Headlines

nagaraj11081993

ಸ್ಯಾಂಡಲ್​​ವುಡ್​ ಕಡೆಗಣಿಸಿದ ಫಿಲ್ಮ್​​ಫೇರ್​​ಗೆ ಛೀಮಾರಿ ಹಾಕಿದ ಕನ್ನಡಿಗರು

ಕನ್ನಡ ಚಿತ್ರರಂಗವನ್ನು ಅನೇಕ ಕಡೆಗಳಲ್ಲಿ ಕಡೆಗಣಿಸುವ ಕೆಲಸ ಆಗುತ್ತಲೇ ಬರುತ್ತಿದೆ. ಈ ಮೊದಲು ಸೈಮಾ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂದ ನಟರನ್ನು ಕಡೆಗಣಿಸಿದ ಬಗ್ಗೆ ಟೀಕೆ ವ್ಯಕ್ತವಾಗಿತ್ತು. ಈಗ ಫಿಲ್ಮ್​​ಫೇರ್ (Filma Fare) ಅದೇ ತಪ್ಪನ್ನು ಮಾಡಿದೆ. ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಕನ್ನಡ ಚಿತ್ರರಂಗವನ್ನು ಕಡೆಗಣಿಸಿದ್ದು ಎಷ್ಟು ಸರಿ ಎಂಬ ಚರ್ಚೆ ಶುರುವಾಗಿದೆ. ತಪ್ಪನ್ನು ತಿದ್ದುಕೊಂಡು ಅವರು ಕ್ಷಮೆ ಕೇಳಬೇಕು ಎಂಬ ಆಗ್ರಹಕೂಡ ವ್ಯಕ್ತವಾಗಿದೆ. ಫಿಲ್ಮ್​ ಫೇರ್ ಅವಾರ್ಡ್ ಆರಂಭ ಆಗಿದ್ದು 1954ರಲ್ಲಿ. ಹಿಂದಿ…

Read More

ಗೂಗಲ್ ಮ್ಯಾಪ್ ತಂದ ಆಪತ್ತು! ಕಬ್ಬಿಣದ ಸರಳುಗಳಿಂದ ತುಂಬಿದ್ದ ಲಾರಿ ಅಪಘಾತ, ಕ್ಯಾಬ್ ಚಾಲಕ ಸಾವು

ಬೆಂಗಳೂರು, ಮಾರ್ಚ್ 27: ಬೆಂಗಳೂರಿನ ಕುರುಬರಹಳ್ಳಿಯ ಪೈಪ್‌ಲೈನ್ ರಸ್ತೆಯಲ್ಲಿ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕಬ್ಬಿಣದ ಸರಳುಗಳನ್ನು ತುಂಬಿದ್ದ ಲಾರಿ ಭೀಕರ ಅಪಘಾತಕ್ಕೀಡಾಗಿದೆ. ಆಂಧ್ರದಿಂದ ಸುಂಕದಕಟ್ಟೆ ಕಡೆಗೆ ಬರುತ್ತಿದ್ದ ಈ ಲಾರಿ ಗೂಗಲ್ ಮ್ಯಾಪ್ ದೋಷದಿಂದಾಗಿ ಇಳಿಜಾರು ರಸ್ತೆಯಲ್ಲಿ ಬಂದಿದೆ. ಅಸಲಿಗೆ ಲಾರಿ ಹೋಗಲು ಸೂಕ್ತವಲ್ಲದ ರಸ್ತೆ ಅದಾಗಿತ್ತು. ಅಲ್ಲಿ ಚಾಲಕನ ನಿಯಂತ್ರಣ ತಪ್ಪಿ ಎದುರಿಗಿದ್ದ ಎರ್ಟಿಗಾ ಕಾರಿಗೆ ಡಿಕ್ಕಿಯಾಗಿ ತುಸು ದೂರ ಎಳೆದುಕೊಂಡು ಹೋಗಿದ್ದು, ಸ್ಕ್ರ್ಯಾಪ್ ಗೋಡೌನ್​ಗೆ ನುಗ್ಗಿದೆ. ಅಷ್ಟರಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ದುರಂತದಲ್ಲಿ…

