ಚಾಮರಾಜನಗರ, ಮಾರ್ಚ್ 27: ಉಪಯೋಗಿಸದೇ ಇದ್ದ ಟಿವಿಯೊಳಗೆ ಭಾರೀ ಹಾವು ಅಡಗಿದ್ದ ಘಟನೆ ಚಾಮರಾಜನಗರ ತಾಲೂಕಿನ ಮಲ್ಲಯ್ಯನಪುರ ಗ್ರಾಮದ ದೊಡ್ಡಮಾದಪ್ಪ ಎಂಬವರ ಮನೆಯಲ್ಲಿ ನಡೆದಿದೆ. ಈ ದೃಶ್ಯ ಕಂಡು ಮನೆಮಂದಿ ಬೆಚ್ಚಿಬಿದ್ದಿದ್ದು, ಬಳಿಕ ಉರಗ ತಜ್ಞರ ಸಹಾಯದಿಂದ ಹಾವನ್ನು ಸುರಕ್ಷಿತವಾಗಿ ರಕ್ಷಿಸಿ ಕಾಡಿಗೆ ಬಿಡಲಾಗಿದೆ. ಹಳೆಯ ಟಿವಿಯೊಳಗೆ ಸುಮಾರು 8 ಅಡಿ ಉದ್ದದ ಕೇರೆಹಾವು ಸೇರಿಕೊಂಡಿತ್ತು. ಟಿವಿಯೊಳಗೆ ಹಾವು ಇರುವುದನ್ನು ಗಮನಿಸಿದ ಮನೆಮಂದಿ ಭಯಗೊಂಡು ತಕ್ಷಣವೇ ಉರಗ ತಜ್ಞರಾದ ಸ್ನೇಕ್ ಚಾಂಪ್ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸ್ನೇಕ್ ಚಾಂಪ್, ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಸಿ ಹಾವನ್ನು ಸುರಕ್ಷಿತವಾಗಿ ಹಿಡಿದು ಹೊರತೆಗೆದರು. ಬಳಿಕ ಹಾವನ್ನು ಯಾವುದೇ ಹಾನಿಯಾಗದಂತೆ ಸಮೀಪದ ಕಾಡಿಗೆ ಬಿಡಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ವಾಷಿಂಗ್ಟನ್, ಮಾರ್ಚ್ 27: ಹಾರ್ಮುಜ್ ಜಲಸಂಧಿ(Hormuz Strait) ತೆರೆಯಲು ಇರಾನ್ಗೆ ಏಪ್ರಿಲ್ 6ರವರೆಗೆ ಅಮೆರಿಕವು ಗಡುವು ವಿಸ್ತರಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಏಪ್ರಿಲ್ 27 ರಂದು ಇರಾನ್ಗೆ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಗಡುವು ವಿಧಿಸಿದ್ದರು. ಇರಾನ್ ಹಾರ್ಮುಜ್ ಜಲಸಂಧಿಯನ್ನು ತೆರೆಯದಿದ್ದಾಗ ಅಥವಾ ಅದಕ್ಕೆ ಮಣಿಯದಿದ್ದಾಗ, ಅಮೆರಿಕವು ಹೊಸ ದಿನಾಂಕವನ್ನು ನಿಗದಿಪಡಿಸಿತು.
ಅಮೆರಿಕ ಈಗ ಮತ್ತೊಮ್ಮೆ ಈ ಗಡುವನ್ನು ವಿಸ್ತರಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ಗೆ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ತಮ್ಮ ಗಡುವನ್ನು ಏಪ್ರಿಲ್ 6 ರವರೆಗೆ ವಿಸ್ತರಿಸಿದ್ದಾರೆ.
ಡೊನಾಲ್ಡ್ ಟ್ರಂಪ್ ಗುರುವಾರ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ.
ಏಪ್ರಿಲ್ 6 ರವರೆಗೆ ಇರಾನ್ನ ಇಂಧನ ಸ್ಥಾವರದ ಮೇಲೆ ಬಾಂಬ್ ಹಾಕುವುದಿಲ್ಲ, ಅಮೆರಿಕ ಮತ್ತು ಇರಾನ್ ನಡುವಿನ ಮಾತುಕತೆಗಳು ಉತ್ತಮವಾಗಿ ಮುಂದುವರೆದಿವೆ ಎಂದು ಟ್ರಂಪ್ ಹೇಳಿದ್ದಾರೆ.
ಅವರ ಸರ್ಕಾರವು ಇರಾನ್ನ ಇಂಧನ ಮೂಲಸೌಕರ್ಯದ ಮೇಲಿನ ದಾಳಿಯನ್ನು ಇನ್ನೂ 10 ದಿನಗಳವರೆಗೆ ನಿಲ್ಲಿಸುತ್ತದೆ. ಇದಕ್ಕೂ ಮೊದಲು, ಅಮೆರಿಕ ಅಧ್ಯಕ್ಷರು ಇರಾನ್ಗೆ ಐದು ದಿನಗಳ ವಿಸ್ತರಣೆಯನ್ನು ನೀಡಿದ್ದರು. ಹಾರ್ಮುಜ್ ಜಲಸಂಧಿ ಐದು ದಿನಗಳಲ್ಲಿ ತೆರೆಯದಿದ್ದರೆ ಮತ್ತು ಇರಾನ್ ಮಾತುಕತೆಗೆ ಬಾರದಿದ್ದರೆ ಅದು ಇದುವರೆಗಿನ ಅತಿದೊಡ್ಡ ದಾಳಿಯನ್ನು ಎದುರಿಸಬೇಕಾಗುತ್ತದೆ ಎಂದು ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದರು.
ಎರಡೂ ದೇಶಗಳ ನಡುವಿನ ಕದನ ವಿರಾಮ ಮಾತುಕತೆಗಳ ಕುರಿತು ಭಿನ್ನಾಭಿಪ್ರಾಯಗಳಿರುವ ಸಮಯದಲ್ಲಿ ಈ ಹೇಳಿಕೆ ಬಂದಿದೆ. ಫೆಬ್ರವರಿ 28 ರಂದು ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡಿದ ನಂತರ ಇರಾನ್ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕ ಮತ್ತು ಇಸ್ರೇಲಿ ನೆಲೆಗಳ ಮೇಲೆ ದಾಳಿ ಮಾಡಿದೆ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಇಂಧನ ರಫ್ತುಗಳನ್ನು ಪರಿಣಾಮಕಾರಿಯಾಗಿ ನಿರ್ಬಂಧಿಸಿದೆ.
ಯುದ್ಧವನ್ನು ಕೊನೆಗೊಳಿಸಲು 15 ಅಂಶಗಳ ಕಾರ್ಯಸೂಚಿಯನ್ನು ಇರಾನ್ಗೆ ಕಳುಹಿಸಲಾಗಿದೆ ಎಂದು ಅಮೆರಿಕದ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್ ದೃಢಪಡಿಸಿದರು, ಆದರೆ ಇರಾನ್ ಅದನ್ನು ಏಕಪಕ್ಷೀಯವೆಂದು ತಿರಸ್ಕರಿಸಿದೆ.
ಎರಡೂ ಕಡೆಯವರು ಕದನ ವಿರಾಮ ಅಥವಾ ರಾಜಿ ಕುರಿತು ಮಾತುಕತೆ ನಡೆಸುವ ವದಂತಿಗಳಿದ್ದರೂ, ಎರಡೂ ಕಡೆಯವರು ಕಟ್ಟುನಿಟ್ಟಿನ ನಿಲುವುಗಳನ್ನು ಹೊಂದಿದ್ದಾರೆ. ಯಾವುದೇ ಔಪಚಾರಿಕ ಮಾತುಕತೆಗಳು ನಡೆಯುತ್ತಿಲ್ಲ ಎಂದು ಹೇಳುವ ಮೂಲಕ ಇರಾನ್ ಈ ಮಾತುಕತೆಗಳನ್ನು ಪದೇ ಪದೇ ನಿರಾಕರಿಸಿದೆ.
ಬೆಂಗಳೂರು, ಮಾರ್ಚ್ 27: ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ (Gali Anjaneya Swamy Temple) ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮ ರಥೋತ್ಸವವು ಮಾರ್ಚ್ 27 ರಿಂದ ಮಾರ್ಚ್ 29 ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಆಗಮಿಸುವ ಸಾಧ್ಯತೆ ಇರುವುದರಿಂದ ಮೈಸೂರು ರಸ್ತೆಯಲ್ಲಿ (Mysore Road) ಸಂಚಾರ ದಟ್ಟಣೆ ತಪ್ಪಿಸಲು ಬೆಂಗಳೂರು ಸಂಚಾರಿ ಪೊಲೀಸರು ಮಹತ್ವದ ಸಂಚಾರ ಮಾರ್ಪಾಡುಗಳನ್ನು ಮಾಡಿದ್ದಾರೆ.
