ನಮ್ಮ ಕರ್ನಾಟಕದ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕಪ್ಪು ಶಿಲೆಯಲ್ಲಿ ಕೆತ್ತಿದ್ದಾರೆ. ವಾಲ್ಮೀಕಿ ರಾಮಾಯಣದ ಪ್ರಕಾರ, ಶ್ರೀರಾಮನು ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯಂದು ಮಧ್ಯಾಹ್ನ 12 ಗಂಟೆಗೆ ಜನಿಸಿದನು ಎಂಬ ಪ್ರತೀತಿಯ ಹಿನ್ನೆಲೆಯಲ್ಲಿ, ಪ್ರತಿ ವರ್ಷ ರಾಮನವಮಿಯಂದು ಇದೇ ರೀತಿ ಸೂರ್ಯ ತಿಲಕವು ಗೋಚರಿಸುವಂತೆ ವ್ಯವಸ್ಥೆ ಮಾಡಲಾಗಿದೆ. ಇದು ಆಧುನಿಕ ವಿಜ್ಞಾನ ಮತ್ತು ಪ್ರಾಚೀನ ಸಂಪ್ರದಾಯದ ಅದ್ಭುತ ಸಂಗಮಕ್ಕೆ ಸಾಕ್ಷಿಯಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ರಾಮನವಮಿ, ಅಯೋಧ್ಯೆಯಲ್ಲಿ ಬಾಲರಾಮನ ಹಣೆಗೆ ಸೂರ್ಯ ತಿಲಕ, ಕಣ್ತುಂಬಿಕೊಂಡ ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್​ 27: ಈ ವರ್ಷ, ಅಯೋಧ್ಯೆ(Ayodhya)ಯಲ್ಲಿ ರಾಮ ನವಮಿ ಕೇವಲ ಧಾರ್ಮಿಕ ಹಬ್ಬವಾಗಿರಲಿಲ್ಲ, ಜನರು ವರ್ಷಗಳ ಕಾಲ ನೆನಪಿನಲ್ಲಿಟ್ಟುಕೊಳ್ಳುವ ಕ್ಷಣವಾಗಿದೆ. ದೇವಾಲಯ ಸಂಕೀರ್ಣದಾದ್ಯಂತ ಜೈ ಶ್ರೀ ರಾಮ್ ಎಂಬ ಘೋಷಣೆಗಳು ಪ್ರತಿಧ್ವನಿಸುತ್ತಿದ್ದಂತೆ, ಬಾಲ ರಾಮನ ಹಣೆಗೆ ಸೂರ್ಯನ ರಶ್ಮಿ ತಿಲಕ ಇಟ್ಟಿತ್ತು. ಈ ಕ್ಷಣವನ್ನು ಪ್ರಧಾನಿ ಮೋದಿ ಕಣ್ತುಂಬಿಕೊಂಡರು. ಈ ಸಂಪೂರ್ಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ತಿಂಗಳುಗಳ ಸಂಶೋಧನೆ ಬೇಕಾಯಿತು.

ಇದನ್ನು ರೂರ್ಕಿಯಲ್ಲಿರುವ ಕೇಂದ್ರ ಕಟ್ಟಡ ಸಂಶೋಧನಾ ಸಂಸ್ಥೆ (ಸಿಬಿಆರ್‌ಐ) ಮತ್ತು ಬೆಂಗಳೂರಿನ ತಜ್ಞರು ಜಂಟಿಯಾಗಿ ಅಭಿವೃದ್ಧಿಪಡಿಸಿದ್ದಾರೆ. ಸೂರ್ಯನ ವೇಗ, ಕೋನ ಮತ್ತು ಸಮಯದ ನಿಖರವಾದ ಲೆಕ್ಕಾಚಾರಗಳಿಲ್ಲದೆ ಇದು ಸಾಧ್ಯವಾಗುತ್ತಿರಲಿಲ್ಲ. ಒಂದು ಸೆಕೆಂಡಿನ ದೋಷವು ಸಹ ಇಡೀ ದೃಶ್ಯದ ಮೇಲೆ ಪರಿಣಾಮ ಬೀರುತ್ತಿತ್ತು ಎಂದು ವಿಜ್ಞಾನಿಗಳು ಹೇಳುತ್ತಾರೆ.

ಈ ತಿಲಕವು ಪ್ರಾಣ-ಪ್ರತಿಷ್ಠೆಯ ನಂತರ ಎರಡನೇ ಬಾರಿಗೆ ಬಾಲರಾಮನ ಹಣೆಗೆ ಸೂರ್ಯ ತಿಲಕ ಬಿದ್ದಿದೆ. ಸೂರ್ಯ ತಿಲಕದ ನಂತರ, ರಾಮ ಲಲ್ಲಾಗೆ 56 ಭಕ್ಷ್ಯಗಳನ್ನು ಅರ್ಪಿಸಲಾಗುತ್ತದೆ. ಬೆಳಗ್ಗೆ 5.30ಕ್ಕೆ ರಾಮಲಲ್ಲಾಗೆ ಆರತಿ ಮಾಡಲಾಯಿತು. ಭಗವಂತನ ವಿಗ್ರಹಕ್ಕೆ ಹಳದಿ ಬಟ್ಟೆ ಹೊದಿಸಲಾಗಿತ್ತು. ಭಕ್ತರು ಬೆಳಗ್ಗೆ 5 ರಿಂದ ರಾತ್ರಿ 11 ರವರೆಗೆ, ಅಂದರೆ ಒಟ್ಟು 18 ಗಂಟೆಗಳ ಕಾಲ ರಾಮಲಲ್ಲಾ ದರ್ಶನ ಪಡೆಯಲು ಸಾಧ್ಯವಾಗುತ್ತದೆ.

