nagaraj11081993

‘ಪಾಕಿಸ್ತಾನ ಒಳ್ಳೆಯ ನೆರೆ ರಾಷ್ಟ್ರ, ಕಸಬ್ ಜೆಂಟಲ್‌ಮನ್’: ಶಾರುಖ್ ಖಾನ್ ಹೇಳಿಕೆಗೆ ನೆಟ್ಟಿಗರು ಫುಲ್ ​​ ಗರಂ

ಮುಂಬೈ ,ಏ.1: ‘ಧುರಂಧರ್ 2’ ಸಿನಿಮಾ ಯಶಸ್ಸು ಆಗುತ್ತಿದ್ದಂತೆ ಬಾಲಿವುಡ್ ನಟ ಶಾರುಖ್ ಖಾನ್ ಅವರ ಹಳೆಯ ಸಂದರ್ಶನದ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿವೆ. ಪಾಕಿಸ್ತಾನವನ್ನು “ಉತ್ತಮ ನೆರೆಹೊರೆಯ ರಾಷ್ಟ್ರ” ಎಂದು ಕರೆದಿರುವ ಮತ್ತು ಉಗ್ರ ಅಜ್ಮಲ್ ಕಸಬ್ ಬಗ್ಗೆ ಮಾತನಾಡಿರುವ ವೀಡಿಯೊಗಳು ಈಗ ದೊಡ್ಡ ವಿವಾದವನ್ನೇ ಸೃಷ್ಟಿಸಿವೆ. ಸೋಶಿಯಲ್​ ಮೀಡಿಯಾದಲ್ಲಿ ಈ ಹೇಳಿಕೆಗೆ ಭಾರೀ ಆಕ್ರೋಶ ಕೂಡ ವ್ಯಕ್ತವಾಗಿದೆ. ವೈರಲ್ ಆಗುತ್ತಿರುವ ವೀಡಿಯೊದಲ್ಲಿ ಶಾರುಖ್ ಖಾನ್ ಪಾಕಿಸ್ತಾನದೊಂದಿಗಿನ ಸಂಬಂಧದ ಕುರಿತು ಮಾತನಾಡುತ್ತಾ, ಆ…

Read More

Karnataka LPG Crisis: ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!

ಬೆಂಗಳೂರು, ಏಪ್ರಿಲ್ 01: ಬೆಂಗಳೂರಿನಲ್ಲಿ ಆಟೋ ಎಲ್‌ಪಿಜಿ ಕೊರತೆ ತೀವ್ರಗೊಂಡಿದ್ದು, ಚಾಲಕರು ಅಭೂತಪೂರ್ವ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಗರದ ಹೆಬ್ಬಾಳದ ಗುಡ್ಡದಹಳ್ಳಿ ವೃತ್ತ ಮತ್ತು ನವರಂಗ್ ಸೇರಿದಂತೆ ವಿವಿಧ ಎಲ್‌ಪಿಜಿ ಬಂಕ್‌ಗಳಲ್ಲಿ ಕಿಲೋಮೀಟರ್‌ಗಟ್ಟಲೆ ಉದ್ದದ ಸರತಿ ಸಾಲುಗಳು ಕಂಡುಬರುತ್ತಿವೆ. ಬೆಳಗ್ಗಿನ ಜಾವ 4-6 ಗಂಟೆಗಳಿಂದಲೇ ಚಾಲಕರು ಗ್ಯಾಸ್‌ಗಾಗಿ ಕಾಯುತ್ತಿದ್ದಾರೆ. ಅನೇಕ ಗ್ಯಾಸ್ ಏಜೆನ್ಸಿಗಳು ಸ್ಟಾಕ್ ಇಲ್ಲ ಎನ್ನುತ್ತಿದ್ದರೆ ಲಭ್ಯವಿರುವ ಕೆಲವು ಬಂಕ್‌ಗಳಲ್ಲೂ, ಪೂರ್ಣ ಟ್ಯಾಂಕ್ ಬದಲಾಗಿ ಪ್ರತಿ ಆಟೋಗೆ 400 ರೂ. ಮೌಲ್ಯದ ಸೀಮಿತ ಪ್ರಮಾಣದ ಗ್ಯಾಸ್ ಮಾತ್ರ…

