Headlines

nagaraj11081993

‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ರಿಲೀಸ್ ಆಗಲಿಲ್ಲ: ಅಸಲಿ ಕಾರಣ ತಿಳಿಸಿದ ಪ್ರಥಮ್

ದರ್ಶನ್ (Darshan) ನಟನೆಯ ‘ಡೆವಿಲ್’ ಸಿನಿಮಾದ ಎದುರೇ ತಮ್ಮ ‘ಕರ್ನಾಟಕದ ಅಳಿಯ’ ಚಿತ್ರವನ್ನು ರಿಲೀಸ್ ಮಾಡುವುದಾಗಿ ಪ್ರಥಮ್ ಅವರು ಈ ಮೊದಲು ಸವಾಲು ಹಾಕಿದ್ದರು. ಆದರೆ ಆ ಸಿನಿಮಾ ರಿಲೀಸ್ ಆಗಲೇ ಇಲ್ಲ. ಯಾಕೆ ಎಂಬ ಪ್ರಶ್ನೆ ಇದೆ. ಅದಕ್ಕೆ ಪ್ರಥಮ್ ಅವರು ಉತ್ತರ ನೀಡಿದ್ದಾರೆ. ನಿಜವಾಗಿ ನಡೆದಿದ್ದು ಏನು ಎಂಬುದನ್ನು ಅವರು ವಿವರಿಸಿದ್ದಾರೆ. ‘ನೇರವಾಗಿ ಹೇಳುತ್ತೇನೆ, ಬಿಸ್ನೆಸ್ ಇನ್ನೂ ಆಗಿಲ್ಲ. ಚಿತ್ರೀಕರಣ ಆಗಿತ್ತು. ಕ್ಯಾಮೆರಾಮ್ಯಾನ್ ಮೆಮೋರಿ ಕಾರ್ಡ್ ಹಾಳು ಮಾಡಿದ್ದಾನೆ. ಬೇರೆಯವರಾಗಿದ್ದರೆ ದೊಡ್ಡ ಕಾಂಟ್ರವರ್ಸಿ ಆಗಿರುತ್ತಿತ್ತು….

Read More

ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ

ಹಾವೇರಿ, (ಮಾರ್ಚ್ 26): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Davanagere South By Election) ಕಾವು ದಿನದಿಂದ ದಿನಕ್ಕೆ ಕಾವೇರುತ್ತಿದೆ. ಇದರ ಮಧ್ಯೆ ಕಾಂಗ್ರೆಸ್​​ಗೆ (Congress) ಮುಸ್ಲಿಂ ಸಮುದಾಯದ ಮತಗಳು ಕೈತಪ್ಪುವ ಭಯ ಶುರುವಾಗಿದೆ. ಯಾಕಂದ್ರೆ, ಟಿಕೆಟ್ ಕೈತಪ್ಪಿದ್ದರಿಂದ ಮುಸ್ಲಿಂ ನಾಯಕರು ಬಂಡಾಯ ಎದ್ದಿದ್ದು, ಇದು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್​​​ಗೆ ಆತಂಕಕ್ಕೆ ಕಾರಣವಾಗಿದೆ. ಇದರ ಮಧ್ಯೆ ಮತ್ತೊಂದೆಡೆ ಶ್ರೀಶೈಲ ಜಗದ್ಗುರು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್​​ ಗೆ ಬೆಂಬಲಿಸುವಂತೆ ಭಕ್ತರಿಗೆ ಕರೆ ಕೊಟ್ಟಿದ್ದಾರೆ. ಇದರಿಂದ ಕಾಂಗ್ರೆಸ್​​ಗೆ ಆನೆಬಲ…