ಮತ್ತಷ್ಟು ಓದಿ: ಬಂಗಾಳದಲ್ಲಿ ಬಾಬರಿ ಮಸೀದಿ ವಿವಾದದ ಬೆನ್ನಲ್ಲೇ ಅಯೋಧ್ಯೆ ಶೈಲಿಯ ರಾಮ ಮಂದಿರ ನಿರ್ಮಾಣಕ್ಕೆ ಸಿದ್ಧತೆ

ಈ ಹಿಂದೆ ದರ್ಶನ ಸಮಯ ಬೆಳಗ್ಗೆ 6.30 ರಿಂದ ರಾತ್ರಿ 9.30 ರವರೆಗೆ ಇತ್ತು. ರಾಮಲಲ್ಲಾ ದರ್ಶನ ಪಡೆಯಲು ಸುಮಾರು 10 ಲಕ್ಷ ಜನರು ರಾಮ ಜನ್ಮಭೂಮಿ ಸಂಕೀರ್ಣಕ್ಕೆ ಹೋಗಿದ್ದಾರೆ. ರಾಮ ಪಥ, ಭಕ್ತಿ ಪಥ ಮತ್ತು ಜನ್ಮಭೂಮಿ ಪಥ್ಗಳಲ್ಲಿ ಭಾರಿ ಜನಸಂದಣಿ ಕಂಡುಬರುತ್ತಿದ್ದು, ಉದ್ದನೆಯ ಸರತಿ ಸಾಲುಗಳು ಸೃಷ್ಟಿಯಾಗಿವೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

ಹನಿಮೂನ್ ಮುಗಿಸಿ ಒಟ್ಟಿಗೆ ಕೆಲಸಕ್ಕೆ ಮರಳಿದ ವಿಜಯ್-ರಶ್ಮಿಕಾಗೆ ಭರ್ಜರಿ ಸ್ವಾಗತ

ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ ದಂಪತಿ ಕಳೆದ ತಿಂಗಳು ಬಲು ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಜೈಪುರದಲ್ಲಿ ನಡೆದ ಇವರ ಮದುವೆ ದೇಶದಾದ್ಯಂತ ಸುದ್ದಿ ಆಗಿತ್ತು, ರಶ್ಮಿಕಾ-ವಿಜಯ್ ಅವರ ಫೋಟೊಗಳು ಸಖತ್ ವೈರಲ್ ಆಗಿದ್ದವು. ಬಳಿಕ ಹೈದರಾಬಾದ್​​ನಲ್ಲಿ ಅದ್ಧೂರಿ ರಿಸೆಪ್ಷನ್ ಸಹ ನಡೆಯಿತು. ವಿವಾಹದ ಬಳಿಕ ಥಾಯ್ಲೆಂಡ್​​ಗೆ ಹನಿಮೂನ್ ಪ್ರವಾಸಕ್ಕೂ ಸಹ ಈ ಜೋಡಿ ಹೋಗಿ ಬಂತು. ಇದೀಗ ಮದುವೆಯಾಗಿ ತಿಂಗಳ ಬಳಿಕ ಇಬ್ಬರೂ ಕೆಲಸಕ್ಕೆ ಮರಳಿದ್ದಾರೆ. ರಶ್ಮಿಕಾ ಮತ್ತು ವಿಜಯ್ ಒಟ್ಟಿಗೆ ‘ರಣಬಲಿ’ ಸಿನಿಮಾನಲ್ಲಿ ನಟಿಸುತ್ತಿದ್ದು, ಸೆಟ್​​ಗೆ ಒಟ್ಟಿಗೆ ಮರಳಿದ್ದಾರೆ. ನವ ವಧು-ವರರನ್ನು ಆರತಿ ಮಾಡುವ ಮೂಲಕ ಸೆಟ್​​ಗೆ ಸ್ವಾಗತಿಸಿರುವುದು ವಿಶೇಷ.

ಮದುವೆಗೆ ಮುಂಚೆ ಈ ಜೋಡಿ ‘ರಣಬಲಿ’ ಸಿನಿಮಾ ಒಪ್ಪಿಕೊಂಡಿದ್ದರು. ಇದೀಗ ಮದುವೆ ಬಳಿಕ ಸಿನಿಮಾದ ಚಿತ್ರೀಕರಣ ಶುರುವಾಗಿದ್ದು, ಒಟ್ಟಿಗೆ ಸೆಟ್​​ಗೆ ಬಂದಿದ್ದಾರೆ. ‘ರಣಬಲಿ’ ಒಂದು ಪಿರಿಯಡ್ ಆಕ್ಷನ್ ಡ್ರಾಮಾ ಆಗಿದ್ದು, ರಾಹುಲ್ ಸಂಕೃತ್ಯನ್ ಈ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಸಿನಿಮಾದ ಒಂದು ಪೋಸ್ಟರ್ ಈಗಾಗಲೇ ಬಿಡುಗಡೆ ಆಗಿದ್ದು, ಸಖತ್ ಗಮನ ಸೆಳೆದಿತ್ತು. ಮದುವೆ ಬಳಿಕ ಇಬ್ಬರೂ ನಟಿಸುತ್ತಿರುವ ಮೊದಲ ಸಿನಿಮಾ ಇದಾಗಿದೆ. ಜೊತೆಗೆ ಇಬ್ಬರೂ ಒಟ್ಟಿಗೆ ನಟಿಸುತ್ತಿರುವ ಮೂರನೇ ಸಿನಿಮಾ ಇದಾಗಿದೆ.

ಇದನ್ನೂ ಓದಿ:ರಶ್ಮಿಕಾ-ವಿಜಯ್ ದೇವರಕೊಂಡ ವಿವಾಹಕ್ಕೆ ಅಂತಿಮವಾಗಿ ಖರ್ಚಾಗಿದ್ದೆಷ್ಟು?

