Headlines

nagaraj11081993

ಹಾಲಿವುಡ್ ಸಿನಿಮಾ ಅನ್ನು ಅಡ್ಡಗಟ್ಟಿ ನಿಲ್ಲಿಸಿದ ‘ಧುರಂಧರ್ 2’

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಭಾರತದ ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನು ಬರೆಯುತ್ತಿದೆ. ಮಾತ್ರವಲ್ಲದೆ ವಿಶ್ವ ಬಾಕ್ಸ್ ಆಫೀಸ್​​ನಲ್ಲಿಯೂ ಸಹ ನೂರಾರು ಕೋಟಿ ಬಾಚುತ್ತಿದೆ. ಸಿನಿಮಾ ಬಿಡುಗಡೆ ಆಗಿ ವಾರ ಆಗುವಷ್ಟರಲ್ಲಿ ಸಿನಿಮಾದ ಗಳಿಕೆ 1000 ಕೋಟಿ ರೂಪಾಯಿ ದಾಟಿದೆ ಎನ್ನಲಾಗುತ್ತಿದೆ. ಸಿಂಗಲ್ ಥಿಯೇಟರ್, ಮಲ್ಟಿಪ್ಲೆಕ್ಸ್ ಎಲ್ಲೆಡೆ ‘ಧುರಂಧರ್ 2’ ಹವಾ ಜೋರಾಗಿದೆ. ‘ಧುರಂಧರ್ 2’ ಎದುರು ಬಿಡುಗಡೆ ಆದ ಸಿನಿಮಾಗಳು ‘ಧುರಂಧರ್ 2’ ನೆರಳಲ್ಲಿ ಬಳಲುತ್ತಿವೆ. ಇದೀಗ ‘ಧುರಂಧರ್ 2’ ಸಿನಿಮಾ…

Read More

‘ಚಾನ್ಸ್ ಕೊಡಿ ಕೊಡಿ ಅಂತ ಕೇಳಿಕೊಂಡ್ರಲ್ಲ’; ಡಾರ್ಲಿಂಗ್ ಕೃಷ್ಣ ವಿರುದ್ಧ ಕಿಡಿಕಾರಿದ ಗುರು ದೇಶಪಾಂಡೆ

ನಿರ್ದೇಶಕರಾದ ಗುರು ದೇಶಪಾಂಡೆ ಹಾಗೂ ರಾಘವೇಂದ್ರ ನಾಯ್ಕ್ ಅವರು ‘ಲವ್ ಮಾಕ್ಟೇಲ್ 3’ ಚಿತ್ರದ ಕಥೆ ನಮ್ಮದು ಎಂದು ಹೇಳಿದ್ದಾರೆ. ಆದರೆ, ಇದನ್ನು ಕೃಷ್ಣ ಅಲ್ಲಗಳೆದಿದ್ದಾರೆ. ಗುರು ದೇಶಪಾಂಡೆ ರಿಮೇಕ್ ಸಿನಿಮಾ ಮಾಡುವ ವ್ಯಕ್ತಿ ಎಂದು ಟೀಕಿಸಿದ್ದಾರೆ. ಇದಕ್ಕೆ ಗುರು ದೇಶಪಾಂಡೆ ತಿರುಗೇಟು ಕೊಟ್ಟಿದ್ದಾರೆ. ‘ಈ ಮೊದಲು ನಾನು ಸಿನಿಮಾ ಮಾಡುವಾಗ ಚಾನ್ಸ್ ಕೊಡಿ ಕೊಡಿ ಎಂದು ಕೇಳಿಕೊಂಡಿದ್ರಿ. ಆಗ ಗುರು ದೇಶಪಾಂಡೆ ರಿಮೇಕ್ ಸಿನಿಮಾ ಮಾಡ್ತಾರೆ ಅನ್ನೋದು ಗೊತ್ತಿರಲಿಲ್ಲವೇ? ಪದೇ ಪದೇ ಚಾನ್ಸ್ ಕೊಡಿ ಅಂತ…

Read More

ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ: ಧಾರವಾಡ, ವಿಜಯಪುರದಲ್ಲಿ ಅಪಾರ ಬೆಳೆ ನಾಶ