Read More

Video: ಗಾಂಜಾ ನಶೆಯಲ್ಲಿ ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು

ಚೆನ್ನೈ, ಮಾರ್ಚ್​ 26: ಗಾಂಜಾ ನಶೆಯಲ್ಲಿ ಯುವಕರು ಕಬ್ಬಿಣದ ರಾಡ್ ಹಿಡಿದು ಶಾಲಾ ಬಸ್ ನಿಲ್ಲಿಸಿ ಬೆದರಿಕೆ ಹಾಕಿರುವ ಘಟನೆ ತಮಿಳುನಾಡಿನ ಉತ್ತಂಗರೈನಲ್ಲಿ ನಡೆದಿದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರನ್ನು ನಿಂದಿಸಿ ಬೆದರಿಸಿಸಿದ್ದಾರೆ. ಉತ್ತಂಗರೈ-ಸೇಲಂ ರಸ್ತೆಯಲ್ಲಿ ಓಡಾಡುವ ಬಸ್, ಲಾರಿಗಳನ್ನು ತಡೆ ಹಿಡಿದು ಬೆದರಿಸಿದ್ದಾರೆ. ಸ್ಥಳೀಯರು ದೂರು ದಾಖಲಿಸಿದ್ದಾರೆ.ಆರೋಪಿಗಳ ವಿರುದ್ಧ ಈ ಹಿಂದೆಯೂ ಕ್ರಿಮಿನಲ್ ಪ್ರಕರಣಗಳಿವೆ.ಆರೋಪಿಗಳ ವಿರುದ್ಧ ಹಿಂದೆಯೂ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಪೊಲೀಸರು ತನಿಖೆ ಆರಂಭಿಸಿದ್ದು, ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

IPL 2026: ಆರ್​ಸಿಬಿಗೆ ಬಂತು ಆನೆ ಬಲ; ಬೆಂಗಳೂರಿಗೆ ಬಂದ ಜೋಶ್ ಹೇಜಲ್​ವುಡ್

2026 ರ ಐಪಿಎಲ್​ನ ಸಂಪೂರ್ಣ ವೇಳಾಪಟ್ಟಿಯನ್ನು ಬಿಸಿಸಿಐ ಇಂದು ಪ್ರಕಟಿಸಿದೆ. ಅದರಂತೆ ಲೀಗ್​ನ ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್‌ ನಡುವೆ ನಡೆಯಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸಲಿದೆ. ಮಾರ್ಚ್​ 28 ರಂದು ನಡೆಯುವ ಈ ಪಂದ್ಯಕ್ಕೆ ಉಭಯ ತಂಡಗಳು ಸಿದ್ಧವಾಗಿದ್ದು, ಇದರ ನಡುವೆ ಆರ್​ಸಿಬಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಎಲ್ಲರಿಗೂ ತಿಳಿದಿರುವಂತೆ 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಬಾರಿಗೆ ಟ್ರೋಫಿ ಎತ್ತಿಹಿಡಿಯಲು…

Read More

1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ

ಬೆಂಗಳೂರು, (ಮಾರ್ಚ್ 26): ಶಾಲೆ ದಾಖಲಿಗೆ ಮಕ್ಕಳಿಗೆ ನಿಗದಿಪಡಿಸಿದ್ದ ವಯೋಮಿತಿಯನ್ನು ಸರ್ಕಾರ ಸಡಿಲಿಕೆ ಮಾಡಿದೆ. 1 ನೇ ತರಗತಿಗೆ 6 ವರ್ಷ ತುಂಬಿರಬೇಕು ಎಂಬ ನಿಯಮದಲ್ಲಿ 60 ದಿನ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು (ಮಾರ್ಚ್ 26)ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಯುಕೆಜಿ ಮುಗಿಸಿದರೂ 6 ವರ್ಷ ಪೂರ್ಣಗೊಂಡಿಲ್ಲವೆಂದು ಚಿಂತೆಯಲ್ಲಿದ್ದ  ಪೋಷಕರು ನಿರಾಳರಾಗಿದ್ದಾರೆ. ಗುರುವಾರ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ, ಪ್ರಸಕ್ತ ವರ್ಷಕ್ಕೆ ಅನ್ವಯವಾಗುವಂತೆ…