ಸಂಚಾರ ನಿರ್ಬಂಧ ಎಲ್ಲೆಲ್ಲಿ?
ಮಜೆಸ್ಟಿಕ್ ಮತ್ತು ಸಿಟಿ ಮಾರ್ಕೆಟ್ ಕಡೆಯಿಂದ: ಮೈಸೂರು ರಸ್ತೆ ಮುಖಾಂತರ ಕೆಂಗೇರಿ ಕಡೆಗೆ ಹೋಗುವ ಎಲ್ಲಾ ಮಾದರಿಯ ವಾಹನಗಳನ್ನು ಹೊಸಗುಡ್ಡದಹಳ್ಳಿ ಜಂಕ್ಷನ್ನಿಂದ ಕಿಂಕೋ ಜಂಕ್ಷನ್ವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಭಾರೀ ವಾಹನಗಳಿಗೆ ಸೂಚನೆ: ಕೆಂಗೇರಿ ಕಡೆಯಿಂದ ನಗರಕ್ಕೆ ಪ್ರವೇಶಿಸುವ ಭಾರೀ ವಾಹನಗಳನ್ನು ಹೊರತುಪಡಿಸಿ, ಉಳಿದ ವಾಹನಗಳಿಗೆ ಎಂದಿನಂತೆ ಸಂಚರಿಸಲು ಅವಕಾಶ ನೀಡಲಾಗಿದೆ.
ಮಾರ್ಚ್ 27ರ ಬೆಳಿಗ್ಗೆ 07 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ಈ ಸಂಚಾರ ನಿರ್ಬಂಧಗಳು ಜಾರಿಯಲ್ಲಿರುತ್ತವೆ.
ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳು
ಮಜೆಸ್ಟಿಕ್ ಮತ್ತು ಸಿಟಿ ಮಾರ್ಕೆಟ್ನಿಂದ ಮೈಸೂರು ರಸ್ತೆ ಕಡೆಗೆ ಹೋಗುವವರು ಹೊಸಗುಡ್ಡದಹಳ್ಳಿ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ಅವಲಹಳ್ಳಿ ಮುಖ್ಯ ರಸ್ತೆ ಮೂಲಕ ಬೆಂಗಳೂರು ಒನ್ ಜಂಕ್ಷನ್ ತಲುಪಬೇಕು. ಅಲ್ಲಿಂದ ಎಡ ತಿರುವು ಪಡೆದು ಕೆ.ಇ.ಬಿ. ಜಂಕ್ಷನ್ ಬಳಿ ಬಲ ತಿರುವು ಪಡೆದು ಪಿ.ಇ.ಎಸ್.ಐ.ಟಿ. ಕಾಲೇಜು (ದೇವೇಗೌಡ ಸರ್ಕಲ್) ಮುಖಾಂತರ ನಾಯಂಡಹಳ್ಳಿ ಹತ್ತಿರ ಮೈಸೂರು ರಸ್ತೆಯನ್ನು ಸೇರಬಹುದು.
ಮೈಸೂರು ರಸ್ತೆ ಮೇಲ್ಸೇತುವೆ ಬಳಸುವ ಸರಕು ವಾಹನಗಳು ಮೈಸೂರು ರಸ್ತೆ ವೆಟನರಿ ಜಂಕ್ಷನ್ ಬಳಿ ಬಲ ತಿರುವು ಪಡೆದು ಗುಡ್ ಶೆಡ್ ರಸ್ತೆ ಮೂಲಕ ಶಾಂತಲಾ ಜಂಕ್ಷನ್ – ಕೋಡೆ ಸರ್ಕಲ್ – ಲುಲು ಮಾಲ್ – ಹುಣಸೇಮರ ಜಂಕ್ಷನ್ ಮೂಲಕ ಮಾಗಡಿ ರಸ್ತೆಯತ್ತ ಸಂಚರಿಸಬಹುದು.
ಕೆಂಗೇರಿ ಕಡೆಯಿಂದ ನಗರಕ್ಕೆ ಪ್ರವೇಶಿಸುವವರು (ಮಾರ್ಚ್ 28-29ರ ವಿಶೇಷ ಸೂಚನೆ) ನಾಯಂಡಹಳ್ಳಿ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ನಾಗರಭಾವಿ ಜಂಕ್ಷನ್ ಹತ್ತಿರ ಬಲ ತಿರುವು ಪಡೆಯಬೇಕು. ಚಂದ್ರಾ ಲೇಔಟ್ 80 ಅಡಿ ರಸ್ತೆಯಲ್ಲಿ ಚಲಿಸಿ ವೆಸ್ಟ್ ಆಫ್ ಕಾರ್ಡ್ ರಸ್ತೆ ಮುಖಾಂತರ ಎಂ.ಸಿ. ಸರ್ಕಲ್ ತಲುಪಿ ಮಾಗಡಿ ರಸ್ತೆ ಸೇರಬಹುದು.
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) March 26, 2026
ಸಾರ್ವಜನಿಕರಿಗೆ ಸಂಚಾರಿ ಪೊಲೀಸರ ಮನವಿ
ರಥೋತ್ಸವದ ಸಮಯದಲ್ಲಿ ಸುಗಮ ಸಂಚಾರಕ್ಕೆ ಸಹಕರಿಸುವಂತೆ ಹಾಗೂ ಅನಿವಾರ್ಯವಿದ್ದಲ್ಲಿ ಮಾತ್ರ ಈ ರಸ್ತೆಯನ್ನು ಬಳಸುವಂತೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಮೈಸೂರು ರಸ್ತೆಯಲ್ಲಿ ಸಂಚರಿಸುವ ಮುನ್ನ ಗೂಗಲ್ ಮ್ಯಾಪ್ ಅಥವಾ ಸಂಚಾರಿ ಪೊಲೀಸರ ಅಧಿಕೃತ ಸೂಚನೆಗಳನ್ನು ಗಮನಿಸುವುದು ಉತ್ತಮ.
ಮಾರತ್ತಹಳ್ಳಿ ಬ್ರಿಡ್ಜ್ನಲ್ಲೂ ಸಂಚಾರ ಬದಲಾವಣೆ
ಮಾರತ್ತಹಳ್ಳಿ ಬ್ರಿಡ್ಜ್ ಮೇಲೆ ಮೆಟ್ರೋ ಕಾಮಗಾರಿ ಹಿನ್ನೆಲೆ ಮಾರ್ಚ್ 27 ರಿಂದ ಇಂದಿನಿಂದ 3 ದಿನಗಳ ಕಾಲ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ರಾತ್ರಿ 12ರಿಂದ ಮುಂಜಾನೆ 3 ಗಂಟೆಯವರೆಗೆ ಮಾರ್ಗ ಬದಲಾವಣೆ ಮಾಡಲಾಗಿದ್ದು, HAL ಕಡೆಯಿಂದ ವರ್ತೂರು ಮುಖ್ಯರಸ್ತೆ, ಮಾರತ್ತಹಳ್ಳಿ ಬ್ರಿಡ್ಜ್ ಮೂಲಕ ವರ್ತೂರು, ವೈಟ್ ಫೀಲ್ಡ್ ಕಡೆ ಹೋಗುವ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ವರ್ತೂರು ಮತ್ತು ವೈಟ್ ಫೀಲ್ಡ್ ಕಡೆಯಿಂದ ವರ್ತೂರು ಮುಖ್ಯರಸ್ತೆ, ಮಾರತ್ತಹಳ್ಳಿ ಬ್ರಿಡ್ಜ್ ಮೂಲಕ HAL ಕಡೆಗೂ ಸಂಚಾರ ನಿರ್ಬಂಧ ಮಾಡಲಾಗಿದೆ. ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ಮಾರ್ಗ ಬಳಸಲು ಸೂಚನೆ ನೀಡಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಪವನ್ ಕಲ್ಯಾಣ್ ಅವರು ರಾಜಕೀಯದಲ್ಲಿ ಬ್ಯುಸಿ ಇರುವುದರಿಂದ ಅವರ ಸಿನಿಮಾ ಅಭಿಮಾನಿಗಳಿಗೆ ಅಷ್ಟು ಸಂತೋಷ ಸಿಗುತ್ತಿಲ್ಲ. ಅವರು ಒಪ್ಪಿಕೊಂಡ ಮೂರು ಸಿನಿಮಾಗಳನ್ನು ಹೇಗೋ ಮುಗಿಸಿಕೊಟ್ಟರು. ಆದರೆ, ಯಾವ ಸಿನಿಮಾದಲ್ಲೂ ಬದ್ಧತೆ ಕಾಣಿಸಿಲ್ಲ. ಕಾಟಾಚಾರಕ್ಕೆ ಅವರು ಸಿನಿಮಾ ಶೂಟ್ ಮುಗಿಸಿಕೊಟ್ಟರು. ‘ಓಜಿ’, ‘ಹರಿ ಹರ ವೀರ ಮಲ್ಲು’ ಸಿನಿಮಾ ಸಾಧಾರಣ ಪ್ರದರ್ಶನ ನೀಡಿದ ಬಳಿಕ ಅವರ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಚಿತ್ರವು ‘ಧುರಂಧರ್ 2’ (Dhurandhar 2) ಅಬ್ಬರದಿಂದ ತತ್ತರಿಸಿದೆ.