Read More

ಹಣೆಯಲ್ಲಿ ಬರೆದಿದ್ರೆ ಸಿಗ್ತಾಳೆ; ಕಾವ್ಯಾ, ಕಾವ್ಯಾ ಎಂದಿದ್ದಕ್ಕೆ ಗಿಲ್ಲಿ ಉತ್ತರ

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಗಳಾದ ಕಾವ್ಯಾ ಹಾಗೂ ಗಿಲ್ಲಿ ನಟ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಈ ಬಾಂಧವ್ಯ ಬಿಗ್ ಬಾಸ್​ ಇಂದ ಹೊರ ಬಂದ ಬಳಿಕವೂ ಮುಂದುವರಿದಿದೆ. ಕಾವ್ಯಾ ಅವರನ್ನು ಗಿಲ್ಲಿ ಮದುವೆ ಆಗಬೇಕು ಎಂದು ಅನೇಕರು ಅಂದುಕೊಂಡಿದ್ದೂ ಇದೆ. ಆದರೆ, ಅದು ಸಾಧ್ಯವಿಲ್ಲ ಎಂಬುದು ಗಿಲ್ಲಿ ಉತ್ತರ. ನಾವಿಬ್ಬರೂ ಬೆಸ್ಟ್ ಫ್ರೆಂಡ್ಸ್ ಎಂದು ಅವರು ಅನೇಕ ಬಾರಿ ಹೇಳಿದ್ದು ಇದೆ. ಹೀಗಿರುವಾಗಲೇ ಗಿಲ್ಲಿ ನಟ ಅವರು ವೇದಿಕೆ…

Read More

Gold Rates: ಆಭರಣ ಚಿನ್ನದ ಬೆಲೆ 13,265 ರೂ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 27: ಚಿನ್ನದ ಬೆಲೆ ಏರಿಳಿತದ ಹಂತಕ್ಕೆ ಜಾರಿದೆ. ನಿನ್ನೆ ಒಂದೇ ದಿನದಲ್ಲಿ ಒಮ್ಮೆ ಹೆಚ್ಚಾಗಿ ನಂತರ ಕುಸಿದಿತ್ತು. ಇವತ್ತು ಶುಕ್ರವಾರ ಇದರ ಬೆಲೆಯಲ್ಲಿ ಅಲ್ಪ ಹೆಚ್ಚಳ ಆಗಿದೆ. ಗುರುವಾರ ಬೆಳಗ್ಗೆ ಆಭರಣ ಚಿನ್ನದ ಬೆಲೆ (Gold Rates) ಗ್ರಾಮ್ಗೆ 13,465 ರೂಗೆ ಏರಿತ್ತು. ನಂತರ 13,250 ರೂಗೆ ಕುಸಿದಿತ್ತು. ಇವತ್ತು 15 ರೂ ಹೆಚ್ಚಳಗೊಂಡಿದೆ. ಬೆಳ್ಳಿ ಬೆಲೆ ಶುಕ್ರವಾರ ಒಂದೇ ದಿನದಲ್ಲಿ 10-15 ರೂ ಕುಸಿತವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್…

Read More

Video: ಅನುಮತಿ ಇಲ್ಲದೆ ಹಾರ್ಮುಜ್ ಮೂಲಕ ಹೋದ ತೈಲ ಟ್ಯಾಂಕರ್​ಗೆ ಬೆಂಕಿ

ಟೆಹ್ರಾನ್, ಮಾರ್ಚ್​ 27: ಭಾರತ ಸೇರಿದಂತೆ ಇರಾನ್​ನ 5 ಸ್ನೇಹಿತ ರಾಷ್ಟ್ರಗಳಿಗೆ ಹಾರ್ಮುಜ್ ಜಲಸಂಧಿಯನ್ನು ಪ್ರವೇಶಿಸಲು ಇರಾನ್ ಅನುಮತಿ ನೀಡಿದೆ. ಚೀನಾ, ರಷ್ಯಾ, ಪಾಕಿಸ್ತಾನ, ಇರಾಕ್ ಮತ್ತು ಭಾರತದ ಎರಡು ಹಡಗುಗಳು ಕೆಲವು ರಾತ್ರಿಗಳ ಹಿಂದೆ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಿವೆ.ಅಮೆರಿಕ, ಇಸ್ರೇಲ್ ಮತ್ತು ಕೆಲವು ಗಲ್ಫ್ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿಯ ಮೂಲಕ ಸಾಗಲು ಅನುಮತಿ ನೀಡಲಾಗುವುದಿಲ್ಲ. ಅನುಮತಿ ಇಲ್ಲದೆ ಹಾರ್ಮುಜ್ ಮೂಲಕ ಹಾದುಹೋದ ಹಡಗಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.   ವಿಡಿಯೋ ಸುದ್ದಿಗಳಿಗಾಗಿ…