Read More

ಏಪ್ರಿಲ್ ಮೂರ್ಖರ ದಿನವಲ್ಲ, ಬುದ್ಧಿವಂತರ ದಿನ: ಉಪೇಂದ್ರ

ಏಪ್ರಿಲ್ 1ರಂದು ಮೂರ್ಖರ ದಿನ ಎಂದು ಆಚರಣೆ ಮಾಡಲಾಗುತ್ತದೆ. ಜನರನ್ನು ಮೂರ್ಖರನ್ನಾಗಿ ಮಾಡುವ ಕೆಲಸ ಇಂದು ಆಗುತ್ತದೆ. ಆದರೆ, ಈ ದಿನವನ್ನು ಬುದ್ಧಿವಂತರ ದಿನವನ್ನಾಗಿ ಆಚರಿಸಬೇಕು ಎಂದು ಉಪೇಂದ್ರ ಹೇಳಿದ್ದಾರೆ. ‘ಪ್ರಜಾಕೀಯ’ ಪಕ್ಷದ ಆ್ಯಪ್ ಲಾಂಚ್ ಮಾಡುವ ಸಂದರ್ಭದಲ್ಲಿ ಅವರು ಈ ಮಾತನ್ನು ಹೇಳಿದರು. ‘ಮಾತನಾಡುವಾಗ ಎಚ್ಚರಿಕೆ ಬೇಕು. ಇಲ್ಲವಾದರೆ, ಇವರು ಎಡ, ಬಲ ಎಂದು ನಿರ್ಧರಿಸಿ ಬಿಡುತ್ತಾರೆ’ ಎಂದಿದ್ದಾರೆ ಉಪೇಂದ್ರ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

‘ಪ್ರಜಾಕೀಯ’ ಆಪ್ ಬಿಡುಗಡೆ ಮಾಡಿದ ಉಪ್ಪಿ, ವಿಶೇಷತೆಯೇನು? ವಿಡಿಯೋ ನೋಡಿ

ಉಪೇಂದ್ರ (Upendra) ಅವರು ನಟ, ನಿರ್ದೇಶಕ ಆಗಿರುವ ಜೊತೆಗೆ ರಾಜಕಾರಣಿಯೂ ಸಹ. ರಾಜಕೀಯದಲ್ಲಿ ಭಿನ್ನತೆ, ಹೊಸತನ ತರಬೇಕೆಂದು ತಮ್ಮ ಪ್ರಜಾಕೀಯ ಪಕ್ಷದಿಂದ ಹೊಸ-ಹೊಸ ರೀತಿಯ ಐಡಿಯಾಗಳನ್ನು ತರುತ್ತಲೇ ಇರುತ್ತಾರೆ. ಇದೀಗ ‘ದಿ ರಿಯಲ್ ಪ್ರಜಾಕೀಯ’ ಆನ್​​ಲೈನ್ ಆಪ್​ ಬಿಡುಗಡೆ ಮಾಡಿರುವ ಉಪೇಂದ್ರ, ಜನ ಹೇಗೆ ತಮ್ಮ ಆಳುವ ನಾಯಕನನ್ನು ಆಯ್ಕೆ ಮಾಡಬೇಕು, ತಮ್ಮ ಪಕ್ಷದ ಅಭ್ಯರ್ಥಿಯನ್ನಾಗಿ ಯಾರನ್ನು, ಹೇಗೆ ಆಯ್ಕೆ ಮಾಡಬೇಕು, ಪ್ರಜಾಕೀಯ ಟಿಕೆಟ್ ಬೇಕಾದವರು ಹೇಗೆ ಆಪ್ ಬಳಸಿ ಟಿಕೆಟ್ ಪಡೆಯಬಹುದು ಇತ್ಯಾದಿಗಳನ್ನು ವಿವರಿಸಿದ್ದಾರೆ. ವಿಡಿಯೋ…

Read More

ಖಾಸಗಿ ಶಾಲಾ ಬಸ್ ಕೆಳಗೆ ಸಿಲುಕಿ ಎರಡೂವರೆ ವರ್ಷದ ಮಗು ಸಾವು!

ಶಿವಮೊಗ್ಗ, ಏಪ್ರಿಲ್ 01: ಜಿಲ್ಲೆಯಲ್ಲಿ ಮನಕಲುಕುವ ಘಟನೆಯೊಂದು ಸಂಭವಿಸಿದೆ. ನಗರದ ಗೋಪಾಲಗೌಡ ಬಡಾವಣೆಯ ಚಂದನ ಪಾರ್ಕ್ ಸಮೀಪ ಮಾರ್ಚ್ 31ರ ಮಧ್ಯಾಹ್ನ ಒಂದೂವರೆ ವರ್ಷದ ಪುಟ್ಟ (Toddler Death) ಮಗು ಶಾಲಾ ಬಸ್ ಚಕ್ರಕ್ಕೆ ಸಿಲುಕಿ ಮೃತಪಟ್ಟಿದೆ. ಮಗು ಶಾಲೆಯಿಂದ ಬಂದ ತನ್ನ ಅಣ್ಣನನ್ನು ಕರೆತರಲು ಪೋಷಕರೊಂದಿಗೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಅಣ್ಣನಿಗಾಗಿ ಕಾಯುತ್ತಿದ್ದ ಮಗು 18 ತಿಂಗಳ ಮಗು ಆರ್ಯನ್, ತನ್ನ ಅಣ್ಣನನ್ನು ಕರೆತರಲು ಪೋಷಕರೊಂದಿಗೆ ಸ್ಥಳಕ್ಕೆ ಬಂದಿದ್ದ. ಖಾಸಗಿ ಶಾಲಾ ಬಸ್‌ನಲ್ಲಿ…