‘ಧುರಂಧರ್ 2’ ಸಿನಿಮಾ ಅಬ್ಬರದ ಕಲೆಕ್ಷನ್ ಮಾಡುತ್ತಿದೆ. ಗುರುವಾರ (ಮಾರ್ಚ್ 26) 49 ಕೋಟಿ ರೂಪಾಯಿ ಗಳಿಕೆ ಮಾಡಿದೆ. ವಾರದ ದಿನವೂ ಇಷ್ಟು ಅಬ್ಬರದ ಗಳಿಕೆ ಆಗುತ್ತಿರುವುದು ನಿಜಕ್ಕೂ ಶಾಕಿಂಗ್ ಎನಿಸಿದೆ. ಈ ಸಿನಿಮಾಗೆ ಗುರುವಾರ ಬರೋಬ್ಬರಿ 19,493 ಶೋಗಳನ್ನು ನೀಡಲಾಗಿತ್ತು. ಈ ಚಿತ್ರದ ಭಾರತದ ನೆಟ್ ಕಲೆಕ್ಷನ್ 674 ಕೋಟಿ ರೂಪಾಯಿ ಆಗಿದೆ. ಭಾರತದ ಗ್ರಾಸ್ ಕಲೆಕ್ಷನ್ 805 ಕೋಟಿ ರೂಪಾಯಿ ಆಗಿದೆ. ಈ ಸಿನಿಮಾಗೆ ವಿಶ್ವ ಮಟ್ಟದಲ್ಲಿ 1067 ಕೋಟಿ ರೂಪಾಯಿ ಗಳಿಕೆ ಆಗಿದೆ.
ಗುರುವಾರ ‘ಧುರಂಧರ್ 2’ ಸಿನಿಮಾದ ತೆಲುಗು ವರ್ಷನ್ಗೆ 2.50 ಕೋಟಿ ರೂಪಾಯಿ ಗಳಿಕೆ ಆಗಿದೆ. ಆದರೆ, ಇದೇ ದಿನ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಗಳಿಕೆ ಮಾಡಿದ್ದು ಕೇವಲ 1 ಕೋಟಿ ರೂಪಾಯಿ ಮಾತ್ರ. ಇದು ಚಿತ್ರಕ್ಕೆ ಭಾರೀ ಹಿನ್ನಡೆ ತಂದಿದೆ.
ಪವನ್ ಕಲ್ಯಾಣ್ ಸಿನಿಮಾ ಭಾರತದಲ್ಲಿ 66 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದರಲ್ಲಿ ಅರ್ಧದಷ್ಟು ಗಳಿಕೆ ಮೊದಲ ದಿನವೇ ಬಂದಿತ್ತು. ಆ ಬಳಿಕ ಸಿನಿಮಾದ ಗಳಿಕ ಸಂಪೂರ್ಣವಾಗಿ ತಗ್ಗಿ ಹೋಗಿದೆ. ಮುಂದಿನ ದಿನಗಳಲ್ಲಿ ‘ಉಸ್ತಾದ್ ಭಗತ್ ಸಿಂಗ್’ ಪರಿಸ್ಥಿತಿ ಮತ್ತಷ್ಟು ಹೀನಾಯ ಆಗಬಹುದು.
ಪವನ್ ಕಲ್ಯಾಣ್ ಅವರು ಸದ್ಯಕ್ಕಂತೂ ಸಿನಿಮಾ ಮಾಡುತ್ತಿಲ್ಲ. ಅವರು ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಆಗಿದ್ದು, ತಮ್ಮ ಕೆಲಸವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬಂದರೆ ಅವರು ಸಿನಿಮಾ ರಂಗದಿಂದಲೇ ದೂರ ಆಗಬಹುದು.
ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಶ್ರೀರಾಮನವಮಿಯನ್ನು ಆಚರಿಸುವುದು ಹೇಗೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಪ್ರತಿ ವರ್ಷ ಚೈತ್ರ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನದಂದು ಆಚರಿಸಲಾಗುವ ಶ್ರೀರಾಮ ನವಮಿಯು ಹಿಂದೂ ಧರ್ಮದ ಅತ್ಯಂತ ಪವಿತ್ರ ಹಬ್ಬಗಳಲ್ಲಿ ಒಂದಾಗಿದೆ. ತ್ರೇತಾಯುಗದಲ್ಲಿ ಶ್ರೀ ಮಹಾವಿಷ್ಣುವು ಮರ್ಯಾದಾ ಪುರುಷೋತ್ತಮ ಶ್ರೀರಾಮನಾಗಿ ಜನಿಸಿದ ಶುಭ ದಿನವಿದು. ಸೂರ್ಯೋದಯದಲ್ಲಿ ನವಮಿ ತಿಥಿ ಇರುವುದರಿಂದ ಇಡೀ ದಿನವನ್ನು ರಾಮನವಮಿ ಎಂದು ಆಚರಿಸಲಾಗುತ್ತದೆ. ಈ ದಿನ ಪುನರ್ವಸು ನಕ್ಷತ್ರವೂ ಇರುತ್ತದೆ.
ಈ ಹಬ್ಬವನ್ನು ದೇಶಾದ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಆಂಜನೇಯ ಮತ್ತು ಶ್ರೀರಾಮ ದೇವಸ್ಥಾನಗಳಲ್ಲಿ ಅಭಿಷೇಕ, ಕಲ್ಯಾಣೋತ್ಸವಗಳನ್ನು ನಡೆಸಲಾಗುತ್ತದೆ. ಪಾನಕ ಮತ್ತು ಹೆಸರುಬೇಳೆ ವಿತರಿಸುವುದು ಈ ಆಚರಣೆಯ ಪ್ರಮುಖ ಭಾಗ. ಇವು ದೇಹಕ್ಕೆ ತಂಪನ್ನು ನೀಡುತ್ತವೆ. ರಾಮಾಯಣ ಪಾರಾಯಣ, ಭಜನೆಗಳನ್ನು ಮಾಡಲಾಗುತ್ತದೆ. “ಶ್ರೀ ರಾಮ ಜಯ ರಾಮ ಜಯ ಜಯ ರಾಮ” ಎಂಬ ಮಹಾಮಂತ್ರವನ್ನು ಪಠಿಸುವುದರಿಂದ ಉತ್ತಮ ಆರೋಗ್ಯ, ಮಾನಸಿಕ ನೆಮ್ಮದಿ, ಶತ್ರು ಕಾಟ ಮತ್ತು ಗ್ರಹ ದೋಷಗಳಿಂದ ಮುಕ್ತಿ ದೊರೆಯುತ್ತದೆ ಎಂದು ಡಾ.ಬಸವರಾಜ ಗುರೂಜಿ ಹೇಳಿದ್ದಾರೆ.
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 27, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ನವಮಿ ತಿಥಿಯಾಗಿದ್ದು, ಶ್ರೀರಾಮನವಮಿಯ ಶುಭದಿನವಾಗಿದೆ. ಬೆಂಗಳೂರಿನ ಗಾಳಿ ಆಂಜನೇಯ ಸ್ವಾಮಿಯ ರಥೋತ್ಸವವೂ ಇಂದು ನಡೆಯಲಿದೆ. ಸೂರ್ಯನು ಮೀನ ರಾಶಿಯಲ್ಲಿ ಮತ್ತು ಚಂದ್ರನು ಮಿಥುನ ರಾಶಿಯಲ್ಲಿ ಸಂಚರಿಸುತ್ತಾನೆ. ಈ ಶ್ರೀರಾಮ ನವಮಿಯಂದು ಪಾನಕ, ಹೆಸರುಬೇಳೆ ಮತ್ತು ಮಜ್ಜಿಗೆಯನ್ನು ನೀಡುವುದರಿಂದ ರಾಮನ ಕೃಪೆಗೆ ಪಾತ್ರರಾಗಬಹುದು ಎಂದು ಗುರೂಜಿ ತಿಳಿಸಿದ್ದಾರೆ.