ವಿಜಯ್ ಹಾಗೂ ರಶ್ಮಿಕಾ ಅವರಿಗೆ ‘ರಣಬಲಿ’ ಸೆಟ್​​ನಲ್ಲಿ ಆರತಿ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ವಿಡಿಯೋನಲ್ಲಿ ರಶ್ಮಿಕಾ, ಹಣೆಗೆ ಕುಂಕುಮ, ಕೆನ್ನೆಗೆ ಅರಿಶಿಣ ಧರಿಸಿ ಬಹಳ ಖುಷಿಯಿಂದ ಆರತಿ ಮಾಡಿಸಿಕೊಂಡಿದ್ದಾರೆ. ಜೊತೆಯಲ್ಲಿ ವಿಜಯ್ ದೇವರಕೊಂಡ ಸಹ ಇದ್ದಾರೆ. ಇಡೀ ಚಿತ್ರತಂಡ ನೂತನ ವಧು-ವರರಿಗೆ ಮದುವೆಯ ಶುಭಾಶಯಗಳನ್ನು ಕೋರಿದೆ.

ರಶ್ಮಿಕಾ ಮಂದಣ್ಣ ನಟಿಸಿರುವ ‘ಕಾಕ್​​ಟೇಲ್ 2’ ಸಿನಿಮಾ ಮುಂದಿನ ತಿಂಗಳು ಬಿಡುಗಡೆ ಆಗಲಿದೆ. ಇದೀಗ ಅವರು ‘ರಣಬಲಿ’ ಸಿನಿಮಾನಲ್ಲಿ ನಟಿಸಲು ಆರಂಭಿಸಿದ್ದಾರೆ. ಇದರ ಜೊತೆಗೆ ಇನ್ನೂ ಒಂದು ಹಿಂದಿ ಸಿನಿಮಾ ಹಾಗೂ ಅಲ್ಲು ಅರ್ಜುನ್ ಜೊತೆಗೆ ಅಟ್ಲಿ ನಿರ್ದೇಶಿಸಲಿರುವ ಸಿನಿಮಾನಲ್ಲಿ ವಿಲನ್ ಪಾತ್ರದಲ್ಲಿ ಸಹ ನಟಿಸಲಿದ್ದಾರೆ. ಇನ್ನು ವಿಜಯ್ ದೇವರಕೊಂಡ ‘ರಣಬಲಿ’ಯ ಜೊತೆಗೆ ‘ರೌಡಿ ಜನಾರ್ಧನ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ‘ರಣಬಲಿ’ ಬಳಿಕ ರಶ್ಮಿಕಾ ಮತ್ತು ವಿಜಯ್ ಅವರು ಒಟ್ಟಿಗೆ ‘ಗೀತಾ ಗೋವಿಂದಂ 2’ ಸಿನಿಮಾನಲ್ಲಿ ನಟಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರೋಹಿತ್ ಶರ್ಮಾ ತೂಕ ಇಳಿಸಿಕೊಂಡಿದ್ದು ನೋಡಿ ಶಾಕ್ ಆದ ನೀತಾ ಅಂಬಾನಿ; ಹೇಳಿದ್ದೇನು ನೋಡಿ?

ಟೀಂ ಇಂಡಿಯಾ ಆಟಗಾರ ಹಾಗೂ ಮುಂಬೈ ಇಂಡಿಯನ್ಸ್ ತಂಡದ ಆಟಗಾರ ರೋಹಿತ್ ಶರ್ಮ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಇದಕ್ಕೆ ಕಾರಣ ಅವರ ಬದಲಾವಣೆ. ಈ ಮೊದಲು ಅವರ ದೇಹದ ಕಾರಣಕ್ಕೆ ಟೀಕೆ ಮಾಡಲಾಗುತ್ತಿತ್ತು. ಅವರಿಗೆ ಹೊಟ್ಟೆ ಇದೆ, ವಡಾಪಾವ್ ತಿಂತಾರೆ ಎಂದೆಲ್ಲ ಟೀಕಿಸಲಾಗಿತ್ತು. ಆದರೆ, ಈಗ ಅವರ ದೇಹದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಫಿಟ್ನೆಸ್​​ಗೆ ತುಂಬಾನೇ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಇದನ್ನು ನೋಡಿ ನೀತಾ ಅಂಬಾನಿ ಕೂಡ ಶಾಕ್ ಆಗಿದ್ದಾರೆ.

ಈಗಾಗಲೇ ಟೆಸ್ಟ್ ಹಾಗೂ ಟಿ20ಗೆ ರೋಹಿತ್ ಶರ್ಮಾ ನಿವೃತ್ತಿ ಘೋಷಿಸಿದ್ದಾರೆ. ಅವರು ಏಕದಿನ ಪಂದ್ಯಗಳನ್ನು ಮಾತ್ರ ಆಡುತ್ತಿದ್ದಾರೆ. ಅವರು ಈಗ ತಮ್ಮ ಫಿಟ್ನೆಸ್​ ಬಗ್ಗೆ ಹೆಚ್ಚು ಗಮನ ಹರಿಸಿದಂತೆ ಕಾಣಿಸುತ್ತಿದೆ. ‘ನಿಮ್ಮನ್ನು ನೋಡಿದ್ರೆ ಯಂಗ್ ಬಾಯ್ ರೀತಿ ಕಾಣಿಸ್ತೀರಾ’ ಎಂದು ನೀತಾ ಹೇಳಿರುವ ವಿಡಿಯೋ ಗಮನ ಸೆಳೆದಿದೆ. ಐಪಿಎಲ್​ ಆರಂಭದ ಸಂದರ್ಭದಲ್ಲಿ ರೋಹಿತ್ ಪ್ರ್ಯಾಕ್ಟಿಸ್ ನಡೆಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

 

 

Source link

RRB Recruitment 2026: ಭಾರತೀಯ ರೈಲ್ವೆ ಇಲಾಖೆಯಲ್ಲಿ 11ಸಾವಿರಕ್ಕೂ ಅಧಿಕ ಭರ್ಜರಿ ನೇಮಕಾತಿ; 10th ಪಾಸಾಗಿದ್ರೆ ಸಾಕು!

ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯು (RRB) ದೇಶದಾದ್ಯಂತ ಯುವಜನತೆಗೆ ದೊಡ್ಡ ಮಟ್ಟದ ಉದ್ಯೋಗಾವಕಾಶವನ್ನು ಕಲ್ಪಿಸಿದೆ. ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ ಖಾಲಿ ಇರುವ ಒಟ್ಟು 11,127 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಈ ನೇಮಕಾತಿಯು ಬೆಂಗಳೂರು, ಸಿಕಂದರಾಬಾದ್, ಮುಂಬೈ, ಚೆನ್ನೈ ಸೇರಿದಂತೆ ದೇಶದ ಪ್ರಮುಖ 21 ರೈಲ್ವೆ ಮಂಡಳಿಗಳ ವ್ಯಾಪ್ತಿಯಲ್ಲಿ ನಡೆಯಲಿದ್ದು, ಬೃಹತ್ ಸಂಖ್ಯೆಯ ಹುದ್ದೆಗಳು ಲಭ್ಯವಿರುವುದು ವಿಶೇಷವಾಗಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ಈ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸಾಗಿರಬೇಕು. ಇದರೊಂದಿಗೆ ಸಂಬಂಧಪಟ್ಟ ಟ್ರೇಡ್‌ಗಳಲ್ಲಿ ಐಟಿಐ (ITI) ಅಥವಾ ಡಿಪ್ಲೊಮಾ ವಿದ್ಯಾರ್ಹತೆಯನ್ನು ಹೊಂದಿರುವುದು ಕಡ್ಡಾಯವಾಗಿದೆ. ಅಭ್ಯರ್ಥಿಗಳ ವಯೋಮಿತಿಯನ್ನು ಜುಲೈ 1, 2026 ಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷಗಳ ನಡುವೆ ನಿಗದಿಪಡಿಸಲಾಗಿದೆ. ಸರ್ಕಾರದ ನಿಯಮದಂತೆ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ನೇಮಕಾತಿ; 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮತ್ತು ದಿನಾಂಕಗಳು:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯು ಮೇ 15 ರಿಂದ ಆರಂಭವಾಗಲಿದ್ದು, ಆಸಕ್ತರು ಜೂನ್ 14 ರೊಳಗೆ ತಮ್ಮ ವಿವರಗಳನ್ನು ಸಲ್ಲಿಸಬೇಕಾಗುತ್ತದೆ. ಆರಂಭಿಕ ವೇತನವು ತಿಂಗಳಿಗೆ ರೂ. 19,900 ರಿಂದ ಪ್ರಾರಂಭವಾಗಲಿದ್ದು, ಇದರೊಂದಿಗೆ ಕೇಂದ್ರ ಸರ್ಕಾರದ ಇತರೆ ಎಲ್ಲಾ ಭತ್ಯೆಗಳು ಮತ್ತು ಸೌಲಭ್ಯಗಳು ಆಯ್ಕೆಯಾದ ಸಿಬ್ಬಂದಿಗೆ ಲಭ್ಯವಿರಲಿವೆ.

ಆಯ್ಕೆ ವಿಧಾನ ಮತ್ತು ಪರೀಕ್ಷೆ:

ಸಹಾಯಕ ಲೋಕೋ ಪೈಲಟ್ ಹುದ್ದೆಗೆ ಆಯ್ಕೆಯಾಗಲು ಅಭ್ಯರ್ಥಿಗಳು ವಿವಿಧ ಹಂತದ ಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ. ಇದರಲ್ಲಿ ಮೊದಲ ಮತ್ತು ಎರಡನೇ ಹಂತದ ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆಗಳು (CBT 1 & 2), ಕಂಪ್ಯೂಟರ್ ಆಧಾರಿತ ಆಪ್ಟಿಟ್ಯೂಡ್ ಟೆಸ್ಟ್, ಮೂಲ ದಾಖಲೆಗಳ ಪರಿಶೀಲನೆ ಹಾಗೂ ಕಟ್ಟುನಿಟ್ಟಾದ ವೈದ್ಯಕೀಯ ಪರೀಕ್ಷೆಗಳು ಒಳಗೊಂಡಿರುತ್ತವೆ. ಈ ಎಲ್ಲಾ ಹಂತಗಳಲ್ಲಿ ಯಶಸ್ವಿಯಾದ ಅಭ್ಯರ್ಥಿಗಳನ್ನು ಅಂತಿಮವಾಗಿ ಹುದ್ದೆಗೆ ಪರಿಗಣಿಸಲಾಗುತ್ತದೆ. ಪರೀಕ್ಷಾ ಪಠ್ಯಕ್ರಮ ಮತ್ತು ಅರ್ಜಿ ಶುಲ್ಕದ ಬಗ್ಗೆ ಹೆಚ್ಚಿನ ಮಾಹಿತಿ ಶೀಘ್ರದಲ್ಲೇ ಪೂರ್ಣ ಪ್ರಮಾಣದ ಅಧಿಸೂಚನೆಯಲ್ಲಿ ಪ್ರಕಟವಾಗಲಿದೆ.

ಅಧಿಕೃತ ವೆಬ್​ಸೈಟ್​ ಲಿಂಕ್​ಗಾಗಿ ಇಲ್ಲಿ ಕ್ಲಿಕ್​ ಮಾಡಿ

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೇಂದ್ರ ನಮ್ಮನ್ನ ಕೊಲೆ ಮಾಡ್ತಿದೆ: ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಸಿದ್ದಕ್ಕೆ ಡಿಕೆಶಿ ಕೆಂಡಾಮಂಡಲ