Read More

ಭಕ್ತರು ತಿಂದುಂಡ ತಟ್ಟೆ-ಲೋಟ ತೊಳೆದ ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ

ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಪ್ರಸ್ತುತ ಹಾಲಿವುಡ್​​ನಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್​​ನೊಂದಿಗೆ ಸಂಬಂಧ ಕಡಿದುಕೊಂಡು ಹಲವು ವರ್ಷಗಳಾಗಿದ್ದು ಇದೀಗ ‘ವಾರಣಾಸಿ’ ಸಿನಿಮಾ ಮೂಲಕ ಭಾರತೀಯ ಚಿತ್ರರಂಗಕ್ಕೆ ವಾಪಸ್ಸಾಗಿದ್ದಾರೆ. ಸ್ಟಾರ್ ನಟಿಯಾಗಿರುವ ಪ್ರಿಯಾಂಕಾ ಚೋಪ್ರಾ ಅವರ ಜೀವನ ಶೈಲಿಯೂ ಸ್ಟಾರ್ ಮಾದರಿಯಲ್ಲಿಯೇ ಇದೆ. ಪತಿ ನಿಕ್ ಜೋನಸ್ ಜೊತೆಗೆ ಅಮೆರಿಕದ ಪ್ರತಿಷ್ಠಿತ ಬೆವರ್ಲಿ ಹಿಲ್ಸ್​​ನ ಐಶಾರಾಮಿ ಮನೆಯಲ್ಲಿ ವಾಸಿಸುತ್ತಾರೆ. ಆದರೆ ಇದೀಗ ಪ್ರಿಯಾಂಕಾ ಚೋಪ್ರಾ, ಸಾಮಾನ್ಯರಂತೆ, ಸಾಮಾನ್ಯ ಜನ ತಿಂದುಂಡು ಬಿಟ್ಟು ಹೋದ ತಟ್ಟೆ-ಲೋಟಗಳನ್ನು ತೊಳೆದಿದ್ದು, ಆ ವಿಡಿಯೋ…

Read More

ಕೆಎಸ್‌ಆರ್‌ಟಿಸಿಗೆ ಮತ್ತೊಂದು ಗರಿ: ‘ವರ್ಲ್ಡ್ ಹೆಚ್‌ಆರ್‌ಡಿ ಕಾಂಗ್ರೆಸ್’ನ ಪ್ರತಿಷ್ಠಿತ ಪ್ರಶಸ್ತಿ ಮುಡಿಗೆ!

ಬೆಂಗಳೂರು/ಕೊಚ್ಚಿನ್, ಏಪ್ರಿಲ್ 1: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ತರಬೇತಿ ಮತ್ತು ಸಾಂಸ್ಥಿಕ ಅಭಿವೃದ್ಧಿ (Training and Organisation Development) ಕ್ಷೇತ್ರದಲ್ಲಿ ಮಾಡಿರುವ ಅಭೂತಪೂರ್ವ ಸಾಧನೆಗಾಗಿ ಪ್ರತಿಷ್ಠಿತ ‘ವರ್ಲ್ಡ್ ಹೆಚ್‌ಆರ್‌ಡಿ ಕಾಂಗ್ರೆಸ್’ನ (World HRD Congress Award) ‘ಕೇರಳ ಲೀಡರ್‌ಶಿಪ್ ಪ್ರಶಸ್ತಿ-2026’ ಅನ್ನು ತನ್ನದಾಗಿಸಿಕೊಂಡಿದೆ. ಕೇರಳದ ಕೊಚ್ಚಿನ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಈ ಗೌರವವನ್ನು ಪ್ರದಾನ ಮಾಡಲಾಯಿತು. ತರಬೇತಿ ಕ್ಷೇತ್ರದಲ್ಲಿ KSRTC ಕ್ರಾಂತಿ ನಿಗಮದ ವ್ಯಾಪ್ತಿಯ ಐದು ತರಬೇತಿ ಕೇಂದ್ರಗಳಲ್ಲಿ ಕಳೆದ 6 ತಿಂಗಳ…