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 27ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಸಕಾರಾತ್ಮಕವಾದ ಸನ್ನಿವೇಶ ಇರಲಿದ್ದು, ನಿಮಗೆ ಒಳ್ಳೆಯದೇನೋ ಸಂಭವಿಸಲಿದೆ ಎಂಬ ಸೂಚನೆ ಈ ದಿನ ದೊರೆಯಲಿದೆ. ಒಂದು ವೇಳೆ ವಿದೇಶದಲ್ಲಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದಲ್ಲಿ ಶುಭ ಸುದ್ದಿ ಕೇಳಿಬರುವಂಥ ಯೋಗ ಇದೆ. ಅದೇ ರೀತಿ ಈಗಾಗಲೇ ವಿದೇಶದಲ್ಲಿ ಉದ್ಯೋಗ ಮಾಡುತ್ತಿದ್ದೀರಿ ಅಂತಾದಲ್ಲಿ ಅಲ್ಲಿ ವೇತನ ಹೆಚ್ಚಳ ಅಥವಾ ಈಗ ಮಾಡುತ್ತಿರುವಂಥ ಉತ್ತಮ ಸಂಸ್ಥೆಯಲ್ಲಿ ಉದ್ಯೋಗಾವಕಾಶ ಹುಡುಕಿಕೊಂಡು ಬರಬಹುದು. ಮನೆ ಖರೀದಿಗೆ ಪ್ರಯತ್ನ ಮಾಡುತ್ತಿರುವವರಿಗೆ ಮನಸ್ಸಿಗೆ ಒಪ್ಪುವಂಥದ್ದು ದೊರೆಯುವ ಸಾಧ್ಯತೆ ಇದೆ.
ಗೃಹಾಲಂಕಾರ ವಸ್ತುಗಳು, ಟೀವಿ, ಕರ್ಟನ್ ಇಂಥವುಗಳಿಗೆ ಹೆಚ್ಚು ಖರ್ಚು ಮಾಡಲಿದ್ದೀರಿ. ಬಜೆಟ್ ಹಾಕಿಕೊಂಡಂತೆ ಯಾವುದೂ ಸಾಗುವುದಿಲ್ಲ. ಆರಂಭದಲ್ಲಿಯೇ ಹೇಳಿದಂತೆ ನಿಮಗೆ ಬೇಕಾದವರು ಸಹ ನಡೆದುಕೊಳ್ಳುವುದಿಲ್ಲ. ಆ ಕಾರಣಕ್ಕೆ ಹೆಚ್ಚುತ್ತಿರುವ ಖರ್ಚು ಹಾಗೂ ವೆಚ್ಚ ನಿಮ್ಮನ್ನು ಆತಂಕಕ್ಕೆ ಗುರಿ ಮಾಡಲಿದೆ. ನಿಮಗೆ ಅರಿವಿಲ್ಲದಂತೆಯೂ ಅಥವಾ ಯಾವುದೋ ಉತ್ಸಾಹದಲ್ಲಿ ಒಪ್ಪಿಕೊಂಡ ಕೆಲಸವು ಬಹಳ ಕಷ್ಟ ಎಂಬುದು ಆ ನಂತರ ಅರಿವಿಗೆ ಬರಲಿದೆ. ಸ್ವಂತ ಉದ್ಯಮ ಅಥವಾ ವ್ಯವಹಾರವನ್ನು ಮಾಡುತ್ತಿರುವಂತಹವರಿಗೆ ಆದಾಯದಲ್ಲಿನ ಇಳಿಕೆ ಆತಂಕಕ್ಕೆ ಕಾರಣ ಆಗಲಿದೆ.
ಸಂಭ್ರಮದ ವಾತಾವರಣ ಇರುತ್ತದೆ. ಮಕ್ಕಳು ಅಥವಾ ನಿಮಗಿಂತ ಚಿಕ್ಕ ವಯಸ್ಸಿನವರ ಜತೆಗೆ ಉತ್ತಮವಾದ ಸಮಯ ಕಳೆಯುವಂಥ ಅವಕಾಶ ನಿಮಗಿದೆ. ಈ ದಿನ ನೀವು ರುಚಿಕಟ್ಟಾದ ಊಟ ತಿಂಡಿಗಳನ್ನು ಸವಿಯುವಂಥ ಯೋಗ ಇದೆ. ಮನೆ ಜಮೀನು ಅಥವಾ ಅಪಾರ್ಟ್ ಮೆಂಟ್ ಖರೀದಿ ಮಾಡಬೇಕು ಎಂದು ಹುಡುಕುತ್ತಿರುವವರಿಗೆ ಮನಸ್ಸಿಗೆ ಒಪ್ಪುವಂಥದ್ದು ದೊರೆಯುವ ಯೋಗ ಇದೆ. ಕೆಲವು ಕೆಲಸಗಳು ನೀವು ಅಂದುಕೊಂಡಿದ್ದಕ್ಕಿಂತ ಬಹಳ ವೇಗವಾಗಿ ನಡೆದು ಹೋಗಲಿವೆ. ನಿಮಗೆ ಬಹಳ ಮುಖ್ಯ ಎನಿಸಿದ ಕೆಲಸಗಳನ್ನು ಸಾಧ್ಯವಾದಷ್ಟೂ ನೀವೇ ಮಾಡುವುದಕ್ಕೆ ಪ್ರಯತ್ನಿಸಿ.
ಏಕಕಾಲಕ್ಕೆ ಹಲವು ಕೆಲಸ- ಜವಾಬ್ದಾರಿ ನಿರ್ವಹಿಸಬೇಕಾಗಲಿದೆ. ಆತ್ಮವಿಶ್ವಾಸ ಇರುವುದು ಒಳ್ಳೆಯದೇ. ಆದರೆ ನಿಮಗೆ ಗೊತ್ತಿರಬೇಕಾದದ್ದು ಏನೆಂದರೆ, ಈ ದಿನ ಯಾವುದೇ ಕೆಲಸವನ್ನು ಸರಳವಾಗಿ ತೆಗೆದುಕೊಳ್ಳಬಾರದು. ನಿಮ್ಮಲ್ಲಿ ಯಾರು ಪಿತ್ರಾರ್ಜಿತ ಆಸ್ತಿಯ ನಿರೀಕ್ಷೆಯಲ್ಲಿ ಇರುವಿರೋ ಅಂತಹವರಿಗೆ ಅಂದುಕೊಂಡಂತೆ ಕೆಲವು ಬೆಳವಣಿಗೆಗಳು ಆಗಲಿವೆ. ಬಹಳ ಮುಖ್ಯವಾದ ಕಾಗದಪತ್ರಗಳು ಅಥವಾ ವಸ್ತುಗಳನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ತೆಗೆದುಕೊಂಡು ಹೋಗುತ್ತಿದ್ದೀರಿ ಎಂದಾದಲ್ಲಿ ಸಾಮಾನ್ಯ ದಿನಗಳಿಗಿಂತ ಇರಬೇಕಾದ ಎಚ್ಚರಿಕೆಗಿಂತ ಹೆಚ್ಚು ಜಾಗ್ರತೆಯನ್ನು ವಹಿಸಿ.
ನಿಮಗಾಗುವ ಖರ್ಚಿನಿಂದ ಸಂತೋಷ, ತೃಪ್ತಿ ನಿಮಗೆ ದೊರೆಯಲಿದೆ. ಕುಟುಂಬದ ಜತೆಗೆ ಕೂಡಿ ಪ್ರವಾಸಕ್ಕೆ ತೆರಳುವುದಕ್ಕೆ ಯೋಜನೆ ರೂಪಿಸಲಿದ್ದೀರಿ. ಯಾರು ನಿಮ್ಮನ್ನು ಬೇಕೆಂತಲೇ ನಂಬಿಸಿ, ಅವಮಾನಕ್ಕೆ ಗುರಿ ಮಾಡಿದರೋ ಅವರಿಗೆ ಸರಿಯಾದ ರೀತಿಯಲ್ಲಿ ಪ್ರತೀಕಾರ ಹೇಳುವುದಕ್ಕೆ ಬೇಕಾದ ಸಿದ್ಧತೆಯನ್ನು ಮಾಡಿಕೊಳ್ಳಲಿದ್ದೀರಿ. ನಿಮ್ಮಲ್ಲಿ ಕೆಲವರು ಮನೆಗೆ ಸೋಲಾರ್ ಉಪಕರಣಗಳನ್ನು ಖರೀದಿ ಮಾಡುವುದಕ್ಕೆ ತೀರ್ಮಾನ ಮಾಡಲಿದ್ದೀರಿ. ಅಥವಾ ಎಲೆಕ್ಟ್ರಿಕಲ್ ವಾಹನವನ್ನು ಖರೀದಿ ಮಾಡುವುದಕ್ಕಾದರೂ ಅಡ್ವಾನ್ಸ್ ಪಾವತಿಸಲಿದ್ದೀರಿ.