Read More

Ram Navami 2026: ರಾಮ ನವಮಿ ಬಳಿಕ ಈ ಎರಡು ರಾಶಿಗಳಿಗೆ ಶುಭ ದಿನಗಳು ಆರಂಭ

ಇಂದು ದೇಶಾದ್ಯಂತ ಶ್ರೀ ರಾಮ ನವಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಪವಿತ್ರ ದಿನದಂದು ಒಂದು ಅಪರೂಪದ ಗ್ರಹಗಳ ಸಂಯೋಗ ಸಂಭವಿಸುತ್ತಿದೆ. ಈ ಜ್ಯೋತಿಷ್ಯ ವಿದ್ಯಮಾನವು 12 ರಾಶಿಗಳ ಮೇಲೆ ಪ್ರಭಾವ ಬೀರಿದರೂ, ವಿಶೇಷವಾಗಿ ಎರಡು ರಾಶಿಚಕ್ರದವರಿಗೆ ಇದು ಸುವರ್ಣ ಕಾಲವನ್ನು ಹೊತ್ತು ತರಲಿದೆ. ಕಳೆದ ಕೆಲವು ಸಮಯದಿಂದ ಸಂಕಷ್ಟಗಳನ್ನು ಎದುರಿಸುತ್ತಿದ್ದ ಈ ರಾಶಿಗಳ ಜನರಿಗೆ ಶ್ರೀರಾಮನ ಆಶೀರ್ವಾದದಿಂದ ಇಂದಿನಿಂದ ಒಳ್ಳೆಯ ದಿನಗಳು ಆರಂಭವಾಗಲಿವೆ. ಆ ಅದೃಷ್ಟವಂತ ರಾಶಿಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಕನ್ಯಾ ರಾಶಿ:…

Read More

ಉರುಳು ಸೇವೆಯ ಮೂಲಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಹತ್ತಾರು ಕಾರ್ಯಕರ್ತರು!

ದಾವಣಗೆರೆ, ಮಾರ್ಚ್​ 27: ದಾವಣಗೆರೆ ನಗರದಲ್ಲಿ ರಾಜಕೀಯ ಬೆಳವಣಿಗೆಯೊಂದು ಗಮನ ಸೆಳೆದಿದೆ. ಹತ್ತಾರು ಯುವ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.  ಕಾರ್ಯಕರ್ತರು ದುರ್ಗಾಂಬಿಕಾ ದೇವಿಗೆ ಉರುಳು ಸೇವೆ ಸಲ್ಲಿಸುವ ಮೂಲಕ ತಮ್ಮ ಹರಕೆಯನ್ನು ತೀರಿಸಿ ಪಕ್ಷ ಬದಲಾವಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ, ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ಭಾವಚಿತ್ರವನ್ನು ಹಿಡಿದುಕೊಂಡು, ಬಿಜೆಪಿ ಪಕ್ಷಕ್ಕೆ ಜೈಕಾರ ಹಾಕಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

Rama Navami: ರಾಮನವಮಿ ಇಂದು ಏಕೆ ಆಚರಿಸಲಾಗುತ್ತದೆ? ಪಂಚಾಂಗ ಹೇಳುವುದೇನು?

ಶ್ರೀರಾಮ ನವಮಿಯ ಮಹತ್ವ ಮತ್ತು ಅದರ ಆಚರಣೆಯ ವಿಧಾನಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಹಿಂದೂ ಧರ್ಮದ ಪವಿತ್ರ ಹಬ್ಬಗಳಲ್ಲಿ ಶ್ರೀರಾಮ ನವಮಿಯೂ ಒಂದು. ತ್ರೇತಾಯುಗದಲ್ಲಿ ಶ್ರೀ ಮಹಾವಿಷ್ಣು ಮರ್ಯಾದಾ ಪುರುಷೋತ್ತಮನಾಗಿ ಅವತರಿಸಿದ ದಿನವೇ ಈ ಶ್ರೀರಾಮ ನವಮಿ. ರಾಮ ನವಮಿಯನ್ನು ಮಾರ್ಚ್ 26 ರಂದು ಆಚರಿಸಲಾಗುವುದು, ಆದರೆ ಮಹಾ ನವಮಿಯನ್ನು ಮಾರ್ಚ್ 27 ರಂದು ಆಚರಿಸಲಾಗುವುದು. ಅದು ಯಾಕೆ ಅಷ್ಟಮಿ…