Read More

ಹೊಸ ರಿಯಾಲಿಟಿ ಶೋ ಒಪ್ಪಿಕೊಂಡ ನಯನಾ ನಾಗರಾಜ್

ನಯನಾ ನಾಗರಾಜ್ ಅವರು ‘ಗಿಣಿ ರಾಮ’ ಧಾರಾವಾಹಿಯಲ್ಲಿ ನಟಿಸಿದ್ದರು. ತಮ್ಮದೇ ಕಾರಣಕ್ಕೆ ಅವರು ಧಾರಾವಾಹಿ ತೊರೆದಿದ್ದರು. ಆ ಬಳಿಕ ಅವರು ಈ ಬಗ್ಗೆ ಸ್ಪಷ್ಟನೆ ಕೊಟ್ಟರು. ಅವರು ಹಲವು ಆರೋಪಗಳನ್ನು ಮಾಡಿದ್ದರು. ಈಗ ನಯನಾ ನಾಗರಾಜ್ ಅವರು ಜೀ ಕನ್ನಡದ ಜೋಡಿ ನಂಬರ್ 1 ರಿಯಾಲಿಟಿ ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪ್ರೋಮೋನ ಜೀ ಕನ್ನಡ ಹಂಚಿಕೊಂಡಿದೆ. ಪತಿ ಸುಹಾಸ್ ಜೊತೆ ನಯನಾ ಈ ಶೋಗೆ ಬರುತ್ತಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source…

Read More

ದಾವಣಗೆರೆ: ಹಳೇ ಪೇಟೆ ವೀರಭದ್ರೇಶ್ವರ ಕೊಂಡ ಹಾಯ್ದ ಸಚಿವ ಮಲ್ಲಿಕಾರ್ಜುನ, ಪುತ್ರ ಸಮರ್ಥ್, ಪುತ್ರಿ ಶ್ರೇಷ್ಠ!

ದಾವಣಗೆರೆ, ಎಪ್ರಿಲ್ 1: ನಗರದ ಹಳೇ ಪೇಟೆಯಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಕೊಂಡೋತ್ಸವವು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಕುಟುಂಬದೊಂದಿಗೆ ಭಾಗವಹಿಸಿ, ಅಗ್ನಿಕುಂಡ ಹಾಯುವ ಮೂಲಕ ದೈವಭಕ್ತಿ ಮೆರೆದರು. ವಿಶೇಷವೆಂದರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣದಲ್ಲಿರುವ ಸಚಿವರ ಪುತ್ರ ಸಮರ್ಥ್ ಶಾಮನೂರು ಮತ್ತು ಪುತ್ರಿ ಶ್ರೇಷ್ಠ ಕೂಡ ತಂದೆಯೊಂದಿಗೆ ಕೊಂಡ ಹಾಯ್ದರು. ಕೊಂಡೋತ್ಸವಕ್ಕೂ ಮುನ್ನ ಸಚಿವ ಮಲ್ಲಿಕಾರ್ಜುನ ಅವರ ಕುಟುಂಬವು ವೀರಭದ್ರೇಶ್ವರ ಸ್ವಾಮಿಗೆ ವಿಶೇಷ ಪೂಜೆ…

Read More

ಹೊಸ ಸಿಲಿಂಡರ್​​ ಜೋಡಿಸುವ ವೇಳೆ ಅವಘಡ: ಭೀಕರ ಸ್ಫೋಟಕ್ಕೆ ಮನೆ ಛಿದ್ರ ಛಿದ್ರ

ಬೆಂಗಳೂರು, ಏಪ್ರಿಲ್​​ 01: ಲಗ್ಗೆರೆ ರಾಜೀವ್ ನಗರದಲ್ಲಿರುವ ಮನೆಯೊಂದರಲ್ಲಿ ಆಕಸ್ಮಿಕವಾಗಿ ಸಿಲಿಂಡರ್ ಸ್ಫೋಟಗೊಂಡ ಘಟನೆ ವರದಿಯಾಗಿದೆ. ಘಟನೆಯ ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಪ್ರಯತ್ನ ನಡೆಸಿವೆ. ಮೂರು ಅಂತಸ್ತಿನ ಮನೆಯ ಮೊದಲ ಮಹಡಿಯಲ್ಲಿ ಅವಘಡ ನಡೆದಿದ್ದು, ಹರಗಯ್ಯ ಎಂಬುವವರ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಒಂದು ಗಂಟೆ ಮುನ್ನ ಹೊಸ ಎಲ್‌ಪಿಜಿ ಸಿಲಿಂಡರ್ ಬಂದಿತ್ತು. ಅದನ್ನು ಜೋಡಿಸುವ ವೇಳೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಮನೆಯವರು ತಕ್ಷಣ ಹೊರಬಂದಿದ್ದು,…

Read More