Headlines

nagaraj11081993

ನಟಿ ಸಂಜನಾ ಬುರ್ಲಿಗೆ ತಾಳಿ ಕಟ್ಟಿ ಪ್ರೀತಿಯಿಂದ ಕೆನ್ನೆಗೆ ಮುತ್ತಿಟ್ಟ ಸಮರ್ಥ್

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ನಟಿಸಿ ಗಮನ ಸೆಳೆದ ಸಂಜನಾ ಬುರ್ಲಿ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಮರ್ಥ್ ಅವರ ಜೊತೆ ಸಂಜನಾ ಮದುವೆ ನಡೆದಿದೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ. ಸಂಜನಾ ಬುರ್ಲಿ ಹಾಗೂ ಸಮರ್ಥ್ ವೈವಾಹಿಕ ಜೀವನಕ್ಕೆ ಕಾಲಿಟ್ಟ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ. ಮಾರ್ಚ್ 25ರಂದು ಇವರ ಮದುವೆ ನಡೆದಿದೆ ಎಂದು ಹೇಳಲಾಗುತ್ತಾ ಇದೆ. ರೆಸಾರ್ಟ್ ಒಂದರಲ್ಲಿ ಮದುವೆ ನಡೆದಿದೆ. ತಾಳಿ ಕಟ್ಟಿದ ಬಳಿಕ ಸಮರ್ಥ್ ಅವರು ಸಂಜನಾ ಬುರ್ಲಿ ಅವರಿಗೆ…

Read More

ತುಳಸಿ ಕಟ್ಟೆಗೆ ಎಷ್ಟು ಪ್ರದಕ್ಷಿಣೆ ಹಾಕಬೇಕು? ಪ್ರತೀ ಸುತ್ತಿನ ಹಿಂದಿನ ಮಹತ್ವ ಇಲ್ಲಿ ತಿಳಿಯಿರಿ

ಭಾರತೀಯ ಸಂಸ್ಕೃತಿಯಲ್ಲಿ ವೃಕ್ಷಗಳಿಗೆ ವಿಶೇಷ ಸ್ಥಾನಮಾನವಿದೆ. ವೃಕ್ಷೋ ರಕ್ಷತಿ ರಕ್ಷಿತಃ ಎಂಬ ಮಾತು ಮರಗಳ ಸಂರಕ್ಷಣೆ ಮತ್ತು ಅದರ ಪ್ರಯೋಜನಗಳನ್ನು ಸಾರುತ್ತದೆ. ಆಹಾರ, ನೆರಳು, ವಾಸಕ್ಕೆ ಸಹಕಾರಿ ಹಾಗೂ ಔಷಧೀಯ ಗುಣಗಳನ್ನು ಹೊಂದಿರುವ ವೃಕ್ಷಗಳ ಜೊತೆಗೆ, ಕೆಲವು ವೃಕ್ಷಗಳನ್ನು ಪೂಜನೀಯ ಭಾವದಿಂದ ಕಾಣಲಾಗುತ್ತದೆ. ಅವುಗಳಲ್ಲಿ ಅರಳೀ ಮರದ ಜೊತೆಗೆ ತುಳಸಿ ಗಿಡವು ಅಗ್ರ ಪಂಕ್ತಿಯಲ್ಲಿ ನಿಲ್ಲುತ್ತದೆ. ಪ್ರತಿಯೊಂದು ಮನೆಯಲ್ಲೂ ತುಳಸಿ ಗಿಡ ಇರಲೇಬೇಕು ಎಂಬ ನಂಬಿಕೆಯಿದೆ. ತುಳಸಿ ಗಿಡವನ್ನು ಕೇವಲ ಬೆಳೆಸುವುದು, ನೀರು ಹಾಕುವುದು, ಅಥವಾ ವಿವಾಹ…

Read More

ಇನ್ನು ಡೀಸೆಲ್​ಗಿಲ್ಲ ಅಬಕಾರಿ ಸುಂಕ! ಪೆಟ್ರೋಲ್ ಸುಂಕ ಭಾರಿ ಕಡಿತ: ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ

ನವದೆಹಲಿ, ಮಾರ್ಚ್​ 27: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು  ಕಡಿತಗೊಳಿಸಿದ್ದು, ಇದರಿಂದಾಗಿ ಪ್ರತಿ ಲೀಟರ್ ಪೆಟ್ರೋಲ್‌ಗೆ 3 ರೂಪಾಯಿ ಮತ್ತು ಡೀಸೆಲ್‌ ಸುಂಕ ಶೂನ್ಯಕ್ಕೆ ಇಳಿದಿದೆ. ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧ ಮತ್ತು ಅದರ ಪರಿಣಾಮವಾಗಿ ಟೆಹ್ರಾನ್ ಹಾರ್ಮುಜ್ ಜಲಸಂಧಿಯ ಮೇಲೆ ಹೇರಿದ ದಿಗ್ಬಂಧನದಿಂದ ಉಂಟಾದ ಜಾಗತಿಕ ಇಂಧನ ಬಿಕ್ಕಟ್ಟಿನಿಂದಾಗಿ ಬೆಲೆ ಏರಿಕೆಯಾಗುವ ಭೀತಿಯ ಮಧ್ಯೆ ಈ ಕಡಿತ ಮಾಡಲಾಗಿದೆ. ಪೆಟ್ರೋಲ್: ಲೀಟರ್‌ಗೆ 13 ರೂ.ನಿಂದ 3 ರೂ.ಗೆ ಇಳಿಸಲಾಗಿದೆ. ಹಾರ್ಮುಜ್…

Read More

‘ಸ್ವಸ್ತಿಕ್’ ಕನ್ನಡದ ‘ಧುರಂಧರ್’; ಉಪ್ಪಿ-ರಣವೀರ್ ಚಿತ್ರಕ್ಕೂ ಇದೆ ಹೋಲಿಕೆ

‘ಧುರಂಧರ್ 2’ ಸಿನಿಮಾ ಸದ್ಯ ಎಲ್ಲೆಡೆ ಚರ್ಚೆ ಆಗುತ್ತಾ ಇದೆ. ಈ ಸಿನಿಮಾ ನೋಡಿದ ಅಭಿಮಾನಿಗಳು ಹಾಡಿ ಹೊಗಳುತ್ತಿದ್ದಾರೆ. ಜಸ್ಕಿರತ್ ಸಿಂಗ್ ರಂಗಿ ಎಂಬ ವ್ಯಕ್ತಿ ಹಮ್ಜಾ ಅಲಿ ಮಜಾರಿ ಆಗಿ ಪಾಕಿಸ್ತಾನಕ್ಕೆ ತೆರಳುತ್ತಾನೆ. ಅಲ್ಲಿ ಆತ ಉಗ್ರರ ಜೊತೆ ಸೇರುತ್ತಾನೆ.ಅವರನ್ನೇ ನಾಶ ಮಾಡುತ್ತಾನೆ. ಈ ಸಂದರ್ಭದಲ್ಲಿ ಎಲ್ಲರೂ 1998ರಲ್ಲಿ ಬಂದ ಉಪೇಂದ್ರ ನಿರ್ದೇಶನದ ‘ಸ್ವಸ್ತಿಕ್’ ಚಿತ್ರವನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಕೂಡ ಉಗ್ರರ ಕಥೆಯನ್ನು ಹೊಂದಿತ್ತು. ಪಾರ್ವತಮ್ಮ ರಾಜ್​​​ಕುಮಾರ್ ಅವರು ‘ಸ್ವಸ್ತಿಕ್’ ಚಿತ್ರ ನಿರ್ಮಾಣ ಮಾಡಿದ್ದರು….

Read More

20 ಬಾರಿ ಬೇಯಿಸಿದರೂ ಮಾಂಸ ಬೆಂದಿಲ್ಲ ಎಂದು ಕುಕ್ಕರ್ ಹಿಡಿದು ಪೊಲೀಸ್ ಠಾಣೆಗೆ ಹೋದ ವ್ಯಕ್ತಿ

ಆಂಧ್ರಪ್ರದೇಶ, ಮಾರ್ಚ್​ 27: ಮಾಂಸ(Meat) ಬೇಯಲಿಲ್ಲ ಎಂದ್ರೆ ಯಾರಾದ್ರೂ ಪೊಲೀಸ್ ಠಾಣೆಗೆ ಹೋಗ್ತಾರಾ ಎಂದು ನೀವು ಪ್ರಶ್ನೆ ಕೇಳಬಹುದು. ಇಲ್ಲೊಬ್ಬ ವ್ಯಕ್ತಿ  ಇಪ್ಪತ್ತು ಬಾರಿ ಬೇಯಿಸಿದರೂ ಬೇಯದ ಮಾಂಸವಿರುವ ಕುಕ್ಕರ್ ಹಿಡಿದು ವ್ಯಕ್ತಿಯೊಬ್ಬ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಎನ್​ಡಿಟಿವಿ ವರದಿ ಪ್ರಕಾರ,  ತಡಿಪತ್ರಿಯ ಪುಟ್ಲೂರು ರಸ್ತೆಯ ನಿವಾಸಿ ಸೋದಲ ಹಾಜಿ ಸ್ಥಳೀಯ ಮಾರಾಟಗಾರರಿಂದ ಮೇಕೆ ತಲೆಯ ಮಾಂಸವನ್ನು ಖರೀದಿಸಿದ್ದರು. ಸ್ಥಳೀಯವಾಗಿ ತಲಾಕುರ ಎಂದು ಕರೆಯಲ್ಪಡುವ ಸಾಂಪ್ರದಾಯಿಕ ತಲೆ ಮಾಂಸದ ಕರಿಯನ್ನು ತಯಾರಿಸಲು ಉತ್ಸುಕರಾಗಿದ್ದ…