ನಾನಾ ಕಾರಣಗಳಿಗೆ ಸಾಮಾನ್ಯ ದಿನಗಳಂತೆ ಈ ದಿನ ಇರುವುದಿಲ್ಲ. ತಾಳ್ಮೆ, ಸಮಾಧಾನ, ನಿಧಾನ, ಆಲೋಚಿಸಿ ನಿರ್ಧಾರ ಮಾಡುವುದು ಇಂಥ ಯಾವುದನ್ನೂ ಈ ದಿನ ನಿಮ್ಮಿಂದ ಮಾಡುವುದು ಸಾಧ್ಯವಾಗುವುದಿಲ್ಲ. ಆದ್ದರಿಂದ ಮುಖ್ಯ ಸಂಗತಿಗಳು ಎಂದಾಗ ತಕ್ಷಣವೇ ಅಥವಾ ಆವೇಶದಲ್ಲಿ ಏನನ್ನೂ ಹೇಳದಿರುವುದು ಉತ್ತಮ. ನಿಮಗೆ ತಾತ್ಕಾಲಿಕವಾಗಿ ಅನುಕೂಲ ಆಗಲಿದೆ ಎಂಬ ಕಾರಣಕ್ಕೆ ದೀರ್ಘಾವಧಿ ವಿಚಾರಗಳನ್ನು ನಿರ್ಲಕ್ಷ್ಯ ಮಾಡುವುದಕ್ಕೆ ಹೋಗಬೇಡಿ. ಕುಟುಂಬದ ವ್ಯವಹಾರವನ್ನು ಮಾಡುತ್ತಾ ಬರುತ್ತಿರುವವರಿಗೆ ಈಗ ಮಾಡುತ್ತಿರುವುದರ ಜತೆಗೆ ಇನ್ನಷ್ಟು ವ್ಯವಹಾರವನ್ನು ಸೇರಿಸಿಕೊಳ್ಳಬೇಕು ಎಂಬ ಆಲೋಚನೆ ಮೂಡಬಹುದು.
ವಿರಾಮವಾದ ಮನಸ್ಥಿತಿಯಲ್ಲಿ ಇರಲಿದ್ದೀರಿ. ಪಾರ್ಟಿ, ಗೆಟ್ ಟು ಗೆದರ್ ಗಳಲ್ಲಿ ಭಾಗವಹಿಸುವ ಸಾಧ್ಯತೆ ಈ ದಿನ ಇದೆ. ಸಂಬಂಧಿಗಳು, ಸ್ನೇಹಿತರು ಹಾಗೂ ಪರಿಚಯಸ್ಥರು ಹಲವರನ್ನು ಭೇಟಿ ಆಗಲಿದ್ದೀರಿ. ನಿಮ್ಮ ಮನಸ್ಸು ಉಲ್ಲಾಸದಿಂದ ಕೂಡಿರುತ್ತದೆ. ಹಣಕಾಸಿನ ವಿಚಾರಕ್ಕೆ ಸ್ನೇಹಿತರು ಅಥವಾ ಆಪ್ತರ ಜತೆಗೆ ಚರ್ಚೆಯನ್ನು ಮಾಡಲಿದ್ದೀರಿ. ನಿಮ್ಮಲ್ಲಿ ಕೆಲವರು ಈಗಿರುವ ಮನೆಯನ್ನು ಬದಲಾಯಿಸಿ, ಬೇರೆ ಸ್ಥಳಕ್ಕೆ ತೆರಳಬೇಕು ಎಂದೇನಾದರೂ ಆಲೋಚನೆ ಮಾಡುತ್ತಿದ್ದಲ್ಲಿ ಅಗತ್ಯ ಇರುವಂಥ ಮಾಹಿತಿ ದೊರೆಯಲಿದೆ. ಇನ್ನು ನೀವು ನಿರೀಕ್ಷೆ ಕೂಡ ಮಾಡದ ರೀತಿಯಲ್ಲಿ ಉದ್ಯೋಗ ಬದಲಾವಣೆ ಅವಕಾಶಗಳು ತೆರೆದುಕೊಳ್ಳುವಂತೆ ಕಾಣುತ್ತವೆ.
ತೀರಾ ಅಗತ್ಯ ಎಂದು ನೀವಾಗಿಯೇ ಕೇಳಿದ್ದಲ್ಲಿ ನಿಮ್ಮ ಸಂಬಂಧಿಕರು, ಸ್ನೇಹಿತರು ಅಥವಾ ಪೋಷಕರು ಹಣಕಾಸಿನ ನೆರವು ನೀಡುವ ಬಗ್ಗೆ ಖಚಿತವಾಗಿ ಹೇಳುವ ಸಾಧ್ಯತೆ ಇದೆ. ಈ ಹಿಂದೆ ನೀವು ಹೇಳಿದ್ದ ಪ್ರಾಜೆಕ್ಟ್ ಗಾಗಿಯೋ ಅಥವಾ ವ್ಯವಹಾರದ ಮೇಲಿನ ನಂಬಿಕೆಯಿಂದಲೋ ಹಣ ಹಾಕುವುದಕ್ಕೆ ಒಪ್ಪಿಗೆ ಸೂಚಿಸುವ ಅವಕಾಶಗಳು ಹೆಚ್ಚಿಗೆ ಇವೆ. ಇನ್ನು ಈ ದಿನ ರೆಸ್ಟೋರೆಂಟ್, ಸಿನಿಮಾ ಅಥವಾ ಮನರಂಜನೆಗಾಗಿ ಅಂತಲೇ ಕೆಲವು ಸ್ಥಳಗಳಿಗೆ ಕುಟುಂಬ ಸಮೇತ ತೆರಳುವಂಥ ಯೋಗ ಕಂಡುಬರುತ್ತಿದೆ. ವಾಹನವನ್ನು ಪಾರ್ಕಿಂಗ್ ಮಾಡುವಾಗ ಸಾಮಾನ್ಯ ದಿನಗಳಿಗಿಂತ ಎಚ್ಚರಿಕೆಯಿಂದ ಇರುವುದು ಮುಖ್ಯ.
ಈ ದಿನ ಸಾಧ್ಯವಾದಲ್ಲಿ ಹತ್ತು ನಿಮಿಷಗಳ ಕಾಲ ಧ್ಯಾನ ಮಾಡುವುದು ಒಳ್ಳೆಯದು. ಕೆಲವು ಸಂಗತಿಗಳನ್ನು ಯಾಕಾದರೂ ಹೇಳಿದೆನೋ ಎಂಬ ಪರಿಸ್ಥಿತಿ ನಿಮ್ಮದಾಗುತ್ತದೆ. ಒಂದೇ ವಿಚಾರಕ್ಕೆ ಒಬ್ಬ ವ್ಯಕ್ತಿ ಅಥವಾ ಹಲವರು ನಿಮ್ಮ ಬಳಿ ವಿಚಾರಿಸುವುದಕ್ಕೆ ಆರಂಭಿಸಬಹುದು ಅಥವಾ ತಮ್ಮ ಪರವಾಗಿ ಶಿಫಾರಸು ಮಾಡುವಂತೆ ಕೇಳಿಕೊಳ್ಳಬಹುದು. ಮಾನಸಿಕ ಹಿಂಸೆ ಆಯಿತೋ ಅಂತಲೋ ಕಿರಿಕಿರಿ ಮಾಡುತ್ತಿದ್ದಾರೆ ಎಂಬ ಕಾರಣಕ್ಕೋ ಕೋಪವನ್ನು ಹೊರ ಹಾಕುವುದಕ್ಕೆ ಹೋಗಬೇಡಿ. ಸಂಗಾತಿ ಕಡೆಯ ಸಂಬಂಧಿಕರು ಮನೆಗೆ ಬರುವಂಥ ಯೋಗ ಇದೆ.
ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ನವಮೀ ತಿಥಿಯ ಶುಕ್ರವಾರದಂದು ಹಿರಿಯರ ಸೇವೆ, ಮಾತಿಗೆ ಮಾತು, ಸಂಗಾತಿಗೆ ಸಂತೋಷ, ವ್ಯಾಪಾರದಲ್ಲಿ ಸಹನೆ, ಮಕ್ಕಳಿಗೆ ಪ್ರೀತಿ, ಹೊಸ ವ್ಯವಹಾರಕ್ಕೆ ಪ್ರಯತ್ನ ಇದೆಲ್ಲ ಈ ದಿನದ ವಿಶೇಷ.
ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಗುರು, ಪಕ್ಷ : ಶುಕ್ಲ, ತಿಥಿ : ನವಮೀ, ನಿತ್ಯನಕ್ಷತ್ರ : ಆರ್ದ್ರಾ, ಯೋಗ : ಶೋಭನ, ಕರಣ : ಬವ, ಸೂರ್ಯೋದಯ – 06 – 24 am, ಸೂರ್ಯಾಸ್ತ – 06 – 34 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:59 – 12:30 ಯಮಗಂಡ ಕಾಲ 15:32 – 17:04, ಗುಳಿಕ ಕಾಲ 07:57 – 09:27
ಮೇಷ ರಾಶಿ :
ಸಂಗಾತಿಯ ಕಡೆಯಿಂದ ನಿಮಗೆ ಹೊಗಳಿಕೆ ಸಿಗುವುದು. ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳುವುದು ಅನಿವಾರ್ಯ. ಯಾರಿಗಾದರೂ ಹಣವನ್ನು ನೀಡಲು ಸಂಗಾತಿಯಿಂದ ಒತ್ತಡ ಬರಬಹುದು. ಅತಿಯಾದ ಆಯಾಸವನ್ನು ಮಾಡಿಕೊಳ್ಳದೇ ಕಾರ್ಯವನ್ನು ಮಾಡುವಿರಿ. ಕಛೇರಿಯಲ್ಲಿ ಸಹೋದ್ಯೋಗಿಗಳಿಂದ ಇಂದು ನಿಮಗೆ ಸಹಾನುಭೂತಿಯು ಸಿಗುವುದು. ಸಂಬಂಧಗಳನ್ನು ಬಳಸಿಕೊಂಡು ಇಂದಿನ ಕೆಲಸವನ್ನು ಮಾಡುವಿರಿ.
ವೃಷಭ ರಾಶಿ :
ಇಂದು ಮಾಡಿದ ತಪ್ಪನ್ನೇ ಮತ್ತೆ ಮತ್ತೆ ಮಾಡಿ ಅಪಹಾಸ್ಯಕ್ಕೆ ಯಾವುದೇ ಕಾರಣಕ್ಕೂ ಸಿಕ್ಕಿಬೀಳಬೇಡಿ. ಮನೆಯಲ್ಲಿ ಸಂತೋಷದ ವಾತಾವರಣ ಇರುತ್ತದೆ. ಕೆಲವು ವಿಚಾರದಲ್ಲಿ ಭಿನ್ನಾಭಿಪ್ರಾಯಗಳು ಬರುವುದು. ಹಣದಿಂದ ಕೆಲವು ತೊಂದರೆಗಳನ್ನು ದೂರಮಾಡಿಕೊಳ್ಳುವಿರಿ. ನೋವನ್ನು ನುಂಗಿ ಬದುಕುವ ರೀತಿಯು ನಿಮಗೆ ಗೊತ್ತಾಗಲಿದೆ. ನೂತನ ವಸ್ತುಗಳನ್ನು ಖರೀದಿಸುವಿರಿ. ಕಾಲಹರಣದ ಬದಲು ಉಪಯೋಗಕ್ಕೆ ಬರುವಂತೆ ಈ ದಿನವನ್ನು ರೂಪಿಸಿಕೊಳ್ಳಿ. ಈ ದಿನ ಹಸಿವು ಬಾಯಾರಿಕೆ ಅಧಿಕವಾಗಿರುವುದು.
ಮಿಥುನ ರಾಶಿ :
ನಿತ್ಯದ ಕಾರ್ಯವನ್ನು ಬೇರೆ ವಿಧಾನದಲ್ಲಿ ಮಾಡಿ ಯಶಸ್ಸು ಕಾಣುವಿರಿ. ಸರಿಯಾದ ಸಮಯಕ್ಕೆ ಸ್ನೇಹಿತರೊಬ್ಬರು ಬಂದು ನಿಮ್ಮ ಸಮಸ್ಯೆ ಬಗೆಹರಿಸಲಿದ್ದಾರೆ. ನಿಮ್ಮ ಆಲೋಚನೆಗಳು ಅಸ್ಥಿರ ಮತ್ತು ದ್ವಂದ್ವಗಳಿಂದ ಕೂಡಿರುತ್ತದೆ. ವಾಹನ ಸೌಕರ್ಯವು ಪ್ರಾಪ್ತಿಯಾಗಲಿದೆ. ಅಪರಿಚಿತರ ಜೊತೆ ಸಲುಗೆ ಅನವಶ್ಯಕ. ಉದ್ಯಮವನ್ನು ನಡೆಸಲು ಇನ್ನೊಬ್ಬರ ಜೊತೆ ಸೇರಿಕೊಳ್ಳುವಿರಿ. ದಾಂಪತ್ಯ ಜೀವನದಲ್ಲಿ ನಿಮ್ಮ ಸ್ಥಾನವು ಮುಖ್ಯವಾದಂತೆ ತೋರುವುದು. ಹೊಂದಾಣಿಕೆಯ ಮನೋಭಾವವು ಇರಬೇಕಾದೀತು.
ಕರ್ಕಾಟಕ ರಾಶಿ :
ಇಂದು ಮಾತು ಮತ್ತು ನಡವಳಿಕೆಯನ್ನು ಮಿತದಲ್ಲಿ ಇರಿಸಿಕೊಳ್ಳುವುದು ಒಳ್ಳೆಯ ಪ್ರಯೋಜನ ಸಿಗಲಿದೆ. ಅತಿ ಸೂಕ್ಷ್ಮವಾಗುವುದೂ ಮನಸ್ಸಿಗೆ ತೊಂದರೆಯಾಗುತ್ತದೆ. ಅನ್ಯ ಆಲೋಚನೆಯಿಂದ ನೀವು ಹಣವನ್ನು ಹೆಚ್ಚು ಖರ್ಚುಮಾಡಬೇಕಾಗುವುದು. ಮನೆಗೆ ಬೇಕಾದ ವಸ್ತುಗಳ ಖರೀದಿ ನಡೆಸುವಿರಿ. ಆಗಬೇಕಾದ ಕೆಲಸಗಳ ಬಗ್ಗೆ ನಿಮಗೆ ಆತಂಕ ಇರುವುದು. ಕಳೆದುಕೊಂಡದ ವಸ್ತುವಿನ ಬಗ್ಗೆ ಮೋಹವಿರುವುದು. ಗೊಂದಲವನ್ನು ಮಾಡಿಕೊಳ್ಳದೇ ಕೆಲಸವನ್ನು ಸರಳ ಮಾಡಿಕೊಳ್ಳಿ.
ಸಿಂಹ ರಾಶಿ :
ಯಾರದ್ದೋ ಮಾತು ಕೇಳಿ ನಿಮ್ಮ ಒಳ್ಳೆಯ ನಿರ್ಧಾರವನ್ನು ಬದಲಿಸದಿರಿ. ಸಂತಾನದ ವಿಚಾರದಲ್ಲಿ ಮನೆಯವರ ನಡುವೆ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ಪ್ರಯಾಣದ ಬಗ್ಗೆ ಸರಿಯಾದ ನಿರ್ಧಾರವಿರಲಿ. ಹಳೆಯ ವಸ್ತುಗಳನ್ನು ನೀವು ಮಾರಾಟ ಮಾಡುವಿರಿ. ಸಂದರ್ಭಕ್ಕೆ ತಕ್ಕಂತೆ ವರ್ತಿಸುವ ಸಂಗಾತಿಯ ನಡವಳಿಕೆಯು ಇಷ್ಟವಾಗದು. ಕೆಲವನ್ನು ನೀವು ನಿರ್ಲಕ್ಷಿಸುವುದೇ ಸೂಕ್ತ. ವ್ಯಾಪರವು ಹೆಚ್ಚಿನ ಲಾಭವನ್ನು ಕೊಟ್ಟರೂ ಖರ್ಚು ಮಾಡುವ ಅನಿವಾರ್ಯತೆಯು ಬರಬಹುದು.
ಕನ್ಯಾ ರಾಶಿ :
ನಿಮ್ಮ ಬಗ್ಗೆ ಪ್ರಚಾರದ ಗೀಳನ್ನು ಕಡಿಮೆ ಮಾಡಿಕೊಳ್ಳಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ. ತಾಯಿಗೆ ನಿಮ್ಮಂದ ಯಾವುದಾದರೊಂದು ಲಾಭವಾಗಬಹುದು. ಯಾರದೋ ಮೂಲಕ ಸರ್ಕಾರಿ ಕೆಲಸದಲ್ಲಿ ಯಶಸ್ಸನ್ನು ಕಾಣುವಿರಿ. ತೆಗೆದುಕೊಂಡ ನಿರ್ಧಾರಗಳು ಕಾರ್ಯಗತಗೊಳ್ಳುವ ಸಾಧ್ಯತೆ ಇದೆ. ಭೂಮಿಯ ವ್ಯವಹಾರದಲ್ಲಿ ಲಾಭವಿರದೇ ಕೇವಲ ಓಡಾಟವಾಗುವುದು. ಮಾತನಾಡಬೇಕಾದ ಸಂದರ್ಭದಲ್ಲಿ ಮೌನ ವಹಿಸಿ ಎಲ್ಲರ ಕೋಪಕ್ಕೆ ಗುರಿಯಾಗುವಿರಿ.