ಬೆಂಗಳೂರು, (ಮಾರ್ಚ್ 27): ಕೇಂದ್ರ ಸರ್ಕಾರ ಪೆಟ್ರೋಲ್(Petrol) ಮತ್ತು ಡೀಸೆಲ್(Diesel) ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದು, ಇದರಿಂದಾಗಿ ಪ್ರತಿ ಲೀಟರ್ ಪೆಟ್ರೋಲ್‌ಗೆ 3 ರೂಪಾಯಿ ಮತ್ತು ಡೀಸೆಲ್‌ ಸುಂಕ ಶೂನ್ಯಕ್ಕೆ ಇಳಿದಿದೆ. ಆದ್ರೆ, ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲೆಕ್ಷನ್​ಗಾಗಿ ತೈಲ ಬೆಲೆಯ ಅಬಕಾರಿ ಸುಂಕ ಕಡಿಮೆ ಮಾಡಿದ್ದಾರೆ. ತೈಲ ಬೆಲೆ ಜಾಸ್ತಿ ಮಾಡಿಬಿಟ್ಟು ಕೇಂದ್ರ ನಮ್ಮನ್ನು ಕೊಲೆ ಮಾಡುತ್ತಿದೆ.ಕಂಪನಿಯವರು ಕೂಡ ಜಾಸ್ತಿ ಮಾಡಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಇನ್ನು ಡೀಸೆಲ್​ಗಿಲ್ಲ ಅಬಕಾರಿ ಸುಂಕ! ಪೆಟ್ರೋಲ್ ಸುಂಕ ಭಾರಿ ಕಡಿತ: ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ

Source link

Video: ಬೆಂಕಿಯಿಂದ ಏಳು ಜನರನ್ನು ರಕ್ಷಿಸಲು ಸುತ್ತಿಗೆಯಿಂದ ಛಾವಣಿ ಒಡೆದು ನುಗ್ಗಿದ ಯುವಕರು

ವಿಯೆಟ್ನಾಂ, ಮಾರ್ಚ್​ 27: ವಿಯೆಟ್ನಾಂನ ಬೃಹತ್ ವಸತಿ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿತ್ತು, ಎಲ್ಲರೂ ಭಯಭೀತರಾಗಿದ್ದರು. ಆದರೆ ಇಬ್ಬರು ಯುವಕರು ಇದ್ಯಾವುದನ್ನೂ ಲೆಕ್ಕಿಸದೆ ಸುತ್ತಿಗೆಯಿಂದ ಮೇಲ್ಛಾವಣಿ ಒಡೆದು ಅದರ ಮೂಲಕ ಹೋಗಿ ಏಳು ಮಂದಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ವಿಡಿಯೋದಲ್ಲಿ ಯುವಕರು ತಾರಸಿ ಮೇಲೆ ಹೋಗಿ ಛಾವಣಿಗೆ ಸುತ್ತಿಗೆಯಿಂದ ಪದೇ ಪದೇ ಹೊಡೆಯುತ್ತಿರುವುದನ್ನು ಕಾಣಬಹುದು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

 

Source link

ಐಪಿಎಲ್ ಟಿಕೆಟ್‌ಗಾಗಿ ಶಾಸಕರ ಪಟ್ಟು: ನಾವು ಸಾಮಾನ್ಯರೇ? ಕ್ಯೂನಲ್ಲಿ ನಿಲ್ಲಲಾಗದೆಂದ ಕಾಶಪ್ಪನವರ್‌ಗೆ ತೇಜಸ್ವಿ ಸೂರ್ಯ ಟಾಂಗ್!

ಬೆಂಗಳೂರು, ಮಾರ್ಚ್ 27: ಬೆಂಗಳೂರಿನಲ್ಲಿ (Bangalore) ಐಪಿಎಲ್ (IPL 2026) ಕ್ರೇಜ್ ಆರಂಭವಾಗುತ್ತಿದ್ದಂತೆಯೇ, ಇತ್ತ ವಿಧಾನಸೌಧದ ಒಳಗೂ ಟಿಕೆಟ್ ಕಿರಿಕ್ ಶುರುವಾಗಿದೆ. ‘ನಾವು ವಿಐಪಿಗಳು, ಸಾಮಾನ್ಯರಂತೆ ಕ್ಯೂನಲ್ಲಿ ನಿಂತು ಟಿಕೆಟ್ ಪಡೆಯಲು ಸಾಧ್ಯವಿಲ್ಲ. ಪ್ರತಿ ಶಾಸಕರಿಗೂ 5 ವಿಐಪಿ ಟಿಕೆಟ್ ನೀಡಬೇಕು’ ಎಂಬ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಹೇಳಿಕೆ ಈಗ ರಾಜ್ಯಮಟ್ಟದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ.

ವಿಜಯಾನಂದ ಕಾಶಪ್ಪನವರ್ ಹೇಳಿದ್ದೇನು?

ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ವಿಧಾನಸಭೆಯಲ್ಲಿ ಕೆಎಸ್‌ಸಿಎ (KSCA) ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ನಾವು ಜನಪ್ರತಿನಿಧಿಗಳು, ನಮಗೆ ಗೌರವ ಕೊಡಬೇಕು. ಕಳೆದ ಬಾರಿ ನಮ್ಮನ್ನು ಸಾಮಾನ್ಯ ಗ್ಯಾಲರಿಯಲ್ಲಿ ಕೂರಿಸಲಾಗಿತ್ತು. ಕೆಎಸ್‌ಸಿಎ ಸರ್ಕಾರದಿಂದ ಭದ್ರತೆ ಸೇರಿದಂತೆ ಎಲ್ಲಾ ಸೌಲಭ್ಯ ಪಡೆಯುತ್ತದೆ, ಆದರೆ ಶಾಸಕರಿಗೆ ಟಿಕೆಟ್ ನೀಡಲು ಹಿಂದೇಟು ಹಾಕುತ್ತಿದೆ. ಆನ್‌ಲೈನ್‌ನಲ್ಲಿ ಟಿಕೆಟ್ ಪಡೆಯುವುದು ಒಂದು ನಾಟಕ, ಅಲ್ಲಿ ಬ್ಲಾಕ್ ಮಾರ್ಕೆಟ್ ದಂಧೆ ನಡೆಯುತ್ತಿದೆ ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ. ಕಾಶಪ್ಪನವರ್ ಬೇಡಿಕೆಗೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸಹ ದನಿಗೂಡಿಸಿದ್ದಾರೆ.