Read More

ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್

ಪ್ರಥಮ್ ಅವರು ನಟಿಸಿದ ‘ಫಸ್ಟ್ ನೈಟ್ ವಿತ್ ದೆವ್ವ’ (First Night With Devva) ಸಿನಿಮಾ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಈ ಸಿನಿಮಾದ ಶೀರ್ಷಿಕೆಗೆ ‘ಸುಬ್ಬ ಸುಬ್ಬಿ ಹಾರರ್ ಸ್ಟೋರಿ’ ಎಂಬ ಟ್ಯಾಗ್ ಲೈನ್ ಇದೆ. ಈ ಕಥೆ ಯಾರಿಗಾದರೂ ಲಿಂಕ್ ಆಗುತ್ತಾ ಎಂಬ ಅನುಮಾನ ಮೂಡಿದೆ. ಆ ಬಗ್ಗೆ ಪ್ರಥಮ್ ಅವರು ಉತ್ತರ ನೀಡಿದ್ದಾರೆ. ‘ಮೊದಲ ದೃಶ್ಯದಲ್ಲೇ ಮದುವೆ. ಮದುವೆ ಆಗಿ 10 ನಿಮಿಷದ ಬಳಿಕ ನನ್ನ ಹೆಂಡತಿ ಮೈ ಮೇಲೆ ದೆವ್ವ ಇದೆ ಎಂಬುದು…

Read More

ಬಾಮೈದನೊಂದಿಗೆ ತಂಗಿ ಪರಾರಿ: ಕೋಪದಲ್ಲಿ ಬಾವ ಮಾಡಿದ್ದೇನು ಗೊತ್ತಾ?

ಆನೇಕಲ್​, ಮಾರ್ಚ್​ 26: ಬಾವನಿಂದ ಬಾಮೈದನ ಕೊಲೆ ನಡೆದಿರುವಂತಹ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ವಾರದಳ್ಳಿಯ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಶ್ರೀನಿವಾಸ್​​ನಿಂದ ರಂಜಿತ್ (24)ನ ಕೊಲೆ (kill) ಮಾಡಲಾಗಿದೆ. ಆಸಾಮಿ ಕೊಲೆ ಮಾಡಿದಲ್ಲದೇ ಮೃತದೇಹವನ್ನು ಕಾರಿನ ಡಿಕ್ಕಿಯಲ್ಲಿ ಹಾಕಿದ್ದಾನೆ. ಬಳಿಕ ಪೊಲೀಸ್​ ಠಾಣೆಗೆ ಹೋಗಿ ಶರಣಾಗಿದ್ದಾನೆ. ಸ್ಥಳಕ್ಕೆ ಬನ್ನೇರುಘಟ್ಟ ಪೋಲಿಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಡೆದಿದ್ದೇನು? ರಂಜಿತ್​ನ ಸ್ವಂತ ಅಕ್ಕ ಪವಿತ್ರರನ್ನು ಶ್ರೀನಿವಾಸ್​​ ಮದುವೆ ಮಾಡಿಕೊಂಡಿದ್ದಾರೆ. ಶ್ರೀನಿವಾಸ್ ತಂಗಿ ಕೋಮಲ್​ ಜೊತೆಗೆ…

Read More

ಇರಾನ್​ಗೆ ತೈಲ ಮಾರಾಟದಿಂದ ದಿನಕ್ಕೆ 7,000 ಕೋಟಿ ರೂ ಆದಾಯ; ಇರಾನ್​ಗೂ ಭರ್ಜರಿ ಆಯಿಲ್ ಬ್ಯುಸಿನೆಸ್

ನವದೆಹಲಿ, ಮಾರ್ಚ್ 26: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ವಿರುದ್ಧ ಶುರು ಮಾಡಿದ ಯುದ್ಧದಿಂದ ಯಾರಿಗೆ ಲಾಭ, ಯಾರಿಗೆ ನಷ್ಟ ಆಗುತ್ತಿದೆಯೋ ಸ್ಪಷ್ಟ ಇಲ್ಲ, ಆದರೆ ರಷ್ಯಾ ಮತ್ತು ಇರಾನ್​ನ ಆಯಿಲ್ ಬ್ಯುಸಿನೆಸ್ ಬಹಳ ಜೋರಾಗಿ ನಡೆಯುತ್ತಿದೆ. ಎರಡೂ ದೇಶಗಳು ತೈಲ ಮಾರಾಟದಿಂದ ಸಾವಿರಾರು ಕೋಟಿ ರೂ ಲಾಭ ಮಾಡುತ್ತಿವೆ. ತಂತಮ್ಮ ಯುದ್ಧ ಮುಂದುವರಿಸಲು ಈ ದೇಶಗಳಿಗೆ ಫಂಡಿಂಗ್ ಸಿಕ್ಕಂತಾಗಿದೆ. ವಿಶ್ವದ ಶೇ. 20ಕ್ಕಿಂತಲೂ ಹೆಚ್ಚು ತೈಲ ಪೂರೈಕೆಯಾಗುವ ಹಾರ್ಮುಜ್ ಜಲಸಂಧಿಯ ಸಂಪೂರ್ಣ ನಿಯಂತ್ರಣವು…