ಬೆಂಗಳೂರು, ಮಾರ್ಚ್ 26: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬುಧವಾರ ಭಾರಿ ಆಲಿಕಲ್ಲು ಮಳೆ ಸುರಿದಿದೆ. ಬಿಸಿಲು ನಾಡು ಎಂದೇ ಹೆಸರಾದ ಕಲಬುರಗಿ ಮತ್ತು ಧಾರವಾಡ ಜಿಲ್ಲೆಗಳು ಜಮ್ಮು ಕಾಶ್ಮೀರದಂತಹ ಹಿಮಾವೃತ ಪ್ರದೇಶಗಳಂತೆ ಕಾಣಿಸಿ ಗಮನ ಸೆಳೆದಿವೆ. ಕಲಬುರಗಿ ಜಿಲ್ಲೆಯ ಚನ್ನೂರು ಗ್ರಾಮದಲ್ಲಿ ಸುರಿದ ಆಲಿಕಲ್ಲು ಮಳೆಯಿಂದಾಗಿ ಇಡೀ ಪ್ರದೇಶವು ಹಿಮದ ರಾಶಿಯಿಂದ ಆವರಿಸಿತ್ತು. ರಸ್ತೆಗಳ ಮೇಲೆಲ್ಲ ಮಂಜುಗಡ್ಡೆ ರಾಶಿ ಕಾಣಿಸಿದೆ. ಸಾಮಾನ್ಯವಾಗಿ ಕಾಣಸಿಗದ ಈ ಪ್ರಮಾಣದ ಆಲಿಕಲ್ಲು ಮಳೆಯು ಸ್ಥಳೀಯ ಜನಜೀವನದ ಮೇಲೆ ಪರಿಣಾಮ ಬೀರಿದೆ. ವಿಜಯಪುರ…

Read More

ಇರಾನ್ ನನ್ನನ್ನು ಸುಪ್ರೀಂ ಲೀಡರ್ ಆಗಿ ಮಾಡಲು ಬಯಸಿತ್ತು, ನಾನೇ ಒಪ್ಪಲಿಲ್ಲ; ಟ್ರಂಪ್ ಹೊರ ವರಸೆ

ವಾಷಿಂಗ್ಟನ್, ಮಾರ್ಚ್ 26: ಇರಾನ್ ಜೊತೆಗಿನ ಯುದ್ಧ ಆರಂಭವಾದಾಗಿನಿಂದ ದಿನ ಬೆಳಗಾದರೆ ಹೊಸ ಹೊಸ ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿರುವುದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ (Donald Trump) ರೂಢಿಯಾಗಿಬಿಟ್ಟಿದೆ! ಪಶ್ಚಿಮ ಏಷ್ಯಾ ಯುದ್ಧವು ಇಂದು 27ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್ ನಮ್ಮ ಮುಂದೆ ಮಂಡಿಯೂರಿದೆ, ಆದರೆ, ಅದನ್ನು ಬಹಿರಂಗವಾಗಿ ಹೇಳಿಕೊಳ್ಳುತ್ತಿಲ್ಲ ಎಂದು ಹೇಳಿರುವ ಟ್ರಂಪ್ ಇರಾನ್​ಗೆ ಜೀವಭಯ ಕಾಡುತ್ತಿದೆ ಎಂದಿದ್ದಾರೆ. ಹಾಗೇ, “ಇರಾನ್​ನ ಸುಪ್ರೀಂ ನಾಯಕ ನಾನೇ ಆಗಬೇಕೆಂದು ಇರಾನ್ ಬಯಸಿತ್ತು. ಆದರೆ ನಾನೇ ಅದಕ್ಕೆ…

Read More

ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು, ಸಾಕಾನೆಗಳೊಂದಿಗೆ ಅರಣ್ಯ ಇಲಾಖೆ ಕೂಂಬಿಂಗ್