ವಿಧಾನಸೌಧದ ಘನತೆಗೆ ತಕ್ಕುದಲ್ಲ: ತೇಜಸ್ವಿ ಸೂರ್ಯ ಖಂಡನೆ

ಶಾಸಕರ ಈ ವಿಐಪಿ ಟಿಕೆಟ್ ಬೇಡಿಕೆಯನ್ನು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಕಟುವಾಗಿ ಟೀಕಿಸಿದ್ದಾರೆ. ಶಾಸಕರ ಈ ಬೇಡಿಕೆ ಅವರ ಆದ್ಯತೆಗಳು ಏನಾಗಿವೆ ಎಂಬುದನ್ನು ತೋರಿಸುತ್ತದೆ. ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕಾದ ಸದನದಲ್ಲಿ ಐಪಿಎಲ್ ಟಿಕೆಟ್‌ಗಾಗಿ ಪಟ್ಟು ಹಿಡಿಯುವುದು ವಿಧಾನಸೌಧದ ಘನತೆಗೆ ತಕ್ಕುದಲ್ಲ. ಜನಸಾಮಾನ್ಯರು ಹಣ ನೀಡಿ ಟಿಕೆಟ್ ಖರೀದಿಸುವಾಗ ಶಾಸಕರಿಗೆ ಯಾಕೆ ಉಚಿತವಾಗಿ ನೀಡಬೇಕು? ಇದು ಅವರಲ್ಲಿರುವ ಅಹಂಕಾರದ ಪರಮಾವಧಿ ಎಂದು ಖಂಡಿಸಿದ್ದಾರೆ.

ತೇಜಸ್ವಿ ಸೂರ್ಯ ಎಕ್ಸ್ ಸಂದೇಶ

ಐಪಿಎಲ್ ಟಿಕೆಟ್ ಬೇಡಿಕೆಗೆ ಡಿಕೆಶಿ ಶಿವಕುಮಾರ್ ಬೆಂಬಲ

ಆದರೆ, ಈ ವಿಚಾರದಲ್ಲಿ ಶಾಸಕರ ಬೆಂಬಲಕ್ಕೆ ನಿಂತಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಶಾಸಕರು ಸರ್ಕಾರದ ವ್ಯವಸ್ಥೆಯ ಒಂದು ಭಾಗ. ಅವರಿಗೆ ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ. ನಾನು ಈ ಬಗ್ಗೆ ಕೆಎಸ್‌ಸಿಎ ಪದಾಧಿಕಾರಿಗಳ ಜೊತೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಅಲ್ಲದೆ, ತೇಜಸ್ವಿ ಸೂರ್ಯ ಅವರ ಟೀಕೆಗೆ ಪ್ರತಿಕ್ರಿಯಿಸಿ, ಸೂರ್ಯ ಮೊದಲು ಅವರ ಪಕ್ಷದ ಶಾಸಕರಿಗೆ ಬುದ್ಧಿ ಹೇಳಲಿ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಸದನದಲ್ಲೂ ಐಪಿಎಲ್ ಟಿಕೆಟ್ ಬಗ್ಗೆ ಚರ್ಚೆ: ಮ್ಯಾಚ್‌ ಟಿಕೆಟ್‌ಗಾಗಿ ಸರ್ಕಾರವನ್ನು ಬೇಡಿದ ಶಾಸಕರು!

ಈ ಬೆಳವಣಿಗೆಯ ಬೆನ್ನಲ್ಲೇ, ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ನೀಡುವ ನಿಟ್ಟಿನಲ್ಲಿ ಕೆಎಸ್‌ಸಿಎಗೆ ಸೂಚನೆ ನೀಡಿ ಕ್ರಮ ಕೈಗೊಳ್ಳುವಂತೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಿನ್ನದು ದೊಡ್ಡ ಮನಸ್ಸು ಕಣಯ್ಯ: ಕೊಟ್ಟ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ

ಮುಂಬೈ, ಮಾ.27: ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಐಪಿಎಲ್ 2026ರ ಸೀಸನ್ ಆರಂಭಕ್ಕೂ ಮುನ್ನ ಮುಂಬೈನ ವಾಂಖೆಡೆ ಸ್ಟೇಡಿಯಂನ ಮೈದಾನದ ಸಿಬ್ಬಂದಿಗೆ (Ground Staff) ಭರ್ಜರಿ ಉಡುಗೊರೆ ನೀಡುವ ಮೂಲಕ ಸುದ್ದಿಯಲ್ಲಿದ್ದಾರೆ. ಮುಂಬೈ ಕ್ರಿಕೆಟ್ ಅಸೋಸಿಯೇಷನ್‌ನ (MCA) ಸುಮಾರು 10 ರಿಂದ 11 ಮೈದಾನದ ಸಿಬ್ಬಂದಿಗೆ ಹಾರ್ದಿಕ್ ತಲಾ 10 ಲಕ್ಷ ರೂ. ರೂಪಾಯಿಗಳ ಚೆಕ್ ನೀಡಿದ್ದಾರೆ.

2026ರ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಹಾರ್ದಿಕ್ ವಾಂಖೆಡೆಯಲ್ಲಿ ಕಠಿಣ ತರಬೇತಿ ಪಡೆಯುತ್ತಿದ್ದರು. ಈ ವೇಳೆ ಅವರು ಹಲವು ಬಾರಿ ತಡರಾತ್ರಿಯವರೆಗೆ ಅಭ್ಯಾಸ ನಡೆಸುತ್ತಿದ್ದರು. ಅಂತಹ ಸಮಯದಲ್ಲಿ ಮೈದಾನದ ಸಿಬ್ಬಂದಿ ಯಾವುದೇ ದೂರುಗಳಿಲ್ಲದೆ ಅವರಿಗೆ ಸಂಪೂರ್ಣ ಸಹಕಾರ ನೀಡಿದ್ದರು.