ತುಲಾ ರಾಶಿ :
ಇಂದು ನೀವು ಅತ್ಯಂತ ಕಷ್ಟಕರವಾದ ಕೆಲಸವನ್ನು ಸುಲಭವಾಗಿ ಮಾಡಿ ಮುಗಿಸುವಿರಿ. ಸಂತಾನದಿಂದ ಒಳ್ಳೆಯ ಸುದ್ದಿಯನ್ನು ಪಡೆಯುವಿರಿ. ನಿಮ್ಮನ್ನು ನಿರ್ಲಕ್ಷಿಸುವ ಸಹೋದ್ಯೋಗಿಗಳ ಜೊತೆ ಬೆರೆಯಲು ಪ್ರಯತ್ನಿಸಿ. ವೃತ್ತಿಯಲ್ಲಿ ನಿಮಗೆ ಅನನುಕೂಲತೆಯು ಸೃಷ್ಟಿಯಾಗಬಹುದು. ಇನ್ನೊಬ್ಬರ ಬಳಿ ಇರುವ ನಿಮ್ಮ ದಾಖಲೆಯನ್ನು ಜಾಣ್ಮೆಯಿಂದ ಪಡೆದುಕೊಳ್ಳುವಿರಿ. ಸಮಯವನ್ನು ಹಾಳುಮಾಡದೇ ಕೆಲಸದಲ್ಲೇ ಗಮನವಿರಲಿ. ಮನೆಯವರ ಜೊತೆ ಸಮಯವನ್ನು ನೀವು ಕಳೆಯಬೇಕು ಎನ್ನಿಸಬಹುದು.
ವೃಶ್ಚಿಕ ರಾಶಿ :
ದೂರದ ಬಂಧುಗಳ ಆಗಮನದಿಂದ ಜಟಿಲ ಸಮಸ್ಯೆಯ ನಿವಾರಣೆ ಮಾಡುವರು. ಕಾನೂನಿನ ವಿಷಯದಲ್ಲಿ ಸಲಹೆ ಪಡೆಯಿರಿ ಮತ್ತು ಸ್ವಂತವಾಗಿ ಯೋಚಿಸದೇ ಎಚ್ಚರಿಕೆ ವಹಿಸಬೇಕು. ನಿಮ್ಮ ನಡವಳಿಕೆಯು ವಿವೇಕಯುತವಾಗಿರಲಿ. ಎಲ್ಲರ ಜೊತೆ ಬೆರೆಯುವುದನ್ನು ಇಷ್ಟಪಡುವಿರಿ. ಯಾವುದೇ ಒತ್ತಡವಿಲ್ಲದ ಕೆಲಸವು ನಿಧಾನವಾಗುವುದು. ಮಕ್ಕಳ ಕಲಿಕೆಗೆ ಬೇಕಾದ ಸಹಕಾರವನ್ನು ನೀಡುವಿರಿ. ತಾಯಿಯ ಪ್ರೀತಿಗೆ ಸೋಲುವಿರಿ. ನೂತನ ಗೃಹವನ್ನು ಖರೀದಿ ಮಾಡುವ ಅವಕಾಶವು ಬರಬಹುದು.
ಧನು ರಾಶಿ :
ಹೊರಗಿನ ಆಹಾರದಿಂದ ಸಂತೋಷವಾಗಬಹುದು. ಆದರೆ ಆರೋಗ್ಯದ ಬಗ್ಗೆಯೂ ಕಾಳಜಿ ಅವಶ್ಯಕ. ಯಾರಾದರೂ ನಿಮ್ಮನ್ನು ಉದ್ವೇಗಗೊಳಿಸಬಹುದು. ಅದಕ್ಕೆ ಒಳಗಾಗುವುದು ಬೇಡ, ಉತ್ತಮ ಸಮಯದ ನಿರೀಕ್ಷೆಯಲ್ಲಿ ನೀವು ಇರುವಿರಿ. ದೂರದ ಬಂಧುಗಳ ಸಮಾಗಮವಾಗಬಹುದು. ಸರಿಯಾಗಿ ಪ್ರತಿಕ್ರಯಿಸಲು ನಿಮಗೆ ಬಾರದೇ ಇರುವುದು. ಉದ್ಯೋಗದಲ್ಲಿ ಸ್ವಲ್ಪ ಬದಲಾವಣೆಯನ್ನು ಮಾಡಿಕೊಳ್ಳಬೇಕಾದೀತು. ದಿನಗೂಲಿ ಕಾರ್ಮಿಕರಿಗೆ ಕೆಲಸವು ಸಿಗದೇ ಕಷ್ಟವಾದೀತು.
ಮಕರ ರಾಶಿ :
ಹಣಕಾಸಿನ ಯೋಜನೆಯಲ್ಲಿ ಆರಂಭದಲ್ಲಿ ಕೆಲವು ತೊಂದರೆಗಳಿದ್ದರೂ ಅನಂತರ ದಾರಿಯು ಸ್ಪಷ್ಟವಾಗುತ್ತದೆ. ಉದ್ಯೋಗದ ಸ್ಥಳದಲ್ಲಿ ನೀವು ಸಹೋದ್ಯೋಗಿಗಳ ಜೊತೆ ಸ್ನೇಹಪರ ವಾತಾವರಣದಲ್ಲಿ ಕೆಲಸ ಮಾಡಲು ಇಂದು ಸಾಧ್ಯವಾಗುತ್ತದೆ. ತುರ್ತು ಪ್ರಯಾಣವನ್ನು ನೀವು ಮಾಡಬೇಕಾಗಬಹುದು. ರಾಜಕೀಯ ವ್ಯಕ್ತಿಗಳಿಂದ ಆಗಬೇಕಾದ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಸ್ನೇಹಿತನ ಸಹವಾಸದಿಂದ ದುರಭ್ಯಾಸಕ್ಕೆ ತುತ್ತಾಗಬೇಕಾದೀತು.
ಕುಂಭ ರಾಶಿ :
ನಿಮ್ಮ ಮನಸ್ಸು ಸೂಕ್ಷ್ಮವಾದ ಸಂಗತಿಗಳನ್ನೂ ಇಂದು ಸ್ವೀಕರಿಸಬಹುದು. ನೀವು ಕಾಲ್ಪನಿಕ ಪ್ರಪಂಚದಿಂದ ವಾಸ್ತವಕ್ಕೆ ಬರಬೇಕಾಗುವುದು. ಕುಟುಂಬದ ವಿಷಯಗಳಲ್ಲಿ ಆಸಕ್ತಿ ವಹಿಸುತ್ತೀರಿ. ಎಲ್ಲಿಗಾದರೂ ದೂರದ ಊರಿಗೆ ಪ್ರಯಾಣದ ಯೋಜನೆಗಳನ್ನು ಮಾಡಿಕೊಳ್ಳುವಿರಿ. ಪ್ರೀತಿಯನ್ನು ಕೊಡುವವರ ಮೇಲೆ ಸುಮ್ಮನೆ ಅನುಮಾನ ಬೇಡ. ಸ್ಥಿರಾಸ್ತಿಯ ವಿಚಾರಕ್ಕೆ ಬಿಸಿ ಮಾತುಗಳು ಕುಟುಂಬದಲ್ಲಿ ಬರಬಹುದು. ಕಾನೂನಾತ್ಮಕ ವಿಷಯವನ್ನು ಚರ್ಚಿಸಿ ಕಾರ್ಯರೂಪಕ್ಕೆ ತೆಗೆದುಕೊಂಡು ಬನ್ನಿ.
ಮೀನ ರಾಶಿ :
ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಆದಷ್ಟು ಸ್ಥಿರಾಸ್ತಿಯ ಬಗ್ಗೆ ಸಲ್ಲದ ಚರ್ಚೆ ಮಾಡುವುದನ್ನು ತಪ್ಪಿಸಿ. ಅಪಘಾತಗಳು ಸಂಭವಿಸುವ ಸಾಧ್ಯತೆಯಿರುವುದರಿಂದ, ವಾಹನವನ್ನು ಎಚ್ಚರಿಕೆಯಿಂದ ಚಾಲನೆ ಮಾಡಿ. ನೀರಿಗೆ ಸಂಬಂಧಿಸಿದ ಉದ್ಯಮದಲ್ಲಿ ಆದಾಯ ಹೆಚ್ಚು. ಆಪ್ತರ ಸಹಕಾರವನ್ನು ನೀವು ಅಲ್ಲಗಳೆಯುವಿರಿ. ನಿಮ್ಮ ಕಷ್ಟವನ್ನು ಸ್ನೇಹಿತರ ಜೊತೆ ಹಂಚಿಕೊಳ್ಳುವುದೂ ಕಷ್ಟವಾದೀತು. ನಿಮ್ಮ ಯಶಸ್ಸೇ ನಿಮಗೆ ಮುಳುವಾಗಬಹುದು. ನಿಮ್ಮನ್ನು ಅವಲೋಕನ ಮಾಡಿಕೊಳ್ಳುವ ಬಗ್ಗೆ ಆಸಕ್ತಿ ವಹಿಸಿ.