Read More

ಕಾಂಗ್ರೆಸ್ ಮುಖಂಡನ ಕೊಲೆಗೆ ಯತ್ನ: ತನಿಖೆ ಚುರುಕು, ನಾಲ್ವರ ಬಂಧನ

ಕಾರವಾರ, ಮಾರ್ಚ್​ 26: ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ (Gopalakrishna Naik) ಹತ್ಯೆ ಯತ್ನ ಘಟನೆಗೆ ಸಂಬಂಧಿಸಿದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈಗಾಗಲೇ ಬಂಧಿತ ನಾಲ್ವರ ವಿಚಾರಣೆ ತೀವ್ರಗೊಂಡಿದೆ. ಈ ನಡುವೆ ಬಂಧಿತರ ಫೋಟೋ ಮತ್ತು ಓಡಾಡುವ ದೃಶ್ಯ ವೈರಲ್ ಆಗಿದ್ದು, ಎಲ್ಲರೂ ಗೋವಾ ಮೂಲದವರಾಗಿದ್ದಾರೆ. ಆದರೆ ಯಾವ ಕಾರಣಕ್ಕೆ ದಾಳಿ ಮಾಡಿದ್ದಾರೆ ಎಂಬುದನ್ನ ತಿಳಿದುಕೊಳ್ಳಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಕೊಲೆಗೆ ಯತ್ನಿಸಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ…

Read More

ದಾವಣಗೆರೆಯಲ್ಲಿ ತಣ್ಣಗಾಗದ ಅಸಮಾಧಾನ, ಅಖಾಡದಲ್ಲೇ ಉಳಿದ ಪೈಲ್ವಾನ್, ಕಾಂಗ್ರೆಸ್​​ಗೆ ಟೆನ್ಷನ್

ದಾವಣಗೆರೆ , (ಮಾರ್ಚ್ 26): ದಾವಣಗೆರೆ ದಕ್ಷಿಣ ಕ್ಷೇತ್ರ (Davanagere South ) ಶಾಮನೂರು ಕುಟುಂಬದ ಭದ್ರಕೋಟೆ. ಕಳೆದ 30 ವರ್ಷಗಳಿಂದ್ಲೂ ಶಾಮನೂರು ಕುಟುಂಬದ ಕೈಯಲ್ಲಿಯೇ ಇಲ್ಲಿನ ಆಡಳಿತ. ಆದ್ರೆ ಶಾಮನೂರು ಶಿವಶಂಕರಪ್ಪನವರ ನಿಧನ ಬಳಿಕ ಈ ಕ್ಷೇತ್ರ ತೆರವಾಗಿದ್ದು, ತಂದೆಯ ಸ್ಥಾನವನ್ನ ಮಗನಿಗೆ ಕೊಡಿಸುವಲ್ಲಿ ಸಚಿವ SS ಮಲ್ಲಿಕಾರ್ಜುನ ಸಫಲರಾಗಿದ್ದಾರೆ. ಆದ್ರೆ,ನಮಗೆ ಟಿಕೆಟ್ ಕೊಡಿ ಎಂದಿದ್ದ ಮುಸ್ಲಿಂ ಸಮುದಾಯ ಕಾಂಗ್ರೆಸ್ (Congress) ವಿರುದ್ಧ ಬಂಡಾಯ ಸಾರಿದೆ. ಹೌದು..ಕೈ ಹೈಕಮಾಂಡ್ ತಮ್ಮ ಸಮುದಾಯವನ್ನ ಬಿಟ್ಟು ಶಾಮನೂರು ಕುಟುಂಬಕ್ಕೆ…

Read More