ಆ ಸಮಯದಲ್ಲಿ ಹಾರ್ದಿಕ್, “ನಾನು ಇಲ್ಲಿಗೆ ಮುಂಬೈ ಇಂಡಿಯನ್ಸ್ ನಾಯಕನಾಗಿ ಮರಳಿದಾಗ ನಿಮ್ಮ ಈ ಕಠಿಣ ಶ್ರಮಕ್ಕೆ ಖಂಡಿತವಾಗಿ ಪ್ರತಿಫಲ ನೀಡುತ್ತೇನೆ” ಎಂದು ಭರವಸೆ ನೀಡಿದ್ದರು. ಐಪಿಎಲ್ ತರಬೇತಿ ಶಿಬಿರದ ವೇಳೆ ಅವರು ಆ ಭರವಸೆಯನ್ನು ಈಡೇರಿಸಿದ್ದಾರೆ.ಮೈದಾನದ ಸಿಬ್ಬಂದಿಯೊಂದಿಗೆ ಹಾರ್ದಿಕ್ ಚೆಕ್ ಹಂಚಿಕೊಳ್ಳುತ್ತಿರುವ ಫೋಟೋಗಳು ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅವರ ಅಭಿಮಾನಿಗಳು “ದಿಲ್ದಾರ್ ಹಾರ್ದಿಕ್” ಎಂದು ಶ್ಲಾಘಿಸುತ್ತಿದ್ದಾರೆ. ವಿಶ್ವಕಪ್ ಅಭ್ಯಾಸದ ವೇಳೆ ಅವರು ತಡರಾತ್ರಿಯವರೆಗೂ ಬೆವರು ಹರಿಸುತ್ತಿದ್ದರು, ಆಗ ನಾವು ಅವರಿಗೆ ಸಾಥ್ ನೀಡಿದ್ದೆವು. ಆದರೆ ಐಪಿಎಲ್ ಸಮಯದಲ್ಲಿ ವಾಪಸ್ ಬಂದು ನಮಗೆ ಇಷ್ಟು ದೊಡ್ಡ ಮೊತ್ತದ ಚೆಕ್ ನೀಡುತ್ತಾರೆ ಎಂದು ನಾವು ಊಹಿಸಿರಲಿಲ್ಲ,” ಎಂದು ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ್ ಸೂಪರ್ ಲೀಗ್ ಉದ್ಘಾಟನಾ ಪಂದ್ಯ ನೋಡಲು ಒಬ್ಬರೂ ಬರಲಿಲ್ಲ

ಈ ಹಿಂದೆಯೂ ಹಾರ್ದಿಕ್ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡಿದ್ದಾರೆ. ಹಾರ್ದಿಕ್ ಮತ್ತು ಕೃನಾಲ್ ಪಾಂಡ್ಯ ಸಹೋದರರು ತಮ್ಮ ಬಾಲ್ಯದ ಕೋಚ್ ಜಿತೇಂದ್ರ ಸಿಂಗ್ ಅವರಿಗೆ ಕಳೆದ ಕೆಲವು ವರ್ಷಗಳಲ್ಲಿ ಸುಮಾರು 70 ರಿಂದ 80 ಲಕ್ಷ ರೂ. ಹಣಕಾಸಿನ ನೆರವು ನೀಡಿದ್ದಾರೆ. ಹಾರ್ದಿಕ್ 2016ರಲ್ಲೇ ತಮ್ಮ ಕೋಚ್‌ಗೆ ಒಂದು ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಇತ್ತೀಚೆಗೆ (2024-25ರಲ್ಲಿ) ಕೃನಾಲ್ ಪಾಂಡ್ಯ ಕೂಡ ಅವರಿಗೆ ಮತ್ತೊಂದು ಕಾರು ಖರೀದಿಸಲು 19 ಲಕ್ಷ ರೂ. ನೀಡಿದ್ದಾರೆ. ಜಿತೇಂದ್ರ ಸಿಂಗ್ ಅವರ ಇಬ್ಬರು ಸಹೋದರಿಯರ ಮದುವೆಯ ಸಂಪೂರ್ಣ ವೆಚ್ಚವನ್ನು ಪಾಂಡ್ಯ ಸಹೋದರರೇ ಭರಿಸಿದ್ದಾರೆ. “ನಿಮ್ಮ ಸಹೋದರಿ ಎಂದರೆ ನನ್ನ ಸಹೋದರಿ ಇದ್ದಂತೆ” ಎಂದು ಹಾರ್ದಿಕ್ ಹೇಳಿದ್ದು ಅವರ ದೊಡ್ಡ ಗುಣವನ್ನು ತೋರಿಸುತ್ತದೆ.

ಇಲ್ಲಿದೆ ನೋಡಿ ಪೋಸ್ಟ್​​;

2021ರ ಕೋವಿಡ್-19 ಕಠಿಣ ಸಮಯದಲ್ಲೂ ಪಾಂಡ್ಯ ಕುಟುಂಬವು ದೇಶದ ಗ್ರಾಮೀಣ ಭಾಗಗಳಿಗೆ ನೆರವಾಗಲು 200 ಆಮ್ಲಜನಕ ಸಾಂದ್ರಕಗಳನ್ನು (Oxygen Concentrators) ದೇಣಿಗೆ ನೀಡಿದ್ದರು. ಗ್ರಾಮೀಣ ಪ್ರದೇಶದ ವೈದ್ಯಕೀಯ ಮೂಲಸೌಕರ್ಯಕ್ಕೆ ಬೆಂಬಲ ನೀಡುವ ಉದ್ದೇಶದಿಂದ ಅವರು ಈ ನಿರ್ಧಾರ ಕೈಗೊಂಡಿದ್ದರು.

ಇನ್ನಷ್ಟು ಕ್ರಿಕೆಟ್​​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಅಬಕಾರಿ ಸುಂಕ 10 ರೂ ಇಳಿಕೆ; ಪೆಟ್ರೋಲ್, ಡೀಸಲ್ ಬೆಲೆ ಎಷ್ಟು ಇಳಿಯುತ್ತೆ?