Read More

ಪೆಟ್ರೋಲ್ ಡೀಸೆಲ್ ದರ ಏರಿಕೆ: ನಯಾರಾ ಪೆಟ್ರೋಲ್ ಬಂಕ್​ನತ್ತ ಸುಳಿಯದ ವಾಹನ ಸವಾರರು

ರಾಯಚೂರು, ಮಾರ್ಚ್ 27: ನಯಾರಾ ಕಂಪನಿಯ ಪೆಟ್ರೋಲ್ ಬಂಕ್‌ಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿರುವುದರಿಂದ ಇದೀಗ ಆ ಕಂಪನಿ ಬಂಕ್​ಗಳತ್ತ ಗ್ರಾಹಕರೇ ಸುಳಿಯುತ್ತಿಲ್ಲ. ಪೆಟ್ರೋಲ್ ಮೇಲೆ ಪ್ರತಿ ಲೀಟರ್‌ಗೆ 5 ರೂ. ಮತ್ತು ಡೀಸೆಲ್ ಮೇಲೆ 3 ರೂ. ಏರಿಕೆಯಾಗಿದೆ. ಈ ಏಕಾಏಕಿ ದರ ಹೆಚ್ಚಳದಿಂದಾಗಿ ಬೈಕ್ ಸವಾರರು ನಯಾರಾ ಪೆಟ್ರೋಲ್ ಬಂಕ್‌ಗಳಿಂದ ದೂರ ಸರಿಯುತ್ತಿದ್ದಾರೆ. ಬಂಕ್‌ನತ್ತ ಬರುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಸದ್ಯ ನಯಾರಾ ಪೆಟ್ರೋಲ್ ಬಂಕ್‌ಗಳಿಗೆ ಹೆದ್ದಾರಿ ಮಾರ್ಗವಾಗಿ ಹೋಗುವವರು ಮಾತ್ರ ಭೇಟಿ…

Read More

Gold Coin: ಚಿನ್ನದ ಬೆಲೆ ಇಳಿಕೆ ಬೆನ್ನಲ್ಲೇ ಗೋಲ್ಡ್ ಕಾಯಿನ್​ಗೆ ಭಾರೀ ಬೇಡಿಕೆ!

ಬೆಂಗಳೂರು, ಮಾರ್ಚ್​ 27: ಚಿನ್ನದ ಬೆಲೆಯಲ್ಲಿ (Gold rate) ನಿರಂತರ ಏರುಪೇರು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಗೋಲ್ಡ್ ಕಾಯಿನ್‌ಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದೆ. 2, 4, 6 ಹಾಗೂ 8 ಗ್ರಾಂ ಗೋಲ್ಡ್ ಕಾಯಿನ್‌ಗಳನ್ನು ಖರೀದಿಸಲು ಗ್ರಾಹಕರು ಮುಗಿಬೀಳುತ್ತಿದ್ದಾರೆ. ಜನರ ಬೇಡಿಕೆ ಪೂರೈಸಲು ಮಳಿಗೆಗಳು ಪರದಾಡುವ ಸ್ಥಿತಿ ಎದುರಾಗಿದೆ. ಉತ್ತಮ ಲಾಭ ಪಡೆಯುವ ನಿರೀಕ್ಷೆ ನಗರದ ಬಂಗಾರದ ಮಳಿಗೆಗಳಲ್ಲಿ ಗ್ರಾಹಕರು ಅಂಗಡಿಗೆ ಪ್ರವೇಶಿಸುತ್ತಿದ್ದಂತೆಯೇ ಗೋಲ್ಡ್ ಕಾಯಿನ್‌ಗಳನ್ನು ಕೇಳುತ್ತಿರುವುದರಿಂದ ಬೆಳಗ್ಗೆ ಅಂಗಡಿಗೆ ತರಲಾಗುವ ಕಾಯಿನ್‌ಗಳು ಮಧ್ಯಾಹ್ನದ ವೇಳೆಗೇ ಮಾರಾಟವಾಗುತ್ತಿವೆ. ವಿಶೇಷವಾಗಿ…