Read More

ಬೆಂಗಳೂರಿನಲ್ಲಿ ಮನೆ ಹುಡುಕುವುದು ಈಗ ‘ಮಿಷನ್ ಇಂಪಾಸಿಬಲ್’! ಬ್ಯಾಚುಲರ್ಸ್ ಸಂಕಷ್ಟ ಕೇಳೋರು ಯಾರು?

ಬೆಂಗಳೂರು, ಮಾ.27: ನಗರದಲ್ಲಿ ಮನೆಗಳು ಬಾಡಿಗೆಗೆ ಸಿಗುವುದು ತುಂಬಾ ಕಷ್ಟ, ಅದರಲ್ಲೂ ಬ್ಯಾಚುನರ್ಲ್​​​ಗಳಿಗೆ ಮನೆ ನೀಡಲು ಯೋಚನೆ ಮಾಡುತ್ತಾರೆ. ಮತ್ತು ಅವರ ಬಜೆಟ್​​ ಕೂಡ 10 ಸಾವಿರದ ಒಳಗೆ ಇರುತ್ತದೆ. ಆದರೆ ಇದೀಗ 10 ಸಾವಿರಕ್ಕೆ ಮನೆ ಸಿಗುವುದು ಕಷ್ಟವಾಗಿದೆ. ಈ ಬಗ್ಗೆ ಯುವತಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾಳೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೆಲೆಸುವ ಕನಸು ಹೊತ್ತು ಬರುವವರಿಗೆ ಈಗ ‘ಬಾಡಿಗೆ ಮನೆ’ ಎನ್ನುವುದು ಮರೀಚಿಕೆಯಾಗುತ್ತಿದೆ. ನಗರದ ಐಟಿ ಹಬ್‌ಗಳ ಸುತ್ತಮುತ್ತಲಷ್ಟೇ ಅಲ್ಲದೆ, ಸಾಮಾನ್ಯ ಪ್ರದೇಶಗಳಲ್ಲೂ ಬಾಡಿಗೆ…

Read More

ತೊಕ್ಕೊಟ್ಟು ಫ್ಲೈಓವರ್‌ ಬಳಿ ರೌಡಿಶೀಟರ್‌ ಭೀಕರ ಹತ್ಯೆ: ಗ್ಯಾಂಗ್​ವಾರ್​ಗೆ ಹೋಯ್ತಾ ಜೀವ?

ಮಂಗಳೂರು, ಮಾರ್ಚ್​ 27: ನಗರದ (Mangalore) ಹೊರವಲಯದ ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಶುಕ್ರವಾರ ನಸುಕಿನ ಜಾವ ರೌಡಿಶೀಟರ್‌ನೊಬ್ಬರನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಮೃತರನ್ನು ತಲಪಾಡಿ ಸಮೀಪದ ಮುಳ್ಳುಗುಡ್ಡೆ ನಿವಾಸಿ ಆರಿಫ್ ಅಲಿಯಾಸ್ ಟಾಬ್ಲೆಟ್ ಆರಿಫ್ (46) ಎಂದು ಗುರುತಿಸಲಾಗಿದೆ. ಕೊಲೆಗೆ ನೈಜ ಕಾರಣವೇನೆಂಬುದು ತಿಳಿಯಬೇಕಿದೆ. ಆರಿಫ್ ಬೈಕ್​ಗೆ ಕಾರಿನಿಂದ ಡಿಕ್ಕಿ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ರೌಡಿಶೀಟರ್ ಆಗಿದ್ದ ಆರಿಫ್, ಮುಂಜಾನೆ ಸುಮಾರು 4 ಗಂಟೆ ವೇಳೆಗೆ ಬೈಕ್‌ನಲ್ಲಿ ಸಂಚರಿಸುತ್ತಿದ್ದ…

Read More