ಮಡಿಕೇರಿ, ಮಾರ್ಚ್ 26: ಮಡಿಕೇರಿ ನಗರದ ಹೊರವಲಯದಲ್ಲಿ ಹುಲಿ ಓಡಾಟ ಕಂಡುಬಂದಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ಹುಲಿ ಸೆರೆಗೆ ಕಾರ್ಯಾಚರಣೆ ಆರಂಭಿಸಿದೆ. ಇಬ್ಬನಿವಳವಾಡಿ, ಸಿಂಕೋನ ಹಾಗೂ ಕಗ್ಗೋಡ್ಲು ಸುತ್ತಮುತ್ತ ಪ್ರದೇಶಗಳಲ್ಲಿ ಹುಲಿ ಕಾಣಿಸಿಕೊಂಡಿರುವ ಮಾಹಿತಿ ಹಿನ್ನೆಲೆ, ಅರಣ್ಯ ಇಲಾಖೆ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದೆ. ಜನರಲ್ಲಿ ಆತಂಕ ಉಂಟಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕಟ್ಟು ನಿಟ್ಟಿನ ನಿಗಾವಹಿಸಲಾಗಿದೆ. ಕಾರ್ಯಾಚರಣೆಗೆ ಮೂರು ಸಾಕಾನೆಗಳನ್ನು ಬಳಸಲಾಗುತ್ತಿದ್ದು, ದಟ್ಟ ಅರಣ್ಯ ಪ್ರದೇಶಗಳಲ್ಲಿ ಹುಲಿಯ ಚಲನವಲನ ಪತ್ತೆ ಮಾಡಲು ವಿಶೇಷ ತಂಡಗಳನ್ನು ನಿಯೋಜಿಸಲಾಗಿದೆ. ಜೊತೆಗೆ…

Read More

Video: ಸ್ಕೂಲ್ ಅಸೆಂಬ್ಲಿಯಲ್ಲಿ ಕಣ್ಣು ಮುಚ್ಚಿಕೊಂಡೇ ಲಾಲಿ ಪಾಪ್ ಸವಿಯುತ್ತಾ ನಿಂತ ಪುಟಾಣಿ

ಮುದ್ದು ಮಕ್ಕಳ (little kids) ಆಟ ತುಂಟಾಟಗಳನ್ನು ನೋಡುವುದೇ ಚಂದ. ಹೆತ್ತವರು ಕೂಡ ಮಕ್ಕಳ ಆಟ ಪಾಠಗಳನ್ನು ಕಣ್ಣು ತುಂಬಿಸಿಕೊಳ್ಳುತ್ತಾರೆ. ಈ ಪುಟ್ಟ ಮಕ್ಕಳ ಮುದ್ದು ಮುದ್ದಾದ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಅಂತಹದ್ದೇ ಮುದ್ದಾದ ಕ್ಲಿಪಿಂಗ್‌ ವೈರಲ್‌ ಆಗಿದ್ದು, ಸ್ಕೂಲ್ ಅಸೆಂಬ್ಲಿಯಲ್ಲಿ ಮಕ್ಕಳು ಕೈ ಜೋಡಿಸಿಕೊಂಡು ನಿಂತುಕೊಂಡರೆ, ಪುಟಾಣಿಯೊಂದು ಲಾಲಿಪಾಪ್ ತಿನ್ನೋದ್ರಲ್ಲಿ ಬ್ಯುಸಿಯಾಗಿದೆ. ಈ ಪುಟ್ಟ ಬಾಲಕನ ವಿಡಿಯೋ ನೋಡುತ್ತಿದ್ದಂತೆ ನೆಟ್ಟಿಗರು ತಮ್ಮ ಬಾಲ್ಯವನ್ನು ನೆನಪಿಸಿಕೊಂಡಿದ್ದಾರೆ. Shubham_kr_rana ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ…

Read More

ಮದುವೆಯಲ್ಲಿ ಜೀರಿಗೆ ಬೆಲ್ಲ ಏಕಿರಬೇಕು? ದಂಪತಿಗಳ ಬದುಕಿನಲ್ಲಿ ಬದಲಾವಣೆ ತರುವ ಈ ಶಾಸ್ತ್ರದ ಹಿಂದಿನ ಅಸಲಿ ಸತ್ಯ ಏನು?