19ನೇ ಆವೃತ್ತಿಯ ಐಪಿಎಲ್ನ (IPL 2026) ಸಂಪೂರ್ಣ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಇಂದು ಪ್ರಕಟಿಸಿದೆ. ಅದರಂತೆ ಲೀಗ್ನ ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ರೈಸರ್ಸ್ ಹೈದರಾಬಾದ್ (RCB vs SRH) ನಡುವೆ ನಡೆಯಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸಲಿದೆ. ಮಾರ್ಚ್ 28 ರಂದು ನಡೆಯುವ ಈ ಪಂದ್ಯಕ್ಕೆ ಉಭಯ ತಂಡಗಳು ಸಿದ್ಧವಾಗಿವೆ. ಲೀಗ್ ಹಂತದಲ್ಲಿ ಒಟ್ಟು 70 ಪಂದ್ಯಗಳು ನಡೆಯಲಿವೆ. ಈ 70 ಪಂದ್ಯಗಳಲ್ಲಿ ಆರ್ಸಿಬಿ ಒಟ್ಟು 14 ಪಂದ್ಯಗಳನ್ನು ಆಡಲಿದೆ. ಈ 14 ಪಂದ್ಯಗಳಲ್ಲಿ 7 ಪಂದ್ಯಗಳು ಆರ್ಸಿಬಿಯ ತವರು ಮೈದಾನದಲ್ಲಿ ನಡೆದರೆ, ಉಳಿದ 7 ಪಂದ್ಯಗಳು ಎದುರಾಳಿ ತಂಡದ ತವರು ಮೈದಾನದಲ್ಲಿ ನಡೆಯಲಿವೆ.
ಈ ಆವೃತ್ತಿಯಲ್ಲಿ ಆರ್ಸಿಬಿ ಎರಡು ತವರು ತಂಡಗಳನ್ನು ಘೋಷಿಸಿಕೊಂಡಿದೆ. ಅದರಂತೆ ಆರ್ಸಿಬಿ, 5 ಪಂದ್ಯಗಳನ್ನು ತನ್ನ ಅಧಿಕೃತ ತವರು ಮೈದಾನವಾದ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದೆ. ಉಳಿದ ಎರಡು ಪಂದ್ಯಗಳನ್ನು ಹೊಸ ತವರು ಮೈದಾನ ಎನಿಸಿಕೊಂಡಿರುವ ರಾಯ್ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆಡಲಿದೆ.
ಯಾವ ತಂಡದ ವಿರುದ್ಧ ಎಷ್ಟು ಪಂದ್ಯಗಳನ್ನಾಡಲಿದೆ?
ಉಳಿದಂತೆ ಈ 14 ಲೀಗ್ ಪಂದ್ಯಗಳಲ್ಲಿ ಆರ್ಸಿಬಿ ಕೆಲವು ತಂಡಗಳ ವಿರುದ್ಧ 2 ಪಂದ್ಯಗಳನ್ನು ಆಡಿದರೆ, ಇನ್ನು ಕೆಲವು ತಂಡಗಳ ವಿರುದ್ಧ ಕೇವಲ 1 ಪಂದ್ಯವನ್ನು ಆಡಲಿದೆ. ಅದರಂತೆ ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಟೈಟಾನ್ಸ್, ಮುಂಬೈ ಇಂಡಿಯನ್ಸ್, ಸನ್ರೈಸರ್ಸ್ ಹೈದರಾಬಾದ್, ಲಕ್ನೋ ಸೂಪರ್ಜೈಂಟ್ಸ್ ವಿರುದ್ಧ ಆರ್ಸಿಬಿ ತಲಾ 2 ಪಂದ್ಯಗಳನ್ನು ಆಡಲಿದೆ. ಉಳಿದಂತೆ ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ತಲಾ ಒಂದು ಪಂದ್ಯವನ್ನು ಆಡಲಿದೆ.
ಬೆಂಗಳೂರು, ಮಾರ್ಚ್ 26: ದೇಶದಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ ನಡೆಯಲಿದೆ. ಅದರಂತಯೇ ಕರ್ನಾಟಕದಲ್ಲಿ 2027ರ ಜನಗಣತಿಯ (Self-Enumeration) ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿಯ ಸ್ವಯಂ ಗಣತಿಯನ್ನು ಏಪ್ರಿಲ್ 1ರಿಂದ 15ರವರೆಗೆ ಅಂದರೆ 15 ದಿನ ನಡೆಸಲು ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಆದೇಶದಲ್ಲಿ ಏನಿದೆ?
2027ರ ಭಾರತದ ಜನಗಣತಿಯ ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಸ್ವಯಂ-ಗಣತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲರ ಭಾಗವಹಿಸುವಿಕೆಯನ್ನು ಸುಗಮಗೊಳಿಸಲು ಭಾರತ ಸರ್ಕಾರವು se.census.gov.in ಎಂಬ ವೆಬ್ ಪೋರ್ಟಲ್ನ್ನು ಅಭಿವೃದ್ಧಿ ಪಡಿಸಿದೆ.
ಪ್ರಚುರ ಪಡಿಸಲಾದ ಬಳಕೆದಾರರ ಮಾರ್ಗದರ್ಶಿಯ ಬಗ್ಗೆ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಸರ್ಕಾರದ ಅಧೀನಕ್ಕೆ ಒಳಪಡುವ ಎಲ್ಲಾ ನಿಗಮ, ಮಂಡಳಿ ಇತ್ಯಾದಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಸೇರಿದಂತೆ ನಾಗರಿಕರು, ಗಣತಿದಾರರಿಗೆ ಅರಿವು ಮೂಡಿಸುವಂತೆ ನಾಗರಿಕರು, ಉದ್ಯೋಗಿಗಳು, ಗಣತಿದಾರರಿಗೆ ಅರಿವು ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಏಪ್ರಿಲ್ 1ರಿಂದ 15ರವರೆಗೆ ಒಟ್ಟು 15 ದಿನಗಳ ಕಾಲ ಕರ್ನಾಟಕದ ರಾಜ್ಯದಲ್ಲಿ ನಡೆಯಲಿರುವ ಮನೆಗಳ ಪಟ್ಟಿ ಮತ್ತು ಮನೆ ಗಣತಿಯ ಸ್ವಯಂ-ಗಣತಿಯನ್ನು ಯಶಸ್ವಿಗೊಳಿಸಲು ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ.
ಸ್ವಯಂ ಗಣತಿ ಮಾಡುವುದು ಹೇಗೆ?
ಕೇಂದ್ರ ಗೃಹ ಸಚಿವಾಲಯ 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲು ಉದ್ದೇಶಿಸಿದೆ. ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿಯಲ್ಲಿ ಮೊದಲ 15 ದಿನ se.census.gov.in ವೆಬ್ ಸೈಟ್ ಮೂಲಕ ಸ್ವಯಂ-ಗಣತಿಗೆ ಅವಕಾಶವಿರುತ್ತದೆ.
ಅದರಂತೆ ಮನೆಯ ಯಾವುದೇ ಒಬ್ಬ ಸದಸ್ಯರು ಸುಮಾರು 15 ರಿಂದ 20 ನಿಮಿಷಗಳ ಅವಧಿಯಲ್ಲಿ ಸ್ವಯಂ-ಗಣತಿ ಮಾಡಿ ಮನೆಯ ವಿವರಗಳನ್ನು ಒದಗಿಸಬಹುದು ಮತ್ತು ಮೊಬೈಲ್, ಇಮೇಲ್ನಲ್ಲಿ ಸ್ವಯಂ-ಗಣತಿ ಐಡಿ ಪಡೆಯಬಹುದಾಗಿದೆ. ಗಣತಿದಾರರು ಮನೆಗೆ ಭೇಟಿ ನೀಡಿದಾಗ, ದೃಢೀಕರಿಸಲು ಮತ್ತು ಸ್ವಯಂ ಗಣತಿ ದಂತ್ತಾಂಶದ ಅಂತಿಮ ಸಲ್ಲಿಕೆಗಾಗಿ ಗಣತಿ ಐಡಿಯನ್ನು ಅವರೊಂದಿಗೆ ಹಂಚಿಕೊಳ್ಳಬೇಕು.