Read More

ಯಾರಿಗೂ ನೋವಾಗದಂತೆ ಸಿನಿಮಾ ಮಾಡಲಿ; ‘ಬಾಸ್’ ಚಿತ್ರದ ಬಗ್ಗೆ ಪ್ರಥಮ್ ರಿಯಾಕ್ಷನ್

‘ಬಾಸ್’ ಹೆಸರಿನ ಚಿತ್ರವನ್ನು ಮಾಡಲಾಗಿದೆ. ಇದು ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಆಧರಿಸಿದೆ ಎಂದು ಹೇಳಲಾಗುತ್ತಾ ಇದೆ. ಈ ವಿಷಯವಾಗಿ ಪ್ರಥಮ್ ಮಾಡಿದ್ದಾರೆ. ‘ನನಗೆ ಕೋಪ ಬಂದಾಗ ಕೆಲವು ಮಾತುಗಳನ್ನು ಆಡಿದ್ದೇನೆ. ಹಾಗಂತ ಅವರ ಮೇಲೆ ವೈಯಕ್ತಿಕವಾಗಿ ಏನೋ ಇದೆ ಎಂದಲ್ಲ. ಯಾರೇ ಸಿನಿಮಾ ಮಾಡಿದರೂ ಮತ್ತೊಬ್ಬರಿಗೆ ನೋವಾಗಂದತೆ ಮಾಡಲಿ’ ಎಂದು ಪ್ರಥಮ್ ಕೋರಿಕೊಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Video: ಸಣ್ಣ ವಿವಾದ, ಅಪಾರ್ಟ್​ಮೆಂಟ್ ನಿವಾಸಿಗಳ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಹಿಳಾ ಟೆಕ್ಕಿ ಸಾವು

ಇಂದೋರ್, ಮಾರ್ಚ್​ 27: ವಸತಿ ಪ್ರದೇಶದಲ್ಲಿ ಪೆಂಟ್​ಹೌಸ್​ಗಳ ವಾಣಿಜ್ಯ ಬಳಕೆಯ ಕುರಿತು ನಡೆದ ವಿವಾದ ಕೊನೆಗೆ ಮಾರಣಾಂತಿಕವಾಯಿತು. ವ್ಯಕ್ತಿಯೊಬ್ಬ ಅಪಾರ್ಟ್​​ಮೆಂಟ್ ನಿವಾಸಿಗಳ ಮೇಲೆ ಕಾರಿ ಹತ್ತಿಸಿರುವ ಘಟನೆ ಇಂದೋರ್​ನಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳಾ ಟೆಕ್ಕಿ ಸಾವನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ಸಿಸಿಟಿವಿಯಲ್ಲಿ ಘಟನೆ ಸೆರೆಯಾಗಿದೆ. ಜಗಳ ನಡೆಯುತ್ತಿರುವ ಸಂದರ್ಭದಲ್ಲಿ ಹತ್ತರಿಂದ ಹದಿನೈದು ಮಂದಿ ನಿವಾಸಿಗಳು ಅಲ್ಲಿದ್ದರು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಪಿಂಕ್ ಮತ್ತು ಬ್ಲೂ ಲೈನ್‌ಗೆ ಬರಲಿವೆ 4 ಚಾಲಕರಹಿತ ರೈಲುಗಳು!

ಬೆಂಗಳೂರು, ಮಾರ್ಚ್ 27: ಬೆಂಗಳೂರಿನ ಟ್ರಾಫಿಕ್ ಮತ್ತು ವಾಯುಮಾಲಿನ್ಯದ ಸಮಸ್ಯೆಗೆ ಮುಕ್ತಿ ನೀಡಲು ಬಿಎಂಆರ್‌ಸಿಎಲ್ (BMRCL) ತನ್ನ ಜಾಲ ವಿಸ್ತರಣೆಗೆ ತ್ವರಿತಗತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ನಗರದ ಬಹುನಿರೀಕ್ಷಿತ ಪಿಂಕ್ ಲೈನ್ ಮತ್ತು ಬ್ಲೂ ಲೈನ್ ಮೆಟ್ರೋ ಮಾರ್ಗಗಳಿಗಾಗಿ ಅತ್ಯಾಧುನಿಕ ಚಾಲಕರಹಿತ (Driverless Train) ರೈಲುಗಳು ಶೀಘ್ರದಲ್ಲೇ ಆಗಮಿಸಲಿವೆ. ಬೆಂಗಳೂರಿನ ಬಿಇಎಂಎಲ್ (BEML) ಕಾರ್ಖಾನೆಯಿಂದ ಈ ತಿಂಗಳು ಮತ್ತು ಮುಂದಿನ ತಿಂಗಳಲ್ಲಿ ಒಟ್ಟು ನಾಲ್ಕು ಹೊಸ ರೈಲು ಸೆಟ್‌ಗಳು ಬಿಎಂಆರ್‌ಸಿಎಲ್ ಕೈಸೇರಲಿವೆ. ಮೇ ತಿಂಗಳಲ್ಲಿ ಪಿಂಕ್ ಲೈನ್ ಭಾಗಶಃ ಆರಂಭ…

Read More