ನವದೆಹಲಿ, ಮಾರ್ಚ್ 27: ಪೆಟ್ರೋಲ್ ಮತ್ತು ಡೀಸಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಇಳಿಸಿದೆ. ಒಂದು ಲೀಟರ್​ಗೆ ಬರೋಬ್ಬರಿ 10 ರೂಷ್ಟು ತಗ್ಗಿಸಲಾಗಿದೆ. ಇದರೊಂದಿಗೆ, ಪೆಟ್ರೋಲ್ (Petrol) ಮೇಲಿನ ಅಬಕಾರಿ ಸುಂಕವು (Excise Duty) 13 ರೂ ಇದ್ದದ್ದು 3 ರೂಗೆ ಇಳಿದಿದೆ. ಡೀಸಲ್ ಮೇಲಿನ ಅಬಕಾರಿ ಸುಂಕವು 10 ರೂ ಇದ್ದದ್ದು ಸೊನ್ನೆಗೆ ಇಳಿದಿದೆ. ಜಾಗತಿಕವಾಗಿ ಕಚ್ಛಾ ತೈಲ (Crude oil) ಬೆಲೆ ಸಿಕ್ಕಾಪಟ್ಟೆ ಏರಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ.

ಪೆಟ್ರೋಲ್, ಡೀಸಲ್ ಬೆಲೆ ಕಡಿಮೆ ಆಗುವುದಿಲ್ಲವಾ?

ಜಾಗತಿಕ ಕಚ್ಛಾ ತೈಲ ಬೆಲೆ ಎರಡು ಪಟ್ಟು ಹೆಚ್ಚಾಗಿದೆ. ಇಷ್ಟೊತ್ತಿಗೆ ಪೆಟ್ರೋಲ್, ಡೀಸಲ್ ಬೆಲೆ ಏರಿಕೆ ಆಗಬೇಕಿತ್ತು. ಆದರೆ, ನಯಾರಾ ಎನರ್ಜಿ ಮಾತ್ರವೇ ಇವುಗಳ ಬೆಲೆ ಏರಿಸಿರುವುದು. ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಬೆಲೆ ಏರಿಕೆ ಮಾಡಿಲ್ಲ. ಈ ಕಂಪನಿಗಳು ಸತತ ನಷ್ಟ ಅನುಭವಿಸುತ್ತಿವೆ. ಈ ತೈಲ ಬೆಲೆ ಹೆಚ್ಚಿನ ಮಟ್ಟದಲ್ಲೇ ಮುಂದುವರಿದರೆ ಇಂಡಿಯನ್ ಆಯಿಲ್, ಎಚ್​​ಪಿ, ಬಿಪಿ ಕೂಡ ಪೆಟ್ರೋಲ್, ಡೀಸಲ್ ಬೆಲೆ ಏರಿಸುವುದು ಅನಿವಾರ್ಯವಾಗಬಹುದು.

ಇದನ್ನೂ ಓದಿ: ಭಾರತ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ್ದೇಕೆ?

ಇದನ್ನು ತಪ್ಪಿಸಲು, ಅಂದರೆ, ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ ತಾಗದಿರಲು ಸರ್ಕಾರ ಅಬಕಾರಿ ಸುಂಕ ಕಡಿಮೆಗೊಳಿಸಿದೆ. ಸುಂಕ ಕಡಿಮೆ ಮಾಡಿರುವುದರಿಂದ ಪೆಟ್ರೋಲ್, ಡೀಸಲ್ ಬೆಲೆ ಇಳಿಯುವುದಿಲ್ಲ. ಒಎಂಸಿಗಳಿಗೆ ನಷ್ಟದ ಹೊರೆ ಇಳಿಸಲು ಸಹಾಯವಾಲಿದೆ. ಜನಸಾಮಾನ್ಯರಿಗೆ ಪೆಟ್ರೋಲ್, ಡೀಸಲ್ ಎಂದಿನ ಬೆಲೆಗೆ ಸಿಗುವುದು ಮುಂದುವರಿಯಲಿದೆ.

ಸರ್ಕಾರವು ಅಬಕಾರಿ ಸುಂಕ ಕಡಿಮೆ ಮಾಡಿರುವುದು ತೈಲ ಮಾರುಕಟ್ಟೆ ಕಂಪನಿಗಳು ಮತ್ತು ಜನಸಾಮಾನ್ಯರು, ಈರ್ವರಿಗೂ ರಿಲೀಫ್ ಸಿಕ್ಕಂತಾಗುತ್ತದೆ. ಪೆಟ್ರೋಲಿಯಂ ಕಂಪನಿಗಳಿಗೆ ನಷ್ಟದ ಹೊರೆ ತಪ್ಪುತ್ತದೆ. ಜನಸಾಮಾನ್ಯರಿಗೆ ಬೆಲೆ ಏರಿಕೆಯಾಗುವುದು ತಪ್ಪುತ್ತದೆ.

ಇದನ್ನೂ ಓದಿ: ಇನ್ನು ಡೀಸೆಲ್​ಗಿಲ್ಲ ಅಬಕಾರಿ ಸುಂಕ! ಪೆಟ್ರೋಲ್ ಸುಂಕ ಭಾರಿ ಕಡಿತ: ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ

ಇರಾನ್ ಯುದ್ಧ ಶುರುವಾಗುವ ಮುನ್ನ ತೈಲ ಬೆಲೆ ಒಂದು ಬ್ಯಾರಲ್​ಗೆ 60 ಡಾಲರ್​ನಷ್ಟು ಇತ್ತು. ಈಗ ಅದು 100 ಡಾಲರ್, 120 ಡಾಲರ್ ದಾಟಿ ಹೋಗಿದೆ. ಹಾರ್ಮುಜ್ ಜಲಸಂಧಿಯಿಂದ ತೈಲ ಟ್ಯಾಂಕರ್​ಗಳು ಹೊರಬರಲು ತಡೆ ಇರುವುದರಿಂದ ತೈಲ ಪೂರೈಕೆಯಲ್ಲಿ ವ್ಯತ್ಯಯ ಆಗಿದೆ. ಪರಿಣಾಮವಾಗಿ ತೈಲ ಬೆಲೆ ಗಣನೀಯವಾಗಿ ಏರುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link