ಬೆಂಗಳೂರು, ಮಾ.26: ನಮ್ಮ ಹಿಂದೂ ಸನಾತನ ಸಂಪ್ರದಾಯಗಳು, ಸಂಸ್ಕೃತಿ ಮತ್ತು ಪರಂಪರೆಗಳು ಅನೇಕ ವಿಧಿ ವಿಧಾನಗಳನ್ನು ಒಳಗೊಂಡಿವೆ. ಇವುಗಳ ಹಿಂದಿರುವ ಸಾಮಾಜಿಕ, ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಹಿನ್ನೆಲೆಗಳನ್ನು ಆಳವಾಗಿ ಅರ್ಥೈಸಿಕೊಂಡಾಗ, ಆ ಆಚರಣೆಗಳಿಗೆ ಇನ್ನಷ್ಟು ಮಹತ್ವ ಮತ್ತು ಗೌರವ ದೊರೆಯುತ್ತದೆ. ಅಂತಹ ವಿಶಿಷ್ಟ ವಿಧಿವಿಧಾನಗಳಲ್ಲಿ ವಿವಾಹದ ಸಮಯದಲ್ಲಿ ವಧು ವರರ ತಲೆಯ ಮೇಲೆ ಜೀರಿಗೆ ಬೆಲ್ಲವನ್ನು ಇಡುವ ಆಚರಣೆ ಅತ್ಯಂತ ಪ್ರಮುಖವಾಗಿದೆ. ಇದರ ಹಿಂದೆ ಒಂದು ಸುಂದರವಾದ ವೈಜ್ಞಾನಿಕ ಮತ್ತು ಆಧ್ಯಾತ್ಮಿಕ ಹಿನ್ನೆಲೆಯಿದೆ ಎಂದು ಬಸವರಜ ಗುರೂಜಿ…

Read More

​​RCB ಮಾರಾಟದ ಬೆನ್ನಲ್ಲೇ ಮಹತ್ವದ ಕೋರಿಕೆ ಇಟ್ಟ ವಿಜಯ್ ಮಲ್ಯ

ಯುನೈಟೆಡ್‌ ಸ್ಪಿರಿಟ್ಸ್‌ ಲಿಮಿಟೆಡ್‌ (ಯುಎಸ್‌ಎಲ್‌) ಕಂಪನಿಯು ತನ್ನ ಹಿಡಿತದಲ್ಲಿ ಇದ್ದ ಆರ್​​​ಸಿಬಿ (RCB)  ಒಡೆತನವನ್ನು ಸಂಪೂರ್ಣವಾಗಿ ಮಾರಾಟ ಮಾಡಿದೆ. ಆದಿತ್ಯ ಬಿರ್ಲಾ ಸಮೂಹ ಸುಮಾರು 16,706 ಕೋಟಿ ರೂಪಾಯಿಗೆ ಆರ್​​ಸಿಬಿ ಫ್ರ್ಯಾಂಚೈಸಿಯನ್ನು ಖರೀದಿ ಮಾಡಿದೆ. ಈ ಮೂಲಕ ಹೊಸ ಕ್ಷೇತ್ರಕ್ಕೆ ಆದಿತ್ಯ ಬಿರ್ಲಾ ಕಾಲಿಟ್ಟಿದೆ. ಆದಿತ್ಯ ಬಿರ್ಲಾ ಜೊತೆ ಅಮೆರಿಕದ ಹೂಡಿಕೆದಾರ ಡೇವಿಡ್‌ ಬ್ಲಿಟ್ಝರ್ ಒಡೆತನದ ಬೋಲ್ಟ್‌ ವೆಂಚರ್ಸ್‌, ಬ್ಲ್ಯಾಕ್‌ಸ್ಟೋನ್ ಇಕ್ವಿಟಿ ಫರ್ಮ್‌, ಟೈಮ್ಸ್‌ ಆಫ್‌ ಇಂಡಿಯಾ ಮಾಧ್ಯಮ ಸಮೂಹ ಕೂಡ ಇದೆ. ಈ ಮಾರಾಟದ ಬೆನ್ನಲ್ಲೇ…

Read More

Purple Day For Epilepsy 2026: ಮಾರ್ಚ್‌ 26 ರಂದು ನೇರಳೆ ದಿನವನ್ನು ಆಚರಿಸುವುದೇಕೆ ಗೊತ್ತಾ?

ಅಪಸ್ಮಾರ ಅಥವಾ ಎಪಿಲೆಪ್ಸಿ (Epilepsy) ದೀರ್ಘಕಾಲದ ಮೆದುಳಿನ ಅಸ್ವಸ್ಥತೆಯಾಗಿದೆ. ನರಕೋಶಗಳು ಅಥವಾ ಮೆದುಳಿನ ಕೋಶಗಳಲ್ಲಿ ಉಂಟಾಗುವ ಹಠಾತ್‌ ಬದಲಾವಣೆಯಿಂದ ಅಪಸ್ಮಾರ ಸಂಭವಿಸುತ್ತದೆ. ಇದೊಂದು ನರವೈಜ್ಞಾನಿಕ ಕಾಯಿಲೆಯಾಗಿದ್ದು, ಸಕಾಲದಲ್ಲಿ ರೋಗ ನಿರ್ಣಯವನ್ನು ನೀಡುವ ಮೂಲಕ ಈ ಕಾಯಿಲೆಯನ್ನು ಗುಣಪಡಿಸಬಹುದು. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಜಗತ್ತಿನಲ್ಲಿ ಬರೋಬ್ಬರಿ 50 ಮಿಲಿಯನ್‌ ಜನರು ಈ ಮೂರ್ಛೆ ರೋಗವನ್ನು ಹೊಂದಿದ್ದಾರೆ. ಇಂದಿಗೂ ಕೂಡ ಹೆಚ್ಚಿನವರು ಈ ರೋಗವನ್ನು ಶಾಪವೆಂದು ನಂಬುತ್ತಾರೆ. ಈ ನಿಟ್ಟಿನಲ್ಲಿ ಈ ರೋಗದ ಬಗ್ಗೆ ಇರುವ ಜನರ ತಪ್ಪು…

Read More

ಬೆಚ್ಚಿಬಿದ್ದ ಸ್ಥಳೀಯರು: ಅಬ್ಬಬ್ಬಾ ಒಂದೆರಡಲ್ಲ… ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15ಕ್ಕೂ ಹೆಚ್ಚು ಆನೆಗಳು!

ಚಿಕ್ಕಮಗಳೂರು, ಮಾರ್ಚ್​​ 26: ಜಿಲ್ಲೆಯ ಹಲವೆಡೆ ಮತ್ತೆ ಕಾಡಾನೆಗಳ ಸಂಚಾರ ಜನರ ಆತಂಕಕ್ಕೆ ಕಾರಣವಾಗಿದ್ದು, ಮೂಡಿಗೆರೆ ತಾಲೂಕಿನ ಗೋಣಿಬೀಡು ವ್ಯಾಪ್ತಿಯಲ್ಲಿ 45ಕ್ಕೂ ಹೆಚ್ಚು ಕಾಡಾನೆಗಳು ಬೀಡುಬಿಟ್ಟಿವೆ. ಬೇಲೂರು ಮಾರ್ಗವಾಗಿ ಬಂದಿರುವ 15ಕ್ಕೂ ಹೆಚ್ಚು ಕಾಡಾನೆಗಳು ಕಸ್ಕೆಬೈಲು, ಚಟ್ಟನಹಳ್ಳಿ, ಹುಲಿಹಂಡ್ಲು ಸೇರಿದಂತೆ ಹಲವೆಡೆ ಸಂಚಾರ ನಡೆಸುತ್ತಿದ್ದು, ಕಾಡಾನೆಗಳ ಹಿಂಡು ರಸ್ತೆ ದಾಟುತ್ತಿರುವ ವಿಡಿಯೋ ಸಾರ್ವಜನಿಕರ ಮೊಬೈಲ್​ನಲ್ಲಿ ಸೆರೆಯಾಗಿದೆ. ಮೂಡಿಗೆರೆ ಅರಣ್ಯ ವಲಯ ವ್ಯಾಪ್ತಿಯಲ್ಲಿ ಕಾಡಾನೆಗಳ ಸಂಚಾರ ಕಂಡುಬಂದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More